ಹುಬ್ಬಳ್ಳಿ : ಕರ್ನಾಟಕ ರಾಜ್ಯ ಸಂಬಾರು ಪದಾರ್ಥಗಳ ಅಭಿವೃದ್ಧಿ ಮಂಡಳಿ, ತೋಟಗಾರಿಕೆ ಇಲಾಖೆ (ಜಿಲ್ಲಾ ಪಂಚಾಯತ) ಧಾರವಾಡ, ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆ, ಹುಬ್ಬಳ್ಳಿ ಮತ್ತು ಆಮರಶಿವ ರೈತ ಉತ್ಪಾದಕ ಸಂಸ್ಥೆ, ಸಂಶಿ (ಕುಂದಗೋಳ) ಇವುಗಳ ಸಂಯುಕ್ತಾಶ್ರಯದಲ್ಲಿ 13ನೇ ಒಣ ಮೆಣಸಿನಕಾಯಿ ಮೇಳವನ್ನು ಜನವರಿ 31 ರಿಂದ ಫೆಬ್ರವರಿ 2 ರವರೆಗೆ ಅಮರಗೋಳದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ವಿವಿಧೋದ್ದೇಶ ವಸ್ತು ಪ್ರದರ್ಶನ ಆವರಣದಲ್ಲಿ ಆಯೋಜಿಸಲಾಗಿದೆ ಎಂದು ಕರ್ನಾಟಕ ರಾಜ್ಯ ಸಂಬಾರು ಪದಾರ್ಥಗಳ ಅಭಿವೃದ್ಧಿ ಮಂಡಳಿಯ ವ್ಯವಸ್ಥಾಪಕ ನಿರ್ದೇಶಕರಾದ ಬಿ.ಆರ್. ಗಿರೀಶ್ ಹೇಳಿದರು. https://ainlivenews.com/today-is-saturday-never-buy-these-items-for-any-reason/ ಇಂದು ವಿದ್ಯಾನಗರದ ನೇಕಾರ ಭವನದ ಕರ್ನಾಟಕ ರಾಜ್ಯ ಸಂಬಾರು ಪದಾರ್ಥಗಳ ಅಭಿವೃದ್ಧಿ ಮಂಡಳಿಯ ವ್ಯವಸ್ಥಾಪಕ ನಿರ್ದೇಶಕರ ಕಚೇರಿಯಲ್ಲಿ ನಡೆದ ಸುದ್ದಿ ಗೋಷ್ಠಿ ಯಲ್ಲಿ ಮಾತನಾಡಿದ ಅವರು, ರೈತರಿಂದ ಗ್ರಾಹಕರಿಗೆ ಒಣಮೆಣಸಿನಕಾಯಿಯ ನೇರ ಮಾರಾಟವನ್ನು ಪ್ರೋತ್ಸಾಹಿಸುವುದು, ಒಣಮೆಣಸಿನಕಾಯಿ ಬೆಳೆಗಾರರ ಮತ್ತು ಗ್ರಾಹಕರ ಸಂಪರ್ಕ ಕಲ್ಪಿಸುವುದು, ಒಣಮೆಣಸಿನಕಾಯಿಯ ಬೆಳೆಗಾರರು, ಗ್ರಾಹಕರು, ವಿಜ್ಞಾನಿಗಳು ಮತ್ತು ಸಂಸ್ಕರಣಾದಾರರನ್ನು ಒಂದೇ ವೇದಿಕೆಯಲ್ಲಿ ಒಗ್ಗೂಡಿಸುವುದು, ಒಣ…
Author: AIN Author
ಹಾಸನ:- ಹಾಸನದಲ್ಲಿ ಕರುವೊಂದನ್ನು ಕದ್ದು ಬಾಡೂಟ ಮಾಡಿದ ಪ್ರಕರಣ ಬೆಳಕಿಗೆ ಬಂದಿದೆ. https://ainlivenews.com/instruction-to-take-appropriate-action-for-complete-ban-of-single-use-plastic-in-mahadevpur-zone/ ಹೂವಣ್ಣ ಎಂಬುವವರಿಗೆ ಸೇರಿದ್ದ ಕರುವನ್ನು ದುಷ್ಕರ್ಮಿಗಳು ಹೊತ್ತೊಯ್ದು, ಕಡಿದು ಮಾಂಸದೂಟ ಮಾಡಿದ್ದಾರೆ. ಮಂಗಳವಾರ ಕರುವನ್ನು ದುಷ್ಕರ್ಮಿಗಳು ಕದ್ದಿದ್ದರು. ಕರುವಿಗಾಗಿ ಹುಡುಕಾಟ ನಡೆಸಿದಾಗ, ಮಡಬಲು ಗ್ರಾಮದ ರೈಲ್ವೆ ಗೇಟ್ ಸಮೀಪ ಕರುವಿನ ರುಂಡ ಪತ್ತೆಯಾಗಿತ್ತು. ಈ ಸಂಬಂಧ 7 ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಅದೇ ಗ್ರಾಮದ ಅಜ್ಗರ್, ಕೌಶಿಕ್, ಮೋಹನ್, ಮನೋಜ್, ಚಂದನ್, ಪವನ್ ಮತ್ತು ಅಜಿತ್ ಎಂದು ಗುರುತಿಸಲಾಗಿದೆ.
ಬೆಂಗಳೂರು: ಮಹದೇವಪುರ ವಲಯ ವ್ಯಾಪ್ತಿಯಲ್ಲಿ ಒಮ್ಮೆ ಬಳಸುವ ಪ್ಲಾಸ್ಟಿಕ್ ಅನ್ನು ಸಂಪೂರ್ಣವಾಗಿ ನಿಷೇಧಿಸಲು ಸೂಕ್ತ ಕ್ರಮ ಕೈಗೊಳ್ಳಲು ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿ ನಾಥ್ ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು. https://ainlivenews.com/what-gold-suresh-said-about-bhavya-trivikram-love/ ಮಹದೇವಪುರ ವಲಯದಲ್ಲಿ ಕೆ.ಆರ್ ಪುರಂ ಕಛೇರಿಯಲ್ಲಿ ಇಂದು ಮುಖ್ಯ ಆಯುಕ್ತರ ನಡೆ ವಲಯದ ಕಡೆ ಕಾರ್ಯಕ್ರಮದಲ್ಲಿ ನಡೆದ ವೇಳೆ ಸಾರ್ವಜನಿಕರೊಬ್ಬರು ಮಾತನಾಡಿ, ಕೆ.ಆರ್ ಪುರಂ ವ್ಯಾಪ್ತಿಯಲ್ಲಿ ಒಮ್ಮೆ ಬಳಸುವ ಪ್ಲಾಸ್ಟಿಕ್ ಬಳಕೆ ಹೆಚ್ಚಿದ್ದು, ಅದನ್ನು ನಿಯಂತ್ರಿಸಲು ಮನವಿ ಮಾಡಿದರು. ಅದಕ್ಕೆ ಮುಖ್ಯ ಆಯುಕ್ತರು ಪ್ರತಿಕ್ರಿಯಿಸಿ, ಒಮ್ಮೆ ಬಳಸುವ ಪ್ಲಾಸ್ಟಿಕ್ ಅನ್ನು ಸಂಪೂರ್ಣವಾಗಿ ನಿಷೆಧಿಸಬೇಕಿದೆ. ಈ ನಿಟ್ಟಿನಲ್ಲಿ ಸಂಬಂಧಪಟ್ಟ ಅಧಿಕಾರಿಗಳು, ಮಾರ್ಷಲ್ಗಳು ಸೇರಿ ಒಮ್ಮೆ ಬಳಸುವ ಪ್ಲಾಸ್ಟಿಕ್ ಅನ್ನು ಹೆಚ್ಚು ಬಳಕೆ ಮಾಡುವ ಪ್ರದೇಶಗಳಿಗೆ ಅನಿರೀಕ್ಷಿತ ದಾಳಿ ನಡೆಸಿ ವಶಪಡಿಸಿಕೊಳ್ಳುವುದರ ಜೊತೆಗೆ ದಂಡ ವಿಧಿಸಬೇಕು. ಜೊತೆಗೆ ಒಮ್ಮೆ ಬಳಸುವ ಪ್ಲಾಸ್ಟಿಕ್ ಬಳಸದಂತೆ ಮಾರಾಟಗಾರರಿಗೆ ಎಚ್ಚರಿಕೆ ನೀಡಬೇಕೆಂದು ಸೂಚನೆ ನೀಡಿದರು. ಸ್ಥಳ ಪರಿಶೀಲಿಸಿ ಕ್ರಮ ಕೈಗೊಳ್ಳಿ: ಕೆ.ಆರ್ ಪುರಂ ವ್ಯಾಪ್ತಿಯಲ್ಲಿ…
ಗೋಲ್ಡ್ ಸುರೇಶ್ ಅವರು ಬಿಗ್ ಬಾಸ್ ಮನೆಯಿಂದ ಅರ್ಧಕ್ಕೆ ಹೊರ ನಡೆದರು. ವೈಯಕ್ತಿಕ ಕಾರಣಗಳನ್ನು ನೀಡಿ ಆಟವನ್ನು ಅರ್ಧಕ್ಕೆ ನಿಲ್ಲಿಸಬೇಕಾಯಿತು. ಈಗ ಅವರು ದೊಡ್ಮನೆಗೆ ಅತಿಥಿಯಾಗಿ ಆಗಮಿಸಿದ್ದಾರೆ. ಇದು ಅವರ ಅಭಿಮಾನಿಗಳಿಗೆ ಖುಷಿ ಕೊಟ್ಟಿದೆ. ನಿತ್ಯವೂ ಬಿಗ್ ಬಾಸ್ ಶೋ ನೋಡುವ ಸುರೇಶ್ ಅವರು ಭವ್ಯಾ ಬಳಿ ಪ್ರಶ್ನೆ ಮಾಡಿದ್ದಾರೆ. https://ainlivenews.com/muda-scam-related-ed-confiscated-142-immovable-properties-worth-300-crores/ ತ್ರಿವಿಕ್ರಂ ಬಳಿ ತೆರಳಿದ ಸುರೇಶ್ ‘ಚೆನ್ನಾಗಿದೆ ಲವ್’ ಎಂದರು. ‘ಪ್ರಪೋಸ್ ಮಾಡಿದ್ದು ಒಪ್ಪಿಕೊಂಡ್ರಾ’ ಎಂದು ಸುರೇಶ್ ಕೇಳಿದರು. ‘ಪ್ರಪೋಸಾ? ಏನ್ ಏನ್ ಹೇಳ್ತಾ ಇದೀರಾ’ ಎಂದು ಭವ್ಯಾ ಏನೂ ಗೊತ್ತಿಲ್ಲದಂತೆ ಆ್ಯಕ್ಟ್ ಮಾಡಿದರು. ಇದನ್ನು ಕೇಳಿ ಮನೆ ಮಂದಿಗೆ ಅಚ್ಚರಿ ಆಯಿತು. ಈ ರೀತಿಯ ವಿಚಾರವೇ ನಮಗೆ ಗೊತ್ತಿರಲಿಲ್ಲ ಎಂದರು. ‘ನಾನು ಮೂರು ವರ್ಷ ಮದುವೆ ಆಗಲ್ಲ’ ಎಂಬರ್ಥದಲ್ಲಿ ಮಾತನಾಡಿದರು. ಭವ್ಯಾ ಹಾಗೂ ತ್ರಿವಿಕ್ರಂ ಮಧ್ಯೆ ಮಿಸ್ ಅಂಡರ್ಸ್ಟ್ಯಾಂಡಿಗ್ ಬರ್ತಿದೆ. ಈ ಬಗ್ಗೆ ಭವ್ಯಾ ಬಳಿ ಅನುಷಾ ರೈ ಪ್ರಶ್ನೆ ಮಾಡಿದ್ದಾರೆ. ‘ನಮ್ಮ ಮಧ್ಯೆ ಸಣ್ಣ ಸಣ್ಣ ವಿಚಾರಕ್ಕೆ…
ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮೂಡಾ) ನಿವೇಶನ ಹಂಚಿಕೆಯಲ್ಲಿ ನಡೆದಿದೆ ಎನ್ನಲಾದ ಹಗರಣ ಸಂಬಂಧ ಅಕ್ರಮ ಹಣ ವರ್ಗಾವಣೆ ಕಾಯ್ದೆಯಡಿ ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯವು ಇದೇ ಮೊದಲ ಬಾರಿಗೆ ತನಿಖೆ ಕುರಿತು ಮಾಹಿತಿ ನೀಡಿದೆ. https://ainlivenews.com/budget-session-of-parliament-from-jan-31-nirmala-sitharaman-will-create-a-record/ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಇನ್ನಿತರರ ವಿರುದ್ಧ ಸಂಬಂಧಿಸಿದ ಮೂಡಾ ನಿವೇಶನ ಹಂಚಿಕೆ ಹಗರಣ ತನಿಖೆ ನಡೆಸುತ್ತಿರುವ ಇ.ಡಿ.ಅಧಿಕಾರಿಗಳು 300 ಕೋಟಿ ಮೌಲ್ಯದ ಸ್ಥಿರಾಸ್ತಿ ಮುಟ್ಟುಗೋಲು ಹಾಕಿಕೊಂಡಿದ್ದಾರೆ. ಪ್ರಕರಣ ಸಂಬಂಧ ರಿಯಲ್ ಎಸ್ಟೇಟ್ ಏಜೆಂಟ್ ಉದ್ಯಮಿ ಸೇರಿದಂತೆ ವಿವಿಧ ವ್ಯಕ್ತಿಗಳ ಹೆಸರಿನಲ್ಲಿದ್ದ ಪ್ರಾಪರ್ಟಿ, ನಿವೇಶನ, ಜಮೀನು ಸೇರಿದಂತೆ ಇನ್ನಿತರ ಆಸ್ತಿ ಒಳಗೊಂಡಂತೆ 300 ಕೋಟಿ ಮೌಲ್ಯದ 142 ಸ್ಥಿರಾಸ್ತಿಯನ್ನ ಮುಟ್ಟುಗೋಲು ಹಾಕಿಕೊಂಡಿರುವುದಾಗಿ ಸಾಮಾಜಿಕ ಜಾಲತಾಣ ಎಕ್ಸ್ ಖಾತೆಯಲ್ಲಿ ಇ.ಡಿ ತಿಳಿಸಿದೆ. ಮೈಸೂರಿನ ಕೆಸರೆ ಗ್ರಾಮದ ಸರ್ವೇ ನಂ.464ರಲ್ಲಿ 3 ಎಕರೆ 16 ಗುಂಟೆ ಜಮೀನನ್ನು ಪ್ರಾಧಿಕಾರವು ಭೂಸ್ವಾಧೀನವಿಲ್ಲದೇ ಉಪಯೋಗಿಸಿಕೊಂಡಿದ್ದಕ್ಕಾಗಿ ಪರಿಹಾರದ ಬದಲಾಗಿ ವಿಜಯನಗರ 3 ಮತ್ತು 4 ನೇ ಹಂತದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ನಿ…
ನವದೆಹಲಿ:- ಜನವರಿ 31 ಮತ್ತು ಫೆಬ್ರವರಿ 13 ರಂದು ಸಂಸತ್ತಿನ ಬಜೆಟ್ ಅಧಿವೇಶನದ ಮೊದಲ ಭಾಗವು ನಡೆಯಲಿದೆ. https://ainlivenews.com/traffic-control-parking-ban-on-these-roads-of-bangalore-for-2-days/ ಜ.31ರಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಲೋಕಸಭೆ ಮತ್ತು ರಾಜ್ಯಸಭೆಯ ಸದಸ್ಯರನ್ನು ಉದ್ದೇಶಿಸಿ ಭಾಷಣ ಮಾಡುವ ಮೂಲಕ ಅಧಿವೇಶನ ಆರಂಭವಾಗಲಿದೆ. ಬಳಿಕ ಆರ್ಥಿಕ ಸಮೀಕ್ಷೆಯನ್ನು ಮಂಡಿಸಲಾಗುತ್ತದೆ. ಇನ್ನೂ ಬಜೆಟ್ ಅಧಿವೇಶನದ 2ನೇ ಭಾಗವು ಮಾರ್ಚ್ 10 ರಿಂದ ಏಪ್ರಿಲ್ 4ರ ವರೆಗೆ ನಡೆಯಲಿದೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಫೆ.1ರಂದು ತಮ್ಮ ದಾಖಲೆಯ 8ನೇ ಬಜೆಟ್ ಅನ್ನು ಮಂಡಿಸಲಿದ್ದಾರೆ. ಜ.31ರಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಲೋಕಸಭೆ ಮತ್ತು ರಾಜ್ಯಸಭೆಯ ಸದಸ್ಯರನ್ನು ಉದ್ದೇಶಿಸಿ ಭಾಷಣ ಮಾಡುವ ಮೂಲಕ ಅಧಿವೇಶನ ಆರಂಭವಾಗಲಿದೆ. ಬಳಿಕ ಆರ್ಥಿಕ ಸಮೀಕ್ಷೆಯನ್ನು ಮಂಡಿಸಲಾಗುತ್ತದೆ. ಇನ್ನೂ ಬಜೆಟ್ ಅಧಿವೇಶನದ 2ನೇ ಭಾಗವು ಮಾರ್ಚ್ 10 ರಿಂದ ಏಪ್ರಿಲ್ 4ರ ವರೆಗೆ ನಡೆಯಲಿದೆ
ಬೆಂಗಳೂರು:- ಬೆಂಗಳೂರಿನ ಅರಮನೆ ರಸ್ತೆ, ಬಳ್ಳಾರಿ ರಸ್ತೆಯಲ್ಲಿ ವಾಹನ ಸಂಚಾರ 2 ದಿನ ನಿಯಂತ್ರಣ ಮಾಡಲಾಗಿದ್ದು, ವಾಹನ ನಿಲುಗಡೆ ನಿಷೇಧ ಮಾಡಲಾಗಿದೆ. https://ainlivenews.com/ullala-robbery-case-vijayendra-lashed-out-at-the-government/ ಅರಮನೆ ಮೈದಾನದಲ್ಲಿ ಶನಿವಾರ ಮತ್ತು ಭಾನುವಾರ ರಂದು ಎರಡು ದಿನ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾವತಿಯಿಂದ “ಬ್ರಾಹ್ಮಣ ಮಹಾ ಸಮ್ಮೇಳನ” ಕಾರ್ಯಕ್ರಮ ಆಯೋಜಿಸಲಾಗಿದೆ. ಕಾರ್ಯಕ್ರಮಕ್ಕೆ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹಾಗೂ ಇತರೆ ಸಚಿವರುಗಳು, ಗಣ್ಯರು ಸೇರಿದಂತೆ ವಿವಿಧ ಜಿಲ್ಲೆಗಳಿಂದ ಸುಮಾರು 10 ಸಾವಿರದಿಂದ ರಿಂದ 15 ಸಾವಿರ ಜನರು ಆಗಮಿಸಲಿದ್ದಾರೆ. ಸಂಚಾರಿ ಪೊಲೀಸರು ಅರಮನೆ ಮೈದಾನ ರಸ್ತೆ ಮತ್ತು ಬಳ್ಳಾರಿ ರಸ್ತೆಯಲ್ಲಿ ಸಂಚಾರ ನಿಯಂತ್ರಣ ಮಾಡಿದ್ದಾರೆ. ಪರ್ಯಾಯ ಮಾರ್ಗ:- ನಗರದ ಒಳಭಾಗದಿಂದ ಕಾರ್ಯಕ್ರಮಕ್ಕೆ ಬರುವ ವಾಹನಗಳು ವಿಂಡ್ಕರ್ಮ್ಯಾನರ್ ಜಂಕ್ಷನ್-ಬಿ.ಡಿ.ಎ ಅಪ್ರ್ಯಾಂವ್-ರಮಣಮಹರ್ಷಿ ರಸ್ತೆಯ ಪಿ.ಜಿ.ಹಳ್ಳಿ ಬಸ್ ನಿಲ್ದಾಣ-ಕಾವೇರಿ ಜಂಕ್ಷನ್ ಮೇಕ್ರಿ ಸರ್ಕಲ್ ಸರ್ವಿಸ್ ರಸ್ತೆ-ಮೇಕ್ರಿ ಸರ್ಕಲ್ ಬಲ ಯೂತಿರುವು ಪಡೆದು ಮೇಕ್ರಿ ಸರ್ಕಲ್ ಸರ್ವಿಸ್ ರಸ್ತೆಯಲ್ಲಿ ಸಾಗಿ ಗೇಟ್ ನಂ-01 ಕೃಷ್ಣವಿಹಾರ ಅರಮನೆ ಮೈದಾನದಲ್ಲಿ ವಾಹನಗಳನ್ನು ಪಾರ್ಕಿಂಗ್…
ಬೆಂಗಳೂರು:- ಉಲ್ಲಾಳದಲ್ಲಿ ನಡೆದ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರದ ವಿರುದ್ಧ ವಿಜಯೇಂದ್ರ ವಾಗ್ದಾಳಿ ಎಂದು ವಾಗ್ದಾಳಿ ಮಾಡಿದ್ದಾರೆ. https://ainlivenews.com/sports-awards-for-32-athletes-of-the-country/ ಕರ್ನಾಟಕದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದ್ದು ಅರಾಜಕತೆ ಉಂಟಾಗಿರುವುದನ್ನು ಸಾಕ್ಷೀಕರಿಸುತ್ತಿದೆ ಎಂದರು. ಗಡಿ ಜಿಲ್ಲೆಗಳನ್ನೇ ಗುರಿಯಾಗಿಸಿಕೊಂಡು ಜಾಲವೊಂದು ವ್ಯವಸ್ಥಿತವಾಗಿ ಬೀದರ್ ಬಳಿಕ ದಕ್ಷಿಣ ಕನ್ನಡದ ಉಲ್ಲಾಳದಲ್ಲೂ ಹಾಡು ಹಗಲೇ ಬಂದೂಕು ತೋರಿಸಿ ಕೋಟ್ಯಂತರ ರೂಪಾಯಿ ಹಣ ಹಾಗೂ ಚಿನ್ನ ಲೂಟಿಮಾಡಿರುವ ಘಟನೆ ಕರ್ನಾಟಕದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದ್ದು ಅರಾಜಕತೆ ಉಂಟಾಗಿರುವುದನ್ನು ಸಾಕ್ಷೀಕರಿಸುತ್ತಿದೆ. ಕರ್ನಾಟಕವೆಂದರೆ ಮಾಫಿಯಾಗಳು, ಅತ್ಯಾಚಾರಿಗಳು, ಡಕಾಯಿತರು ಹಾಗೂ ಭಯೋತ್ಪಾದಕರಿಗೆ ಸುರಕ್ಷಿತ ತಾಣ ಎಂಬ ಸಂದೇಶ ರವಾನೆಯಾಗುತ್ತಿರುವುದು ಕಾಂಗ್ರೆಸ್ ಸರ್ಕಾರದ ಆಡಳಿತದ ಕೆಟ್ಟ ವೈಫಲ್ಯದ ಫಲವಾಗಿದೆ ಎಂದರು.
ನವದೆಹಲಿ:- ರಾಷ್ಟ್ರಪತಿ ಭವನದಲ್ಲಿ ಕ್ರೀಡಾ ಪ್ರಶಸ್ತಿ ಪ್ರಧಾನ ಸಮಾರಂಭ ನಡೆದಿದೆ. ಈ ವೇಳೆ ದೇಶದ 32 ಕ್ರೀಡಾಪಟುಗಳಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ರಾಷ್ಟ್ರೀಯ ಕ್ರೀಡಾ ಪ್ರಶಸ್ತಿ ಪ್ರಧಾನ ಮಾಡಿ ಗೌರವಿಸಿದ್ದಾರೆ. https://ainlivenews.com/attention-metro-passengers-variation-in-train-traffic-on-this-route-tomorrow/ ಮತ್ತು ಪುರುಷರ ಹಾಕಿ ತಂಡ ನಾಯಕ ಹರ್ಮನ್ಪ್ರೀತ್ ಸಿಂಗ್ ಮತ್ತು ಪ್ಯಾರಾಲಿಂಪಿಕ್ ಚಿನ್ನದ ಪದಕ ವಿಜೇತ ಹೈಜಂಪರ್ ಪ್ರವೀಣ್ ಕುಮಾರ್ ಅವರು ದೇಶದ ಅತ್ಯುನ್ನತ ಕ್ರೀಡಾ ಗೌರವ ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿಯನ್ನು ಸ್ವೀಕರಿಸಿದರು. ಇನ್ನು ಅನ್ನು ರಾಣಿ ಸೇರಿದಂತೆ 32 ಕ್ರೀಡಾಪಟುಗಳು ಅರ್ಜುನ ಪ್ರಶಸ್ತಿ ಸ್ವೀಕರಿಸಿದರೆ, ಐವರು ಕೋಚ್ ಗಳಿಗೆ ದೋಣಾಚಾರ್ಯ ಪ್ರಶಸ್ತಿ ನೀಡಿ ಗೌರವಿಸಲಾಯಿತು ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿ ಸ್ವೀಕರಿಸಿದವರು: ಡಿ ಗುಕೇಶ್ (ಚೆಸ್) ಹರ್ಮನ್ಪ್ರೀತ್ ಸಿಂಗ್ (ಹಾಕಿ) ಪ್ರವೀಣ್ ಕುಮಾರ್ (ಪ್ಯಾರಾ-ಅಥ್ಲೆಟಿಕ್ಸ್) ಮನು ಭಾಕರ್ (ಶೂಟಿಂಗ್). ಅರ್ಜುನ ಪ್ರಶಸ್ತಿ ಸ್ವೀಕರಿಸಿದವರು: ಜ್ಯೋತಿ ಯರ್ರಾಜಿ (ಅಥ್ಲೆಟಿಕ್ಸ್) ಅನ್ನು ರಾಣಿ (ಅಥ್ಲೆಟಿಕ್ಸ್) ನೀತು (ಬಾಕ್ಸಿಂಗ್) ಸಾವೀಟಿ (ಬಾಕ್ಸಿಂಗ್) ವಂತಿಕಾ ಅಗರವಾಲ್…
ಬೆಂಗಳೂರು:- ನಮ್ಮ ಬೆಂಗಳೂರೂರಿನ ನೇರಳೆ ಮಾರ್ಗದ ನಮ್ಮ ಮೆಟ್ರೋ ಸಂಚಾರದಲ್ಲಿ ನಾಳೆ ವ್ಯತ್ಯಯ ಉಂಟಾಗಲಿದೆ. https://ainlivenews.com/distant-married-lover-lover-boy-who-surrendered-to-suicide/ ನಾಳೆ ಬೆಳಿಗ್ಗೆ 7 ರಿಂದ 10 ಗಂಟೆಯವರೆಗೆ ನಮ್ಮ ಮೆಟ್ರೋದ ನೇರಳೆ ಮಾರ್ಗದ ಕೆಂಪೇಗೌಡ ಮೆಜೆಸ್ಟಿಕ್ ಮತ್ತು ಇಂದಿರಾನಗರ ನಿಲ್ದಾಣಗಳ ನಡುವಿನ ಸೇವೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಕಬ್ಬನ್ ಪಾರ್ಕ್ ಮತ್ತು ಎಂ.ಜಿ. ರೋಡ್ ನಡುವೆ ಹಳಿ ನಿರ್ವಹಣಾ ಕಾಮಗಾರಿ ನಡೆಯುತ್ತಿರುವುದರಿಂದ ಈ ವ್ಯತ್ಯಯ ಉಂಟಾಗುತ್ತಿದೆ. ಹಸಿರು ಮಾರ್ಗದಲ್ಲಿ ಯಾವುದೇ ಬದಲಾವಣೆ ಇಲ್ಲ. ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ ದಿನಂಕ 19 ರಂದು ಅಂದರೆ ಭಾನುವಾರ ದಂದು ನೇರಳೆ ಮಾರ್ಗದಲ್ಲಿನ ಕಬ್ಬನ್ ಪಾರ್ಕ್ ಮತ್ತು ಎಂ.ಜಿ ರಸ್ತು ಮೆಟ್ರೋ ನಿಲ್ದಾ ಣಗಳ ನಡುವೆ ಹಳಿ ನಿರ್ವಹಣಾ ಕಾಮಗಾರಿಯನ್ನು ಕೈಗೊಳ್ಳಲಾಗುತ್ತಿದೆ. ಹಾಗಾಗಿ ಕೆಂಪೇಗೌಡ ಮೆಜೆಸ್ಟಿಕ್ ಮೆಟ್ರೋ ನಿಲ್ದಾಣ ಮತ್ತು ಇಂದಿರಾನಗರ ಮೆಟ್ರೋ ನಿಲ್ದಾಣಗಳ ನಡುವೆ ಬೆಳಿಗ್ಗೆ 07:00 ರಿಂದ 10.00 ರ ವರೆಗೆ ಮೂರು ಗಂಟೆಗಳ ಕಾಲ ಮೆಟ್ರೋ ರೆೈಲು ಸೇವೆ ಇರುವುದಿಲ್ಲ.