Author: AIN Author

ಆನೇಕಲ್:- ಪಾದಚಾರಿಗೆ ಬೈಕ್ ಡಿಕ್ಕಿಯಾಗಿ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಬನ್ನೇರುಘಟ್ಟ ಮುಖ್ಯರಸ್ತೆ ಕುಂಬಾರನಹಳ್ಳಿ ಗೇಟ್ ಬಳಿ ಜರುಗಿದೆ. https://ainlivenews.com/kuruburu-shanthakumar-seriously-injured-airlifted-from-punjab-to-bangalore/ ಮುನಿರಾಮಯ್ಯ(58) ಮೃತ ಪಾದಚಾರಿ. ಪಾದಚಾರಿಗೆ ಬೈಕ್ ಸವಾರ ಇಮಾನ್ ಡಿಕ್ಕಿ ಹೊಡೆದಿದ್ದಾರೆ. ಬುಲೆಟ್ ಸವಾರ ಇಮಾನ್ ಗೂ ಗಂಭೀರ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಅತಿ ವೇಗ ಘಟನೆಗೆ ಕಾರಣ ಎನ್ನಲಾಗಿದೆ. ಡಿಕ್ಕಿಯ ರಭಸಕ್ಕೆ ಸ್ಥಳದಲ್ಲಿಯೇ ಪಾದಚಾರಿ ಮುನಿರಾಮಯ್ಯ ಸಾವನ್ನಪ್ಪಿದ್ದಾರೆ. ಬುಲೆಟ್ ಬೈಕನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಜಿಗಣಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು : ಪಂಜಾಬಿನ ಪಟಿಯಾಲ ಬಳಿ ಸಂಭವಿಸಿದ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿರುವ ರೈತ ಮುಖಂಡ ಕುರುಬೂರು ಶಾಂತಕುಮಾರ್ ಅವರನ್ನು ಇಂದು ಏರ್ ಆಂಬುಲೆನ್ಸ್ ಮೂಲಕ ಬೆಂಗಳೂರಿಗೆ ಕರೆ ತರಲಾಗಿದೆ.‌ https://ainlivenews.com/congress-set-out-to-extinguish-akshara-devi-by-vijayendra-says-the-governments-move-is-the-height-of-foolishness/ ಚಿಕಿತ್ಸೆಗಾಗಿ ಶಾಂತಕುಮಾರ್ ಅವರನ್ನು ಇದೀಗ ಮಣಿಪಾಲ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಶಾಂತಕುಮಾರ್ ಅವರು ಶೀಘ್ರ ಗುಣಮುಖರಾಗಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಾರೈಸಿದ್ದಾರೆ. ಮೂರು ದಿನಗಳ ಹಿಂದೆ ಸಂಭವಿಸಿದ ಅಪಘಾತದಲ್ಲಿ ಶಾಂತಕುಮಾರ್ ಅವರು ಗಾಯಗೊಂಡು ಪಟಿಯಾಲದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ವಿಷಯ ತಿಳಿದ ಕೂಡಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಏರ್ ಆಂಬುಲೆನ್ಸ್ ಮೂಲಕ ಶಾಂತಕುಮಾರ್ ಅವರನ್ನು ಬೆಂಗಳೂರಿಗೆ ಕರೆತರುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು ‌ ಈ ಮಧ್ಯೆ ದೆಹಲಿ ನಿವಾಸಿ ಆಯುಕ್ತರಾದ ಇಂಕೊಂಗ್ಲ ಜಮೀರ್ ಅವರು ಪಂಜಾಬ್ ಸರ್ಕಾರದ ಮುಖ್ಯ ಕಾರ್ಯದರ್ಶಿ ಹಾಗೂ ಪಟಿಯಾಲದ ಆಸ್ಪತ್ರೆ ವೈದ್ಯರ ಜೊತೆ ಸತತ ಸಂಪರ್ಕದಲ್ಲಿದ್ದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸೂಚನೆ ಮೇರೆಗೆ ಅಧಿಕಾರಿಗಳು ನಿನ್ನೆ ಏರ್ ಆಂಬುಲೆನ್ಸ್ ಸಜ್ಜುಗೊಳಿಸಿದ್ದರು. ಇಬ್ಬರು ಸಹಾಯಕರು ಹಾಗೂ…

Read More

ಬೆಂಗಳೂರು:- ಅಕ್ಷರ ದೀವಿಗೆ ನಂದಿಸಲು ಹೊರಟ ಸರ್ಕಾರದ ನಡೆ ಅವಿವೇಕದ ಪರಮಾವಧಿ ಎಂದು ಬಿವೈ ವಿಜಯೇಂದ್ರ ಹೇಳಿದ್ದಾರೆ. https://ainlivenews.com/a-bus-that-went-to-overtake-and-collided-with-a-bike-a-death/ 9 ವಿಶ್ವವಿದ್ಯಾನಿಲಯಗಳಿಗೆ ಬೀಗ ಜಡಿಯಲು ಹೊರಟಿರುವ ಸರ್ಕಾರದ ನಡೆಯನ್ನು ಖಂಡಿಸಿ ಎಕ್ಸ್ನಲ್ಲಿ ವಿಜಯೇಂದ್ರ ಪೋಸ್ಟ್ ಹಂಚಿಕೊಂಡಿದ್ದಾರೆ. ಬಡ ಹಾಗೂ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳ ಪಾಲಿನ ಶಿಕ್ಷಣ ಭಾಗ್ಯ ಕಸಿಯಲು ಹೊರಟಿರುವ ಕಾಂಗ್ರೆಸ್ ಸರ್ಕಾರದ ನಿರ್ಧಾರ ಅವಿವೇಕತನದ ಪರಮಾವಧಿಯಾಗಿದೆ. ಶಿಕ್ಷಣದ ದೂರದೃಷ್ಟಿ ಹಾಗೂ ಉನ್ನತ ಶಿಕ್ಷಣದ ಹಕ್ಕು ಪ್ರತಿಯೊಬ್ಬ ವಿದ್ಯಾರ್ಥಿಗೆ ಸರಳವಾಗಿ, ಸುಲಭವಾಗಿ ದೊರೆಯಬೇಕು ಎಂಬ ಮಹತ್ವದ ಉದ್ದೇಶದಿಂದ 9 ವಿಶ್ವವಿದ್ಯಾನಿಲಯಗಳನ್ನು ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ತಂದಿತ್ತು. ಇವುಗಳ ಅಭಿವೃದ್ಧಿಗಾಗಿ ಮೀಸಲಿರಿಸಬೇಕಾಗಿದ್ದ ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ವಿನಿಯೋಗಿಸಿಕೊಳ್ಳುವ ಕಾರಣಕ್ಕಾಗಿ ವಿವಿಗಳನ್ನು ಮುಚ್ಚಲು ಹೊರಟಿರುವ ಕಾಂಗ್ರೆಸ್ ಸರ್ಕಾರದ ನಿರ್ಧಾರ ಶಿಕ್ಷಣ ಹಾಗೂ ಅಭಿವೃದ್ಧಿ ವಿರೋಧಿಯ ಧೋರಣೆಯನ್ನು ಸಾಕ್ಷಿಕರಿಸುತ್ತಿದೆ ಎಂದು ವಿಜಯೇಂದ್ರ ಆರೋಪಿಸಿದರು. ಇತಿಹಾಸದಿಂದಲೂ ದಕ್ಷಿಣ ಭಾರತದಲ್ಲಿ `ಕರ್ನಾಟಕ ರಾಜ್ಯ ಶಿಕ್ಷಣದ ಕಾಶಿ’ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಅದಕ್ಕೆ ಹಿನ್ನಡೆಯುಂಟು ಮಾಡುವ ನಿರ್ಧಾರಗಳನ್ನು ಈ ಹಿಂದಿನ…

Read More

ಬೆಂಗಳೂರು:- ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಕುರುಬೂರು ಶಾಂತಕುಮಾರ್ ಅವರನ್ನು ಬೆಂಗಳೂರಿಗೆ ಏರ್​ಲಿಫ್ಟ್ ಮಾಡಲಾಗಿದೆ. ಹೀಗಾಗಿ ಮಣಿಪಾಲ್ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲು ಮಾಡಲಾಗಿದೆ. https://ainlivenews.com/tickets-are-expensive-our-metro-is-empty-even-on-weekends/ ಶಾಂತಕುಮಾರ್ ಅವರು ಶೀಘ್ರ ಗುಣಮುಖರಾಗಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾರೈಸಿದ್ದಾರೆ. ಮೂರು ದಿನಗಳ ಹಿಂದೆ ಸಂಭವಿಸಿದ ಅಪಘಾತದಲ್ಲಿ ಶಾಂತಕುಮಾರ್ ಅವರು ಗಾಯಗೊಂಡು ಪಟಿಯಾಲದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ವಿಷಯ ತಿಳಿದ ಕೂಡಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಏರ್ ಆಂಬುಲೆನ್ಸ್ ಮೂಲಕ ಶಾಂತಕುಮಾರ್ ಅವರನ್ನು ಬೆಂಗಳೂರಿಗೆ ಕರೆತರುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು. ‌ ಇಬ್ಬರು ಸಹಾಯಕರು ಹಾಗೂ ವೈದ್ಯರ ತಂಡದೊಂದಿಗೆ ಇಂದು ಶಾಂತಕುಮಾರ್ ಅವರನ್ನು ಬೆಂಗಳೂರಿಗೆ ಕರೆತರಲಾಗಿದೆ. ಕುರುಬೂರು ಶಾಂತಕುಮಾರ್ ಅವರನ್ನು ಬೆಂಗಳೂರಿಗೆ ಕರೆಸಿಕೊಳ್ಳಲು ವ್ಯವಸ್ಥೆ ಮಾಡಿರುವುದಾಗಿ ಸಿಎಂ ಸಿದ್ದರಾಮಯ್ಯ ಭಾನುವಾರ ಬೆಳಗ್ಗೆ ಟ್ವೀಟ್ ಮಾಡಿದ್ದರು. ಅದರ ಬೆನ್ನಲ್ಲೇ, ಶಾಂತಕುಮಾರ್ ಅವರನ್ನು ಕರೆತಂದು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ.

Read More

ಬೆಂಗಳೂರು:- ಬೆಂಗಳೂರಿನ ಜೀವನಾಡಿಯಾಗಿದ್ದ ನಮ್ಮ ಮೆಟ್ರೋ ಇದೀಗ ಬೆಲೆ ಏರಿಕೆ ಶಾಕ್‌ನಿಂದ ಸಿಲಿಕಾನ್‌ ಸಿಟಿ ಮಂದಿಯ ಕೋಪಕ್ಕೆ ಗುರಿಯಾಗಿದೆ. ಜನರಿಂದ ವಿರೋಧ ವ್ಯಕ್ತವಾದ ಕಾರಣಕ್ಕೆ ಏರಿದ್ದ ದರವನ್ನು ಅಲ್ಪವಷ್ಟೇ ಇಳಿಸಿದ್ದರೂ ಕೋಪ ತಣ್ಣಗಾಗಲಿಲ್ಲ. ಇಲ್ಲಿವರೆಗೆ ನೆಮ್ಮದಿಯ ಪ್ರಯಾಣಕ್ಕಾಗಿ ಮೆಟ್ರೋ ಹತ್ತುತ್ತಿದ್ದವರು ಇದೀಗ ಹೊಸ ಮಾರ್ಗವನ್ನು ಕಂಡುಕೊಂಡಿದ್ದಾರೆ. https://ainlivenews.com/khadimaras-craftsman-theft-by-breaking-the-glass-of-a-car-that-left-for-ayodhya/ ಮೆಟ್ರೋ ಟಿಕೆಟ್ ದರ ಏರಿಕೆ ಮಾಡಿದ್ದರಿಂದ ಜನರು ಇದೀಗ ಸ್ವಂತ ವಾಹನ ಹಾಗೂ ಬಿಎಂಟಿಸಿಯಲ್ಲಿ ಪ್ರಯಾಣಿಸುತ್ತಿದ್ದಾರೆ. ಹೀಗಾಗಿ ವೀಕೆಂಡ್‌ನಲ್ಲಿಯೂ ಮೆಟ್ರೋದಲ್ಲಿ ಪ್ರಯಾಣಿಕರು ಇಲ್ಲದೇ ಖಾಲಿ ಹೊಡೆಯುತ್ತಿವೆ. ಮೊದಲು ವೀಕೆಂಡ್‌ನಲ್ಲಿ ಓರಿಯನ್ ಮಾಲ್, ಇಸ್ಕಾನ್ ಟೆಂಪಲ್‌ಗೆ ಬರುವ ಜನರು ಹೆಚ್ಚಾಗಿ ಮೆಟ್ರೋದಲ್ಲಿ ಬರುತ್ತಿದ್ದರು. ಆದರೆ ಇವತ್ತು ಮೆಟ್ರೋದಲ್ಲಿ ಪ್ರಯಾಣಿಕರಿಲ್ಲ. ಹೀಗಾಗಿ ಸ್ಯಾಂಡಲ್ ಸೋಪ್ ಫ್ಯಾಕ್ಟರಿ ಮೆಟ್ರೋ ನಿಲ್ದಾಣದ ಬಳಿ ಪ್ರಯಾಣಿಕರೇ ಇಲ್ಲದಂತಾಗಿದ್ದು, ಮೆಟ್ರೋದಲ್ಲಿ ಪ್ರಯಾಣ ಮಾಡಲು ಜನರ ಹಿಂಜರಿಯುತ್ತಿದ್ದಾರೆ.

Read More

ಲಕ್ನೋ:- ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಕಳ್ಳರು ಕೈಚಳಕ ತೋರಿದ್ದಾರೆ. ಅಯೋಧ್ಯೆಗೆ ತೆರಳಿದ್ದ ಧಾರವಾಡದ 2 ಕುಟುಂಬಗಳ ಕಾರಿನ ಗ್ಲಾಸ್ ಒಡೆದು ಬ್ಯಾಗ್, ಮೊಬೈಲ್ ಹಾಗೂ 20,000 ರೂ. ಕಳ್ಳತನ ಮಾಡಿದ್ದಾರೆ. https://ainlivenews.com/champions-trophy-is-more-important-than-india-defeat-pakistan-vice-captain/ ಅರುಣಕುಮಾರ ಬಡಿಗೇರ ಹಾಗೂ ಮಾಳಮಡ್ಡಿಯ ಬಸವರಾಜ್ ಕೊಟ್ಯಾಳ್ ಎಂಬುವವರ ಕುಟುಂಬದವರು ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳಕ್ಕೆ ತೆರಳಿದ್ದರು. ಶಾಹಿ ಸ್ನಾನ ಮುಗಿಸಿ ಅಯೋಧ್ಯೆಗೆ ಹೋಗಿದ್ದರು. ಕುಟುಂಬಸ್ಥರು ಶನಿವಾರ ರಾತ್ರಿ ಅಯೋಧ್ಯೆಯಲ್ಲಿ ಕಾರು ಪಾರ್ಕಿಂಗ್ ಮಾಡಿ ದರ್ಶನಕ್ಕೆ ಹೋಗಿದ್ದರು. ಈ ವೇಳೆ ಖದೀಮರು ಕಾರಿನ ಕಿಟಕಿ ಗಾಜು ಒಡೆದು ಬ್ಯಾಗ್, 10 ಮೊಬೈಲ್, 20,000 ರೂ., ಎಟಿಎಂ ಕಾರ್ಡ್ ಸೇರಿ ಬಟ್ಟೆ ಕಳ್ಳತನ ಮಾಡಿದ್ದಾರೆ. ಶ್ರೀರಾಮನ ದರ್ಶನ ಮುಗಿಸಿ ಬಂದು ನೋಡಿದಾಗ ಕಳ್ಳತನ ಆಗಿರುವುದು ಗೊತ್ತಾಗಿದೆ. ಇದರಿಂದ 2 ಕುಟುಂಬಗಳು ಸಂಕಷ್ಟಕ್ಕೆ ಸಿಲುಕಿದೆ. ನಮಗೆ ಆದಂತೆ ಬೇರೆ ಜನರಿಗೆ ಆಗದಿರಲಿ. ರಾಜ್ಯದಿಂದ ಹಲವು ಜನರು ಈಗಲೂ ಕುಂಭಮೇಳಕ್ಕೆ ಹೋಗುತ್ತಿದ್ದಾರೆ. ಹೀಗಾಗಿ ಅವರ ಬ್ಯಾಗ್, ಮೊಬೈಲ್ ಹಾಗೂ ಹಣವನ್ನು ಜೋಪಾನವಾಗಿ ಇಟ್ಟುಕೊಳ್ಳಲಿ…

Read More

ಭಾರತವನ್ನು ಬಗ್ಗು ಬಡಿಯುವುದಕ್ಕಿಂತ ಚಾಂಪಿಯನ್ಸ್ ಟ್ರೋಫಿ ಗೆಲ್ಲೋದು ಮುಖ್ಯ ಎಂದು ಪಾಕ್ ಉಪನಾಯಕ ಸಲ್ಮಾನ್ ಅಲಿ ಅಘಾ ಹೇಳಿದ್ದಾರೆ. https://ainlivenews.com/dk-shivakumar-ready-for-local-body-elections-dcm-dk/ ಚಾಂಪಿಯನ್ಸ್ ಟ್ರೋಫಿ ಆರಂಭಕ್ಕೆ ದಿನಗಣನೆ ಶುರುವಾಗಿದೆ. ಫೆಬ್ರವರಿ 19 ರಿಂದ ಆರಂಭವಾಗಲಿರುವ ಈ ಟೂರ್ನಿಗೆ ಪಾಕಿಸ್ತಾನ್ ಕ್ರಿಕೆಟ್ ಬೋರ್ಡ್ ಆತಿಥ್ಯವಹಿಸುತ್ತಿದೆ. ಇದಾಗ್ಯೂ ಈ ಟೂರ್ನಿಯು ಹೈಬ್ರಿಡ್ ಮಾದರಿಯಲ್ಲಿ ನಡೆಯಲಿದ್ದು, ಅದರಂತೆ ಬಹುತೇಕ ಪಂದ್ಯಗಳು ಪಾಕಿಸ್ತಾನದಲ್ಲಿ ನಡೆದರೆ, ಭಾರತದ ಪಂದ್ಯಗಳು ದುಬೈನಲ್ಲಿ ಜರುಗಲಿದೆ ಫೆಬ್ರವರಿ 23 ರಂದು ದುಬೈ ಇಂಟರ್​ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆಯಲಿರುವ ಪಂದ್ಯದಲ್ಲಿ ಬದ್ಧ ವೈರಿಗಳಾದ ಭಾರತ ಮತ್ತು ಪಾಕಿಸ್ತಾನ್ ತಂಡಗಳು ಮುಖಾಮುಖಿಯಾಗಲಿದೆ. ಇಡೀ ವಿಶ್ವವೇ ಕಾತುರದಿಂದ ಕಾಯುತ್ತಿರುವ ಈ ಪಂದ್ಯದಲ್ಲಿ ಯಾರು ಗೆಲ್ಲುತ್ತಾರೆ ಎಂಬುದೇ ಈಗ ಕುತೂಹಲ. ಹೀಗಾಗಿಯೇ ಈ ಬಾರಿಯ ಟೂರ್ನಿಯಲ್ಲಿ ಭಾರತದ ವಿರುದ್ಧ ಪಾಕಿಸ್ತಾನ್ ಗೆಲ್ಲಲಿದೆಯಾ ಎಂಬ ಪ್ರಶ್ನೆಯನ್ನು ಪಾಕ್ ತಂಡದ ಉಪನಾಯಕ ಸಲ್ಮಾನ್ ಅಲಿ ಅಘಾ ಅವರಲ್ಲಿ ಕೇಳಲಾಗಿತ್ತು. ಭಾರತವನ್ನು ಸೋಲಿಸುವುದೇ ಅಥವಾ 2025ರ ಐಸಿಸಿ ಚಾಂಪಿಯನ್ಸ್ ಟ್ರೋಫಿ ಗೆಲ್ಲುವುದೇ? ಪಾಕಿಸ್ತಾನ್ ತಂಡದ ಮುಖ್ಯ…

Read More

ಬೆಂಗಳೂರು:- ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಕಾರ್ಯಕರ್ತರು ಸಜ್ಜಾಗಿ ಎಂದು DCM ಡಿಕೆ ಶಿವಕುಮಾರ್ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು , ಯಾವುದೇ ಕ್ಷಣದಲ್ಲಾದರೂ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಯಬಹುದು. ಹೀಗಾಗಿ ಪಕ್ಷದ ನಾಯಕರು ಹಾಗೂ ಕಾರ್ಯಕರ್ತರು ಸಜ್ಜಾಗಬೇಕು. https://ainlivenews.com/do-you-check-your-phone-as-soon-as-you-wake-up-in-the-morning-beware-this-problem-is-guaranteed/ ಈ ವೇಳೆ, ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸುವ ವಿಚಾರವಾಗಿ ನ್ಯಾಯಾಲಯದಿಂದ ಸಧ್ಯದಲ್ಲೇ ಸೂಚನೆ ಬರುವ ಸಾಧ್ಯತೆ ಇದೆ. ಇನ್ನೂ ಬೆಂಗಳೂರು ನಗರ ಪಾಲಿಕೆ ಚುನಾವಣೆಯನ್ನು ನಡೆಸಬೇಕಾಗಿದ್ದು ಗ್ರೇಟರ್ ಬೆಂಗಳೂರು ವಿಚಾರವಾಗಿ ಅಭಿಪ್ರಾಯ ಸಂಗ್ರಹಕ್ಕೆ ಮುಂದಾಗಿದ್ದೇವೆ. ಯಾವುದೇ ಕ್ಷಣದಲ್ಲಿ ಈ ಚುನಾವಣೆಗಳು ಘೋಷಣೆಯಾಗಬಹುದು. ಇದಕ್ಕೆ ನಾವೆಲ್ಲರೂ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಹೇಳಿದ್ದಾರೆ ಚುನಾವಣೆಗಳ ಸಿದ್ಧತೆಗಾಗಿ ಕಾರ್ಯಾಧ್ಯಕ್ಷರ ನೇತೃತ್ವದಲ್ಲಿ ಉಪಾಧ್ಯಕ್ಷರುಗಳನ್ನು ಸೇರಿಸಿಕೊಂಡು ವಿಭಾಗವಾರು ಸಮಿತಿ ರಚಿಸಲಿದ್ದೇವೆ. ಈ ಸಮಿತಿ ಮಾರ್ಚ್ ಒಳಗಾಗಿ ರಾಜ್ಯ ಪ್ರವಾಸ ಮಾಡಿ ಎಲ್ಲಾ ಕಡೆ ಸಮನ್ವಯತೆ ಸಾಧಿಸಿ ತಯಾರಿ ಮಾಡಿಕೊಳ್ಳಬೇಕು. ನಾಯಕರ ಮಧ್ಯೆ ಹೊಂದಾಣಿಕೆ ಸಾಧಿಸಿ, 50% ಮಹಿಳಾ ಅಭ್ಯರ್ಥಿಗಳನ್ನು ತಯಾರು ಮಾಡುವ ಬಗ್ಗೆ ವರದಿ ಸಲ್ಲಿಸಬೇಕು ಎಂದು…

Read More

ಸ್ಮಾರ್ಟ್ ಫೋನ್ ಇಲ್ಲದೆ ಇದ್ದರೆ ಆಗ ಜೀವನವೇ ಇಲ್ಲವೆನ್ನುವಂತಹ ಪರಿಸ್ಥಿತಿಯು ಇಂದಿನ ಯುಗದಲ್ಲಿದೆ. ಬೆಳಗ್ಗೆ ಬೇಗ ಎದ್ದೇಳಲು ಅಲರಾಂನಿಂದ ಹಿಡಿದು ರಾತ್ರಿ ಮಲಗುವ ತನಕ ಪ್ರತಿಯೊಂದು ವಿಚಾರಕ್ಕೂ ನಾವು ಸ್ಮಾರ್ಟ್ ಫೋನ್ ಅವಲಂಬಿಸಿದ್ದೇವೆ. ಅದರಲ್ಲೂ ಯಾವುದೇ ವಿಚಾರವು ನಮಗೆ ತಿಳಿಯದೆ ಇದ್ದರೆ ಆಗ ನಾವು ಇಂಟರ್ನೆಟ್ ಗೆ ಹೋಗಿ ಹುಡುಕಲು ಆರಂಭಿಸುತ್ತೇವೆ. ಇದು ನಮ್ಮ ಜ್ಞಾಪಕ ಶಕ್ತಿಯನ್ನು ಮತ್ತಷ್ಟು ಕಡಿಮೆ ಮಾಡಿದೆ. https://ainlivenews.com/a-yogi-died-while-doing-yoga-in-cauvery-river/ ​ಸ್ಮಾರ್ಟ್ ಫೋನ್ ಬಂದ ನಂತರ ಜನರ ದೈನಂದಿನ ಬಹುತೇಕ ಸಮಯವನ್ನು ಕೊಲ್ಲುತ್ತಿದೆ. ಎಲ್ಲಾ ವಯೋಮಾನದವರು ಸ್ಮಾರ್ಟ್​ಫೋನ್​ ಚಟಕ್ಕೆ ಬಿದ್ದು ಅದರಿಂದ ಅನೇಕ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಮಾತ್ರವಲ್ಲದೆ ಮಾನಸಿಕವಾಗಿ ಮತ್ತು ದೈಹಿಕವಾಗಿ ಅವರನ್ನು ಕುಗ್ಗಿಸುತ್ತಿದೆ. ನಿಮಗೆ ಗೊತ್ತಾ? ಮೆಲಟೋನಿನ್ ನಿದ್ರೆಯನ್ನು ನಿಯಂತ್ರಿಸುವ ಹಾರ್ಮೋನ್. ಆದರೆ ಸ್ಮಾರ್ಟ್​​ಫೋನ್ ನಿಂದ ಬರುವ ನೀಲಿ ಬೆಳಕು ನಿಮಗೆ ತೊಂದರೆ ನೀಡುತ್ತೆ. ಸ್ಮಾರ್ಟ್​ಫೋನ್​ ಬಳಕೆಯಿಂದ ಹಾರ್ಮೋನ್ ಉತ್ಪಾದನೆಯನ್ನು ತಡೆಯುತ್ತದೆ. ಬೆಳಗ್ಗೆ ಎದ್ದ ತಕ್ಷಣ ಬಹುತೇಕರು ಸ್ಮಾರ್ಟ್​ಫೋನ್ ನೋಡುತ್ತಾರೆ. ಇನ್ನು ಕೆಲವರು ಅಲರಾಂ ಇಟ್ಟುಕೊಂಡಿರುತ್ತಾರೆ. ಆದರೆ…

Read More

ಕೆಂಪು, ರಸಭರಿತವಾದ ದಾಳಿಂಬೆ, ಭೂಮಿಯ ಮೇಲಿನ ಆರೋಗ್ಯಕರ ಹಣ್ಣುಗಳಲ್ಲಿ ಒಂದಾಗಿದೆ. ಕುತೂಹಲಕಾರಿಯಾಗಿ, ಇದನ್ನು ಕೆಲವೊಮ್ಮೆ ದೇವರ ಹಣ್ಣು ಎಂದು ಕರೆಯಲಾಗುತ್ತದೆ, ಏಕೆಂದರೆ ಇದು ಹೆಚ್ಚಾಗಿ ಉಲ್ಲೇಖಿಸಲಾದ ಹಣ್ಣಿನ ದೇವತಾಶಾಸ್ತ್ರದ ಹಣ್ಣುಗಳಲ್ಲಿ ಒಂದಾಗಿದೆ. https://ainlivenews.com/former-mp-lr-shivaramegowda-rejoins-congress/ ದಾಳಿಂಬೆಯು ವಿವಿಧ ಪೌಷ್ಟಿಕಾಂಶದ ಪ್ರಯೋಜನಗಳಿಂದ ಕೂಡಿದೆ. ಈ ಹಣ್ಣಿನಲ್ಲಿ ಸುಮಾರು 19 ಗ್ರಾಂ ಕಾರ್ಬೋಹೈಡ್ರೇಟ್‌ಗಳನ್ನು ಹೊಂದಿದೆ ಎಂದು ಅಧ್ಯಯನಗಳು ಸೂಚಿಸುತ್ತವೆ, ಹಾಗೂ ದಾಳಿಂಬೆ ಹಣ್ಣು 4 ಗ್ರಾಂ ಫೈಬರ್ ಅನ್ನು ಹೊಂದಿದ್ದು, ದಾಳಿಂಬೆ ಹಣ್ಣು 78 % ನೀರು ಹೊಂದಿದೆ ಎಂದು ಅಧ್ಯಯನಗಳು ಸೂಚಿಸುತ್ತವೆ. ದಾಳಿಂಬೆ ಹಣ್ಣು ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಆದರೆ ಇದು ಕೆಲವರಿಗೆ ಹಾನಿ ಮಾಡುತ್ತದೆ. ಹಾಗಾದರೆ ಯಾರು ಈ ಹಣ್ಣು ತಿನ್ನಬಾರದು ತಿಳಿಯಲು ಮುಂದೆ ಓದಿ… ದಾಳಿಂಬೆ ಹಣ್ಣು ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಆದರೆ ಇದು ಕೆಲವರಿಗೆ ಹಾನಿ ಮಾಡುತ್ತದೆ. ಈಗ ದಾಳಿಂಬೆಯನ್ನು ಯಾರು ತಿನ್ನಬಾರದು ಎಂದು ನೋಡೋಣ. ದಾಳಿಂಬೆಯಲ್ಲಿ ವಿಟಮಿನ್ ಸಿ, ಕೆ, ಮೆಗ್ನೀಸಿಯಮ್, ರಂಜಕ, ಪೊಟ್ಯಾಸಿಯಮ್, ಫೈಬರ್ ಮತ್ತು ಪ್ರೋಟೀನ್‌ನಂತಹ…

Read More