Author: AIN Author

ಬೆಂಗಳೂರು: ಪಂಚ ರಾಜ್ಯಗಳ ಚುನಾವಣೆಯ ಅಂಶಗಳಲ್ಲಿ ಗ್ಯಾರಂಟಿ ಯೋಜನೆಗಳು ರಾಜ್ಯದ ಜನರ ಬದುಕಿನ ಭಾಗ್ಯ ತೆರೆದಿದೆ ಎಂಬ ಭಜನೆ ಕೇಳುತ್ತಿದ್ದೇವೆ. ಇದಕ್ಕೆ ಜನ ಮರುಳಾಗಬಾರದು ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ. https://ainlivenews.com/bjp-never-supports-family-politics-k-s-eshwarappa/ ಬೆಂಗಳೂರಿನಲ್ಲಿ ಅವರು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕದ ಗ್ಯಾರಂಟಿಗಳನ್ನು ಮಾಡೆಲ್ ಆಗಿ ಇಟ್ಟುಕೊಂಡು ಪಂಚರಾಜ್ಯ ಚುನಾವಣೆಯಲ್ಲಿ ಜಾರಿಗೆ ತರಲು ಮುಂದಾಗಿರುವುದನ್ನು ಗಮನಿಸಿದ್ದಾನೆ. ಆ ಯೋಜನೆಗಳು ಇಲ್ಲಿ ಎಷ್ಟರ ಮಟ್ಟಿಗೆ ಯಶಸ್ವಿಯಾಗಿ ಜಾರಿಯಾಗಿದೆ ಎಂಬುದನ್ನು ಜನರ ಗಮನಕ್ಕೆ ತರುತ್ತೇನೆ. 5 ರಾಜ್ಯಗಳ ಮತದಾರರು ಇದಕ್ಕೆ ಮರುಳಾಗಬಾರದು ಎಂದು ಅವರು ಹೇಳಿದ್ದಾರೆ ರಾಜ್ಯದಲ್ಲಿ ಒಬ್ಬರು ಟೆಂಪ್ರವರಿ ಮುಖ್ಯಮಂತ್ರಿ ಹಾಗೂ ಇನ್ಬೊಬ್ಬರು ಡುಪ್ಲಿಕೇಟ್ ಮುಖ್ಯಮಂತ್ರಿ ಇದ್ದಾರೆ. ಅವರು ತೆಲಂಗಾಣದಲ್ಲಿ ಗ್ಯಾರಂಟಿಗಳ ಬಗ್ಗೆ ಮಾತನಾಡಲು ಹೋಗಿ ತಮ್ಮ ಬೆನ್ನು ತಾವೇ ತಟ್ಟಿಕೊಂಡು ಮುಖಭಂಗಕ್ಕೆ ಒಳಗಾಗಿದ್ದಾರೆ. ಡುಪ್ಲಿಕೇಟ್ ಸಿಎಂ ತೆಲಂಗಾಣಲದಲ್ಲಿ ಕಾಂಗ್ರೆಸ್ (Congress) ಅಧಿಕಾರಕ್ಕೆ ಬಂದರೆ 2 ಲಕ್ಷ ಉದ್ಯೋಗ ಸೃಷ್ಟಿ ಎಂದಿದ್ದಾರೆ. 2013 ರಲ್ಲಿ ಸಿದ್ದರಾಮಯ್ಯ 5 ವರ್ಷ ಮುಖ್ಯಮಂತ್ರಿ ಆಗಿದ್ದಾಗ…

Read More

“ಕೆ.ಜಿ.ಎಫ್”, ” ಕಾಂತಾರ ” ದಂತಹ ವಿಶ್ವಪ್ರಸಿದ್ಧ ಚಿತ್ರಗಳನ್ನು ನಿರ್ಮಿಸಿರುವ ಹೊಂಬಾಳೆ ಫಿಲಂಸ್ ನಿರ್ಮಾಣದ ಮತ್ತೊಂದು ಬಹು ನಿರೀಕ್ಷಿತ ಚಿತ್ರ “ಸಲಾರ್”. ವಿಜಯ ಕಿರಗಂದೂರ್ ಅವರ ನಿರ್ಮಾಣದ, ಪ್ರಶಾಂತ್ ನೀಲ್ ನಿರ್ದೇಶನದಲ್ಲಿ ಖ್ಯಾತ ನಟ ಪ್ರಭಾಸ್ ನಾಯಕರಾಗಿ ನಟಿಸಿರುವ ” ಸಲಾರ್” ಚಿತ್ರ ಡಿಸೆಂಬರ್ 22 ರಂದು ಭಾರತದಾದ್ಯಂತ ಅದ್ದೂರಿಯಾಗಿ ಬಿಡುಗಡೆಯಾಗುತ್ತಿದೆ. ಕರ್ನಾಟಕದಲ್ಲಿ ಈ ಸಿನಿಮಾ ವಿತರಣೆಯನ್ನು ಹೊಂಬಾಳೆ ಫಿಲಂಸ್ ಸಂಸ್ಥೆ ಮಾಡುತ್ತಿದೆ. “ಕರುನಾಡಿನಾದ್ಯಂತ ವಿತರಣೆಯ ಹೊಣೆ ನಮ್ಮದು. ಅತ್ಯಮೋಘ ಅನುಭನ ನೀಡುವ ಭರವಸೆಯೊಂದಿಗೆ ನಿಮ್ಮ ಮುಂದೆ” ಎಂದು ಹೊಂಬಾಳೆ ಫಿಲಂಸ್ ತಿಳಿಸಿದೆ. ಹಲವು ವಿಶೇಷಗಳನ್ನೊಳಗೊಂಡಿರುವ “ಸಲಾರ್” ಚಿತ್ರದ ಬಿಡುಗಡೆಗೆ ಪ್ರೇಕ್ಷಕರು ಕಾತುರದಿಂದ ಕಾಯುತ್ತಿದ್ದಾರೆ. ಹೊಂಬಾಳೆ ಫಿಲಂಸ್ ಈವರೆಗೂ ನಿರ್ಮಿಸಿರುವ ಎಲ್ಲಾ ಚಿತ್ರಗಳು ಹೊಂಬಾಳೆ ಫಿಲಂಸ್ ಸಂಸ್ಥೆ ಕರ್ನಾಟಕದಲ್ಲಿ ವಿತರಣೆ ಮಾಡಿದೆ . ಬಹು ನಿರೀಕ್ಷಿತ “ಸಲಾರ್” ಚಿತ್ರವನ್ನು ಕರ್ನಾಟಕದಲ್ಲಿ ಹೊಂಬಾಳೆ ಫಿಲಂಸ್ ಸಂಸ್ಥೆ distribution ಮಾಡಲಿದೆ

Read More

ಬೆಂಗಳೂರು: ಕಾಂಗ್ರೆಸ್ ಹೈಕಮಾಂಡ್ ಸಿಎಂ, ಡಿಸಿಎಂ ಹಾಗೂ ಮಂತ್ರಿಗಳಿಗೆ ಟಾರ್ಗೆಟ್ ಕೊಟ್ಟಿದ್ದಾರೆ. ಯಾರು ಹೆಚ್ಚಿಗೆ ಹಣ ಕೊಡುತ್ತಾರೆ ಅವರು ಮಂತ್ರಿ ಸ್ಥಾನದಲ್ಲಿ ಮುಂದುವರೆಯುತ್ತಾರೆ. ಯಾರು ಕೊಡಲ್ಲಾ ಅವರು ಮಂತ್ರಿಗಳಾಗುವುದಿಲ್ಲ. ಹೆಚ್ಚು ಹಣ ಕೊಟ್ಟು ಅವರು ಅಧಿಕಾರದಲ್ಲಿ ಇರುತ್ತಾರೆ. ಯಾವುದೆ ಪವರ್ ಶೇರಿಂಗ್ ಇಲ್ಲ. ಯಾರು ಹಣ ಕೊಡುತ್ತಾರೆ ಅವರು ಅಧಿಕಾರದಲ್ಲಿ ಇರುತ್ತಾರೆ. ಈಗಾಗಲೇ ಹೈಕಮಾಂಡ್ ಇದನ್ನೇ ಹೇಳಿದೆ ಎಂದು ಹೆಚ್​ಡಿ ಕುಮಾರಸ್ವಾಮಿ ಹೊಸ ಬಾಂಬ್​ ಸಿಡಿಸಿದರು. https://ainlivenews.com/muhurta-fix-for-bjps-new-president-vijayendras-inauguration/ ಬೆಂಗಳೂರಿನಲ್ಲಿ ಅವರು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕದ ಗ್ಯಾರಂಟಿಗಳನ್ನು ಮಾಡೆಲ್ ಆಗಿ ಇಟ್ಟುಕೊಂಡು ಪಂಚರಾಜ್ಯ ಚುನಾವಣೆಯಲ್ಲಿ ಜಾರಿಗೆ ತರಲು ಮುಂದಾಗಿರುವುದನ್ನು ಗಮನಿಸಿದ್ದಾನೆ. ಆ ಯೋಜನೆಗಳು ಇಲ್ಲಿ ಎಷ್ಟರ ಮಟ್ಟಿಗೆ ಯಶಸ್ವಿಯಾಗಿ ಜಾರಿಯಾಗಿದೆ ಎಂಬುದನ್ನು ಜನರ ಗಮನಕ್ಕೆ ತರುತ್ತೇನೆ. 5 ರಾಜ್ಯಗಳ ಮತದಾರರು ಇದಕ್ಕೆ ಮರುಳಾಗಬಾರದು ಎಂದು ಅವರು ಹೇಳಿದ್ದಾರೆ.

Read More

ಬೆಂಗಳೂರು:  ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿ. ವೈ. ವಿಜಯೇಂದ್ರ‌  ನೂತನ ಆಯ್ಕೆ ಬೆನ್ನೆಲ್ಲೆ ಬಿಜೆಪಿ ಕಚೇರಿಗೆ ಸುಣ್ಣ ಬಣ್ಣ ಬಳಿಯುವ ಕಾರ್ಯ ನಡೆಯುತ್ತಿದೆ. ಮಲ್ಲೇಶ್ವರಂನ ಜಗನ್ನಾಥ ಭವನಕ್ಕೆ ನಡೆಯುತ್ತಿರುವ ಸುಣ್ಣ ಬಣ್ಣದ ಕಾರ್ಯ ನೂತನ ಅಧ್ಯಕ್ಷರು ಕಚೇರಿಗೆ ಆಗಮಿಸುವ ಮುನ್ನ  ಸುಣ್ಣ ಬಣ್ಣದೊಂದಿಗೆ ಕಚೇರಿ ಸಿಂಗಾರ ಗೊಳಿಸುವ ಕಾರ್ಯ ನಡೆಯುತ್ತಿದೆ. ನವೆಂಬರ್ 15ರಂದು ಪಕ್ಷದ ಕಚೇರಿಗೆ ಭೇಟಿ ನೀಡ್ತಿರುವ ನೂತನ ರಾಜ್ಯಾಧ್ಯಕ್ಷ ವಿಜಯೇಂದ್ರ‌ ಅವರು ಅಂದೇ ರಾಜ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕರ ಮಾಡಲಿದ್ದಾರೆ.

Read More

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಪ್ರತಿವರ್ಷದಂತೆ ಈ ವರ್ಷವೂ ದೀಪಾವಳಿಯನ್ನು (Deepavali) ಸೈನಿಕರೊಂದಿಗೆ (Soldiers) ಆಚರಿಸಲು ಚೀನಾ (China) ಗಡಿಗೆ ಹೊಂದಿಕೊಂಡಿರುವ ಹಿಮಾಚಲ ಪ್ರದೇಶದ (Himachal Pradesh) ಲೆಪ್ಚಾಗೆ (Lepcha) ತೆರಳಿದ್ದಾರೆ. ಭಾನುವಾರ ಬೆಳಗ್ಗೆ ದೂರದ ಗ್ರಾಮವನ್ನು ತಲುಪಿದ ಪ್ರಧಾನಿ ಮೋದಿ, ನಮ್ಮ ವೀರ ಭದ್ರತಾ ಪಡೆಗಳೊಂದಿಗೆ ದೀಪಾವಳಿಯನ್ನು ಆಚರಿಸಲು ಹಿಮಾಚಲ ಪ್ರದೇಶದ ಲೆಪ್ಚಾವನ್ನು ತಲುಪಿದ್ದೇನೆ ಎಂದು ಎಕ್ಸ್‌ನಲ್ಲಿ (X) ಬರೆದುಕೊಂಡಿದ್ದಾರೆ. ಇದಕ್ಕೂ ಮೊದಲು ಪ್ರಧಾನಿ ಮೋದಿ, ದೇಶದ ಜನರಿಗೆ ಒಳ್ಳೆಯ ಆರೋಗ್ಯ ಲಭಿಸಲಿ ಎಂದು ದೀಪಾವಳಿಯ ಶುಭಾಶಯಗಳನ್ನು ಕೋರಿದ್ದಾರೆ. ಎಲ್ಲರಿಗೂ ದೀಪಾವಳಿಯ ಶುಭಾಶಯಗಳು. ಈ ವಿಶೇಷ ಹಬ್ಬವು ಪ್ರತಿಯೊಬ್ಬರ ಜೀವನದಲ್ಲಿ ಸಂತೋಷ, ಸಮೃದ್ಧಿ ಮತ್ತು ಒಳ್ಳೆಯ ಆರೋಗ್ಯವನ್ನು ತರಲಿ ಎಂದು ಟ್ವೀಟ್ ಮಾಡುವ ಮೂಲಕ ಜನತೆಗೆ ದೀಪಾವಳಿಯ ಸಂದೇಶವನ್ನು ಸಾರಿದ್ದಾರೆ. https://ainlivenews.com/did-sending-a-message-to-a-girl-lead-to-murder-what-does-igp-ravikante-gowda-say/ ಪ್ರಧಾನಿ ನರೇಂದ್ರ ಮೋದಿಯವರು ದೇಶದ ಗಡಿ ಕಾಯುವ ಸೈನಿಕರೊಂದಿಗೆ ದೀಪಾವಳಿಯನ್ನು ಆಚರಿಸುವ ಸಂಪ್ರದಾಯವನ್ನು ಹಿಂದಿನಿಂದಲೂ ಹೊಂದಿದ್ದಾರೆ. 2014ರಲ್ಲಿ ಅಧಿಕಾರ ವಹಿಸಿಕೊಂಡಾಗಿನಿಂದ, ಅವರು ಸಶಸ್ತ್ರ…

Read More

ಬೆಳಗಾವಿ: ಪ್ರೀತಿಸಲು ಒಪ್ಪದ ಯುವತಿಯ ಫೋಟೋವನ್ನು ನಗ್ನ ಚಿತ್ರವೊಂದಕ್ಕೆ ಜೋಡಿಸಿ ಎಡಿಟ್ ಮಾಡಿ ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧನಕ್ಕೊಳಗಾದ ಆರೋಪಿಯನ್ನು ಮಂಥನ್ ಪಾಟೀಲ್ (22) ಎಂದು ಗುರುತಿಸಲಾಗಿದೆ. ಆರೋಪಿ ಖಾನಾಪುರದ ಕಾಲೇಜಿನ ವಿದ್ಯಾರ್ಥಿನಿ ಒಬ್ಬಳನ್ನು ಪ್ರೀತಿಸುವಂತೆ ಪೀಡಿಸುತ್ತಿದ್ದ. ಆಕೆ ಒಪ್ಪದಿದ್ದಾಗ ಆಕೆಯ ಫೋಟೋವನ್ನು ನಗ್ನ ಚಿತ್ರದ ಜೊತೆ ಸೇರಿಸಿ ಎಡಿಟ್ ಮಾಡಿ ಕಿರುಕುಳ ಕೊಟ್ಟಿದ್ದಾನೆ.  ಇಷ್ಟಕ್ಕೆ ಸುಮ್ಮನಾಗದೆ ಆಕೆಯ ಮೂವರು ಸ್ನೇಹಿತೆಯರ ಫೋಟೋ ಬಳಸಿ ಇದೇ ರೀತಿ ಬ್ಲಾಕ್‍ಮೇಲ್ ಮಾಡಿದ್ದಾನೆ. ಅಲ್ಲದೇ ಸಾಮಾಜಿಕ ಜಾಲತಾಣದಲ್ಲಿ ನಕಲಿ ಖಾತೆ ಸೃಷ್ಟಿಸಿ ಅಲ್ಲಿ ಅಪ್ಲೋಡ್ ಮಾಡಿದ್ದಾನೆ. https://ainlivenews.com/did-sending-a-message-to-a-girl-lead-to-murder-what-does-igp-ravikante-gowda-say/ ಆರೋಪಿ ಬೆಂಗಳೂರಿನಲ್ಲಿ ಖಾಸಗಿ ಕಂಪನಿ ಒಂದರಲ್ಲಿ ಕೆಲಸ ಮಾಡುತ್ತಿದ್ದ. ಡೀಪ್ ಫೇಕ್ ಆಪ್ ಮಾದರಿಯ ಮತ್ತೊಂದು ಆಪ್‍ನಲ್ಲಿ ಫೋಟೋ ಎಡಿಟ್ ಮಾಡಿದ್ದಾನೆ ಎಂದು ತಿಳಿದು ಬಂದಿದೆ. ಈ ಸಂಬಂಧ ಯುವತಿ ಖಾನಾಪುರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಳು. ದೂರಿನ ಅನ್ವಯ ಆರೋಪಿಯನ್ನು ಪೊಲೀಸರು ಬಂಧಿಸಿದ್ದು, ತನಿಖೆ ನಡೆಸುತ್ತಿದ್ದಾರೆ. 

Read More

ಬೆಂಗಳೂರು: ರಾಜ್ಯದಲ್ಲಿ ಡುಪ್ಲಿಕೇಟ್ ಮುಖ್ಯಮಂತ್ರಿ ಇದ್ದಾರೆ. ತೆಲಂಗಾಣದಲ್ಲಿ ಚುನಾವಣಾ ಪ್ರಚಾರಕ್ಕೆ ಹೋಗಿ ನಗೆಪಾಟಲಿಗೀಡಾಗಿದ್ದಾರೆ. ರಾಜ್ಯದ ಜನರಿಗೆ ಗ್ಯಾರಂಟಿ ಹೆಸರಿನಲ್ಲಿ ಕಿವಿಗೆ ಹೂವು ಮುಡಿಸಿದ್ದಾರೆ. ತೆಲಂಗಾಣದಲ್ಲಿ 2 ಲಕ್ಷ ಸರ್ಕಾರಿ ಹುದ್ದೆ ಭರ್ತಿ ಮಾಡೋದಾಗಿ ಹೇಳಿದ್ದಾರೆ. ಕರ್ನಾಟಕದಲ್ಲೇ 2 ಲಕ್ಷಕ್ಕೂ ಹೆಚ್ಚು ಸರ್ಕಾರಿ ಹುದ್ದೆಗಳು ಖಾಲಿ ಇವೆ. ಮೊದಲು ರಾಜ್ಯದಲ್ಲಿ ಖಾಲಿ ಇರುವ ಸರ್ಕಾರಿ ಹುದ್ದೆಗಳನ್ನು ಭರ್ತಿ ಮಾಡಿ. ತೆಲಂಗಾಣದಲ್ಲಿ ಹೋಗಿ ಮತದಾರರಿಗೆ ಸುಳ್ಳು ಭರವಸೆ ನೀಡುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಹೆಚ್​.ಡಿ.ಕುಮಾರಸ್ವಾಮಿ ತೀವ್ರ ವಾಗ್ದಾಳಿ ಮಾಡಿದರು. https://ainlivenews.com/the-price-hike-of-flowers-and-fruits-is-a-shock-for-those-who-are-celebrating-the-festival/ ಗೃಹಲಕ್ಷ್ಮೀ ಯೋಜನೆಯ ಹಣ ಇನ್ನೂ 10 ಲಕ್ಷ ಮಹಿಳೆಯರಿಗೆ  ಸಿಕ್ಕಿಲ್ಲ. ರಾಜ್ಯದಲ್ಲೇ ಲಕ್ಷಾಂತರ ಫಲಾನುಭವಿಗಳಿಗೆ ಹಣ ತಲುಪಿಲ್ಲ. ಈಗ ತೆಲಂಗಾಣದಲ್ಲಿ 4 ಸಾವಿರ ಹಣ ನೀಡುತ್ತೇವೆ ಎನ್ನುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ ವಾಗ್ದಾಳಿ ಮಾಡಿದರು. ಕಾಂಗ್ರೆಸ್ ಹೈಕಮಾಂಡ್ ಸಿಎಂ, ಡಿಸಿಎಂ ಹಾಗೂ ಮಂತ್ರಿಗಳಿಗೆ ಟಾರ್ಗೆಟ್ ಕೊಟ್ಟಿದ್ದಾರೆ. ಯಾರು ಹೆಚ್ಚಿಗೆ ಹಣ ಕೊಡುತ್ತಾರೆ ಅವರು ಮಂತ್ರಿ…

Read More

ಬೆಂಗಳೂರು: ಕೆ.ಆರ್.ಮಾರ್ಕೆಟ್ ನಲ್ಲಿ ಫುಲ್ ಜನವೋ ಜನದೀಪಾವಳಿ ಹಬ್ಬದ ವಸ್ತುಗಳ ಖರೀದಿಗೆ ಮುಗಿಬಿದ್ದ ಜನರು ದೀಪಾವಳಿ ಹಬ್ಬಕ್ಕೂ ತಟ್ಟಿದ ಬೆಲೆ ಏರಿಕೆ ಬಿಸಿ ಹಬ್ಬದ ಸಂಭ್ರಮದಲ್ಲಿದ್ದವರಿಗೆ ಹೂ-ಹಣ್ಣಿನ ದರ ಏರಿಕೆ ಶಾಕ್   ಪ್ರತೀ ಬಾರಿಯಂತೆ ಈ ಬಾರಿಯ ದೀಪಾವಳಿ ಹಬ್ಬಕ್ಕೂ ಕಡಿಮೆ ಆಗದ ಅಗತ್ಯ ವಸ್ತುಗಳ ಬೆಲೆ https://ainlivenews.com/background-of-diwali-festival-heavy-business-in-kr-market/ ಯಾವ ಯಾವ ಹೂ ಬೆಲೆ ಹೇಗಿದೆ..!? ಮಲ್ಲಿಗೆ-ಕೆಜಿಗೆ 800 ರಿಂದ 1000 ರೂ. ಸೇವಂತಿಗೆ- 300 ರಿಂದ 500 ರೂ. ಗುಲಾಬಿ-160 ರಿಂದ 200 ರೂ. ಕನಕಾಂಬರ-800 ದಿಂದ 1000 ರೂ. ಮಳ್ಳೆ ಹೂವು-800 ರಿಂದ 1000 ರೂ. ಬಟನ್ಸ್ ಪ್ರತೀ ಮಾರು – 120-140 ರೂ ರೆಡ್ ರೋಸ್ ಒಂದು ಗುಚ್ಚ – 200 ರೂ ಹಣ್ಣುಗಳ ದರ ಬಟರ್ ಫ್ರೂಟ್- 350 ರಿಂದ 400 ರೂ ಸಣ್ಣ ಆಪಲ್ – 250 ರಿಂದ 300 ರೂ ಸೇಬು -150 ರಿಂದ 300ರೂ. ಕಿತ್ತಳೆ ಹಣ್ಣು- 80 ರಿಂದ 100…

Read More

ಬಳ್ಳಾರಿ: ಹಂಪಿ ವಿರೂಪಾಕ್ಷೇಶ್ವರ ದೇಗುಲ ಕಂಬಕ್ಕೆ ಡ್ರಿಲ್ ಹೊಡೆದು ಮೊಳೆ ಹೊಡೆದ ಹಿನ್ನೆಲೆ ಧಾರ್ಮಿಕ ದತ್ತಿ ಇಲಾಖೆ ವಿರುದ್ಧ ಪುರಾತತ್ವ ಇಲಾಖೆ ಆಕ್ಷೇಪ ವ್ಯಕ್ತಪಡಿಸಿದೆ. ಯುನೆಸ್ಕೋ ವಿಶ್ವ ಪರಂಪರೆಯ ಐತಿಹಾಸಿಕ ತಾಣ, 7ನೇ ಶತಮಾನದ ಶಿವನ ದೇವಾಲಯವಾಗಿರುವ ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಹಂಪಿ ವಿರೂಪಾಕ್ಷ ದೇವಾಲಯದ ಕಂಬಕ್ಕೆ ಧಾರ್ಮಿಕ ದತ್ತಿ ಇಲಾಖೆ ಮೊಳೆ ಹೊಡೆದಿದೆ. ಈ ಸಂಬಂಧ ಪುರಾತತ್ವ ಇಲಾಖೆ ಆಕ್ಷೇಪ ವ್ಯಕ್ತಪಡಿಸಿದ್ದು ಸ್ಮಾರಕಗಳಿಗೆ ಧಕ್ಕೆ ಆಗಿದೆ ಎಂದು ನೋಟಿಸ್ ಜಾರಿ ಮಾಡಿದೆ. https://ainlivenews.com/did-sending-a-message-to-a-girl-lead-to-murder-what-does-igp-ravikante-gowda-say/ ವಿರೂಪಾಕ್ಷೇಶ್ವರ ದೇಗುಲದ ಉತ್ತರ ದಿಕ್ಕಿನಲ್ಲಿ ಗೇಟ್ ಕೂರಿಸಲು ಧಾರ್ಮಿಕ ದತ್ತಿ ಇಲಾಖೆ ಮೊಳೆ ಹೊಡೆದಿದೆ. ದೇಗುಲಕ್ಕೆ ಭಕ್ತರು ದಕ್ಷಿಣ ಧ್ರುವದಿಂದ ಬಂದು ದರ್ಶನದ ಬಳಿಕ ಉತ್ತರ ಧ್ರುವದಿಂದ ಹೊರ ಹೋಗುತ್ತಾರೆ. ಭಕ್ತರು ಸರತಿ ಸಾಲಿನಲ್ಲಿ ಹೋಗಲು ತಂತಿ ಬೇಲಿ ನಿರ್ಮಿಸಲು ಮೊಳೆ ಹೊಡೆಯಲಾಗಿದೆ. ಆದರೆ ಮೊಳೆ ಹೊಡೆಯುವ ವೇಳೆ ಪುರಾತತ್ವ ಇಲಾಖೆಯಿಂದ ಅನುಮತಿ ಪಡೆದಿಲ್ಲ. ಅನುಮತಿ ಪಡೆಯದೇ ಮೊಳೆ ಹೊಡೆದಿದ್ದಕ್ಕೆ ಪುರಾತತ್ವ ಇಲಾಖೆ ಗರಂ ಆಗಿದೆ.…

Read More

ದೀಪಾವಳಿ ಹಬ್ಬದ (Deepavali Festival) ಸಂಭ್ರಮ ಎಲ್ಲೆಲ್ಲೂ ಮನೆ ಮಾಡಿದೆ. ದೀಪ ಬೆಳಗುವ ಮೂಲಕ ಸಾಮಾನ್ಯರಿಂದ ಹಿಡಿದು ಸೆಲೆಬ್ರಿಟಿಗಳವರೆಗೂ ದೀಪಾವಳಿ ಹಬ್ಬದ ಆಚರಣೆ ಮಾಡಲಾಗುತ್ತಿದೆ. ಹೀಗಿರುವಾಗ ನಿಮ್ಮ ಬಾಳಿನಲ್ಲಿ ಕತ್ತಲೆ ಕಳೆದು ಬೆಳಕು ಮೂಡಲಿ ಎಂದು ವಿಶೇಷವಾಗಿ ರಾಧಿಕಾ ಪಂಡಿತ್ (Radhika Pandit) ವಿಶ್ ಮಾಡಿದ್ದಾರೆ. ರಾಧಿಕಾ ಯಶ್ (Radhika Yash) ಮನೆಯಲ್ಲೂ ಹಬ್ಬದ ಸಂಭ್ರಮ ಮನೆ ಮಾಡಿದೆ. ಕುಟುಂಬ ಮತ್ತು ಸ್ನೇಹಿತರ ಜೊತೆಗೂಡಿ ರಾಧಿಕಾ ಪಂಡಿತ್ ದೀಪಾವಳಿ ಹಬ್ಬವನ್ನ ಸಂಭ್ರಮದಿಂದ ಆಚರಿಸಿದ್ದಾರೆ. ಬೆಳಕಿನ ಹಬ್ಬ ದೀಪಾವಳಿಯ ಶುಭಾಶಯಗಳು, ನಿಮ್ಮ ಬಾಳಿನಲ್ಲಿ ಕತ್ತಲೇ ಕಳೆದು ಬೆಳಕು ಮೂಡಲಿ ಎಂದು ಪ್ರೀತಿಯಿಂದ ಅಭಿಮಾನಿಗಳಿಗೆ ಸೋಷಿಯಲ್ ಮೀಡಿಯಾದಲ್ಲಿ ನಟಿ ಶುಭಕೋರಿದ್ದಾರೆ. ಇನ್ನೂ ಚಂದವನದ ಸಿಂಡ್ರೆಲ್ಲಾ ರಾಧಿಕಾ, ಮತ್ತೆ ನಟನೆಗೆ ಮರಳಲಿ ಎಂದು ಕನ್ನಡಿಗರು ಎದುರು ನೋಡ್ತಿದ್ದಾರೆ. ಯಶ್ 19 (Yash 19) ಬಗ್ಗೆ ಅದೆಷ್ಟು ಫ್ಯಾನ್ಸ್‌ಗೆ ಕುತೂಹಲ ಇದ್ಯೋ, ಹಾಗೆಯೇ ರಾಧಿಕಾ ಮುಂದಿನ ಸಿನಿಮಾ (Films) ಬಗ್ಗೆ ಅಪ್‌ಡೇಟ್ ಸಿಗಲಿ ಎಂದು ಫ್ಯಾನ್ಸ್ ಕಾಯ್ತಿದ್ದಾರೆ.…

Read More