ಬೆಳಗಾವಿ:- ಜಿಲ್ಲೆ ಸವದತ್ತಿ ತಾಲೂಕಿನ ಇಂಚಲ ಗ್ರಾಮದಲ್ಲಿ 2ನೇ ಹೆಂಡತಿಯನ್ನು ಬಿಟ್ಟು ತನ್ನ ಬಳಿಯೇ ಇರುವಂತೆ ಪೀಡಿಸುತ್ತಿದ್ದ ಮೊದಲ ಹೆಂಡ್ತಿಯನ್ನೇ ಪತಿ ಬರ್ಬರವಾಗಿ ಹತ್ಯೆಗೈದಿರುವ ಘಟನೆ ಜರುಗಿದೆ. https://ainlivenews.com/chamarajanagar-chikkallur-enriched-panktiseva/ 25 ವರ್ಷದ ರಿಯಾಜ್ ಪಠಾಣ್ ಕೊಲೆಯಾದ ವ್ಯಕ್ತಿ. 30 ವರ್ಷದ ರಿಯಾಜ್ ಪಠಾಣ್ ಕೊಲೆ ಮಾಡಿದ ಗಂಡ ಎನ್ನಲಾಗಿದೆ. ಎರಡನೇ ಹೆಂಡತಿ ಫರ್ಜಾನಾ ಪಠಾಣ್ ಮಾತು ಕೇಳಿ ರಿಯಾಜ್, ಮೊದಲ ಪತ್ನಿ ಶಮಾ ಮಲಗಿದ್ದಾಗ ಆಕೆಯ ತಲೆ ಮೇಲೆ ಕಲ್ಲು ಎತ್ತಿಹಾಕಿ ಬರ್ಬರವಾಗಿ ಹತ್ಯೆಗೈದಿದ್ದಾನೆ. ಹತ್ತು ವರ್ಷದ ಹಿಂದೆ ಶಿಗ್ಗಾವಿಯ ರಿಯಾಜ್ ಪಠಾಣ್ ಎಂಬಾತನನ್ನ ಮದುವೆಯಾಗಿದ್ದಳು. ಇದಾದ ಬಳಿಕ ಗಂಡ ಹೆಂಡತಿ ಕೆಲಸಕ್ಕೆಂದು ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಇಂಚಲ ಗ್ರಾಮಕ್ಕೆ ಬಂದು ನೆಲಸಿದ್ದರು. ರಿಯಾಜ್ ರಸ್ತೆ ಬದಿಯಲ್ಲಿ ಚೆಸ್ಮಾ, ವಾಚ್ ಮಾರುವ ವ್ಯಾಪಾರ ಮಾಡುತ್ತಿದ್ದರೆ, ಶಮಾ ಮಾತ್ರ ಮನೆಯಲ್ಲೇ ಇರುತ್ತಿದ್ದಳು. ಈ ದಂಪತಿಗೆ ಮೂರು ಮಕ್ಕಳು ಸಹ ಇದ್ದು, ಸಂಸಾರ ಸುಂದರವಾಗಿತ್ತು. ಆದ್ರೆ, ಈ ಸಂಸಾರದಲ್ಲಿ ಮತ್ತೋರ್ವ ಮಹಿಳೆ ಎಂಟ್ರಿ…
Author: AIN Author
ಚಾಮರಾಜನಗರ: ಜಿಲ್ಲೆಯಲ್ಲಿ ಪ್ರಸಿದ್ದ ಪಡೆದಿರುವ ಚಿಕ್ಕಲೂರಿನಲ್ಲಿ ಮಂಟೇಸ್ವಾಮಿ ಪರಂಪರೆಯ ಜಾತ್ರೆಯಲ್ಲಿಂದು ಪಂಕ್ತಿಸೇವೆ ಸಂಪನ್ನವಾಯ್ತು. ಕೊಳ್ಳೇಗಾಲ ತಾಲ್ಲೂಕಿನ ಚಿಕ್ಕಲ್ಲೂರಿನಲ್ಲಿ ಜ.13 ರಿಂದ 17 ರ ತನಕ ಜಾತ್ರಾ ಮಹೋತ್ಸವ ನಡೆಯಿತು. https://ainlivenews.com/kolar-district-level-cereal-and-organic-fair-and-fruit-and-flower-show/ ಚಿಕ್ಕಲ್ಲೂರಿನಲ್ಲಿ ಯಾವುದೇ ಬಲಿ ಪೀಠವಿಲ್ಲ ಅಲ್ಲಿಗೆ ಬರುವ ಭಕ್ತರು ಅವರಿಗೆ ಇಷ್ಟವಾದ ಆಹಾರ ಪದ್ದತಿಯನ್ನು ಪಂಕ್ತಿಸೇವೆ ಮಾಡುತ್ತಾರೆ. ಆದರೆ ಪಂಕ್ತಿ ಸೇವೆಗೆ ಜಿಲ್ಲಾಡಳಿತ ಅಡ್ಡಿಪಡಿಸಿತ್ತು ಆದರೂ ಕೂಡ ಯಾವುದೇ ಜಾತಿ ಮತ ಪಂಥವಿಲ್ಲದೆ ಸರ್ವಧರ್ಮ ಸಮನ್ಚಯ ಸಾಧಿಸುವ ಚಿಕ್ಕಲ್ಲೂರು ಪಂಕ್ತಿಸೇವೆ ಯಾವುದೇ ಅಡೆ ತಡೆ ಇಲ್ಲದೆ ನಡೆಯಿತು. ಜಾತ್ರೆಗೆ ಆಗಮಿಸುವ ಭಕ್ತರು ಸಸ್ಯಹಾರ ಹಾಗೂ ಮಾಂಸಹಾರದ ಪಂಕ್ತಿಸೇವೆಯಲ್ಲಿ ಪಾಲ್ಗೊಂಡರು. ಪಂಕ್ತಿ ಸೇವೆಯಲ್ಲಿಸ ಸಾವಿರಾರು ಭಕ್ತರು ಪಾಲ್ಗೊಂಡರು.
ಕೋಲಾರ – ಕೋಲಾರ ಜಿಲ್ಲೆಯನ್ನು ರೈತರ ಜಿಲ್ಲೆ ಎಂದು ಕರೆಯಲಾಗುತ್ತದೆ. ಇಂತಹ ಕಾರ್ಯಕ್ರಮಗಳಿಗೆ ಜಿಲ್ಲೆಯ ಎಲ್ಲಾ ರೈತರು ಭಾಗವಹಿಸಿ ಇನ್ನು ಅನೇಕ ವಿವಿಧ ರೀತಿಯ ಕೃಷಿ ಬೆಳೆಗಳನ್ನು ಬೆಳೆದು ದೇಶಕ್ಕೆ ಮಾದರಿಯಾಗಬೇಕು ಎಂದು ವಿಧಾನ ಪರಿಷತ್ ಶಾಸಕರಾದ ಇಂಚರಗೋವಿಂದರಾಜು ಅವರು ಹೇಳಿದರು. https://ainlivenews.com/the-lover-flew-into-a-rage-and-the-lovers-life-what-happened-after-all/ ಇಂದು ಜಿಲ್ಲಾ ತೋಟಗಾರಿಕೆ ನರ್ಸರಿಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ ಹಾಗೂ ಕೃಷಿಕ ಸಮಾಜ, ಕೋಲಾರ ಇವರ ಸಹಯೋಗದಲ್ಲಿ ಜಿಲ್ಲಾ ಮಟ್ಟದ ಸಿರಿಧಾನ್ಯ ಮತ್ತು ಸಾವಯುವ ಮೇಳ ಹಾಗೂ ಫಲಪುಷ್ಪ ಪ್ರದರ್ಶನ 2025 ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಮುಂದಿನ ಪೀಳಿಗೆಗೆ ಗುಣಮಟ್ಟದ ಆಹಾರ ಒದಗಿಸುವುದು ನಮ್ಮೆಲ್ಲರ ಜವಾಬ್ದಾರಿ ಆಗಿರುತ್ತದೆ. ಹಾಗಾಗಿ ಗುಣಮಟ್ಟದ ಆಹಾರ ಉತ್ಪನ್ನಗಳನ್ನು ಬೆಳೆಯಲು ರೈತರು ಸಾವಯವ ಕೃಷಿ ಪದ್ದತಿಯ ಕಡೆಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದರು. ರೈತರು ಬೆಳೆಯುವ ಕೃಷಿ ಉತ್ಪನ್ನಗಳಿಗೆ ಕೊಟ್ಟಿಗೆ ಗೊಬ್ಬರ, ಹಸಿರು ಎಲೆ ಗೊಬ್ಬರ, ಎರೆಹುಳು ಗೊಬ್ಬರ ಸೇರಿದಂತೆ ಸಾವಯವ ಗೊಬ್ಬರ ಬಳಸಿ ಆಹಾರ…
ವಿಜಯಪುರ:- ಪ್ರೇಯಸಿ ಸಿಟ್ಟುಮಾಡಿಕೊಂಡು ಹೋಗಿದ್ದಕ್ಕೆ ಗೆಳೆಯನ ಮನೆಯಲ್ಲೇ ಪ್ರಿಯಕರ ದುರಂತ ಸಾವನ್ನಪ್ಪಿದ ಘಟನೆ ವಿಜಯಪುರ ಜಿಲ್ಲೆಯ ಬೀಳಗಿ ತಾಲೂಕಿನ ನಿಂಗಪುರ ಗ್ರಾಮದಲ್ಲಿ ಜರುಗಿದೆ. https://ainlivenews.com/know-do-you-know-after-how-many-years-aadhaar-card-photo-should-be-changed/ ಅಜಯ್ ಹಾಗೂ ಪ್ರೇಯಸಿ ಅನುಪಮ ಜೊತೆಗೆ ಬೀಳಗಿ ತಾಲ್ಲೂಕಿನ ನಿಂಗಾಪುರದ ಸ್ನೇಹಿತ ನವೀನ್ ಮನೆಗೆ ಹೋಗಿದ್ದಾರೆ. ಆದ್ರೆ, ಮನೆಯಲ್ಲಿ ಪ್ರೇಯಸಿ ಮುಂದೆನೇ ಪ್ರಿಯಕರ ತನ್ನ ಗೆಳೆಯನೊಂದಿಗೆ ಸೇರಿಕೊಂಡು ಮದ್ಯ ಸೇವನೆ ಮಾಡಲು ಶುರು ಮಾಡಿದ್ದಾನೆ. ಇದಕ್ಕೆ ಸಿಟ್ಟಾದ ಅನುಪಮ ಅಲ್ಲಿಂದ ಹೋಗಲು ಎದ್ದಿದ್ದಾಳೆ. ಆಗ ಅಜಯ್ ಸ್ನೇಹಿತ ನವೀನ್ ಮುಧೋಳಕ್ಕೆ ಬಿಟ್ಟು ಬರುತ್ತೇನೆಂದು ಬೈಕ್ ಮೇಲೆ ಕರೆದುಕೊಂಡು ಹೊರಟಿದ್ದ ಆಗ ಅಜಯ್ ಅನುಪಮಗೆ ವಿಡಿಯೊ ಕಾಲ್ ಮಾಡಿ ವಾಪಸ್ ಬರದಿದ್ದರೆ ನೇಣು ಹಾಕಿಕೊಂಡು ಸಾಯೋದಾಗಿ ಹೇಳಿದ್ದಾನೆ. ಇದರಿಂದ ಗಾಬರಿಗೊಂಡ ಅನುಪಮ ಹಾಗೂ ನವೀನ್ ಕೂಡಲೇ ವಾಪಸ್ ಬರುವಷ್ಟರಲ್ಲಿ ಅಜಯ್ ನೇಣು ಹಾಕಿಕೊಂಡಿದ್ದಾನೆ. ಇನ್ನು ನೇಣು ಹಾಕಿಕೊಳ್ತೇನೆ ಎನ್ನುತ್ತಲೇ ನವೀನ್ ಹಾಗೂ ಅನು ತಕ್ಷಣ ವಾಪಸ್ ಬಂದಿದ್ದರು. ಅಷ್ಟರಾಗಲೇ ಅಜಯ್ ಕುಣಿಕೆಯಲ್ಲಿ ನೇತಾಡುತ್ತಿದ್ದ. ಸ್ವಲ್ಪ ಉಸಿರಾಟ ಸಹ…
ಇತ್ತೀಚಿನ ದಿನಗಳಲ್ಲಿ ಪ್ರತಿಯೊಬ್ಬರಿಗೂ ಆಧಾರ್ ಕಾರ್ಡ್ ಬಹಳ ಮುಖ್ಯವಾಗಿದೆ. ಇದು ಇಲ್ಲದೆ, ಸಾರ್ವಜನಿಕ ಅಥವಾ ಖಾಸಗಿ ಸಂಸ್ಥೆಗಳಲ್ಲಿ ಯಾವುದೇ ಕೆಲಸವನ್ನು ಪೂರ್ಣಗೊಳಿಸಲಾಗುವುದಿಲ್ಲ. ಶಾಲಾ ಪ್ರವೇಶದಿಂದ ಹಿಡಿದು ಉದ್ಯೋಗ ಮತ್ತು ವ್ಯವಹಾರಗಳನ್ನು ಪ್ರಾರಂಭಿಸುವವರೆಗೆ ಎಲ್ಲದಕ್ಕೂ ಆಧಾರ್ ಕಾರ್ಡ್ ಕಡ್ಡಾಯವಾಗಿದೆ. https://ainlivenews.com/poisonous-amritanoo-eating-too-much-almonds-is-guaranteed-to-damage-this-part-of-the-body/ ಕಳೆದ ಒಂದೂವರೆ ದಶಕಗಳಿಂದ ಆಧಾರ್ ಕಾರ್ಡ್ ಬಳಕೆ ಅತ್ಯಧಿಕವಾಗಿದೆ. ಡಿಜಿಟಲ್ ಡ್ಯಾಕೂಮೆಂಟ್ ಆಗಿರುವ ಕಾರಣ ಯಾವುದೇ ಕಾರ್ಯವಾದ್ರೂ ಆಧಾರ್ ಕಾರ್ಡ್ ಕಡ್ಡಾಯವಾಗಿವೆ. ದೇಶದ ಶೇ.90ರಷ್ಟು ಜನರು ಆಧಾರ್ ಕಾರ್ಡ್ ಹೊಂದಿದ್ದಾರೆ ಎಂದು ಕೆಲ ವರದಿಗಳು ಹೇಳಿವೆ. ಶಾಲೆ-ಕಾಲೇಜುಗಳಲ್ಲಿ ದಾಖಲಾತಿಯಿಂದ ಹಿಡಿದು ಸರ್ಕಾರಿ ಯೋಜನೆಗಳ ಲಾಭ ಪಡೆಯಲು ಸೇರಿದಂತೆ ಮರಣೋತ್ತರ ಪ್ರಮಾಣಪತ್ರ ತೆಗೆದುಕೊಳ್ಳಲು ಸಹ ಆಧಾರ್ ಕಾರ್ಡ್ ಕಡ್ಡಾಯವಾಗಿದೆ. ಭಾರತದಲ್ಲಿ UIDAI ಮೂಲಕ ಆಧಾರ್ ಕಾರ್ಡ್ ವಿತರಣೆ ಮಾಡಲಾಗುತ್ತದೆ. ಆಧಾರ್ ಕಾರ್ಡ್ನಲ್ಲಿನ ಮಾಹಿತಿ ತಪ್ಪಾಗಿದ್ದರೆ ಅದನ್ನು ಸರಿ ಮಾಡುವ ಅಯ್ಕೆಗಳನ್ನು ಸಹ ನೀಡಲಾಗುತ್ತದೆ. ಇದೇ ರೀತಿ ಆಧಾರ್ ಕಾರ್ಡ್ ಫೋಟೋ ಸಹ ಅಪ್ಡೇಟ್ ಮಾಡಬೇಕು. ಎಷ್ಟು ವರ್ಷದ ಬಳಿಕ ಆಧಾರ್ ಕಾರ್ಡ್ ಫೋಟೋ…
ಬಾದಾಮಿಯು ಅನೇಕ ಆರೋಗ್ಯ ಸಂಬಂಧಿ ಸಮಸ್ಯೆಗಳನ್ನು ಹೋಗಲಾಡಿಸುವಲ್ಲಿ ಸಹಾಯಕವಾಗಿದೆ. ಆದರೆ ಯಾವುದನ್ನಾದರೂ ಅಧಿಕಗೊಳಿಸುವುದರಿಂದ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಉಂಟಾಗುತ್ತದೆ. ಬಾದಾಮಿ ತಿನ್ನುವ ಮೂಲಕ ಆರೋಗ್ಯವನ್ನು ಬಲಪಡಿಸಲು ಬಯಸಿದರೆ, ಸರಿಯಾದ ಪ್ರಮಾಣದಲ್ಲಿ ಮಾತ್ರ ಸೇವಿಸಬೇಕು. ಇದಲ್ಲದೆ ಈ ಒಣ ಹಣ್ಣನ್ನು ಸೇವಿಸಲು ಉತ್ತಮ ಸಮಯದ ಬಗ್ಗೆಯೂ ನೀವು ತಿಳಿದುಕೊಳ್ಳಬೇಕು. https://ainlivenews.com/eating-pumpkin-seeds-will-not-cause-these-health-problems/ ಬಾದಾಮಿಗಳು ಆರೋಗ್ಯಕರ ಕೊಬ್ಬುಗಳು, ಪ್ರೋಟೀನ್ ಮತ್ತು ಫೈಬರ್ನಲ್ಲಿ ಸಮೃದ್ಧವಾಗಿದೆ. ಇದು ಮೆದುಳು ಮತ್ತು ಚರ್ಮದ ಆರೋಗ್ಯವನ್ನು ಸುಧಾರಿಸುತ್ತದೆ. ಇವುಗಳನ್ನು ತಿನ್ನುವುದರಿಂದ ಆಕ್ಸಿಡೇಟಿವ್ ಒತ್ತಡ ಮತ್ತು ಉರಿಯೂತ ಕಡಿಮೆಯಾಗುತ್ತದೆ. ಆದರೆ, ಪ್ರತಿದಿನ ಬಾದಾಮಿ ತಿನ್ನುವುದು ಎಷ್ಟು ಮುಖ್ಯವೋ, ಅವುಗಳನ್ನು ಮಿತಿಗೊಳಿಸುವುದು ಕೂಡ ಅಷ್ಟೇ ಮುಖ್ಯ. ಏಕೆಂದರೆ ಬಾದಾಮಿಯನ್ನು ಅತಿಯಾಗಿ ತಿಂದರೆ ಕಿಡ್ನಿ ಸ್ಟೋನ್ಸ್ ಸಮಸ್ಯೆ, ಜೀರ್ಣಕ್ರಿಯೆ ಮತ್ತು ಬೊಜ್ಜಿನ ಸಮಸ್ಯೆ ಉಂಟಾಗುವ ಸಾಧ್ಯತೆ ಇದೆ. ಹಾಗಾದ್ರೆ ಪ್ರತಿದಿನ ಎಷ್ಟು ಬಾದಾಮಿ ತಿನ್ನಬೇಕು? ಅಲ್ಲದೇ, ಯಾವ ರೀತಿಯ ಆಹಾರಗಳು ಕಿಡ್ನಿ ಸ್ಟೋನ್ ಸಮಸ್ಯೆಗೆ ಕಾರಣವಾಗಬಹುದು? ಹೀಗೆ ಮುಂತಾದ ವಿಚಾರಗಳನ್ನು ತಿಳಿದುಕೊಳ್ಳೋಣ ಬನ್ನಿ. ಬಾದಾಮಿಯಲ್ಲಿ…
ನವದೆಹಲಿ: ಖಾಸಗಿ ವಾಹನಗಳು ಒಟ್ಟು ಟೋಲ್ ಸಂಗ್ರಹದಲ್ಲಿ ಕೇವಲ ಶೇ. 26 ರಷ್ಟಿವೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಖಾಸಗಿ ವಾಹನಗಳಿಗೆ ಟೋಲ್ ಸಂಗ್ರಹದ ಬದಲು ಮಾಸಿಕ ಮತ್ತು ವಾರ್ಷಿಕ ಪಾಸ್ಗಳನ್ನು ನೀಡುವ ಬಗ್ಗೆ ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ತಿಳಿಸಿದ್ದಾರೆ. https://ainlivenews.com/tungabhadra-reservoir-water-turned-green-increased-anxiety-in-people/ ಸಂಚಾರಕ್ಕೆ ತೊಂದರೆಯಾಗದಂತೆ ಹಳ್ಳಿಗಳ ಹೊರಗೆ ಟೋಲ್ ಸಂಗ್ರಹಣಾ ಕೇಂದ್ರವನ್ನು ಸ್ಥಾಪಿಸಲಾಗುವುದು. ಟೋಲ್ ಆದಾಯದ ಶೇ.74 ರಷ್ಟು ವಾಣಿಜ್ಯ ವಾಹನಗಳಿಂದ ಬರುತ್ತದೆ. ಖಾಸಗಿ ವಾಹನಗಳಿಗೆ ಮಾಸಿಕ ಅಥವಾ ವಾರ್ಷಿಕ ಪಾಸ್ಗಳನ್ನು ಪರಿಚಯಿಸುವ ಬಗ್ಗೆ ನಾವು ಪರಿಗಣಿಸುತ್ತಿದ್ದೇವೆ ಎಂದು ಸಚಿವರು ತಿಳಿಸಿದ್ದಾರೆ. ಸರ್ಕಾರಕ್ಕೆ ಯಾವುದೇ ನಷ್ಟವಾಗುವುದಿಲ್ಲ. ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ಆರಂಭದಲ್ಲಿ ರಾಷ್ಟ್ರೀಯ ಹೆದ್ದಾರಿಗಳಲ್ಲಿ ತಡೆರಹಿತ ಜಾಗತಿಕ ಸಂಚರಣೆ ಉಪಗ್ರಹ ವ್ಯವಸ್ಥೆ ಆಧಾರಿತ ಟೋಲ್ ಸಂಗ್ರಹ ವ್ಯವಸ್ಥೆಯನ್ನು FASTag ಜೊತೆಗೆ ಹೆಚ್ಚುವರಿ ಸೌಲಭ್ಯವಾಗಿ ಜಾರಿಗೆ ತರಲು ನಿರ್ಧರಿಸಿದೆ ಎಂದಿದ್ದಾರೆ.
ಭಾರತೀಯ ಮಹಿಳಾ ತಂಡ ಏಕದಿನ ಕ್ರಿಕೆಟ್ನಲ್ಲಿ ಟೀಮ್ ಇಂಡಿಯಾ ಮಹಿಳಾ ತಂಡ ಹೊಸ ಇತಿಹಾಸ ನಿರ್ಮಿಸಿದೆ. https://ainlivenews.com/ayyappa-swamy-drunken-car-driving-on-devotees-fir-against-accused/ ರಾಜ್ಕೋಟ್ನ ನಿರಂಜನ್ ಶಾ ಮೈದಾನದಲ್ಲಿ ನಡೆದ ಐರ್ಲೆಂಡ್ ವಿರುದ್ಧದ 3ನೇ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡಿದ್ದ ಟೀಮ್ ಇಂಡಿಯಾ ಪರ ಸ್ಮೃತಿ ಮಂಧಾನ ಹಾಗೂ ಪ್ರತೀಕಾ ರಾವಲ್ ಭರ್ಜರಿ ಶತಕ ಸಿಡಿಸಿದರು. 80 ಎಸೆತಗಳನ್ನು ಎದರುರಿಸಿದ ಸ್ಮೃತಿ 135 ರನ್ ಬಾರಿಸಿದರೆ, ಪ್ರತೀಕಾ ರಾವಲ್ 129 ಎಸೆತಗಳಲ್ಲಿ 154 ರನ್ ಸಿಡಿಸಿದರು. ಇನ್ನು ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ರಿಚಾ ಘೋಷ್ 42 ಎಸೆತಗಳಲ್ಲಿ 59 ರನ್ ಬಾರಿಸಿದರು. ಈ ಮೂಲಕ ಟೀಮ್ ಇಂಡಿಯಾ 50 ಓವರ್ಗಳಲ್ಲಿ 5 ವಿಕೆಟ್ ಕಳೆದುಕೊಂಡು 435 ರನ್ ಕಲೆಹಾಕಿತು. ಇದರೊಂದಿಗೆ ಭಾರತೀಯ ಏಕದಿಕ ಕ್ರಿಕೆಟ್ ಇತಿಹಾಸದಲ್ಲೇ ಅತ್ಯಧಿಕ ರನ್ ಪೇರಿಸಿದ ದಾಖಲೆ ಟೀಮ್ ಇಂಡಿಯಾ ಮಹಿಳಾ ತಂಡದ ಪಾಲಾಯಿತು. ಅಂದರೆ ಈ ಹಿಂದೆ ಭಾರತೀಯ ಪುರುಷರ ತಂಡ ಒನ್ ಡೇ ಕ್ರಿಕೆಟ್ನಲ್ಲಿ ಬರೆದಿದ್ದ ಗರಿಷ್ಠ…
ಬೆಳಗಾವಿ: ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಅಪಘಾತವಾಗಿರುವ ಬಗ್ಗೆ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ನೋ ಕಮೆಂಟ್ಸ್ ಎಂದ ರಮೇಶ ಜಾರಕಿಹೊಳಿ, ಅದನ್ನು ಬಿಟ್ಟು ಬೇರೆ ವಿಷಯ ಕೇಳಿ ಎಂದರು. ರಾಜ್ಯದಲ್ಲಿ ಸರ್ಕಾರ ಬದಲಾವಣೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಪಕ್ಷವನ್ನು ನಾವು ಗಟ್ಟಿ ಮಾಡಿ, ಪೂರ್ಣ ಪ್ರಮಾಣದಲ್ಲಿ 130-140 ಸ್ಥಾನ ಗೆಲ್ಲಲು ಕೆಲಸ ಮಾಡುತ್ತಿದ್ದೇವೆ. 2028ಕ್ಕೆ ಆಗುತ್ತದೆಯೋ ಅಥವಾ ಅದಕ್ಕಿಂತ ಮೊದಲು ಚುನಾವಣೆ ಆಗುತ್ತದೆ ಅಂತಾ ಗೊತ್ತಿಲ್ಲ ಎಂದರು. https://ainlivenews.com/tungabhadra-reservoir-water-turned-green-increased-anxiety-in-people/ ಸಿ.ಟಿ.ರವಿ ಪ್ರಕರಣದಲ್ಲಿ ಅವರು ಬಳಸಿರುವ ಶಬ್ದಕ್ಕೆ ನನ್ನ ತಕರಾರು ಇದೆ. ಅದಕ್ಕೆ ನನ್ನ ಸಹಮತ ಇಲ್ಲ. ಆದರೆ, ಅವರು ನಾನು ಆ ರೀತಿ ಮಾತಾಡಿಲ್ಲ ಎಂದಿದ್ದರು. ಹಿಂದೆ ಇಂದಿರಾ ಗಾಂಧಿ ಅವರ ಬಗ್ಗೆ ಸಿ.ಎಂ.ಇಬ್ರಾಹಿಂ ಏನು ಬೇಕಾದರೂ ಮಾತಾಡಿದ್ದರು. ರಾಜಕಾರಣದಲ್ಲಿ ಇಂಥ ವಿಚಾರಗಳನ್ನು ದೊಡ್ಡದು ಮಾಡಬಾರದಿತ್ತು. ರಾಜಕಾರಣದಲ್ಲಿ ಯಾರೂ ಶುದ್ಧರಲ್ಲ. ಬಾಯಿ ತಪ್ಪಿ ಆ ರೀತಿ ಮಾತಾಡಿರುತ್ತಾರೆ. ಅದನ್ನು ಅಲ್ಲಿಯೇ ಮುಗಿಸಬೇಕಿತ್ತು. ಆದರೆ, ಅದನ್ನು ದೊಡ್ಡದು ಮಾಡಿ, ವಿಧಾನಸೌಧಕ್ಕೆ ಅಗೌರವ ತಂದರು ಎಂದು…
ಗದಗ: ಕಳೆದ ಹಲವು ವರ್ಷಗಳಿಂದ ಕಲ್ಯಾಣ ಕರ್ನಾಟದ ಜಲಾಶಯವೊಂದರ ನೀರು ವಿಷಕಾರಿಯಾಗುತ್ತಿದೆ. ಈ ಭಾಗದ ಜನರ ಜೀವನಾಡಿಯಾಗಿರುವ ತುಂಗಭದ್ರಾ ಜಲಾಶಯದ ನೀರು ಹಸಿರು ಬಣ್ಣಕ್ಕೆ ತಿರುಗುವುದು ಜನರ ಆತಂಕಕ್ಕೆ ಕಾರಣವಾಗಿದೆ. https://ainlivenews.com/ayyappa-swamy-drunken-car-driving-on-devotees-fir-against-accused/ ತುಂಗಭದ್ರಾ ಜಲಾಶಯದ ನೀರೇ ಈಗ ವಿಷವಾಗಿದೆ. ಇದು ಇಂದು ನಿನ್ನೆಯ ಕಥೆಯಲ್ಲ. ಜಲಾಶಯ ತುಂಬುವುದೊಂದೇ ತಡ ಒಂದು ತಿಂಗಳು ಕಳೆಯುತ್ತಿದ್ದಂತೆ ಇಡೀ ನೀರು ಹಸಿರು ಬಣ್ಣಕ್ಕೆ ತಿರುಗುತ್ತದೆ. ಜಲಾಶಯದ ಹಿನ್ನೀರು ಪ್ರದೇಶದಲ್ಲಿ ನೀರೆಲ್ಲಾ ಹಸಿರು ಬಣ್ಣಕ್ಕೆ ತಿರುಗಿ ನೀರು ಸಂಪೂರ್ಣವಾಗಿ ವಿಷಕಾರಿಯಾಗುತ್ತಿದೆ. ಪ್ರತಿ ವರ್ಷ ನೀರು ಹಸಿರು ಬಣ್ಣಕ್ಕೆ ತಿರುಗುವುದು ಜನರ ಆತಂಕಕ್ಕೆ ಕಾರಣವಾಗಿದೆ. ಈ ವಿಷಕಾರಿ ನೀರು ಕೇವಲ ಮನುಷ್ಯರಿಗೆ ಮಾತ್ರ ಅಲ್ಲ, ನೀರಿನಲ್ಲಿರುವ ಜಲಚರಗಳಿಗೂ ಹಸಿರು ಬಣ್ಣದ ನೀರು ಕುತ್ತು ತಂದಿದೆ. ಗದಗ ಜಿಲ್ಲೆ ಮುಂಡರಗಿ ತಾಲೂಕಿನ ಹಮ್ಮಿಗಿ ಗ್ರಾಮದಲ್ಲಿ ಶಿಂಗಟಾಲೂರು ಏತನೀರಾವರಿ ಯೋಜನೆಯಡಿ ತುಂಗಭದ್ರಾ ನದಿಗೆ ನಿರ್ಮಿಸಿರೋ ಬ್ರಿಜ್ ಕಂ ಬ್ಯಾರೇಜ್ ನೀರೆಲ್ಲಾ ಹಸಿರು ಬಣ್ಣಕ್ಕೆ ತಿರುಗಿ ನೀರು ಸಂಪೂರ್ಣವಾಗಿ ವಿಷಕಾರಿಯಾಗುತ್ತಿದೆ. ಗದಗ-ಬೆಟಗೇರಿ ಅವಳಿ…