Author: AIN Author

ಪ್ರಿಯಾಂಕಾ ಹುಟ್ಟುಹಬ್ಬಕ್ಕೆ ‘ಕ್ಯಾಪ್ಚಾರ್’ ತಂಡದಿಂದ ಬಿಗ್ ಸರ್ಪ್ರೈಸ್: ಡ್ರೋಣ್ ಮೂಲಕ ರಿವೀಲ್ ಆಯ್ತು ‘ಕ್ಯಾಪ್ಚರ್’ ಪೋಸ್ಟರ್ ವಿಭಿನ್ನವಾಗಿ ಪ್ರಿಯಾಂಕಾ ಹುಟ್ಟುಹಬ್ಬ ಸೆಲೆಬ್ರೇಟ್ ಮಾಡಿದ ‘ಕ್ಯಾಪ್ಚರ್’ ತಂಡ: ಅಭಿಮಾನಿಗಳ ಜೊತೆ ರಿಯಲ್ ಸ್ಟಾರ್ ಪತ್ನಿಯ ಬರ್ತಡೇ ಸೆಲೆಬ್ರೇಶನ್ ಸ್ಯಾಂಡಲ್ ವುಡ್ ನಟಿ ಪ್ರಿಯಾಂಕಾ ಉಪೇಂದ್ರ ಅವರಿಗೆ ಇಂದು (ನವೆಂಬರ್ 12) ಹುಟ್ಟುಹಬ್ಬದ ಸಂಭ್ರಮ. ರಿಯಲ್ ಸ್ಟಾರ್ ಪತ್ನಿಗೆ ಅಭಿಮಾನಿಗಳಿಂದ ಶುಭಾಶಯಗಳು ಮಹಾಪೂರವೇ ಹರಿದು ಬರುತ್ತಿದ್ದು ಸಾಮಾಜಿಕ ಜಾಣತನದಲ್ಲಿ ಪೋಸ್ಟರ್ ಶೇರ್ ಮಾಡಿ ಸಂಭ್ರಮಿಸುತಿದ್ದಾರೆ. ಪ್ರಿಯಾಂಕಾ ಅವರು ಇಂದು ಅಭಿಮಾನಿಗಳು ಹಾಗೂ ಕುಟುಂಬದ ಜೊತೆ ಹುಟ್ಟುಹಬ್ಬವನ್ನು ಆಚರಿಸಿಕೊಂಡರು. ಕ್ಯಾಪ್ಚರ್ ಸಿನಿಮಾತಂಡ ಪ್ರಿಯಾಂಕಾ ಅವರ ಹುಟ್ಟುಹಬ್ಬವನ್ನು ವಿಶೇಷವಾಗಿ ಸಂಭ್ರಮಿಸಿದರು. ವಿಭಿನ್ನವಾದ ಕೇಕ್ ತಯಾರಿಸಿದ್ದ ಕ್ಯಾಪ್ಚರ್ ತಂಡ ಪ್ರಿಯಾಂಕ ಅವರಿಗೆ ಬಿಗ್ ಸರ್ಪ್ರೈಸ್ ನೀಡಿದರು‌. ಇದೇ ಸಮಯದಲ್ಲಿ ಕ್ಯಾಪ್ಚರ್ ತಂಡದಿಂದ ಪ್ರಿಯಾಂಕ ಅವರ ಮತ್ತೊಂದು ಪೋಸ್ಟರ್ ಅನ್ನು ರಿಲೀಸ್ ಮಾಡಲಾಯಿತು. ಡ್ರೋನ್ ಮೂಲಕ ಚಿತ್ರದ 2ನೇ ಪೋಸ್ಟರ್ ರಿಲೀಸ್ ಮಾಡುವ ಮೂಲಕ ಹುಟ್ಟುಹಬ್ಬವನ್ನು ಮತ್ತಷ್ಟು ವಿಭಿನ್ನವಾಗಿಸಿದರು. ಅದ್ದೂರಿಯಾಗಿ…

Read More

ತುಮಕೂರು: ಸಿದ್ಧಗಂಗಾ ಮಠಕ್ಕೆ ರಾಜ್ಯ ಬಿಜೆಪಿ ಘಟಕದ ನೂತನ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಭೇಟಿ ನೀಡಿ ಶಿವಕುಮಾರ ಶ್ರೀಗಳ ಗದ್ದುಗೆ ದರ್ಶನ ಪಡೆದರು. ವಿಜಯೇಂದ್ರ ಅವರಿಗೆ ಯಲಹಂಕ ಶಾಸಕ ವಿಶ್ವನಾಥ್, ಸುರೇಶ್ ಗೌಡ, ಜ್ಯೋತಿ ಗಣೇಶ್, ಪ್ರೀತಂಗೌಡ ಸೇರಿ ಹಲವರು ಸಾಥ್ ನೀಡಿದರು. ಈ ವೇಳೆ ಅಭಿಮಾನಿಗಳು ಮುಂದಿನ ಮುಖ್ಯಮಂತ್ರಿ ಬಿ.ವೈ.ವಿಜಯೇಂದ್ರ ಎಂದು ಘೋಷಣೆ ಕೂಗಿದರು. https://ainlivenews.com/did-sending-a-message-to-a-girl-lead-to-murder-what-does-igp-ravikante-gowda-say/

Read More

ತುಮಕೂರು: ನಾನು ವಿಜಯೇಂದ್ರ ಎನ್ನುವುದಕ್ಕಿಂತ ಯುವಕರಿಗೆ ಅವಕಾಶ ಕೊಡಬೇಕು ಎಂದು ನನಗೆ ಪಕ್ಷದ ರಾಜ್ಯಾಧ್ಯಕ್ಷ ಸ್ಥಾನ ಕೊಟ್ಟಿದ್ದಾರೆ ಎಂದು ಬಿಜೆಪಿಯ ನೂತನ ಸಾರಥಿ ಬಿ.ವೈ ವಿಜಯೇಂದ್ರ (B.Y Vijayendra) ಹೇಳಿದ್ದಾರೆ. ತುಮಕೂರಿನ (Tumakuru) ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ಬಳಿಕ ಬಿಜೆಪಿ (BJP) ಕಚೇರಿಯಲ್ಲಿ ಅವರು ಮಾತನಾಡಿದ್ದಾರೆ. ಈ ವೇಳೆ ರಾಜ್ಯಾಧ್ಯಕ್ಷ ಸ್ಥಾನ ಯಾರಿಗೆ ಕೊಡಬೇಕು ಎನ್ನುವ ಕುರಿತಾಗಿ ಭಾರೀ ಚರ್ಚೆಗಳು ನಡೆದಿವೆ. ಅಂತಿಮವಾಗಿ ನನಗೆ ಜವಾಬ್ದಾರಿ ಕೊಟ್ಟಿದ್ದಾರೆ. ನಮ್ಮ ಪಕ್ಷ ರಾಷ್ಟ್ರೀಯ ನಾಯಕರಿಗೆ ಕೊಡುವ ಗೌರವವನ್ನು ಬೂತ್ ಕಾರ್ಯಕರ್ತನಿಗೂ ಕೊಡುತ್ತದೆ.  ಇದು ಬಿಜೆಪಿಯ ಸಂಸ್ಕೃತಿಯಾಗಿದೆ ಎಂದಿದ್ದಾರೆ. ಇಡೀ ಜಗತ್ತೇ ನರೇಂದ್ರ ಮೋದಿ ಅವರನ್ನು ಮೆಚ್ಚಿದೆ. https://ainlivenews.com/did-sending-a-message-to-a-girl-lead-to-murder-what-does-igp-ravikante-gowda-say/ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದಿಂದ 25ಕ್ಕೂ ಹೆಚ್ಚು ಸ್ಥಾನ ಗೆಲ್ಲಬೇಕು. ಎಲ್ಲಾ ಹಿರಿಯರ ವಿಶ್ವಾಸದೊಂದಿಗೆ ಪಕ್ಷ ಮುನ್ನಡೆಸಬೇಕು. ರಾಜ್ಯದ ಮೂಲೆ ಮೂಲೆಗೂ ಸಂಚರಿಸಿ ಪಕ್ಷ ಸಂಘಟನೆ ಮಾಡಿ, ಈ ಭ್ರಷ್ಟ ಕಾಂಗ್ರೆಸ್ ಸರ್ಕಾರದ ವಿರುದ್ಧ ಹೋರಾಡ ಬೇಕಿದೆ. ಅತ್ಯಲ್ಪ ಕಾಲದಲ್ಲೇ ಜನಪ್ರಿಯತೆ ಕಳೆದುಕೊಂಡ ಸರ್ಕಾರ ಇದಾಗಿದೆ…

Read More

ಬೆಂಗಳೂರು:  ಇಲ್ಲಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭಾರತ v/s ನೆದರ್ಲೆಂಡ್​ ನಡುವೆ ವಿಶ್ವಕಪ್ ಪಂದ್ಯ ನಡೆಯುತ್ತಿದ್ದು ಟಾಸ್​​ ಗೆದ್ದು ಭಾರತ ಬ್ಯಾಟಿಂಗ್ ಆಯ್ದುಕೊಂಡಿದೆ. ಅಂಕಪಟ್ಟಿಯಲ್ಲಿ ಭಾರತ ಈಗಾಗಲೇ ಅಗ್ರಸ್ಥಾನ ಕಾಯ್ದುಕೊಂಡಿದೆ. ಇಂತಹ ಪರಿಸ್ಥಿತಿಯಲ್ಲಿ ನೆದರ್ಲೆಂಡ್ ವಿರುದ್ಧದ ಪಂದ್ಯದ ಸೋಲು-ಗೆಲುವು ಭಾರತದ ಪಾಯಿಂಟ್ಸ್ ಪಟ್ಟಿಯಲ್ಲಿ ಯಾವುದೇ ಪರಿಣಾಮ ಬೀರುವುದಿಲ್ಲ. ಟೀಂ ಇಂಡಿಯಾ ಆಡುತ್ತಿರುವ ರೀತಿಯನ್ನು ನೋಡಿದರೆ, ನೆದರ್ಲೆಂಡ್ ತಂಡವನ್ನು ಸೋಲಿಸುವ ಮೂಲಕ ತನ್ನ ಒಂಬತ್ತನೇ ಸತತ ಗೆಲುವು ದಾಖಲಿಸುವ ಮೂಲಕ ಅಭಿಮಾನಿಗಳಿಗೆ ದೀಪಾವಳಿಯ ಉಡುಗೊರೆ ನೀಡಲು ಪ್ರಯತ್ನಿಸಲಿದೆ. ವಾಸ್ತವವಾಗಿ ಭಾರತ ಮತ್ತು ನೆದರ್ಲೆಂಡ್ಸ್ ತಂಡಗಳು 12 ವರ್ಷಗಳ ನಂತರ ಏಕದಿನ ವಿಶ್ವಕಪ್​ನಲ್ಲಿ ಮುಖಾಮುಖಿಯಾಗುತ್ತಿವೆ. 2011ರಲ್ಲಿ ನಡೆದ ಏಕದಿನ ವಿಶ್ವಕಪ್‌ನಲ್ಲಿ ಭಾರತ ಮತ್ತು ನೆದರ್ಲೆಂಡ್ಸ್ ಕೊನೆಯ ಬಾರಿ ಮುಖಾಮುಖಿಯಾಗಿದ್ದವು.

Read More

ದಾವಣಗೆರೆ: ಖೇಣಿಗೆ ಇಟ್ಟಿದ್ದ ಅಡಿಕೆಯನ್ನ ಕಳ್ಳತನ ಮಾಡಿಕೊಂಡು ಹೋಗಿದ್ದ ಮೂವರು ಅಡಿಕೆ ಕಳ್ಳರನ್ನ ದಾವಣಗೆರೆ ಜಿಲ್ಲೆಯ ಚನ್ನಗಿರಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ಸುಮಾರು 12.50 ಲಕ್ಷ ಮೌಲ್ಯದ ಅಡಿಕೆ ಮತ್ತು ಒಂದು ಕಾರ್ ನ್ನ ಜಪ್ತಿ ಮಾಡಿದ್ದಾರೆ. ಕರೆಕಟ್ಟೆ ಗ್ರಾಮದ ಛತ್ರಪತಿ, ಹೊಳಲ್ಕೆರೆ ತಾಲೂಕಿನ ಕಾಳಘಟ್ಟ ಗ್ರಾಮದ ಧನಂಜಯ ನಾಯ್ಕ್ ಮತ್ತು ಗಿರೀಶ್ ಎಂಬುವರು ಬಂಧಿತರು. ಈ ಮೂವರು ವಡ್ನಾಳ ಗ್ರಾಮದ ಈಶ್ವರಪ್ಪ ಎಂಬುವರ ಅಡಿಕೆಯನ್ನ ಖೇಣಿಗೆ ಹಾಕಿದ್ದ ಸಂದರ್ಭದಲ್ಲಿ ಮೂವರು 6 ಕ್ವಿಂಟಲ್ ಅಡಿಕೆಯನ್ನ ಕಾರಿನಲ್ಲಿ ಹಾಕಿಕೊಂಡು ಪರಾರಿಯಾಗಿದ್ದರು. ಬಳಿಕ ಈಶ್ವರಪ್ಪ ಈ ಬಗ್ಗೆ ಚನ್ನಗಿರಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಚನ್ನಗಿರಿ ಡಿವೈಎಸ್ಪಿ ಪ್ರಶಾಂತ್ ಮುನ್ನೊಳ್ಳಿ ನೇತೃತ್ವದ ತಂಡ ಮೂವರು ಅಡಿಕೆ ಕಳ್ಳರನ್ನ ಬಂಧಿಸಿದೆ. ಮತ್ತೆ ವಿಚಾರಣೆ ನಡೆಸಿದಾಗ ಮೂವರ ವಿರುದ್ಧ ಚನ್ನಗಿರಿ ಪೊಲೀಸ್ ಠಾಣೆಯಲ್ಲಿ 4 ಕೇಸ್ ಹಾಗೂ ಹೊಳೆಹಬ್ಬೂರು ಠಾಣೆಯಲ್ಲಿ 1 ಪ್ರಕರಣ ಇರುವುದು ಗೊತ್ತಾಗಿದೆ. ಒಟ್ಡು ಅಡಿಕೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರಿಂದ 12.50…

Read More

ಗದಗ: ದೀಪಾವಳಿಗೆ ಹಿನ್ನೆಲೆಯಲ್ಲಿ ನಗರದ ಮಾರುಕಟ್ಟೆ ಖರೀದಿ ಬಲು ಜೋರಾಗಿದೆ. ಹಬ್ಬಕ್ಕೆ ಬೇಕಾದ ವಸ್ತುಗಳನ್ನ‌ಕೊಳ್ಳಲು ಜನರು ಮುಗಿಬಿದ್ದಾರೆ. ಇನ್ನು ಹಬ್ಬದ ಸಲುವಾಗಿ ಹಣ್ಣು, ಹೂವುಗಳ ಬೆಲೆ ಏರಿಕೆಯಾಗಿದೆ. ಮಾರು ಹೂವಿನ ಬೆಲೆ 50 ರೂ.  ಆಗಿದೆ. ಇಂದು ನರಕ ಚತುರ್ದಶಿ, ಧನಲಕ್ಷ್ಮಿ ಪೂಜೆ , ಕೇದರೇಶ್ವರ ವೃತಕ್ಕೆ ಸಿದ್ಧತೆ ಹಿನ್ನೆಲೆಯಲ್ಲಿ ಗ್ರಾಹಕರು ಹೂ, ಹಣ್ಣುಗಳ ಖರೀದಿಗೆ ಮುಗಿಬಿದ್ದಿದ್ದಾರೆ.

Read More

ಬೆಂಗಳೂರು: ಬೆಂಗಳೂರು : ದೀಪಾವಳಿ ಹಬ್ಬದ ಸಂಭ್ರಮದ ನಡುವೆ ಪಟಾಕಿ ಅವಘಡಗಳು ಸಂಭವಿಸಿದ್ದಲ್ಲಿ ಕಣ್ಣಿಗೆ, ಚರ್ಮಕ್ಕೆ ಹಾನಿಯಾಗುವುದನ್ನು ತಡೆಗಟ್ಟಲು ಆಸ್ಪತ್ರೆಗಳು ಅಗತ್ಯ ಸಿದ್ಧತೆ ಮಾಡಿಕೊಂಡಿವೆ. https://ainlivenews.com/people-should-not-be-fooled-by-trusting-guarantee-schemes-in-lok-sabha-elections-hdk/ ಹಾಗೆ  ಚಿಣ್ಣರ ಬಾಳಲ್ಲಿ ಕತ್ತಲು ತಂದ ಬೆಳಕಿನ ಹಬ್ಬ ದೀಪಾವಳಿಯಾಗಿದ್ದು ಎಷ್ಟೇ ಜಾಗೃತಿ ಮೂಡಿಸಿದರೂ ದೀಪಾವಳಿ ವೇಳೆ ನಿಲ್ಲದ ಅನಾಹುತ ಉಂಟಾಗಿದೆ. ನಗರದಲ್ಲಿ ಪಟಾಕಿ ಸಿಡಿದು ಬಾಲಕರ ಕಣ್ಣಿಗೆ ಗಂಭೀರ ಗಾಯ ಉಂಟಾಗಿದೆ. ಹಬ್ಬ ದ ವೇಳೆ ನಿರ್ಲಕ್ಷ್ಯ ವಹಿದಕ್ಕೆ ಚಿಕ್ಕ ಬಾಲಕರ ಕಣ್ಣಿಗೆ ಗಾಯ ಬೆಂಕಿಯ ಕಿಡಿಯಿಂದ ರೆಪ್ಪೆ,ಸುತ್ತಲು ಚರ್ಮ ತಲೆ ಕೂದಲು ಸುಟ್ಟಿದೆ ಬೆಂಗಳೂರಿನ ಮಿಂಟೋ ಕಣ್ಣಿನ ಆಸ್ಪತ್ರೆ ಯಲ್ಲಿ ಸದ್ಯ ಒಂದು ಪ್ರಕರಣಗಳು ದಾಖಲು ಬಾಲಕರ ಕಣ್ಣಿಗೆ ಗಂಭೀರ ಗಾಯವಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ.

Read More

ಚಿಕ್ಕಮಗಳೂರು: ಹಿಂದೆ ಅತಿವೃಷ್ಟಿ ಉಂಟಾದ ಸಂದರ್ಭದಲ್ಲಿ ಅಂದಿನ ಮುಖ್ಯಮಂತ್ರಿ ಯಡಿಯೂರಪ್ಪನವರು ಡಬ್ಬ ಹಿಡಿದು ರಸ್ತೆಗಿಳಿದು ಸಾರ್ವಜನಿಕರಿಂದ ಹಣ ಸಂಗ್ರಹಿಸಿದ್ದರು. ಅಂತಹಾ ಕಾಳಜಿ, ಬದ್ಧತೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ತೋರುತ್ತಿಲ್ಲ. ಭಾಷಣಮಾಡುವುದು, ಕುಣಿಯುವುದರಲ್ಲಿಯೇ ಕಾಲವನ್ನ ದೂಡುತ್ತಿದ್ದಾರೆಂದು ಮಾಜಿ ಸಚಿವ ಆರಗ ಜ್ಞಾನೇಂದ್ರ ಅವರು ಸಿದ್ದರಾಮಯ್ಯ ಹಾಗೂ ಸರ್ಕಾರದ ವಿರುದ್ಧ ವ್ಯಂಗ್ಯವಾಡಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಎದುರಾಗಿರುವ ಬರ ಪರಿಸ್ಥಿತಿಯನ್ನ ಸಮರ್ಪಕವಾಗಿ ಎದುರಿಸುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದರು. https://ainlivenews.com/did-sending-a-message-to-a-girl-lead-to-murder-what-does-igp-ravikante-gowda-say/  ರಾಜ್ಯದಲ್ಲಿ 30% ಕ್ಕಿಂತ ಕಡಿಮೆ ಮಳೆಯಾಗಿರುವ ತಾಲೂಕುಗಳನ್ನು ಬರಪೀಡಿತ ತಾಲೂಕುಗಳೆಂದು ಈಗಾಗಲೇ ಘೋಷಿಸಲಾಗಿದೆ. ಬರ ರಾಜ್ಯವನ್ನು ವ್ಯಾಪಕವಾಗಿ ಕಾಡುತ್ತಿದೆ. ಬೆಳೆ ನಷ್ಟವಾಗಿದೆ. ಮೇವಿನ ಅಭಾವ ಉಂಟಾಗಿದೆ. ಕುಡಿಯುವ ನೀರಿನ ಸಮಸ್ಯೆ ಶುರುವಾಗಿದೆ. ಇದಕ್ಕೂ ಸರ್ಕಾರಕ್ಕೂ ಸಂಬಂಧಿವಿಲ್ಲವೆಂಬಂತೆ ಮುಖ್ಯಮಂತ್ರಿಗಳು ವರ್ತಿಸುತ್ತಿದ್ದಾರೆಂದು ಆರೋಪಿಸಿದ್ದಾರೆ. ಬರದ ನೈಜ ಸ್ಥಿತಿಯನ್ನ ಅರಿಯಲು ಬಿಜೆಪಿ (BJP) ರಾಜ್ಯ ಪ್ರವಾಸಕೈಗೊಂಡಿದೆ. ಬರದ ವರದಿಯನ್ನ ಕೇಂದ್ರ ಸರ್ಕಾರಕ್ಕೆ ಕಳುಹಿಸಿ ಕೊಡಲಾಗುವುದು ಎಂದರು. 

Read More

ಬೆಂಗಳೂರು:   ಕುಡಿದ ಮತ್ತಿನಲ್ಲಿ ನಡೆದ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ನಗರದ ಕೆಂಗೇರಿಯಲ್ಲಿ ನಡೆದಿದೆ. ಗೆಳೆಯನಿಗೆ ಚಾಕು ಇರಿದು ನಾಟಕವಾಡಿದ್ದ ವ್ಯಕ್ತಿ ಬಂಧನವಾಗಿದ್ದು ಮಾದೇಶ್ ಬಂಧಿತ ಆರೋಪಿಯಾಗಿದ್ದಾನೆ. https://ainlivenews.com/this-week-drone-applauds-pratap-and-shouts-bhesh-to-the-game/ ಸ್ನೇಹಿತ ರಾಜಕುಮಾರ್ ಗೆ ಚಾಕು ಇರಿದಿದ್ದ ಆರೋಪಿಯಾಗಿದ್ದು ಇದೇ ತಿಂಗಳ 5ರಂದು ಕೆಂಗೇರಿಯಲ್ಲಿ ನಡೆದಿದ್ದ ಕೊಲೆಯಾಗಿದ್ದು ವೃತ್ತಿಯಲ್ಲಿ ಇಬ್ಬರು ಕ್ಯಾಬ್ ಚಾಲಕರಾಗಿದ್ದರು. ಎಣ್ಣೆ ಹೊಡೆಯಲೆಂದು ಮೀಟ್ ಆಗಿದ್ದ ಇಬ್ಬರು ಅಂಗಡಿಯಲ್ಲಿ ಎಣ್ಣೆ ಖರೀದಿಸಿ ನಿರ್ಜನ ಪ್ರದೇಶಕ್ಕೆ ತೆರಳಿ ಮದ್ಯ ಸೇವನೆ.. ಈ ವೇಳೆ ಶುರುವಾದ ಜಗಳದಲ್ಲಿ ಮಾತಿಗೆ ಮಾತು ಬೆಳೆದಿತ್ತು ಮಾದೇಶನ ಕುಟುಂಬ ಹಾಗೂ ಮಕ್ಕಳ ಬಗ್ಗೆ ನಿಂದಿಸಿದ್ದ ರಾಜಕುಮಾರ್.. ಈ ವೇಳೆ ತನ್ನ ಕಾರ್ ನಲ್ಲಿದ್ದ ಚಾಕುವಿನಿಂದ ಎದೆ ಭಾಗಕ್ಕೆ ಇರಿತ.. ಚಾಕುವಿನಿಂದ ಚುಚ್ಚಿ ತಾನೇ ಆಸ್ಪತ್ರೆಗೆ ಕರೆದೊಯ್ದ ಮಾದೇಶ್ ಈ ವೇಳೆ ಸಂಬಂಧಿಕರಿಗೆ ಯಾರೋ ಅಪರಿಚಿತರು ಕೃತ್ಯ ಎಸಗಿದ್ದಾಗಿ ಹೇಳಿದ್ದ ಆಸ್ಪತ್ರೆ ಬಳಿ ಆತನ ಸಾವಿನ ಸುದ್ದಿ ಏಳುತಿದ್ದಂತೆ ಪರಾರಿಯಾಗಿದ್ದ ಮಾದೇಶ.. ಕೊಲೆ ಸಂಬಂಧ ಪ್ರಕರಣ ದಾಖಲಿಸಿಕೊಂಡ ಕೆಂಗೇರಿ…

Read More

ದೊಡ್ಮನೆಯಲ್ಲಿ ಮನೆಯಲ್ಲಿ (Bigg Boss Kannada 10) ಈಗಾಗಲೇ 5 ವಾರಗಳು ಕಳೆದಿವೆ. ಇಷ್ಟು ವಾರಗಳಲ್ಲಿ ಒಂದು ವಾರ ಮಾತ್ರ ಕಿಚ್ಚ ಸುದೀಪ್ ಅವರು ಬಳೆಗೆ ಚಪ್ಪಾಳೆ ನೀಡಿದ್ದರು. ಆದರೆ ಈಗ ವಾರ ಕಿಚ್ಚ ಸುದೀಪ್ ಅವರು ಡ್ರೋನ್ ಪ್ರತಾಪ್‌ಗೆ ಚಪ್ಪಾಳೆ ನೀಡಿದ್ದಾರೆ. ಪ್ರತಾಪ್ ಆಟಕ್ಕೆ ಭೇಷ್ ಎಂದಿದ್ದಾರೆ. ಬಿಗ್ ಮನೆಗೆ ಕಾಲಿಟ್ಟ ಮೊದಲ ದಿನದಿಂದಲೂ ಪ್ರತಾಪ್, ಎಲ್ಲರ ಕೆಂಗಣ್ಣಿಗೆ ಗುರಿಯಾಗಿದ್ರು. ಟಾರ್ಗೆಟ್ ಆಗುತ್ತಲೇ ಬಂದಿದ್ದರು. ಅಂದು ಟ್ರೋಲ್ ಆಗಿದ್ದ, ಜೋಕರ್ ಆಗಿದ್ದ ಪ್ರತಾಪ್ ಇಂದು ಪ್ರೇಕ್ಷಕರ ಮೆಚ್ಚುಗೆ ಪಡೆದಿದ್ದಾರೆ, ಈಗ ಕಿಚ್ಚನ ಚಪ್ಪಾಳೆ ಕೂಡ ಪಡೆದಿದ್ದಾರೆ. ಪ್ರತಾಪ್ ಅವರು ಟೀಂನಲ್ಲಿ ಕ್ಯಾಪ್ಟನ್ ಆಗಿ ತಂಡವನ್ನು ಮುಂದಾಳತ್ವ ವಹಿಸಿದ್ದರ ಬಗ್ಗೆ ಸುದೀಪ್ (Sudeep) ಅವರು ಮೆಚ್ಚುಗೆ ಸೂಚಿಸಿದ್ದಾರೆ. ಈ ಮೂಲಕ ಈ ಶೋನಲ್ಲಿ ಮೊದಲ ಚಪ್ಪಾಳೆ ಸ್ಪರ್ಧಿಯಾಗಿ ಡ್ರೋನ್ ಪ್ರತಾಪ್ (Drone Prathap) ಅವರಿಗೆ ಸಲ್ಲಿದೆ. ಹೊರಗಡೆ ನನ್ನ ಕಳ್ಳ, ಸುಳ್ಳ ಅಂದವರು, ಹೀಯಾಳಿಸಿದವರು, ಈ ಮನೆಯಲ್ಲಿ ಆರಂಭದಲ್ಲಿ ಆದಂತಹ ಘಟನೆಗಳನ್ನು…

Read More