ಬೆಂಗಳೂರು:- ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಹದಿಹರೆಯದವರ ಡ್ರಗ್ ಪಾರ್ಟಿ ನಡೆಯುತ್ತಿದ್ದಾ ಎಂಬುವ ಅನುಮಾನ ಮೂಡಿದೆ. https://ainlivenews.com/is-this-the-plan-to-buy-a-new-bike-or-car-if-so-the-scissors-will-fall-into-your-pocket/ ಪ್ರತಿಷ್ಠಿತ ಕಾಲೇಜು ಯುವಕ-ಯುವತಿಯರೇ ಪಾರ್ಟಿಯಲ್ಲಿ ಭಾಗಿ ಆಗ್ತಿದ್ದಾರಾ ಎಂಬ ಗುಮಾನಿ ಮೂಡಿದೆ. ದೂರು ದಾಖಲಾದರೂ ಎಫ್ಐಆರ್ ಮಾಡಿಲ್ಲ ಎಂದು ಆರೋಪಿಸಲಾಗಿದೆ. ಪೀಣ್ಯಾ ಠಾಣಾ ವ್ಯಾಪ್ತಿಯ ಅಮರಾವತಿ ಬಡವಾಣೆಯ ಫ್ಲ್ಯಾಟ್ನಲ್ಲಿ ಪಾರ್ಟಿ ನಡೆದಿದೆ. ಯುವಕ-ಯುವತಿಯರಿಂದ ಲೇಟ್ ನೈಟ್ ಪಾರ್ಟಿ ನಡೆದಿದೆ. ಕಳೆದ ಕ್ರಿಸ್ಮಸ್ ಹಾಗೂ ಹೊಸ ವರ್ಷದ ದಿನ ನಡೆದ ಪಾರ್ಟಿ ವೀಡಿಯೋ ವೈರಲ್ ಆಗಿದೆ. ಜನವರಿ ೧೨ ರಂದು ಈ ಕುರಿತು ಪೀಣ್ಯಾ ಠಾಣೆಯಲ್ಲಿ ದೂರು ದಾಖಲಾಗಿದೆ
Author: AIN Author
ಬೆಂಗಳೂರು:- ನೀವು ಹೊಸ, ಬೈಕ್, ಅಥವಾ ಕಾರು ಖರೀದಿ ಮಾಡಬೇಕು ಎಂದು ಕೊಂಡಿದ್ದೀರಾ!? ಹಾಗಿದ್ರೆ ನಿಮ್ಮ ಜೇಬಿಗೆ ಕತ್ತರಿ ಬೀಳುತ್ತೆ ಗ್ಯಾರಂಟಿ. ಹೇಗೆ ಅಂತೀರಾ.. ಈ ಸ್ಟೋರಿ ಪೂರ್ತಿ ಓದಿ. https://ainlivenews.com/its-true-that-ct-ravi-used-profanity-against-lakshmi-hebbalkar-revealed-in-cid-investigation/ ಹೊಸ ಕಾರು, ಬೈಕ್ ಖರೀದಿ ಮಾಡುವವರಿಗೆ ಶಾಕ್ ನೀಡಲು ರಾಜ್ಯ ಸರ್ಕಾರ ಮುಂದಾಗಿದೆ. ಫೆಬ್ರವರಿಯಿಂದ ಹೊಸ ಕಾರು, ಬೈಕ್ ಖರೀದಿಯ ನೋಂದಣಿ ಶುಲ್ಕ (ರಿಜಿಸ್ಟ್ರೇಷನ್) ತಲಾ 1000 ರೂ. ಹಾಗೂ 500 ರೂ. ಹೆಚ್ಚಳ ಮಾಡಲು ನಿರ್ಧರಿಸಿದೆ. ದರ ಹೆಚ್ಚಳದಿಂದ ಬಂದ ಹಣವನ್ನು ಯೆಲ್ಲೋ ಬೋರ್ಡ್ ಚಾಲಕರ ಅಭಿವೃದ್ಧಿಗೆ ಬಳಕೆ ಮಾಡುವುದಾಗಿ ರಾಜ್ಯ ಸರ್ಕಾರ ಹೇಳಿದೆ. ಆದರೆ, ಇದಕ್ಕೆ ವಾಹನ ಮಾಲೀಕರು ಮಾತ್ರ ಗರಂ ಆಗಿದ್ದಾರೆ. ಈ ಹಣವನ್ನು ಚಾಲಕರ ಅಭಿವೃದ್ಧಿಗೆ ಬಳಸುತ್ತಿರುವುದು ಒಳ್ಳೆಯ ಬೆಳವಣಿಗೆ. ಆದರೆ ನಮ್ಮಿಂದ ಕಿತ್ತು ಅವರಿಗೆ ನೀಡುವುದು ಸರಿಯಲ್ಲ. ಸರ್ಕಾರವೇ ಅವರ ಕಲ್ಯಾಣಕ್ಕೆ ಹಣ ನೀಡಲಿ ಎಂದಿದ್ದಾರೆ ದರ ಹೆಚ್ಚಳ ಸಂಬಂದ ಈಗಾಗಲೇ ಗೆಜೆಟ್ ನೋಟಿಫಿಕೇಷನ್ ಆಗಿದ್ದು, ಸದ್ಯ ವಾಹನ್ – 4…
ಬೆಂಗಳೂರು:- ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಸಿಟಿ ರವಿ ಅವಾಚ್ಯ ಶಬ್ದ ಬಳಸಿರುವುದು ಫೋರೆನ್ಸಿಕ್ ಪರೀಕ್ಷೆಯಲ್ಲಿ ದೃಢಪಟ್ಟಿದೆ. https://ainlivenews.com/big-shock-for-our-metro-commuters-fare-hike-fix/ ರಾಜ್ಯ ಆಡಳಿತ ಮತ್ತು ಸಿಬ್ಬಂಧಿ ಸುಧಾರಣೆ ಇಲಾಖೆ ನೀಡಿದ್ದ ಸದನದ ವಿಡಿಯೋವನ್ನು ಪರೀಕ್ಷೆಗೆ ಒಳಪಡಿಸಿದಾಗ ಸಿಟಿ ರವಿ ಒಮ್ಮೆ ಅವಾಚ್ಯ ಶಬ್ದ ಬಳಸಿರುವುದು ಫೋರೆನ್ಸಿಕ್ ಪರೀಕ್ಷೆಯಲ್ಲಿ ದೃಢವಾಗಿದೆ. ನಾಲ್ಕು ಗಂಟೆಯ ವಿಡಿಯೋ ರೆಕಾರ್ಡ್ನಲ್ಲಿ ಒಟ್ಟು ಏಳು ಬಾರಿ ಅವಾಚ್ಯ ಶಬ್ದ ಬಳಕೆ ಮಾಡಲಾಗಿದೆ ಎಂದು ಪೊಲೀಸ್ ಮೂಲಗಳಿಂದ ಮಾಹಿತಿ ತಿಳಿದಬಂದಿದೆ, ಹೀಗಾಗಿ, ಅವಾಚ್ಯ ಶಬ್ದ ಬಳಸಿದ ಧ್ವನಿ ಪತ್ತೆಗೆ ಸಿಟಿ ರವಿ ವಾಯ್ಸ್ ಸ್ಯಾಂಪಲ್ ಪಡೆಯಲು ಸಿಐಡಿ ಮುಂದಾಗಿದೆ. ಆದರೆ ತಾನು ಅವಾಚ್ಯ ಶಬ್ದ ಬಳಸಿಲ್ಲ ಎಂದು ಸಿಟಿ ರವಿ ಹೇಳುತ್ತಿದ್ದಾರೆ. ಜೊತೆಗೆ ವಾಯ್ಸ್ ಸ್ಯಾಂಪಲ್ ನೀಡಲು ನಿರಾಕರಿಸಿದ್ದಾರೆ.
ಬೆಂಗಳೂರು:- ನಮ್ಮ ಮೆಟ್ರೋ ಪ್ರಯಾಣಿಕರಿಗೆ ಶಾಕ್ ಎದುರಾಗಿದ್ದು, ದರ ಏರಿಕೆ ಫೈನಲ್ ಸಾಧ್ಯತೆ ಇದೆ. ಬಿಎಂಟಿಸಿ, ಕೆಎಸ್ಆರ್ಟಿಸಿ ಪ್ರಯಾಣ ದರ ಏರಿಕೆ ಬೆನ್ನಲ್ಲೆ ಮೆಟ್ರೋ ದರ ಏರಿಕೆ ಶಾಕ್ ಕೂಡ ಇಂದೇ ನಿಗದಿಯಾಗುವ ಸಾಧ್ಯತೆ ಇದೆ. https://ainlivenews.com/cold-air-in-most-districts-of-karnataka-from-today/ ಈ ಸಂಬಂಧ ಬಿಎಂಆರ್ಸಿಎಲ್ ಅಧಿಕಾರಿಗಳ ಮತ್ತು ಫೇರ್ ಹೈಕ್ ಕಮಿಟಿಯ ಹೈವೊಲ್ಟೇಜ್ ಸಭೆ ನಡೆಯಲಿದೆ. ಸಭೆಯಲ್ಲಿ ದರ ಏರಿಕೆ ಫೈನಲ್ ಆಗುವ ಸಾಧ್ಯತೆ ಇದೆ. ಸಭೆಯಲ್ಲಿ ದರ ಏರಿಕೆ, ಜೊತೆಗೆ ಪರಿಷ್ಕೃತ ದರ ನಿಗದಿ ದಿನಾಂಕ ಕೂಡ ಫೈನಲ್ ಆಗುವ ಸಾಧ್ಯತೆ ಇದೆ. ಕಳೆದ ಏಳು ವರ್ಷದಿಂದ ಮೆಟ್ರೋ ಪ್ರಯಾಣ ದರ ಏರಿಕೆ ಆಗಿರಲಿಲ್ಲ. ಈಗ ದರ ಏರಿಕೆಗೆ ಮುಂದಾಗಿರುವ ಬಿಎಂಆರ್ಸಿಎಲ್ ದರ ಏರಿಕೆ ಫೈನಲ್ ಮಾಡುವ ನಿಟ್ಟಿನಲ್ಲಿ ಬೋರ್ಡ್ ಮಿಟಿಂಗ್ ಮಾಡಲಿದೆ. ಬೆಳಗ್ಗೆ 10 ಗಂಟೆಗೆ ಫೇರ್ ಹೈಕ್ ಫಿಕ್ಸೆಷನ್ ಕಮಿಟಿ ಜೊತೆ ಬಿಎಂಆರ್ಸಿಎಲ್ ಅಧಿಕಾರಿಗಳು ಕೂಡ ಭಾಗಿಯಾಗಿ ಫೈನಲ್ ಮಾಡುವ ಸಾಧ್ಯತೆ ಇದೆ. ಸದ್ಯ ಈಗಾಗಲೇ ದರ ಏರಿಕೆ ಸಂಬಂಧ…
ಬೆಂಗಳೂರು:- ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಇಂದಿನಿಂದ ಶೀತಗಾಳಿ ಶುರುವಾಗಲಿದೆ. https://ainlivenews.com/fruit-show-vehicular-movement-restricted-parking-prohibited-heres-an-alternative/ ವಿಜಯನಗರ, ತುಮಕೂರು, ಶಿವಮೊಗ್ಗ, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಕೊಡಗು, ಹಾಸನ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಹಾವೇರಿ, ಗದಗ, ಧಾರೌಆಡ, ಬೀದರ್, ಬೆಳಗಾವಿ, ಬಾಗಲಕೋಟೆ, ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ಚಳಿ ಇರಲಿದೆ. ಎಚ್ಎಎಲ್ನಲ್ಲಿ 25.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 24.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 25.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 26.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 15.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಲಾಲ್ ಬಾಗ್ ಫಲಪುಷ್ಪ ಪ್ರದರ್ಶನ ನಡೆಯಲಿದ್ದು, ವಾಹನ ಸಂಚಾರ ನಿರ್ಬಂಧ ವಿಧಿಸಲಾಗಿದ್ದು, ಪಾರ್ಕಿಂಗ್ ನಿಷೇಧ ಮಾಡಲಾಗಿದೆ. ಲಾಲ್ಬಾಗ್ನಲ್ಲಿ ಗಣರಾಜ್ಯೋತ್ಸವದ ಫಲಪುಷ್ಪ ಪ್ರದರ್ಶನಕ್ಕೆ ಭಾರಿ ಸಂಖ್ಯೆಯಲ್ಲಿ ಜನರು ಬರುವ ಸಾಧ್ಯತೆ ಇದೆ. ಹೀಗಾಗಿ, ಸಂಚಾರ ದಟ್ಟಣೆಯನ್ನು ತಪ್ಪಿಸಲು, ಬೆಂಗಳೂರು ಸಂಚಾರ ಪೊಲೀಸರು ಕೆಲವು ರಸ್ತೆಗಳಲ್ಲಿ ವಾಹನ ಸಂಚಾರ ಮತ್ತು ಪಾರ್ಕಿಂಗ್ಗೆ ನಿರ್ಬಂಧ ವಿಧಿಸಿದ್ದಾರೆ https://ainlivenews.com/great-news-for-employees-infosys-invites-applications/ ಸಂಚಾರ ನಿರ್ಬಂಧ 10ನೇ ಕ್ರಾಸ್ ಡಾ. ಮರಿಗೌಡ ರಸ್ತೆ: ಡೈರಿ ಸರ್ಕಲ್ ಕಡೆಯಿಂದ ಲಾಲ್ಬಾಗ ಕಡೆಗೆ ಬರುವ ವಾಹನಗಳಿಗೆ ನಿರ್ಬಂಧಿಸಲಾಗಿದೆ. ಲಾಲ್ಬಾಗ್ ರಸ್ತೆ, ಊರ್ವಶಿ ಜಂಕ್ಷನ್: ಸುಬ್ಬಯ್ಯ ಸರ್ಕಲ್ ಕಡೆಯಿಂದ ಲಾಲ್ಬಾಗ್ ಮುಖ್ಯ ದ್ವಾರದ ಕಡೆಗೆ ಬರುವ ವಾಹನಗಳಿಗೆ ನಿರ್ಬಂಧಿಸಲಾಗಿದೆ. ಸಿದ್ದಯ್ಯ ರಸ್ತೆ ಕಡೆಯಿಂದ ಲಾಲ್ಬಾಗ್ ಮುಖ್ಯ ದ್ವಾರದ ಕಡೆಗೆ ಬರುವ ವಾಹನಗಳಿಗೆ ನಿರ್ಬಂಧ ವಿಧಿಸಲಾಗಿದೆ. ಪರ್ಯಾಯ ಮಾರ್ಗ: 10ನೇ ಕ್ರಾಸ್ ಡಾ. ಮರಿಗೌಡ ರಸ್ತೆ ಡೈರಿ ಸರ್ಕಲ್ ಕಡೆಯಿಂದ ಲಾಲ್ಬಾಗ ಕಡೆಗೆ ಬರುವ ವಾಹನಗಳು 10ನೇ ಕ್ರಾಸ್ ಜಂಕ್ಷನ್ನಲ್ಲಿ ಬಲ ತಿರುವು ಪಡೆದು ಸಿ.ಟಿ ಮಾರ್ಕೇಟ್,…
ಬೃಹತ್ ಮಟ್ಟದಲ್ಲಿ ಹೊಸಬರನ್ನು ಉದ್ಯೋಗಕ್ಕೆ ನೇಮಕ ಮಾಡಿಕೊಳ್ಳಲು ಇನ್ಫೋಸಿಸ್ ಕಂಪನಿ ಯೋಜನೆ ರೂಪಿಸಿದೆ ಎನ್ನುವ ಅಧಿಕೃತ ಮಾಹಿತಿ ಹೊರ ಬಿದ್ದಿದೆ. https://ainlivenews.com/no-matter-what-circus-is-done-no-matter-how-small-the-circus-is-if-so-this-is-a-must-know/ ಇನ್ಫೋಸಿಸ್ ಸಂಸ್ಥೆ 20,000ಕ್ಕೂ ಹೆಚ್ಚು ಫ್ರೆಶರ್ ಅಭ್ಯರ್ಥಿಗಳನ್ನು ನೇಮಕ ಮಾಡಲು ಯೋಜನೆ ರೂಪಿಸಿದೆಯಂತೆ. 2026ರ ವರ್ಷದಲ್ಲಿ ಕಂಪನಿಯು ದೊಡ್ಡ ಮಟ್ಟದಲ್ಲಿ ನೇಮಕಾತಿ ಮಾಡು ಪ್ಲಾನ್ನಲ್ಲಿದೆ. Q3 ಹಣಕಾಸು ಯೋಜನೆ (ಕಾರ್ಪೊರೇಟ್ನಲ್ಲಿ ಜನವರಿಯಿಂದ ಸೆಪ್ಟೆಂಬರ್ವರೆಗೆ ತಿಂಗಳುಗಳನ್ನು ವಿಂಗಡಿಸಿ Q3 ಎಂದು ಕರೆಯುತ್ತಾರೆ) ರೂಪಿಸಲಾಗಿದೆ ಎಂದು ಕಾರ್ಯನಿರ್ವಾಹಕರೊಬ್ಬರು ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ. ದೇಶದ 2ನೇ ಅತಿದೊಡ್ಡ ಸಾಫ್ಟ್ವೇರ್ ಸೇವೆಗಳ ರಫ್ತುದಾರ ಆಗಿರುವ ಇನ್ಫೋಸಿಸ್, ಪಾಶ್ಚಿಮಾತ್ಯ ರಾಷ್ಟ್ರಗಳ ಮಾರುಕಟ್ಟೆಯಿಂದ ತನ್ನ ಆದಾಯದ 80 ಪ್ರತಿಶತಕ್ಕಿಂತ ಹೆಚ್ಚು ಹಣ ಗಳಿಸುತ್ತದೆ. ಮುಂದಿನ ದಿನಗಳಲ್ಲಿ ಕಂಪನಿಯನ್ನು ಇನ್ನಷ್ಟು ಬಲಯುತವಾಗಿ ಮಾಡಲು ಹೊಸಬರ ಅವಶ್ಯಕತೆ ಇದೆ. ದೊಡ್ಡ ಮಟ್ಟದ ಗೆಲುವು ಸಾಧಿಸಬೇಕಾದರೆ ಕಂಪನಿಗೆ ಉದ್ಯೋಗಿಗಳು ಪ್ರಮುಖ ಪಾತ್ರ ವಹಿಸುತ್ತಾರೆ. ಇಂಜಿನಿಯರಿಂಗ್ ಪದವೀಧರರು ಈ ಹಿಂದಿನ ಕೆಲ ವರ್ಷಗಳಲ್ಲಿ ಉದ್ಯೋಗವನ್ನು ಕಳೆದುಕೊಂಡಿದ್ದರು. ಆದರೆ ಈಗ ಎಲ್ಲ ಕಂಪನಿಗಳು ನಿಧಾನ…
ತೂಕ ಇಳಿಸುವುದು ತುಂಬಾ ಕಷ್ಟದ ಕೆಲಸ. ಅದರಲ್ಲೂ ಸೊಂಟದ ತೂಕ ಇಳಿಸುವುದು ತುಂಬಾ ಕಷ್ಟಕರ. ಸುಂದರ ಸೊಂಟ, ತೆಳ್ಳಗಿನ ಸೊಂಟ ನಿಮ್ಮನ್ನು ಮತ್ತಷ್ಟು ಸುಂದರ ಆಗಿಸುತ್ತದೆ. ತೆಳ್ಳಗಿನ ಸೊಂಟವು ನಿಮ್ಮ ವ್ಯಕ್ತಿತ್ವವನ್ನು ಮತ್ತಷ್ಟು ಹೆಚ್ಚಿಸುತ್ತದೆ. ನಿಮ್ಮನ್ನು ಇದು ರೋಗಗಳಿಂದ ದೂರ ಇಡುತ್ತದೆ. ಆದರೆ ಹೆಚ್ಚಿನ ಜನರು ತೂಕ ನಷ್ಟ ಮಾಡಲು ಸಾಧ್ಯ ಆಗಲ್ಲ. ಹಾಗಾಗಿ ಸೊಂಟದ ಗಾತ್ರವೂ ಹಾಗೆಯೇ ಇರುತ್ತದೆ. ಎಷ್ಟೇ ಪ್ರಯತ್ನ ಪಟ್ಟರೂ ಸೊಂಟದ ಗಾತ್ರ ಕಡಿಮೆ ಆಗುವುದಿಲ್ಲ https://ainlivenews.com/sugar-disease-heart-disease-this-is-a-panacea-100-result-guarantee-if-you-drink-this-juice-for-black-coffee/ ನೀವು ವಾಕಿಂಗ್ ವೇಳೆ ಮಾಡುತ್ತಿರುವ ತಪ್ಪುಗಳನ್ನು ತಪ್ಪಿಸಿ ಮತ್ತು ಸರಿಯಾದ ವಿಧಾನವನ್ನು ಅಳವಡಿಸಿಕೊಳ್ಳಿ. ನವದೆಹಲಿಯ ಪಿಎಸ್ಆರ್ಐ ಆಸ್ಪತ್ರೆಯ ಹಿರಿಯ ಆಹಾರ ತಜ್ಞರಾದ ಪೂನಂ ದುನೇಜಾ ಅವರ ಪ್ರಕಾರ, ನಡೆಯುವಾಗ ನಿಮ್ಮ ಸ್ಥಾನವು ಸರಿಯಾಗಿಲ್ಲದಿದ್ದರೆ, ನಿಮ್ಮ ದೇಹದ ಮೇಲೆ ಹೆಚ್ಚುವರಿ ಒತ್ತಡ ಉಂಟಾಗುತ್ತದೆ. ಇದು ಹೊಟ್ಟೆಯ ಕೊಬ್ಬನ್ನು ಕಡಿಮೆ ಮಾಡುವುದಿಲ್ಲ ಮತ್ತು ತೂಕ ನಷ್ಟ ಪ್ರಯಾಣದ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತದೆ. ನೀವು ನಿಮ್ಮ ತಲೆಯನ್ನು ಕೆಳಗೆ ಅಥವಾ ನಿಮ್ಮ…
ಅನೇಕರು ಬ್ಲಾಕ್ ಕಾಫಿಯನ್ನು ಇಷ್ಟಪಡುವುದು ಸಹಜ, ಅವರಿಗೆ ಒಂದು ರೀತಿ ನಿರಾಳತೆಯನ್ನು ನೀಡುತ್ತದೆ. ಕೆಲಸದ ಒತ್ತಡ ಈ ಕಾಫಿ ಸಿಕ್ಕರೇ ಇನ್ನೂ ಉತ್ತಮ. ಬೆಳಿಗ್ಗೆ ಈ ಬ್ಲಾಕ್ ಕಾಫಿ ಕುಡಿದರೆ ಇನ್ನೂ ಆನಂದ. ಇದು ಸ್ವಲ್ಪ ಕಹಿಯಾಗಿದ್ದರು ಆರೋಗ್ಯಕ್ಕೆ ಹೆಚ್ಚು ಶಕ್ತಿಯನ್ನು ನೀಡುತ್ತದೆ. ಬ್ಲಾಕ್ ಕಾಫಿ ಕುಡಿಯುವುದರಿಂದ ಅನೇಕ ಪ್ರಯೋಜನಗಳನ್ನು ಪಡೆಯಬಹುದು, ತೂಕ ನಷ್ಟಕ್ಕೆ ಇದು ಹೇಗೆ ಸಹಾಯ ಮಾಡುತ್ತದೆ, ನಕಾರಾತ್ಮಕ ಪರಿಣಾಮಗಳನ್ನು ಏನು ಎಂಬುದನ್ನು ಇಲ್ಲಿ ನೋಡಬಹದು. https://ainlivenews.com/banana-increases-blood-sugar-is-it-good-for-weight-loss/ ನಿಂಬೆ ರಸದೊಂದಿಗೆ ಕಪ್ಪು ಕಾಫಿ ಕುಡಿಯುವುದರಿಂದ ತೂಕ ಕಡಿಮೆಯಾಗುತ್ತದೆ ಎಂದು ಹಲವರು ಹೇಳುತ್ತಾರೆ. ಕೆಲವು ಅಧ್ಯಯನಗಳು ಕಾಫಿ ತೂಕ ನಷ್ಟಕ್ಕೆ ಸಹಾಯ ಮಾಡುತ್ತದೆ ಎಂದು ಸೂಚಿಸುತ್ತದೆ. ಆದರೆ, ನಿಂಬೆ ರಸವನ್ನು ಕಾಫಿಯೊಂದಿಗೆ ಬೆರೆಸಿದರೆ ಹೆಚ್ಚು ಪರಿಣಾಮಕಾರಿಯಾಗಿ ಕೆಲಸ ಮಾಡುತ್ತದೆ ಎಂದು ಹೇಳಲಾಗುತ್ತದೆ. ಇದಕ್ಕಾಗಿ ಯಾವುದೇ ಸಂಶೋಧನೆ ಇಲ್ಲ. ಆದಾಗ್ಯೂ, ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಿರುವವರು ಮೊದಲು ಆಹಾರ ತಜ್ಞರನ್ನು ಸಂಪರ್ಕಿಸಬೇಕು. ಬ್ಲ್ಯಾಕ್ ಕಾಫಿಗೆ ನಿಂಬೆ ರಸವನ್ನು ಸೇರಿಸಿ ಕುಡಿಯುವುದರಿಂದ ಅನಗತ್ಯ ಕೊಬ್ಬು…
ನಿಮ್ಮ ದೈನಂದಿನ ಆಹಾರದಲ್ಲಿ ಬಾಳೆಹಣ್ಣನ್ನು ಸೇರಿಸಿದರೆ, ನೀವು ಉತ್ತಮ ಆರೋಗ್ಯ ಫಲಿತಾಂಶಗಳನ್ನು ಕಾಣಬಹುದು. ಬಾಳೆಹಣ್ಣಿನಲ್ಲಿ ಪೊಟ್ಯಾಸಿಯಮ್, ಮೆಗ್ನೀಸಿಯಮ್, ವಿಟಮಿನ್-ಎ, ಬಿ, ಸಿ ಮತ್ತು ವಿಟಮಿನ್ ಬಿ6 ಇದೆ. ನೀವು ಅಧಿಕ ತೂಕ ಹೊಂದಿದ್ದರೆ, ಬಾಳೆಹಣ್ಣುಗಳು ನಿಮ್ಮ ತೂಕವನ್ನು ಕಳೆದುಕೊಳ್ಳಲು ಸಹಾಯ ಮಾಡುತ್ತದೆ ಮತ್ತು ನಿಮ್ಮ ಕರುಳನ್ನು ಆರೋಗ್ಯಕರವಾಗಿರಿಸುತ್ತದೆ. ಇದು ನರಮಂಡಲವನ್ನು ಬಲಪಡಿಸುತ್ತದೆ. ತಜ್ಞರ ಪ್ರಕಾರ, ಬಾಳೆಹಣ್ಣುಗಳು ಹಣ್ಣಾಗುತ್ತಿದ್ದಂತೆ ಪೋಷಕಾಂಶಗಳ ಮಟ್ಟವು ನಿರಂತರವಾಗಿ ಹೆಚ್ಚಾಗುತ್ತದೆ. ಬಿಳಿ ರಕ್ತ ಕಣಗಳಿಗೆ ಹಸಿರು ಬಾಳೆಹಣ್ಣುಗಳಿಗಿಂತ ಕಪ್ಪು ಬಾಳೆಹಣ್ಣುಗಳು 8 ಪಟ್ಟು ಹೆಚ್ಚು ಪರಿಣಾಮಕಾರಿ. https://ainlivenews.com/lcit-ravi-objectionable-statement-case-in-the-house-cid-notice-to-yatindra-siddaramaiah/ ಬಾಳೆಹಣ್ಣುಗಳು ಸಕ್ಕರೆ ಮತ್ತು ಕ್ಯಾಲೋರಿಗಳಲ್ಲಿ ಸಮೃದ್ಧವಾಗಿವೆ, ಇದು ಇನ್ಸುಲಿನ್ ಮಟ್ಟವನ್ನು ಹೆಚ್ಚಿಸುತ್ತದೆ. ತೂಕ ಹೆಚ್ಚಾಗುವುದನ್ನು ತಪ್ಪಿಸುವ ಗುರಿಯನ್ನು ಹೊಂದಿರುವವರಿಗೆ ಸೂಕ್ತವಲ್ಲ. ಪೌಷ್ಟಿಕತಜ್ಞ ಶಾಲಿನಿ ಸುಧಾಕರ್ ಪ್ರಕಾರ, ಬಾಳೆಹಣ್ಣು ತಿನ್ನುವುದು ರಕ್ತದಲ್ಲಿನ ಸಕ್ಕರೆಯ ಹೆಚ್ಚಳಕ್ಕೆ ಕಾರಣವಾಗುತ್ತದೆ ಎಂದು ಹೇಳಿದ್ದಾರೆ. ಫೈಬರ್ ಅಂಶದಿಂದಾಗಿ, ಪೌಷ್ಟಿಕತಜ್ಞ ಸುಧಾಕರ್ ಅವರು ಸಕ್ಕರೆ ಮತ್ತು ನಾರಿನ ಸಂಯೋಜನೆಯು ನಿರ್ಣಾಯಕವಾಗಿದೆ ಏಕೆಂದರೆ ಫೈಬರ್ ರಕ್ತ ಸಕ್ಕರೆಯ ಹೀರಿಕೊಳ್ಳುವಿಕೆಯನ್ನು ನಿಧಾನಗೊಳಿಸುತ್ತದೆ.…