ಬೆಂಗಳೂರು: ಕುಡಿದ ಮತ್ತಿನಲ್ಲಿ ನಡೆದ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ನಗರದ ಕೆಂಗೇರಿಯಲ್ಲಿ ನಡೆದಿದೆ. ಗೆಳೆಯನಿಗೆ ಚಾಕು ಇರಿದು ನಾಟಕವಾಡಿದ್ದ ವ್ಯಕ್ತಿ ಬಂಧನವಾಗಿದ್ದು ಮಾದೇಶ್ ಬಂಧಿತ ಆರೋಪಿಯಾಗಿದ್ದಾನೆ. https://ainlivenews.com/this-week-drone-applauds-pratap-and-shouts-bhesh-to-the-game/ ಸ್ನೇಹಿತ ರಾಜಕುಮಾರ್ ಗೆ ಚಾಕು ಇರಿದಿದ್ದ ಆರೋಪಿಯಾಗಿದ್ದು ಇದೇ ತಿಂಗಳ 5ರಂದು ಕೆಂಗೇರಿಯಲ್ಲಿ ನಡೆದಿದ್ದ ಕೊಲೆಯಾಗಿದ್ದು ವೃತ್ತಿಯಲ್ಲಿ ಇಬ್ಬರು ಕ್ಯಾಬ್ ಚಾಲಕರಾಗಿದ್ದರು. ಎಣ್ಣೆ ಹೊಡೆಯಲೆಂದು ಮೀಟ್ ಆಗಿದ್ದ ಇಬ್ಬರು ಅಂಗಡಿಯಲ್ಲಿ ಎಣ್ಣೆ ಖರೀದಿಸಿ ನಿರ್ಜನ ಪ್ರದೇಶಕ್ಕೆ ತೆರಳಿ ಮದ್ಯ ಸೇವನೆ.. ಈ ವೇಳೆ ಶುರುವಾದ ಜಗಳದಲ್ಲಿ ಮಾತಿಗೆ ಮಾತು ಬೆಳೆದಿತ್ತು ಮಾದೇಶನ ಕುಟುಂಬ ಹಾಗೂ ಮಕ್ಕಳ ಬಗ್ಗೆ ನಿಂದಿಸಿದ್ದ ರಾಜಕುಮಾರ್.. ಈ ವೇಳೆ ತನ್ನ ಕಾರ್ ನಲ್ಲಿದ್ದ ಚಾಕುವಿನಿಂದ ಎದೆ ಭಾಗಕ್ಕೆ ಇರಿತ.. ಚಾಕುವಿನಿಂದ ಚುಚ್ಚಿ ತಾನೇ ಆಸ್ಪತ್ರೆಗೆ ಕರೆದೊಯ್ದ ಮಾದೇಶ್ ಈ ವೇಳೆ ಸಂಬಂಧಿಕರಿಗೆ ಯಾರೋ ಅಪರಿಚಿತರು ಕೃತ್ಯ ಎಸಗಿದ್ದಾಗಿ ಹೇಳಿದ್ದ ಆಸ್ಪತ್ರೆ ಬಳಿ ಆತನ ಸಾವಿನ ಸುದ್ದಿ ಏಳುತಿದ್ದಂತೆ ಪರಾರಿಯಾಗಿದ್ದ ಮಾದೇಶ.. ಕೊಲೆ ಸಂಬಂಧ ಪ್ರಕರಣ ದಾಖಲಿಸಿಕೊಂಡ ಕೆಂಗೇರಿ…
Author: AIN Author
ದೊಡ್ಮನೆಯಲ್ಲಿ ಮನೆಯಲ್ಲಿ (Bigg Boss Kannada 10) ಈಗಾಗಲೇ 5 ವಾರಗಳು ಕಳೆದಿವೆ. ಇಷ್ಟು ವಾರಗಳಲ್ಲಿ ಒಂದು ವಾರ ಮಾತ್ರ ಕಿಚ್ಚ ಸುದೀಪ್ ಅವರು ಬಳೆಗೆ ಚಪ್ಪಾಳೆ ನೀಡಿದ್ದರು. ಆದರೆ ಈಗ ವಾರ ಕಿಚ್ಚ ಸುದೀಪ್ ಅವರು ಡ್ರೋನ್ ಪ್ರತಾಪ್ಗೆ ಚಪ್ಪಾಳೆ ನೀಡಿದ್ದಾರೆ. ಪ್ರತಾಪ್ ಆಟಕ್ಕೆ ಭೇಷ್ ಎಂದಿದ್ದಾರೆ. ಬಿಗ್ ಮನೆಗೆ ಕಾಲಿಟ್ಟ ಮೊದಲ ದಿನದಿಂದಲೂ ಪ್ರತಾಪ್, ಎಲ್ಲರ ಕೆಂಗಣ್ಣಿಗೆ ಗುರಿಯಾಗಿದ್ರು. ಟಾರ್ಗೆಟ್ ಆಗುತ್ತಲೇ ಬಂದಿದ್ದರು. ಅಂದು ಟ್ರೋಲ್ ಆಗಿದ್ದ, ಜೋಕರ್ ಆಗಿದ್ದ ಪ್ರತಾಪ್ ಇಂದು ಪ್ರೇಕ್ಷಕರ ಮೆಚ್ಚುಗೆ ಪಡೆದಿದ್ದಾರೆ, ಈಗ ಕಿಚ್ಚನ ಚಪ್ಪಾಳೆ ಕೂಡ ಪಡೆದಿದ್ದಾರೆ. ಪ್ರತಾಪ್ ಅವರು ಟೀಂನಲ್ಲಿ ಕ್ಯಾಪ್ಟನ್ ಆಗಿ ತಂಡವನ್ನು ಮುಂದಾಳತ್ವ ವಹಿಸಿದ್ದರ ಬಗ್ಗೆ ಸುದೀಪ್ (Sudeep) ಅವರು ಮೆಚ್ಚುಗೆ ಸೂಚಿಸಿದ್ದಾರೆ. ಈ ಮೂಲಕ ಈ ಶೋನಲ್ಲಿ ಮೊದಲ ಚಪ್ಪಾಳೆ ಸ್ಪರ್ಧಿಯಾಗಿ ಡ್ರೋನ್ ಪ್ರತಾಪ್ (Drone Prathap) ಅವರಿಗೆ ಸಲ್ಲಿದೆ. ಹೊರಗಡೆ ನನ್ನ ಕಳ್ಳ, ಸುಳ್ಳ ಅಂದವರು, ಹೀಯಾಳಿಸಿದವರು, ಈ ಮನೆಯಲ್ಲಿ ಆರಂಭದಲ್ಲಿ ಆದಂತಹ ಘಟನೆಗಳನ್ನು…
ಬೆಂಗಳೂರು: ಪಂಚ ರಾಜ್ಯಗಳ ಚುನಾವಣೆಯ ಅಂಶಗಳಲ್ಲಿ ಗ್ಯಾರಂಟಿ ಯೋಜನೆಗಳು ರಾಜ್ಯದ ಜನರ ಬದುಕಿನ ಭಾಗ್ಯ ತೆರೆದಿದೆ ಎಂಬ ಭಜನೆ ಕೇಳುತ್ತಿದ್ದೇವೆ. ಇದಕ್ಕೆ ಜನ ಮರುಳಾಗಬಾರದು ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ. https://ainlivenews.com/bjp-never-supports-family-politics-k-s-eshwarappa/ ಬೆಂಗಳೂರಿನಲ್ಲಿ ಅವರು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕದ ಗ್ಯಾರಂಟಿಗಳನ್ನು ಮಾಡೆಲ್ ಆಗಿ ಇಟ್ಟುಕೊಂಡು ಪಂಚರಾಜ್ಯ ಚುನಾವಣೆಯಲ್ಲಿ ಜಾರಿಗೆ ತರಲು ಮುಂದಾಗಿರುವುದನ್ನು ಗಮನಿಸಿದ್ದಾನೆ. ಆ ಯೋಜನೆಗಳು ಇಲ್ಲಿ ಎಷ್ಟರ ಮಟ್ಟಿಗೆ ಯಶಸ್ವಿಯಾಗಿ ಜಾರಿಯಾಗಿದೆ ಎಂಬುದನ್ನು ಜನರ ಗಮನಕ್ಕೆ ತರುತ್ತೇನೆ. 5 ರಾಜ್ಯಗಳ ಮತದಾರರು ಇದಕ್ಕೆ ಮರುಳಾಗಬಾರದು ಎಂದು ಅವರು ಹೇಳಿದ್ದಾರೆ ರಾಜ್ಯದಲ್ಲಿ ಒಬ್ಬರು ಟೆಂಪ್ರವರಿ ಮುಖ್ಯಮಂತ್ರಿ ಹಾಗೂ ಇನ್ಬೊಬ್ಬರು ಡುಪ್ಲಿಕೇಟ್ ಮುಖ್ಯಮಂತ್ರಿ ಇದ್ದಾರೆ. ಅವರು ತೆಲಂಗಾಣದಲ್ಲಿ ಗ್ಯಾರಂಟಿಗಳ ಬಗ್ಗೆ ಮಾತನಾಡಲು ಹೋಗಿ ತಮ್ಮ ಬೆನ್ನು ತಾವೇ ತಟ್ಟಿಕೊಂಡು ಮುಖಭಂಗಕ್ಕೆ ಒಳಗಾಗಿದ್ದಾರೆ. ಡುಪ್ಲಿಕೇಟ್ ಸಿಎಂ ತೆಲಂಗಾಣಲದಲ್ಲಿ ಕಾಂಗ್ರೆಸ್ (Congress) ಅಧಿಕಾರಕ್ಕೆ ಬಂದರೆ 2 ಲಕ್ಷ ಉದ್ಯೋಗ ಸೃಷ್ಟಿ ಎಂದಿದ್ದಾರೆ. 2013 ರಲ್ಲಿ ಸಿದ್ದರಾಮಯ್ಯ 5 ವರ್ಷ ಮುಖ್ಯಮಂತ್ರಿ ಆಗಿದ್ದಾಗ…
“ಕೆ.ಜಿ.ಎಫ್”, ” ಕಾಂತಾರ ” ದಂತಹ ವಿಶ್ವಪ್ರಸಿದ್ಧ ಚಿತ್ರಗಳನ್ನು ನಿರ್ಮಿಸಿರುವ ಹೊಂಬಾಳೆ ಫಿಲಂಸ್ ನಿರ್ಮಾಣದ ಮತ್ತೊಂದು ಬಹು ನಿರೀಕ್ಷಿತ ಚಿತ್ರ “ಸಲಾರ್”. ವಿಜಯ ಕಿರಗಂದೂರ್ ಅವರ ನಿರ್ಮಾಣದ, ಪ್ರಶಾಂತ್ ನೀಲ್ ನಿರ್ದೇಶನದಲ್ಲಿ ಖ್ಯಾತ ನಟ ಪ್ರಭಾಸ್ ನಾಯಕರಾಗಿ ನಟಿಸಿರುವ ” ಸಲಾರ್” ಚಿತ್ರ ಡಿಸೆಂಬರ್ 22 ರಂದು ಭಾರತದಾದ್ಯಂತ ಅದ್ದೂರಿಯಾಗಿ ಬಿಡುಗಡೆಯಾಗುತ್ತಿದೆ. ಕರ್ನಾಟಕದಲ್ಲಿ ಈ ಸಿನಿಮಾ ವಿತರಣೆಯನ್ನು ಹೊಂಬಾಳೆ ಫಿಲಂಸ್ ಸಂಸ್ಥೆ ಮಾಡುತ್ತಿದೆ. “ಕರುನಾಡಿನಾದ್ಯಂತ ವಿತರಣೆಯ ಹೊಣೆ ನಮ್ಮದು. ಅತ್ಯಮೋಘ ಅನುಭನ ನೀಡುವ ಭರವಸೆಯೊಂದಿಗೆ ನಿಮ್ಮ ಮುಂದೆ” ಎಂದು ಹೊಂಬಾಳೆ ಫಿಲಂಸ್ ತಿಳಿಸಿದೆ. ಹಲವು ವಿಶೇಷಗಳನ್ನೊಳಗೊಂಡಿರುವ “ಸಲಾರ್” ಚಿತ್ರದ ಬಿಡುಗಡೆಗೆ ಪ್ರೇಕ್ಷಕರು ಕಾತುರದಿಂದ ಕಾಯುತ್ತಿದ್ದಾರೆ. ಹೊಂಬಾಳೆ ಫಿಲಂಸ್ ಈವರೆಗೂ ನಿರ್ಮಿಸಿರುವ ಎಲ್ಲಾ ಚಿತ್ರಗಳು ಹೊಂಬಾಳೆ ಫಿಲಂಸ್ ಸಂಸ್ಥೆ ಕರ್ನಾಟಕದಲ್ಲಿ ವಿತರಣೆ ಮಾಡಿದೆ . ಬಹು ನಿರೀಕ್ಷಿತ “ಸಲಾರ್” ಚಿತ್ರವನ್ನು ಕರ್ನಾಟಕದಲ್ಲಿ ಹೊಂಬಾಳೆ ಫಿಲಂಸ್ ಸಂಸ್ಥೆ distribution ಮಾಡಲಿದೆ
ಬೆಂಗಳೂರು: ಕಾಂಗ್ರೆಸ್ ಹೈಕಮಾಂಡ್ ಸಿಎಂ, ಡಿಸಿಎಂ ಹಾಗೂ ಮಂತ್ರಿಗಳಿಗೆ ಟಾರ್ಗೆಟ್ ಕೊಟ್ಟಿದ್ದಾರೆ. ಯಾರು ಹೆಚ್ಚಿಗೆ ಹಣ ಕೊಡುತ್ತಾರೆ ಅವರು ಮಂತ್ರಿ ಸ್ಥಾನದಲ್ಲಿ ಮುಂದುವರೆಯುತ್ತಾರೆ. ಯಾರು ಕೊಡಲ್ಲಾ ಅವರು ಮಂತ್ರಿಗಳಾಗುವುದಿಲ್ಲ. ಹೆಚ್ಚು ಹಣ ಕೊಟ್ಟು ಅವರು ಅಧಿಕಾರದಲ್ಲಿ ಇರುತ್ತಾರೆ. ಯಾವುದೆ ಪವರ್ ಶೇರಿಂಗ್ ಇಲ್ಲ. ಯಾರು ಹಣ ಕೊಡುತ್ತಾರೆ ಅವರು ಅಧಿಕಾರದಲ್ಲಿ ಇರುತ್ತಾರೆ. ಈಗಾಗಲೇ ಹೈಕಮಾಂಡ್ ಇದನ್ನೇ ಹೇಳಿದೆ ಎಂದು ಹೆಚ್ಡಿ ಕುಮಾರಸ್ವಾಮಿ ಹೊಸ ಬಾಂಬ್ ಸಿಡಿಸಿದರು. https://ainlivenews.com/muhurta-fix-for-bjps-new-president-vijayendras-inauguration/ ಬೆಂಗಳೂರಿನಲ್ಲಿ ಅವರು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕದ ಗ್ಯಾರಂಟಿಗಳನ್ನು ಮಾಡೆಲ್ ಆಗಿ ಇಟ್ಟುಕೊಂಡು ಪಂಚರಾಜ್ಯ ಚುನಾವಣೆಯಲ್ಲಿ ಜಾರಿಗೆ ತರಲು ಮುಂದಾಗಿರುವುದನ್ನು ಗಮನಿಸಿದ್ದಾನೆ. ಆ ಯೋಜನೆಗಳು ಇಲ್ಲಿ ಎಷ್ಟರ ಮಟ್ಟಿಗೆ ಯಶಸ್ವಿಯಾಗಿ ಜಾರಿಯಾಗಿದೆ ಎಂಬುದನ್ನು ಜನರ ಗಮನಕ್ಕೆ ತರುತ್ತೇನೆ. 5 ರಾಜ್ಯಗಳ ಮತದಾರರು ಇದಕ್ಕೆ ಮರುಳಾಗಬಾರದು ಎಂದು ಅವರು ಹೇಳಿದ್ದಾರೆ.
ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿ. ವೈ. ವಿಜಯೇಂದ್ರ ನೂತನ ಆಯ್ಕೆ ಬೆನ್ನೆಲ್ಲೆ ಬಿಜೆಪಿ ಕಚೇರಿಗೆ ಸುಣ್ಣ ಬಣ್ಣ ಬಳಿಯುವ ಕಾರ್ಯ ನಡೆಯುತ್ತಿದೆ. ಮಲ್ಲೇಶ್ವರಂನ ಜಗನ್ನಾಥ ಭವನಕ್ಕೆ ನಡೆಯುತ್ತಿರುವ ಸುಣ್ಣ ಬಣ್ಣದ ಕಾರ್ಯ ನೂತನ ಅಧ್ಯಕ್ಷರು ಕಚೇರಿಗೆ ಆಗಮಿಸುವ ಮುನ್ನ ಸುಣ್ಣ ಬಣ್ಣದೊಂದಿಗೆ ಕಚೇರಿ ಸಿಂಗಾರ ಗೊಳಿಸುವ ಕಾರ್ಯ ನಡೆಯುತ್ತಿದೆ. ನವೆಂಬರ್ 15ರಂದು ಪಕ್ಷದ ಕಚೇರಿಗೆ ಭೇಟಿ ನೀಡ್ತಿರುವ ನೂತನ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು ಅಂದೇ ರಾಜ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕರ ಮಾಡಲಿದ್ದಾರೆ.
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಪ್ರತಿವರ್ಷದಂತೆ ಈ ವರ್ಷವೂ ದೀಪಾವಳಿಯನ್ನು (Deepavali) ಸೈನಿಕರೊಂದಿಗೆ (Soldiers) ಆಚರಿಸಲು ಚೀನಾ (China) ಗಡಿಗೆ ಹೊಂದಿಕೊಂಡಿರುವ ಹಿಮಾಚಲ ಪ್ರದೇಶದ (Himachal Pradesh) ಲೆಪ್ಚಾಗೆ (Lepcha) ತೆರಳಿದ್ದಾರೆ. ಭಾನುವಾರ ಬೆಳಗ್ಗೆ ದೂರದ ಗ್ರಾಮವನ್ನು ತಲುಪಿದ ಪ್ರಧಾನಿ ಮೋದಿ, ನಮ್ಮ ವೀರ ಭದ್ರತಾ ಪಡೆಗಳೊಂದಿಗೆ ದೀಪಾವಳಿಯನ್ನು ಆಚರಿಸಲು ಹಿಮಾಚಲ ಪ್ರದೇಶದ ಲೆಪ್ಚಾವನ್ನು ತಲುಪಿದ್ದೇನೆ ಎಂದು ಎಕ್ಸ್ನಲ್ಲಿ (X) ಬರೆದುಕೊಂಡಿದ್ದಾರೆ. ಇದಕ್ಕೂ ಮೊದಲು ಪ್ರಧಾನಿ ಮೋದಿ, ದೇಶದ ಜನರಿಗೆ ಒಳ್ಳೆಯ ಆರೋಗ್ಯ ಲಭಿಸಲಿ ಎಂದು ದೀಪಾವಳಿಯ ಶುಭಾಶಯಗಳನ್ನು ಕೋರಿದ್ದಾರೆ. ಎಲ್ಲರಿಗೂ ದೀಪಾವಳಿಯ ಶುಭಾಶಯಗಳು. ಈ ವಿಶೇಷ ಹಬ್ಬವು ಪ್ರತಿಯೊಬ್ಬರ ಜೀವನದಲ್ಲಿ ಸಂತೋಷ, ಸಮೃದ್ಧಿ ಮತ್ತು ಒಳ್ಳೆಯ ಆರೋಗ್ಯವನ್ನು ತರಲಿ ಎಂದು ಟ್ವೀಟ್ ಮಾಡುವ ಮೂಲಕ ಜನತೆಗೆ ದೀಪಾವಳಿಯ ಸಂದೇಶವನ್ನು ಸಾರಿದ್ದಾರೆ. https://ainlivenews.com/did-sending-a-message-to-a-girl-lead-to-murder-what-does-igp-ravikante-gowda-say/ ಪ್ರಧಾನಿ ನರೇಂದ್ರ ಮೋದಿಯವರು ದೇಶದ ಗಡಿ ಕಾಯುವ ಸೈನಿಕರೊಂದಿಗೆ ದೀಪಾವಳಿಯನ್ನು ಆಚರಿಸುವ ಸಂಪ್ರದಾಯವನ್ನು ಹಿಂದಿನಿಂದಲೂ ಹೊಂದಿದ್ದಾರೆ. 2014ರಲ್ಲಿ ಅಧಿಕಾರ ವಹಿಸಿಕೊಂಡಾಗಿನಿಂದ, ಅವರು ಸಶಸ್ತ್ರ…
ಬೆಳಗಾವಿ: ಪ್ರೀತಿಸಲು ಒಪ್ಪದ ಯುವತಿಯ ಫೋಟೋವನ್ನು ನಗ್ನ ಚಿತ್ರವೊಂದಕ್ಕೆ ಜೋಡಿಸಿ ಎಡಿಟ್ ಮಾಡಿ ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧನಕ್ಕೊಳಗಾದ ಆರೋಪಿಯನ್ನು ಮಂಥನ್ ಪಾಟೀಲ್ (22) ಎಂದು ಗುರುತಿಸಲಾಗಿದೆ. ಆರೋಪಿ ಖಾನಾಪುರದ ಕಾಲೇಜಿನ ವಿದ್ಯಾರ್ಥಿನಿ ಒಬ್ಬಳನ್ನು ಪ್ರೀತಿಸುವಂತೆ ಪೀಡಿಸುತ್ತಿದ್ದ. ಆಕೆ ಒಪ್ಪದಿದ್ದಾಗ ಆಕೆಯ ಫೋಟೋವನ್ನು ನಗ್ನ ಚಿತ್ರದ ಜೊತೆ ಸೇರಿಸಿ ಎಡಿಟ್ ಮಾಡಿ ಕಿರುಕುಳ ಕೊಟ್ಟಿದ್ದಾನೆ. ಇಷ್ಟಕ್ಕೆ ಸುಮ್ಮನಾಗದೆ ಆಕೆಯ ಮೂವರು ಸ್ನೇಹಿತೆಯರ ಫೋಟೋ ಬಳಸಿ ಇದೇ ರೀತಿ ಬ್ಲಾಕ್ಮೇಲ್ ಮಾಡಿದ್ದಾನೆ. ಅಲ್ಲದೇ ಸಾಮಾಜಿಕ ಜಾಲತಾಣದಲ್ಲಿ ನಕಲಿ ಖಾತೆ ಸೃಷ್ಟಿಸಿ ಅಲ್ಲಿ ಅಪ್ಲೋಡ್ ಮಾಡಿದ್ದಾನೆ. https://ainlivenews.com/did-sending-a-message-to-a-girl-lead-to-murder-what-does-igp-ravikante-gowda-say/ ಆರೋಪಿ ಬೆಂಗಳೂರಿನಲ್ಲಿ ಖಾಸಗಿ ಕಂಪನಿ ಒಂದರಲ್ಲಿ ಕೆಲಸ ಮಾಡುತ್ತಿದ್ದ. ಡೀಪ್ ಫೇಕ್ ಆಪ್ ಮಾದರಿಯ ಮತ್ತೊಂದು ಆಪ್ನಲ್ಲಿ ಫೋಟೋ ಎಡಿಟ್ ಮಾಡಿದ್ದಾನೆ ಎಂದು ತಿಳಿದು ಬಂದಿದೆ. ಈ ಸಂಬಂಧ ಯುವತಿ ಖಾನಾಪುರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಳು. ದೂರಿನ ಅನ್ವಯ ಆರೋಪಿಯನ್ನು ಪೊಲೀಸರು ಬಂಧಿಸಿದ್ದು, ತನಿಖೆ ನಡೆಸುತ್ತಿದ್ದಾರೆ.
ಬೆಂಗಳೂರು: ರಾಜ್ಯದಲ್ಲಿ ಡುಪ್ಲಿಕೇಟ್ ಮುಖ್ಯಮಂತ್ರಿ ಇದ್ದಾರೆ. ತೆಲಂಗಾಣದಲ್ಲಿ ಚುನಾವಣಾ ಪ್ರಚಾರಕ್ಕೆ ಹೋಗಿ ನಗೆಪಾಟಲಿಗೀಡಾಗಿದ್ದಾರೆ. ರಾಜ್ಯದ ಜನರಿಗೆ ಗ್ಯಾರಂಟಿ ಹೆಸರಿನಲ್ಲಿ ಕಿವಿಗೆ ಹೂವು ಮುಡಿಸಿದ್ದಾರೆ. ತೆಲಂಗಾಣದಲ್ಲಿ 2 ಲಕ್ಷ ಸರ್ಕಾರಿ ಹುದ್ದೆ ಭರ್ತಿ ಮಾಡೋದಾಗಿ ಹೇಳಿದ್ದಾರೆ. ಕರ್ನಾಟಕದಲ್ಲೇ 2 ಲಕ್ಷಕ್ಕೂ ಹೆಚ್ಚು ಸರ್ಕಾರಿ ಹುದ್ದೆಗಳು ಖಾಲಿ ಇವೆ. ಮೊದಲು ರಾಜ್ಯದಲ್ಲಿ ಖಾಲಿ ಇರುವ ಸರ್ಕಾರಿ ಹುದ್ದೆಗಳನ್ನು ಭರ್ತಿ ಮಾಡಿ. ತೆಲಂಗಾಣದಲ್ಲಿ ಹೋಗಿ ಮತದಾರರಿಗೆ ಸುಳ್ಳು ಭರವಸೆ ನೀಡುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ತೀವ್ರ ವಾಗ್ದಾಳಿ ಮಾಡಿದರು. https://ainlivenews.com/the-price-hike-of-flowers-and-fruits-is-a-shock-for-those-who-are-celebrating-the-festival/ ಗೃಹಲಕ್ಷ್ಮೀ ಯೋಜನೆಯ ಹಣ ಇನ್ನೂ 10 ಲಕ್ಷ ಮಹಿಳೆಯರಿಗೆ ಸಿಕ್ಕಿಲ್ಲ. ರಾಜ್ಯದಲ್ಲೇ ಲಕ್ಷಾಂತರ ಫಲಾನುಭವಿಗಳಿಗೆ ಹಣ ತಲುಪಿಲ್ಲ. ಈಗ ತೆಲಂಗಾಣದಲ್ಲಿ 4 ಸಾವಿರ ಹಣ ನೀಡುತ್ತೇವೆ ಎನ್ನುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ ವಾಗ್ದಾಳಿ ಮಾಡಿದರು. ಕಾಂಗ್ರೆಸ್ ಹೈಕಮಾಂಡ್ ಸಿಎಂ, ಡಿಸಿಎಂ ಹಾಗೂ ಮಂತ್ರಿಗಳಿಗೆ ಟಾರ್ಗೆಟ್ ಕೊಟ್ಟಿದ್ದಾರೆ. ಯಾರು ಹೆಚ್ಚಿಗೆ ಹಣ ಕೊಡುತ್ತಾರೆ ಅವರು ಮಂತ್ರಿ…
ಬೆಂಗಳೂರು: ಕೆ.ಆರ್.ಮಾರ್ಕೆಟ್ ನಲ್ಲಿ ಫುಲ್ ಜನವೋ ಜನದೀಪಾವಳಿ ಹಬ್ಬದ ವಸ್ತುಗಳ ಖರೀದಿಗೆ ಮುಗಿಬಿದ್ದ ಜನರು ದೀಪಾವಳಿ ಹಬ್ಬಕ್ಕೂ ತಟ್ಟಿದ ಬೆಲೆ ಏರಿಕೆ ಬಿಸಿ ಹಬ್ಬದ ಸಂಭ್ರಮದಲ್ಲಿದ್ದವರಿಗೆ ಹೂ-ಹಣ್ಣಿನ ದರ ಏರಿಕೆ ಶಾಕ್ ಪ್ರತೀ ಬಾರಿಯಂತೆ ಈ ಬಾರಿಯ ದೀಪಾವಳಿ ಹಬ್ಬಕ್ಕೂ ಕಡಿಮೆ ಆಗದ ಅಗತ್ಯ ವಸ್ತುಗಳ ಬೆಲೆ https://ainlivenews.com/background-of-diwali-festival-heavy-business-in-kr-market/ ಯಾವ ಯಾವ ಹೂ ಬೆಲೆ ಹೇಗಿದೆ..!? ಮಲ್ಲಿಗೆ-ಕೆಜಿಗೆ 800 ರಿಂದ 1000 ರೂ. ಸೇವಂತಿಗೆ- 300 ರಿಂದ 500 ರೂ. ಗುಲಾಬಿ-160 ರಿಂದ 200 ರೂ. ಕನಕಾಂಬರ-800 ದಿಂದ 1000 ರೂ. ಮಳ್ಳೆ ಹೂವು-800 ರಿಂದ 1000 ರೂ. ಬಟನ್ಸ್ ಪ್ರತೀ ಮಾರು – 120-140 ರೂ ರೆಡ್ ರೋಸ್ ಒಂದು ಗುಚ್ಚ – 200 ರೂ ಹಣ್ಣುಗಳ ದರ ಬಟರ್ ಫ್ರೂಟ್- 350 ರಿಂದ 400 ರೂ ಸಣ್ಣ ಆಪಲ್ – 250 ರಿಂದ 300 ರೂ ಸೇಬು -150 ರಿಂದ 300ರೂ. ಕಿತ್ತಳೆ ಹಣ್ಣು- 80 ರಿಂದ 100…