ಲಕ್ಷ್ಮಿ ಪೂಜಾ,ನರಕ ಚತುರ್ದಶಿ,ದೀಪಾವಳಿ ಸೂರ್ಯೋದಯ: 06.17 AM, ಸೂರ್ಯಾಸ್ತ : 05.50 PM ಶಾಲಿವಾಹನ ಶಕೆ1944, ಶುಭಕೃತ ನಾಮ ಸಂವತ್ಸರ, ಸಂವತ್2078 ಆಶ್ವಯುಜ ಮಾಸ, ಕೃಷ್ಣ ಪಕ್ಷ, ದಕ್ಷಿಣಾಯಣ, ಶರತ್ ಋತು, ತಿಥಿ: ಇವತ್ತು ಚತುರ್ದಶಿ 02:44 PM ತನಕ ನಂತರ ಅಮವಾಸ್ಯೆ ನಕ್ಷತ್ರ: ಇವತ್ತು ಚಿತ್ತ 01:47 AM ತನಕ ನಂತರ ಸ್ವಾತಿ ಯೋಗ: ಇವತ್ತು ಆಯುಷ್ಮಾನ್ 04:25 PM ತನಕ ನಂತರ ಸೌಭಾಗ್ಯ ಕರಣ: ಇವತ್ತು ವಿಷ್ಟಿ 02:25 AM ತನಕ ನಂತರ ಶಕುನಿ 02:44 PM ತನಕ ನಂತರ ಚತುಷ್ಪಾದ ರಾಹು ಕಾಲ: 04:30 ನಿಂದ 06:00 ವರೆಗೂ ಯಮಗಂಡ: 12:00 ನಿಂದ 01:30 ವರೆಗೂ ಗುಳಿಕ ಕಾಲ: 03:00 ನಿಂದ 04:30 ವರೆಗೂ ಅಮೃತಕಾಲ: 05.40 PM to 07.20 PM ಅಭಿಜಿತ್ ಮುಹುರ್ತ: ಬೆಳಗ್ಗೆ.11:37 ನಿಂದ ಮ.12:22 ವರೆಗೂ ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ. “ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು” ಸೋಮಶೇಖರ್…
Author: AIN Author
ಬೆಳಗಾವಿ:- ವೃತ್ತಿ ಘನತೆಯನ್ನು ಪತ್ರಕರ್ತರು ಎತ್ತಿ ಹಿಡಿಯಬೇಕು ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಪತ್ರಿಕಾರಂಗವು ಸಮಾಜ ತಿದ್ದುವ ಪಾತ್ರ ನಿರ್ವಹಿಸುತ್ತಿದೆ. ಸಮಾಜದಲ್ಲಿ ತೊಂದರೆ, ಸಮಸ್ಯೆಗಳಿದ್ದಲ್ಲಿ ಅಂತಹ ಕಡೆ ಬೆಳಕು ಚೆಲ್ಲುವ ಕೆಲಸಕ್ಕೆ ಮಾಧ್ಯಮ ಮುಂದಾಗಬೇಕು. ಪತ್ರಕರ್ತರು ತಮ್ಮ ವರದಿಗಳಿಂದ ವೃತ್ತಿ ಘನತೆಯನ್ನು ಎತ್ತಿ ಹಿಡಿಯಬೇಕು ಎಂದು ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರು ಕಿವಿಮಾತು ಹೇಳಿದರು. ಇಂದಿನ ಎಲೆಕ್ಟ್ರಾನಿಜ್ ಹಾಗೂ ಡಿಜಿಟಲ್ ಮಾಧ್ಯಮಗಳು ಸುದ್ದಿ ಭರಾಟೆ ಹೆಚ್ಚಾಗಿದ್ದು, ಮೂಲ ಸುದ್ದಿಯ ಸ್ವರೂಪವೇ ಬದಲಾಗಿ ಕೆಲವೊಮ್ಮೆ ಬೇರೆಯದೇ ಅರ್ಥ ಮೂಡಿಸುತ್ತಿದೆ. ಆದ್ದರಿಂದ ಮೂಲ ಸುದ್ದಿ ಅಥವಾ ಹೇಳಿಕೆಗಳು ಯಥಾವತ್ತಾಗಿ ವರದಿಯಾಗಬೇಕು ಎಂದು ಹೇಳಿದರು. ಪತ್ರಕರ್ತರು ತಮ್ಮ ಕುಟುಂಬ ಮಕ್ಕಳ ವಿದ್ಯಾಭ್ಯಾಸಗಳತ್ತ ಗಮನಹರಿಸಬೇಕು. ಬೆಳಗಾವಿ ನಗರದಲ್ಲಿ ಪತ್ರಿಕಾ ಭವನ ನಿರ್ಮಾಣಕ್ಕೆ ಜಿಲ್ಲಾಧಿಕಾರಿಗಳ ಜತೆಗೆ ಈಗಾಗಲೇ ಸಭೆ ನಡೆಸಿ ಚರ್ಚಿಸಲಾಗಿದೆ. ಸ್ಥಳ ಗೊಂದಲವಿರುವ ಕಾರಣ ವಿಳಂಬವಾಗಿದೆ. ಸ್ಥಳ ನಿಗದಿಯಾದ ತಕ್ಷಣವೇ ಭವನ ನಿರ್ಮಾಣಕ್ಕೆ ಸೂಚಿಸಲಾಗುವುದು ಎಂದು…
ಚಿತ್ರದುರ್ಗ:- ಬಿಜೆಪಿ ಸಮಾಜ ಒಡೆಯುವ ನೀತಿ ಹೊಂದಿದೆ ಎಂದು ಸಚಿವ ಸುಧಾಕರ್ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರಾಗಿ ಬಿ.ವೈ.ವಿಜಯೇಂದ್ರ ನೇಮಕಗೊಂಡಿರುವುದಕ್ಕೆ ಪ್ರತಿಕ್ರಿಯೆ ನೀಡಿದ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್, ‘ಹೊಸ ಬಾಟಲಿಗೆ ಹಳೆ ವೈನ್’ ಎಂದು ವ್ಯಂಗ್ಯವಾಡಿದ್ದಾರೆ. ಬಿಜೆಪಿ ಸಮಾಜ ಒಡೆಯುವ ನೀತಿ ಹೊಂದಿದೆ. ರಾಜ್ಯದಲ್ಲಿ ಬಿಜೆಪಿ ಅಧಿಕಾರ ಹಿಡಿಯಲು ಸಾಧ್ಯವಿಲ್ಲ. ಅವರ ಪಕ್ಷದ ಆಂತರಿಕ ವಿಚಾರದಲ್ಲಿ ಮೂಗು ತೂರಿಸುವುದಿಲ್ಲ’ ಎಂದರು. ಸಮಾಜದಲ್ಲಿರುವ ಎಲ್ಲ ಜಾತಿಯವರು ನಮ್ಮ ಪಕ್ಷದೊಂದಿಗೆ ಇದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ವಿಜಯೇಂದ್ರ ಅವರಿಗೆ ಹೋಲಿಕೆ ಮಾಡಲು ಸಾಧ್ಯವಿಲ್ಲ. ಪಕ್ಷ ಸಂಘಟನೆಯಲ್ಲಿ ಡಿ.ಕೆ.ಶಿವಕುಮಾರ್ ಅನುಭವ ದೊಡ್ಡದು’ ಎಂದು ಹೇಳಿದರು.
ದೀಪಾವಳಿಯಲ್ಲಿ ಪಟಾಕಿಗಳನ್ನು ಸಿಡಿಸಿ ಜನರು ತಮ್ಮ ಹಬ್ಬದ ಸಂಭ್ರಮವನ್ನು ಹೆಚ್ಚಿಸಿಕೊಳ್ಳುವುದು ಸಹಜ. ಅದೇ ರೀತಿ ದೀಪಾವಳಿ ಸಂದರ್ಭದಲ್ಲಿ ಕಣ್ಣುಗಳಿಗೆ ಹಾನಿ ಆಗುವ ಜತೆಗೆ ಜನರು ಸುಟ್ಟಗಾಯಗಳಿಗೆ ಒಳಗಾಗುವ ಅಪಾಯ ಕೂಡ ಅಧಿಕ. ಈ ಹಿನ್ನೆಲೆಯಲ್ಲಿ ತಜ್ಞರು ಒಂದಷ್ಟು ಮುನ್ನೆಚ್ಚರಿಕೆಗಳನ್ನು ಸೂಚಿಸುತ್ತಾರೆ. ದೀಪಾವಳಿ ಸಂದರ್ಭದಲ್ಲಿ ಪಟಾಕಿಗಳಿಂದ ಕಣ್ಣಿಗೆ ಗಾಯಗಳಾಗುವ ಪ್ರಕರಣ ಹೆಚ್ಚಾಗಿರುತ್ತದೆ. ದೀಪಾವಳಿಯಲ್ಲಿ ಕೈ ಮತ್ತು ಬೆರಳುಗಳ ನಂತರ ಕಣ್ಣುಗಳಿಗೇ ಅಪಾಯ ಜಾಸ್ತಿ. ಹೀಗಾಗಿ ಪಟಾಕಿಗಳ ಸಂತಸದಲ್ಲಿ ಕಣ್ಣಿನ ಸುರಕ್ಷತೆ ಬಗ್ಗೆಯೂ ಹೆಚ್ಚಿನ ಗಮನ ಇರಬೇಕು ಎಂದು ಡಾ.ಅಗರ್ವಾಲ್ಸ್ ಕಣ್ಣಿನ ಆಸ್ಪತ್ರೆಯ ಕ್ಲಿನಿಕಲ್ ಸೇವೆಗಳ ಮುಖ್ಯಸ್ಥೆ ಡಾ.ಬಿಂದಿಯಾ ಹಪಾನಿ ತಿಳಿಸಿದ್ದಾರೆ. ಪಟಾಕಿಗಳನ್ನು ಸಿಡಿಸುವವರು ಮಾತ್ರವಲ್ಲದೆ ನೋಡುಗರಿಗೂ ಅಪಾಯವಿದ್ದು, ಅವರಲ್ಲಿ ಶೇ. 50ಕ್ಕೂ ಹೆಚ್ಚು ಜನರು ಸಂಭಾವ್ಯ ಕಣ್ಣಿನ ಗಾಯಗಳನ್ನು ಎದುರಿಸುತ್ತಾರೆ ಎಂದಿರುವ ಅವರು ಒಂದಷ್ಟು ಮುನ್ನೆಚ್ಚರಿಕೆ ಹಾಗೂ ಸಲಹೆ-ಸೂಚನೆಗಳನ್ನು ನೀಡಿದ್ದಾರೆ. ಪಟಾಕಿಗಳಿಂದ ಕಣ್ಣುಗಳಿಗೆ ಆಗುವ ಗಾಯಗಳಿಂದ ಇಲ್ಲವೇ ಪಟಾಕಿ ಕಿಡಿಯ ಸ್ಪರ್ಶದಿಂದ ಕುರುಡುತನ ಉಂಟಾಗುವ ಸಾಧ್ಯತೆಯೂ ಇರುತ್ತದೆ. ಪಟಾಕಿಗಳಲ್ಲಿ ಗನ್ ಪೌಡರ್ನಲ್ಲಿ ಇರುವಂಥ…
ಬೆಂಗಳೂರು:- ಕೆಲಸ ಇಲ್ಲದೇ ಖಾಲಿ ಕೂತರೂ ವಿಚ್ಚೇದನ ಪತ್ನಿಗೆ ಪತಿ ಜೀವನಾಂಶ ಕೊಡಲೇಬೇಕು ಎಂದು ಹೈಕೋರ್ಟ್ ಹೇಳಿದೆ. ಜೀವನ ಪೂರ್ತಿ ಒಟ್ಟಿಗೆ ಬಾಳ್ವೆ ಮಾಡುವುದಾಗಿ ಮದುವೆಯಾಗಿ ಈಗ ಪತ್ನಿಯೊಂದಿಗೆ ಜೀವನ ಮಾಡಲು ಸಾಧ್ಯವಿಲ್ಲವೆಂದು ವಿಚ್ಛೇದನ ಪಡೆಯುವ ಪತಿರಾಯ, ತನಗೆ ದುಡಿಮೆಯಿಲ್ಲವೆಂದು ಅಥವಾ ಕೆಲಸವಿಲ್ಲವೆಂದು ಜೀವನಾಂಶ ಕೊಡುವುದನ್ನು ನಿರಾಕರಣೆ ಮಾಡುವಂತಿಲ್ಲ. ಹೀಗಾಗಿ, ವಿಚ್ಛೇದಿತ ಪತ್ನಿಗೆ ನೀವು ಹೇಗಾದರೂ ಮಾಡಿ ಜೀವನಾಂಶವನ್ನು ಕೊಡಲೇಬೇಕು ಎಂದು ನ್ಯಾಯಾಲಯ ತಿಳಿಸಿದೆ. ಕಳೆದ 2020ರಲ್ಲಿ ವಿವಾಹ ಆಗಿದ್ದ ದಂಪತಿಯ ದಾಂಪತ್ಯ ಕೆಲವೇ ತಿಂಗಳಲ್ಲಿ ಮುರಿದುಬಿದ್ದಿತ್ತು. ಇದರಿಂದಾಗಿ ಪರಸ್ಪರ ಒಪ್ಫಿಗೆ ಮೇರೆಗೆ ದಂಪತಿ ವಿಚ್ಛೇದನ ಪಡೆದಿದ್ದರು. ಈ ವೇಳೆ ಕುಟುಂಬ ನ್ಯಾಯಾಲಯದಲ್ಲಿ ದಂಪತಿ ಪರಸ್ಪರ ಒಪ್ಪಿದ್ದರಿಂದ ವಿಚ್ಚೇದನವನ್ನು ಊರ್ಜಿತ ಮಾಡಿತ್ತು. ಜೊತೆಗೆ, ಗೃಹಿಣಿಯಾಗಿದ್ದ ಪತ್ನಿಗೆ ಜೀವನ ನಿರ್ವಹಣೆಗೆ ಮಾಸಿಕ 10 ಸಾವಿರ ರೂಪಾಯಿ ಜೀವನಾಂಶ ನೀಡಬೇಕು ಎಂದು ಆದೇಶ ಹೊರಡಿಸಿತ್ತು. ಇದಾದ ನಂತರ ಕೆಲವು ತಿಂಗಳ ಕಾಲ ಜೀವನಾಂಶ ನೀಡಿದ್ದ ಪತಿರಾಯ ನಂತರ ತಾನು ಕೆಲಸಕ್ಕೆ ಹೋಗುವುದನ್ನು ಬಿಟ್ಟು ಮನೆಯಲ್ಲಿದ್ದನು.…
ಚನ್ನಪಟ್ಟಣ:- ಅಧಿಕಾರಿಗಳು ಪ್ರಾಮಾಣಿಕ ಜನಸೇವೆ ಮಾಡಿ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಜಿಲ್ಲೆಯಲ್ಲೆಡೆ ಬರ ಆವರಿಸಿದ್ದು, ಕೃಷಿ, ರೇಷ್ಮೇ ಹಾಗೂ ತೋಟಗಾರಿಕೆ ಇಲಾಖೆ ಅಧಿಕಾರಿಗಳು ಜವಾಬ್ದಾರಿಯಿಂದ ಕೆಲಸ ಮಾಡಿ ರೈತರಿಗೆ ನೆರವಾಗಬೇಕು ಎಂದರು. ಬಹುತೇಕ ಇಲಾಖೆಗಳಲ್ಲಿ ಸಿಬ್ಬಂದಿ ಕೊರತೆ ಇರುವುದು ಗಮನಕ್ಕೆ ಬಂದಿದೆ. ಮುಂದಿನ ದಿನಗಳಲ್ಲಿ ಸಿಬ್ಬಂದಿ ಕೊರತೆ ನೀಗಿಸಲು ಕ್ರಮ ಕೈಗೊಳ್ಳಲಾಗುವುದು. ಅಲ್ಲಿಯವರೆಗೆ ಲಭ್ಯ ಸಿಬ್ಬಂದಿಯೊಂದಿಗೆ ಸಾರ್ವಜನಿಕ ಕೆಲಸಗಳಿಗೆ ಅಡ್ಡಿಯಾಗದಂತೆ ಕಾರ್ಯನಿರ್ವಹಿಸುವಂತೆ ಸೂಚಿಸಿದರು. ಅಧಿಕಾರಿಗಳು ಯಾವುದೇ ಒತ್ತಡಗಳಿಗೆ ಒಳಗಾಗದೆ ಪ್ರಾಮಾಣಿತೆಯಿಂದ ಸಾರ್ವಜನಿಕರ ಸಮಸ್ಯೆಗಳನ್ನು ಬಗೆಹರಿಸಬೇಕು. ನಾನು ಎಂದಿಗೂ ಕಾನೂನು ಬಾಹಿರ ಕೆಲಸ ಮಾಡಲು ಅವಕಾಶ ನೀಡಿಲ್ಲ. ಹಿಂದೆ ಹೇಗೆ ಕೆಲಸ ಮಾಡಿದಿರೋ ಗೊತ್ತಿಲ್ಲ, ಇನ್ನು ಮುಂದೆ ಬದ್ಧತೆಯಿಂದ ಕೆಲಸ ಮಾಡಿ ಎಂದು ತಾಕೀತು ಮಾಡಿದರು. ತಾಲೂಕಿನಲ್ಲಿ ಅತಿ ಹೆಚ್ಚು ಸಮಸ್ಯೆಗಳು ಸೃಷ್ಟಿಯಾಗುವುದೇ ಕಂದಾಯ ಇಲಾಖೆಯಲ್ಲಿ. ಕಂದಾಯ ಇಲಾಖೆ ಅಧಿಕಾರಿಗಳು ರೈತರನ್ನು ಕಚೇರಿಗೆ ಅಲೆದಾಡಿಸಬೇಡಿ. ಲಂಚಕ್ಕಾಗಿ ಪೀಡಿಸದೇ ಅವರ ಸಂಕಷ್ಟ ಅರಿತು ಕೆಲಸ ಕಾರ್ಯಗಳನ್ನು ತ್ವರಿವಾಗಿ…
ಬೆಂಗಳೂರು:- ಸತೀಶ್ ಜಾರಕಿಹೊಳಿ ಕೆಪಿಸಿಸಿ ಅಧ್ಯಕ್ಷ ಆಗುತ್ತಾರೆ, ಡಿಸಿಎಂ ಆಗ್ತಾರೆ ಎಂಬ ವಿಚಾರದ ಬಗ್ಗೆ ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೆ ನೀಡಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಸದ್ಯಕ್ಕೆ ಯಾವ ಚರ್ಚೆಯೂ ಇಲ್ಲ. ಎಲ್ಲರೂ ಚುನಾವಣೆಯಲ್ಲಿ ಬಿಜಿಯಾಗಿದ್ದಾರೆ. ಅದೇನೆ ಇದ್ರೂ ಹೈಕಮಾಂಡ್ ತೀರ್ಮಾನ ಮಾಡಬೇಕು. ಅಂತಹ ಚರ್ಚೆ ಈಗ ಸದ್ಯಕ್ಕೆ ನಡೆಯುತ್ತಿಲ್ಲ. ಚುನಾವಣೆ ಮುಗಿದ ಮೇಲೆ ಏನಾಗುತ್ತದೆ, ಮುಗಿದ ಮೇಲೆ ಏನು ಮಾಡ್ತಾರೆ ಕಾದುನೋಡಬೇಕಿದೆ ಎಂದು ಹೇಳಿದರು. ಇನ್ನೂ ಬೆಳಗಾವಿ ರಾಜಕಾರಣದಲ್ಲಿ ಹೊರಗಿನವರ ಹಸ್ತಕ್ಷೇಪದ ವಿಚಾರದಲ್ಲಿ ಬುಸುಗುಡುತ್ತಿರುವ ಸಚಿವ ಸತೀಶ್ ಜಾರಕಿಹೊಳಿ ಅವರು ಇದೀಗ ಮತ್ತೊಮ್ಮೆ ತಮ್ಮ ಆಕ್ಷೇಪವನ್ನು ಹೊರಹಾಕಿದ್ದಾರೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಜತೆ ಹೊಂದಾಣಿಕೆ ಮಾಡಿಕೊಳ್ಳುವ ಮಾತೇ ಇಲ್ಲ ಎಂದರು. ʻʻಡಿ.ಕೆ ಶಿವಕುಮಾರ್ ಅವರು ನಮ್ಮ ಮನೆಗೆ ಸುಮಾರು ಬಾರಿ ಬಂದಿದ್ದಾರೆ. ಈ ವೇಳೆ ಪಕ್ಷದ ವಿಚಾರ ಮತ್ತು ಅಭಿವೃದ್ಧಿ ವಿಚಾರದ ಕುರಿತು ಚರ್ಚೆ ಆಗಿದೆʼʼ ಎಂದು ಹೇಳಿದ ಅವರು, ನಾವು ಮೈಸೂರಿಗೆ ಭೇಟಿ ನೀಡುವ ವಿಚಾರವೇ ಬೇರೆ,…
ಬೆಂಗಳೂರು:- ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಜನರ ಸಮಸ್ಯೆ ಆಲಿಸಲು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಆಹ್ವಾನ ನೀಡಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಚಿಕ್ಕಬಾಣಾವರ ಕೆರೆ ಯಾವ ಸ್ಥಿತಿಯಲ್ಲಿದೆ ಎಂದು ನೋಡಿದ್ದೇನೆ. ಉಪಮುಖ್ಯಮಂತ್ರಿ ಈ ಜಿಲ್ಲೆಯ ಉಸ್ತುವಾರಿ ಸಚಿವರಾಗಿದ್ದಾರೆ. ಅವರು ಬೆಂಗಳೂರು ನೋಡುತ್ತಿರುತ್ತಾರೆ. ರಸ್ತೆ ಹಾಳಾಗಿದೆ, ಕುಡಿಯುವ ನೀರಿನ ಸಮಸ್ಯೆ ಇದೆ. ಕೆರೆ ಹೂಳು ತುಂಬಿದೆ. ಅಭಿವೃದ್ಧಿಗೆ ಹಣ ಬಿಡುಗಡೆ ಮಾಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ಅಭಿವೃದ್ಧಿ ಕಾರ್ಯಗಳಿಗೆ ಯಾವುದೆ ಅನುದಾನ ಬಿಡುಗಡೆ ಮಾಡಿಲ್ಲ. ಮುಖ್ಯಮಂತ್ರಿ ನಗರೋತ್ಥಾನ ಅಭಿವೃದ್ಧಿ ಅಡಿಯಲ್ಲಿ 110 ಹಳ್ಳಿಗೆ ಬಿಡುಗಡೆ ಆಗಿದ್ದ ಹಣ ವಾಪಸ್ ಪಡೆದಿದ್ದಾರೆ. ಪೀಣ್ಯ ಕೈಗಾರಿಕಾ ಪ್ರದೇಶವು ಏಷ್ಯಾದಲ್ಲೆ ಅತಿ ಹೆಚ್ಚು ತೆರಿಗೆ ನೀಡುತ್ತದೆ. ಆ ಪ್ರದೇಶವನ್ನೆ ಸರಕಾರ ಕಡೆಗಣನೆ ಮಾಡಿದೆ ಎಂದು ಯಡಿಯೂರಪ್ಪ ಆಕ್ರೋಶ ವ್ಯಕ್ತಪಡಿಸಿದರು. ಕಾವೇರಿ ನೀರು ಸರಬರಾಜು ಸರಿಯಾಗಿ ನಡೆದಿಲ್ಲ. ಒಳಚರಂಡಿ ಸಂಪೂರ್ಣ ಹಾಳಾಗಿದೆ. ರಸ್ತೆ ಗುಂಡಿ ಮುಚ್ಚುವ ಕೆಲಸ ನಡೆಯುತ್ತಿಲ್ಲ. ಚಿಕ್ಕಬಾಣಾವರ ಕೆರೆ ಒಳಚರಂಡಿ, ತಾಜ್ಯದಿಂದ ತುಂಬಿದೆ. ಇದರ…
ಬೆಂಗಳೂರು:-ಮಾದನಾಯಕನಹಳ್ಳಿ ಪೊಲೀಸ್ ಠಾಣ ವ್ಯಾಪ್ತಿಯ ಸಿದ್ದನಹೊಸಹಳ್ಳಿಯಲ್ಲಿ ಬೈಕ್ಗಳ ನಡುವೇ ಭೀಕರ ಅಪಘಾತವಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಜರುಗಿದೆ. ಒಂದು ಬೈಕ್ ವೇಗವಾಗಿಬರುತ್ತದೆ, ಈ ವೇಳೆ ಎದುರುಗಡೆಯಿಂದ ಬರುವ ಟಿಟಿ ತಪ್ಪಿಸಲು ಹೋಗಿ ಪಕ್ಕದಲ್ಲಿ ಬರುತ್ತಿದ್ದ ಮತ್ತೊಂದು ಬೈಕ್ಗೆ ಡಿಕ್ಕಿ ಹೊಡೆದಿದೆ. ಕುಡಿತದ ಅಮಲಿನಲ್ಲಿದ್ದವನ ಅತೀಯಾಟಕ್ಕೆ ತಾನೂ ಸಾವನ್ನಪ್ಪಿದ್ದು, ರಾಜಸ್ಥಾನ ಮೂಲದ ಕೂಲಿ ಕಾರ್ಮಿಕನ ಪ್ರಾಣ ತೆಗೆದಿದ್ದಾನೆ. ಇಲ್ಲಿ ಸಾವನ್ನಪ್ಪಿರೋದು ಓರ್ವ ರಾಜಸ್ಥಾನ ಮೂಲದ ರಾಜೇಶ್ ಹಾಗೂ ಮತ್ತೊಬ್ಬ ಬೆಂಗಳೂರು ಉತ್ತರ ತಾಲೂಕು ಹೆಗ್ಗಡದೇವನಪುರ ನಿವಾಸಿ ಧನರಾಜ್ ಎಂದು ತಿಳಿದು ಬಂದಿದೆ. ಕೂಡಲೇ ಸ್ಥಳಕ್ಕೆ ಬಂದ ಮಾದನಾಯಕನಹಳ್ಳಿ ಪೊಲೀಸರು ಅಂಬ್ಯೂಲನ್ಸ್ ಮುಖಾಂತರವಾಗಿ ನೆಲಮಂಗಲ ಸಾರ್ವಜನಿಕ ಆಸ್ಪತ್ರೆಯ ಶವಗಾರಕ್ಕೆ ಮೃತ ದೇಹಗಳನ್ನು ಸಾಗಿಸಿದ್ದಾರೆ. ಮತ್ತಿಬ್ಬರು ಗಂಭೀರ ಗಾಯಗಳೊಂದಿಗೆ ಪಾರಾಗಿದ್ದಾರೆ. ಇನ್ನು ಈ ಅಪಘಾತದ ಭೀಕರ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಬೆಂಗಳೂರು:- ಕೇರಳದಲ್ಲಿ ಜೆಡಿಎಸ್ ಕಾರ್ಯಕಾರಣಿ ಸಭೆಯನ್ನು ನ. 15 ರಂದು ಆಯೋಜಿಸಿದ್ದು, ಸಭೆಯಲ್ಲಿ ಯಾರು ಹಾಜರಾಗದಂತೆ ಮಾಜಿ ಪ್ರಧಾನಿ ಹೆಚ್ಡಿ ದೇವೇಗೌಡ ಸೂಚನೆ ನೀಡಿದ್ದಾರೆ. ಪತ್ರ ಬರೆದಿರುವ ಗೌಡ್ರು, JDS ರಾಷ್ಟ್ರೀಯ ಉಪಾಧ್ಯಕ್ಷ ಸಿ.ಕೆ ನಾನು ಕರೆದ ಸಭೆಗೆ ಹಾಜರಾಗಬೇಡಿ. ಕರೆದಿರುವ ಸಭೆ ಅಧಿಕೃತ ಸಭೆ ಅಲ್ಲ, ಯಾರು ಕೂಡ ಹಾಜರಾಗಬಾರದು ಎಂದು ಜೆಡಿಎಸ್ ರಾಷ್ಟ್ರೀಯ ಕಾರ್ಯಕಾರಣಿ ಸದಸ್ಯರಿಗೆ ಪತ್ರ ಬರೆಯಲಾಗಿದೆ. JDS ರಾಷ್ಟ್ರೀಯ ಉಪಾಧ್ಯಕ್ಷ ಸಿ.ಕೆ ನಾನು ಅವರು 15 ನವೆಂಬರ್ ರಂದು ಬೆಳಿಗ್ಗೆ 10 ಗಂಟೆಗೆ ಕೇರಳ ಆರ್ಟ್ಸ್ ಮತ್ತು ಕ್ರಾಫ್ಟ್ಸ್ ವಿಲೇಜ್, ವೆಲ್ಲರ್, ತಿರುವನಂತಪುರದಲ್ಲಿ ಜನತಾ ದಳ ಪಕ್ಷದ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಸಭೆಯನ್ನು ಆಯೋಜಿಸಿದ್ದಾರೆ. ಸಿ.ಕೆ ನಾನು ಅವರು ಕರೆದಿರುವ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯೂ ಯಾವುದೇ ಅಧಿಕಾರವಿಲ್ಲದೆ ಮತ್ತು ಜೆಡಿಎಸ್ ಪಕ್ಷದ ಸಂವಿಧಾನದ ಪರಿಚ್ಛೇದದ ಉಲ್ಲಂಘನೆಯಾಗಿದೆ. ಅಂತಹ ಸಭೆ ನಡೆಸಲು ಪಕ್ಷದ ರಾಷ್ಟ್ರೀಯ ಅಧ್ಯಕ್ಷರ ಅನುಮತಿ ಇಲ್ಲ. ಹೀಗಾಗಿ ಇದೊಂದು ಅನಧಿಕೃತ ಸಭೆ ಆಗಿದೆ. ಆದ್ದರಿಂದ,…