ಧಾರವಾಡ: ಕಳೆದ ದಿನ ತಡ ರಾತ್ರಿ ಧಾರವಾಡ ತಾಲೂಕಿನ ನರೇಂದ್ರ ಗ್ರಾಮದಲ್ಲಿ ಇಸ್ಪೀಟ್ ದಾಳೆಯ ವೇಳೆ ಪೊಲೀಸರ ಮೇಲೆ ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ 8 ಜನ ಆರೋಪಿಗಳನ್ನು ಬಂಧನ ಮಾಡಲಾಗಿದೆ. ಉಳಿದ ಆರೋಪಿಗಳಿ ಬಂಧನಕ್ಕೆ ಬಲೆ ಬೀಸಲಾಗಿದೆ ಎಂದು ಧಾರವಾಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗೋಪಾಲ್ ಬ್ಯಾಕೋಡ್ ಹೇಳಿದರು. ನಗರದ ಎಸ್ಪಿ ಕಚೇರಿ ಈ ಕುರಿತು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನರೇಂದ್ರ ಗ್ರಾಮದ ಸರ್ಕಾರಿ ಶಾಲೆಯ ಕಾಂಪೌಂಡ್ ಒಳಗೆ ಇಸ್ಪೀಟ್ ಆಡುತ್ತಿರುವ ಕುರಿತು, ನಮ್ಮ ಗ್ರಾಮೀಣ ಠಾಣೆಗೆ ಮಾಹಿತಿ ಬಂದಿದೆ. ಅದನ್ನು ಆಧರಿಸಿ ಠಾಣೆಯ ಪಿಎಸ್ಐ, ಹಾಗೂ ಇಬ್ಬರು ಸಿಬ್ಬಂದಿಗಳು ತೆರಳಿ ಪರಿಶೀಲನೆ ಕೈಗೊಂಡಿದ್ದಾರೆ. ಈ ವೇಳೆ ಜೂಜುಕೋರರು ಪೊಲೀಸರ ಮೇಲೆ ಹಲ್ಲೆ ಮಾಡಿದರು. ಅದರ ಕುರಿತು ಈಗ ಠಾಣೆಯಲ್ಲಿ ದೂರು ದಾಖಲು ಮಾಡಿಕೊಂಡು ಕ್ರಮ ಕೈಗೊಳ್ಳಲಾಗಿದೆ ಎಂದರು. ಕಳೆದ ಮೂರ್ನಾಲ್ಕು ದಿನಗಳಲ್ಲಿ ಧಾರವಾಡ ಜಿಲ್ಲಾ ವ್ಯಾಪ್ತಿಯ ಹಲವು ಠಾಣೆಗಳಲ್ಲಿ ಪ್ರಕರಣಗಳು ದಾಖಲಾಗಿವೆ. ಒಟ್ಟು 27 ಪ್ರಕರಣದಲ್ಲಿ 236…
Author: AIN Author
ಕೋಲಾರ: ಲೋಕಸಭಾ ಚುನಾವಣೆಯಲ್ಲಿ ಜಯಬೇರಿ ಬಿಜೆಪಿ ಭಾರಿಸಬೇಕು. ರಾಜ್ಯದಲ್ಲೂ ಬಿಜೆಪಿ ಹೆಚ್ಚಿನ ಕ್ಷೇತ್ರಗಳನ್ನು ಗೆಲ್ಲಬೇಕು. ಮೂರನೇ ಬಾರಿಗೆ ಪ್ರಧಾನಿ ಮೋದಿ ಅವರನ್ನು ಪ್ರಧಾನಿಯನ್ನಾಗಿ ಮಾಡಬೇಕು. ಪಕ್ಷದಲ್ಲಿ ಹಿರಿಯರಿದ್ದರೂ ಸಹ ನನಗೆ ಜವಾಬ್ದಾರಿ ಕೊಟ್ಟಿದ್ದಾರೆ, ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಪಕ್ಷ ಸಂಘಟನೆ ಮಾಡುತ್ತೇನೆ. ಬಿವೈ ವಿಜಯೇಂದ್ರ ಅವರನ್ನು ಆಯ್ಕೆ ಮಾಡಿರುವುದು ನಮ್ಮ ರಾಷ್ಟ್ರೀಯ ನಾಯಕರ ತೀರ್ಮಾನ. ಶುಕ್ರವಾರ ಶಾಸಕಾಂಗ ಪಕ್ಷದ ಸಭೆ ಕರೆಯಲಾಗಿದೆ. ಆ ಸಭೆಯಲ್ಲಿ ಎಲ್ಲಾ ಶಾಸಕರುಗಳು ಭಾಗವಹಿಸುತ್ತಾರೆ. ಶಾಸಕಾಂಗ ಪಕ್ಷದ ಸಭೆಗೆ ನಮ್ಮ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು ಬರಲಿದ್ದಾರೆ ಎಂದು ಬಿವೈ ವಿಜಯೇಂದ್ರ ಹೇಳಿದರು.
ಧಾರವಾಡ: ದೀಪಾವಳಿ ಹಬ್ಬದ ಅಂಗವಾಗಿ ಅಂದರ್ ಬಾಹರ್ ಆಡುತ್ತಿದ್ದ ಕಾಂಗ್ರೆಸ್ ಯುವ ಮುಖಂಡ ಸೇರಿದಂತೆ 12 ಜನರನ್ನು ಧಾರವಾಡ ವಿದ್ಯಾಗಿರಿ ಠಾಣೆ ಪೊಲೀಸರು ವಶಕ್ಲೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಧಾರವಾಡದ ನಗರದ ಲಕ್ಷ್ಮೀ ಚಿತ್ರಮಂದಿರದ ಬಳಿ ಇರುವ ಫೈನಾನ್ಸ್ ಕಚೇರಿಯಲ್ಲಿ ದೀಪಾವಳಿ ಹಬ್ಬದ ಅಂಗವಾಗಿ ಅಂದರ್ ಬಾಹರ್ ಆಡಲಾಗುತ್ತಿತ್ತು. ಈ ವೇಳೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ವಿದ್ಯಾಗಿರಿ ಠಾಣೆ ಪೊಲೀಸರು ಕಾಂಗ್ರೆಸ್ ಯುವ ಮುಖಂಡ ರಾಹುಲ್ ಅಷ್ಟಗಿ ಸೇರಿದಂತೆ 12 ಜನರನ್ನು ವಶಕ್ಕೆ ಪಡೆದು ದೂರು ದಾಖಲಿಸಿಕೊಂಡಿದ್ದಾರೆ. ದಾಳಿ ವೇಳೆ ಸುಮಾರು 1 ಲಕ್ಷಕ್ಕಿಂತಲೂ ಅಧಿಕ ಹಣ ಹಾಗೂ ಇತ್ಯಾದಿ ಸಾಮಗ್ರಿಗಳನ್ನು ವಶಪಡಿಸಿಕೊಂಡಿದ್ದಾರೆ. ಕಳೆದ ಬಾರಿ ರಮ್ಯ ರೆಸಿಡೆನ್ಸಿಯಲ್ಲಿ ನಡೆದ ಇಸ್ಪೀಟ್ ದಾಳಿ ವೇಳೆ ಈಗಿನ ಕಾಂಗ್ರೆಸ್ ಮುಖಂಡ ತವನಪ್ಪ ಅಷ್ಟಗಿ ಕೂಡ ಸಿಕ್ಕಿಹಾಕಿಕೊಂಡಿದ್ದರು. ಈಗ ಅವರ ಸಹೋದರನ ಮಗ ರಾಹುಲ್ ಅಷ್ಟಗಿ ಕೂಡ ಇಸ್ಪೀಟ್ ರೇಡ್ನಲ್ಲಿ ಸಿಕ್ಕಿಹಾಕಿಕೊಂಡಿದ್ದಾರೆ. ಸಮಾಜಕ್ಕೆ ಬುದ್ದಿ ಹೇಳುವವರ ಮಕ್ಕಳೇ ಇಂತಹ ಅಪರಾಧದಲ್ಲಿ ತೊಡಗಿಕೊಳ್ಳುತ್ತಿರುವುದು ಎಷ್ಟರಮಟ್ಟಿಗೆ…
ವಿಜಯಪುರ: ವಿಜಯೇಂದ್ರರವರ ನೇಮಕ ನಾವಂತೂ ಮಾಡಿಲ್ಲ. ಪಕ್ಷದ ಹಿರಿಯರು ಯಾವ ಯಾವುದೋ ಕಾರಣಕ್ಕೆ ಮಾಡಿದ್ದಾರೆ. ಬಹಳ ಯೋಚನೆ ಮಾಡಿ, ಯಡಿಯೂರಪ್ಪ ಮಗನೇ ಆಗಬೇಕು ಅಂತಾ ಮಾಡಿದ್ದಾರೆ. ಅದರ ಪ್ರಕಾರ ವಿಜಯೇಂದ್ರ ಅಧ್ಯಕ್ಷ ಆಗಿದ್ದಾನೆ. ಅವರು ಆಗಿರೋದ್ರಿಂದ ನಮಗೇನೂ ಹೊಟ್ಟೆ ಉರಿ ಏನೂ ಇಲ್ಲ ಎಂದು ವಿಜಯಪುರದಲ್ಲಿ ಸಂಸದ ರಮೇಶ ಜಿಗಜಿಣಗಿ ಪ್ರತಿಕ್ರಿಯೆ ನೀಡಿದ್ದಾರೆ. https://ainlivenews.com/do-you-know-what-happens-when-you-keep-notes-in-the-mobile-cover/
ಸಲ್ಲದ ಕಾರಣಗಳಿಂದಾಗಿ ಇತ್ತೀಚೆಗೆ ನಟಿಯರು ಸುದ್ದಿ ಆಗುತ್ತಿದ್ದಾರೆ. ಜೊತೆಗೆ ಜೈಲು ಸೇರುತ್ತಿದ್ದಾರೆ. ಈ ಪಟ್ಟಿಗೆ ಹೊಸ ಸೇರ್ಪಡೆ ಒರಿಯಾ ನಟಿ ಮೌಶುಮಿ ನಾಯಕ್ (Moushumi Naik). ಲೇಖಕಿಯೊಬ್ಬರಿಗೆ ಬ್ಲ್ಯಾಕ್ ಮೇಲ್ (Black mail) ಮಾಡಿದ್ದಾರೆ ಎನ್ನುವ ಕಾರಣಕ್ಕಾಗಿ ನಟಿಯನ್ನು ಪೊಲೀಸರು ಬಂಧಿಸಿದ್ದಾರೆ. ಸಾರ್ವಜನಿಕ ಪ್ರತಿಷ್ಠೆಗೆ ಧಕ್ಕೆ ತಂದಿದ್ದನ್ನು ಸ್ವತಃ ನಟಿ ಒಪ್ಪಿಕೊಂಡಿರುವುದಾಗಿಯೂ ಪೊಲೀಸರು ತಿಳಿಸಿದ್ದಾರೆ. ಒರಿಯಾ ಸಿನಿಮಾ ರಂಗದಲ್ಲಿ ಅತ್ಯಂತ ಜನಪ್ರಿಯ ನಟಿ ಮೌಶುಮಿ ನಾಯಕ್, ದುಡ್ಡಿನ ವಿಚಾರದಲ್ಲಿ ಲೇಖಕಿ ಬನಸ್ಮಿತಾ (Banasmita) ಅವರ ಮಾನಹಾನಿ ಮಾಡಿದ್ದರಂತೆ. ಜೊತೆಗೆ ಲೇಖಕಿ ಪತಿಯ ವಿರುದ್ಧ ಚಂದಕಾ ಪೊಲೀಸ್ ಠಾಣೆಯಲ್ಲಿ ಸುಳ್ಳು ದೂರು ಕೂಡ ನೀಡಿದ್ದರಂತೆ. ಆನಂತರ ಲೇಖಕಿ ಹಾಗೂ ನಟಿ ರಾಜಿ ಮಾಡಿಕೊಂಡಿದ್ದಾರೆ. ಇದಾದ ನಂತರವೂ ನಿರಂತರವಾಗಿ ನಟಿ ಬ್ಲ್ಯಾಕ್ ಮೇಲ್ ಮಾಡುತ್ತಿದ್ದಾರೆ ಎಂದು ಲೇಖಕಿ ದೂರು ನೀಡಿದ್ದರು. ಲೇಖಕಿ ನೀಡಿದ ದೂರಿನ ಆಧಾರದಲ್ಲಿ ಭುವನೇಶ್ವರದ ಇನ್ಫೋಸಿಟಿ ಪೊಲೀಸರು ನಟಿಯನ್ನು ಬಂಧಿಸಿದ್ದಾರೆ. ಸೆಕ್ಸನ್ 385, 294, 506 ಹಾಗೂ 507ರ ಅಡಿಯಲ್ಲಿ ನಟಿಯ…
ಬೆಂಗಳೂರು: ಇದೇ ನವೆಂಬರ್ 1 ರಿಂದ ರಾಜ್ಯಾದ್ಯಂತ ಹೈ ಸೆಕ್ಯೂರಿಟಿ ರಿಜಿಸ್ಪ್ರೇಷನ್ ಪ್ಲೇಟ್ (ಎಚ್ಎಸ್ಆರ್ಪಿ) ಕಡ್ಡಾಯಮಾಡಿದ್ದು. ಅದರಂತೆ 2019ಕ್ಕೂ ಮೊದಲು ನೋಂದಣಿಯಾಗಿರುವ ಎಲ್ಲಾ ವಾಹನಗಳ ಮಾಲೀಕರು ತಮ್ಮ ವಾಹನಗಳಿಗೆ ಅತ್ಯಾಧುನಿಕ ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಅಳವಡಿಸುವುದು ಕಡ್ಡಾಯವಾಗಿತ್ತು ಇಲ್ಲದಿದ್ದರೆ ಫೈನ್ ಹಾಕುವ ಯೋಜನೆ ಮಾಡಲಾಗಿತ್ತು ನವೆಂಬರ್ 1ಕ್ಕೂ ಮುನ್ನ ಎಲ್ಲ ವಾಹನಗಳಲ್ಲೂ ಈ ಪ್ಲೇಟ್ ಇರಬೇಕು. ಇಲ್ಲದಿದ್ದರೆ 500 ರೂ. ದಂಡ ವಿಧಿಸಲಾಗುತ್ತದೆ. ಹೊಸ ನಂಬರ್ ಪ್ಲೇಟ್ ಹಾಕಿಸುವ ಅಂತಿಮ ದಿನಾಂಕವನ್ನು ಸರ್ಕಾರ ವಿಸ್ತರಿಸುವ ಸಾಧ್ಯತೆ ಹೆಚ್ಚಾಗಿದೆ. https://ainlivenews.com/joint_pain_suprem_ray_treatment_reiki/ ವಾಹನಗಳಿಗೆ ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಆಳವಡಿಕೆ ಗಡುವು ವಿಸ್ತರಣೆ ಫಿಕ್ಸ್ ಎಲ್ಲಾ ವಾಹನಗಳಿಗೆ ಹೈ ಸೆಕ್ಯುರಿಟಿ ರಿಜಿಸ್ಟ್ರೇಷನ್ ಪ್ಲೇಟ್ ಆಳವಡಿಕೆ ಕಡ್ಡಾಯ ಎಂದಿರೋ ಸಾರಿಗೆ ಇಲಾಖೆ 2019- ಏ.1 ಕ್ಕಿಂತ ಮುಂಚೆ ನೋಂದಾಣಿಯಾಗಿರುವ ಎಲ್ಲಾ ವಾಹನಗಳಿಗೆ ನವೆಂಬರ್ 17 ರೊಳಗೆ ಎಸ್ಎಸ್ಆರ್ಪಿ ಕಡ್ಡಾಯ ಎಂದಿದ್ದ ಸಾರಿಗೆ ಇಲಾಖೆ ಆದ್ರೆ ವಾಹನಗಳಿಗೆ ಎಚ್ಎಸ್ಆರ್ಪಿ ಆಳವಡಿಕೆ ಮಾಡಿಕೊಳ್ಳಲು ಜನ ಹಿಂದೇಟು ಹೀಗಾಗಿ ಪುನಃ ಗಡುವು…
ತುಮಕೂರು: ಕೇಂದ್ರ ನಾಯಕರಿಗೆ ಜ್ಞಾನೋದಯ ಆಗಿ ಅಧ್ಯಕ್ಷ ಸ್ಥಾನ ತುಂಬಿದ್ದಾರೆ ಎಂದು ತುಮಕೂರಿನಲ್ಲಿ ಸಹಕಾರ ಇಲಾಖೆ ಸಚಿವ ಕೆ.ಎನ್.ರಾಜಣ್ಣ ವಾಗ್ದಾಳಿ ಮಾಡಿದ್ದಾರೆ. ವಿಜಯೇಂದ್ರರನ್ನು ನೇಮಕ ಮಾಡಿದ್ದಕ್ಕೆ ಅಸಮಾಧಾನ ಹೊರಬರ್ತಿದೆ. ಯಾವುದೇ ನಾಲ್ಕು ಉಪ ಚುನಾವಣೆಗಳನ್ನು ಗೆಲ್ಲಿಸಿದ ಮಾತ್ರಕ್ಕೆ ಸಂಘಟನಾ ಚತುರ ಅಂತಾ ಸರ್ಟಿಫಿಕೇಟ್ ಕೊಡುವುದಕ್ಕೆ ಆಗಲ್ಲ ಎಂದಿದ್ದಾರೆ. https://ainlivenews.com/do-you-know-what-happens-when-you-keep-notes-in-the-mobile-cover/
ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ನವೆಂಬರ್ 18 ಮತ್ತು 19 ರಂದು ನಡೆಸಲಿರುವ ನಿಗಮ-ಮಂಡಳಿಗಳ ಪರೀಕ್ಷೆಗೆ ಮತ್ತಷ್ಟು ಟಫ್ ರೂಲ್ಸ್ (Tough Rules) ಜಾರಿ ಮಾಡಿದೆ. ನೇರ ನೇಮಕಾತಿ ಪರೀಕ್ಷೆ ನಡೆಯುತ್ತಿದ್ದು ಅಭ್ಯರ್ಥಿಗಳು ವಸ್ತ್ರ ಸಂಹಿತೆ ನಿಯಮವನ್ನು ಕಡ್ಡಾಯವಾಗಿ ಪಾಲಿಸಬೇಕು. ಸೂಕ್ಷ್ಮ ಕೇಂದ್ರಗಳಲ್ಲಿ ಪೊಲೀಸರಿಂದ (Police ತಪಾಸಣೆ ನಡೆಸಲಾಗುತ್ತದೆ. ಅಷ್ಟೇ ಅಲ್ಲದೇ ಪರೀಕ್ಷಾ ಕೇಂದ್ರಗಳಲ್ಲಿ ಮೆಟಲ್ ಡಿಟೆಕ್ಟರ್ ಅಳವಡಿಕೆ ಮಾಡಲಿದೆ. ಏನೇನು ರೂಲ್ಸ್? – ಡ್ರೆಸ್ ಕೋಡ್ (Dress Code) ಜಾರಿಯಾಗಿದ್ದು, ಪರೀಕ್ಷೆಯ ದಿನದಂದು ತುಂಬುತೋಳಿನ ಶರ್ಟ್ ಧರಿಸುವಂತಿಲ್ಲ. – ಅಭ್ಯರ್ಥಿಗಳಿಗೆ ಜೇಬು ಇಲ್ಲದ ಅಥವಾ ಕಡಿಮೆ ಜೇಬಿರುವ ಪ್ಯಾಂಟ್ ಧರಿಸಿ ಪರೀಕ್ಷೆಗೆ ಹಾಜರಾಗಲು ಸೂಚನೆ. – ಕುರ್ತಾ, ಪೈಜಾಮ, ಜೀನ್ಸ್ ಪ್ಯಾಂಟ್ ಧರಿಸಿ ಪರೀಕ್ಷೆಗೆ ಹಾಜರಾಗಲು ಅವಕಾಶ ಇರುವುದಿಲ್ಲ. – ಧರಿಸುವ ಬಟ್ಟೆಗಳು ಹಗುರವಾಗಿದ್ದು ದೊಡ್ಡ ಎಂಬ್ರಾಯಿಡರಿ, ಜಿಪ್ ಪಾಕೆಟ್ಗಳು, ದೊಡ್ಡ ಬಟನ್ಗಳು – ಇವುಗಳನ್ನು ಹೊಂದಿರಬಾರದು. – ಅಭ್ಯರ್ಥಿಗಳು ಶೂ ಹಾಕಿಕೊಂಡು ಪರೀಕ್ಷೆಗೆ ಹಾಜರಾಗುವುದನ್ನು ನಿಷೇಧಿಸಲಾಗಿದ್ದು, ತೆಳುವಾದ ಅಡಿಭಾಗ…
ಭೋಪಾಲ್: ಪ್ರಧಾನಿ ಮೋದಿ (Narendra Modi) ಅವರು ಲಕ್ಷ ರೂಪಾಯಿ ಸೂಟ್ಗಳನ್ನ ಧರಿಸುತ್ತಾರೆ. ಆದರೆ ನಾನು ಈ ಬಿಳಿ ಟೀ-ಶರ್ಟ್ ಮಾತ್ರ ಧರಿಸುತ್ತೇನೆ ಎಂದು ಮೋದಿ ವಿರುದ್ಧ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ವಾಗ್ದಾಳಿ ನಡೆಸಿದ್ದಾರೆ. ಮಧ್ಯಪ್ರದೇಶದಲ್ಲಿ (Madhya Pradesh) ಸತ್ನಾ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಅವರು, ನಾನು ಪ್ರಧಾನಿ ಮೋದಿಯವರ ಭಾಷಣ ಕೇಳಿದ್ದೇನೆ. ಅವರು ಪ್ರತಿ ಭಾಷಣದಲ್ಲಿ ನಾನು ಒಬಿಸಿ ಸಮುದಾಯದವನು ಎಂದು ಎಲ್ಲೆಡೆ ಹೇಳುತ್ತಿದ್ದಾರೆ. ಪದೇ ಪದೇ ಹೇಳುವ ಮೂಲಕ ಅವರು ಪ್ರಧಾನಿಯಾದರು. https://ainlivenews.com/do-you-know-what-happens-when-you-keep-notes-in-the-mobile-cover/ ಅಂಥವರು ಲಕ್ಷ ರೂಪಾಯಿ ಬೆಲೆ ಬಾಳುವ ಸೂಟ್ ಧರಿಸುತ್ತಾರೆ. ಒಮ್ಮೆ ಬಳಸಿದ ಬಟ್ಟೆಯನ್ನು ಮತ್ತೊಮ್ಮೆ ಬಳಸಿದ್ದನ್ನು ನೀವು ಎಂದಾದರು ನೋಡಿದ್ದೀರಾ ಎಂದು ರಾಗಾ ಪ್ರಶ್ನಿಸಿದ್ದಾರೆ. ನಾನು ಈ ಒಂದೇ ಒಂದು ಬಿಳಿ ಅಂಗಿಯನ್ನು ಧರಿಸುತ್ತೇನೆ. ನಾನು ಜಾತಿ ಆಧಾರಿತ ಜನಗಣತಿಯ ಬಗ್ಗೆ ಮಾತನಾಡಲು ಪ್ರಾರಂಭಿಸಿದಾಗ, ಮೋದಿ ಅವರ ಭಾಷಣದಿಂದ ಜಾತಿ ಕಣ್ಮರೆಯಾಯಿತು. ನಾನು ಅದರ ಬಗ್ಗೆ ಮಾತನಾಡಲು ಪ್ರಾರಂಭಿಸಿದಾಗಿನಿಂದ, ಭಾರತದಲ್ಲಿ ಜಾತಿ ಇಲ್ಲ…
ಬೆಂಗಳೂರಿನ ಕುರುಬರಹಳ್ಳಿ ಸರ್ಕಲ್ ನಲ್ಲಿರುವ ಅಣ್ಣಾವ್ರ ಪುತ್ಥಳಿ ಮುಂದೆ ಶಂಕರ ಆರಾಧ್ಯ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿರುವ ಮಾಯಾನಗರಿ (Mayanagari) ಚಲನಚಿತ್ರದ ಟ್ರೈಲರ್ (Trailer) ಬಿಡುಗಡೆ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು. ಇದೊಂದು ಬಿಗ್ ಬಜೆಟ್ ನಲ್ಲಿ ನಿರ್ಮಾಣವಾದ ಥ್ರಿಲ್ಲರ್ ಚಿತ್ರವಾಗಿದ್ದು ಮೂರು ಅಥವಾ ನಾಲ್ಕು ಭಾಷೆಗಳಲ್ಲಿ ಬಿಡುಗಡೆಯಾಗಲಿದೆ. ನಿರ್ದೇಶಕನಾಗಬೇಕೆಂಬ ಕನಸು ಹೊತ್ತು ಬರುವ ಯುವಕನ ಪಾತ್ರದಲ್ಲಿ ನಟ ಅನೀಶ್ ತೇಜೇಶ್ವರ್ ಅವರು ಕಾಣಿಸಿಕೊಂಡಿದ್ದು, ಶ್ರಾವ್ಯರಾವ್ ನಾಯಕಿಯಾಗಿ ನಟಿಸಿದ್ದಾರೆ. ಕಾಮಿಡಿ, ಲವ್, ಆಕ್ಷನ್, ಸೆಂಟಿಮೆಂಟ್ ಕಥಾಹಂದರವಿರುವ ಈ ಚಿತ್ರವನ್ನು ಸ್ಯಾಂಡಲ್ ವುಡ್ ಪಿಕ್ಚರ್ಸ್ ಬ್ಯಾನರ್ ಅಡಿಯಲ್ಲಿ ಶಂಕರ್ ಆರಾಧ್ಯ ಅವರೇ ನಿರ್ಮಾಣ ಸಹ ಮಾಡಿದ್ದಾರೆ. ಶ್ವೇತಾ ಶಂಕರ್ ಸಹ ನಿರ್ಮಾಣದಲ್ಲಿ ಕೈ ಜೋಡಿಸಿದ್ದಾರೆ. ಅರ್ಜುನ್ ಜನ್ಯ ಅವರ ಸಂಗೀತ, ಶ್ರೀನಿವಾಸ್ ಅವರ ಕ್ಯಾಮೆರಾ ಕೈಚಳಕ ಈ ಚಿತ್ರಕ್ಕಿದೆ. ವಿಕ್ರಮ್ ಮೋರ್ ಅವರ ಸಾಹಸ ಸಂಯೋಜನೆ, ಮದನ್ – ಹರಿಣಿ ಹಾಗೂ ಮುರಳಿ ಅವರ ನೃತ್ಯನಿರ್ದೇಶನ, ವಿಜಯ್ ಎಂ. ಕುಮಾರ್ ಅವರ ಸಂಕಲನವೂ…