Author: AIN Author

ಸ್ಮಾರ್ಟ್‌ಫೋನ್ ಡಿಜಿಟಲ್ ಯುಗದ ಪ್ರತಿಯೊಬ್ಬರ ಜೀವನದ ಭಾಗವಾಗಿ ಬಿಟ್ಟಿದೆ. ಮಕ್ಕಳಿಂದ ಹಿಡಿದು ಎಲ್ಲಾ ವಯೋಮಾನದವರು ಬಳಸುವ ಸಾಧನ ಸ್ಮಾರ್ಟ್‌ಫೋನ್‌. ಇತ್ತೀಚಿನ ವರದಿಯ ಅಂಕಿ ಅಂಶಗಳನ್ನು ಕೇಳಿದರೆ ನಿಜಕ್ಕೂ ಅಚ್ಚರಿಯಾಗುತ್ತದೆ. https://ainlivenews.com/dolly-dhananjay-couple-shared-the-happiness-of-the-wedding-celebration/ ವರದಿಯು ಹೇಳಿರುವ ಪ್ರಕಾರ ಭಾರತವು 2026ರ ವೇಳೆಗೆ 1 ಶತಕೋಟಿ ಸ್ಮಾರ್ಟ್‌ಫೋನ್ ಬಳಕೆದಾರರನ್ನು ಹೊಂದಲಿದೆ. 2021ರಲ್ಲಿ ಭಾರತವು 1.2 ಬಿಲಿಯನ್ ಮೊಬೈಲ್ ಚಂದಾದಾರರನ್ನು ಹೊಂದಿತ್ತು, ಅದರಲ್ಲಿ ಸುಮಾರು 750 ಮಿಲಿಯನ್ ಜನರು ಸ್ಮಾರ್ಟ್‌ಫೋನ್ ಬಳಕೆದಾರರಿದ್ದಾರೆ. ಹಾಗಾಗಿ, ಮುಂದಿನ ಐದು ವರ್ಷದಲ್ಲಿ ಜಗತ್ತಿನಲ್ಲೇ ಅತಿ ಹೆಚ್ಚು ಸ್ಮಾರ್ಟ್‌ಫೋನ್ ಬಳಕೆದಾರರನ್ನು ಹೊಂದಿರುವ 2ನೇ ದೇಶ ಎಂಬ ಖ್ಯಾತಿಯನ್ನು ಭಾರತ ಪಡೆಯಲಿದೆ ಇಂದಿನ ದಿನಮಾನಗಳಲ್ಲಿ ಎಲ್ಲರ ಬಳಿ ಫೋನ್ ಇದ್ದೇ ಇರುತ್ತದೆ. ಇಂಟರ್‌ನೆಟ್ ಬಳಕೆಯೂ ಹೆಚ್ಚಾಗಿದೆ. ರಿಲಯನ್ಸ್ ಜಿಯೋ, ಏರ್‌ಟೆಲ್, ವೊಡಾಫೋನ್ ಐಡಿಯಾ ಮತ್ತು ಬಿಎಸ್‌ಎನ್‌ಎಲ್ ಭಾರತದ ಪ್ರಮುಖ ಟೆಲಿಕಾಂ ಕಂಪನಿಗಳಾಗಿವೆ. ಇದೆಲ್ಲದರ ಜೊತೆಯಲ್ಲಿಯೂ ಮಾರುಕಟ್ಟೆಗೆ ಹೊಸ ಹೊಸ ಸ್ಮಾರ್ಟ್‌ಫೋನ್‌ಗಳು ಲಗ್ಗೆ ಇಡುತ್ತಿವೆ. ಕೆಲವರಂತೂ ಪ್ರತಿವರ್ಷ ಮೊಬೈಲ್ ಬದಲಾಯಿಸುತ್ತಿರುತ್ತಾರೆ. ಎಷ್ಟೇ ಮೊಬೈಲ್ ಬದಲಾದ್ರೂ ಸಂಖ್ಯೆ…

Read More

ಸೂರ್ಯೋದಯ – 6:45 AM ಸೂರ್ಯಾಸ್ತ – 6:15 PM ಶಾಲಿವಾಹನ ಶಕೆ -1946 ಸಂವತ್-2080 ಕ್ರೋಧಿನಾಮ ಸಂವತ್ಸರ, ಉತ್ತರ ಅಯಣ, ಶುಕ್ಲ ಪಕ್ಷ, ಶಿಶಿರ ಋತು, ಮಾಘ ಮಾಸ, ತಿಥಿ – ಪಂಚಮಿ ನಕ್ಷತ್ರ – ಚಿತ್ತೆ ಯೋಗ – ಶೂಲ ಕರಣ – ಕೌಲವ ರಾಹು ಕಾಲ -07:30 ದಿಂದ 09:00 ವರೆಗೆ ಯಮಗಂಡ -10:30 ದಿಂದ 12:00 ವರೆಗೆ ಗುಳಿಕ ಕಾಲ -01:30 ದಿಂದ 03:00 ವರೆಗೆ ಬ್ರಹ್ಮ ಮುಹೂರ್ತ – 5:09 ಬೆ.ದಿಂದ 5:57 ಬೆ.ವರೆಗೆ ಅಮೃತ ಕಾಲ – 12:45 ಮ..ದಿಂದ 2:33 ಮ .ವರೆಗೆ ಅಭಿಜಿತ್ ಮುಹುರ್ತ – 12:07 ಮ.ದಿಂದ 12:53 ಮ ವರೆಗೆ ಮೇಷ ರಾಶಿ: ವಿದೇಶ ಪ್ರಯಾಣ ಯೋಗ, ಹೃದಯ ತಜ್ಞರಿಗೆ ಉನ್ನತ ಸ್ಥಾನಮಾನ, ಕೃಷಿ ಆಧಾರಿತ ವ್ಯಾಪಾರದಲ್ಲಿ ಲಾಭ, ವಕೀಲರು ಮತ್ತು ಸಂಧಾನ ಸಭೆ ನಡೆಸುವವರಿಗೆ ಶುಭದಾಯಕ, ವ್ಯಾಪಾರದಲ್ಲಿ ಏರಿಳಿತ ಸಾಮಾನ್ಯ, ಹಣಕಾಸಿನ ವ್ಯವಹಾರ ಬೇಡ, ರಾಜಕಾರಣಿಗಳು…

Read More

ಬೆಂಗಳೂರು:- ನಗರದಲ್ಲಿ ಇತ್ತೀಚೆಗೆ ಬೆಂಕಿ ಅವಘಡ ಪ್ರಕರಣಗಳು ಹೆಚ್ಚಾಗುತ್ತಿದೆ. ಅದರಂತೆ ಇಂದು ಸಿಲಿಕಾನ್ ಸಿಟಿ ಬೆಂಗಳೂರಿನ ಅರಮನೆ ಮೈದಾನದ ಡೆಕೋರೇಷನ್ ವೇಸ್ಟ್ ವಸ್ತುಗಳು ಇದ್ದ ಜಾಗದಲ್ಲಿ ಬೆಂಕಿ ಹೊತ್ತಿಕೊಂಡಿದೆ. https://ainlivenews.com/bike-collision-with-pedestrian-rider-spot-death/ ಕೂಡಲೇ ಸ್ಥಳೀಯರು ಅಗ್ನಿಶಾಮಕ ಸಿಬ್ಬಂದಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಮಾಹಿತಿ ಆಧರಿಸಿ ಸ್ಥಳಕ್ಕೆ ಧಾವಿಸಿರುವ ಅಗ್ನಿಶಾಮಕದಳ ಸಿಬ್ಬಂದಿ ಆಗಮಿಸಿ, ಬೆಂಕಿ ನಂದಿಸುವ ಕಾರ್ಯ ಮಾಡಿದ್ದಾರೆ. ಬೆಂಕಿ ಅವಘಡ ಸಂಭವಿಸಲು ನಿಖರ ಕಾರಣ ಏನು ಎಂಬುವುದು ತಿಳಿದು ಬಂದಿಲ್ಲ.

Read More

ಆನೇಕಲ್:- ಪಾದಚಾರಿಗೆ ಬೈಕ್ ಡಿಕ್ಕಿಯಾಗಿ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಬನ್ನೇರುಘಟ್ಟ ಮುಖ್ಯರಸ್ತೆ ಕುಂಬಾರನಹಳ್ಳಿ ಗೇಟ್ ಬಳಿ ಜರುಗಿದೆ. https://ainlivenews.com/kuruburu-shanthakumar-seriously-injured-airlifted-from-punjab-to-bangalore/ ಮುನಿರಾಮಯ್ಯ(58) ಮೃತ ಪಾದಚಾರಿ. ಪಾದಚಾರಿಗೆ ಬೈಕ್ ಸವಾರ ಇಮಾನ್ ಡಿಕ್ಕಿ ಹೊಡೆದಿದ್ದಾರೆ. ಬುಲೆಟ್ ಸವಾರ ಇಮಾನ್ ಗೂ ಗಂಭೀರ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಅತಿ ವೇಗ ಘಟನೆಗೆ ಕಾರಣ ಎನ್ನಲಾಗಿದೆ. ಡಿಕ್ಕಿಯ ರಭಸಕ್ಕೆ ಸ್ಥಳದಲ್ಲಿಯೇ ಪಾದಚಾರಿ ಮುನಿರಾಮಯ್ಯ ಸಾವನ್ನಪ್ಪಿದ್ದಾರೆ. ಬುಲೆಟ್ ಬೈಕನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಜಿಗಣಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು : ಪಂಜಾಬಿನ ಪಟಿಯಾಲ ಬಳಿ ಸಂಭವಿಸಿದ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿರುವ ರೈತ ಮುಖಂಡ ಕುರುಬೂರು ಶಾಂತಕುಮಾರ್ ಅವರನ್ನು ಇಂದು ಏರ್ ಆಂಬುಲೆನ್ಸ್ ಮೂಲಕ ಬೆಂಗಳೂರಿಗೆ ಕರೆ ತರಲಾಗಿದೆ.‌ https://ainlivenews.com/congress-set-out-to-extinguish-akshara-devi-by-vijayendra-says-the-governments-move-is-the-height-of-foolishness/ ಚಿಕಿತ್ಸೆಗಾಗಿ ಶಾಂತಕುಮಾರ್ ಅವರನ್ನು ಇದೀಗ ಮಣಿಪಾಲ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಶಾಂತಕುಮಾರ್ ಅವರು ಶೀಘ್ರ ಗುಣಮುಖರಾಗಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಾರೈಸಿದ್ದಾರೆ. ಮೂರು ದಿನಗಳ ಹಿಂದೆ ಸಂಭವಿಸಿದ ಅಪಘಾತದಲ್ಲಿ ಶಾಂತಕುಮಾರ್ ಅವರು ಗಾಯಗೊಂಡು ಪಟಿಯಾಲದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ವಿಷಯ ತಿಳಿದ ಕೂಡಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಏರ್ ಆಂಬುಲೆನ್ಸ್ ಮೂಲಕ ಶಾಂತಕುಮಾರ್ ಅವರನ್ನು ಬೆಂಗಳೂರಿಗೆ ಕರೆತರುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು ‌ ಈ ಮಧ್ಯೆ ದೆಹಲಿ ನಿವಾಸಿ ಆಯುಕ್ತರಾದ ಇಂಕೊಂಗ್ಲ ಜಮೀರ್ ಅವರು ಪಂಜಾಬ್ ಸರ್ಕಾರದ ಮುಖ್ಯ ಕಾರ್ಯದರ್ಶಿ ಹಾಗೂ ಪಟಿಯಾಲದ ಆಸ್ಪತ್ರೆ ವೈದ್ಯರ ಜೊತೆ ಸತತ ಸಂಪರ್ಕದಲ್ಲಿದ್ದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸೂಚನೆ ಮೇರೆಗೆ ಅಧಿಕಾರಿಗಳು ನಿನ್ನೆ ಏರ್ ಆಂಬುಲೆನ್ಸ್ ಸಜ್ಜುಗೊಳಿಸಿದ್ದರು. ಇಬ್ಬರು ಸಹಾಯಕರು ಹಾಗೂ…

Read More

ಬೆಂಗಳೂರು:- ಅಕ್ಷರ ದೀವಿಗೆ ನಂದಿಸಲು ಹೊರಟ ಸರ್ಕಾರದ ನಡೆ ಅವಿವೇಕದ ಪರಮಾವಧಿ ಎಂದು ಬಿವೈ ವಿಜಯೇಂದ್ರ ಹೇಳಿದ್ದಾರೆ. https://ainlivenews.com/a-bus-that-went-to-overtake-and-collided-with-a-bike-a-death/ 9 ವಿಶ್ವವಿದ್ಯಾನಿಲಯಗಳಿಗೆ ಬೀಗ ಜಡಿಯಲು ಹೊರಟಿರುವ ಸರ್ಕಾರದ ನಡೆಯನ್ನು ಖಂಡಿಸಿ ಎಕ್ಸ್ನಲ್ಲಿ ವಿಜಯೇಂದ್ರ ಪೋಸ್ಟ್ ಹಂಚಿಕೊಂಡಿದ್ದಾರೆ. ಬಡ ಹಾಗೂ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳ ಪಾಲಿನ ಶಿಕ್ಷಣ ಭಾಗ್ಯ ಕಸಿಯಲು ಹೊರಟಿರುವ ಕಾಂಗ್ರೆಸ್ ಸರ್ಕಾರದ ನಿರ್ಧಾರ ಅವಿವೇಕತನದ ಪರಮಾವಧಿಯಾಗಿದೆ. ಶಿಕ್ಷಣದ ದೂರದೃಷ್ಟಿ ಹಾಗೂ ಉನ್ನತ ಶಿಕ್ಷಣದ ಹಕ್ಕು ಪ್ರತಿಯೊಬ್ಬ ವಿದ್ಯಾರ್ಥಿಗೆ ಸರಳವಾಗಿ, ಸುಲಭವಾಗಿ ದೊರೆಯಬೇಕು ಎಂಬ ಮಹತ್ವದ ಉದ್ದೇಶದಿಂದ 9 ವಿಶ್ವವಿದ್ಯಾನಿಲಯಗಳನ್ನು ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ತಂದಿತ್ತು. ಇವುಗಳ ಅಭಿವೃದ್ಧಿಗಾಗಿ ಮೀಸಲಿರಿಸಬೇಕಾಗಿದ್ದ ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ವಿನಿಯೋಗಿಸಿಕೊಳ್ಳುವ ಕಾರಣಕ್ಕಾಗಿ ವಿವಿಗಳನ್ನು ಮುಚ್ಚಲು ಹೊರಟಿರುವ ಕಾಂಗ್ರೆಸ್ ಸರ್ಕಾರದ ನಿರ್ಧಾರ ಶಿಕ್ಷಣ ಹಾಗೂ ಅಭಿವೃದ್ಧಿ ವಿರೋಧಿಯ ಧೋರಣೆಯನ್ನು ಸಾಕ್ಷಿಕರಿಸುತ್ತಿದೆ ಎಂದು ವಿಜಯೇಂದ್ರ ಆರೋಪಿಸಿದರು. ಇತಿಹಾಸದಿಂದಲೂ ದಕ್ಷಿಣ ಭಾರತದಲ್ಲಿ `ಕರ್ನಾಟಕ ರಾಜ್ಯ ಶಿಕ್ಷಣದ ಕಾಶಿ’ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಅದಕ್ಕೆ ಹಿನ್ನಡೆಯುಂಟು ಮಾಡುವ ನಿರ್ಧಾರಗಳನ್ನು ಈ ಹಿಂದಿನ…

Read More

ಬೆಂಗಳೂರು:- ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಕುರುಬೂರು ಶಾಂತಕುಮಾರ್ ಅವರನ್ನು ಬೆಂಗಳೂರಿಗೆ ಏರ್​ಲಿಫ್ಟ್ ಮಾಡಲಾಗಿದೆ. ಹೀಗಾಗಿ ಮಣಿಪಾಲ್ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲು ಮಾಡಲಾಗಿದೆ. https://ainlivenews.com/tickets-are-expensive-our-metro-is-empty-even-on-weekends/ ಶಾಂತಕುಮಾರ್ ಅವರು ಶೀಘ್ರ ಗುಣಮುಖರಾಗಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾರೈಸಿದ್ದಾರೆ. ಮೂರು ದಿನಗಳ ಹಿಂದೆ ಸಂಭವಿಸಿದ ಅಪಘಾತದಲ್ಲಿ ಶಾಂತಕುಮಾರ್ ಅವರು ಗಾಯಗೊಂಡು ಪಟಿಯಾಲದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ವಿಷಯ ತಿಳಿದ ಕೂಡಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಏರ್ ಆಂಬುಲೆನ್ಸ್ ಮೂಲಕ ಶಾಂತಕುಮಾರ್ ಅವರನ್ನು ಬೆಂಗಳೂರಿಗೆ ಕರೆತರುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು. ‌ ಇಬ್ಬರು ಸಹಾಯಕರು ಹಾಗೂ ವೈದ್ಯರ ತಂಡದೊಂದಿಗೆ ಇಂದು ಶಾಂತಕುಮಾರ್ ಅವರನ್ನು ಬೆಂಗಳೂರಿಗೆ ಕರೆತರಲಾಗಿದೆ. ಕುರುಬೂರು ಶಾಂತಕುಮಾರ್ ಅವರನ್ನು ಬೆಂಗಳೂರಿಗೆ ಕರೆಸಿಕೊಳ್ಳಲು ವ್ಯವಸ್ಥೆ ಮಾಡಿರುವುದಾಗಿ ಸಿಎಂ ಸಿದ್ದರಾಮಯ್ಯ ಭಾನುವಾರ ಬೆಳಗ್ಗೆ ಟ್ವೀಟ್ ಮಾಡಿದ್ದರು. ಅದರ ಬೆನ್ನಲ್ಲೇ, ಶಾಂತಕುಮಾರ್ ಅವರನ್ನು ಕರೆತಂದು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ.

Read More

ಬೆಂಗಳೂರು:- ಬೆಂಗಳೂರಿನ ಜೀವನಾಡಿಯಾಗಿದ್ದ ನಮ್ಮ ಮೆಟ್ರೋ ಇದೀಗ ಬೆಲೆ ಏರಿಕೆ ಶಾಕ್‌ನಿಂದ ಸಿಲಿಕಾನ್‌ ಸಿಟಿ ಮಂದಿಯ ಕೋಪಕ್ಕೆ ಗುರಿಯಾಗಿದೆ. ಜನರಿಂದ ವಿರೋಧ ವ್ಯಕ್ತವಾದ ಕಾರಣಕ್ಕೆ ಏರಿದ್ದ ದರವನ್ನು ಅಲ್ಪವಷ್ಟೇ ಇಳಿಸಿದ್ದರೂ ಕೋಪ ತಣ್ಣಗಾಗಲಿಲ್ಲ. ಇಲ್ಲಿವರೆಗೆ ನೆಮ್ಮದಿಯ ಪ್ರಯಾಣಕ್ಕಾಗಿ ಮೆಟ್ರೋ ಹತ್ತುತ್ತಿದ್ದವರು ಇದೀಗ ಹೊಸ ಮಾರ್ಗವನ್ನು ಕಂಡುಕೊಂಡಿದ್ದಾರೆ. https://ainlivenews.com/khadimaras-craftsman-theft-by-breaking-the-glass-of-a-car-that-left-for-ayodhya/ ಮೆಟ್ರೋ ಟಿಕೆಟ್ ದರ ಏರಿಕೆ ಮಾಡಿದ್ದರಿಂದ ಜನರು ಇದೀಗ ಸ್ವಂತ ವಾಹನ ಹಾಗೂ ಬಿಎಂಟಿಸಿಯಲ್ಲಿ ಪ್ರಯಾಣಿಸುತ್ತಿದ್ದಾರೆ. ಹೀಗಾಗಿ ವೀಕೆಂಡ್‌ನಲ್ಲಿಯೂ ಮೆಟ್ರೋದಲ್ಲಿ ಪ್ರಯಾಣಿಕರು ಇಲ್ಲದೇ ಖಾಲಿ ಹೊಡೆಯುತ್ತಿವೆ. ಮೊದಲು ವೀಕೆಂಡ್‌ನಲ್ಲಿ ಓರಿಯನ್ ಮಾಲ್, ಇಸ್ಕಾನ್ ಟೆಂಪಲ್‌ಗೆ ಬರುವ ಜನರು ಹೆಚ್ಚಾಗಿ ಮೆಟ್ರೋದಲ್ಲಿ ಬರುತ್ತಿದ್ದರು. ಆದರೆ ಇವತ್ತು ಮೆಟ್ರೋದಲ್ಲಿ ಪ್ರಯಾಣಿಕರಿಲ್ಲ. ಹೀಗಾಗಿ ಸ್ಯಾಂಡಲ್ ಸೋಪ್ ಫ್ಯಾಕ್ಟರಿ ಮೆಟ್ರೋ ನಿಲ್ದಾಣದ ಬಳಿ ಪ್ರಯಾಣಿಕರೇ ಇಲ್ಲದಂತಾಗಿದ್ದು, ಮೆಟ್ರೋದಲ್ಲಿ ಪ್ರಯಾಣ ಮಾಡಲು ಜನರ ಹಿಂಜರಿಯುತ್ತಿದ್ದಾರೆ.

Read More

ಲಕ್ನೋ:- ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಕಳ್ಳರು ಕೈಚಳಕ ತೋರಿದ್ದಾರೆ. ಅಯೋಧ್ಯೆಗೆ ತೆರಳಿದ್ದ ಧಾರವಾಡದ 2 ಕುಟುಂಬಗಳ ಕಾರಿನ ಗ್ಲಾಸ್ ಒಡೆದು ಬ್ಯಾಗ್, ಮೊಬೈಲ್ ಹಾಗೂ 20,000 ರೂ. ಕಳ್ಳತನ ಮಾಡಿದ್ದಾರೆ. https://ainlivenews.com/champions-trophy-is-more-important-than-india-defeat-pakistan-vice-captain/ ಅರುಣಕುಮಾರ ಬಡಿಗೇರ ಹಾಗೂ ಮಾಳಮಡ್ಡಿಯ ಬಸವರಾಜ್ ಕೊಟ್ಯಾಳ್ ಎಂಬುವವರ ಕುಟುಂಬದವರು ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳಕ್ಕೆ ತೆರಳಿದ್ದರು. ಶಾಹಿ ಸ್ನಾನ ಮುಗಿಸಿ ಅಯೋಧ್ಯೆಗೆ ಹೋಗಿದ್ದರು. ಕುಟುಂಬಸ್ಥರು ಶನಿವಾರ ರಾತ್ರಿ ಅಯೋಧ್ಯೆಯಲ್ಲಿ ಕಾರು ಪಾರ್ಕಿಂಗ್ ಮಾಡಿ ದರ್ಶನಕ್ಕೆ ಹೋಗಿದ್ದರು. ಈ ವೇಳೆ ಖದೀಮರು ಕಾರಿನ ಕಿಟಕಿ ಗಾಜು ಒಡೆದು ಬ್ಯಾಗ್, 10 ಮೊಬೈಲ್, 20,000 ರೂ., ಎಟಿಎಂ ಕಾರ್ಡ್ ಸೇರಿ ಬಟ್ಟೆ ಕಳ್ಳತನ ಮಾಡಿದ್ದಾರೆ. ಶ್ರೀರಾಮನ ದರ್ಶನ ಮುಗಿಸಿ ಬಂದು ನೋಡಿದಾಗ ಕಳ್ಳತನ ಆಗಿರುವುದು ಗೊತ್ತಾಗಿದೆ. ಇದರಿಂದ 2 ಕುಟುಂಬಗಳು ಸಂಕಷ್ಟಕ್ಕೆ ಸಿಲುಕಿದೆ. ನಮಗೆ ಆದಂತೆ ಬೇರೆ ಜನರಿಗೆ ಆಗದಿರಲಿ. ರಾಜ್ಯದಿಂದ ಹಲವು ಜನರು ಈಗಲೂ ಕುಂಭಮೇಳಕ್ಕೆ ಹೋಗುತ್ತಿದ್ದಾರೆ. ಹೀಗಾಗಿ ಅವರ ಬ್ಯಾಗ್, ಮೊಬೈಲ್ ಹಾಗೂ ಹಣವನ್ನು ಜೋಪಾನವಾಗಿ ಇಟ್ಟುಕೊಳ್ಳಲಿ…

Read More

ಭಾರತವನ್ನು ಬಗ್ಗು ಬಡಿಯುವುದಕ್ಕಿಂತ ಚಾಂಪಿಯನ್ಸ್ ಟ್ರೋಫಿ ಗೆಲ್ಲೋದು ಮುಖ್ಯ ಎಂದು ಪಾಕ್ ಉಪನಾಯಕ ಸಲ್ಮಾನ್ ಅಲಿ ಅಘಾ ಹೇಳಿದ್ದಾರೆ. https://ainlivenews.com/dk-shivakumar-ready-for-local-body-elections-dcm-dk/ ಚಾಂಪಿಯನ್ಸ್ ಟ್ರೋಫಿ ಆರಂಭಕ್ಕೆ ದಿನಗಣನೆ ಶುರುವಾಗಿದೆ. ಫೆಬ್ರವರಿ 19 ರಿಂದ ಆರಂಭವಾಗಲಿರುವ ಈ ಟೂರ್ನಿಗೆ ಪಾಕಿಸ್ತಾನ್ ಕ್ರಿಕೆಟ್ ಬೋರ್ಡ್ ಆತಿಥ್ಯವಹಿಸುತ್ತಿದೆ. ಇದಾಗ್ಯೂ ಈ ಟೂರ್ನಿಯು ಹೈಬ್ರಿಡ್ ಮಾದರಿಯಲ್ಲಿ ನಡೆಯಲಿದ್ದು, ಅದರಂತೆ ಬಹುತೇಕ ಪಂದ್ಯಗಳು ಪಾಕಿಸ್ತಾನದಲ್ಲಿ ನಡೆದರೆ, ಭಾರತದ ಪಂದ್ಯಗಳು ದುಬೈನಲ್ಲಿ ಜರುಗಲಿದೆ ಫೆಬ್ರವರಿ 23 ರಂದು ದುಬೈ ಇಂಟರ್​ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆಯಲಿರುವ ಪಂದ್ಯದಲ್ಲಿ ಬದ್ಧ ವೈರಿಗಳಾದ ಭಾರತ ಮತ್ತು ಪಾಕಿಸ್ತಾನ್ ತಂಡಗಳು ಮುಖಾಮುಖಿಯಾಗಲಿದೆ. ಇಡೀ ವಿಶ್ವವೇ ಕಾತುರದಿಂದ ಕಾಯುತ್ತಿರುವ ಈ ಪಂದ್ಯದಲ್ಲಿ ಯಾರು ಗೆಲ್ಲುತ್ತಾರೆ ಎಂಬುದೇ ಈಗ ಕುತೂಹಲ. ಹೀಗಾಗಿಯೇ ಈ ಬಾರಿಯ ಟೂರ್ನಿಯಲ್ಲಿ ಭಾರತದ ವಿರುದ್ಧ ಪಾಕಿಸ್ತಾನ್ ಗೆಲ್ಲಲಿದೆಯಾ ಎಂಬ ಪ್ರಶ್ನೆಯನ್ನು ಪಾಕ್ ತಂಡದ ಉಪನಾಯಕ ಸಲ್ಮಾನ್ ಅಲಿ ಅಘಾ ಅವರಲ್ಲಿ ಕೇಳಲಾಗಿತ್ತು. ಭಾರತವನ್ನು ಸೋಲಿಸುವುದೇ ಅಥವಾ 2025ರ ಐಸಿಸಿ ಚಾಂಪಿಯನ್ಸ್ ಟ್ರೋಫಿ ಗೆಲ್ಲುವುದೇ? ಪಾಕಿಸ್ತಾನ್ ತಂಡದ ಮುಖ್ಯ…

Read More