ಧಾರವಾಡ: ಅಳಿದು ತೂಗಿ ಕೊನೆಗೂ ರಾಜ್ಯ ಬಿಜೆಪಿ ಘಟಕಕ್ಕೆ ಬಿಜೆಪಿ ಹೈಕಮಾಂಡ ನಾಯಕರು ನೂತನ ರಾಜ್ಯಧ್ಯಕ್ಷರನ್ನು ಆಯ್ಕೆ ಮಾಡಿದ್ದು, ಜನಪ್ರತಿನಿಧಿಗಳು ಈ ವಿಷಯದ ಕುರಿತು ತಮ್ಮದೆಯಾದ ರೀತಿಯಲ್ಲಿ ಪ್ರತಿಕ್ರಿಯೆ ನೀಡುತ್ತಿದ್ದಾರೆ. ಆದರೆ ಹು-ಧಾ ಪಶ್ಚಿಮ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಶಾಸಕ ಅರವಿಂದ ಬೆಲ್ಲದವರು ಮಾಧ್ಯಮದ ಮುಂದೆ ತಮ್ಮ ಪ್ರತಿಕ್ರಿಯೆ ನೀಡಲು ನಿರಾಕರಿಸಿದ್ದು, ಸ್ವಪಕ್ಷೀಯ ಹೈಲಮಾಡ ನಡೆಗೆ ಶಾಸಕ ಬೆಲ್ಲದ ಅವರು ಅಸಮಧಾನಗೊಂಡ್ರಾ ಎಂಬ ಪ್ರಶ್ನೆ ಹುಟ್ಡು ಹಾಕಿದೆ. ನಗರದ ಖಾಸಗಿ ಕಾಲೇಜಿನ ಕಾರ್ಯಕ್ರಮದಲ್ಲಿ ಭಾಗವಹಿಸಿದ ಸಂದರ್ಭದಲ್ಲಿ ಪ್ರತಿಕ್ರಿಯೆ ಕೇಳಲು ಮಾಧ್ಯಮವರು ತೆರಳಿದರು. ಆದರೆ ಇದಕ್ಕೆ ಶಾಸಕ ಅರವಿಂದ ಬೆಲ್ಲದ ಅವರು ಮೌನವಾಗಿಯೇ ಸಾಗಿದ್ದಾರೆ. ಈ ಹಿಂದೆಯು ಶಾಸಕ ಅರವಿಂದ ಬೆಲ್ಲದವರು ಸಿಎಂ ರೇಸ್ನಲ್ಲಿದ್ದರು. ಆದರೆ ಕೊನೆಯ ಕ್ಷಣದಲ್ಲಿ ಅವರನ್ನು ಬಿಜೆಪಿ ಹೈಕಮಾಂಡ್ ಕೈಬಿಟ್ಟಿತ್ತು. ಆದರೆ ಇದಕ್ಕೆ ಬಿಎಸ್ವೈ ಅವರೇ ಅಡಗಾಲು ಹಾಕಿದ್ದರು ಎಂಬ ಮಾತುಗಳು ಕೇಳಿ ಬಂದಿದ್ದವು. ಈಗ ಬಿಎಸ್ವೈ ಪುತ್ರ ಬಿ ವೈ ವಿಜೆಯೇಂದ್ರನಿಗೆ ರಾಜ್ಯಾಧ್ಯಕ್ಷ ಸ್ಥಾನ ನೀಡಲಾಗಿದ್ದು,…
Author: AIN Author
ಬಿಗ್ ಬಾಸ್ ಶೊ ನಲ್ಲಿ ಮತ್ತೊಂದು ವಿವಾದ..! ವಿವಾದಾತ್ಮಕ ಹೇಳಿಕೆ ನೀಡಿದ ಬಿಗ್ ಬಾಸ್ ಸ್ಪರ್ಧಿ ತನಿಷಾ..? ಮಾತಿನ ನಡುವೆ ಸಹ ಸ್ಪರ್ಧಿ ಡ್ರೋನ್ ಪ್ರತಾಪ್ ಗೆ ವಿವಾದಾತ್ಮಕ ಪದ ಬಳಕೆ https://ainlivenews.com/rashmika-mandanna-deepfake-video-case-fir-filed-by-delhi-police/ ಡ್ರೋನ್ ಪ್ರತಾಪ್ ಮತ್ತು ವರ್ತೂರು ಸಂತೋಷ್ ಜೊತೆಯಲ್ಲಿನ ಸಂಭಾಷಣೆ ವೇಳೆ ಪದ ಬಳಕೆ ವಡ್ಡ ಅಲ್ಲ ವಡ್ಡನ ತರ ಆ್ಯಕ್ಟ್ ಮಾಡ್ತಿದ್ಯಾ ಅಂತಾ ವಿವಾದಾತ್ಮಕ ಹೇಳಿಕೆ ಸ್ಪರ್ಧಿ ತನಿಷಾ ಮೇಲೆ ಬೋವಿ ಸಮಾಜದಿಂದ ದೂರು ನೀಡಲು ನಿರ್ಧಾರ ಬಿಗ್ ಬಾಸ್ ಮನೆ ಮುಂದೆ ಪ್ರತಿಭಟನೆಗೆ ಸಜ್ಜಾದ ಬೋವಿ ಸಮಾಜ ಕುಂಬಳಗೋಡು ಪೊಲೀಸ್ ಠಾಣೆಯಲ್ಲಿ ದೂರು ನೀಡಲು ಸಜ್ಜಾದ ಬೋವಿ ಸಮಾಜದ ಸದಸ್ಯರು
ದಾವಣಗೆರೆ: ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿ.ವೈ.ವಿಜಯೇಂದ್ರ ಆಯ್ಕೆ ಹಿನ್ನೆಲೆ ದಾವಣಗೆರೆ ಜಿಲ್ಲೆಯ ಹೊನ್ನಾಳಿ ಪಟ್ಟಣದಲ್ಲಿ ಬಿಜೆಪಿ ಕಾರ್ಯಕರ್ತರ ಸಂಭ್ರಮಾಚರಣೆ ಜೋರಾಗಿದೆ. ನಗರದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಮಾಲಾರ್ಪಣೆ ಮಾಡಿದ ಕಾರ್ಯಕರ್ತರು. ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಾಚರಣೆ ಮಾಡಿದ್ದಾರೆ. ಬಿ.ವೈ.ವಿಜಯೇಂದ್ರ ಪರ ಘೋಷಣೆ ಕೂಗಿ ಹರ್ಷ ವ್ಯಕ್ತ ಪಡಿಸಿದ ಕಾರ್ಯಕರ್ತರು.
ಬಳ್ಳಾರಿ: ನಗರದ ತಾಳೂರು ರಸ್ತೆಯಲ್ಲಿರುವ ನೂತನ ನ್ಯಾಯಾಲಯ ಸಂಕಿರ್ಣದಲ್ಲಿರುವ ಬಾರ್ ಅಸೋಷಿಯೇಷನ್ ಕಟ್ಟಡವನ್ನು ಮುಖ್ಯ ನ್ಯಾಯಮೂರ್ತಿಗಳಾದ ಪ್ರಸನ್ನ ಒರಳಿ ಅವರ ಸಹಯೋಗದೊಂದಿಗೆ ಕಾನೂನು ಸಚಿವ ಎಚ್.ಕೆ.ಪಾಟೀಲ್ ಅವರಿಂದ ಉದ್ಘಾಟನೆ ಮಾಡಲಾಯಿತು. ೨೦೯೧ ಚದುರ ವಿಸ್ತಿರ್ಣದಲ್ಲಿ ಅಚ್ಚುಕಟ್ಟಾಗಿ ನಿರ್ಮಾಣಗೊಂಡಿರುವ ಬಾರ್ ಅಸೋಷಿಯೆಷನ್ ಸಂಕಿರ್ಣವಾಗಿದ್ದು, ೧೮೮೫ ರಲ್ಲಿ ಬಳ್ಳಾರಿಯಲ್ಲಿ ಲಾ ಲೈಬ್ರೇರಿಯನ್ನು ಬ್ರಿಟೀಷ್ ಅಧಿಕಾರಿ ಹೊಲ್ಡಿಂಗ್ ಅವರು ಪ್ರಾರಂಭಿಸುತ್ತಾರೆ. ಅದನ್ನೆ ಮುಂದುವರೆಸಿ ೧೯೨೭ ರಲ್ಲಿ ಬಾರ್ ಅಸೋಷಿಯೆಷನಾಗಿ ಬಳ್ಳಾರಿಯಲ್ಲಿ ಪ್ರಾರಂಭಿಸಲಾಯಿತು. ಹೀಗೆ ಹಲವು ವಿಧ್ಯಮಾನಗಳನ್ನು ಹೊಂದಿರುವ ಬಳ್ಳಾರಿ ವಕೀಲರ ಸಂಘದ ಬಗ್ಗೆ ಜಿಲ್ಲಾಧ್ಯಕ್ಷ ಕೆ.ಎರ್ರಿಗೌಡ ಅವರು ತಿಳಿಸಿದರು.
ಬೆಂಗಳೂರು: ಎಲ್ಲರೂ ಒಗ್ಗೂಡಿ ಬೂತ್ ಮಟ್ಟದಲ್ಲಿ ಪಕ್ಷವನ್ನು ಸಂಘಟಿಸುತ್ತೇವೆ ಎಂದು ಬೆಂಗಳೂರಿನಲ್ಲಿ ಬಿಜೆಪಿ ನೂತನ ರಾಜ್ಯಾಧ್ಯಕ್ಷ ವಿಜಯೇಂದ್ರ ಹೇಳಿದರು. ರಾಷ್ಟ್ರೀಯ ನಾಯಕರು ಕೂಡ ಬೂತ್ ಮಟ್ಟದಲ್ಲಿ ಕೆಲಸ ಮಾಡಿದ್ದಾರೆ. ಬೂತ್ ಮಟ್ಟದಲ್ಲಿ ಕೆಲಸ ಮಾಡಿ ಇಂದು ದೊಡ್ಡ ಮಟ್ಟಕ್ಕೆ ಬೆಳೆದಿದ್ದಾರೆ. ಬೂತ್ ಗೆದ್ದರೇ ರಾಷ್ಟ್ರ ಗೆಲ್ತೇವೆ ಎಂದು ನಡ್ಡಾ ಅವರ ಕಲ್ಪನೆ ಇದೆ. ಹೀಗಾಗಿ ಬೂತ್ ಮಟ್ಟದಲ್ಲಿ ಪಕ್ಷ ಸಂಘಟಿಸುತ್ತೇವೆ ಎಂದರು. https://ainlivenews.com/b-y-regarding-appointment-of-vijayendra-p-c-what-did-mohan-say/ ಬೆಂಗಳೂರಿನಲ್ಲಿ (Bengaluru) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೂತ್ ಮಟ್ಟದಲ್ಲಿ ಪಕ್ಷ ಸಂಘಟನೆಯ ದೃಷ್ಟಿಯಿಂದ ಪಕ್ಷದ ರಾಜ್ಯಾಧ್ಯಕ್ಷನಾದ ಮೊದಲ ದಿನವೇ ಬೂತ್ ಅಧ್ಯಕ್ಷ ಶಶಿಧರ್ ಮನೆಗೆ ಬಂದಿದ್ದೇನೆ. ಈಗಿನ ಘಟಾನುಘಟಿ ನಾಯಕರೆಲ್ಲ ಬೂತ್ ಅಧ್ಯಕ್ಷರಾಗಿ ಬಂದವರು. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಿಗೆ ಸಿಗುವ ಗೌರವ ಬೂತ್ ಅಧ್ಯಕ್ಷರಿಗೂ ಸಿಗುತ್ತಿದೆ ಎಂದು ಅವರು ಹೇಳಿದ್ದಾರೆ. ಕಾಂಗ್ರೆಸ್ ಸರ್ಕಾರದಿಂದ ಬಿಜೆಪಿ ಕಾರ್ಯಕರ್ತರ ಮೇಲೆ ಕೇಸ್ ದಾಖಲಿಸಿದ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ನಮ್ಮ ಯಾವುದೇ ಕಾರ್ಯಕರ್ತರು ಹೋರಾಟಕ್ಕೆ ಹೆದರಿ ಕೂರುವವರಲ್ಲ. ಕಾಂಗ್ರೆಸ್ ಪಕ್ಷದವರು ಏನು…
ಬೆಂಗಳೂರು: ಕಳೆದ ಐದಾರು ತಿಂಗಳಿನಿಂದ ಖಾಲಿ ಇದ್ದ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ಪುತ್ರ ಬಿ.ವೈ.ವಿಜಯೇಂದ್ರ ಆಯ್ಕೆ ಆಗಿದ್ದಾರೆ. ಲಿಂಗಾಯತ ಸಮುದಾಯ ಪಕ್ಷದ ಹಿಡಿತದಿಂದ ತಪ್ಪಿಹೋಗದಂತೆ ಬಿ.ವೈ.ವಿಜಯೇಂದ್ರಗೆ ರಾಜ್ಯಾಧ್ಯಕ್ಷ ಪಟ್ಟ ಕಟ್ಟಲಾಗಿದೆ. ಈ ಮೂಲಕ ಲೋಕಸಭಾ ಚುನಾವಣೆಗೆಯೂ ಸಿದ್ಧತೆ ನಡೆದಿದೆ. https://ainlivenews.com/we-didnt-expect-vijayendra-to-get-the-post-of-state-president-bsy/ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿ.ವೈ. ವಿಜಯೇಂದ್ರ ನೇಮಕ ಹಿನ್ನೆಲೆ ಬೆಂಗಳೂರಿನಲ್ಲಿ ಸಂಸದ ಪಿ.ಸಿ. ಮೋಹನ್ ಪ್ರತಿಕ್ರಿಯೆ ನೀಡಿದ್ದಾರೆ. ವಿಜಯೇಂದ್ರ ಪಕ್ಷದಲ್ಲಿ ಸುಮಾರು ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಮುಂಬರುವ ಲೋಕಸಭಾ ಚುನಾವಣೆ ಅವರ ನೇತೃತ್ವದಲ್ಲಿ ನಡೆಯಲಿದೆ. ರಾಜ್ಯಾಧ್ಯಕ್ಷ ಸ್ಥಾನಕ್ಕೆ ಕೆಲವರ ಆಸೆಗಳು ಸಹಜ. ಹಾಗಂತ ಪಕ್ಷದಲ್ಲಿ ಯಾವುದೇ ಅಸಮಾಧಾನ ಇಲ್ಲ. ಎಲ್ಲರನ್ನು ಒಟ್ಟಿಗೆ ತೆಗೆದುಕೊಂಡು ಹೋಗುವ ಶಕ್ತಿ ವಿಜಯೇಂದ್ರಗಿದೆ ಎಂದರು.
ಹುಬ್ಬಳ್ಳಿ: ಬಿಜೆಪಿಯವರು ಸಾಕಷ್ಟು ಭ್ರಮೆಯಲ್ಲಿದ್ದಾರೆ, ಈಗಾಗಲೇ ಬೇರೆ ಕಡೆ ಆಪರೇಷನ್ ಕಮಲ ಮಾಡಲು ಹೋಗಿ ಕೈ ಸುಟ್ಟುಕೊಂಡಿದ್ದಾರೆ ಎಂದು ಹುಬ್ಬಳ್ಳಿಯಲ್ಲಿ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 50-60 ಶಾಸಕರನ್ನು ಕರೆದುಕೊಂಡು ಬಂದು ಮತ್ತೆ ಸರ್ಕಾರ ರಚನೆ ಮಾಡುವ ಭ್ರಮೆಯಲ್ಲಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆ ಹಿಂದೆ ಏನೆ ಕಾರಣ ಇರಲಿ, ಅದಕ್ಕೆ ಜನ ಉತ್ತರ ನೀಡುತ್ತಾರೆ. ಈಗ ಸಿದ್ದರಾಮಯ್ಯ ಮುಖ್ಯ ಮಂತ್ರಿ ಇದ್ದಾರೆ. ಪವರ್ ಶೇರಿಂಗ್ ಬಗ್ಗೆ ಯಾರೋ ಮಾತನಾಡುತ್ತಾರೆ ಅಂತಾ ಚರ್ಚೆ ಮಾಡುವುದು ಸರಿಯಲ್ಲಾ. ಅದು ಬರೀ ಚರ್ಚೆ ಆಗುತ್ತೆ. ಪಂಚ ರಾಜ್ಯದ ಚುನಾವಣೆ ಫಲಿತಾಂಶ ಕಾಂಗ್ರೆಸ್ ಪರವಾಗಿ ಇರಲಿದೆ ಎಂದು ಶೆಟ್ಟರ್ ಹೇಳಿದರು. ಇನ್ನೂ ವಿಜಯೇಂದ್ರ ರಾಜಾಧ್ಯಕ್ಷರಾಗಿ ಆಯ್ಕೆ ಆಗಿರುವ ಬಗ್ಗೆ ಮಾತನಾಡಿದ ಶೆಟ್ಟರ್, ಇವಗ್ಯಾಕೆ ಬಿಜೆಪಿ ರಾಜ್ಯಾಧ್ಯಕ್ಷ ಆಯ್ಕೆ ಆಯ್ತು, ಏನೋ ಅತ್ತು ಕರೆದು ಮಾಡಿರೋ ತರಹ ಕಾಣತ್ತೆ ಎಂದು ವ್ಯಂಗ್ಯವಾಡಿದರು. ಕಳೆದ ಆರು ತಿಂಗಳಿಂದ ಬಿಜೆಪಿ ನಾಯಕನ ಆಯ್ಕೆ ಮಾಡಿರಲಿಲ್ಲ, ರಾಜಕೀಯ…
ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ ಅವರ ಡೀಪ್ಫೇಕ್ ಎಐ-ರಚಿಸಿದ ವೀಡಿಯೋಗೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಶುಕ್ರವಾರ ಎಫ್ಐಆರ್ ದಾಖಲಿಸಿದ್ದಾರೆ. ವಿಶೇಷ ಸೆಲ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ದೆಹಲಿ ಪೊಲೀಸರು ಸಂಬಂಧಿತ ಸೆಕ್ಷನ್ಗಳ ಅಡಿಯಲ್ಲಿ FIR ದಾಖಲಿಸಿದ್ದಾರೆ. ಈ ವಿಷಯದ ಬಗ್ಗೆ ತನಿಖೆಯನ್ನು ನಡೆಸಲಾಗುತ್ತಿದೆ. ರಶ್ಮಿಕಾ ಮಂದಣ್ಣ ಅವರ ತಿರುಚಿದ ವಿಡಿಯೋಗೆ ಸಂಬಂಧಿಸಿದಂತೆ, ಐಪಿಸಿಯ ಯು/ಎಸ್ 465 ಮತ್ತು 469, 1860 ಮತ್ತು ಐಟಿ ಆಕ್ಟ್, 2000 ರ ಸೆಕ್ಷನ್ 66 ಸಿ ಮತ್ತು 66 ಇ ಅಡಿಯಲ್ಲಿ ದೆಹಲಿ ಪೊಲೀಸ್ ವಿಶೇಷ ಕೋಶದಲ್ಲಿ FIR ದಾಖಲಿಸಲಾಗಿದೆ. ಅರೆಬೆತ್ತಲಾಗಿದ್ದ ಮಹಿಳೆಯೊಬ್ಬರ ವೀಡಿಯೋಗೆ ನಟಿ ರಶ್ಮಿಕಾ ಅವರ ಮುಖ ಸೇರಿಸಿ ಡೀಪ್ಫೇಕ್ ವೀಡಿಯೋ ಮಾಡಲಾಗಿತ್ತು. ಇದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಇದಕ್ಕೆ ರಶ್ಮಿಕಾ ಮಂದಣ್ಣ ಸೇರಿ ಖ್ಯಾತ ನಟರು ಸಹ ಆಕ್ರೋಶ ವ್ಯಕ್ತಪಡಿಸಿದ್ದರು. ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದರು. ದೆಹಲಿ ಮಹಿಳಾ ಆಯೋಗ ಕೂಡ…
ಕಾರವಾರ: ಖಾಸಗಿ ಚಾನಲ್ ಒಂದರ ರಿಯಾಲಿಟಿ ಶೋನಲ್ಲಿ ಈ ಹಿಂದೆ ಭಾಗವಹಿಸಿದ್ದ ಸ್ಪರ್ಧಿಯೊಬ್ಬನನ್ನು ಕಳ್ಳತನ ಆರೋಪದ ಮೇಲೆ ಪೊಲೀಸರು (Police) ಬಂಧಿಸಿದ್ದಾರೆ. ಅಂಕೋಲದ (Ankola) ಬಾಳೆಗದ್ದೆ ಗ್ರಾಮದ ಯುವಕ ಭಾಸ್ಕರ್ ಸಿದ್ದಿ ಬಂಧನಕ್ಕೊಳಗಾದ ಆರೋಪಿಯಾಗಿದ್ದಾನೆ. ಈತ ಯಲ್ಲಾಪುರದ ಅಂಗಡಿ ಒಂದರಲ್ಲಿ ಹಣವನ್ನು ಕಳ್ಳತನ ಮಾಡಿದ್ದ. https://ainlivenews.com/great-job-opportunity-in-hindustan-aeronautics-limited-posting-in-bangalore/ ಆರೋಪಿ ಹಣ ಕದಿಯುತ್ತಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ಸಿಸಿಟಿವಿ ದೃಶ್ಯಾವಳಿಗಳ ಆಧಾರದಲ್ಲಿ ಆತನನ್ನು ಬಂಧಿಸಲಾಗಿದೆ. ಆತ ಈ ಹಿಂದೆ ಖಾಸಗಿ ಚಾನಲ್ ಒಂದರ ರಿಯಾಲಿಟಿ ಶೋನಲ್ಲಿ ಭಾಗಿಯಾಗಿದ್ದ. ಆರೋಪಿಯಿಂದ ಕಳ್ಳತನ ಮಾಡಿದ್ದ 14,300 ರೂ. ವಶಕ್ಕೆ ಪಡೆಯಲಾಗಿದೆ. ಈ ಸಂಬಂಧ ಯಲ್ಲಾಪುರ (Yellapur) ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತೆಲುಗು (Telugu) ಸಿನಿಮಾ ರಂಗದ ಖ್ಯಾತ ನಟ ಚಂದ್ರ ಮೋಹನ್ (Chandra Mohan) ಹೃದಯಾಘಾತದಿಂದ (Heart attack) ನಿಧನರಾಗಿದ್ದಾರೆ (Death). 82ರ ವಯಸ್ಸಿನ ಚಂದ್ರಮೋಹನ್ ಅವರು ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದರು. ಹೈದರಾಬಾದ್ ನ ಖಾಸಗಿ ಆಸ್ಪತ್ರೆಗೆ ಅವರನ್ನು ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಚಿಕಿತ್ಸೆ ಫಲಕಾರಿಯಾಗಿ ವಿಧಿವಶರಾಗಿದ್ದಾರೆ. ತೆಲುಗು ಚಿತ್ರೋದ್ಯಮದಲ್ಲಿ ದಾಖಲೆ ಎನ್ನುವಷ್ಟು ಸಿನಿಮಾಗಳಲ್ಲಿ ಚಂದ್ರ ಮೋಹನ್ ನಟಿಸಿದ್ದಾರೆ. ಈವರೆಗೂ 900ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಅವರು ನಟಿಸಿದ್ದಾರೆ. 1966ರಲ್ಲಿ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿದ್ದ ಅವರು, ರಂಗುಲ ರತ್ನಂ ಚಿತ್ರಕ್ಕೆ ಮೊದಲ ಬಾರಿಗೆ ಬಣ್ಣ ಹಚ್ಚಿದ್ದರು. ಆನಂತರ ತಿರುಗಿ ನೋಡಿದ ಇತಿಹಾಸವೇ ಇರಲಿಲ್ಲ. ನೂರಾರು ಸಿನಿಮಾಗಳಲ್ಲಿ ನಾಯಕರಾಗಿ, ಅನೇಕ ಚಿತ್ರಗಳಲ್ಲಿ ಸಹ ನಟರಾಗಿ ಕೆಲಸ ಮಾಡಿದ್ದಾರೆ. ಹಾಸ್ಯ ಪಾತ್ರಗಳ ಮೂಲಕ ಹೆಚ್ಚಾಗಿ ಅಭಿಮಾನಿಗಳನ್ನು ರಂಜಿಸಿದ್ದರು ಚಂದ್ರಮೋಹನ್. ಹಿರಿಯ ನಟನ ನಿಧನಕ್ಕೆ ಅನೇಕ ಸಿನಿಮಾ ನಟರು, ನಟಿಯರು ಹಾಗೂ ತಂತ್ರಜ್ಞರು ಸಂತಾಪ ಸೂಚಿಸಿದ್ದಾರೆ. ರಾಜಕೀಯ ಗಣ್ಯರು ಕೂಡ ಕಂಬನಿ ಮಿಡಿದಿದ್ದಾರೆ.