ಹಿರಿಯ ನಾಗರಿಕರಿಗೆ ಕೇಂದ್ರ ಸರ್ಕಾರ ಸಾಕಷ್ಟು ಯೋಜನೆಗಳನ್ನು ಜಾರಿಗೆ ತಂದಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಹೀಗಾಗಲೇ ಜಾರಿಗೆ ತಂದಿರುವ ಸಾಕಷ್ಟು ಯೋಜನೆಗಳನ್ನು ಹಿರಿಯ ನಾಗರಿಕರು ಸದುಪಯೋಗ ಪಡೆದುಕೊಂಡಿದ್ದಾರೆ. https://ainlivenews.com/lokarpana-to-sri-shivayogi-kartru-gaddu-at-bellavi-kara-math/ ಪ್ರಯಾಣವನ್ನು ಹೆಚ್ಚು ಕೈಗೆಟುಕುವಂತೆ ಮಾಡುವ ಮೂಲಕ ಕಡಿಮೆ ಆದಾಯದ ಮೇಲೆ ಅವಲಂಬಿತವಾಗಿರುವ ಹಿರಿಯ ನಾಗರಿಕರಿಗೆ ಆರ್ಥಿಕ ಪರಿಹಾರವನ್ನು ಒದಗಿಸುವುದು ಮುಖ್ಯ ಗುರಿಯಾಗಿದೆ. ಹಿರಿಯ ನಾಗರಿಕರಿಗೆ ಭಾರತೀಯ ರೈಲ್ವೆ ಗಣನೀಯ ರಿಯಾಯಿತಿಯನ್ನು 2025 ರ ಫೆಬ್ರವರಿ 15 ರಿಂದ ಪರಿಚಯಿಸಿದೆ. ಅರ್ಹತೆ ಪಡೆಯಲು, ಮಹಿಳೆಯರು ಕನಿಷ್ಠ 58 ಮತ್ತು ಪುರುಷರು ಕನಿಷ್ಠ 60 ವರ್ಷ ವಯಸ್ಸಿನವರಾಗಿರಬೇಕು. ಭಾರತೀಯ ನಾಗರಿಕರು ಮಾತ್ರ ಈ ಕೊಡುಗೆಯನ್ನು ಪಡೆಯಬಹುದು. ಇದು ತತ್ಕಾಲ್ ಟಿಕೆಟ್ಗಳಿಗೆ ಅಲ್ಲ, ನಿಯಮಿತ ಬುಕಿಂಗ್ಗಳಿಗೆ ಅನ್ವಯಿಸುತ್ತದೆ. ವಯಸ್ಸಿನ ಪ್ರೂಪ್ ಅಪ್ಲೋಡ್ ಮಾಡಿ, ಪಾವತಿ ಮಾಡಿ ಮತ್ತು ಟಿಕೆಟ್ ಡೌನ್ಲೋಡ್ ಮಾಡಿ. ಹಿರಿಯ ಪ್ರಯಾಣಿಕರ ಸೌಕರ್ಯವನ್ನು ಹೆಚ್ಚಿಸಲು ಭಾರತೀಯ ರೈಲ್ವೆ ಹಲವಾರು ಸೌಲಭ್ಯಗಳನ್ನು ಒದಗಿಸುತ್ತದೆ. ಇದಲ್ಲದೆ, ಸ್ಲೀಪರ್ ಮತ್ತು ಎಸಿ ಕೋಚ್ಗಳಲ್ಲಿ ಕೆಳಗಿನ ಬರ್ತ್ಗಳಿಗೆ…
Author: AIN Author
ಎಲ್ಲಾ ಕಾಲದಲ್ಲಿಯೂ ಜನರಿಗೆ ಸುಲಭವಾಗಿ ಸಿಗುವ ಹಣ್ಣು ಎಂದರೆ ಅದು ಪಪ್ಪಾಯಿ. ಈ ಹಣ್ಣು ಆರೋಗ್ಯಕ್ಕೆ ಕೂಡ ಬಹಳ ಉತ್ತಮ ಎಂದು ಸುಲಭವಾಗಿ ಹೇಳಬಹುದು. ಪಪ್ಪಾಯಿ ಹಣ್ಣು ತನ್ನೊಳಗೆ ನೈಸರ್ಗಿಕವಾದ ಸಿಹಿ ಅಂಶವನ್ನು ಒಳಗೊಂಡ ಹಣ್ಣಾಗಿದೆ. ಎಲ್ಲಾ ವಯೋಮಾನದವರು ಕೂಡ ಈ ಹಣ್ಣನ್ನು ಇಷ್ಟಪಟ್ಟು ತಿನ್ನುತ್ತಾರೆ. https://ainlivenews.com/kuruburu-shanthakumar-seriously-injured-airlifted-from-punjab-to-bangalore/ ಎಲ್ಲಾ ಸೀಸನ್ನಲ್ಲಿಯೂ ಲಭ್ಯವಿರುವ ಹಣ್ಣು ಎಂದರೆ ಅದು ಪಪ್ಪಾಯಿ. ಇದು ನಾರಿನಾಂಶ, ಅಗತ್ಯ ಜೀವಸತ್ವಗಳು ಮತ್ತು ಖನಿಜಗಳಿಂದ ಸಮೃದ್ಧವಾಗಿದೆ. ಈ ಹಣ್ಣನ್ನು ನಿಯಮಿತವಾಗಿ ತಿನ್ನುವವರಿಗೆ ಹೃದ್ರೋಗ, ಮಧುಮೇಹ ಮತ್ತು ಕ್ಯಾನ್ಸರ್ ರೋಗ ಬರುವ ಅಪಾಯ ಕಡಿಮೆ ಎಂದು ವೈದ್ಯರು ಹೇಳುತ್ತಾರೆ. ತೂಕ ನಿರ್ವಹಣೆಗೆ ಪಪ್ಪಾಯಿ ಹೆಚ್ಚು ಉಪಯುಕ್ತವಾಗಿದೆ. ಪಪ್ಪಾಯಿಯಲ್ಲಿ ಅಸಂಖ್ಯಾತ ಆರೋಗ್ಯ ಪ್ರಯೋಜನಗಳಿದ್ದರೂ, ಇದು ಕೆಲವರು ಸೇವಿಸಲು ಸೂಕ್ತವಾದ ಹಣ್ಣಲ್ಲ ಎಂದು ನಿಮಗೆ ತಿಳಿದಿದ್ಯಾ? ಹೌದು, ಪಪ್ಪಾಯಿ ತಿನ್ನುವುದರಿಂದ ಕೆಲವರ ಆರೋಗ್ಯದ ಮೇಲೆ ಅಡ್ಡಪರಿಣಾಮ ಉಂಟಾಗಬಹುದು. ಹಾಗಾದ್ರೆ ಈ ಹಣ್ಣನ್ನು ಯಾರು ತಿನ್ನಬಾರದು ಎಂಬುವುದರ ಬಗ್ಗೆ ನಾವಿಂದು ತಿಳಿಯೋಣ ಬನ್ನಿ. ಗರ್ಭಿಣಿಯರು: ಗರ್ಭಿಣಿಯರು…
ತುಂಬಾ ಜನರು ಇಷ್ಟಪಡದ ಆಹಾರ ಅಂದ್ರೆ ಅದು ಹಾಗಲಕಾಯಿ, ಕಾರಣ ಇದು ಕಹಿ ಆಗಿರುತ್ತದೆ. ಆದ್ರೆ ಹಾಗಲಕಾಯಿ ಸೇವನೆ ಆರೋಗ್ಯಕ್ಕೆ ಹಲವು ಲಾಭಗಳನ್ನು ಒದಗಿಸುತ್ತದೆ. https://ainlivenews.com/fire-accident-at-the-palace-grounds-decorations-burnt/ ಮಧುಮೇಹಿಗಳಿಗೆ ಹಾಗಲಕಾಯಿ ಒಳ್ಳೆಯ ಔಷಧಿ ಎಂದು ಹೇಳಬಹುದು. ಹಲವಾರು ಪ್ರಯೋಜನಗಳಿಂದ ಕೂಡಿದ ಹಾಗಲಕಾಯಿಯನ್ನು ಕೆಲವು ಆಹಾರಗಳೊಂದಿಗೆ ತಿನ್ನಬಾರದು. ಆ ಆಹಾರಗಳು ಯಾವುವು ಎಂಬುದರ ಮಾಹಿತಿ ಇಲ್ಲಿದೆ. ಹಾಗಲಕಾಯಿ ಸೇವಿಸುವುದರಿಂದ ರಕ್ತ ಶುದ್ಧವಾಗುತ್ತದೆ ಮತ್ತು ದೇಹಕ್ಕೆ ಅನೇಕ ಆರೋಗ್ಯ ಪ್ರಯೋಜನಗಳನ್ನು ನೀಡುತ್ತದೆ. ವಿಶೇಷವಾಗಿ ಮಧುಮೇಹ ಇರುವವರಿಗೆ, ಹಾಗಲಕಾಯಿ ಸರ್ವರೋಗ ನಿವಾರಕವಾಗಿದೆ. ಏಕೆಂದರೆ ಇದು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಹೆಚ್ಚಿಸುವುದಿಲ್ಲ. ಹಾಗೆಯೇ ಆರೋಗ್ಯವಂತರನ್ನಾಗಿ ಮಾಡುತ್ತದೆ. ನೀವು ಹಾಗಲಕಾಯಿಯಿಂದ ಹಲವು ರೀತಿಯ ತಿಂಡಿ, ಪದಾರ್ಥಗಳನ್ನು ತಯಾರಿಸಬಹುದು. ಆದರೆ ಹಾಗಲಕಾಯಿಯನ್ನು ಮಾತ್ರ ಕೆಲವು ಆಹಾರಗಳೊಂದಿಗೆ ತಿನ್ನಲೇಬಾರದು. ಏಕೆಂದರೆ ಇದರ ಪೋಷಕಾಂಶಗಳು ಮತ್ತು ಸುವಾಸನೆಗಳು ಕೆಲವು ಪದಾರ್ಥಗಳೊಂದಿಗೆ ಪ್ರತಿಕ್ರಿಯಿಸಿ ದೇಹದ ಆರೋಗ್ಯದ ಮೇಲೆ ಅನೇಕ ತೊಂದರೆಗಳನ್ನುಂಟುಮಾಡಬಹುದು. ಹಾಗಿದ್ರೆ ಹಾಗಲಕಾಯಿಯನ್ನು ಯಾವ ಆಹಾರಗಳೊಂದಿಗೆ ಸೇವಿಸಬಾರದು ಎಂಬುದರ ಮಾಹಿತಿ ಇಲ್ಲಿದೆ ನೋಡಿ. ಹಾಗಲಕಾಯಿ ತಿಂದ…
IPL 2025ರ ವೇಳಾಪಟ್ಟಿಯಲ್ಲಿ ಆರ್ಗನೈಸರ್ಸ್ ಈಗಾಗಲೇ ಬಿಡುಗಡೆ ಮಾಡಿದೆ. ಮೊದಲ ಪಂದ್ಯದದಲ್ಲಿಯೇ ಬೆಂಗಳೂರು ರಾಯಲ್ ಚಾಲೆಂರ್ಜ್ಸ್ ಕೊಲ್ಕತ್ತಾ ನೈಟ್ ರೈಡರ್ಸ್ ತಂಡಗಳು ಮಾರ್ಚ್ 22ರಂದು ಎದುರಾಗುವ ಮೂಲಕ ಐಪಿಎಲ್2025 ಶುರುವಾಗಲಿದೆ. ಫಿನಾಲೆ ಪಂದ್ಯವನ್ನು ಮೇ 25 ರಂದು 2024ರ ಐಪಿಎಲ್ ಗೆದ್ದ ತಂಡದ ತವರನಲ್ಲಿ ಆಡಿಸಲು ನಿರ್ಣಯಿಸಲಾಗಿದೆ. ಅಂದ್ರೆ ಕೊಲ್ಕತ್ತಾದಲ್ಲಿಯೇ ಫೈನಲ್ ಪಂದ್ಯ ನಡೆಯಲಿದೆ. https://ainlivenews.com/fire-accident-at-the-palace-grounds-decorations-burnt/ ಬಿಸಿಸಿಐ 18ನೇ ಸೀಸನ್ ಐಪಿಎಲ್ ವೇಳಾಪಟ್ಟಿಯನ್ನು ಭಾನುವಾರ ಬಿಡುಗಡೆ ಮಾಡಿದೆ. ಈ ಬಾರಿಯೂ 10 ತಂಡಗಳು ಭಾಗವಹಿಸಲಿವೆ. ಐಪಿಎಲ್ನ ಮೊದಲ ಪಂದ್ಯ ಮಾರ್ಚ್ 22, 2025 ರಂದು ನಡೆಯಲಿದ್ದು, ಆರ್ಸಿಬಿ ಹಾಗೂ ಹಾಲಿ ಚಾಂಪಿಯನ್ ಕೆಕೆಆರ್ ತಂಡಗಳು ಸೆಣಸಾಡಲಿವೆ 65 ದಿನಗಳ ಕಾಲ ನಡೆಯುವ ಟೂರ್ನಮೆಂಟ್ನಲ್ಲಿ ಪ್ಲೇಯಾಫ್ 70 ಪಂದ್ಯಗಳು ಸೇರಿ ಒಟ್ಟು 74 ಪಂದ್ಯಗಳು ನಡೆಯಲಿವೆ. ಮಾರ್ಚ್ 22 ರಿಂದ ಮೇ 18 ರವರೆಗೆ 70 ಲೀಗ್ ಪಂದ್ಯಗಳು ನಡೆಯಲಿವೆ. ಪ್ಲೇಆಫ್ಗಳು ಮೇ 20 ರಿಂದ ಮೇ 25 ರವರೆಗೆ ನಡೆಯಲಿವೆ. ಈ…
ಬೆಂಗಳೂರು:- ರಾಜಧಾನಿ ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಫೆಬ್ರವರಿ 18 ಪವರ್ ಕಟ್ ಇರಲಿದೆ ಎಂದು ಬೆಸ್ಕಾಂ ತಿಳಿಸಿದೆ. https://ainlivenews.com/lokarpana-to-sri-shivayogi-kartru-gaddu-at-bellavi-kara-math/ 220/66/11 ಕೆ.ವಿ ಎನ್.ಆರ್.ಎಸ್ ಸ್ಟೇಷನ್ನಲ್ಲಿ ತುರ್ತುನಿರ್ವಹಣಾ ಕಾಮಗಾರಿ ಕೈಗೊಳ್ಳುವುದರಿಂದ ಹಿನ್ನೆಲೆ ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಮಾಹಿತಿ ನೀಡಿದೆ. ಫೆಬ್ರವರಿ 18ರ ಮಂಗಳವಾರ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಈ ಕೆಳಕಂಡ ಭಾಗಗಳಲ್ಲಿ ಕರೆಂಟ್ ಕಟ್ಟಾಗಲಿದ್ದು, ಸಾರ್ವಜನಿಕರು ಸಹಕಾರ ನೀಡಬೇಕೆಂದು ಪ್ರಕಟಣೆಯಲ್ಲಿ ಮನವಿ ಮಾಡಲಾಗಿದೆ. ಮಂಜುನಾಥ ನಗರ, ಶಿವನಗರ, ಗಾಯತ್ರಿ ನಗರ, ಪ್ರಕಾಶನಗರ, ಎಲ್.ಎನ್ ಪುರ, ಸುಬ್ರಂಮಣ್ಯನಗರ, ವಿಜಯನಗರ, ರಾಜಾಜಿನಗರ 2ನೆ ಬ್ಲಾಕ್ ಮತ್ತು 6ನೆ ಬ್ಲಾಕ್, ಅಗ್ರಹಾರ, ದಾಸರಹಳ್ಳಿ, ಇಂದಿರಾನಗರ, ಶಂಕರಮಠ, ಬ್ರೀಗೆಡ್ ಅಪಾರ್ಟ್ಮೆಂಟ್, ಮಾಗಡಿ ರಸ್ತೆ 1ನೇ ಕ್ರಾಸ್ನಿಂದ 8ನೇ ಕ್ರಾಸ್, ಮಾಗಡಿ ರಸ್ತೆ 9ನೇ ಕ್ರಾಸ್, ಮಾಗಡಿ ರಸ್ತೆ 10ನೇ ಕ್ರಾಸ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ತಿಳಿಸಿದೆ. ಹೊನ್ನೇನಹಳ್ಳಿ, ಸಿಂಗನಾಯಕನಹಳ್ಳಿ, ರಾಜನಕುಂಟೆ,…
ಅನ್ನವನ್ನು ಮಾಡುವುದು ತುಂಬಾ ಸುಲಭ ಮತ್ತು ಅನೇಕ ಜನರಿಗೆ ಇದು ನೆಚ್ಚಿನ ಭಕ್ಷ್ಯವಾಗಿದೆ. ಜನರು ವಿವಿಧ ರೀತಿಯ ಅನ್ನವನ್ನು ತಿನ್ನುತ್ತಾರೆ. ಅಕ್ಕಿಯಲ್ಲಿ ಕಾರ್ಬೋಹೈಡ್ರೇಟ್ ಇರುತ್ತದೆ. ಇದರೊಂದಿಗೆ, ಪ್ರೋಟೀನ್, ಕೊಬ್ಬು ಮತ್ತು ಕ್ಯಾಲ್ಸಿಯಂ ಅನ್ನು ಸಹ ಒಳಗೊಂಡಿದೆ. ಆದರೆ, ರಾತ್ರಿ ಅನ್ನ ತಿನ್ನಬೇಕೋ ಬೇಡವೋ ಎಂಬ ಪ್ರಶ್ನೆ ಅನೇಕರ ಮನದಲ್ಲಿ ಮೂಡುವುದು ಖಂಡಿತ. https://ainlivenews.com/kuruburu-shanthakumar-seriously-injured-airlifted-from-punjab-to-bangalore/ ಅನ್ನ ಒಂದು ರೀತಿಯ ಮುಖ್ಯ ಆಹಾರವಾಗಿ ಪಾತ್ರ ನಿರ್ವಹಿಸುತ್ತದೆ. ಬತ್ತದಿಂದ ಅನ್ನ ಮಾಡಿ, ನಂತರ ಬೇರೆ ಬೇರೆ ಅಡುಗೆ ಮಾಡ್ತಾರೆ. ಅನ್ನ ಮಾಡೋದು ಸುಲಭ ಹಾಗೂ ಕಾರ್ಬೋಹೈಡ್ರೇಟ್ಸ್ ಇರುವ ಕಾರಣ ಎನರ್ಜಿಗೆ ಸಹಾಯ ಮಾಡುತ್ತದೆ ಎನ್ನುತ್ತಾರೆ. ಆದರೆ ಅನ್ನದಲ್ಲಿ ಕಾರ್ಬೋಹೈಡ್ರೇಟ್ಸ್ ಮಾತ್ರವಲ್ಲದೆ, ಪ್ರೋಟೀನ್, ಕ್ಯಾಲ್ಸಿಯಂ, ಮೆಗ್ನೀಷಿಯಂ, ಐರನ್, ಪೊಟ್ಯಾಷಿಯಂ ಕೂಡ ಇದೆ. ಇಷ್ಟೆಲ್ಲಾ ಪೌಷ್ಟಿಕಾಂಶಗಳಿದ್ದರೂ ಕೆಲವರು ರಾತ್ರಿ ಅನ್ನ ತಿನ್ನಬಾರದು. ಅನ್ನದಲ್ಲಿ ಕಾರ್ಬೋಹೈಡ್ರೇಟ್ಸ್ ಜಾಸ್ತಿ ಇರೋದ್ರಿಂದ ಎನರ್ಜಿ ಕೊಡುತ್ತೆ, ಗ್ಲೂಕೋಸ್ ವಿಭಜನೆ ಆಗುತ್ತೆ. ರಾತ್ರಿ ಎನರ್ಜಿಯ ಅಗತ್ಯವಿರುವುದಿಲ್ಲ. ಹಾಗಾಗಿ ರಾತ್ರಿ ಅನ್ನ ತಿಂದ್ರೆ ಗ್ಲೂಕೋಸ್ ಜಾಸ್ತಿ ಆಗಿ…
ಬೆಂಗಳೂರು:- ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ತನಿಖೆ ಕೈಗೊಂಡಿದ್ದ ಲೋಕಾಯುಕ್ತ ಸಿದ್ದರಾಮಯ್ಯ ರದ್ದು ತಪ್ಪಿಲ್ಲ ಎಂದು ವರದಿ ಸಿದ್ಧಪಡಿಸಿದೆ. ಈಗಾಗಲೇ ಲೋಕಾಯುಕ್ತ ಎಸ್ಪಿ ಉದೇಶ್ ಲೋಕಾಯುಕ್ತ ಐಜಿಪಿ ಸುಬ್ರಹ್ಮಣೇಶ್ವರ ರಾವ್ಗೆ ಅಂತಿಮ ವರದಿ ಸಲ್ಲಿಕೆ ಮಾಡಿದ್ದಾರೆ. https://ainlivenews.com/husband-who-pushed-the-construction-building-from-above/ ಹಿರಿಯ ಅಧಿಕಾರಿಗಳು ದಾಖಲೆಗಳ ಪರಿಶೀಲನೆ ನಡೆಸಿದ್ದು, ಸೋಮವಾರ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಕ್ಕೆ ಸಲ್ಲಿಕೆ ಮಾಡಲಿದ್ದಾರೆ. ಮೂಲಗಳ ಪ್ರಕಾರ ಸಿಎಂ ಮತ್ತು ಕುಟುಂಬಸ್ಥರನ್ನು ಸಂತ್ರಸ್ತರನ್ನಾಗಿ ಮಾಡಿರೋ ಲೋಕಾಯುಕ್ತ, ಆರೋಪಿಗಳ ವಿರುದ್ಧ ಕ್ಲೀನ್ ಚಿಟ್ ನೀಡ್ತಾ ಇದೆ. ಆದ್ರೆ, ಮುಡಾದ ಮಾಜಿ ಆಯುಕ್ತ ನಟೇಶ್ ಸೇರಿ ಸಾಕಷ್ಟು ಅಧಿಕಾರಿಗಳ ವಿರುದ್ಧ ಆರೋಪ ಹೊರಿಸಲಾಗಿದೆ. ಅಧಿಕಾರಿಗಳು ಅಕ್ರಮ ಎಸಗಿದ್ದು, ಅಧಿಕಾರ ದುರುಪಯೋಗ ಮಾಡಿಕೊಂಡಿದ್ದಾರೆ ಅಂತ ಅಂತಿಮ ವರದಿ ಸಲ್ಲಿಕೆ ಆಗಲಿದೆ. ಸಿಎಂ ಮತ್ತು ಕುಟುಂಬದ ಸದಸ್ಯರು ಈ ಪ್ರಕರಣದಲ್ಲಿ ಸಂತ್ರಸ್ತರಾಗಿದ್ದಾರೆ. ಭೂಮಿ ಖರೀದಿ ಮಾಡುವಾಗ ಆಗಲಿ, ದಾನ ಮಾಡುವಾಗ ಆಗಲಿ ಯಾವುದೇ ಪ್ರಭಾವ ಬೀರಿಲ್ಲ. ಸಿಎಂ ಸಿದ್ದರಾಮಯ್ಯ ಸಹ ಅಧಿಕಾರ ದುರುಪಯೋಗ ಮಾಡಿಕೊಂಡಿರುವುದಾಗಲಿ ಪ್ರಭಾವ ಬೀರಿರುವುದಾಗಲಿ ಸಾಕ್ಷ್ಯ ಸಿಕ್ಕಿಲ್ಲ.…
ಜೀರಿಗೆಯು ಸಾಮಾನ್ಯ ಭಾರತೀಯ ಮಸಾಲೆಯಾಗಿದ್ದು, ಇದನ್ನು ಭಕ್ಷ್ಯಗಳ ರುಚಿ ಮತ್ತು ಸುವಾಸನೆಯನ್ನು ಹೆಚ್ಚಿಸಲು ಭಾರತೀಯ ಅಡುಗೆಗಳಲ್ಲಿ ವ್ಯಾಪಕವಾಗಿ ಬಳಸಲಾಗುತ್ತದೆ. ಇದನ್ನು ಪ್ರಬಲವಾದ ಆರೋಗ್ಯ ಪ್ರಯೋಜನಗಳಿಗಾಗಿ ಹಲವಾರು ಸಾಂಪ್ರದಾಯಿಕ ಔಷಧಿಗಳಲ್ಲಿ ಬಳಸಲಾಗುತ್ತದೆ. ಆದರೆ ಹಲವು ವರ್ಷಗಳಿಂದ ಜೀರಿಗೆ ನೀರನ್ನು ಖಾಲಿ ಹೊಟ್ಟೆಯಲ್ಲಿ ಸೇವಿಸಲು ಆರೋಗ್ಯ ತಜ್ಞರು ಸಲಹೆ ನೀಡುತ್ತಾರೆ. https://ainlivenews.com/lokarpana-to-sri-shivayogi-kartru-gaddu-at-bellavi-kara-math/ ಜೀರಿಗೆಯಲಿ ವಿಟಮಿನ್ ಬಿ, ಸಿ, ಇ, ಕೆ ಸೇರಿದಂತೆ ಸತು, ತಾಮ್ರ, ಕಬ್ಬಿಣದಂತಹ ಹಲವು ಪೋಷಕಾಂಶಗಳು ಅಡಕವಾಗಿದ್ದು, ಇದರನ್ನು ಆರೋಗ್ಯದ ಗಣಿ ಎಂದು ಪರಿಗಣಿಸಲಾಗಿದೆ. ರಾತ್ರಿ ಒಂದು ಲೋಟ ನೀರಿನಲ್ಲಿ 1 ಸ್ಪೂನ್ ಜೀರಿಗೆ ನೆನೆಸಿಟ್ಟು ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಆ ನೀರನ್ನು ಕುಡಿಯುವುದರಿಂದ ಹಲವು ಆರೋಗ್ಯ ಸಮಸ್ಯೆಗಳಿಂದ ದೂರಉಳಿಯಬಹುದು. ಜೀರಿಗೆಯಲ್ಲಿ ಕ್ಯೂಮೀನಮ್ ಸೀಮಿನಮ್ ಎಂಬ ಅಂಶವಿದ್ದು ಖಾಲಿ ಹೊಟ್ಟೆಯಲ್ಲಿ ನಿತ್ಯ ಈ ನೀರನ್ನು ಕುಡಿಯುವುದರಿಂದ ದೇಹವನ್ನು ಡಿಟಾಕ್ಸ್ ಮಾಡಲು ಹಾಗೂ ಆರೋಗ್ಯಕರವಾಗಿ ತೂಕ ಇಳಿಸಲು ಸಹಾಯಕವಾಗಿದೆ ಪ್ರತಿನಿತ್ಯ ಖಾಲಿ ಹೊಟ್ಟೆಯಲ್ಲಿ ಜೀರಿಗೆ ನೀರು ಕುಡಿಯುವುದು ಅಧಿಕ ರಕ್ತದೊತ್ತಡ ಸಮಸ್ಯೆ ಇರುವವರಿಗೆ…
ಆನೇಕಲ್:- ಬೆಂಗಳೂರು ಹೊರವಲಯದ ಸರ್ಜಾಪುರದ ತಿಗಳ ಚೌಡದೇನಹಳ್ಳಿ ಗ್ರಾಮದಲ್ಲಿ ನಿರ್ಮಾಣ ಹಂತದ ಕಟ್ಟಡ ಮೇಲಿಂದ ಪತ್ನಿಯನ್ನ ದೂಡಿ ಕೊಲೆಗೈದಿರುವ ಘಟನೆ ಜರುಗಿದೆ. https://ainlivenews.com/congress-set-out-to-extinguish-akshara-devi-by-vijayendra-says-the-governments-move-is-the-height-of-foolishness/ 40 ವರ್ಷದ ಮಂಜುಳಾ ಕೊಲೆಯಾದ ಪತ್ನಿ. ಮಂಜುನಾಥ್ ನಿಂದ ಕೊಲೆ ನಡೆದಿದೆ. ಪತ್ನಿ ಮಾನಸಿಕ ಅಸ್ವಸ್ಥೆಯಾಗಿದ್ದ ಕಾರಣ ಪತಿ ಮಂಜುನಾಥ ಮಾನಸಿಕ ಖಿನ್ನತೆಗೆ ಒಳಗಾಗಿದ್ದ. ಹೀಗಾಗಿ ಶನಿವಾರ ರಾತ್ರಿ ಹೆಂಡತಿಯನ್ನು ಭುಜದ ಮೇಲೆ ಎತ್ತಿಕೊಂಡು, ನಿರ್ಮಾಣ ಹಂತದ ಕಟ್ಟಡದ ಎರಡನೇ ಮಹಡಿಗೆ ಕರೆದುಕೊಂಡು ಹೋಗಿದ್ದಾನೆ. ಬಳಿಕ ಅಲ್ಲಿಂದ ಕೆಳಗೆ ದೂಡಿದ್ದಾನೆ. ಕೆಳಗೆ ಬೀಳುತ್ತಿದ್ದಂತೆ ತಲೆಗೆ ಗಂಭೀರ ಗಾಯವಾಗಿದ್ದು, ಕೂಡಲೇ ಸ್ಥಳೀಯರು ಆಸ್ಪತ್ರೆಗೆ ರವಾನಿಸಿದ್ದಾರೆ. ಆದ್ರೆ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ ಕೆಳಗೆ ದೂಡಿರುವ ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸರ್ಜಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಬೆಂಗಳೂರು:- ರಾಜ್ಯ ಸರ್ಕಾರ ಹೊಸ ವಿಶ್ವವಿದ್ಯಾಲಯಗಳನ್ನು ಮುಚ್ಚಲು ಮುಂದಾಗಿರುವ ಕುರಿತ ವಿಚಾರಕ್ಕೆ ಸಂಬಂಧಿಸಿದಂತೆ ಸಂಸದ ಬಸವರಾಜ್ ಬೊಮ್ಮಾಯಿ ಪ್ರತಿಕ್ರಿಯೆ ಕೊಟ್ಟಿದ್ದಾರೆ. https://ainlivenews.com/lokarpana-to-sri-shivayogi-kartru-gaddu-at-bellavi-kara-math/ ಈ ಸಂಬಂಧ ಮಾತನಾಡಿದ ಅವರು, ವಿಶ್ವವಿದ್ಯಾಲಯ ಮುಚ್ಚುವುದರಿಂದ ಎಸ್ಸಿ-ಎಸ್ಟಿ, ಒಬಿಸಿ, ಮಹಿಳೆಯರಿಗೆ ಅನ್ಯಾಯವಾಗಲಿದೆ. ವಿಶ್ವವಿದ್ಯಾಲಯಗಳ ಪರಿಕಲ್ಪನೆ ಬದಲಾವಣೆಯಾಗಿದೆ. ರಾಜ್ಯದಲ್ಲಿ 50, 60ನೇ ದಶಕದಲ್ಲಿ ವಿಶ್ವವಿದ್ಯಾಲಯಗಳು ಸ್ಥಾಪನೆಯಾಗಿದ್ದವು. ಆವತ್ತಿನ ಕಾಲೇಜು ಸಂಖ್ಯೆ, ವಿದ್ಯಾರ್ಥಿಗಳ ಸಂಖ್ಯೆಗೂ ಇಂದಿಗೂ ಬಹಳ ವ್ಯತ್ಯಾಸ ಇದೆ. ನಾವು ಹಿಂದುಳಿದ ಜಿಲ್ಲೆಯನ್ನು ಗಮನದಲ್ಲಿಟ್ಟುಕೊಂಡು ಎಸ್ಸಿ-ಎಸ್ಟಿ, ಹಿಂದುಳಿದ ವಿದ್ಯಾರ್ಥಿಗಳಿಗೆ ಅನುಕೂಲ ಆಗಲಿ ಎಂದು ವಿಶ್ವವಿದ್ಯಾಲಯ ಮಾಡಿದ್ದೇವೆ. ಈ ವಿಶ್ವವಿದ್ಯಾಲಯಕ್ಕೆ ಹೆಚ್ಚಿನ ಅನುದಾನ ಬೇಕಿಲ್ಲ. ಆದರೂ ಕೂಡ ಒಂದು ನಯಾ ಪೈಸೆಯನ್ನು ಕಾಂಗ್ರೆಸ್ ಸರ್ಕಾರ ನೀಡಿಲ್ಲ. ಡಿಜಿಟಲ್ ಶಿಕ್ಷಣ, ದೂರ ಶಿಕ್ಷಣ ಎಲ್ಲವನ್ನೂ ಸಮರ್ಪಕವಾಗಿ ಮಾಡುತ್ತಿದ್ದಾರೆ. ಜಿಲ್ಲೆಯ ಎಸ್ಸಿ-ಎಸ್ಟಿ, ಒಬಿಸಿ ವಿದ್ಯಾರ್ಥಿಗಳು ಹಾಗೂ ಹೆಣ್ಣು ಮಕ್ಕಳಿಗೆ ದೊಡ್ಡ ಪ್ರಮಾಣದಲ್ಲಿ ಅನುಕೂಲವಾಗಿದೆ. ಇದನ್ನು ಸ್ಥಗಿತಗೊಳಿಸಿದರೆ ಎಸ್ಸಿ-ಎಸ್ಟಿ, ಒಬಿಸಿ ಹಾಗೂ ಹೆಣ್ಣು ಮಕ್ಕಳಿಗೆ ಉನ್ನತ ಶಿಕ್ಷಣಕ್ಕೆ ಬಹಳ ದೊಡ್ಡ ಅನ್ಯಾಯ ಮಾಡಿದಂತಾಗುತ್ತದೆ. ಈಗಾಗಲೇ…