Author: AIN Author

ಬೆಂಗಳೂರು:- ನೂತನ ಬಿಜೆಪಿ ರಾಜ್ಯಾದ್ಯಕ್ಷರಾದ ಬಿವೈ ವಿಜಯೇಂದ್ರ ಅವರು ನಿರ್ಮಲನಂದನಾಥ ಸ್ವಾಮೀಜಿ ಅವರನ್ನು ಭೇಟಿ ಮಾಡಿದ್ದಾರೆ. ವಿಜಯನಗರದ ಆದಿಚುಂಚನಗಿರಿ ಮಠಕ್ಕೇ ಭೇಟಿ ನೀಡಿ ಪೂಜ್ಯ ನಿರ್ಮಲನಂದನಾಥ ಸ್ವಾಮೀಜಿ ಅವರ ಆಶೀರ್ವಾದ ಪಡೆದರು. ಬಿಜೆಪಿಯ ನೂತನ ರಾಜ್ಯಾಧ್ಯಕ್ಷರಾಗಿ ಬಿವೈ ವಿಜಯೇಂದ್ರ ಅವರು ಆಯ್ಕೆ ಆಗಿರುವ ಹಿನ್ನೆಲೆ, ಶ್ರೀಗಳನ್ನು ಭೇಟಿ ಮಾಡಿ ಆಶೀರ್ವಾದ ಪಡೆದಿದ್ದಾರೆ.

Read More

ವಾಟ್ಸಪ್ ನೂತನ ಅಪ್ ಡೇಟ್ ನಲ್ಲಿ ವಿಡಿಯೊ ಕಾಲ್ ವೇಳೆ ಸ್ಕ್ರೀನ್ ಶೇರಿಂಗ್ ಫೀಚರ್ ಪರಿಚಯಿಸಿದೆ.ವಾಟ್ಸಪ್ ನಲ್ಲಿ ವಿಡಿಯೊ ಕಾಲ್ ವೇಳೆ ಸ್ಕ್ರೀನ್ ಶೇರಿಂಗ್ ಫೀಚರ್ ಸಕ್ರಿಯಗೊಳಿಸಲಾಗಿದೆ ಎಂದು ಹೇಳಲಾಗುತ್ತಿದೆ. ವಿಡಿಯೊ ಕಾಲ್ ವೇಳೆ ಬಳಕೆದಾರರು, ‘ಶೇರಿಂಗ್’ ಐಕಾನ್ ಅನ್ನು ಕ್ಲಿಕ್ ಮಾಡುವ ಮೂಲಕ ನಿರ್ದಿಷ್ಟ ಅಪ್ಲಿಕೇಶನ್ ಅಥವಾ ಸಂಪೂರ್ಣ ಪರದೆಯನ್ನು ಹಂಚಿಕೊಳ್ಳುವ ಆಯ್ಕೆ ಮಾಡುವ ಮೂಲಕ ಸ್ಕ್ರೀನ್ ಹಂಚಿಕೆಯನ್ನು ಪ್ರಾರಂಭಿಸಬಹುದು. ಕೆಲಸದ ನಿಮಿತ್ತ ಡಾಕ್ಯುಮೆಂಟ್‌ಗಳನ್ನು ಹಂಚಿಕೊಳ್ಳುವುದು, ಕುಟುಂಬದೊಂದಿಗೆ ಚಿತ್ರಗಳನ್ನು ಹಂಚಿಕೊಳ್ಳುವುದು, ರಜೆ ಕುರಿತು ಯೋಜಿಸುವುದು ಅಥವಾ ಸ್ನೇಹಿತರೊಂದಿಗೆ ಆನ್‌ಲೈನ್‌ನಲ್ಲಿ ಶಾಪಿಂಗ್ ಮಾಡುವುದು ಮುಂತಾದ ಸಂದರ್ಭ ವಿಡಿಯೊ ಕರೆ ಸಮಯದಲ್ಲಿ ನಿಮ್ಮ ಪರದೆಯ ಲೈವ್ ವೀಕ್ಷಣೆಯನ್ನು ಹಂಚಿಕೊಳ್ಳಲು ಸ್ಕ್ರೀನ್ ಶೇರಿಂಗ್ ಫೀಚರ್ ನಿಮಗೆ ಅನುಮತಿಸುತ್ತದೆ’ ಎಂದು ಕಂಪನಿಯು ಹೇಳಿಕೆಯಲ್ಲಿ ತಿಳಿಸಿದೆ.

Read More

ಹಾಟ್ ತಾರೆ ಸಿಮ್ರನ್ ಕೌರ್ ಸಲಾರ್ ಸಿನಿಮಾದ ಮಾದಕ ಗೀತೆಗೆ ಹೆಜ್ಜೆ ಹಾಕಿದ್ದಾರೆ ಎನ್ನುವ ಮಾಹಿತಿ ತೆಲುಗು ಚಿತ್ರೋದ್ಯಮದಲ್ಲಿ ಹರಿದಾಡುತ್ತಿದೆ. ಅದ್ಧೂರಿ ಸೆಟ್ ನಲ್ಲಿ ಸಿಮ್ರನ್ ಮತ್ತು ಪ್ರಭಾಸ್ ಹಾಟ್ ಹಾಡಿಗೆ ಹೆಜ್ಜೆ ಹಾಕಿದ್ದಾರಂತೆ. ಸಲಾರ್ ಸಿನಿಮಾದ ಹುಕ್ ಸಾಂಗ್ ಇದಾಗಲಿದೆ ಎಂದು ಹೇಳಲಾಗುತ್ತಿದೆ. ಈ ಕುರಿತಂತೆ ಚಿತ್ರತಂಡ ಮಾಹಿತಿ ನೀಡದೇ ಇದ್ದರೂ, ತೆಲುಗಿನಲ್ಲಂತೂ ಭಾರೀ ಸುದ್ದಿ ಆಗಿದೆ. ಸಲಾರ್ (Salaar) ಸಿನಿಮಾದ ರಿಲೀಸ್ ಗೆ ದೊಡ್ಡಮಟ್ಟದಲ್ಲೇ ಪ್ಲ್ಯಾನ್ ಮಾಡಲಾಗುತ್ತಿದೆ. ಕನ್ನಡ, ತಮಿಳು, ತೆಲುಗು, ಹಿಂದಿ, ಮಲಯಾಳಂ ಹೀಗೆ ನಾನಾ ಭಾಷೆಗಳಲ್ಲಿ ಈ ಸಿನಿಮಾ ಬಿಡುಗಡೆ ಆಗುತ್ತಿದ್ದು, ಮಲಯಾಳಂ ಭಾಷೆಯ ಸಲಾರ್ ಸಿನಿಮಾಗೆ ಪೃಥ್ವಿರಾಜ್  (Prithviraj Sukumaran) ಸಾಥ್ ನೀಡುತ್ತಿದ್ದಾರೆ. ನಿನ್ನೆಯಷ್ಟೇ ಸಿನಿಮಾದ ಪೋಸ್ಟರ್ ವೊಂದನ್ನು ಅವರು ರಿಲೀಸ್ ಮಾಡಿದ್ದಾರೆ. ಭಾರತೀಯ ಸಿನಿಮಾ ರಂಗ ಡಿಸೆಂಬರ್ ನಲ್ಲಿ ಮೆಗಾ ಕಾಳಗಕ್ಕೆ ಸಾಕ್ಷಿಯಾಗಲಿದೆ. ಚಿತ್ರೋದ್ಯಮದ ಮೂವರು ಭಾರೀ ಬಜೆಟ್ ಚಿತ್ರಗಳು ಬಿಡುಗಡೆ ಆಗುತ್ತಿವೆ. ತೆಲುಗಿನ ಪ್ರಭಾಸ್, ಬಾಲಿವುಡ್ ಶಾರುಖ್ ಖಾನ್ ಮತ್ತು ಮಲಯಾಳಂ…

Read More

ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ರೋಹಿತ್ ಶರ್ಮಾ ನಾಯಕತ್ವದ ಭಾರತ ಹಾಗೂ ಸ್ಕಾಟ್ ಎಡ್ವರ್ಡ್ಸ್ ನೇತೃತ್ವದ ನೆದರ್ಲೆಂಡ್ಸ್ ತಂಡಗಳು ಮುಖಾಮುಖಿ ಆಗಲಿದೆ. ಪಾಯಿಂಟ್ ಟೇಬಲ್​ನಲ್ಲಿ ಅಗ್ರಸ್ಥಾನ ಪಡೆದು ಈಗಾಗಲೇ ಸೆಮಿ ಫೈನಲ್​ಗೇರಿರುವ ಟೀಮ್ ಇಂಡಿಯಾಕ್ಕೆ ಇದೊಂದು ಔಪಚಾರಿಕ ಪಂದ್ಯ. ಇಂದಿನ ಭಾರತ-ನೆದರ್ಲೆಂಡ್ಸ್ ಪಂದ್ಯಕ್ಕೆ ಮಳೆ ಅಡ್ಡಿ ಪಡಿಸುತ್ತಾ ಎಂಬುದನ್ನು ನೋಡುವುದಾದರೆ, ಬೆಂಗಳೂರಿನಲ್ಲಿ ಇಂದು ಕನಿಷ್ಠ 16 ಡಿಗ್ರಿ ಸೆಲ್ಸಿಯಸ್ ತಾಪಮಾನ ನಿರೀಕ್ಷಿಸಲಾಗಿದೆ. ಹವಾಮಾನ ವರದಿಯ ಪ್ರಕಾರ ಯಾವುದೇ ಮಳೆಯ ಸೂಚನೆ ಇಲ್ಲ. ಮೋಡ ಕವಿದ ವಾತಾವರಣ ಇರಬಹುದು. ಇಂದು ಬೆಂಗಳೂರಿನಲ್ಲಿ ಶೇ. 71 ರಷ್ಟು ಮೋಡ ಕವಿದ ವಾತಾವರಣ ಇರಲಿದೆ. ಶೇ. 3 ರಷ್ಟು ಮಳೆಯ ಸಂಭವ ಇದೆಯಷ್ಟೆ. ಸಂಜೆಯ ವೇಳೆಗೆ ತಾಪಮಾನವು 12 ಡಿಗ್ರಿ ಸೆಲ್ಸಿಯಸ್​ಗೆ ಬರಲಿದೆ. ಆರ್ದ್ರತೆಯು ಶೇ. 66 ರಷ್ಟು ಇರಬಹುದು ಎನ್ನಲಾಗಿದೆ. ಒಟ್ಟಾರೆ ಭಾರತ-ನೆದರ್ಲೆಂಡ್ಸ್ ಪಂದ್ಯಕ್ಕೆ ಮಳೆ ಅಡ್ಡಿ ಪಡಿಸುವ ಸಾಧ್ಯತೆ ಇಲ್ಲ. ಟೂರ್ನಿಯಿಂದ ಹೊರಬಿದ್ದರೂ ಇಂದಿನ ಪಂದ್ಯ ನೆದರ್ಲೆಂಡ್ಸ್ ತಂಡಕ್ಕೆ ಮುಖ್ಯವಾಗಿದೆ. ಚಾಂಪಿಯನ್ಸ್ ಟ್ರೋಫಿ 2025…

Read More

ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆಯಾಗಿದೆ, ಕಡಿಮೆ ಬೆಲೆಯಲ್ಲಿ ನಿರೀಕ್ಷೆಗಿಂತ ಹೆಚ್ಚಿನ ಶ್ರೇಣಿಯನ್ನು ಪಡೆಯುತ್ತಿದೆ, ಅದರ ಅದ್ಭುತ ವೈಶಿಷ್ಟ್ಯಗಳನ್ನು ತಿಳಿದುಕೊಳ್ಳಿ, ಭಾರತೀಯರು ಈಗ ಎಲೆಕ್ಟ್ರಿಕ್ ಸ್ಕೂಟರ್‌ಗಳನ್ನು ಹೆಚ್ಚು ಇಷ್ಟಪಡುತ್ತಿದ್ದಾರೆ. ಈ ಕಾರಣಕ್ಕಾಗಿ, ಅದರ ಬೇಡಿಕೆಯು ಸಾಕಷ್ಟು ಹೆಚ್ಚಾಗಿದೆ. ಬೇಡಿಕೆಯೊಂದಿಗೆ, ಅನೇಕ ಕಂಪನಿಗಳು ಮಾರುಕಟ್ಟೆಯಲ್ಲಿ ಒಂದಕ್ಕಿಂತ ಹೆಚ್ಚು ಎಲೆಕ್ಟ್ರಿಕ್ ಸ್ಕೂಟರ್‌ಗಳನ್ನು ಬಿಡುಗಡೆ ಮಾಡಿದೆ. ಇದರಿಂದಾಗಿ ಅನೇಕ ಜನರು ಅವುಗಳನ್ನು ಖರೀದಿಸಲು ಸಾಕಷ್ಟು ತೊಂದರೆ ಅನುಭವಿಸುತ್ತಿದ್ದಾರೆ. ಪ್ರತಿ ಶ್ರೇಣಿಯಲ್ಲಿ, ಬಹು ವೈಶಿಷ್ಟ್ಯಗಳೊಂದಿಗೆ ಬರುವ ಹಲವು ಆಯ್ಕೆಗಳನ್ನು ನೀವು ಕಾಣಬಹುದು. BGauss C12i ಎಲೆಕ್ಟ್ರಿಕ್ ಸ್ಕೂಟರ್ ಬಗ್ಗೆ ನಿಮಗೆ ತಿಳಿಸಲಾಗುವುದು, ಇದು ಬಜೆಟ್‌ನಲ್ಲಿಯೇ 135 ಕಿಲೋಮೀಟರ್‌ಗಳ ವ್ಯಾಪ್ತಿಯನ್ನು ನೀಡುತ್ತದೆ. ಇದರ ಉದ್ದ 1825 ಮಿಮೀ, ಅಗಲ 697 ಮಿಮೀ ಮತ್ತು ಎತ್ತರ 1150 ಮಿಮೀ. ಇದು 155 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಅನ್ನು ಪಡೆಯುತ್ತದೆ ಮತ್ತು ಇದರ ವೀಲ್ ಬೇಸ್ 1293 ಎಂಎಂ ಆಗಿದೆ. ಈ 110 ಕೆಜಿ ಎಲೆಕ್ಟ್ರಿಕ್ ಸ್ಕೂಟರ್ ಅನ್ನು ಹಲವಾರು ಬಣ್ಣಗಳಲ್ಲಿ ಲಭ್ಯವಾಗುವಂತೆ ಮಾಡಲಾಗಿದೆ. ಅದೇ ಸಮಯದಲ್ಲಿ, ಅದರ ನೋಟವು ತುಂಬಾ ಆಕರ್ಷಕವಾಗಿದೆ. ಇದು 2500…

Read More

ಹಾಸನ: ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರನ್ನು ವಿರೋಧಿಸಿ ಪಕ್ಷದಿಂದ ಹೊರಬಂದ ಒಕ್ಕಲಿಗ ನಾಯಕರನ್ನು ಚುನಾವಣೆಯಲ್ಲಿ ಸೋಲಿಸುತ್ತಾ ಬಂದವರು, ನನ್ನನ್ನು ಸೋಲಿಸಲು ಆಗಲಿಲ್ಲ ಎಂಬ ಹತಾಶೆಯಿಂದ ಸುಖಾಸುಮ್ಮನೆ ನನ್ನ ತೇಜೋವಧೆ ಮಾಡುತ್ತಿದ್ದಾರೆ. ಅವರು ಈ ಕೆಲಸ ಮುಂದುವರಿಸಿದರೆ ನಾನೂ ನನ್ನ ವರಸೆ ತೋರಿಸಬೇಕಾಗುತ್ತದೆ ಎಂದು ಅರಸೀಕೆರೆ ಶಾಸಕ ಕೆ.ಎಂ.ಶಿವಲಿಂಗೇಗೌಡ ಅವರು ಮಾಜಿ ಸಿಎಂ ಕುಮಾರಸ್ವಾಮಿ ಹಾಗೂ ಶಾಸಕ ಎಚ್‌.ಡಿ.ರೇವಣ್ಣಗೆ ಎಚ್ಚರಿಕೆ ನೀಡಿದರು. ”ಎಚ್‌.ಡಿ.ಕುಮಾರಸ್ವಾಮಿ ವಿಧಾನಸಭೆಯಲ್ಲಿ ನನ್ನ ಹೆಸರು ಹೇಳುವುದಿಲ್ಲ, ಒಮ್ಮೆ ಅರಸೀಕೆರೆಯವನು ಅಂತಾರೆ, ನಾನೂ ಅವರನ್ನು ಚನ್ನಪಟ್ಟಣ ಶಾಸಕ ಅನ್ನಬಹುದು, ಆದರೆ ನಾನು ಹಾಗೆ ಮಾತನಾಡುವುದಿಲ್ಲ,”ಎಂದು ಸುದ್ದಿಗೋಷ್ಠಿಯಲ್ಲಿ ಹೇಳಿದರು. ”ನನಗೂ ನಮ್ಮಪ್ಪ ಹೆಸರು ಕಟ್ಟಿದ್ದಾನೆ, ನಾನು ಬಡ ರೈತನ ಮಗ. ನನ್ನ ಹೆಸರು ಹೇಳೋಕೆ ನಾಚಿಕೆಯಾದರೆ ಹೇಳಬೇಡಿ ಎಂದು ವಿಧಾನಸಭೆಯಲ್ಲೇ ಹೇಳಿದ್ದೆ. ಆದರೂ ಅದೇ ಪರಿಪಾಟ ಇನ್ನೂ ಮುಂದುವರಿಸಿದ್ದಾರೆ. https://ainlivenews.com/great-job-opportunity-in-hindustan-aeronautics-limited-posting-in-bangalore/ ಮಜ್ಜಿಗೆ ಮಾರುವವನು ಎಂದು ಹೊಸದಾಗಿ ಟೀಕಿಸಲು ಪ್ರಾರಂಭಿಸಿದ್ದಾರೆ. ಮಜ್ಜಿಗೆ ಏನು ಸ್ಮಗ್ಲಿಂಗ್‌ ಗೂಡ್ಸೇ,” ಎಂದು ಪ್ರಶ್ನಿಸಿದರು. ”ವಿದ್ಯಾರ್ಥಿಯಾಗಿ ಗಂಡಸಿ ಶಾಲೆಗೆ ಸೈಕಲ್‌ನಲ್ಲಿ ಬರುತ್ತಿದ್ದಾಗ…

Read More

ಬೆಂಗಳೂರು:- ಬಹುಮಹಡಿ ಕಟ್ಟಡದಿಂದ ಬಿದ್ದು ಯುವಕ ಸಾವನ್ನಪ್ಪಿದ ಘಟನೆ ಆರ್ ಆರ್ ನಗರದ ಹಲಗೇವಡೆರಹಳ್ಳಿಯಲ್ಲಿ ಜರುಗಿದೆ. ಶಿವಮೊಗ್ಗ ಮೂಲದ ಮದನ್ ಶೆಟ್ಟಿ (25) ಮೃತ ಯುವಕ. ತಾನು ವಾಸವಿದ್ದ ಕಟ್ಟಡದ ನಾಲ್ಕನೇ ಅಂತಸ್ತಿನಿಂದ ಬಿದ್ದು ಸಾವನ್ನಪ್ಪಿದ್ದಾನೆ. ಸ್ನೇಹಿತರ ನಡುವೆ ಗಲಾಟೆ ಬಳಿಕ ಆತ್ಮಹತ್ಯೆ ಶಂಕೆ ವ್ಯಕ್ತವಾಗಿದೆ. ಸ್ನೇಹಿತನ ಫೋನ್ ನಂಬರ್ ಬರೆದಿಟ್ಟು ನಾಲ್ಕು ಅಂತಸ್ತಿನಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನಿನ್ನೆ ರಾತ್ರಿ 9 ಗಂಟೆಯ ಸುಮಾರಿಗೆ ಘಟನೆ ಜರುಗಿದೆ. ನಾಲ್ಕು ಅಂತಸ್ತಿನಿಂದ ಜಿಗಿದ ಬಿಲ್ಡಿಂಗ್ ನಲ್ಲೇ ಮದನ್ ಶೆಟ್ಟಿ ಬಾಡಿಗೆಗೆ ಇದ್ದ. ಮದನ್ ಜೊತೆ ತೇಜು ಹಾಗೂ ಇನ್ನೊಬ್ಬ ಸ್ನೇಹಿತ ಬಾಡಿಗೆ ಇದ್ದರು ಎನ್ನಲಾಗಿದೆ.. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಆರ್.ಆರ್.ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಲ್ಲೇಶ್ವರಂ ಅರಣ್ಯ ಭವನ ಚಾಲಕನಾಗಿ ಮೃತ ಯುವಕ ಕೆಲಸ ನಿರ್ವಹಿಸ್ತಿದ್ದ. ಆರ್.ಆರ್.ನಗರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿ ತನಿಖೆ ಕೈಗೊಂಡಿದ್ದಾರೆ.

Read More

ನಟ ರಜನಿಕಾಂತ್ ಅವರು ನನ್ನನ್ನು ರಹಸ್ಯವಾಗಿ ಮದುವೆಯಾಗಿದ್ದಾರೆ ಎಂದು ನಟಿ ಕವಿತಾ ಶಾಕಿಂಗ್ ಹೇಳಿಕೆ ನೀಡಿದ್ದಾರೆ. ಯೂಟ್ಯೂಬ್ ಚಾನೆಲ್ ವೊಂದಕ್ಕೆ ನೀಡಿರುವ ಸಂದರ್ಶನದಲ್ಲಿ ರಜನಿಕಾಂತ್ ಜೊತೆಗಿನ ಗಾಸಿಪ್ ಬಗ್ಗೆ ಮುಕ್ತವಾಗಿ ಮಾತನಾಡಿದ್ದಾರೆ. ರಜನಿಕಾಂತ್ ಅವರ ಜೊತೆ ಸಿನಿಮಾಗಳಲ್ಲಿ ನಟಿಸುವುದನ್ನು ಮುಂದುವರಿಸುತ್ತಿದ್ದಾಗ ಇಬ್ಬರೂ ರಹಸ್ಯವಾಗಿ ಮದುವೆಯಾಗಿದ್ದಾರೆ ಎಂದು ಪತ್ರಿಕೆಯಲ್ಲಿ ಸುದ್ದಿ ಪ್ರಕಟವಾದವು. ಮೋಹನ್‌ ಬಾಬು ಜೊತೆ ಸಿನಿಮಾದಲ್ಲಿ ನಟಿಸುವಾಗ ಈ ವಿಷಯ ತಿಳಿಯಿತು. ಈ ಸುದ್ದಿ ತಿಳಿದು ಕೋಪಗೊಂಡು ಮೋಹನ್ ಬಾಬು ಅವರ ಸಿನಿ ಜರ್ನಿ ಮೇಲೆ ಪರಿಣಾಮ ಬೀರುತ್ತದೆ ಎಂದು ಶೂಟಿಂಗ್ ನಿಲ್ಲಿಸಿದೆ ಎಂದಿದ್ದಾರೆ. ರಜನಿಕಾಂತ್ ಜೊತೆ ನನ್ನ ಮದುವೆ ಆಗಿದೆ ಈ ರೀತಿ ಸುದ್ದಿ ಪ್ರಕಟಿಸಿದ್ದ ಪತ್ರಿಕಾ ಕಚೇರಿಗೆ ಹೋಗಿ ಜಗಳವಾಡಿದ್ದೆ. ಬಳಿಕ ಪತ್ರಿಕೆಯವರು ಸ್ಪಷ್ಟೀಕರಣ ನೀಡುವುದಾಗಿ ಹೇಳಿದ್ದರು. ಆ ಬಳಿಕವಷ್ಟೇ ಈ ವದಂತಿ ಅಂತ್ಯಗೊಂಡಿತ್ತು. ಆ ಸಂದರ್ಭದಲ್ಲಿ ನಟ ರಜನಿಕಾಂತ್ ಜೊತೆ ನನ್ನ ಮದುವೆ ಆಗಿದೆ ಎಂಬ ಸುದ್ದಿ ವ್ಯಾಪಕವಾಗಿ ಹಬ್ಬಿತ್ತು ಎಂದು ನಟಿ ಕವಿತಾ ಹೇಳಿಕೊಂಡಿದ್ದಾರೆ.

Read More

ಒಳ್ಳೆಯ ಹುಡುಗ ಪ್ರಥಮ್ (Pratham) ಮತ್ತೊಂದು ಹೊಸ ಸಿನಿಮಾವನ್ನು ಒಪ್ಪಿಕೊಂಡಿದ್ದಾರೆ. ಈ ಸಿನಿಮಾಗೆ ‘ಫಸ್ಟ್ ನೈಟ್ ವಿತ್ ದೇವ’ (First Night with Deva) ಎಂದು ಹಸರಿಡಲಾಗಿದೆ. ಈ ಚಿತ್ರದ ಮೂಲಕ ಕನ್ನಡಕ್ಕೆ ಮಿಸ್ ಇಂಡಿಯಾ ರನ್ನರ್ ಅಪ್ ಆಗಿರುವ ಮಾನ್ಯ ಸಿಂಗ್ (Manya Singh) ಎಂಟ್ರಿ ಕೊಡುತ್ತಿದ್ದಾರೆ. ನವೆಂಬರ್ 16ರಂದು ಈ ಸಿನಿಮಾಗೆ ಚಾಲನೆ ಸಿಗಲಿದೆ. ಪ್ರಥಮ್ ಡಬಲ್ ಸಂಭ್ರಮದಲ್ಲಿದ್ದಾರೆ. ಇದೇ ತಿಂಗಳು ಅವರ ಹೊಸ ಜೀವನಕ್ಕೆ ಕಾಲಿಡುತ್ತಿದ್ದಾರೆ. ಈ ನಡುವೆ ಹೊಸ ಸಿನಿಮಾವನ್ನೂ ಒಪ್ಪಿಕೊಂಡಿದ್ದಾರೆ. ಕ್ಯಾಚಿ ಟೈಟಲ್ ನಿಂದಾಗಿ ಸಿನಿಮಾ ಗಮನ ಸೆಳೆಯುತ್ತಿದೆ. ಈ ಹಿಂದೆ ಕರ್ನಾಟಕದ ಅಳಿಯ ಎಂಬ ಟೈಟಲ್ ಇಟ್ಟುಕೊಂಡು ಸಿನಿಮಾ ಮಾಡಿದ್ದ ಪ್ರಥಮ್, ಇದೀಗ ಫಸ್ಟ್ ನೈಟ್ ಗೆ ಸಿದ್ಧವಾಗಿದ್ದಾರೆ. ಈ ಸಿನಿಮಾದ ಮೂಲಕ ಕನ್ನಡಕ್ಕೆ ಬರುತ್ತಿರುವ ಮಾನ್ಯ ಈ ಹಿಂದೆ ಫೆಮಿನಾ ಮಿಸ್ ಇಂಡಿಯಾದಲ್ಲಿ ಭಾಗಿಯಾಗಿದ್ದರು. ತಂದೆ ಆಟೋ ರಿಕ್ಷಾ ಚಾಲಕ ಎನ್ನುವ ಕಾರಣಕ್ಕಾಗಿ ಸಾಕಷ್ಟು ಸುದ್ದಿ ಆಗಿದ್ದರು. ಇದೀಗ ಕನ್ನಡ ಚಿತ್ರದ…

Read More

ಬೆಳಗಾವಿ:- ಬಿಜೆಪಿಯಲ್ಲಿ ಯಡಿಯೂರಪ್ಪಗೆ ಇದ್ದಷ್ಟು ಆಕರ್ಷಣೆ ಯಾರಿಗೂ ಇಲ್ಲ ಎಂದು ಸಚಿವ ಸತೀಶ ಜಾರಕಿಹೊಳಿ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಕುಟುಂಬ ರಾಜಕಾರಣಕ್ಕೆ ಮಣೆ ಹಾಕುವುದಿಲ್ಲವೆಂದು ಬಿಜೆಪಿ ವರಿಷ್ಠರು ನಿಯಮ ಮಾಡಿದ್ದಾರಾದರೂ ಈಗ ಬಿ.ವೈ.ವಿಜಯೇಂದ್ರ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ಮಾಡಿ ಕುಟುಂಬ ರಾಜಕಾರಣಕ್ಕೆ ಮಣೆ ಹಾಕಲಾಗಿದೆ. ಮೊದಲು ಕಾಂಗ್ರೆಸ್‌ ಟೀಕೆ ಮಾಡುತ್ತಿದ್ದರು. ಈಗ ಅವರ ಪಕ್ಷದಲ್ಲಿಯೂ ವರಿಷ್ಠರ ಮಕ್ಕಳು ಶಾಸಕರು, ವಿಧಾನ ಪರಿಷತ್ ಸದಸ್ಯರು ಆಗಿದ್ದಾರೆ ಎಂದ ಅವರು, ಯಡಿಯೂರಪ್ಪ ಮಗ ಎಂದಾಕ್ಷಣ ಎಲ್ಲರೂ ಅವರ ಹಿಂದೆ ಬರುವುದಿಲ್ಲ. ಅಂತಹ ವ್ಯಕ್ತಿತ್ವ ಬೆಳೆಸಿಕೊಳ್ಳಬೇಕಾಗುತ್ತದೆ ಎಂದು ತಿಳಿಸಿದ್ದಾರೆ. ಬಿಜೆಪಿಯಲ್ಲಿ ಯಡಿಯೂರಪ್ಪ ಅವರಿಗಿದ್ದ ಆಕರ್ಷಣೆ ಯಾರಿಗೂ ಬರಲಾರದು. ಅದೇ ರೀತಿ ನಮ್ಮ ಪಕ್ಷದಲ್ಲಿ ಸಿದ್ದರಾಮಯ್ಯ ಅವರಿದ್ದಾರೆ. ಇನ್ನು ವಿಜಯೇಂದ್ರ ಅವರು ಕಲಿಯಬೇಕಾದದ್ದು ಬಹಳಷ್ಟಿದೆ. ಪಕ್ಷವೂ ಅವರನ್ನು ಸಾಕಷ್ಟು ಬಳಸಿಕೊಳ್ಳಬೇಕಿದೆ ಎಂದರಲ್ಲದೆ ವಿಜಯೇಂದ್ರ ನೇಮಕದಿಂದ ಕಾಂಗ್ರೆಸ್‌ಗೆ ಯಾವುದೇ ನಷ್ಟವಿಲ್ಲ ಖಚಿತವಾಗಿ

Read More