ಬೆಂಗಳೂರು:- ಬಿಜೆಪಿ ವಿರುದ್ಧ ಅಪಪ್ರಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ. https://ainlivenews.com/pocso-case-high-court-gave-big-relief-to-yeddyurappa/ ಮಧ್ಯಂತರ ತಡೆ ನೀಡಿ ನ್ಯಾ.ಎಂ.ನಾಗಪ್ರಸನ್ನ ಅವರಿದ್ದ ಪೀಠ ಶುಕ್ರವಾರ ಆದೇಶ ಹೊರಡಿಸಿದೆ. ಅರ್ಜಿ ವಿಚಾರಣೆ ಮಾಡಿದ ನ್ಯಾ.ಎಂ.ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ, ಸುದ್ದಿ ಪತ್ರಿಕೆಗಳಲ್ಲಿ ಬಂದಿದ್ದನ್ನೇ ಷೇರ್ ಮಾಡಿದ್ದಕ್ಕೆ ಕೇಸ್ ಹಾಕಿದ್ದಾರೆ ಎಂದು ರಾಹುಲ್ ಗಾಂಧಿ ಪರವಾಗಿ ಹಿರಿಯ ವಕೀಲ ಶಶಿಕಿರಣ್ ಶೆಟ್ಟಿ ವಾದ ಮಂಡಿಸಿದ್ದಾರೆ. ರಾಹುಲ್ ಗಾಂಧಿ ವಿರುದ್ಧ ಕೇಸ್ ದಾಖಲಿಸಿದ್ದ ಬಿಜೆಪಿಯ ಕೇಶವ ಪ್ರಸಾದ್ರಿಗೆ ನೋಟಿಸ್ ಜಾರಿಗೆ ಹೈಕೋರ್ಟ್ ಆದೇಶಿಸಿದೆ. ಬಿಜೆಪಿ ಸರ್ಕಾರದ ವಿರುದ್ಧ ಕರಪ್ಶನ್ ರೇಟ್ ಕಾರ್ಡ್ ಜಾಹೀರಾತನ್ನು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದರು. ವಿಧಾನಸಭೆ ಚುನಾವಣೆ ವೇಳೆ ಬಿಜೆಪಿ ವಿರುದ್ಧ ಕಾಂಗ್ರೆಸ್ 40 ಪರ್ಸೆಂಟ್ ಕಮಿಷನ್ ಸಮರ ಸಾರಿತ್ತು. ಈ ಸಂಬಂಧ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್, ರಾಹುಲ್ ಗಾಂಧಿ ಸೇರಿದಂತೆ ಹಲವು ನಾಯಕರ ವಿರುದ್ಧ ಕೇಸ್ ದಾಖಲಾಗಿತ್ತು. 2024 ರ ಜೂನ್ 1ರಂದು…
Author: AIN Author
ಬೆಂಗಳೂರು:- ಪೋಕ್ಸೋ ಕೇಸ್ನಲ್ಲಿ ಮಾಜಿ ಸಿಎಂ ಯಡಿಯೂರಪ್ಪಗೆ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ.ಪ್ರಕರಣ ಪ್ರಕರಣ ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ಪೂರ್ಣಗೊಳಿಸಿದ ಕರ್ನಾಟಕ ಹೈಕೋರ್ಟ್ ಎಲ್ಲರ ವಾದ ಆಲಿಸಿ ಆದೇಶ ಕಾಯ್ದಿರಿಸಿದೆ. https://ainlivenews.com/crime-news-worker-died-after-falling-from-third-floor-building/ ಜೊತೆಗೆ ಬಿ.ಎಸ್.ಯಡಿಯೂರಪ್ಪ ಖುದ್ದು ಹಾಜರಿಗೆ ನೀಡಿದ್ದ ವಿನಾಯತಿಯನ್ನು ವಿಸ್ತರಿಸಿದೆ. ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ನ್ಯಾಯಪೀಠ, ಆದೇಶ ಕಾಯ್ದಿರಿಸಿದ್ದಾರೆ. ಪ್ರಾಸಿಕ್ಯೂಷನ್ ಪರ ಪ್ರೊ.ರವಿವರ್ಮಕುಮಾರ್ ವಾದಮಂಡನೆ ಮಾಡಿದ್ದು, ಬಿ.ಎಸ್.ಯಡಿಯೂರಪ್ಪ ಮನೆಯ ಎಂಟ್ರಿ ರಿಜಿಸ್ಟರ್ ತಿರುಚಲಾಗಿದೆ ಎಂದು ಹೇಳಿದ್ದಾರೆ. ಫಿರ್ಯಾದಿ, ಬಾಲಕಿ, ಶಿವಾನಂದ ತಗಡೂರು ಬಂದ ಸಮಯ ಬದಲಿಸಲಾಗಿದೆ. ಆರೋಪಿಗಳು ಫಿರ್ಯಾದಿ ಫೇಸ್ ಬುಕ್ನಿಂದ ವಿಡಿಯೋ ಡಿಲೀಟ್ ಮಾಡಿದ್ದಾರೆ. ಬಿಎಸ್ ಯಡಿಯೂರಪ್ಪ ಮನೆಗೆ ಕರೆತಂದು ವಿಡಿಯೋ ಡಿಲೀಟ್ ಮಾಡಿದ್ದಾರೆಂದು ವಾದಿಸಿದರು. ಮೊಬೈಲ್ ರೆಕಾರ್ಡಿಂಗ್ನಲ್ಲಿ ಯಡಿಯೂರಪ್ಪ ಧ್ವನಿಯಿದೆ ಎಂದ ಜಡ್ಜ್, ಆ ವಿಡಿಯೋ ರೆಕಾರ್ಡಿಂಗ್ನಲ್ಲಿರುವ ಹೇಳಿಕೆ ಡಿಸ್ಟರ್ಬಿಂಗ್ ಆಗಿವೆ. ಯಡಿಯೂರಪ್ಪ ಮನೆಗೆ ಫಿರ್ಯಾದಿ ಮಹಿಳೆ ಪದೇಪದೆ ಬಂದಿದ್ದಾರೆ. ಈ ಘಟನೆ ನಡೆದ ನಂತರ ಪದೇಪದೆ ಬರಲು ಸಾಧ್ಯವೇ ಎಂದು ಪ್ರಶ್ನಿಸಿದ್ದಾರೆ. ಫಿರ್ಯಾದಿ…
ನೆಲಮಂಗಲ: ಮೂರನೇ ಮಹಡಿಯ ಕಟ್ಟಡದಿಂದ ಬಿದ್ದು ಕಾರ್ಮಿಕ ಸಾವನ್ನಪ್ಪಿದ ಘಟನೆ ಬೆಂಗಳೂರು ಉತ್ತರ ತಾಲೂಕಿನ ಹೊನ್ನಸಂದ್ರ ಗ್ರಾಮದಲ್ಲಿ ಜರುಗಿದೆ. https://ainlivenews.com/scissors-for-the-pockets-of-metro-passengers-the-new-ticket-price-will-be-known-tomorrow/ ರಾಜ್ ಮಹಮದ್ 32 ಮೃತ ಕಟ್ಟಡ ಕಾರ್ಮಿಕ ಎನ್ನಲಾಗಿದೆ. ಬೆಂಗಳೂರು ಉತ್ತರ ತಾಲೂಕಿನ ಹೊನ್ನಸಂದ್ರ ಗ್ರಾಮದಲ್ಲಿ ರಾಜ್ ಮಹಮದ್ ಮನೆ ಕಟ್ಟಡದ ಕೆಲಸ ಮಾಡುತ್ತಿದ್ದ. ಕಾರ್ಮಿಕ ರಾಯಚೂರು ಜಿಲ್ಲೆ ದೇವದುರ್ಗ ತಾಲ್ಲೂಕು ಮೂಲದವನು. ಮೂರನೇ ಮಹಡಿಯಲ್ಲಿ ಕೆಲಸ ಮಾಡುವ ವೇಳೆ ಸ್ಲಿಪ್ ಆಗಿ ಕೆಳಗಡೆ ಬಿದ್ದು ಸಾವನ್ನಪ್ಪಿರುವ ಘಟನೆ ಜರುಗಿದೆ. ಘಟನೆ ಸಂಬಂಧ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು:- ಬೆಂಗಳೂರು ಜನರಿಗೆ ನಮ್ಮ ಮೆಟ್ರೋ ಟಿಕೆಟ್ ದರ ಏರಿಕೆ ಬಿಸಿ ತಟ್ಟಲಿದೆ. ಟಿಕೆಟ್ ದರ ಏರಿಕೆಗೆ ಬಿಎಂಆರ್ಸಿಎಲ್ ಒಪ್ಪಿಗೆ ಸೂಚಿಸಿದ್ದು, ಘೋಷಣೆಯೊಂದೇ ಬಾಕಿ ಇದೆ. https://ainlivenews.com/drying-childrens-clothes-at-night-then-this-is-a-must-see-for-you/ ಕಳೆದ 8 ವರ್ಷಗಳಿಂದ ನಮ್ಮ ಮೆಟ್ರೋ ಟಿಕೆಟ್ ದರ ಹೆಚ್ಚಳವಾಗಿಲ್ಲ. ಹೀಗಾಗಿ, ಈ ವರ್ಷ ಟಿಕೆಟ್ ದರ ಏರಿಕೆ ಮಾಡಲೇಬೇಕು ಎಂದು ಬಿಎಂಆರ್ಸಿಎಲ್ ಚಿಂತನೆ ನಡೆಸಿತ್ತು. ಇದಕ್ಕಾಗಿ ಸಮಿತಿ ರಚನೆ ಮಾಡಿ ಸಾಧ್ಯತೆಗಳು, ತಜ್ಞರ ಅಭಿಪ್ರಾಯ ಸಂಗ್ರಹ ಮಾಡಿತ್ತು. ಸಮಿತಿಯ ಜತೆ ಬಿಎಂಆರ್ಸಿಎಲ್ ಶುಕ್ರವಾರ ಸಭೆ ನಡೆಸಿದ್ದು, ದರ ಏರಿಕೆಗೆ ಒಪ್ಪಿಗೆ ಸೂಚಿಸಿದೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು ಬಿಎಂಟಿಸಿ ಟಿಕೆಟ್ ದರವನ್ನು ಶೇಕಡ15ರಷ್ಟು ಹೆಚ್ಚಿಸಿದ ಬೆನ್ನಲ್ಲೇ ಬೆಂಗಳೂರು ನಗರದ ಮತ್ತೊಂದು ಪ್ರಮುಖ ಸಾರಿಗೆ ಸಂಪರ್ಕ ಸಾಧನವಾಗಿರುವ ಮೆಟ್ರೋ ಟ್ರೈನು ಪ್ರಯಾಣದ ದರ ಹೆಚ್ಚಿಸಲು ಬಿಎಂಆರ್ಸಿಲ್ ಸಿದ್ದತೆಗಳನ್ನು ಮಾಡಿಕೊಂಡಿದೆ. ಇವತ್ತು ನಗರದಲ್ಲಿ ನಡೆದ ಬೋರ್ಡ್ ಮೀಟಿಂಗ್ ನಲ್ಲಿ ಸಂಸ್ಥೆಯ ದರ ಏರಿಕೆ ಸಮಿತಿ ನೀಡಿದ ಶಿಫಾರಸ್ಸುಗಳನ್ನು ಮಂಡಳಿಯ ಮುಂದೆ ಮಂಡಿಸಲಾಗಿದ್ದು ದರ…
ವಾಸ್ತು ಶಾಸ್ತ್ರದಲ್ಲಿ, ಪ್ರತಿಯೊಂದು ಕೆಲಸವನ್ನು ಮಾಡಲು ಕೆಲವು ನಿಯಮಗಳಿವೆ, ಅದನ್ನು ನಾವು ಅನುಸರಿಸಬೇಕು. ಅದೇ ಸಮಯದಲ್ಲಿ, ರಾತ್ರಿಯಲ್ಲಿ ಬಟ್ಟೆಗಳನ್ನು ತೊಳೆಯಬಾರದು ಎಂದು ಧರ್ಮಗ್ರಂಥಗಳಲ್ಲಿ ಹೇಳಲಾಗಿದೆ. ಇದರ ಹಿಂದಿನ ಕಾರಣವನ್ನು ಇಂದು ನಾವು ನಿಮಗೆ ಹೇಳುತ್ತೇವೆ. https://ainlivenews.com/there-will-be-no-power-tomorrow-in-these-areas-of-bangalore-here-is-the-list-of-areas-where-current-will-be-cut/ ಹಿಂದೂ ಧರ್ಮದ ಆಚರಣೆಯ ಭಾಗವಾದ ವಾಸ್ತು ಪ್ರಕಾರ ರಾತ್ರಿಯಲ್ಲಿ ಬಟ್ಟೆಗಳನ್ನು ಯಾವುದೇ ಕಾರಣಕ್ಕೂ ಒಗೆಯಬಾರದು ಎಂದು ಹೇಳುತ್ತಾರೆ. ಅದರಲ್ಲೂ ಬಟ್ಟೆಗಳನ್ನು ಹೊರಗೆ ಒಣಗಿಸಬಾರದು ಎಂದು ಹೇಳುತ್ತಾರೆ. ವಿಶೇಷವಾಗಿ ನವಜಾತ ಶಿಶುಗಳ ಬಟ್ಟೆಗಳನ್ನು ಹೊರಗೆ ಹಾಕಬಾರದು ಎಂದು ಹೇಳುತ್ತಾರೆ. ಸಂಜೆ 6 ಗಂಟೆಯಾದರೆ ಸಾಕು, ತಕ್ಷಣ ಬಟ್ಟೆಗಳನ್ನು ತೆಗೆದುಹಾಕಿ ಎಂದು ಹೇಳುತ್ತಾರೆ. ರಾತ್ರಿಯಲ್ಲಿ ಮಕ್ಕಳ ಬಟ್ಟೆಗಳನ್ನು ಹೊರಗೆ ಒಣಗಿಸಬಾರದು ಎಂದು ಹೇಳುವುದರ ಹಿಂದೆ ಧಾರ್ಮಿಕ ಕಾರಣಗಳ ಜೊತೆಗೆ ವೈಜ್ಞಾನಿಕ ಕಾರಣಗಳೂ ಇವೆ. ಅವು ಯಾವುವೆಂದರೆ… ರಾತ್ರಿ ಹೊರಗಿನ ವಾತಾವರಣದಲ್ಲಿ ನಕಾರಾತ್ಮಕ ಶಕ್ತಿ ಹೆಚ್ಚಾಗಿರುತ್ತದೆ ಎಂದು ಪಂಡಿತರು ಹೇಳುತ್ತಾರೆ. ರಾತ್ರಿ ಹೊರಗೆ ಬಟ್ಟೆ ಒಣಗಿಸಿದರೆ ನಕಾರಾತ್ಮಕ ಶಕ್ತಿ ಬಟ್ಟೆಗಳಿಗೆ ಸೇರುತ್ತದೆ ಎಂದು ಹೇಳುತ್ತಾರೆ. ಇದು ಮಕ್ಕಳ ಆರೋಗ್ಯದ…
ಬೆಂಗಳೂರು:- ತುರ್ತು ಕಾಮಗಾರಿ ಹಿನ್ನೆಲೆ ರಾಜಧಾನಿ ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ನಾಳೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಪ್ರಕಟಣೆಯಲ್ಲಿ ಮಾಹಿತಿ ನೀಡಿದೆ. https://ainlivenews.com/have-you-received-your-griha-lakshmi-money-yet-minister-lakshmi-hebbalkar-gives-good-news/ ಸಿಲಿಕಾನ್ ಸಿಟಿ ಬೆಂಗಳೂರಿನ ವಿನಾಯಕ ಲೇಔಟ್, ಅಜಿತ್ ಲೇಔಟ್, ಟಿಸಿ ಪಾಳ್ಯ ಸಿಗ್ನಲ್, ಭಟ್ಟರಹಳ್ಳಿ, ಚಿಕ್ಕಬಸವನಪುರ ಮತ್ತು ಯರಪ್ಪನ ಪಾಳ್ಯ, ಜೈ ಭುವನೇಶ್ವರ ಲೇಔಟ್, ಕೆಆರ್ ಪುರಂ ಮುಖ್ಯರಸ್ತೆ, ದೀಪಾ ಆಸ್ಪತ್ರೆ ಸುತ್ತಮುತ್ತ, ಕುವೆಂಪು ನಗರ, ರಾಮಮೂರ್ತಿ ನಗರ, ಎನ್ಆರ್ಐ ಲೇಔಟ್ ರಾಮಮೂರ್ತಿ ನಗರ, ಸಿಎಎನ್ವಿ ಲೇಔಟ್ ರಾಮಮೂರ್ತಿ ಮೇನ್ ರಸ್ತೆ, ರಾಘವೇಂದ್ರ ವೃತ್ತ, ಆಲ್ಫಾ ಗಾರ್ಡನ್, ಸ್ವತಂತ್ರ ನಗರ, ರಾಜೇಶ್ವರಿ ಲೇಔಟ್, ಮುನೇಶ್ವರ ಲೇಔಟ್. ಕೋ ಕೋನಟ್ ಗಾರ್ಡನ್, ಬೆಥೆಲ್ ನಗರ, ಬೃಂದಾವನ ಲೇಔಟ್, ಕೆಆರ್ಆರ್ ಲೇಔಟ್, ಕೇಂಬ್ರಿಡ್ಜ್ ಲೇಔಟ್, ಕೇಂಬ್ರಿಡ್ಜ್ ಗಾರ್ಡನ್ ಲೇಔಟ್ ಮತ್ತು ವಾರಣಾಸಿ ಲೇಕ್, ಗ್ಯಾಸ್ ಗೌಡೌನ್ ಮುಖ್ಯ ರಸ್ತೆ, ಎನ್ಆರ್ಐ 5 ನೇ ಮುಖ್ಯ ರಸ್ತೆ, ಗ್ರೀನ್ವುಡ್ ಲೇಔಟ್, ಪ್ರತಿಷ್ಠಾನ ಲೇಔಟ್, ಗ್ರೀನ್ ಗಾರ್ಡನ್ ಲೇಔಟ್, ಜೆಕೆ…
ಆರೋಗ್ಯಕರ ಮತ್ತು ಶಕ್ತಿಯುತ ಜೀವನಕ್ಕಾಗಿ ಸಮಯಕ್ಕೆ ಸರಿಯಾಗಿ ನಿದ್ರೆ ಮಾಡುವುದು ಮತ್ತು ಸಾಕಷ್ಟು ನಿದ್ರೆ ಮಾಡುವುದು ಬಹಳ ಮುಖ್ಯ. https://ainlivenews.com/everything-is-revealed-in-the-original-video-ravi-is-in-trouble-in-the-cid-investigation/ ಗಾಢವಾದ ನಿದ್ರೆ ಪಡೆಯಲು, ಮೊದಲನೆಯದಾಗಿ ನಿಮ್ಮ ದಿನಚರಿ ಮತ್ತು ಆಹಾರವನ್ನು ಸಮತೋಲನಗೊಳಿಸುವುದು ಮುಖ್ಯವಾಗಿದೆ. ನಿಯಮಿತವಾಗಿ ವ್ಯಾಯಾಮ ಮಾಡುವುದು ಮತ್ತು ಆರೋಗ್ಯಕರ ಆಹಾರವನ್ನು ಸೇವಿಸುವುದು ನಿದ್ರೆಯ ಗುಣಮಟ್ಟವನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. ನೀವು ರಾತ್ರಿಯಲ್ಲಿ ಇದ್ದಕ್ಕಿದ್ದಂತೆ ಎಚ್ಚರಗೊಂಡರೆ ಅಥವಾ ದುಃಸ್ವಪ್ನವನ್ನು ಕಂಡರೆ, ನೀವು ಕಬ್ಬಿಣದ ವಸ್ತುವನ್ನು ನಿಮ್ಮ ದಿಂಬಿನ ಕೆಳಗಿಟ್ಟು ಮಲಗಿ. ಇದು ದುಃಸ್ವಪ್ನಗಳನ್ನು ದೂರ ಮಾಡಬಹುದು. ನಿದ್ರೆಗೆ ಯಾವುದೇ ತೊಂದರೆಯಾಗುವುದಿಲ್ಲ. ಇದರಿಂದ ನೀವು ದಿನವಿಡೀ ಉತ್ಸಾಹದಿಂದ ಮತ್ತು ಸಕ್ರಿಯವಾಗಿರುತ್ತೀರಿ. ವಿವಿಧ ಕಾಯಿಲೆಗಳಿಂದ ಮುಕ್ತಿ ಹೊಂದಲು ಮನೆಯ ಪೂರ್ವ ದಿಕ್ಕಿಗೆ ತಲೆ ಇಟ್ಟು ಮಲಗಬಹುದು. ನೀವು ದಿಂಬಿನ ಕೆಳಗೆ ನಾಣ್ಯವನ್ನು ಸಹ ಇರಿಸಬಹುದು. ನೀವು ಮಲಗುವ ಕೋಣೆಯಲ್ಲಿ ಗಾಜಿನ ಬಟ್ಟಲಿನಲ್ಲಿ ಕಲ್ಲು ಉಪ್ಪು ಇಡಬಹುದು. ಪ್ರತಿ ವಾರ ಉಪ್ಪನ್ನು ಬದಲಾಯಿಸುವುದು ನಿಮಗೆ ನಿಖರವಾದ ಫಲಿತಾಂಶಗಳನ್ನು ನೀಡುತ್ತದೆ. ನೀವು ದೀರ್ಘಕಾಲದಿಂದ ಆರ್ಥಿಕ ಬಿಕ್ಕಟ್ಟು…
ಬೆಂಗಳೂರು/ಬೆಳಗಾವಿ:- ಬೆಳಗಾವಿ ಚಳಿಗಾಲ ಅಧಿವೇಶನದ ಕೊನೆಯ ದಿನ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ವಿಧಾನ ಪರಿಷತ್ ಸದಸ್ಯ ಸಿಟಿ ರವಿ ಅವಾಚ್ಯ ಶಬ್ದ ಬಳಸಿದ್ದಾರೆ ಎಂದು ಆರೋಪಿಸಿ ನಂತರ ಅವರನ್ನು ಪೊಲೀಸರು ಬಂಧಿಸಿ ದೂರು ದಾಖಲಾಗಿ ಆರೋಪ-ಪ್ರತ್ಯಾರೋಪಗಳು ಸಾಗಿ ಇಡೀ ರಾಜ್ಯಾದ್ಯಂತ ಸುದ್ದಿಯಾಗಿತ್ತು. https://ainlivenews.com/cannabis-worth-crores-came-to-bangalore-from-abroad-did-the-authorities-find-out/ ಪ್ರಕರಣವನ್ನು ಸಿಐಡಿಗೆ ವಹಿಸಲಾಗಿತ್ತು. ಇದೀಗ CID ತನಿಖೆಯಲ್ಲಿ ಸ್ಪೋಟಕ ಮಾಹಿತಿ ಬಿಚ್ಚಿಟ್ಟಿದೆ. ಸದನದಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಎಂಎಲ್ಸಿ ಸಿ.ಟಿ.ರವಿ ಆಕ್ಷೇಪಾರ್ಹ ಪದ ಬಳಕೆ ಮಾಡಿರುವುದು ಖಚಿತ ಎಂದು ಸಿಐಡಿ ಮೂಲಗಳು ತಿಳಿಸಿವೆ. ಅಸಲಿ ವೀಡಿಯೋ ಇದೀಗ ಸಿಐಡಿಗೆ ಲಭ್ಯವಾಗಿದೆ. ಸಿ.ಟಿ.ರವಿ ವಾಯ್ಸ್ ಸ್ಯಾಂಪಲ್ ಪಡೆಯಲು ಸಿಐಡಿ ಮುಂದಾಗಿತ್ತು. ಆದರೆ, ಅದಕ್ಕೆ ಸಿ.ಟಿ.ರವಿ ನಿರಾಕರಿಸಿದ್ದರು. ಕೊನೆಗೆ ಡಿಪಿಎಆರ್ನಿಂದ ಅಸಲಿ ವೀಡಿಯೋವನ್ನು ಸಿಐಡಿ ವಶಕ್ಕೆ ಪಡೆದಿತ್ತು. ಅಧಿವೇಶನದ ವೇಳೆ ಮೇಲ್ಮನೆಯಲ್ಲಿ ನಡೆದಿದ್ದ ಘಟನಾವಳಿಗಳ ಕುರಿತು ವೀಡಿಯೋ-ಆಡಿಯೋ ದಾಖಲೆ ನೀಡುವಂತೆ ರಾಜ್ಯ ಆಡಳಿತ ಮತ್ತು ಸಿಬ್ಬಂದಿ ಸುಧಾರಣೆ ಇಲಾಖೆಗೆ ಸಿಐಡಿ ಮನವಿ ಮಾಡಿತ್ತು.
ಬೆಂಗಳೂರು:- ವಿದೇಶದಿಂದ ಬೆಂಗಳೂರಿಗೆ ಕೋಟಿ-ಕೋಟಿ ಮೌಲ್ಯದ ಗಾಂಜಾ ಪತ್ತೆ ಆಗಿದ್ದು, ಕಸ್ಟಮ್ಸ್ ಅಧಿಕಾರಿಗಳ ಕಾರ್ಯಾಚರಣೆಯಲ್ಲಿ ಆರೋಪಿಗಳನ್ನು ಅರೆಸ್ಟ್ ಮಾಡಲಾಗಿದೆ. https://ainlivenews.com/diesel-theft-racket-in-mangalore-the-owner-is-with/ ಬ್ಯಾಂಕಾಕ್ನಿಂದ ಬೆಂಗಳೂರಿಗೆ ಬಂದಿದ್ದ ಹೈಡ್ರೋಪೋನಿಕ್ಸ್ ಗಾಂಜಾ, ಮೈರವಾನ್ ಗಾಂಜಾ ಹೂ ಸೇರಿದಂತೆ ವಿವಿಧ ಬಗೆಯ 23 ಕೋಟಿ ರೂ. ಮೌಲ್ಯದ 23 ಕೆಜಿ ಗಾಂಜಾ ವನ್ನು ವಶಕ್ಕೆ ಪಡೆಯಲಾಗಿದೆ. ಏರ್ಪೋರ್ಟ್ನಲ್ಲಿ ಕಸ್ಟಮ್ಸ್ ಅಧಿಕಾರಿಗಳು ಪರಿಶೀಲನೆ ಮಾಡುವ ವೇಳೆ, ಪ್ರತ್ಯೇಕ ಕವರ್ಗಳಲ್ಲಿ ಪ್ಯಾಕ್ ಮಾಡಿಕೊಂಡು ಲಗೇಜ್ ಬ್ಯಾಗ್ನಲ್ಲಿ ಇಟ್ಟಿಕೊಂಡು ಅಕ್ರಮವಾಗಿ ಗಾಂಜಾ ಸಾಗಿಸುತ್ತಿರುವುದು ಪತ್ತೆಯಾಗಿದೆ. ಕಸ್ಟಮ್ಸ್ ಅಧಿಕಾರಿಗಳು ಲಗೇಜ್ ಚೆಕ್ ಮಾಡುವ ವೇಳೆ ಗಾಂಜಾ ಸಮೇತ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಮಾರುಕಟ್ಟೆಯಲ್ಲಿ ಹೆಚ್ಚಿನ ಬೆಲೆ ಬಾಳುವ ಹೈಡ್ರೋಪೋನಿಕ್ ಗಾಂಜಾವನ್ನು ಆರೋಪಿಗಳು ಸಾಗಿಸುತ್ತಿದ್ದು, ಆರೋಪಿಗಳ ಮೇಲೆ ಎನ್ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಿ ಕಸ್ಟಮ್ಸ್ ಅಧಿಕಾರಿಗಳು ತನಿಖೆ ಮುಂದುವರೆಸಿದ್ದಾರೆ.
ಮಂಗಳೂರು:- ಮಂಗಳೂರಿನ ಟ್ಯಾಂಕರ್ ಯಾರ್ಡ್ ಒಂದರಲ್ಲಿ ಭಾರೀ ಅಕ್ರಮದ ವಾಸನೆ ಸುಳಿದಾಡಿದ್ದು, ಲಕ್ಷಗಟ್ಟಲೇ ಮೌಲ್ಯದ ಡೀಸೆಲ್ ಕಳ್ಳತನವಾಗಿದೆ. https://ainlivenews.com/shocking-incident-nadeeta-idyas-teenage-drug-party-in-silicon-city/ ಮಂಗಳೂರು ತಾಲೂಕಿನ ಸುರತ್ಕಲ್ ಸಮೀಪದ ಬಾಳ ಗ್ರಾಮದ ಟ್ಯಾಂಕರ್ ಯಾರ್ಡ್ನಲ್ಲಿ ಡೀಸೆಲ್ ಲೋಡ್ ಮಾಡುವ ಸಂದರ್ಭದಲ್ಲಿ ಭಾರೀ ಪ್ರಮಾಣದಲ್ಲಿ ಅಕ್ರಮ ನಡೆದಿರುವ ವಿಚಾರ ಬೆಳಕಿಗೆ ಬಂದಿದೆ. ಟ್ಯಾಂಕರ್ ಚಾಲಕರು ಡೀಸೆಲ್ ಕಳ್ಳತನ ಮಾಡುತ್ತಿದ್ದಾರೆ ಎನ್ನಲಾಗಿದ್ದು, ಇದಕ್ಕೆ ಮಾಲೀಕರು ಸಾಥ್ ನೀಡಿದ್ದಾರೆ ಎಂಬ ಗುಮಾನಿ ಎದ್ದಿದೆ. ಮಂಗಳೂರಿನಿಂದ ಟ್ಯಾಂಕರ್ಗಳಲ್ಲಿ ಡೀಸೆಲ್ ಲೋಡ್ ಮಾಡಿ ಕೇರಳ, ತಮಿಳುನಾಡು ಸೇರಿದಂತೆ ರಾಜ್ಯ, ಹೊರರಾಜ್ಯಗಳಿಗೆ ಡೀಸೆಲ್ ರಫ್ತು ಮಾಡಲಾಗುತ್ತದೆ. ಕಡಿಮೆ ತಾಪಮಾನದಲ್ಲಿ ಜಿಗುಟಾಗಿ ಇರುವ ಡೀಸೆಲ್ ಕಡಿಮೆ ಪ್ರಮಾಣದಲ್ಲಿರುವಂತೆ ಕಂಡರೆ ಹೆಚ್ಚು ತಾಪಮಾನಗಳಿರುವ ರಾಜ್ಯಗಳಿಗೆ ಹೋದಾಗ ಜಿಗುಟಾದ ಡೀಸೆಲ್ ಕರಗಿ ದ್ರವವಾಗಿ ಮಾರ್ಪಾಡಾಗುವ ಕಾರಣ ಡೀಸೆಲ್ ಪ್ರಮಾಣ ಹೆಚ್ಚಾದಂತೆ ತೋರುತ್ತದೆ. ಇದನ್ನೇ ಬಂಡವಾಳ ಮಾಡಿಕೊಂಡ ಟ್ಯಾಂಕರ್ ಚಾಲಕರು ಲೋಡಿಂಗ್ ಸಂದರ್ಭ ಕಡಿಮೆ ತಾಪಮಾನವಿರುವಾಗ ಟ್ಯಾಂಕರ್ಗಳಿಂದ ಡೀಸೆಲ್ ಕದ್ದು ಹೆಚ್ಚು ತಾಪಮಾನ ಹೊಂದಿರುವ ರಾಜ್ಯಗಳಲ್ಲಿರುವ ಫ್ಯಾಕ್ಟರಿಗಳಿಗೆ ರಫ್ತು ಮಾಡುವಾಗ…