ಬೆಂಗಳೂರು:- ಮಾಜಿ ಸಂಸದ ಎಲ್ಆರ್ ಶಿವರಾಮೇಗೌಡ ಕಾಂಗ್ರೆಸ್ ಸೇರ್ಪಡೆ ಆಗಿದ್ದಾರೆ. https://ainlivenews.com/big-shock-for-dboss-fans-actor-darshans-banner-removed-on-his-birthday/ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಪಕ್ಷ ಸೇರ್ಪಡೆ ಕಾರ್ಯಕ್ರಮ ನಡೆಯಿತು. ಮಾಜಿ ಸಂಸದ ಶಿವರಾಮೇಗೌಡ ಮತ್ತು ಪುತ್ರ ಮಂಜೇಗೌಡ, ಬ್ರಿಜೇಶ್ ಕಾಳಪ್ಪ ಮತ್ತು ಎಲ್.ಎಸ್.ಚೇತನ್ ಗೌಡ ಕಾಂಗ್ರೆಸ್ ಸೇರ್ಪಡೆಯಾದರು. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸ್ವಾಗತಿಸಿದರು. ಎಲ್ಆರ್ ಶಿವರಾಮೇಗೌಡ ಅವರು ಇತ್ತೀಚಿಗೆ ಬಿಜೆಪಿ ಸೇರಿದ್ದರು. ಇದೀಗ ಮರಳಿ ಕಾಂಗ್ರೆಸ್ ಪಕ್ಷ ಸೇರಿಕೊಂಡಿದ್ದಾರೆ. ಕಾಂಗ್ರೆಸ್ ತೊರೆದು ಆಮ್ ಆದ್ಮಿ ಪಕ್ಷ ಸೇರ್ಪಡೆಯಾಗಿದ್ದ ಬ್ರಿಜೇಶ್ ಕಾಳಪ್ಪ ಕೂಡ ಮರಳಿ ಮಾತೃ ಪಕ್ಷಕ್ಕೆ ವಾಪಸ್ ಆಗಿದ್ದಾರೆ. ಎಲ್ ಆರ್ ಶಿವರಾಮೇಗೌಡ ಇತ್ತೀಚಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಜೊತೆ ವೇದಿಕೆ ಕಾರ್ಯಕ್ರಮಗಳಲ್ಲಿ ಕಾಣಿಸಿಕೊಂಡಿದ್ದರು. ಚನ್ನಪಟ್ಟಣ ಉಪಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಿಪಿ ಯೋಗೇಶ್ವರ ಪರ ಪ್ರಚಾರದಲ್ಲಿ ಪಾಲ್ಗೊಂಡಿದ್ದರು. ಇದು ಎಲ್ ಆರ್ ಶಿವರಾಮೇಗೌಡ ಕಾಂಗ್ರೆಸ್ ಸೇರ್ಪಡೆ ಬಹುತೇಕ ಖಚಿತ ಎಂಬ ಮಾತುಗಳು ರಾಜಕೀಯ ಪಡಸಾಲೆಯಲ್ಲಿ ಕೇಳಿ ಬರುತ್ತಿದ್ದವು.
Author: AIN Author
ಬೆಂಗಳೂರು:- ರೇಣುಕಾಸ್ವಾಮಿ ಕೇಸ್ನಲ್ಲಿ ನಟ ದರ್ಶನ್ ಅವರು ಜೈಲಿಗೆ ಹೋಗಿ ಬಂದ ನಂತರ ಮತ್ತಷ್ಟು ಫೇಮಸ್ ಆಗಿದ್ದಾರೆ. ಅವರ ಫ್ಯಾನ್ಸ್ ಬೇಸ್ ಸಿಕ್ಕಾಪಟ್ಟೆ ಹೆಚ್ಚಾಗಿದೆ. ಇತ್ತೀಚೆಗಂತೂ ಅವರ ಕ್ರೇಜ್ ಭಾರೀ ಹೆಚ್ಚಾಗಿದ್ದು ರಿ ರಿಲೀಸ್ ಆದ ಸಿನಿಮಾಗಳಿಗೆ ಭರ್ಜರಿ ರೆಸ್ಪಾನ್ಸ್ ಬಂದಿದೆ. https://ainlivenews.com/suspect-of-rape-and-murder-of-a-woman-the-incident-came-to-light-late/ ಇಂದು ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಹುಟ್ಟುಹಬ್ಬದ ಸಂಭ್ರಮ ಮನೆ ಮಾಡಿದೆ. ರಾಜ್ಯಾದ್ಯಂತ ಅವರ ಅಭಿಮಾನಿಗಳು ಡಿಬಾಸ್ ಹುಟ್ಟುಹಬ್ಬವನ್ನು ಸಂಭ್ರಮದಿಂದ ಆಚರಿಸುತ್ತಿದ್ದಾರೆ. ಇದೀಗ ಫ್ಯಾನ್ಸ್ಗೆ ಶಾಕ್ ಆಗಿದೆ. ನಟ ದರ್ಶನ್ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿರುವ ಹೊತ್ತಿನಲ್ಲೇ ಹೊಸಕೋಟೆ ಪುರಸಭೆಯು ದರ್ಶನ್ ಬ್ಯಾನರ್ ತೆರವುಗೊಳಿಸುವ ಮೂಲಕ ಫ್ಯಾನ್ಸ್ಗೆ ಶಾಕ್ ನೀಡಿದೆ. ಹುಟ್ಟುಹಬ್ಬ ಆಚರಣೆ ಹಿನ್ನೆಲೆ ಅಭಿಮಾನಿಗಳು ದರ್ಶನ್ ಬ್ಯಾನರ್ ಹಾಕಿದ್ದರು. ಈ ಬ್ಯಾನರ್ಗಳನ್ನು ಹೊಸಕೋಟೆ ಪುರಸಭೆ ಸಿಬ್ಬಂದಿ ತೆರವುಗೊಳಿಸಿದ್ದು, ಅಭಿಮಾನಿಗಳಲ್ಲಿ ಬೇಸರ ಮೂಡಿಸಿದೆ. ದರ್ಶನ್ 48ನೇ ವರ್ಷದ ಬರ್ತ್ಡೇ ಆಚರಿಸಿಕೊಳ್ಳುತ್ತಿದ್ದಾರೆ. ಪತ್ನಿ ವಿಜಯಲಕ್ಷ್ಮೀ, ನಟ ಧನ್ವೀರ್, ಚಿಕ್ಕಣ್ಣ ಇನ್ಸ್ಟಾಗ್ರಾಂನಲ್ಲಿ ದರ್ಶನ್ ಜೊತೆಗಿನ ಫೋಟೋ ಹಂಚಿಕೊಂಡು ಶುಭಾಶಯ ತಿಳಿಸಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ…
ರೇಣುಕಾಸ್ವಾಮಿ ಕೇಸ್ನಲ್ಲಿ ನಟ ದರ್ಶನ್ ಅವರು ಜೈಲಿಗೆ ಹೋಗಿ ಬಂದ ನಂತರ ಮತ್ತಷ್ಟು ಫೇಮಸ್ ಆಗಿದ್ದಾರೆ. ಅವರ ಫ್ಯಾನ್ಸ್ ಬೇಸ್ ಸಿಕ್ಕಾಪಟ್ಟೆ ಹೆಚ್ಚಾಗಿದೆ. ಇತ್ತೀಚೆಗಂತೂ ಅವರ ಕ್ರೇಜ್ ಭಾರೀ ಹೆಚ್ಚಾಗಿದ್ದು ರಿ ರಿಲೀಸ್ ಆದ ಸಿನಿಮಾಗಳಿಗೆ ಭರ್ಜರಿ ರೆಸ್ಪಾನ್ಸ್ ಬಂದಿದೆ. https://ainlivenews.com/is-this-happening-to-your-body-if-so-wake-up-now/ ಇಂದು ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಹುಟ್ಟುಹಬ್ಬದ ಸಂಭ್ರಮ ಮನೆ ಮಾಡಿದೆ. ರಾಜ್ಯಾದ್ಯಂತ ಅವರ ಅಭಿಮಾನಿಗಳು ಡಿಬಾಸ್ ಹುಟ್ಟುಹಬ್ಬವನ್ನು ಸಂಭ್ರಮದಿಂದ ಆಚರಿಸುತ್ತಿದ್ದಾರೆ. ಇದೀಗ ಫ್ಯಾನ್ಸ್ಗೆ ಗುಡ್ ನ್ಯೂಸ್ ಸಿಕ್ಕಿದೆ. ಹುಟ್ಟುಹಬ್ಬದ ದಿನವೇ ಅವರ ‘ಡೆವಿಲ್’ ಸಿನಿಮಾ ಟೀಸರ್ ಬಿಡುಗಡೆ ಆಗಿದೆ. ಟೀಸರ್ ಕಂಡು ಮಾತೇ ಬರ್ತಾ ಇಲ್ಲಾ ಬಾಸ್ ಅಂತ ಕಮೆಂಟ್ ಮಾಡುತ್ತಿದ್ದಾರೆ. ಅಂತೂ ದರ್ಶನ್ ಟೀಸರ್ ಔಟ್ ಆಗಿದೆ. ಕೊನೆಯ ದರ್ಶನ್ ಡೈಲಾಗ್ಗೆ ಫ್ಯಾನ್ಸ್ ಫಿದಾ ಆಗಿದ್ದಾರೆ. ಬರೀ ಆ್ಯಕ್ಷನ್ನಲ್ಲಿಯೇ ದಚ್ಚು ಮಾಸ್ ಆಗಿ ಉತ್ತರ ಕೊಟ್ಟಿದ್ದಾರೆ. ದರ್ಶನ್ ಲುಕ್, ಆ್ಯಕ್ಷನ್, ಫೈಟಿಂಗ್ ಸೀನ್, ಮ್ಯೂಸಿಕ್ ಎಲ್ಲವೂ ಮಸ್ತ್ ಅಂತಿದ್ದಾರೆ ಫ್ಯಾನ್ಸ್. ದರ್ಶನ್ ಹುಟ್ಟುಹಬ್ಬದ ಸಂಭ್ರಮಕ್ಕೆ ಡೆವಿಲ್…
ಇಂದಿನ ವಿಜ್ಞಾನ-ತಂತ್ರಜ್ಞಾನ ಯುಗದಲ್ಲಿ ಒತ್ತಡಯುಕ್ತ ಜೀವನವನ್ನು ನಾವು ನಮ್ಮ ಅರಿವಿಗೆ ಬಂದೋ ಬಾರದೆಯೋ ಅದನ್ನು ಹಿಂಬಾಲಿಸಿಕೊಂಡು ಹೋಗುತ್ತಿದ್ದೇವೆ. ಕಾಲಿಗೆ ಚಕ್ರ ಕಟ್ಟಿಕೊಂಡು ಓಡಾಡುತ್ತಿದ್ದೇವೆ. ಸ್ವಲ್ಪ ಹೊತ್ತು ಸುಮ್ಮನೆ ಕುಳಿತು ಕಾಫಿ ಹೀರಲು ನಮ್ಮಲ್ಲಿ ಸಮಯವಿಲ್ಲ. ತಂದೆ-ತಾಯಿ, ಬಂಧು- ಬಳಗದೊಂದಿಗೆ ಹತ್ತಿರದಿಂದ ಮಾತ ನಾಡಿಸಲು ನಮ್ಮ ಉದ್ಯೋಗ ಬಿಡುತ್ತಿಲ್ಲ. ಮೊಬೈಲ್ನಲ್ಲಿ ನಾವು ಗಂಟೆಗಟ್ಟಲೆ ವ್ಯವಹರಿ ಸುತ್ತೇವೆ. ಆದರೆ ನಮ್ಮ ಮಕ್ಕಳ ಜತೆ, ಅವರ ಆಸಕ್ತಿ-ಅಭಿರುಚಿಗಳೊಂದಿಗೆ ಬೆರೆಯುವ ಆಸ್ಥೆ ನಮಗಿಲ್ಲ. ಅವರ ಅನುಭವಗಳನ್ನು ನಮ್ಮೊಡನೆ ಹಂಚಿಕೊಳ್ಳಲು ಬಿಡುತ್ತಿಲ್ಲ ನಾವು. ನಮಗೆ ಒಂದು ನಿಮಿಷ ಪ್ರಾರ್ಥಿಸಲು, ಧ್ಯಾನಿಸಲು ಮನಸ್ಸಿಲ್ಲ, ವ್ಯವಧಾನವಿಲ್ಲ. ಎಲ್ಲಕ್ಕಿಂತ ಮುಖ್ಯ ವಾಗಿ ಸಮಯವಿಲ್ಲ. https://ainlivenews.com/dolly-enters-married-life-the-film-fraternity-wishes-the-newlyweds-all-the-best/ ಇಂದಿನ ವೇಗದ ಜಗತ್ತಿನಲ್ಲಿ ಪ್ರತಿಯೊಬ್ಬರು ತುಂಬಾ ಒತ್ತಡವನ್ನು ಹೊಂದಿದ್ದಾರೆ. ಇವರು ಬೆಳಗ್ಗೆ ಎದ್ದಾಗಲಿಂದ ರಾತ್ರಿ ಮಲಗುವವರೆಗೂ ಮನೆಕೆಲಸಗಳು, ಕಚೇರಿಯ ಉದ್ವಿಗ್ನತೆಗಳು ಮತ್ತು ಕೌಟುಂಬಿಕ ಸಮಸ್ಯೆಗಳನ್ನು ನಿರ್ವಹಿಸಲು ಹೆಣಗಾಡುತ್ತಿದ್ದಾರೆ. ಅನೇಕ ಮಂದಿ ಒತ್ತಡವನ್ನು ಆತಂಕ ಮತ್ತು ನಿದ್ರಾಹೀನತೆ ನಡುವೆ ಸಂಬಂಧವಿದೆ ಎಂದು ಹೇಳುತ್ತಾರೆ. ಆದರೆ ಒತ್ತಡವು ನಮ್ಮ ದೇಹದಲ್ಲಿ…
ಜನಪ್ರಿಯ ನಟ ಡಾಲಿ ಧನಂಜಯ ಅವರು ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಡಾಕ್ಟರ್ ಧನ್ಯತಾ ಜೊತೆ ಅವರ ಮದುವೆ ನೆರವೇರಿದೆ. ಬಾಳ ಬಂಧನಕ್ಕೆ ಒಳಗಾಗಿರುವ ಧನ್ಯತಾ ಹಾಗೂ ಡಾಲಿ ಧನಂಜಯ ಅವರಿಗೆ ಎಲ್ಲರೂ ಅಭಿನಂದನೆ ತಿಳಿಸುತ್ತಿದ್ದಾರೆ. https://ainlivenews.com/you-are-bjps-cheerleader-modi-siddaramaiah-sarcastically-mocks-hdd/ ಆ್ಯಕ್ಟರ್ ಡಾಲಿ ಧನಂಜಯ್ ಹಾಗೂ ಡಾಕ್ಟರ್ ಧನ್ಯತಾ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದು, ಸ್ಯಾಂಡಲ್ವುಡ್ನ ಸ್ಟಾರ್ ಬಳಗ ಮದುವೆಗೆ ಆಗಮಿಸಿ ಶುಭ ಕೋರಿದೆ. ಮೈಸೂರಿನ ವಸ್ತುಪ್ರದರ್ಶನ ಮೈದಾನದಲ್ಲಿ ಆ್ಯಕ್ಟರ್-ಡಾಕ್ಟರ್ ಮದುವೆ ಅದ್ದೂರಿಯಾಗಿ ನೆರವೇರಿದ್ದು, ಸಿನಿರಂಗದ ನಟ-ನಟಿಯರು ಆಗಮಿಸಿ, ಧನಂಜಯ ಹಾಗೂ ಧನ್ಯತಾ ಜೋಡಿಗೆ ವಿಶ್ ಮಾಡಿದ್ದಾರೆ. ಡಾಲಿ ಮದುವೆಗೆ ಆಗಮಿಸಿದ ಸ್ಯಾಂಡಲ್ವುಡ್ ಕ್ವೀನ್ ರಮ್ಯಾ ನೇರಳೆ ಬಣ್ಣದ ಸೀರೆಯಲ್ಲಿ ಮಿಂಚುತ್ತಿದ್ದು, ಡಾಲಿಯನ್ನು ತಬ್ಬಿಕೊಂಡು ಶುಭಹಾರೈಸಿದರು. ಇನ್ನೂ ನಟ ಶಿವರಾಜಕುಮಾರ್, ಕಾಂತಾರ ಖ್ಯಾತಿಯ ಸಪ್ತಮಿ ಗೌಡ, ದೊಡ್ಡಣ್ಣ, ತರುಣ್ ಸುಧೀರ್-ಸೋನಲ್, ವಸಿಷ್ಠ ಸಿಂಹ, ಸಾಧು ಕೋಕಿಲ, ಯುವರಾಜ ಕುಮಾರ್, ವಿನಯ್ ರಾಜ್, ಬಿಗ್ಬಾಸ್ ಖ್ಯಾತಿಯ ದಿವ್ಯ ಉರುಡುಗ ಮದುವೆಗೆ ಬಂದು ಜೋಡಿಗೆ ವಿಶ್ ಮಾಡಿದ್ದಾರೆ ಗೋಲ್ಡನ್ ಬಣ್ಣದ…
ಬೆಂಗಳೂರು:- ಪಕ್ಷ ರಾಜಕಾರಣವನ್ನು ಮೀರಿ, ಒಬ್ಬ ಮುತ್ಸದ್ದಿ ನಾಯಕನ ರೀತಿಯಲ್ಲಿ ಕನ್ನಡ-ಕನ್ನಡಿಗ-ಕರ್ನಾಟಕದ ಹಿತರಕ್ಷಣೆಗೆ ಮುಂದಾಗಬೇಕು ಎಂದು ಮಾಜಿ ಪ್ರಧಾನಿ HD ದೇವೇಗೌಡರಿಗೆ ಸಿದ್ದರಾಮಯ್ಯ ಸಲಹೆ ಕೊಟ್ಟಿದ್ದಾರೆ. https://ainlivenews.com/happy-birthday-to-darshan-vijayalakshmi-wishes-her-beloved-husband/ ಮಾಧ್ಯಮ ಪ್ರಕಟಣೆ ಮೂಲಕ ಟೀಕಿಸಿರುವ ಅವರು, ದೇವೇಗೌಡರು ಬಿಜೆಪಿ ಮತ್ತು ನರೇಂದ್ರ ಮೋದಿಯವರ ಚಿಯರ್ ಲೀಡರ್ ರೀತಿ ವರ್ತಿಸುತ್ತಿದ್ದಾರೆ ಎಂದು ವಿಷಾದದಿಂದ ಹೇಳಬೇಕಾಗಿದೆ ಎಂದರು. ಕೇಂದ್ರದಲ್ಲಿ ಯಾವ ಪಕ್ಷದ ಸರ್ಕಾರವಿದ್ದರೂ ನೀವು ಮುಲಾಜಿಗೆ ಬೀಳದೇ ಕರ್ನಾಟಕದ ಹಿತಾಸಕ್ತಿಯ ರಕ್ಷಣೆಯ ಪ್ರಶ್ನೆ ಎದುರಾದಾಗ ದನಿ ಎತ್ತುತ್ತಾ ಬಂದ್ದಿದ್ದೀರಿ. ಆ ಮುತ್ಸದ್ದಿ ದೇವೇಗೌಡರನ್ನು ಕಾಣಲು ಕನ್ನಡಿಗರು ಬಯಸುತ್ತಿದ್ದಾರೆ. ದೇವೇಗೌಡರೇ ದೈಹಿಕವಾಗಿ ನೀವು ಸ್ವಲ್ಪ ಕುಗ್ಗಿದಂತೆ ಕಂಡರೂ, ಮಾನಸಿಕವಾಗಿ ನೀವಿನ್ನೂ ದೃಢವಾಗಿದ್ದೀರಿ. ದಯವಿಟ್ಟು ಈಗಲಾದರೂ ಪಕ್ಷ ರಾಜಕಾರಣವನ್ನು ಮೀರಿ, ಒಬ್ಬ ಮುತ್ಸದ್ದಿ ನಾಯಕನ ರೀತಿಯಲ್ಲಿ ಕನ್ನಡ-ಕನ್ನಡಿಗ-ಕರ್ನಾಟಕದ ಹಿತರಕ್ಷಣೆಗೆ ಮುಂದಾಗಬೇಕು ಎಂದು ಹೇಳಿದರು. ಮಾಜಿ ಪ್ರಧಾನಿ ದೇವೇಗೌಡರು, ಕೇಂದ್ರ ಸರ್ಕಾರದ ವಕ್ತಾರರಂತೆ, ಪಕ್ಷಪಾತಿಯಾಗಿ ವರ್ತಿಸುತ್ತಿದ್ದಾರೆ. ಕೇಂದ್ರ ಸಂಪುಟದಲ್ಲಿ ಮಗನನ್ನು ಸಚಿವನನ್ನಾಗಿ ಮಾಡಲು ಇಷ್ಟೊಂದು ರಾಜಿ ಮಾಡಿಕೊಳ್ಳುವ ಅಗತ್ಯ ಇತ್ತಾ?…
ಬೆಂಗಳೂರು:- ಚಾಲೆಂಜಿಂಗ್ ಸ್ಟಾರ್ ನಟ ದರ್ಶನ್ ಗೆ ಬರ್ತ್ಡೇ ಸಂಭ್ರಮ ಮನೆ ಮಾಡಿದ್ದು, ಪತಿ ಜೊತೆಗಿನ ಫೋಟೊ ಹಂಚಿಕೊಂಡು ವಿಜಯಲಕ್ಷ್ಮೀ ವಿಶ್ ಮಾಡಿದ್ದಾರೆ. https://ainlivenews.com/is-the-ice-in-your-freezer-at-home-getting-so-hard-so-how-do-you-prevent-this/ ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ದರ್ಶನ್ ಜೈಲು ಸೇರಿದ್ದ ಸಂದರ್ಭದಿಂದಲೂ ಜೊತೆಯಾಗಿದ್ದ ನಟ ಧನ್ವೀರ್ ಸಹ ಶುಭಾಶಯ ತಿಳಿಸಿದ್ದಾರೆ. ಧನ್ವೀರ್ ದರ್ಶನ್ ಜೊತೆಗಿನ ಫೋಟೋವನ್ನು ಇನ್ಸ್ಟಾಗ್ರಾಂನಲ್ಲಿ ಶೇರ್ ಮಾಡಿ, ಸಂತೋಪ ಮತ್ತು ಯಶಸ್ಸು ಸದಾ ನಿಮ್ಮ ಜೊತೆಗಿರಲಿ. ನೀವು ನಡೆವ ಪ್ರತಿ ಹೆಜ್ಜೆಯೂ ಯಶಸ್ಸಿನ ಪಥವಾಗಲಿ. ಹುಟ್ಟುಹಬ್ಬದ ಶುಭಾಶಯಗಳು ಅಣ್ಣ (ಬಾಸ್) #ಉಸಿರಿರುವವರೆಗೂ ಇರ್ತಿವಿ ನಿಮ್ಮಿಂದೆ ಎಂದು ಬರೆದುಕೊಂಡಿದ್ದಾರೆ. ನಟ ಚಿಕ್ಕಣ್ಣ ಸಹ ತಮ್ಮ ಇನ್ಸ್ಟಾ ಖಾತೆಯಲ್ಲಿ, ಹುಟ್ಟುಹಬ್ಬದ ಶುಭಾಶಯಗಳು ಸರ್ ಎಂದು ಬರೆದುಕೊಂಡು ದರ್ಶನ್ ಜೊತೆಗಿನ ಫೋಟೋ ಹಂಚಿಕೊಂಡಿದ್ದಾರೆ.
ರೆಫ್ರಿಜರೇಟರ್ ಅನ್ನು ಪ್ರತಿಯೊಬ್ಬರ ಮನೆಯಲ್ಲೂ ಬಳಸಲಾಗುತ್ತದೆ. ಅದರಲ್ಲೂ ಬೇಸಿಗೆಯಲ್ಲಂತೂ ಫ್ರಿಡ್ಜ್ನ ಬಳಕೆ ಹೆಚ್ಚು. ತಂಪಾಗಿಸುವ ನೀರಿನಿಂದ ಹಿಡಿದು ಪಾನೀಯಗಳಿಗಾಗಿ ಐಸ್ ಕ್ಯೂಬ್ಗಳನ್ನು ತಯಾರಿಸುವುದು ಮತ್ತು ಆಹಾರವನ್ನು ತಾಜಾವಾಗಿಡಲು ರೆಫ್ರಿಜರೇಟರ್ನ್ನು ಹೆಚ್ಚಾಗಿ ಬಳಸಲಾಗುತ್ತದೆ. ಆದರೆ ಕೆಲವೊಮ್ಮೆ ರೆಫ್ರಿಜರೇಟರ್ ದೋಷಗಳಿಂದಾಗಿ ಹೆಚ್ಚು ಐಸ್ನ್ನು ಉತ್ಪತ್ತಿ ಮಾಡಲು ಪ್ರಾರಂಭಿಸುತ್ತದೆ. ಇದರಿಂದಾಗಿ ಫ್ರೀಜರ್ನಲ್ಲಿ ಸ್ಥಳಾವಕಾಶದ ಕೊರತೆ ಉಂಟಾಗುತ್ತದೆ. ಇದು ಹೆಚ್ಚಾಗಿ ಹಳೆಯ ಫ್ರಿಡ್ಜ್ಗಳಲ್ಲಿ ನಡೆಯುತ್ತದೆ. ಆದರೆ ಕೆಲವೊಮ್ಮೆ ನಿರ್ಲಕ್ಷ್ಯದಿಂದ ಹೊಸ ಫ್ರಿಡ್ಜ್ ನಲ್ಲೂ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ. https://ainlivenews.com/big-shock-for-alcohol-lovers-oil-ban-in-this-area-from-april-1st/ ಪ್ರತಿಯೊಬ್ಬರ ಮನೆಯಲ್ಲೂ ಚಿಕ್ಕದೋ ದೊಡ್ಡದೋ ಫ್ರಿಜ್ ಇರುತ್ತದೆ. ಆದರೆ, ಅದನ್ನು ಹೇಗೆ ನಿರ್ವಹಿಸಬೇಕೆಂದು ಬಹಳಷ್ಟು ಜನರಿಗೆ ತಿಳಿದಿಲ್ಲ. ಸರಿಯಾಗಿ ಬಳಸದಿದ್ದರೆ ಫ್ರೀಜರ್ನಲ್ಲಿ ನೀರು ಐಸ್ ಆಗಿ ಜಮೆಯಾಗುತ್ತದೆ. ಇದನ್ನು ನಿರ್ಲಕ್ಷಿಸಿದರೆ ಫ್ರೀಜರ್ ಬಾಗಿಲು ತೆರೆಯುವುದು ಮತ್ತು ಮುಚ್ಚುವುದು ಕಷ್ಟವಾಗುತ್ತದೆ. ನಂತರ ಫ್ರಿಜ್ನ ಕಾರ್ಯಕ್ಷಮತೆಯೂ ಹಾಳಾಗುತ್ತದೆ. ಫ್ರಿಜ್ನಲ್ಲಿ ಐಸ್ ಜಮೆಯಾಗಲು ಕಾರಣಗಳು: 1. ಫ್ರಿಜ್ ಬಾಗಿಲು ಅಥವಾ ಗ್ಯಾಸ್ಕೆಟ್ ಹಾಳಾದರೆ ಫ್ರೀಜರ್ನಲ್ಲಿ ಐಸ್ ಜಮೆಯಾಗುತ್ತದೆ. ಗಾಳಿ ಒಳಗೆ ಹೋಗಿ…
ಮದ್ಯಪ್ರಿಯರಿಗೆ ಶಾಕಿಂಗ್ ಸುದ್ದಿ ಒಂದು ಹೊರ ಬಿದ್ದಿದ್ದು, ಏ.1 ರಿಂದ ಎಣ್ಣೆ ಬ್ಯಾನ್ ಮಾಡಲಾಗುತ್ತಿದೆ. https://ainlivenews.com/another-sexual-harassment-case-filed-against-television-actor-charith-balappa/ ಹೌದು, ಮಧ್ಯಪ್ರದೇಶ ಸರ್ಕಾರ ರಾಜ್ಯದ 19 ಪವಿತ್ರ ಸ್ಥಳಗಳಲ್ಲಿ ಮದ್ಯ ನಿಷೇಧ ಮಾಡಲು ನಿರ್ಧರಿಸಲಾಗಿದ್ದು, ಕೆಲವೇ ದಿನಗಳಲ್ಲಿ ಈ ಆದೇಶ ಜಾರಿಗೆ ಬರಲು ನಿರ್ಧರಿಸಲಾಗಿದೆ. ಆದ್ದರಿಂದ ಮಧ್ಯಪ್ರದೇಶದ ಈ ಸ್ಥಳಗಳಲ್ಲಿ ಏಪ್ರಿಲ್ 1 ರಿಂದ ಮದ್ಯದಂಗಡಿಗಳು ಮುಚ್ಚಲ್ಪಡುತ್ತವೆ. ಇದಕ್ಕಾಗಿ ಈಗಾಗಲೇ ಅಧಿಸೂಚನೆಯನ್ನೂ ಹೊರಡಿಸಲಾಗಿದೆ. ರಾಜ್ಯ ಮುಖ್ಯಮಂತ್ರಿ ಮೋಹನ್ ಯಾದವ್ ಇತ್ತೀಚೆಗೆ ಮಧ್ಯ ಪ್ರದೇಶದ 19 ಪವಿತ್ರ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಸಂಪೂರ್ಣ ಮದ್ಯ ನಿಷೇಧ ಮಾಡುವುದಾಗಿ ಘೋಷಿಸಿದರು. ಈ ನಿರ್ಧಾರವನ್ನು ತಕ್ಷಣ ಜಾರಿಗೆ ತರಲು, ಶುಕ್ರವಾರ ರಾಜಭವನದಿಂದ ಅಧಿಸೂಚನೆಯನ್ನು ಸಹ ಹೊರಡಿಸಲಾಗಿದೆ. ಅದರಂತೆ, ರಾಜ್ಯದ 13 ನಗರ ಮತ್ತು 6 ಗ್ರಾಮೀಣ ಸ್ಥಳಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಮದ್ಯದಂಗಡಿಗಳು ಏಪ್ರಿಲ್ 1 ರಿಂದ ಮುಚ್ಚಲ್ಪಡುತ್ತವೆ ಎನ್ನಲಾಗಿದೆ ರಾಜಭವನ ಹೊರಡಿಸಿದ ಅಧಿಸೂಚನೆಯ ಪ್ರಕಾರ, ಉಜ್ಜಯಿನಿ ಮಹಾನಗರ ಪಾಲಿಕೆ, ಓಂಕಾರೇಶ್ವರ ನಗರ ಪಂಚಾಯತ್, ಮಹೇಶ್ವರ ನಗರ ಪಂಚಾಯತ್, ಮಂಡ್ಲೇಶ್ವರ…
ಬೆಂಗಳೂರು:- ಕಿರುತೆರೆ ನಟ ಚರಿತ್ ಬಾಲಪ್ಪ ವಿರುದ್ಧ ಮತ್ತೊಂದು ಲೈಗಿಂಕ ಕಿರುಕುಳ ಕೇಸ್ ದಾಖಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಎಫ್.ಐ.ಆರ್ ದಾಖಲಾಗಿದೆ. https://ainlivenews.com/theft-of-gold-in-jewelery-given-to-hallmark-two-khadeems-in-police-trap/ ಬ್ಲಾಕ್ ಮೇಲ್ ಮಾಡಿ ಹಣ ಸುಲಿಗೆ ಮಾಡಿದ್ದಲ್ಲದೆ ಲೈಗಿಂಕ ಕಿರುಕುಳ ನೀಡಿದ್ದಾಗಿ ಮಹಿಳೆ ದೂರು ನೀಡಿದ್ದಾರೆ. ಕಿರುತೆರೆ ನಟ ಚರಿತ್ ಬಾಲಪ್ಪ ಅಲಿಯಾಸ್ ಧ್ರುವಂತ್ ವಿರುದ್ಧ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಬ್ಲಾಕ್ಮೇಲ್ ಮಾಡಿ ಹಣ ಸುಲಿಗೆ, ಲೈಂಗಿಕ ಕಿರುಕುಳ ನೀಡಿದ್ದಾಗಿ ದೂರು ನೀಡಲಾಗಿತ್ತು. ದೂರು ದಾಖಲಾಗ್ತಿದ್ದಂತೆ ಚರಿತ್ ಬಾಲಪ್ಪ ನಾಪತ್ತೆಯಾಗಿದ್ದಾರೆ. ಈ ಹಿಂದೆಯೂ ಲೈಂಗಿಕ ದೌರ್ಜನ್ಯ ಆರೋಪದಲ್ಲಿ ನಟ ಜೈಲು ಸೇರಿದ್ದರು. ಸೀರಿಯಲ್ ಶೂಟಿಂಗ್ ನೋಡಲು ಹೋದಾಗ ಸಂತ್ರಸ್ತೆಗೆ ಚರಿತ್ ಪರಿಚಯವಾಗಿತ್ತು. ಬಳಿಕ ಚರಿತ್ ಒತ್ತಾಯದ ಮೇರೆಗೆ ಇಬ್ಬರ ನಡುವೆ ಪ್ರೀತಿ ಶುರುವಾಯಿತು. ಬಳಿಕ ಸಂತ್ರಸ್ತೆ ಬಿಟ್ಟು ಚರಿತ್ ಬೇರೆಯವರ ಮದುವೆಯಾಗಿದ್ದ. ಮದುವೆಯಾಗಿದ್ದರೂ ದೈಹಿಕ ಸಂಪರ್ಕ ಇಟ್ಟುಕೊಳ್ಳಲು ಸಂತ್ರಸ್ತೆಗೆ ಒತ್ತಾಯ ಮಾಡಿದ್ದ. ನಿರಾಕರಿಸಿದಾಗ ಸಂತ್ರಸ್ತೆ ಮನೆ, ಕೆಲಸ ಮಾಡುವ…