Author: AIN Author

ಹಿಂದೂ ಸಂಪ್ರದಾಯದ ಪ್ರಕಾರ, ಸಾಮಾನ್ಯವಾಗಿ ಶುಭ ಕಾರ್ಯಗಳು, ಹಬ್ಬ-ಹರಿದಿನಗಳಲ್ಲಿ ಹೊಸ ಬಟ್ಟೆ ಧರಿಸೋ ಪದ್ಧತಿ ಇದೆ. ಯಾಕಂದ್ರೆ ಹೊಸ ಬಟ್ಟೆಗಳು ಸದಾ ಶುಭವನ್ನುಂಟು ಮಾಡುತ್ತವೆ ಅಂತಾ ಪುರಾಣಗಳಲ್ಲಿ ಉಲ್ಲೇಖಿಸಲಾಗಿದೆ. ಜನರು ಸಮಾಜದಲ್ಲಿ ತಮ್ಮನ್ನು ತಾವು ಗುರುತಿಸಿಕೊಳ್ಳಲು ಸುಂದರವಾದ ಮತ್ತು ಸೊಗಸಾದ ಬಟ್ಟೆಗಳನ್ನು ಧರಿಸಲು ಇಷ್ಟಪಡುತ್ತಾರೆ. https://ainlivenews.com/power-cut-current-cut-in-these-areas-of-bangalore-today/ ಹೊಸ ಬಟ್ಟೆಗಳನ್ನುಧರಿಸುವ ಮುನ್ನ ತೊಳೆಯಬೇಕೇ ಅಥವಾ ಹೊಸದಾಗಿರುವುದರಿಂದ ಹಾಗೆಯೇ ಧರಿಸಬಹುದಾ ಎಂಬುವುದರ ಬಗ್ಗೆ ಸಾಕಷ್ಟು ಮಂದಿಗೆ ಗೊಂದಲವಿದೆ. ನಿಮಗೂ ಸಹ ಇದೆ ಪ್ರಶ್ನೆಗಳು ಕಾಡುತ್ತಿದ್ದರೆ, ಇದಕ್ಕೆ ಉತ್ತರ ಹೊಸ ಬಟ್ಟೆಗಳನ್ನು ತೊಳೆದು ಧರಿಸುವುದೇ ಉತ್ತಮ ಎಂದು ತಜ್ಞರು ಹೇಳುತ್ತಾರೆ ಆರೋಗ್ಯ ಮತ್ತು ಸುರಕ್ಷತೆಗಾಗಿ ಹೊಸ ಬಟ್ಟೆಗಳನ್ನು ಕಡ್ಡಾಯವಾಗಿ ತೊಳೆದು ಧರಿಸುವುದು ಉತ್ತಮ. ಏಕೆಂದರೆ ಹೊಸ ಬಟ್ಟೆಗಳನ್ನು ವಿವಿಧ ರಾಸಾಯನಿಕಗಳನ್ನು ಬಳಸಿ ತಯಾರಿಸಲಾಗಿರುತ್ತದೆ. ಬಣ್ಣ, ಸುಕ್ಕು ತಡೆಗಟ್ಟುವಿಕೆ ಮತ್ತು ಸ್ಟೇನ್ ತಡೆಗಟ್ಟುವಿಕೆಗಾಗಿ ವಿಶೇಷ ರಾಸಾಯನಿಕಗಳನ್ನು ಬಳಸಲಾಗಿರುತ್ತದೆ. ಹಾಗಾಗಿ ಅವುಗಳನ್ನು ದೀರ್ಘಕಾಲದವರೆಗೆ ಚರ್ಮದ ಸಂಪರ್ಕದಲ್ಲಿ ಇಡುವುದು ಒಳ್ಳೆಯದಲ್ಲ. ಕೆಲವು ವಿಧದ ಬಣ್ಣಗಳು ಬಟ್ಟೆಗಳಿಗೆ ಬಲವಾಗಿ ಅಂಟಿಕೊಳ್ಳುವುದಿಲ್ಲ. ಇವು…

Read More

ಬೆಂಗಳೂರು:- ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಏರಿಯಾಗಳಲ್ಲಿ ಇಂದು ಪವರ್ ಕಟ್ ಇರಲಿದೆ ಎಂದು ಬೆಸ್ಕಾಂ ತಿಳಿಸಿದೆ. https://ainlivenews.com/my-statement-has-been-distorted-satish-jarakiholi-expressed-frustration/ ಮಂಜುನಾಥ್ ನಗರ, ತಿಮ್ಮಯ್ಯ ರಸ್ತೆ, ಭೋವಿ ಕಾಲೋನಿ, ಮಹಾಗಣಪತಿ ನಗರ, ಪುಷ್ಪಾಂಜಲಿ ಅಪಾರ್ಟ್‌ಮೆಂಟ್, ಶಿವನಹಳ್ಳಿ ಪಾರ್ಕ್, ಆದರ್ಶ ನಗರ, ಆದರ್ಶ ಲೇಔಟ್, ಯುನಿಕ್ಸ್ ಕಾಲೋನಿ, ಇಂದಿರಾ ನಗರ, ಮಂಜುನಾಥ್ ನಗರ 3ನೇ ಹಂತ 1ನೇ ಬ್ಲಾಕ್, ಬಿ-ನಗರ, ಲಕ್ಷ್ಮೀ ನಗರ, ಹೆಚ್.ವಿ.ಕೆ.ಲೌಟ್, ಕರ್ನಾಟಕ ಲೇಔಟ್. ಕಮಲಾ ನಗರ, ವಿ.ಜೆ.ಎಸ್.ಎಸ್.ಲೇಔಟ್ ವಾರ್ಡ್ ಕಛೇರಿ ಸುತ್ತಮುತ್ತ, ನಾಗಾಪುರ, ಮಹಾಲಕ್ಷ್ಮಿ ಪುರಂ, ಮೋದಿ ಆಸ್ಪತ್ರೆ ರಸ್ತೆ, ಪಂಜಾಬ್ ನ್ಯಾಷನಲ್ ಬ್ಯಾಂಕ್, ಹಂಸಲೇಕಾ ಹೋಮ್ ಸುತ್ತಮುತ್ತ, ಜೆ.ಸಿ.ನಗರ, ಕುರಬರಹಳ್ಳಿ, ರಾಜಾಜಿ ನಗರ 2ನೇ ಬ್ಲಾಕ್, ಕಮಲಾ ನಗರ ಮುಖ್ಯರಸ್ತೆ, ಬೋವಿ ಪಾಳ್ಯ, ಮೈಕೋ ಲೇಔಟ್, ಜಿ.ಡಿ.ನಾಯ್ಡು ಹಾಲ್. ವೆಸ್ಟ್ ಆಫ್ ಕಾರ್ಡ್ ರಸ್ತೆ, ಮಹಾಲಕ್ಷ್ಮಿ ಲೇಔಟ್, ಎಸ್ಕಾನ್-ಎಪ್.ಎಸ್.ಐ.ಟಿ.ರಸ್ತೆ, ಬಿ.ಎನ್.ಇ.ಎಸ್.ಕಾಲೇಜು, ಬಿ.ಇ.ಎಲ್.ಎಸ್.ಕಾಲೇಜು, ಬೆಲ್ ಸೋಪ್‌ವನ್ ಅಪಾರ್ಟ್‌ಮೆಂಟ್, ಟೊಯೊಟೊ ಶೋ ರೂಂ, ಎಸ್ಟೀಮ್ ಕ್ಲಾಸಿಕ್ ಅಪಾರ್ಟ್‌ಮೆಂಟ್, ಲುಮೋಸ್ ಅಪಾರ್ಟ್‌ಮೆಂಟ್ ಮತ್ತು…

Read More

ಬೆಳಗಾವಿ: ಬೆಂಗಳೂರಲ್ಲಿ ಬೆಳಗ್ಗೆ ನಡೆದ ಮಾದ್ಯಮಗೋಷ್ಠಿಯಲ್ಲಿ ನನ್ನ ಕೆಲ ಹೇಳಿಕೆ ತಿರುಚಲಾಗಿದೆ. ಡಿಕೆ ಶಿವಕುಮಾರ ಬದಲಾವಣೆಗೆ ನಾನು ಯಾವುದೆ ಹೇಳಿಕೆ ನೀಡಿಲ್ಲ ಎಂದು ಸಚಿವ ಸತೀಶ್ ಜಾರಕಿಹೊಳಿ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿದ್ದಾರೆ.‌ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ ಬದಲಾವಣೆ ವಿಚಾರದಲ್ಲಿ ಯಾವುದೇ ರೀತಿ ಹೇಳಿಕೆ ನೀಡಿಲ್ಲ.‌ ಬೆಂಗಳೂರಲ್ಲಿ ಬೆಳಗ್ಗೆ ನಡೆದ ಮಾದ್ಯಮಗೋಷ್ಠಿಯಲ್ಲಿ ನನ್ನ ಕೆಲ ಹೇಳಿಕೆ ತಿರುಚಲಾಗಿದೆ. ಡಿಕೆ ಶಿವಕುಮಾರ ಬದಲಾವಣೆಗೆ ನಾನು ಯಾವುದೆ ಹೇಳಿಕೆ ನೀಡಿಲ್ಲ https://ainlivenews.com/dharwad-sugarcane-crop-caught-fire/ ಪಕ್ಷದ ಸಂಘಟನೆ, ಚುನಾವಣೆ ದೃಷ್ಟಿಯಿಂದ ಕೆಲವು ಸಲಹೆಗಳನ್ನು ನೀಡಿದ್ದೇನೆ. ಕೆಲವು ಮಾದ್ಯಮಗಳಲ್ಲಿನ ವರದಿ ಗಮನಿಸಿ ಸಾರ್ವಜನಿಕರು ತಪ್ಪು ತಿಳಿದುಕೊಳ್ಳಬೇಡಿ. ಮುಂದಿನ ವಾರ ದೆಹಲಿಗೆ ಹೋಗುತ್ತೇನೆಂದು ಹೇಳಿದ್ದು, ಹೈಕಮಾಂಡ್ ಭೇಟಿಗಲ್ಲ, ಕರ್ನಾಟಕ ಭವನದ ಕಟ್ಟಡ ಉದ್ಘಾಟನೆಗೆ ಹೊರಟ್ಟಿದ್ದೇನೆ.‌ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಹೈಕಮಾಂಡ್ ಗೆ ಬಿಟ್ಟಿದ್ದು ಎಂದು ಮೊದಲಿನಿಂದಲೂ ಹೇಳುತ್ತಾ ಬಂದಿದ್ದೇನೆ ಎಂದರು.‌

Read More

ಬೆಳಗಾವಿ: ಕಾಂಗ್ರೆಸ್ ಪಕ್ಷದಲ್ಲಿ ಸಚಿವ ಸತೀಶ ಜಾರಕಿಹೊಳಿ ಅವರು ಸೈಲೆಂಟ್ ಆಗಿ ಇರಬಾರದು. ಉಗ್ರವಾಗಿ ವರ್ತಿಸಿದರೆ ಮಾತ್ರ ಅವರಿಗೆ ಉಳಿಗಾಲ. ಇಲ್ಲದಿದ್ದರೆ ನಿಮ್ಮನ್ನು ರಾಜಕೀಯವಾಗಿ ಮುಗಿಸುತ್ತಾರೆ ಎನ್ನುವ ಮೂಲಕ ಸಹೋದರ ಸತೀಶ ಜಾರಕಿಹೊಳಿ ಅವರಿಗೆ ಮಾಜಿ ಸಚಿವ ರಮೇಶ ಜಾರಕಿಹೊಳಿ‌ ಕಿವಿಮಾತು ಹೇಳಿದ್ದಾರೆ. https://ainlivenews.com/parents-beware-breathing-problems-are-increasing-in-small-children/ ಬೆಳಗಾವಿ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿ ನಡೆಸಿ‌ ಮಾತನಾಡಿದ ಅವರು,‌ ಬೆಳಗಾವಿ ಕಾಂಗ್ರೆಸ್ ಕಚೇರಿ ನಿರ್ಮಾಣದ ವಿಚಾರದಲ್ಲಿ ಡಿಕೆಶಿ ರಾಜ್ಯದ ಜನತೆಗೆ ತಪ್ಪು ಸಂದೇಶ ಕೊಟ್ಟಿದ್ದಾರೆ. ಇದನ್ನ ವೇದಿಕೆಯಲ್ಲಿಯೇ ಪ್ರಶ್ನಿಸಿದ ಸತೀಶ ಜಾರಕೊಹೊಳಿಗೆ ನಾನು ಅಭಿನಂದನೆ ಸಲ್ಲಿಸುತ್ತೇನೆ. 2013-18ರಲ್ಲಿ ನಾನು ಕಾಂಗ್ರೆಸ್ ಶಾಸಕ. ಆಗಲೂ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದರು. ಹೈಕಮಾಂಡ್ ಮತ್ತು ರಾಜ್ಯದ ಜನತೆ ಮುಂದೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಳಗಾವಿಯಲ್ಲಿ ಕಾಂಗ್ರೆಸ್ ಕಚೇರಿ ನಿರ್ಮಾಣ ಮಾಡಿದ್ದಾರೆ ಎಂದು ಡಿಕೆಶಿ ಹೇಳಿದ್ದಾರೆ. ಮೊದಲ ಬಾರಿಗೆ ಹೇಳಿದಾಗ ಹಾಳಾಗಿ ಹೋಗಲಿ ಅಂತ ಸತೀಶ್ ಜಾರಕಿಹೊಳಿ ಸುಮ್ಮನಿದ್ದರು. ಆದರೆ, ಮತ್ತೆ ಡಿಸಿಎಂ ಡಿಕೆಶಿ-ಲಕ್ಷ್ಮೀ ಹೆಬ್ಬಾಳ್ಕರ್ ಅವರ ಹೆಸರನ್ನು ಪ್ರಸ್ತಾಪಿಸಿದ್ದಕ್ಕೆ‌ ಸತೀಶ ಜಾರಕಿಹೊಳಿ…

Read More

ಧಾರವಾಡ: ಕಟಾವಿಗೆ ಬಂದಿದ್ದ ಕಬ್ಬಿನ ಬೆಳೆಗೆ ಬೆಂಕಿ ಬಿದ್ದ ಪರಿಣಾಮ ಲಕ್ಷಾಂತರ ರೂಪಾಯಿ ಮೌಲ್ಯದ ಕಬ್ಬು ಬೆಂಕಿಗೆ ಆಹುತಿಯಾದ ಘಟನೆ ಧಾರವಾಡ ತಾಲೂಕಿನ ದೇವಗಿರಿ ಗ್ರಾಮದಲ್ಲಿ ಸಂಭವಿಸಿದೆ. https://ainlivenews.com/crowd-in-gavisiddeshwar-jatramahotsava/ ದೇವಗಿರಿ ಗ್ರಾಮದ ಸುಮಾರು 16 ಜನ ರೈತರಿಗೆ ಸೇರಿದ ಒಟ್ಟು 50 ಎಕರೆ ಪ್ರದೇಶದಲ್ಲಿ ಬೆಳೆದಿದ್ದ ಕಬ್ಬಿಗೆ ಬೆಂಕಿ ತಗುಲಿದೆ. ವಿದ್ಯುತ್ ತಂತಿಯ ಅವಘಡದಿಂದಾಗಿ ಈ ಬೆಂಕಿ ಹೊತ್ತಿಕೊಂಡಿರಬಹುದು ಎಂದು ಊಹಿಸಲಾಗಿದೆ. ಇದು ವಿದ್ಯುತ್ ಅವಘಡದಿಂದಾಗಿಯೇ ಈ ಬೆಂಕಿ ಹೊತ್ತಿದೆಯಾ ಅಥವಾ ಬೇರೆ ಯಾವುದಾದರೂ ಕಾರಣದಿಂದ ಬೆಂಕಿ ಹೊತ್ತಿದೆಯಾ ಎಂಬುದು ಸ್ಪಷ್ಟವಾಗಿ ಗೊತ್ತಾಗಬೇಕಿದೆ. ಮಧ್ಯಾಹ್ನ ಏಕಾಏಕಿ ಕಬ್ಬಿನ ಜಮೀನಿನಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಇದರಿಂದ ಸುಮಾರು 15-16 ಜನ ರೈತರು ಬೆಳೆದ ಕಬ್ಬು ಬೆಂಕಿಗೆ ಆಹುತಿಯಾಗಿದ್ದು, ರೈತರ ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗಿದೆ. ಸ್ಥಳಕ್ಕೆ ಅಗ್ನಿಶಾಮಕ ದಳದವರೂ ಸಹ ಭೇಟಿ ನೀಡಿ ಬೆಂಕಿ ನಂದಿಸುವ ಕೆಲಸ ಮಾಡಿದರು. ಧಾರವಾಡ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ.

Read More

ಕೊಪ್ಪಳ ಗವಿಸಿದ್ದೇಶ್ವರನ ತೇರು ನೋಡಲು ಭಕ್ತಸಾಗರ ಹರಿದು ಬಂದಿದೆ. ಗವಿಸಿದ್ದೇಶ್ವರ ಜಾತ್ರಾಮಹೋತ್ಸವದಲ್ಲಿ ಭಕ್ತರ ಸಾಗರದ ಜಯಘೋಷದ ನಡುವೆ ಗವಿಸಿದ್ದೇಶ್ವರ ಮಹಾರಥೋತ್ಸವ ಜರುಗಿತು. https://ainlivenews.com/parents-beware-breathing-problems-are-increasing-in-small-children/ ರಥೋತ್ಸವಕ್ಕೆ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಹಿಂದೂಸ್ತಾನಿ ಗಾಯಕ ಪಂಡಿತ್ ಡಾ.ವೆಂಕಟೇಶ ಕುಮಾರ್ ಧ್ವಜಾರೋಹಣ ನೆರವೇರಿಸುವ ಮೂಲಕ ಚಾಲನೆ ನೀಡಿದರು. ಷಟಸ್ಥಲ ಧ್ವಜ ಏರುತ್ತಿದ್ದಂತೆಯೇ ಲಕ್ಷಾಂತರ ಭಕ್ತರು `ಗವಿಸಿದ್ದೇಶ್ವರ ಮಹಾರಾಜಕೀ ಜೈ’ ಎಂದು ಘೋಷಣೆ ಕೂಗುವ ಮೂಲಕ ರಥ ಎಳೆದರು. ಭಕ್ತ ಸಾಗರದ ನಡುವೆ ಮಹಾರಥ ರಾಜ ಗಾಂಭೀರ್ಯದಲ್ಲಿ ಮುಂದೆ ಸಾಗಿತು. ರಥದ ಸುತ್ತಲೂ ಸೇರಿದ್ದ ನಾಡಿನ ನಾನಾ ಭಾಗದಿಂದ ಬಂದಿದ್ದ ಭಕ್ತರು ರಥೋತ್ಸವ ಸಾಗುವ ದೃಶ್ಯ ಭಕ್ತಿ ಭಾವದಿಂದ ಕಣ್ತುಂಬಿಕೊಂಡರು. ರಥದ ಕಳಶಕ್ಕೆ ಉತ್ತತ್ತಿ ಎಸೆಯುವ ಮೂಲಕ ಧನ್ಯತೆ ಮೆರೆದರು ಮೊದಲು ಗವಿಮಠದ ಗದ್ದುಗೆಯಿಂದ ಉತ್ಸವ ಮೂರ್ತಿಯನ್ನು ಭಕ್ತಗಣದ ನಡುವೆ ಮಹಾರಥೋತ್ಸವಕ್ಕೆ ತರಲಾಯಿತು. ನಂದಿ ಕೋಲು ಸೇರಿ ನಾನಾ ಸಾಂಪ್ರದಾಯಿಕ ಕಲಾ ತಂಡಗಳು ಸಾಥ್ ನೀಡಿದ್ದವು. ನಂತರ ಗವಿಸಿದ್ದೇಶ್ವರ ಮಹಾಸ್ವಾಮಿಗಳು ಭಾರಿ ಬಂದೋಬಸ್ ಲ್ಲಿ ಮಹಾರಥೋತ್ಸವದ ಬಳಿಗೆ…

Read More

ಪೋಷಕರೇ ಚಳಿಗಾಲ ಹೀಗಾಗಲೇ ಶುರುವಾಗಿದೆ. ಈ ಸಮಯದಲ್ಲಿ ಮಕ್ಕಳ ಮೇಲೆ ಸ್ವಲ್ಪ ಜಾಗರೂಕರಾಗಿರಿ. ಏಕೆಂದರೆ. ಸಣ್ಣ ಮಕ್ಕಳಲ್ಲಿ ಉಸಿರಾಟದ ತೊಂದರೆ ಹೆಚ್ಚಾಗುತ್ತಿದೆ. ಚಳಿಗಾಲದ ಹಿನ್ನೆಲೆಯಲ್ಲಿ ಮಕ್ಕಳಲ್ಲಿ ಶೀತ, ಕೆಮ್ಮು ಮತ್ತು ಉಬ್ಬಸ ಸಮಸ್ಯೆಯು ಗಣನೀಯವಾಗಿ ಏರಿಕೆ ಕಾಣುತ್ತಿದೆ. ಕಳೆದ ವರ್ಷಗಳಿಗೆ ಹೋಲಿಸಿದರೆ ಈ ವರ್ಷದಲ್ಲಿ ಹವಾಮಾನದಲ್ಲಿ ಏರುಪೇರು ಕಂಡುಬರುತ್ತಿದೆ. ಇದರಿಂದ ಮಕ್ಕಳಿಗೆ ಬಹುಬೇಗನೆ ವೈರಲ್‌ ಸೋಂಕು ತಗುಲುವ ಸಾಧ್ಯತೆ ಇರುತ್ತದೆ. ಹಾಗಾಗಿ ಮಕ್ಕಳಲ್ಲಿ ಉಬ್ಬಸ, ಅಸ್ತಮಾ, ಶ್ವಾಸಕೋಶ ಸಂಬಂಧಿತ ಮತ್ತು ಇತರೆ ಉಸಿರಾಟ ಸಂಬಂಧಿತ ಸಮಸ್ಯೆಗಳು ಕಾಣಿಸಿಕೊಳ್ಳುತ್ತಿವೆ. https://ainlivenews.com/i-gave-1-27-crores-for-construction-of-congress-office-ramesh-jarakiholi/ ಆಶ್ಚರ್ಯಕರ ಸಂಗತಿಯೆಂದರೆ ಈ ರೀತಿಯ ಸಮಸ್ಯೆಗಳು ಹೆಚ್ಚಾಗಿ 3ರಿಂದ 6 ತಿಂಗಳ ವಯಸ್ಸಿನ ಶಿಶುಗಳಲ್ಲಿ ಕಂಡುಬರುತ್ತಿರುವುದು. ಈ ಸಮಸ್ಯೆಯಿಂದ ದೂರವಿರಲು ಪೋಷಕರು ಆದಷ್ಟು ಮಕ್ಕಳನ್ನು ಮನೆಯಿಂದ ಹೊರಗಡೆ ಕರೆದುಕೊಂಡು ಹೋಗದಿರುವುದು ಒಳಿತು. ಮನೆಯಲ್ಲಿ ಮಕ್ಕಳಿರುವ ಪೋಷಕರು ಹೊರಗಡೆ ಹೋಗುವಾಗ ಮಾಸ್ಕ್‌ ಧರಿಸುವ ಮೂಲಕ ಎಚ್ಚರಿಕೆವಹಿಸಬೇಕಾದ ಅನಿವಾರ್ಯತೆ ಇದೆ ಎನ್ನುತ್ತಾರೆ ಬೆಂಗಳೂರಿನ ವಾಸವಿ ಆಸ್ಪತ್ರೆಯ ಮಕ್ಕಳ ತಜ್ಞರು. ಚಿಕ್ಕ ಮಕ್ಕಳಲ್ಲಿ ಬ್ರಾಂಕೈಟಿಸ್‌ ಸಮಸ್ಯೆ…

Read More

ಬೆಳಗಾವಿ:- ಕಾಂಗ್ರೆಸ್ ಕಚೇರಿ ನಿರ್ಮಾಣಕ್ಕೆ ನಾನು 1.27 ಕೋಟಿ ನೀಡಿದ್ದೇನೆ ಎಂದು ರಮೇಶ್‌ ಜಾರಕಿಹೊಳಿ ಹೇಳಿದ್ದಾರೆ.\ https://ainlivenews.com/one-who-died-in-mangalore-breathed-in-kerala-abbabba-this-is-indeed-a-miracle/ ಈ ಸಂಬಂಧ ಮಾತನಾಡಿದ ಅವರು, ಕಾಂಗ್ರೆಸ್ ಕಚೇರಿ ನಿರ್ಮಾಣಕ್ಕೆ ನಾನು 1.27 ಕೋಟಿ ರೂ. ನೀಡಿದ್ದೇನೆ. ನಾನು ಉಸ್ತುವಾರಿ ಮಂತ್ರಿ ಆಗಿದ್ದಾಗ ಶಿವಕುಮಾರನನ್ನು ಬೆಳಗಾವಿಗೆ ಬರಲು ಬಿಟ್ಟಿರಲಿಲ್ಲ ಎಂದರು. ಕಾಂಗ್ರೆಸ್ ಪಕ್ಷದ ಸಿಎಲ್‌ಪಿ ಸಭೆಯಲ್ಲಿ ಡಿಕೆ ಶಿವಕುಮಾರ್ ರಾಜ್ಯದ ಜನರಿಗೆ ತಪ್ಪು ಸಂದೇಶ ಕೊಟ್ಟಿದ್ದಾರೆ. ಈ ಸಭೆಯಲ್ಲಿ ನನ್ನ ಹೆಸರು ಪ್ರಸ್ತಾಪ ಆಗಿದ್ದರಿಂದ ನಾನು ಸ್ಪಷ್ಟನೆ ನೀಡುತ್ತಿದ್ದೇನೆ ಎಂದು ತಿಳಿಸಿದರು.

Read More

ಮಂಗಳೂರು: ಯಾರೇ ಆಗಲಿ ಆಯಸ್ಸು ಮುಗಿಯೋ ತನಕ ನಾವು ಎಷ್ಟೇ ಅವಘಡಗಳಲ್ಲಿ ಸಿಲುಕಿದರೂ ನಾವು ಬದುಕೋದು ಗ್ಯಾರಂಟಿ. ಏಕೆಂದರೆ ಆಯಸ್ಸು ಮುಗಿಯದೇ ಯಮ ಧರ್ಮ ನಮ್ಮನ್ನು ಕರೆದುಕೊಂಡು ಹೋಗಲು ಸಾಧ್ಯವೇ ಇಲ್ಲ ಎಂದು ನಮ್ಮ ಹಿರಿಯರು ಆಗಾಗ ಹೇಳುವುದನ್ನು ನಾವು ಕೇಳಿದ್ದೇವೆ. https://ainlivenews.com/rape-of-a-5-year-old-girl-is-there-no-end-to-the-diabolical-act/ ಇಲ್ಲೋರ್ವ ವ್ಯಕ್ತಿ ಮಂಗಳೂರು ಆಸ್ಪತ್ರೆಯಲ್ಲಿ ಸತ್ತ ಎಂದು ಕೇರಳ ಶವಗಾರಕ್ಕೆ ಕರೆದುಕೊಂಡು ಹೋದ್ರೆ ಅಲ್ಲಿ ಜೀವಂತವಾಗಿರೋದು ತಿಳಿದು ಬಂದಿದೆ. ಎಸ್, ಚಿಕಿತ್ಸೆ ಫಲಿಸದೇ ಮಂಗಳೂರು ಆಸ್ಪತ್ರೆಯಲ್ಲಿ ಮೃತಪಟ್ಟ 67 ವರ್ಷದ ವ್ಯಕ್ತಿಗೆ ಕೇರಳ ಆಸ್ಪತ್ರೆಯ ಶವಾಗಾರದಲ್ಲಿ ಪುನರ್ಜನ್ಮ ಸಿಕ್ಕಿದೆ. ಪಾರ್ಶ್ವವಾಯು ಹಾಗೂ ತೀವ್ರ ಉಸಿರಾಟ ಸಮಸ್ಯೆಯಿಂದ ಬಳಲುತ್ತಿದ್ದ ಕಣ್ಣೂರಿನ ಪಚಪೊಯ್ಕಾದ ವೆಲ್ಲುವಕ್ಕಂಡಿ ಪವಿತ್ರನ್ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು ವೆಂಟಿಲೇಟರ್‌ನಲ್ಲಿ ಇರಿಸಿ ಚಿಕಿತ್ಸೆ ನೀಡುತ್ತಿದ್ದರೂ ಆರೋಗ್ಯ ಸ್ಥಿತಿ ಹದಗೆಟ್ಟಿತ್ತು. ಆರೋಗ್ಯದಲ್ಲಿ ಯಾವುದೇ ಚೇತರಿಕೆ ಕಾಣದ ಹಿನ್ನೆಲೆಯಲ್ಲಿ ಜೀವರಕ್ಷಕ ಸಾಧನಗಳನ್ನು ಹಿಂತೆಗೆದುಕೊಳ್ಳುವುದಾಗಿ ಕುಟುಂಬಕ್ಕೆ ಆಸ್ಪತ್ರೆ ತಿಳಿಸಿತ್ತು. ಸೋಮವಾರ ಸಂಜೆಯ ವೇಳೆ ಪವಿತ್ರನ್‌ ಮೃತಪಟ್ಟಿದ್ದಾರೆ ಎಂದು ಆಸ್ಪತ್ರೆ ಘೋಷಿಸಿತ್ತು…

Read More

ಬಳ್ಳಾರಿ:- ಜಿಲ್ಲೆಯ ತೋರಣಗಲ್​ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮನೆ ಮುಂದೆ ಆಟವಾಡುತ್ತಿದ್ದ ಐದು ವರ್ಷದ ಬಾಲಕಿಯನ್ನ ಪುಸುಲಾಯಿಸಿ ಕರೆದೊಯ್ದು ದುಷ್ಕರ್ಮಿಯಿಂದ ಅತ್ಯಾಚಾರ ಎಸಗಿರುವಂತಹ ಘಟನೆ ಜರುಗಿದೆ. https://ainlivenews.com/if-you-talk-about-yeddyurappa-it-will-be-difficult-to-walk-outside-jarakiholi-byy-warned/ ಹತ್ತು ವರ್ಷದ ಹಿಂದೆ ಕೆಲಸ ಅರಸಿ ಬಂದು ಖಾಸಗಿ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ದಂಪತಿಯ ಮಗುವಿನ ಮೇಲೆ ಅತ್ಯಾಚಾರವೆಸಗಲಾಗಿದೆ. ಲೈಂಗಿಕ ದಾಳಿಯಿಂದ ಮಗುವಿಗೆ ಆಂತರಿಕ ಗಾಯವಾಗಿ, ತೀವ್ರ ರಕ್ತಸ್ರಾವ ಉಂಟಾಗಿದೆ. ಕೂಡಲೇ ಮಗುವಿಗೆ ಸರ್ಕಾರಿ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ನೀಡಲಾಗಿದ್ದು, ಈ ವೇಳೆ ಅತ್ಯಾಚಾರ ನಡೆದಿರುವುದು ಧೃಡಪಟ್ಟಿದೆ. ಮಗುವಿಗೆ ಶಸ್ತ್ರ ಚಿಕಿತ್ಸೆ ಮಾಡಲಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದೆ.

Read More