Author: AIN Author

ಮಖಾನ ಎಂದು ಕರೆಯಲ್ಪಡುವ ಲೋಟಸ್‌ ಅಥವಾ ಫಾಕ್ಸ್ ಸೀಡ್ಸ್ ಹಲವರಿಗೆ ಅಪರಿಚಿತ. ಇದು ಯಾವುದೋ ಹೊಸ ಹೆಸರು ಎಂದು ತಿಳಿದು ಕೊಳ್ಳುವವರಿಗೆ ತಾವರೆ ಬೀಜಗಳು ಎಂದು ಸುಲಭವಾಗಿ ಹೇಳಬಹುದು. ತಮ್ಮಲ್ಲಿನ ಅಸಂಖ್ಯಾತ ಆರೋಗ್ಯ ಪ್ರಯೋಜನಗಳನ್ನು ಮನುಷ್ಯರಿಗೆ ಒದಗಿಸುವ ಕೆಲಸ ಮಖಾನ ಬೀಜಗಳದ್ದು. ಚೀನಾ ದೇಶದಲ್ಲಿ ಇವುಗಳನ್ನು ಔಷಧಿ ತಯಾರಿಕೆಯಲ್ಲಿ ಉಪಯೋಗ ಮಾಡುತ್ತಾರೆ.  ಮೂತ್ರ ಪಿಂಡಗಳು ಮತ್ತು ಗುಲ್ಮ ಸಂಬಂಧಿತ ಕಾಯಿಲೆಗಳಿಂದ ಬಳಲುತ್ತಿರುವವರು ಇವುಗಳನ್ನು ಸೇವಿಸಬಹುದು. ಇನ್ನು ಡ್ರೈ ಫ್ರೂಟ್ ಗಳಾದ ಬಾದಾಮಿ ಬೀಜಗಳು, ವಾಲ್ನಟ್, ಗೋಡಂಬಿ ಬೀಜಗಳೂ ಕೂಡ ಫಾಕ್ಸ್ ಸೀಡ್ಸ್ ಗೆ ಹೋಲಿಸಿದರೆ, ಪೌಷ್ಟಿಕ ಸತ್ವಗಳಲ್ಲಿ ತಳಹದಿಯಲ್ಲಿ ನಿಂತಿರುತ್ತವೆ. ಫಾಕ್ಸ್ ಸೀಡ್ಸ್ ಗಳ ಸೇವನೆ ವಿಷಯಕ್ಕೆ ಬಂದರೆ ಇವುಗಳ ಮೇಲೆ ಕೆಲವು ಮಸಾಲೆ ಪದಾರ್ಥಗಳನ್ನು ಸಿಂಪಡಿಸಿ ಹುರಿದು ತಿನ್ನಬಹುದು. ಇವು ನಾಲಿಗೆಗೆ ಬಹಳ ರುಚಿ ಕೊಡುತ್ತವೆ. ಫಾಕ್ಸ್ ಸೀಡ್ಸ್ ಗಳ ಹಲವಾರು ಆರೋಗ್ಯ ಪ್ರಯೋಜನಗಳು ಈ ರೀತಿ ಇವೆ ಡಯಟ್ ಮಾಡುವವರಿಗೆ ಸಹಕಾರಿ ಮಖಾನ ಬೀಜಗಳಲ್ಲಿ ಪ್ರೋಟೀನ್ ಅಂಶ ಅಧಿಕವಾಗಿದೆ.…

Read More

ಬೆಂಗಳೂರು ಗ್ರಾಮಾಂತರ ಜಿಲ್ಲೆ: ಮೊಬೈಲ್ ರಿಪೇರಿ ಮತ್ತು ಸೇವೆ ಕುರಿತು 30 ದಿನಗಳ ಉಚಿತ ತರಬೇತಿಗೆ ಅರ್ಜಿ ಆಹ್ವಾನ ಮಾಡಲಾಗಿದೆ. ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್‌ ಮತ್ತು ಕೆನರಾ ಬ್ಯಾಂಕ್‌ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್‌ಸೆಟ್‌ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿರುವ ಮೊಬೈಲ್‌ ರಿಪೇರಿ & ಸೇವೆ ಕುರಿತ 30 ದಿನಗಳ ಉಚಿತ ತರಬೇತಿಯು ಡಿಸೆಂಬರ್ 13 ರಿಂದ ಪ್ರಾರಂಭವಾಗಲಿದ್ದು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ ಹಾಗೂ ತುಮಕೂರು ಜಿಲ್ಲಾ ವ್ಯಾಪ್ತಿಯ ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವಕ-ಯುವತಿಯರು ಅರ್ಜಿ ಸಲ್ಲಿಸಬಹುದಾಗಿದೆ. ಆಸಕ್ತರು 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಬಿಪಿಎಲ್‌ ಕಾರ್ಡ್‌ ಅಥವಾ ಜಾಬ್‌ ಕಾರ್ಡ್‌ ಹಾಗೂ ಆಧಾರ್‌ ಕಾರ್ಡ್‌ನ್ನು ಕಡ್ಡಾಯವಾಗಿ ಹೊಂದಿರುವ ಗ್ರಾಮೀಣ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು. ಅರ್ಜಿ ಸಲ್ಲಿಸಲು ಡಿಸೆಂಬರ್‌ 10 ಕೊನೆಯ ದಿನವಾಗಿದೆ. ತರಬೇತಿಯು ಕಡ್ಡಾಯವಾಗಿ ವಸತಿಯುತವಾಗಿದ್ದು, ತರಬೇತಿಯ ಅವಧಿಯಲ್ಲಿ ಉಚಿತವಾಗಿ ಊಟ ಮತ್ತು ವಸತಿ ನೀಡಲಾಗುವುದು ಹಾಗೂ…

Read More

ಬೆಂಗಳೂರು:- ರಾಜಧಾನಿ ಬೆಂಗಳೂರಿನಲ್ಲಿ ದೀಪಾವಳಿಗೆ ಪಟಾಕಿ ಸಿಡಿಸಲು ಕೇವಲ 2 ಗಂಟೆ ಮಾತ್ರ ಅವಕಾಶ ನೀಡಲಾಲಾಗಿದೆ ಎಂದು ದಯಾನಂದ್ ಹೇಳಿದ್ದಾರೆ. ದೀಪಾವಳಿ ಹಬ್ಬದ ಸಂದರ್ಭದಲ್ಲಿ ಹಸಿರು ಪಟಾಕಿ ಮಾರಾಟ ಹಾಗೂ ಬಳಕೆಗೆ ಮಾತ್ರ ಅವಕಾಶವಿದೆ. ಈ ಬಗ್ಗೆ ನಿಗಾ ವಹಿಸಲು ಎಸಿಪಿ ನೇತೃತ್ವದಲ್ಲಿ ವಿಶೇಷ ಕಾರ್ಯಪಡೆ ರಚಿಸಲಾಗಿದೆ. ನಿಯಮ ಉಲ್ಲಂಘಿಸಿದವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು’ ಎಂದರು. ‘ನಗರದಲ್ಲಿರುವ 62 ಮೈದಾನಗಳಲ್ಲಿ ಪಟಾಕಿ ಮಾರಾಟಕ್ಕೆ ವ್ಯವಸ್ಥೆ ಮಾಡಲಾಗಿದೆ. ಹಸಿರು ಪಟಾಕಿ ಮಾರಲು ಅನುಮತಿ ಕೋರಿ 912 ವ್ಯಾಪಾರಿಗಳು ಅರ್ಜಿ ಸಲ್ಲಿಸಿದ್ದರು. ಈ ಪೈಕಿ, 263 ವ್ಯಾಪಾರಿಗಳಿಗೆ ಈಗಾಗಲೇ ಪರವಾನಗಿ ನೀಡಲಾಗಿದೆ’ ಎಂದು ಅವರು ತಿಳಿಸಿದರು.

Read More

ವಿಶ್ವಕಪ್​ ಟೂರ್ನಿಯ 42ನೇ ಪಂದ್ಯದಲ್ಲಿ ಅಫ್ಘಾನಿಸ್ತಾನ ವಿರುದ್ಧ ದಕ್ಷಿಣ ಆಫ್ರಿಕಾ 5 ವಿಕೆಟ್​ಗಳ ಜಯ ದಾಖಲಿಸಿತು. ಈಗಾಗಲೇ ಹರಿಣಗಳ ಪಡೆ ಸಮೀಸ್​ನಲ್ಲಿ ತನ್ನ ಸ್ಥಾನವನ್ನು ಖಚಿತಪಡಿಸಿಕೊಂಡಿದ್ದರೆ, ಆಫ್ಘಾನ್​ ಸೋಲಿನೊಂದಿಗೆ ಗ್ರೂಪ್​ ಹಂತದ ಲೀಗ್​ ಅಭಿಯಾನವನ್ನು ಕೊನೆಗೊಳಿಸಿತು. ಟಾಸ್​ ಗೆದ್ದು ಬ್ಯಾಟಿಂಗ್​ ಆರಂಭಿಸಿದ ಆಫ್ಘಾನ್​ ಪಡೆ ನಿಗದಿತ 50 ಓವರ್​​ಗಳಲ್ಲಿ 50 10 ವಿಕೆಟ್​ ನಷ್ಟಕ್ಕೆ 244 ರನ್​ ಕಲೆಹಾಕಿತು. ತಂಡದ ಪರ ಅಜ್ಮತುಲ್ಲಾ ಒಮರ್ಜಾಯ್ (97 ರನ್​, 107 ಎಸೆತ, 7 ಬೌಂಡರಿ, 3 ಸಿಕ್ಸರ್​) ಹೊರತುಪಡಿಸಿದರೆ, ಉಳಿದ ಯಾವೊಬ್ಬ ಬೌಲರ್​ಗಳು ಕೂಡ ನಿರೀಕ್ಷಿತ ಪ್ರದರ್ಶನವನ್ನು ನೀಡಲಿಲ್ಲ. ದಕ್ಷಿಣ ಆಫ್ರಿಕಾ ಪರ ಮಾರಕ ಬೌಲಿಂಗ್​ ದಾಳಿ ನಡೆಸಿದ ಜೆರಾಲ್ಡ್ ಕೊಯೆಟ್ಜಿ ಪ್ರಮುಖ 4 ವಿಕೆಟ್​ ಕಬಳಿಸಿದರು. ಉಳಿದಂತೆ ಲುಂಗಿ ಎನ್ಗಿಡಿ ಮತ್ತು ಕೇಶವ್​ ಮಹಾರಾಜ್​ ತಲಾ ಎರಡೆರಡು ವಿಕೆಟ್​ ಕಬಳಿಸಿದರೆ, ಆಂಡಿಲೆ ಫೆಹ್ಲುಕ್ವಾಯೊ ಒಂದು ವಿಕೆಟ್​ಗೆ ತೃಪ್ತಿಪಟ್ಟುಕೊಂಡರು. ಆಫ್ಘಾನ್​ ಪಡೆ ನೀಡಿದ 245 ರನ್​ಗಳ ಸವಾಲಿನ ಗುರಿ ಬೆನ್ನತ್ತಿದ ದಕ್ಷಿಣ ಆಫ್ರಿಕಾ,…

Read More

ಲಂಡನ್‌: ಬ್ರಿಟನ್‌ ಪ್ರಧಾನ ಮಂತ್ರಿ ಹಾಗೂ ಭಾರತದ ಅಳಿಯ ರಿಷಿ ಸುನಕ್ (Rishi Sunak) ಅವರು ಡೌನಿಂಗ್ ಸ್ಟ್ರೀಟ್‌ಗೆ ಹಿಂದೂ ಸಮುದಾಯದ ಅತಿಥಿಗಳನ್ನು ಸ್ವಾಗತಿಸಿ ದೀಪಾವಳಿ (Diwali) ಹಬ್ಬ ಆಚರಿಸಿದ್ದಾರೆ. ಯುಕೆ ಪ್ರಧಾನ ಮಂತ್ರಿ ಕಚೇರಿಯು ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ, ಪ್ರಧಾನ ಮಂತ್ರಿ ರಿಷಿ ಸುನಾಕ್ ಅವರು ದೀಪಾವಳಿಗೆ ಹಿನ್ನೆಲೆಯಲ್ಲಿ ಡೌನಿಂಗ್ ಸ್ಟ್ರೀಟ್‌ಗೆ ಹಿಂದೂ ಸಮುದಾಯದ ಅತಿಥಿಗಳನ್ನು ಸ್ವಾಗತಿಸಿದರು. ಇದು ಕತ್ತಲೆಯ ವಿರುದ್ಧ ಬೆಳಕಿನ ವಿಜಯೋತ್ಸವದ ಆಚರಣೆಯಾಗಿದೆ ಎಂದು ಪೋಸ್ಟ್‌ ಮಾಡಿದೆ. ಈ ವಾರಾಂತ್ಯದಿಂದ ಯುಕೆ ಮತ್ತು ಪ್ರಪಂಚದಾದ್ಯಂತ ಆಚರಿಸುತ್ತಿರುವ ಎಲ್ಲರಿಗೂ ಶುಭ ದೀಪಾವಳಿ ಎಂದು ಪೋಸ್ಟ್‌ನಲ್ಲಿ ಬರೆಯಲಾಗಿದೆ. ಪೋಸ್ಟ್‌ ಜೊತೆ ದೀಪಾವಳಿ ಆಚರಣೆಯ ಫೋಟೊಗಳನ್ನು ಸಹ ಹಂಚಿಕೊಳ್ಳಲಾಗಿದೆ. ಬ್ರಿಟನ್‌ ಪ್ರಧಾನಿ ರಿಷಿ ಸುನಾಕ್‌ ಮತ್ತು ಅವರ ಪತ್ನಿ ಅಕ್ಷತಾ ಮೂರ್ತಿ (Akshata Murty) ದೀಪಗಳನ್ನು ಬೆಳಗಿದ್ದಾರೆ. https://twitter.com/10DowningStreet/status/1722363484518674781?ref_src=twsrc%5Etfw%7Ctwcamp%5Etweetembed%7Ctwterm%5E1722363484518674781%7Ctwgr%5Ea1942d0ddc4c7f4ba4a2cce7fb17c8a5a4528581%7Ctwcon%5Es1_&ref_url=https%3A%2F%2Fpublictv.in%2Frishi-sunak-wife-akshata-murty-host-special-diwali-event%2F ಅವರೊಟ್ಟಿಗೆ ಭಾರತ ಮೂಲದ ನಾರಿಯರು ಸಹ ದೀಪಾವಳಿ ಆಚರಣೆಯಲ್ಲಿ ಪಾಲ್ಗೊಂಡಿದ್ದರು. ಎಲ್ಲರಿಗೂ ದೀಪಾವಳಿ ಶುಭಾಶಯಗಳು ಎಂದು ಪ್ರಧಾನಿ ಕಚೇರಿ ವಿಶ್‌ ಮಾಡಿದೆ. ದೀಪಾವಳಿಯು…

Read More

ಶಿವಪೂರ್ಣ(ಲೋಕೇಶ್) ಹಾಗೂ ಮುತ್ತುರಾಜ್ ನಿರ್ಮಾ‌ಣ ಮಾಡುತ್ತಿರುವ, ಆರೋನ್ ಕಾರ್ತಿಕ್ ನಿರ್ದೇಶನದ ಹಾಗೂ ಸೂಪರ್ ಸ್ಟಾರ್ ರಜನಿಕಾಂತ್ ಆಪ್ತಮಿತ್ರ ರಾಜ್ ಬಹದ್ದೂರ್ ಪ್ರಮುಖಪಾತ್ರದಲ್ಲಿ ನಟಿಸುತ್ತಿರುವ “ಶಿವಾಜಿ ಬಹದ್ದೂರ್” ಚಿತ್ರದ ಮುಹೂರ್ತ ಸಮಾರಂಭ ಹಾಗೂ ಪತ್ರಿಕಾಗೋಷ್ಠಿ ಇತ್ತೀಚೆಗೆ ನಡೆಯಿತು. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಎನ್ ಎಂ ಸುರೇಶ್, ಹಿರಿಯ ನಟ ಮುಖ್ಯಮಂತ್ರಿ ಚಂದ್ರು, ನಿರ್ದೇಶಕ ಹೆಚ್ ವಾಸು, ಸ್ವಸ್ತಿಕ್ ಶಂಕರ್, ನಟ ಷಣ್ಮುಖ ಗೋವಿಂದರಾಜು, ಗಾಯಕ ಆಲೂರು ನಾಗಪ್ಪ, ಸಿರಿ ಮ್ಯೂಸಿಕ್ ಚಿಕ್ಕಣ್ಣ ಸೇರಿದಂತೆ ಸಾಕಷ್ಟು ಗಣ್ಯರು ಮುಹೂರ್ತ ಸಮಾರಂಭಕ್ಕೆ ಆಗಮಿಸಿ ಚಿತ್ರತಂಡಕ್ಕೆ ಶುಭ ಕೋರಿದರು. “ಶಿವಾಜಿ ಬಹದ್ದೂರ್” ಎಂದರೆ ಎರಡು ಪಾತ್ರಗಳ ಹೆಸರು ಎಂದು ಮಾತನಾಡಿದ ನಿರ್ದೇಶಕ ಆರೋನ್ ಕಾರ್ತಿಕ್, ನಮ್ಮ ಚಿತ್ರದಲ್ಲಿ ಶಿವಾಜಿ ಎಂಬುದು ಪ್ರಧಾನ ಮಂತ್ರಿ ಪಾತ್ರದ ಹೆಸರು. ಬಹದ್ದೂರ್ ಎಂದರೆ ಮುಖ್ಯಮಂತ್ರಿ ಪಾತ್ರದ ಹೆಸರು. ಶಿವಾಜಿ ಪಾತ್ರದ ಧ್ವನಿ ಮಾತ್ರ ಸಿನಿಮಾದಲ್ಲಿ ಕೇಳುತ್ತದೆ. ಬಹದ್ದೂರ್ ಅಂದರೆ ಮುಖ್ಯಮಂತ್ರಿ ಪಾತ್ರದಲ್ಲಿ ರಾಜ್ ಬಹದ್ದೂರ್ ನಟಿಸುತ್ತಿದ್ದಾರೆ. ಪ್ರಪಂಚಕ್ಕೆ ಮಾರಕವಾಗಿರುವ…

Read More

ಬೆಂಗಳೂರು:- ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿವೈ ವಿಜಯೇಂದ್ರ ಆಯ್ಕೆ ಆಗಿರುವ ವಿಚಾರವಾಗಿ ಮಾಜಿ ಸಚಿವ ಆರ್ ಅಶೋಕ್ ಪ್ರತಿಕ್ರಿಯೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಅಳೆದು ತೂಗಿ ನಾಯಕತ್ವ ಕೊಟ್ಟಿದ್ದಾರೆ, ಇನ್ನಷ್ಟು ಸಕ್ರಿಯವಾದ ಯಡಿಯೂರಪ್ಪ ಭಾಗಿಯಾಗಲಿದ್ದಾರೆ, ಕೇಂದ್ರದ ಘೋಷಣೆ ತುಂಬು ಹೃದಯದ ಸ್ವಾಗತ. ಹಳೆ ಚಿಗುರು ಹೊಸಬೇರು ಕೂಡಿರಲು ಮರ ಸೊಬಗು ಎನ್ನುವಂತಹ ಹೊಸತನ ಬರಬೇಕು, ಹಳಬರನ್ನೂ ಒಟ್ಟಿಗೆ ತೆಗೆದುಕೊಂಡ ಹೋಗಲು ಈ ನೇಮಕ ಆಗಿದೆ, ವಿಜಯೇಂದ್ರ ಎಲ್ಲರನ್ನೂ ಒಟ್ಟಿಗೆ ತೆಗೆದುಕೊಂಡು ಹೋಗಲಿದ್ದಾರೆ. ವಿಶ್ವಾಸದಿಂದ ಹೋಗಲಿದ್ದಾರೆ. ನಮಗೆ ಪಕ್ಷ, ಸಿದ್ದಾಂತ ಮುಖ್ಯ,ವ್ಯಕ್ತಿ ಅಲ್ಲ. ಪ್ರತಿಪಕ್ಷ ನಾಯಕನ ಆಯ್ಕೆಯೂ ಶುಕ್ರವಾರ ಆಗಲಿದೆ, ಬಿಜೆಪಿಯವರೇ ಆಯ್ಕೆಯಾಗಲಿದ್ದಾರೆ, ಇದರಲ್ಲಿ ಸಮುದಾಯ ಮುಖ್ಯ ಅಲ್ಲ, ಜಾತಿ ಗಿಂತ ಸದನದಲ್ಲಿ ಆಡಳಿತ ಪಕ್ಷ ಎದುರಿಸಲು ಸಮರ್ಥ ವ್ಯಕ್ತಿ ಆಯ್ಕೆಯಾಗಲಿದೆ, ಗುಟ್ಟುಬಿಡದೆ ಆಯ್ಕೆ ಮಾಡಲಿದೆ ಅದನ್ನೂ ನಾವು ಸ್ವಾಗತ ಮಾಡಲಿದ್ದೇವೆ ಎಂದರು.

Read More

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷಾಗಿ ಆಯ್ಕೆ ಆಗಿರುವ ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಅವರ ಪುತ್ರ ಬಿವೈ ವಿಜಯೇಂದ್ರ ಅವರಿಗೆ ವಿಧಾನಪರಿಷತ್ ಸದಸ್ಯ ಹಾಗೂ ಜೆಡಿಎಸ್ ಮುಖಂಡ ಟಿಎ ಶರವಣ ಅವರು ಅಭಿನಂದನೆ ಸಲ್ಲಿಸಿದ್ದಾರೆ. ಈ ಸಂಬಂಧ ಸಾಮಾಜಿಕ ಜಾಲತಾಣಗಳಲ್ಲಿ ಬರೆದುಕೊಂಡಿರುವ ಟಿಎ ಶರವಣ ಅವರು, ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಆಯ್ಕೆ ಆಗಿರುವ ಶಿಕಾರಿಪುರದ ಶಾಸಕರು ಆತ್ಮೀಯರಾದ ಸನ್ಮಾನ್ಯ ಶ್ರೀ ಬಿ ವೈ ವಿಜಯೇಂದ್ರ ರವರಿಗೆ ಹೃತ್ಪೂರ್ವಕ ಅಭಿನಂದನೆಗಳು ಎಂದು ಪೋಸ್ಟ್ ಮಾಡಿದ್ದಾರೆ ಇನ್ನೂ ರಾಜ್ಯ ಬಿಜೆಪಿ ರಾಜ್ಯಾಧ್ಯಕ್ಷ ರಾಗಿ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಪುತ್ರ ಬಿವೈ ವಿಜಯೇಂದ್ರ ನೇಮಕವಾಗಿದ್ದಾರೆ. ಈ ಸಂಬಂಧ ಜೆಪಿ ನಡ್ಡಾ ಅವರು ಶುಕ್ರವಾರ ಅಧಿಕೃತ ಆದೇಶ ಹೊರಡಿಸಿದ್ದಾರೆ. ಈ ಮೂಲಕ ಲಿಂಗಾಯತ ಸಮುದಾಯಕ್ಕೆ ರಾಜ್ಯಾಧ್ಯಕ್ಷ ಪಟ್ಟ ಒಲಿದಿದೆ. ಬಿಜೆಪಿಯಲ್ಲಿ ಮತ್ತೆ ಮಾಜಿ ಸಿಎಂ ಯಡಿಯೂರಪ್ಪ ಅಧಿಪತ್ಯ ಸಾಧಿಸಿದ್ದಾರೆ.

Read More

ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಎಚ್‌ಎಎಲ್ ಇಂಡಿಯಾ ಅಧಿಕೃತ ಅಧಿಸೂಚನೆಯ ಅಕ್ಟೋಬರ್ 2023 ರ ಮೂಲಕ ಡೆಪ್ಯೂಟಿ ಮ್ಯಾನೇಜರ್, ಇಂಜಿನಿಯರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಬೆಂಗಳೂರು – ಕರ್ನಾಟಕ ಸರ್ಕಾರದಲ್ಲಿ ವೃತ್ತಿಯನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು 30-Nov-2023 ಅಥವಾ ಮೊದಲು ಆಫ್‌ಲೈನ್‌ನಲ್ಲಿ ಅನ್ವಯಿಸಬಹುದು. HAL ಇಂಡಿಯಾ ಹುದ್ದೆಯ ಅಧಿಸೂಚನೆ ಸಂಸ್ಥೆಯ ಹೆಸರು: ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (HAL) ಹುದ್ದೆಗಳ ಸಂಖ್ಯೆ: 84 ಉದ್ಯೋಗ ಸ್ಥಳ: ಬೆಂಗಳೂರು – ಕರ್ನಾಟಕ ಹುದ್ದೆಯ ಹೆಸರು: ಉಪ ವ್ಯವಸ್ಥಾಪಕರು, ಇಂಜಿನಿಯರ್ ವೇತನ: HAL ಭಾರತದ ನಿಯಮಗಳ ಪ್ರಕಾರ HAL ಇಂಡಿಯಾ ಹುದ್ದೆಯ ವಿವರಗಳು ಸೀನಿಯರ್ ಟೆಸ್ಟ್ ಪೈಲಟ್/ಟೆಸ್ಟ್ ಪೈಲಟ್- 2 ಮುಖ್ಯ ವ್ಯವಸ್ಥಾಪಕ- 1 ಹಿರಿಯ ವ್ಯವಸ್ಥಾಪಕ- 1 ಉಪ ವ್ಯವಸ್ಥಾಪಕರು- 44 ಮ್ಯಾನೇಜರ್- 5 ಹಣಕಾಸು ಅಧಿಕಾರಿ- 6 ಭದ್ರತಾ ಅಧಿಕಾರಿ- 9 ಅಧಿಕಾರಿ- 1 ಇಂಜಿನಿಯರ್- 12 ಅಗ್ನಿಶಾಮಕ ಅಧಿಕಾರಿ-…

Read More

ನಾವು ಹೋಟೆಲ್‍ನಲ್ಲಿ ಮಾಡುವ ಅಡುಗೆಗಳನ್ನು ಮನೆಯಲ್ಲಿ ಮಾಡಿ ಸವಿಯಬೇಕು ಎಂದು ಟ್ರೈ ಮಾಡುತ್ತಿರುತ್ತೇವೆ. ಇಡ್ಲಿ ಜೊತೆಗೆ ಕೊಡುವ ಸಾಂಬಾರ್‌ ಎಂದರೆ ಹಲವರಿಗೆ ಇಷ್ಟ.   ಸಾಂಬಾರ್ ಜೊತೆ ಇಡ್ಲಿ  ತಿನ್ನಲು ತುಂಬಾ ರುಚಿಯಾಗಿರುತ್ತದೆ. ಕೇವಲ 15 ನಿಮಿಷಗಳಲ್ಲಿ ಈ ಇಡ್ಲಿ, ಸಾಂಬಾರ್ ಮಾಡಲು ಟ್ರೈ ಮಾಡಬಹುದಾಗಿದೆ. ಬೇಕಾಗುವ ಸಾಮಗ್ರಿಗಳು: * ಹಸಿರು ಮೆಣಸಿನಕಾಯಿ – 4 * ಟೊಮ್ಯಾಟೋ – 3 * ಸಾಸಿವೆ – 1ಚಮಚ * ಕೊತ್ತಂಬರಿ- ಸ್ವಲ್ಪ * ಒಣ ಮೆಣಸಿನಕಾಯಿ- 2 * ಕರಿಬೇವು- ಸ್ವಲ್ಪ * ಜೀರಿಗೆ – 1 ಚಮಚ * ಮೆಂತ್ಯ – ಅರ್ಧ ಚಮಚ * ಈರುಳ್ಳಿ – 2 * ಹುಣಸೆ ಹಣ್ಣು- ಸ್ವಲ್ಪ * ತರಕಾರಿಗಳು -ನಿಮ್ಮ ಆಯ್ಕೆ * ಅರಿಶಿಣ ಪುಡಿ – ಸ್ವಲ್ಪ * ಮೆಣಸಿನ ಪುಡಿ – 1 ಚಮಚ * ಅಡುಗೆ ಎಣ್ಣೆ – 1 ಚಮಚ * ಸಾಂಬಾರ್ ಪುಡಿ –…

Read More