Author: AIN Author

ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್ (Shivarajkumar) ಅವರು ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಆದರೆ ಇಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಏಕದಿನ ವಿಶ್ವಕಪ್ (World Cup 2023) ಟೂರ್ನಿ ಶಿವಣ್ಣ ವೀಕ್ಷಿಸಿದ್ದಾರೆ. ಶಿವಣ್ಣ ಕ್ರಿಕೆಟ್ ವೀಕ್ಷಿಸುತ್ತಿರುವ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿವೆ. ಏಕದಿನ ವಿಶ್ವಕಪ್‌ ಪಂದ್ಯ ಟೂರ್ನಿ ಭಾರತ- ನೆದರ್ಲೆಂಡ್ಸ್ (India Vs Netherlands) ತಂಡಗಳ ನಡುವಿನ ಪಂದ್ಯವನ್ನ ಕ್ರಿಕೆಟ್ ಶಿವರಾಜ್‌ಕುಮಾರ್ ವೀಕ್ಷಿಸಿದ್ದಾರೆ.  ಬಳಿಕ ಮಾಧ್ಯಮವೊಂದಕ್ಕೆ ಶಿವಣ್ಣ ಪ್ರತಿಕ್ರಿಯೆ ನೀಡಿದ್ದಾರೆ. ಬಳಿಕ ಹಂಬಲ್ ಗುಣ ಬಂದಿರೋದೆಲ್ಲ ನಮ್ಮ ತಂದೆ ಅವರಿಂದಲೇ. ಅವರು ಒಳ್ಳೆಯ ದಾರಿ ಹಾಕಿಕೊಟ್ಟಿದ್ದಾರೆ. ಇವತ್ತು ಪುನೀತ್‌ನ ಯಾಕೆ ಎಲ್ಲರೂ ನೆನಪು ಮಾಡಿಕೊಳ್ತಾರೆ ಅಂದರೆ ಅವರ ಒಳ್ಳೆತನದಿಂದ, ಅದೇ ಶಾಶ್ವತವಾಗಿರುವುದು ಎಂದಿದ್ದಾರೆ. ನಮ್ಮ ವೃತ್ತಿಯಲ್ಲಿ ಎಷ್ಟೇ ಬೆಳೆದಿದ್ರೂ, ನಮ್ಮ ಭಾರತಕ್ಕೆ ಆಡುವ ಆಟಗಾರರ ಜೊತೆ ಇಲ್ಲಿ ಕೂರೋದು ಖುಷಿ ಕೊಟ್ಟಿದೆ ಎಂದು ಶಿವಣ್ಣ ಸಂತಸ ವ್ಯಕ್ತಪಡಿಸಿದ್ದಾರೆ.

Read More

ಬೆಂಗಳೂರು: ದೀಪಾವಳಿ ಹಬ್ಬ ಹಿನ್ನೆಲೆ ಪಟಾಕಿ ಅವಘಡ ಕೇಸ್​ ಹೆಚ್ಚಳ ವಿಚಾರ ಸಂಬಂಧ ಬೆಂಗಳೂರಿನಲ್ಲಿ ಗೃಹ ಇಲಾಖೆ ಸಚಿವ ಡಾ.ಪರಮೇಶ್ವರ್ ಮಾತನಾಡಿದ್ದು, ಗ್ರೀನ್ ಪಟಾಕಿ ಉಪಯೋಗಿಸಬೇಕು ಎಂದು ಸೂಚನೆ ನೀಡಿದ್ದೇವೆ. ಜನರೂ ಕೂಡ ನಮಗೆ ಸಹಕಾರ ನೀಡಬೇಕು. ಕೆಲವೆಡೆ ಪಟಾಕಿಯಿಂದ ಕಣ್ಣಿಗೆ ಗಾಯವಾಗಿರುವ ವರದಿ ಆಗಿದೆ. ಎಸಿಪಿಗಳ ಒಂದು ಟೀಂನಿಂದ ಎಲ್ಲಾ ಏರಿಯಾಗಳಲ್ಲಿ ಪರಿಶೀಲನೆ ನಡೆಯುತ್ತಿದೆ ಎಂದರು. https://ainlivenews.com/b-y-vijayendra-met-former-prime-minister-hd-deve-gowda/ ಭಾನುವಾರ ಸಂಜೆಯಿಂದಲೇ ಬೆಂಗಳೂರಿನ ಮಿಂಟೋ ಆಸ್ಪತ್ರೆ, ನಾರಾಯಣ ನೇತ್ರಾಲಯದಲ್ಲಿ 20 ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿದೆ. ಮಿಂಟೋ ಕಣ್ಣಿನ ಆಸ್ಪತ್ರೆಯಲ್ಲಿ 4 ಪ್ರಕರಣ ಪೈಕಿ ಇಬ್ಬರು ಆಸ್ಪತ್ರೆಗೆ ದಾಖಲಾಗಿದ್ದಾರೆ. 10 ವರ್ಷದ ಬಾಲಕಿ ಮತ್ತು 18 ವರ್ಷದ ಯುವಕನ ಕಣ್ಣಿಗೆ ಪೆಟ್ಟು ಬಿದ್ದ ಕಾರಣ ಸರ್ಜರಿ ಮಾಡುವ ಅವಶ್ಯಕತೆ ಇದೆ ಎಂದು ವೈದ್ಯರು ತಿಳಿಸಿದ್ದಾರೆ. ಇನ್ನೂ, ನಾರಾಯಣ ನೇತ್ರಾಲಯದಲ್ಲಿ ಒಂದೇ ದಿನಕ್ಕೆ 22 ಪ್ರಕರಣ ಪೈಕಿ 10 ಮಂದಿ ಕಣ್ಣಿಗೆ ಗಾಯವಾಗಿದ್ದು 12 ಜನರಿಗೆ ಸಣ್ಣಪುಟ್ಟ ಗಾಯಗಳಾಗಿದೆಮ ಗಾಯಾಳುಗಳಿಗೆ ಚಿಕಿತ್ಸೆ ಮುಂದುವರಿಸಲಾಗಿದೆ. ಇವರಲ್ಲಿ…

Read More

ಬೆಂಗಳೂರು: ಮಾಜಿ ಪ್ರಧಾನ ಮಂತ್ರಿ ಗಳು, ದೇವೇಗೌಡರನ್ನು ಇವತ್ತು ಭೇಟಿ ಮಾಡಿ ಆಶೀರ್ವಾದ ಪಡೆದಿದ್ದೇನೆ ಅವ್ರು ಬಹಳ ಹೆಮ್ಮೆ ಪಟ್ಟರು ನಿಮ್ದು ಒಂದು ದೊಡ್ಡ ರಾಷ್ಟ್ರೀಯ ಪಕ್ಷ ಇಂತಹ ಪಕ್ಷದಲ್ಲಿ ಕಿರಿಯವನಾದ ನಿನಗೆ ನರೇಂದ್ರ ಮೋದಿಯವರು ಅವಕಾಶ ಕೊಟ್ಟಿದ್ದಾರೆ ತಂದೆಯವರಂತೆ ನೀನು ಯಶಸ್ಸು ಕಾಣುತ್ತೀಯಾ, ಅವರ ದಾರಿಯಲ್ಲಿ ಹೋಗು ನಿನಗೂ ಒಳ್ಳೆಯ ಯಶಸ್ಸು ಸಿಗುತ್ತದೆ ಎಂದು ದೇವೇಗೌಡರ ಭೇಟಿ ಬಳಿಕ ಬಿ ವೈ ವಿಜಯೇಂದ್ರ‌ ಹೇಳಿದರು. ಬಿಜೆಪಿ ಮತ್ತು ಜೆಡಿಎಸ್ ಒಗ್ಗಟ್ಟಾಗಿ ಹೋಗುವಂತೆ ಸಲಹೆ ನೀಡಿದ್ದಾರೆ ಏನೇ ಸಮಸ್ಯೆ ಇದ್ದರೂ ಅದನ್ನು ಬಗೆಹರಿಸಿಕೊಂಡು ಏನೇ ವ್ಯತ್ಯಾಸ ಗಳಿದ್ದರೂ ಅದನ್ನು ಸರಿಪಡಿಸಿಕೊಂಡು ಮುಂದೆ ಹೋಗುವಂತೆ ಮಾರ್ಗದರ್ಶನ ಮಾಡಿದ್ದಾರೆ ಅವರ ಮಾತಿಂದ ನನಗೆ ತುಂಬಾ ಸಂತೋಷ ಆಯ್ತು ಭೇಟಿ ವೇಳೆ‌ ಅವರ ಹೋರಾಟ ಮತ್ತು ನಮ್ಮ ತಂದೆಯವರ ಹೋರಾಟಗಳನ್ನು ನೆನಪು ಮಾಡಿಕೊಂಡ್ರು ಮಾಜಿ ಪ್ರಧಾನ ಮಂತ್ರಿ ಗಳು, ದೇವೇಗೌಡರನ್ನು ಇವತ್ತು ಭೇಟಿ ಮಾಡಿ ಆಶೀರ್ವಾದ ಪಡೆದಿದ್ದೇನೆ ಅವ್ರು ಬಹಳ ಹೆಮ್ಮೆ ಪಟ್ಟರು ನಿಮ್ದು ಒಂದು…

Read More

ಲಕ್ನೋ: ಐಸಿಸ್‌ (ISIS) ಪರವಾಗಿ ಕೆಲಸ ಮಾಡುತ್ತಿದ್ದ ಅಲಿಗಢ ಮುಸ್ಲಿಂ ವಿಶ್ವವಿದ್ಯಾನಿಲಯದ (Aligarh Muslim University) ಆರು ವಿದ್ಯಾರ್ಥಿಗಳನ್ನು ಉತ್ತರ ಪ್ರದೇಶದ (Uttar Pradesh) ಭಯೋತ್ಪಾದನಾ ನಿಗ್ರಹ ದಳದ (ATS) ಪೊಲೀಸರು ಬಂಧಿಸಿ ದ್ದಾರೆ. ಆರು ವ್ಯಕ್ತಿಗಳನ್ನು ಬಂಧಿಸುವುದರೊಂದಿಗೆ ಅಲಿಗಢ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘಟನೆಯ ಭಯೋತ್ಪಾದಕ ಜಾಲವು ಬೆಳಕಿಗೆ ಬಂದಿದೆ. ಆರು ಮಂದಿಯಲ್ಲಿ ನಾಲ್ವರನ್ನು ರಕೀಬ್ ಇನಾಮ್, ನಾವೇದ್ ಸಿದ್ದಿಕಿ, ಮೊಹಮ್ಮದ್ ನೋಮನ್ ಮತ್ತು ಮೊಹಮ್ಮದ್ ನಾಜಿಮ್ ಎಂದು ಗುರುತಿಸಲಾಗಿದೆ.  https://ainlivenews.com/a-4-year-old-child-was-raped-by-a-police-sub-inspector/ ಎಲ್ಲಾ ಬಂಧಿತ ಆರೋಪಿಗಳು ಅಲಿಗಢ ವಿಶ್ವವಿದ್ಯಾನಿಲಯದ ವಿದ್ಯಾರ್ಥಿ ಸಂಘಟನೆಯೊಂದಿಗೆ (Student Union) ಸಂಬಂಧ ಹೊಂದಿದ್ದರು. ಉತ್ತರ ಪ್ರದೇಶದ ಭಯೋತ್ಪಾದನಾ ನಿಗ್ರಹ ದಳದ ಪ್ರಕಾರ ಬಂಧಿತ ಆರೋಪಿಗಳು ದೇಶದಲ್ಲಿ ದೊಡ್ಡ ಭಯೋತ್ಪಾದಕ ದಾಳಿ ನಡೆಸಲು ಸಂಚು ರೂಪಿಸಿದ್ದರು. ವಿದ್ಯಾರ್ಥಿ ಸಂಘದ ಸಭೆಗಳು ಐಸಿಸ್‌ನ ಹೊಸ ನೇಮಕಾತಿ ಸೆಲ್ ಆಗಿ ಮಾರ್ಪಟ್ಟಿವೆ ಎಂದು ಹೇಳಿಕೊಂಡಿದೆ. ಮೂಲಗಳ ಪ್ರಕಾರ, ಅಲಿಗಢ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಈಗ ಕೇಂದ್ರೀಯ ತನಿಖಾ ಸಂಸ್ಥೆಗಳ ನಿಗಾದಲ್ಲಿದ್ದಾರೆ.

Read More

ಬೆಂಗಳೂರು:ಬಿಜೆಪಿಯ ನೂತನ ರಾಜ್ಯಾಧ್ಯಕ್ಷರಾಗಿ ಆಯ್ಕೆ ಆಗಿರುವ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಪುತ್ರ ಬಿವೈ ವಿಜಯೇಂದ್ರ ಅವರು ಇಂದು ಮಾಜಿ ಪ್ರಧಾನಿ ದೇವೇಗೌಡರನ್ನು ಭೇಟಿ ಮಾಡಿದರು. ಬೆಂಗಳೂರಿನ ಪದ್ಮನಾಭನಗರದಲ್ಲಿರುವ ದೇವೇಗೌಡರ ನಿವಾಸಕ್ಕೆ ತೆರಳಿ ಜೆಡಿಎಸ್ ವರಿಷ್ಟರನ್ನು ಭೇಟಿ ಮಾಡಿ ಆಶೀರ್ವಾದ ಪಡೆದ ಬಿವೈ ವಿಜಯೇಂದ್ರ ರಾಜ್ಯಾಧ್ಯಕ್ಷರಾಗಿ ನೇಮಕ ಮಾಡಿದ್ದಕ್ಕೆ ದೊಡ್ಡ ಶಕ್ತಿ ಬಂದಿದೆ ಎಂದ್ರು. ನಾನಷ್ಟೇ ಅಲ್ಲ, ಎಲ್ಲಾ ಹಿರಿಯರು ನಿನ್ನ ಜತೆ ಇರುತ್ತೇವೆ ಎಂದಿದ್ದಾರೆ. ಮುಂದಿನ ಲೋಕಸಭೆ ಚುನಾವಣೆಯನ್ನು ಒಗ್ಗಟ್ಟಾಗಿ ಎದುರಿಸಬೇಕಿದೆ. ಪ್ರವಾಸ ಮಾಡಿ ಪಕ್ಷಕ್ಕೆ ಬಲ ತುಂಬುವ ಕೆಲಸ ಮಾಡೋಣ ಎಂದಿದ್ದಾರೆ ಎಂದು ಹೇಳಿದರು.

Read More

ಬೆಂಗಳೂರು: ಕೆಇಎ ನೇಮಕಾತಿ ಪರೀಕ್ಷೆ ಅಕ್ರಮದ ಕೇಸ್ ಸಿಐಡಿಗೆ ಹಸ್ತಾಂತರ ಮಾಡಲಾಗಿದೆ. ಸಿಐಡಿ DySP ಶಂಕರಗೌಡ ಪಾಟೀಲ್, DySP ತನ್ವೀರ್​ಗೆ ಹಸ್ತಾಂತರಿಸಿ ಪಿಐ ಅರುಣ ತನಿಖೆಯ ಮಾಹಿತಿ ವಿವರಿಸಿದ್ದಾರೆ. https://ainlivenews.com/what-did-vijayendra-say-after-meeting-farmer-sim-bommai/ ಸಿಐಡಿ SP ರಾಘವೇಂದ್ರ ಹೆಗಡೆ ಇಂದು ಕಲಬುರಗಿಗೆ ಆಗಮಿಸಲಿದ್ದಾರೆ. ಎಸ್​ಪಿ ಆಗಮಿಸಿದ ನಂತರ ತನಿಖೆಯ ಹೊಣೆಗಾರಿಕೆ ಹಂಚಿಕೆ ಸಾಧ್ಯತೆ.

Read More

ಬೆಂಗಳೂರು: 2023ನೇ ಸಾಲಿನಲ್ಲಿ ಭಾರತ 8 ಬಾರಿ 350ಕ್ಕಿಂತ ಹೆಚ್ಚು ರನ್ ಗಳಿಸಿ ದಾಖಲೆ ಬರೆದಿದೆ. 2019ರಲ್ಲಿ ಇಂಗ್ಲೆಂಡ್ (England) ತಂಡ 7 ಬಾರಿ 350 ಅಥವಾ ಅದಕ್ಕಿಂತ ಹೆಚ್ಚು ರನ್ ಗಳಿಸಿದ್ದೇ ಇದುವರೆಗಿನ ವರ್ಷದ ಗರಿಷ್ಠ ಸ್ಕೋರ್ ದಾಖಲೆಯಾಗಿತ್ತು. ಈ ದಾಖಲೆಯನ್ನು ಈಗ ಟೀಂ ಇಂಡಿಯಾ (Team India) ತನ್ನ ಹೆಸರಿಗೆ ಬರೆದುಕೊಂಡಿದೆ. ಒಟ್ಟು 8ರಲ್ಲಿ 2 ಬಾರಿ 350 ಪ್ಲಸ್ ರನ್ ಗಳು 2023ರ ವಿಶ್ವಕಪ್‌ನಲ್ಲೇ (World Cup 2023) ಬಂದಿದೆ. ಈ ವರ್ಷ ಮೂರು ಬಾರಿ ಶ್ರೀಲಂಕಾದ ವಿರುದ್ಧ 350 ಪ್ಲಸ್ ರನ್ ಗಳಿಸಿದೆ. 350 ಪ್ಲಸ್ ರನ್ ಗಳಿಸಿದ್ದ 8 ಪಂದ್ಯಗಳಲ್ಲೂ ಟೀಂ ಇಂಡಿಯಾ ಗೆಲುವು ಸಾಧಿಸಿತ್ತು ಎನ್ನುವುದೇ ವಿಶೇಷ. ಒಟ್ಟು 6 ಪಂದ್ಯಗಳು ಭಾರತದಲ್ಲೇ ನಡೆದಿತ್ತು. ಇನ್ನೆರಡು ಪಂದ್ಯಗಳು ಶ್ರೀಲಂಕಾ (Sri Lanka) ಹಾಗೂ ವೆಸ್ಟ್ ಇಂಡೀಸ್‌ನಲ್ಲಿ (West Indies) ನಡೆದಿತ್ತು. ಯಾರ ವಿರುದ್ಧ 350+…? ನೆದರ್ಲೆಂಡ್ ವಿರುದ್ಧ 50 ಓವರ್ ಗಳಲ್ಲಿ 410/4 (ಬೆಂಗಳೂರು)…

Read More

ಬೆಂಗಳೂರು: ನಗರದ ಆರ್.ಟಿ.‌ನಗರದಲ್ಲಿರುವ ಮಾಜಿ ಸಿಎಂ ಬೊಮ್ಮಾಯಿ ನಿವಾಸದಲ್ಲಿ ಬಿ.ವೈ.ವಿಜಯೇಂದ್ರ ಅವರು ಬಸವರಾಜ ಬೊಮ್ಮಾಯಿಯವರನ್ನು ಭೇಟಿ ಮಾಡಿದ್ದಾರೆ. ಬೊಮ್ಮಾಯಿ ಆಶೀರ್ವಾದ ಹಾಗೂ ಮಾರ್ಗದರ್ಶನ ಕೇಳಿದ್ದೇನೆ ಎಂದು ಮಾಜಿ ಸಿಎಂ ಬೊಮ್ಮಾಯಿ ಭೇಟಿ ಬಳಿಕ ವಿಜಯೇಂದ್ರ ಹೇಳಿದರು. ವರಿಷ್ಠರು ಒಳ್ಳೇ ನಿರ್ಧಾರ ಮಾಡಿದ್ದಾರೆ ಎಂದು ಸಂತೋಷಪಟ್ಟರು. ರಾಜ್ಯಾಧ್ಯಕ್ಷರಾಗಿ ನೇಮಕ ಮಾಡಿದ್ದಕ್ಕೆ ದೊಡ್ಡ ಶಕ್ತಿ ಬಂದಿದೆ ಎಂದ್ರು. ನಾನಷ್ಟೇ ಅಲ್ಲ, ಎಲ್ಲಾ ಹಿರಿಯರು ನಿನ್ನ ಜತೆ ಇರುತ್ತೇವೆ ಎಂದಿದ್ದಾರೆ. ಮುಂದಿನ ಲೋಕಸಭೆ ಚುನಾವಣೆಯನ್ನು ಒಗ್ಗಟ್ಟಾಗಿ ಎದುರಿಸಬೇಕಿದೆ. ಪ್ರವಾಸ ಮಾಡಿ ಪಕ್ಷಕ್ಕೆ ಬಲ ತುಂಬುವ ಕೆಲಸ ಮಾಡೋಣ ಎಂದಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದರು.

Read More

ಭೋಪಾಲ್:‌ ಮಧ್ಯಪ್ರದೇಶದಲ್ಲಿ (Madhya Pradesh) ಬಡವರಿಗೆ 450 ರೂಪಾಯಿಗೆ ಎಲ್‌ಪಿಜಿ ಸಿಲಿಂಡರ್‌ (LPG Cylinder) ನೀಡುವುದಾಗಿ ಬಿಜೆಪಿ (BJP) ಘೋಷಣೆ ಮಾಡಿದೆ. ವಿಧಾನಸಭೆ ಚುನಾವಣೆ (Vidhan Sabha Election) ಹಿನ್ನೆಲೆಯಲ್ಲಿ ಇಂದು 96 ಪುಟಗಳ ʼಸಂಕಲ್ಪ ಪತ್ರʼ ಹೆಸರಿನ ಪ್ರಣಾಳಿಕೆಯನ್ನು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್‌ ಸಿಂಗ್‌ ಚೌಹಾಣ್‌, ಕೇಂದ್ರ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್‌ ಬಿಡುಗಡೆ ಮಾಡಿದರು. ಉಚಿತ ಭರವಸೆಯ ಜೊತೆಗೆ ಮಧ್ಯಪ್ರದೇಶ ಇನ್‌ಸ್ಟಿಟ್ಯೂಟ್‌ ಆಫ್‌ ಟೆಕ್ನಾಲಜಿ ಹಾಗೂ ಮಧ್ಯಪ್ರದೇಶ ಇನ್‌ಸ್ಟಿಟ್ಯೂಟ್‌ ಆಫ್‌ ಮೆಡಿಕಲ್‌ ಸೈನ್ಸ್‌ ಸೇರಿದಂತೆ ಸೇರಿ ಹಲವು ಘೋಷಣೆ ಮಾಡಿದೆ. ಬಿಜೆಪಿಯ ಭರವಸೆ ಏನು? ಲಾಡ್ಲಿ ಬಹ್ನಾ ಮತ್ತು ಪ್ರಧಾನಮಂತ್ರಿ ಉಜ್ವಲ ಯೋಜನೆಯ ಫಲಾನುಭವಿಗಳಿಗೆ 450 ರೂ.ಗೆ ಎಲ್‌ಪಿಜಿ ಸಿಲಿಂಡರ್‌. ಕಿಸಾನ್‌ ಸಮ್ಮಾನ್‌ ಯೋಜನೆ ಅಡಿಯಲ್ಲಿ ರೈತರಿಗೆ ವಾರ್ಷಿಕ 12 ಸಾವಿರ ರೂ. ಹಣಕಾಸು ನೆರವು. ಮುಂದಿನ ಐದು ವರ್ಷಗಳವರೆಗೆ ಜನರಿಗೆ ಉಚಿತವಾಗಿ ಪಡಿತರ ವಿತರಣೆ. ರೈತರಿಂದ ಕ್ವಿಂಟಾಲ್‌ಗೆ 2,700 ರೂ.ಗೆ ಗೋಧಿ,…

Read More

ಬೆಂಗಳೂರು: ದೀಪಾವಳಿ ಅಮಾವಾಸ್ಯೆ ಪೂಜೆಗೆ ಬನಶಂಕರಿ ದೇಗುಲದಲ್ಲಿ ಭಕ್ತ ಸಾಗರ.ನಗರದ ಬನಶಂಕರಿ, ಗವಿಗಂಗಾಧರ, ಕಾಡುಮಲ್ಲೆಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ  ದೀಪಾವಳಿ ಅಮವಾಸ್ಯೆ ಪ್ರಯುಕ್ತ ಬನಶಂಕರಿಗೆ ಬೆಳ್ಳಗ್ಗೆಯಿಂದಲೇ ಪೂಜೆ ನಡೆಸಲಾಗುತ್ತಿದೆ. ಬೆಳ್ಳಗ್ಗೆಯೇ ಪಂಚಾಭಿಷೇಕ ಮಾಡಿ ವಿಶೇಷ ಅಲಂಕಾರ  ವಿಶೇಷ ಅಲಂಕಾರದ ಬಳಿಕ ಮಹಾಮಂಗಳಾರತಿ ನಡೆಯಲಿದ್ದು  ಮಹಾಮಂಗಳಾರತಿಗಾಗಿ ಕಾದುನಿಂತಿರೋ ಭಕ್ತದಿಗಳು ಹಬ್ಬದ ಪ್ರಯುಕ್ತ ಸಂಜೆಯವರೆಗೂ ದೇವರ ದರ್ಶನಕ್ಕೆ ಅವಕಾಶ‌ ಅಲ್ಲದೇ ಬರುವ ಭಕ್ತದಿಗಳಿಗೆ ಪ್ರಸಾದ ವಿತರಣೆ ಮಾಡಲಾಗುತ್ತೆ.

Read More