Author: AIN Author

ಬೆಂಗಳೂರು:  ಇಂದು ಭಾರತ ನ್ಯೂಜಿಲೆಂಡ್ ನಡುವೆ ಸೆಮಿಫೈನಲ್ ಪಂದ್ಯ. ಹೀಗಾಗಿ ಭಾರತದ ಗೆಲುವಿಗಾಗಿ ಅಭಿಮಾನಿಗಳು ಪ್ರಾರ್ಥನೆ ಮಾಡಿದ್ದಾರೆ.  ಮೈಸೂರಿನ ಅಗ್ರಹಾರ ಬಡಾವಣೆಯ 101 ಗಣಪತಿ ದೇಗುಲದಲ್ಲಿ ಭಾರತೀಯ ಆಟಗಾರರ ಭಾವಚಿತ್ರ ಹಿಡಿದು ಪ್ರಾರ್ಥನೆ ಮಾಡಿ ಭಾರತದ ಪರ ಘೋಷಣೆ ಕೂಗಿ ಶುಭ ಹಾರೈಸಿದ್ದಾರೆ. ಏಕದಿನ ವಿಶ್ವಕಪ್, ಟಿ20 ವಿಶ್ವಕಪ್, ಚಾಂಪಿಯನ್ಸ್ ಟ್ರೋಪಿ ಹಾಗೂ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಸೇರಿದಂತೆ ಐಸಿಸಿಯ ಟೂರ್ನಿಗಳಲ್ಲಿ ಭಾರತ ಮತ್ತು ನ್ಯೂಜಿಲೆಂಡ್ ತಂಡಗಳು 15 ಬಾರಿ ಮುಖಾಮುಖಿಯಾಗಿವೆ. ಈ ಪೈಕಿ ಟೀಂ ಇಂಡಿಯಾ 4 ಪಂದ್ಯಗಳನ್ನು ಮಾತ್ರ ಗೆದ್ದುಕೊಂಡಿದೆ. ಆದರೆ ಕಿವೀಸ್ ಪಡೆ 10 ಪಂದ್ಯಗಳಲ್ಲಿ ಜಯ ಸಾಧಿಸಿದೆ. ಒಂದು ಪಂದ್ಯ ಮಳೆಯಿಂದ ರದ್ದಾಗಿದೆ. ಅಂತಾರಾಷ್ಟ್ರೀಯ ಏಕದಿನ ಕ್ರಿಕೆಟ್‌ನಲ್ಲಿ ಭಾರತ ಮತ್ತು ನ್ಯೂಜಿಲೆಂಡ್ ತಂಡಗಳು 117 ಬಾರಿ ಮುಖಾಮುಖಿಯಾಗಿದ್ದು, ಇದರಲ್ಲಿ 59 ಪಂದ್ಯಗಳಲ್ಲಿ ಟೀಂ ಇಂಡಿಯಾ ಗೆಲುವು ಸಾಧಿಸಿದೆ. ಕಿವೀಸ್ 50 ಪಂದ್ಯಗಳಲ್ಲಿ ಜಯ ಕಂಡಿದೆ. 1 ಪಂದ್ಯ ಟೈ ಆಗಿದ್ದರೆ, 7 ಪಂದ್ಯಗಳಲ್ಲಿ ಯಾವುದೇ ಫಲಿತಾಂಶ…

Read More

ಬೆಂಗಳೂರು:  ರಾಜ್ಯಾಧ್ಯಕ್ಷರ ಕಚೇರಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿ.ವೈ.ವಿಜಯೇಂದ್ರ ಅಧಿಕಾರ ಸ್ವೀಕರಿಸಿದ್ದಾರೆ. ನಳಿನ್ ಕುಮಾರ್​ ಕಟೀಲು ಅವರು ವಿಜಯೇಂದ್ರಗೆ ಅಧಿಕಾರ ಹಸ್ತಾಂತರಿಸಿದರು. ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ, ಮಾಜಿ ಸಚಿವರಾದ ಅಶೋಕ್​, ಗೋವಿಂದ ಕಾರಜೋಳ, ಮುನಿರತ್ನ, ಆರಗ ಜ್ಞಾನೇಂದ್ರ, ಶ್ರೀರಾಮುಲು, ಗೋಪಾಲಯ್ಯ, ಪ್ರಭು ಚೌಹಾಣ್​, ಸಂಸದರಾದ ರಾಘವೇಂದ್ರ, ತೇಜಸ್ವಿ ಸೂರ್ಯ ಸೇರಿ ಹಲವರು ಭಾಗಿಯಾಗಿದ್ದಾರೆ.

Read More

ಬೆಂಗಳೂರು: ಭಾರತದಲ್ಲಿ ನಡೆಯುತ್ತಿರುವ ವಿಶ್ವಕಪ್‌ ಕ್ರಿಕೆಟ್‌ನಲ್ಲಿ (World Cup Cricket) ಬೆಂಗಳೂರು ಮೂಲದ ನ್ಯೂಜಿಲೆಂಡಿನ (New Zealand) ಆಟಗಾರ ರಚಿನ್‌ ರವೀಂದ್ರ (Rachin Ravindra) ಉತ್ತಮ ಲಯದಲ್ಲಿದ್ದಾರೆ. ಈ ಟೂರ್ನಿಯಲ್ಲಿ ಮೂರು ಶತಕ ಸಿಡಿಸಿರುವ ಅವರು ತಮ್ಮ ಹೆಸರಿನ ಮೂಲಕ ಚರ್ಚೆಯಲ್ಲಿದ್ದರು. ಆದರೆ ಈಗ ಈ ಹೆಸರು ಇಟ್ಟಿದ್ದು ಹೇಗೆ ಎಂಬುದರ ಬಗ್ಗೆ ತಂದೆ ಪ್ರತಿಕ್ರಿಯಿಸಿದ್ದಾರೆ. ಭಾರದ ಬ್ಯಾಟಿಂಗ್ ದಿಗ್ಗಜರಾದ ರಾಹುಲ್ ದ್ರಾವಿಡ್ (Rahul Dravid) ಮತ್ತು ಸಚಿನ್ ತೆಂಡೂಲ್ಕರ್ (Sachin Tendulkar) ಅವರ ಹೆಸರಿನ ಮೊದಲ ಅಕ್ಷರಗಳಿಂದ ಸಂಯೋಜನೆಗೊಂಡು ʼರಚಿನ್‌ʼ ಎಂದು ನಾಮಕರಣ ಮಾಡಲಾಗಿದೆ ಎಂಬ ಹೆಸರು ಹಿಂದೆ ವರದಿಯಾಗಿತ್ತು. ಈ ಬಗ್ಗೆ ತಂದೆ ರವಿ ಕೃಷ್ಣಮೂರ್ತಿ (Ravi Krishnamurthy) ಈಗ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿ ಮಗನ ಹೆಸರಿಗೂ ಸಚಿನ್​-ದ್ರಾವಿಡ್​ಗೂ ಯಾವುದೇ ಸಂಬಂಧ ಇಲ್ಲ ಎಂದು ಹೇಳುವ ಮೂಲಕ ಯೂಟರ್ನ್‌ ಹೊಡೆದಿದ್ದಾರೆ. ನನ್ನ ಪತ್ನಿ ರಚಿನ್ ಹೆಸರನ್ನು ಸೂಚಿಸಿದ್ದಳು. ನಾವು ಆ ಹೆಸರಿನ ಬಗ್ಗೆ ಹೆಚ್ಚು ಚರ್ಚೆ ಮಾಡಲಿಲ್ಲ.ಯಾಕೆಂದರೆ ಆ ಹೆಸರು…

Read More

ಪಟಾಕಿ ಹಚ್ಚುವ ಸಂಭ್ರಮದಲ್ಲಿ ಎಚ್ಚರದಿಂದ ಇರುವುದು ಅಗತ್ಯ. ಹಬ್ಬಗಳು ಸಂತೋಷದಾಯಕ ಸಂಭ್ರಮವಾಗಿದ್ದು, ಈ ಸಂದರ್ಭದಲ್ಲಿ ಯಾವುದೇ ಅಪಘಾತಕ್ಕೆ ಒಳಗಾಗದಂತೆ ಮುಂಜಾಗ್ರತೆ ವಹಿಸುವುದು ಅಗತ್ಯವಾಗಿದೆ. ಕಣ್ಣುಗಳನ್ನು ರಕ್ಷಿಸುವ ವಿಷಯಕ್ಕೆ ಬಂದಾಗ ಕಣ್ಣಿನ ಅಪಘಾತದ ಸಂದರ್ಭದಲ್ಲಿ ಏನು ಮಾಡಬೇಕು ಎಂದು ತಿಳಿಯುವುದು ಅತ್ಯಗತ್ಯ. ಅಂತಹ ಅಪಘಾತಗಳ ಅಪಾಯವನ್ನು ಕಡಿಮೆ ಮಾಡಲು ತಡೆಗಟ್ಟುವ ಕ್ರಮಗಳನ್ನು ತೆಗೆದುಕೊಳ್ಳುವುದು ಅಷ್ಟೇ ಮುಖ್ಯ. ಈ ಸಂಬಂಧ ಒರ್ಬಿಸಿಟ್ ಇನ್​ ಇಂಡಿಯಾ ಕಂಟ್ರಿ ನಿರ್ದೇಶಕರಾದ ಡಾ ರಿಶಿ ರಾಜ್​ ಬೊರ್ಹಾ ಮಾತನಾಡಿದ್ದಾರೆ. ಮುನ್ನೆಚ್ಚರಿಕೆ ಅಗತ್ಯ: ಪರಿಸರ ಸ್ನೇಹಿ ಪಟಾಕಿಗಳನ್ನು ಆಯ್ಕೆ ಮಾಡುವುದು, ರಕ್ಷಣಾತ್ಮಕ ಕನ್ನಡಕ ಧರಿಸುವುದು, ಸುರಕ್ಷಿತ ಅಂತರ ಕಾಪಾಡುವುದು ಮುಖ್ಯವಾಗಿದೆ. ಪಟಾಕಿ ಹೊಡೆಯುವ ಸಂದರ್ಭದಲ್ಲಿ ಮಕ್ಕಳ ಮೇಲ್ವಿಚಾರಣೆ ಮಾಡುವುದು ಅತ್ಯಗತ್ಯ ಆಗಿದ್ದು, ಅದು ಕಣ್ಣಿನ ಅಪಘಾತಗಳ ಅಪಾಯವನ್ನು ಗಮನಾರ್ಹವಾಗಿ ಕಡಿಮೆ ಮಾಡುತ್ತದೆ. ಅಪಘಾತವಾದ ಸಂದರ್ಭದಲ್ಲಿ ಏನು ಮಾಡಬೇಕು?: ಅನೇಕ ವೇಳೆ ಎಷ್ಟೇ ಮುನ್ನೆಚ್ಚರಿಕೆ ಪಡೆದ ಬಳಿಕವೂ ಅವಘಡಗು ಸಂಭವಿಸುತ್ತಿರುತ್ತವೆ. ನಿಮ್ಮ ಸುತ್ತಮುತ್ತ ಯಾರಿಗಾದರೂ ಪಟಾಕಿಯಿಂದ ಗಾಯಗಳಾದಾಗ ಈ ಮುನ್ನೆಚ್ಚರಿಕೆಯನ್ನು ತಕ್ಷಣಕ್ಕೆ…

Read More

ಇಂಗ್ಲೆಂಡ್:‌ ಫಿಟ್‌ನೆಸ್‌ ಉತ್ಸಾಹಿಯಾಗಿದ್ದ ಇಂಗ್ಲೆಂಡ್‌ ಮೂಲದ ಮುಖ್ಯ ವ್ಯವಸ್ಥಾಪಕ ಅಧಿಕಾರಿ 42 ವರ್ಷದ ಪಾಲ್ ವಾಫಮ್ ಇತ್ತೀಚೆಗೆ ತಮ್ಮ ಬೆಳಗಿನ ವಾಕಿಂಗ್‌ ವೇಳೆ ಹೃದಯಾಘಾತಕ್ಕೆ ತುತ್ತಾಗಿದ್ದಾರೆ. ಚುರುಕಿನ ಜೀವನಶೈಲಿ ಹಹಾಗೂ ಅಪಾಯಕಾರಿ ಅಂಶಗಳ ಕೊರತೆಯ ಹೊರತಾಗಿಯೂ ಹಾಕಿ ವೇಲ್ಸ್‌ ಕಂಪನಿಯ ಸಿಇಒ ಆಗಿದ್ದ ವಾಫಮ್‌ಗೆ ಇತ್ತೀಚೆಗೆ ಬೆಳಗಿನ ಜಾವದ ಜಾಗಿಂಗ್‌ ವೇಳೆ ತೀವ್ರ ಎದೆನೋವಿಗೆ ಒಳಗಾಗಿ ರಸ್ತೆಯಲ್ಲಿಯೇ ಕುಸಿದು ಬಿದ್ದಿದ್ದರು. ಕೈಗಳು ಹಾಗೂ ಮೊಣಕಾಲನ್ನು ರಸ್ತೆಯಲ್ಲಿ ಊರಿ ನೋವಿನಂದ ಎದೆ ಹಿಡಿದುಕೊಂಡಿದ್ದರು. ಈ ಹಂತದಲ್ಲಿ ತಕ್ಷಣವೇ ಅವರಿಗೆ ತಾವು ಕಟ್ಟಿದ್ದ ಸ್ಮಾರ್ಟ್‌ವಾಚ್‌ ನೆನಪಾಗಿದೆ. ಅದರಿಂದಲೇ ಪತ್ನಿ ಲೌರಾಗೆ ಕರೆ ಮಾಡಿದ್ದಾರೆ. ಬಳಿಕ ವಾಫಮ್‌ರನ್ನು ತಕ್ಷಣವೇ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ವಫಮ್ ಅವರ ಅಪಧಮನಿಗಳಲ್ಲಿ ಸಂಪೂರ್ಣ ಬ್ಲಾಕ್‌ ಇದ್ದ ಕಾರಣದಿಂದ ಹೃದಯಾಘಾತಕ್ಕೆ ಒಳಗಾಗಿದ್ದರು ಎಂದು ವೈದ್ಯರು ತಿಳಿಸಿದ್ದಾರೆ. https://ainlivenews.com/joint_pain_suprem_ray_treatment_reiki/ ವೈದ್ಯಕೀಯ ಸಿಬ್ಬಂದಿ ತುರ್ತು ಆಂಜಿಯೋಪ್ಲ್ಯಾಸ್ಟಿಯನ್ನು ನಡೆಸಿ ಬ್ಲಾಕ್‌ ಆಗಿದ್ದ ಅಪಧಮನಿಯನ್ನು ಸರಿ ಮಾಡಿದ್ದಾರೆ, ಇದರಿಂದ ವಾಪಾಮ್‌ನ ಹೃದಯಕ್ಕೆ ರಕ್ತದ ಹರಿವನ್ನು ಪುನಃಸ್ಥಾಪಿಸಿದರು. ಹೆಚ್ಚುವರಿಯಾಗಿ,…

Read More

ರನೌಟ್‌ ಆದ ವಿಚಾರಕ್ಕೆ ಇಬ್ಬರು ಆಟಗಾರರು ಮೈದಾನದಲ್ಲೇ ಬ್ಯಾಟ್‌ ಹಿಡಿದು ಪರಸ್ಪರ ಫೈಟ್‌ ಮಾಡಿಕೊಂಡಿರುವ ಘಟನೆಯ ವಿಡಿಯೋ ವೈರಲ್‌ ಆಗಿದೆ. https://twitter.com/Arhantt_pvt/status/1723188113340821875?ref_src=twsrc%5Etfw%7Ctwcamp%5Etweetembed%7Ctwterm%5E1723188113340821875%7Ctwgr%5E280f5756417afe47873ce2028456e329b5cc1fa5%7Ctwcon%5Es1_c10&ref_url=http%3A%2F%2Fapi-news.dailyhunt.in%2F ಇಲ್ಲೊಂದು ಕ್ರಿಕೆಟ್‌ ಪಂದ್ಯದಲ್ಲಿ‌ ಇಬ್ಬರು ಬ್ಯಾಟರ್‌ ಗಳು ಕ್ರಿಸ್‌ ನಲ್ಲಿರುವಾಗ ರನ್‌ ಓಡುವ ಭರದಲ್ಲಿ ಒಬ್ಬರು ಔಟ್‌ ಆಗಿದ್ದಾರೆ. ತನ್ನನ್ನು ಔಟ್‌ ಮಾಡಿದ್ದಕ್ಕೆ‌ ಬ್ಯಾಟರ್‌ ಸಹ ಆಟಗಾರರನ ಜೊತೆ ವಾಗ್ವಾದಕ್ಕಿಳಿದಿದ್ದಾನೆ. ಮಾತಿಗೆ ಮಾತು ಬೆಳೆದು ಇಬ್ಬರು ಹೊಡೆದಾಡಿಕೊಳ್ಳಲು ಮುಂದಾಗಿದ್ದಾರೆ. ಪರಸ್ಪರ ಬ್ಯಾಟ್‌ ನಿಂದ ಹೊಡೆದಾಡಿಕೊಂಡಿದ್ದಾರೆ. ಪರಿಸ್ಥಿತಿ ಅರಿತ ಇತರ ಆಟಗಾರರು ಇಬ್ಬರನ್ನು ಎಳೆದುಕೊಂಡು ಹೋಗಿದ್ದಾರೆ. ಈ ಘಟನೆ ಎಲ್ಲಿ ನಡೆದಿದೆ ಎನ್ನುವುದರ ಸ್ಪಷ್ಟ ಮಾಹಿತಿ ಇಲ್ಲ. ಸೋಶಿಯಲ್‌ ಮೀಡಿಯಾದಲ್ಲಿ ಈ ಕ್ರಿಕೆಟ್‌ ಜಗಳದ ವಿಡಿಯೋ ವೈರಲ್‌ ಆಗಿದೆ.

Read More

ಬೆಂಗಳೂರು:- ರಾಜ್ಯದ ಸರ್ಕಾರ ವಿದ್ಯುತ್ ದರ ಹೆಚ್ಚಳ ಮಾಡುವ ಮೂಲಕ ಜನರ ಹೊಟ್ಟೆ ಮೇಳೆ ಬರೆ ಎಳೆದಿದೆ. ಡಿಸೆಂಬರ್ ವಿದ್ಯುತ್ ಬಿಲ್‌ನಲ್ಲಿ ಯೂನಿಟ್‌ಗೆ 85 ಪೈಸೆ ಹೆಚ್ಚುವರಿ ಶುಲ್ಕ, ಇಂಧನ ವೆಚ್ಚ ಹೊಂದಾಣಿಕೆ ಶುಲ್ಕ 35 ಪೈಸೆ ವಿಧಿಸಲು ಸರ್ಕಾರ ಮುಂದಾಗಿದ್ದು, ಈ ಮೂಲಕ ರಾಜ್ಯದ ಜನತೆಗೆ ಮತ್ತೊಂದು ಶಾಕ್ ನೀಡಿದೆ. ಕಳೆದ ಜೂನ್ ತಿಂಗಳಿನಲ್ಲಿ ಅಕ್ಟೋಬರ್‌ ತಿಂಗಳಿನಿಂದ ಡಿಸೆಂಬರ್‌ವರೆಗೆ ಅನ್ವಯವಾಗುವಂತೆ ಪ್ರತಿ ಯೂನಿಟ್‌ಗೆ ದರ ಹೆಚ್ಚಳ ಮಾಡಲಾಗಿದ್ದ, 50 ಪೈಸೆ ಶುಲ್ಕದೊಂದಿಗೆ ನವೆಂಬರ್ ತಿಂಗಳಿಗೆ ಸೀಮಿತವಾಗಿ 35 ಪೈಸೆ ಹೆಚ್ಚುವರಿ ಶುಲ್ಕ ವಿಧಿಸಲಾಗಿದೆ ಎಂದು ಹೇಳಲಾಗುತ್ತಿದೆ. ಈಗಾಗಲೇ ಕಾಂಗ್ರೆಸ್‌ ಸರ್ಕಾರ “ಗೃಹಜ್ಯೋತಿ” ಯೋಜನೆಯಡಿ ಪ್ರತಿ ಮನೆಗೂ ಉಚಿತವಾಗಿ 200 ಯೂನಿಟ್‌ ಉಚಿತ ವಿದ್ಯುತ್‌ ನೀಡುತ್ತಿದ್ದು, ಇದರ ಮೇಲೆ ಬಳಸುವವರು ವಿದ್ಯುತ್‌ ಬಿಲ್‌ ಕಟ್ಟಬೇಕು ಎಂದು ತಿಳಿಸಿತ್ತು. ಇದೀಗ ವಿದ್ಯುತ್ ದರ ಏರಿಕೆ ಮಾಡಿ ಜನರ ಕೆಂಗಣ್ಣಿಗೆ ಗುರಿಯಾಗಿದೆ. ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (BESCOM) ವ್ಯಾಪ್ತಿಯ ವಿದ್ಯುತ್ ಗ್ರಾಹಕರಿಗೆ ವಿದ್ಯುತ್…

Read More

ಗಂಗಾವತಿ : ಬಿಜೆಪಿ ರಾಜ್ಯಾಧ್ಯಕ್ಷರಾಗಿ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಪುತ್ರ ವಿಜಯೇಂದ್ರ ಅವರನ್ನು ಆಯ್ಕೆ ಮಾಡಿರುವುದಕ್ಕೆ ಹಿರಿಯ ಬಿಜೆಪಿ ನಾಯಕರಿಗೆ ಅಸಮಾಧಾನ ಉಂಟಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ, ಹಿಂದುಳಿದ ವರ್ಗಗಳ ಇಲಾಖೆ ಸಚಿವ ಶಿವರಾಜ ತಂಗಡಗಿ ಆರೋಪಿಸಿದರು. ತಮ್ಮ ನಿವಾಸದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಬಿಜೆಪಿಯಲ್ಲಿ ಮೊದಲಿನಿಂದಲೂ ಭಿನ್ನಮತ ಇದೆ. ರಾಜ್ಯಾಧ್ಯಕ್ಷ ಸ್ಥಾನಕ್ಕೆ ಬಹಳಷ್ಟು ಹಿರಿಯ ನಾಯಕರು ಆಕಾಂಕ್ಷಿಯಾಗಿದ್ದರು. ಈಗ ಸಂಘಟನೆ ಮತ್ತು ಬರುವ ಲೋಕಸಭಾ ಚುನಾವಣೆ ಮುಂದಿಟ್ಟುಕೊಂಡು ವಿಜಯೇಂದ್ರ ಅವರನ್ನು ಆಯ್ಕೆ ಮಾಡಿರುವುದಕ್ಕೆ ಹಿರಿಯ ನಾಯಕರಲ್ಲಿ ಅಸಮಾಧಾನ ಉಂಟಾಗಿದೆ.  ಇಂದಿಲ್ಲ ನಾಳೆ ಇದು ಸ್ಫೋಟಗೊಳ್ಳುತ್ತದೆ ಎಂದರು. ವಿಧಾನಸಭೆಗೆ ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡದ ಬಿಜೆಪಿ ಬರುವ ಲೋಕಸಭಾ ಚುನಾವಣೆಯಲ್ಲಿ ಅಭ್ಯರ್ಥಿಗಳನ್ನು ಹೇಗೆ ಗೆಲ್ಲಿಸುತ್ತಾರೆ? ಎಂದು ಪ್ರಶ್ನಿಸಿದರು. https://ainlivenews.com/joint_pain_suprem_ray_treatment_reiki/ ಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ 25ಕ್ಕೂ ಹೆಚ್ಚು ಸ್ಥಾನ ಪಡೆಯಲಿದೆ. ತೆಲಂಗಾಣ ಸೇರಿದಂತೆ ಮೂರು ರಾಜ್ಯಗಳಲ್ಲಿ ವಿಧಾನಸಭೆಗೆ ಚುನಾವಣೆಯ ನಡೆಯಲಿದೆ. 7ಕ್ಕೂ ಹೆಚ್ಚು ಕ್ಷೇತ್ರಗಳ ಜವಾಬ್ದಾರಿಯನ್ನು ಕಾಂಗ್ರೆಸ್…

Read More

ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಆತಿಥೇಯ ಭಾರತ ಹಾಗೂ ನ್ಯೂಜಿಲೆಂಡ್ ತಂಡಗಳು ಕಾದಾಡಲಿವೆ. ಭಾರತ ತಂಡವು ಅಜೇಯವಾಗಿ ಸೆಮೀಸ್ ಪ್ರವೇಶಿಸಿದೆ. ವಿಶ್ವಕಪ್ ಲೀಗ್ ಹಂತದಲ್ಲಿ ಭಾರತ ತಂಡದ ಪ್ರದರ್ಶನ ಹೇಗಿತ್ತು ಎನ್ನುವುದನ್ನು ನಾವಿಂದು ನೋಡೋಣ ಬನ್ನಿ. , ಚೆನ್ನೈನ ಚೆಪಾಕ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡವು 199 ರನ್‌ಗಳಿಗೆ ಸರ್ವಪತನ ಕಂಡಿತು. ಇನ್ನು ಆರಂಭಿಕ ಆಘಾತದ ನಡುವೆಯೂ ವಿರಾಟ್ ಕೊಹ್ಲಿ(85) ಹಾಗೂ ಕೆ ಎಲ್ ರಾಹುಲ್(97*) ಜವಾಬ್ದಾರಿಯುತ ಬ್ಯಾಟಿಂಗ್ ನೆರವಿನಿಂದ 6 ವಿಕೆಟ್ ಭರ್ಜರಿ ಜಯ ಸಾಧಿಸಿತ್ತು. ದೆಹಲಿಯ ಅರುಣ್ ಜೇಟ್ಲಿ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆಫ್ಘಾನಿಸ್ತಾನ 272 ರನ್ ಕಲೆಹಾಕಿತು. ಸ್ಪರ್ಧಾತ್ಮಕ ಗುರಿ ಬೆನ್ನತ್ತಿದ ಟೀಂ ಇಂಡಿಯಾ ರೋಹಿತ್ ಶರ್ಮಾ(131) ಆಕರ್ಷಕ ಶತಕ ಹಾಗೂ ವಿರಾಟ್ ಕೊಹ್ಲಿ ಅಜೇಯ ಅರ್ಧಶತಕ(55) ನೆರವಿನಿಂದ 15 ಓವರ್ ಬಾಕಿ ಇರುವಂತೆಯೇ 8 ವಿಕೆಟ್ ಜಯ ಸಾಧಿಸಿತು. ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಟೀಂ ಇಂಡಿಯಾ ಬೌಲರ್‌ಗಳ…

Read More

ಚಿಕ್ಕಮಗಳೂರು: ಮಧ್ಯಪ್ರದೇಶ ಚುನಾವಣಾ ಪ್ರಚಾರ ಇರುವ ಕಾರಣ ಬಿಜೆಪಿ ರಾಜ್ಯಾಧ್ಯಕ್ಷರಾಗಿರುವ ವಿಜಯೇಂದ್ರ ಅವರ ಪದಗ್ರಹಣ ಕಾರ್ಯಕ್ರಮಕ್ಕೆ ಹೋಗಲು ಆಗುತ್ತಿಲ್ಲ. ನಾನು ಯಾವತ್ತೂ ಪಕ್ಷದ ಲಕ್ಷ್ಮಣ ರೇಖೆ ದಾಟಿಲ್ಲ. ಒಂದು ವೇಳೆ, ಬೇಡ ಎನಿಸಿದರೆ ರಾಜಕೀಯ ಬಿಟ್ಟು ಸುಮ್ಮನೆ ಕುಳಿತುಕೊಳ್ಳುತ್ತೇನೆ. ಆದರೆ, ಬೇರೆ ಪಕ್ಷಕ್ಕೆ ಹೋಗಿ ರಾಜಕೀಯ ಮಾಡಲ್ಲ ಎಂದು ಮಾಜಿ ಸಚಿವ ಸಿ.ಟಿ.ರವಿ ಸ್ಪಷ್ಟಪಡಿಸಿದ್ದಾರೆ. ಸುದ್ದಿಗಾರರ ಜೊತೆ ಅವರು ಮಾತನಾಡಿದರು. ನಾನು 20 ವರ್ಷ ಶಾಸಕನಾಗಿದ್ದೆ. 35 ವರ್ಷದಿಂದ ಪಕ್ಷದ ಕಾರ್ಯಕರ್ತನಾಗಿ ವಿವಿಧ ಜವಾಬ್ದಾರಿಗಳನ್ನು ಹೊತ್ತು ಕೆಲಸ ಮಾಡಿದ್ದೇನೆ. ಜಗಳವಾಡಿದರೂ ನಮ್ಮ ಮನೆಯೊಳಗೇ ಜಗಳ, ಹೊಸಿಲು ದಾಟಿ ಬೇರೆಯವರ ಮನೆಗೆ ಹೋಗಿ ನಮ್ಮ ಮನೆಯ ಸಮಸ್ಯೆಯನ್ನು ಬಗೆಹರಿಸಿ ಎಂದು ಕೇಳಿಲ್ಲ. ಪಕ್ಷ ಏನೂ ಜವಾಬ್ದಾರಿ ಕೊಟ್ಟಿಲ್ಲ ಎಂದರೂ ಬಿಜೆಪಿಗೆ ಮತ ಕೊಡಿ ಎಂದೇ ಕೇಳುತ್ತೇನೆ. https://ainlivenews.com/joint_pain_suprem_ray_treatment_reiki/ ಬೇರೆ ಪಕ್ಷಕ್ಕೆ ಮತ ಕೊಡಿ ಎಂದು ಕೇಳಲಿಕ್ಕೆ ಆಗುವುದಿಲ್ಲ. ನನಗೆ ಬುದ್ಧಿ ಬಂದಾಗಿನಿಂದ, ಬಿಜೆಪಿಗೆ ಸೇರಿದಾಗಿನಿಂದ ಬಿಜೆಪಿ ಬಿಟ್ಟು ಬೇರೆ ಪಕ್ಷಕ್ಕೆ ಮತ ಕೇಳಿಲ್ಲ,…

Read More