Author: AIN Author

ಬೆಳಗಾವಿ: ಕಾಂಗ್ರೆಸ್ ಪಕ್ಷದಲ್ಲಿ ಸಚಿವ ಸತೀಶ ಜಾರಕಿಹೊಳಿ ಅವರು ಸೈಲೆಂಟ್ ಆಗಿ ಇರಬಾರದು. ಉಗ್ರವಾಗಿ ವರ್ತಿಸಿದರೆ ಮಾತ್ರ ಅವರಿಗೆ ಉಳಿಗಾಲ. ಇಲ್ಲದಿದ್ದರೆ ನಿಮ್ಮನ್ನು ರಾಜಕೀಯವಾಗಿ ಮುಗಿಸುತ್ತಾರೆ ಎನ್ನುವ ಮೂಲಕ ಸಹೋದರ ಸತೀಶ ಜಾರಕಿಹೊಳಿ ಅವರಿಗೆ ಮಾಜಿ ಸಚಿವ ರಮೇಶ ಜಾರಕಿಹೊಳಿ‌ ಕಿವಿಮಾತು ಹೇಳಿದ್ದಾರೆ. https://ainlivenews.com/parents-beware-breathing-problems-are-increasing-in-small-children/ ಬೆಳಗಾವಿ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿ ನಡೆಸಿ‌ ಮಾತನಾಡಿದ ಅವರು,‌ ಬೆಳಗಾವಿ ಕಾಂಗ್ರೆಸ್ ಕಚೇರಿ ನಿರ್ಮಾಣದ ವಿಚಾರದಲ್ಲಿ ಡಿಕೆಶಿ ರಾಜ್ಯದ ಜನತೆಗೆ ತಪ್ಪು ಸಂದೇಶ ಕೊಟ್ಟಿದ್ದಾರೆ. ಇದನ್ನ ವೇದಿಕೆಯಲ್ಲಿಯೇ ಪ್ರಶ್ನಿಸಿದ ಸತೀಶ ಜಾರಕೊಹೊಳಿಗೆ ನಾನು ಅಭಿನಂದನೆ ಸಲ್ಲಿಸುತ್ತೇನೆ. 2013-18ರಲ್ಲಿ ನಾನು ಕಾಂಗ್ರೆಸ್ ಶಾಸಕ. ಆಗಲೂ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದರು. ಹೈಕಮಾಂಡ್ ಮತ್ತು ರಾಜ್ಯದ ಜನತೆ ಮುಂದೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಳಗಾವಿಯಲ್ಲಿ ಕಾಂಗ್ರೆಸ್ ಕಚೇರಿ ನಿರ್ಮಾಣ ಮಾಡಿದ್ದಾರೆ ಎಂದು ಡಿಕೆಶಿ ಹೇಳಿದ್ದಾರೆ. ಮೊದಲ ಬಾರಿಗೆ ಹೇಳಿದಾಗ ಹಾಳಾಗಿ ಹೋಗಲಿ ಅಂತ ಸತೀಶ್ ಜಾರಕಿಹೊಳಿ ಸುಮ್ಮನಿದ್ದರು. ಆದರೆ, ಮತ್ತೆ ಡಿಸಿಎಂ ಡಿಕೆಶಿ-ಲಕ್ಷ್ಮೀ ಹೆಬ್ಬಾಳ್ಕರ್ ಅವರ ಹೆಸರನ್ನು ಪ್ರಸ್ತಾಪಿಸಿದ್ದಕ್ಕೆ‌ ಸತೀಶ ಜಾರಕಿಹೊಳಿ…

Read More

ಧಾರವಾಡ: ಕಟಾವಿಗೆ ಬಂದಿದ್ದ ಕಬ್ಬಿನ ಬೆಳೆಗೆ ಬೆಂಕಿ ಬಿದ್ದ ಪರಿಣಾಮ ಲಕ್ಷಾಂತರ ರೂಪಾಯಿ ಮೌಲ್ಯದ ಕಬ್ಬು ಬೆಂಕಿಗೆ ಆಹುತಿಯಾದ ಘಟನೆ ಧಾರವಾಡ ತಾಲೂಕಿನ ದೇವಗಿರಿ ಗ್ರಾಮದಲ್ಲಿ ಸಂಭವಿಸಿದೆ. https://ainlivenews.com/crowd-in-gavisiddeshwar-jatramahotsava/ ದೇವಗಿರಿ ಗ್ರಾಮದ ಸುಮಾರು 16 ಜನ ರೈತರಿಗೆ ಸೇರಿದ ಒಟ್ಟು 50 ಎಕರೆ ಪ್ರದೇಶದಲ್ಲಿ ಬೆಳೆದಿದ್ದ ಕಬ್ಬಿಗೆ ಬೆಂಕಿ ತಗುಲಿದೆ. ವಿದ್ಯುತ್ ತಂತಿಯ ಅವಘಡದಿಂದಾಗಿ ಈ ಬೆಂಕಿ ಹೊತ್ತಿಕೊಂಡಿರಬಹುದು ಎಂದು ಊಹಿಸಲಾಗಿದೆ. ಇದು ವಿದ್ಯುತ್ ಅವಘಡದಿಂದಾಗಿಯೇ ಈ ಬೆಂಕಿ ಹೊತ್ತಿದೆಯಾ ಅಥವಾ ಬೇರೆ ಯಾವುದಾದರೂ ಕಾರಣದಿಂದ ಬೆಂಕಿ ಹೊತ್ತಿದೆಯಾ ಎಂಬುದು ಸ್ಪಷ್ಟವಾಗಿ ಗೊತ್ತಾಗಬೇಕಿದೆ. ಮಧ್ಯಾಹ್ನ ಏಕಾಏಕಿ ಕಬ್ಬಿನ ಜಮೀನಿನಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಇದರಿಂದ ಸುಮಾರು 15-16 ಜನ ರೈತರು ಬೆಳೆದ ಕಬ್ಬು ಬೆಂಕಿಗೆ ಆಹುತಿಯಾಗಿದ್ದು, ರೈತರ ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗಿದೆ. ಸ್ಥಳಕ್ಕೆ ಅಗ್ನಿಶಾಮಕ ದಳದವರೂ ಸಹ ಭೇಟಿ ನೀಡಿ ಬೆಂಕಿ ನಂದಿಸುವ ಕೆಲಸ ಮಾಡಿದರು. ಧಾರವಾಡ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ.

Read More

ಕೊಪ್ಪಳ ಗವಿಸಿದ್ದೇಶ್ವರನ ತೇರು ನೋಡಲು ಭಕ್ತಸಾಗರ ಹರಿದು ಬಂದಿದೆ. ಗವಿಸಿದ್ದೇಶ್ವರ ಜಾತ್ರಾಮಹೋತ್ಸವದಲ್ಲಿ ಭಕ್ತರ ಸಾಗರದ ಜಯಘೋಷದ ನಡುವೆ ಗವಿಸಿದ್ದೇಶ್ವರ ಮಹಾರಥೋತ್ಸವ ಜರುಗಿತು. https://ainlivenews.com/parents-beware-breathing-problems-are-increasing-in-small-children/ ರಥೋತ್ಸವಕ್ಕೆ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಹಿಂದೂಸ್ತಾನಿ ಗಾಯಕ ಪಂಡಿತ್ ಡಾ.ವೆಂಕಟೇಶ ಕುಮಾರ್ ಧ್ವಜಾರೋಹಣ ನೆರವೇರಿಸುವ ಮೂಲಕ ಚಾಲನೆ ನೀಡಿದರು. ಷಟಸ್ಥಲ ಧ್ವಜ ಏರುತ್ತಿದ್ದಂತೆಯೇ ಲಕ್ಷಾಂತರ ಭಕ್ತರು `ಗವಿಸಿದ್ದೇಶ್ವರ ಮಹಾರಾಜಕೀ ಜೈ’ ಎಂದು ಘೋಷಣೆ ಕೂಗುವ ಮೂಲಕ ರಥ ಎಳೆದರು. ಭಕ್ತ ಸಾಗರದ ನಡುವೆ ಮಹಾರಥ ರಾಜ ಗಾಂಭೀರ್ಯದಲ್ಲಿ ಮುಂದೆ ಸಾಗಿತು. ರಥದ ಸುತ್ತಲೂ ಸೇರಿದ್ದ ನಾಡಿನ ನಾನಾ ಭಾಗದಿಂದ ಬಂದಿದ್ದ ಭಕ್ತರು ರಥೋತ್ಸವ ಸಾಗುವ ದೃಶ್ಯ ಭಕ್ತಿ ಭಾವದಿಂದ ಕಣ್ತುಂಬಿಕೊಂಡರು. ರಥದ ಕಳಶಕ್ಕೆ ಉತ್ತತ್ತಿ ಎಸೆಯುವ ಮೂಲಕ ಧನ್ಯತೆ ಮೆರೆದರು ಮೊದಲು ಗವಿಮಠದ ಗದ್ದುಗೆಯಿಂದ ಉತ್ಸವ ಮೂರ್ತಿಯನ್ನು ಭಕ್ತಗಣದ ನಡುವೆ ಮಹಾರಥೋತ್ಸವಕ್ಕೆ ತರಲಾಯಿತು. ನಂದಿ ಕೋಲು ಸೇರಿ ನಾನಾ ಸಾಂಪ್ರದಾಯಿಕ ಕಲಾ ತಂಡಗಳು ಸಾಥ್ ನೀಡಿದ್ದವು. ನಂತರ ಗವಿಸಿದ್ದೇಶ್ವರ ಮಹಾಸ್ವಾಮಿಗಳು ಭಾರಿ ಬಂದೋಬಸ್ ಲ್ಲಿ ಮಹಾರಥೋತ್ಸವದ ಬಳಿಗೆ…

Read More

ಪೋಷಕರೇ ಚಳಿಗಾಲ ಹೀಗಾಗಲೇ ಶುರುವಾಗಿದೆ. ಈ ಸಮಯದಲ್ಲಿ ಮಕ್ಕಳ ಮೇಲೆ ಸ್ವಲ್ಪ ಜಾಗರೂಕರಾಗಿರಿ. ಏಕೆಂದರೆ. ಸಣ್ಣ ಮಕ್ಕಳಲ್ಲಿ ಉಸಿರಾಟದ ತೊಂದರೆ ಹೆಚ್ಚಾಗುತ್ತಿದೆ. ಚಳಿಗಾಲದ ಹಿನ್ನೆಲೆಯಲ್ಲಿ ಮಕ್ಕಳಲ್ಲಿ ಶೀತ, ಕೆಮ್ಮು ಮತ್ತು ಉಬ್ಬಸ ಸಮಸ್ಯೆಯು ಗಣನೀಯವಾಗಿ ಏರಿಕೆ ಕಾಣುತ್ತಿದೆ. ಕಳೆದ ವರ್ಷಗಳಿಗೆ ಹೋಲಿಸಿದರೆ ಈ ವರ್ಷದಲ್ಲಿ ಹವಾಮಾನದಲ್ಲಿ ಏರುಪೇರು ಕಂಡುಬರುತ್ತಿದೆ. ಇದರಿಂದ ಮಕ್ಕಳಿಗೆ ಬಹುಬೇಗನೆ ವೈರಲ್‌ ಸೋಂಕು ತಗುಲುವ ಸಾಧ್ಯತೆ ಇರುತ್ತದೆ. ಹಾಗಾಗಿ ಮಕ್ಕಳಲ್ಲಿ ಉಬ್ಬಸ, ಅಸ್ತಮಾ, ಶ್ವಾಸಕೋಶ ಸಂಬಂಧಿತ ಮತ್ತು ಇತರೆ ಉಸಿರಾಟ ಸಂಬಂಧಿತ ಸಮಸ್ಯೆಗಳು ಕಾಣಿಸಿಕೊಳ್ಳುತ್ತಿವೆ. https://ainlivenews.com/i-gave-1-27-crores-for-construction-of-congress-office-ramesh-jarakiholi/ ಆಶ್ಚರ್ಯಕರ ಸಂಗತಿಯೆಂದರೆ ಈ ರೀತಿಯ ಸಮಸ್ಯೆಗಳು ಹೆಚ್ಚಾಗಿ 3ರಿಂದ 6 ತಿಂಗಳ ವಯಸ್ಸಿನ ಶಿಶುಗಳಲ್ಲಿ ಕಂಡುಬರುತ್ತಿರುವುದು. ಈ ಸಮಸ್ಯೆಯಿಂದ ದೂರವಿರಲು ಪೋಷಕರು ಆದಷ್ಟು ಮಕ್ಕಳನ್ನು ಮನೆಯಿಂದ ಹೊರಗಡೆ ಕರೆದುಕೊಂಡು ಹೋಗದಿರುವುದು ಒಳಿತು. ಮನೆಯಲ್ಲಿ ಮಕ್ಕಳಿರುವ ಪೋಷಕರು ಹೊರಗಡೆ ಹೋಗುವಾಗ ಮಾಸ್ಕ್‌ ಧರಿಸುವ ಮೂಲಕ ಎಚ್ಚರಿಕೆವಹಿಸಬೇಕಾದ ಅನಿವಾರ್ಯತೆ ಇದೆ ಎನ್ನುತ್ತಾರೆ ಬೆಂಗಳೂರಿನ ವಾಸವಿ ಆಸ್ಪತ್ರೆಯ ಮಕ್ಕಳ ತಜ್ಞರು. ಚಿಕ್ಕ ಮಕ್ಕಳಲ್ಲಿ ಬ್ರಾಂಕೈಟಿಸ್‌ ಸಮಸ್ಯೆ…

Read More

ಬೆಳಗಾವಿ:- ಕಾಂಗ್ರೆಸ್ ಕಚೇರಿ ನಿರ್ಮಾಣಕ್ಕೆ ನಾನು 1.27 ಕೋಟಿ ನೀಡಿದ್ದೇನೆ ಎಂದು ರಮೇಶ್‌ ಜಾರಕಿಹೊಳಿ ಹೇಳಿದ್ದಾರೆ.\ https://ainlivenews.com/one-who-died-in-mangalore-breathed-in-kerala-abbabba-this-is-indeed-a-miracle/ ಈ ಸಂಬಂಧ ಮಾತನಾಡಿದ ಅವರು, ಕಾಂಗ್ರೆಸ್ ಕಚೇರಿ ನಿರ್ಮಾಣಕ್ಕೆ ನಾನು 1.27 ಕೋಟಿ ರೂ. ನೀಡಿದ್ದೇನೆ. ನಾನು ಉಸ್ತುವಾರಿ ಮಂತ್ರಿ ಆಗಿದ್ದಾಗ ಶಿವಕುಮಾರನನ್ನು ಬೆಳಗಾವಿಗೆ ಬರಲು ಬಿಟ್ಟಿರಲಿಲ್ಲ ಎಂದರು. ಕಾಂಗ್ರೆಸ್ ಪಕ್ಷದ ಸಿಎಲ್‌ಪಿ ಸಭೆಯಲ್ಲಿ ಡಿಕೆ ಶಿವಕುಮಾರ್ ರಾಜ್ಯದ ಜನರಿಗೆ ತಪ್ಪು ಸಂದೇಶ ಕೊಟ್ಟಿದ್ದಾರೆ. ಈ ಸಭೆಯಲ್ಲಿ ನನ್ನ ಹೆಸರು ಪ್ರಸ್ತಾಪ ಆಗಿದ್ದರಿಂದ ನಾನು ಸ್ಪಷ್ಟನೆ ನೀಡುತ್ತಿದ್ದೇನೆ ಎಂದು ತಿಳಿಸಿದರು.

Read More

ಮಂಗಳೂರು: ಯಾರೇ ಆಗಲಿ ಆಯಸ್ಸು ಮುಗಿಯೋ ತನಕ ನಾವು ಎಷ್ಟೇ ಅವಘಡಗಳಲ್ಲಿ ಸಿಲುಕಿದರೂ ನಾವು ಬದುಕೋದು ಗ್ಯಾರಂಟಿ. ಏಕೆಂದರೆ ಆಯಸ್ಸು ಮುಗಿಯದೇ ಯಮ ಧರ್ಮ ನಮ್ಮನ್ನು ಕರೆದುಕೊಂಡು ಹೋಗಲು ಸಾಧ್ಯವೇ ಇಲ್ಲ ಎಂದು ನಮ್ಮ ಹಿರಿಯರು ಆಗಾಗ ಹೇಳುವುದನ್ನು ನಾವು ಕೇಳಿದ್ದೇವೆ. https://ainlivenews.com/rape-of-a-5-year-old-girl-is-there-no-end-to-the-diabolical-act/ ಇಲ್ಲೋರ್ವ ವ್ಯಕ್ತಿ ಮಂಗಳೂರು ಆಸ್ಪತ್ರೆಯಲ್ಲಿ ಸತ್ತ ಎಂದು ಕೇರಳ ಶವಗಾರಕ್ಕೆ ಕರೆದುಕೊಂಡು ಹೋದ್ರೆ ಅಲ್ಲಿ ಜೀವಂತವಾಗಿರೋದು ತಿಳಿದು ಬಂದಿದೆ. ಎಸ್, ಚಿಕಿತ್ಸೆ ಫಲಿಸದೇ ಮಂಗಳೂರು ಆಸ್ಪತ್ರೆಯಲ್ಲಿ ಮೃತಪಟ್ಟ 67 ವರ್ಷದ ವ್ಯಕ್ತಿಗೆ ಕೇರಳ ಆಸ್ಪತ್ರೆಯ ಶವಾಗಾರದಲ್ಲಿ ಪುನರ್ಜನ್ಮ ಸಿಕ್ಕಿದೆ. ಪಾರ್ಶ್ವವಾಯು ಹಾಗೂ ತೀವ್ರ ಉಸಿರಾಟ ಸಮಸ್ಯೆಯಿಂದ ಬಳಲುತ್ತಿದ್ದ ಕಣ್ಣೂರಿನ ಪಚಪೊಯ್ಕಾದ ವೆಲ್ಲುವಕ್ಕಂಡಿ ಪವಿತ್ರನ್ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು ವೆಂಟಿಲೇಟರ್‌ನಲ್ಲಿ ಇರಿಸಿ ಚಿಕಿತ್ಸೆ ನೀಡುತ್ತಿದ್ದರೂ ಆರೋಗ್ಯ ಸ್ಥಿತಿ ಹದಗೆಟ್ಟಿತ್ತು. ಆರೋಗ್ಯದಲ್ಲಿ ಯಾವುದೇ ಚೇತರಿಕೆ ಕಾಣದ ಹಿನ್ನೆಲೆಯಲ್ಲಿ ಜೀವರಕ್ಷಕ ಸಾಧನಗಳನ್ನು ಹಿಂತೆಗೆದುಕೊಳ್ಳುವುದಾಗಿ ಕುಟುಂಬಕ್ಕೆ ಆಸ್ಪತ್ರೆ ತಿಳಿಸಿತ್ತು. ಸೋಮವಾರ ಸಂಜೆಯ ವೇಳೆ ಪವಿತ್ರನ್‌ ಮೃತಪಟ್ಟಿದ್ದಾರೆ ಎಂದು ಆಸ್ಪತ್ರೆ ಘೋಷಿಸಿತ್ತು…

Read More

ಬಳ್ಳಾರಿ:- ಜಿಲ್ಲೆಯ ತೋರಣಗಲ್​ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮನೆ ಮುಂದೆ ಆಟವಾಡುತ್ತಿದ್ದ ಐದು ವರ್ಷದ ಬಾಲಕಿಯನ್ನ ಪುಸುಲಾಯಿಸಿ ಕರೆದೊಯ್ದು ದುಷ್ಕರ್ಮಿಯಿಂದ ಅತ್ಯಾಚಾರ ಎಸಗಿರುವಂತಹ ಘಟನೆ ಜರುಗಿದೆ. https://ainlivenews.com/if-you-talk-about-yeddyurappa-it-will-be-difficult-to-walk-outside-jarakiholi-byy-warned/ ಹತ್ತು ವರ್ಷದ ಹಿಂದೆ ಕೆಲಸ ಅರಸಿ ಬಂದು ಖಾಸಗಿ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ದಂಪತಿಯ ಮಗುವಿನ ಮೇಲೆ ಅತ್ಯಾಚಾರವೆಸಗಲಾಗಿದೆ. ಲೈಂಗಿಕ ದಾಳಿಯಿಂದ ಮಗುವಿಗೆ ಆಂತರಿಕ ಗಾಯವಾಗಿ, ತೀವ್ರ ರಕ್ತಸ್ರಾವ ಉಂಟಾಗಿದೆ. ಕೂಡಲೇ ಮಗುವಿಗೆ ಸರ್ಕಾರಿ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ನೀಡಲಾಗಿದ್ದು, ಈ ವೇಳೆ ಅತ್ಯಾಚಾರ ನಡೆದಿರುವುದು ಧೃಡಪಟ್ಟಿದೆ. ಮಗುವಿಗೆ ಶಸ್ತ್ರ ಚಿಕಿತ್ಸೆ ಮಾಡಲಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದೆ.

Read More

ಕೊಪ್ಪಳ:- ಯಡಿಯೂರಪ್ಪರ ಬಗ್ಗೆ ಮಾತಾಡಿದ್ರೆ ಜಾರಕಿಹೊಳಿ ಹೊರಗಡೆ ತಿರುಗಾಡೋದು ಕಷ್ಟವಾಗತ್ತೆ ಎಂದು ಹೇಳುವ ಮೂಲಕ ಬಿವೈ ವಿಜಯೇಂದ್ರ ಎಚ್ಚರಿಕೆ ಕೊಟ್ಟಿದ್ದಾರೆ. https://ainlivenews.com/do-you-know-what-time-to-eat-this-is-what-the-experts-say/ ನಗರದಲ್ಲಿ ಸುದ್ದಿಗೋಷ್ಠಿಯೊಂದನ್ನು ನಡೆಸಿ ಮಾತಾಡಿದ ಅವರು, ಬಿಎಸ್ ಯಡಿಯೂರಪ್ಪ ಮತ್ತು ತಮ್ಮ ಬಗ್ಗೆ ಬೆಳಗಾವಿಯಲ್ಲಿ ಹಗುರವಾಗಿ ಮಾತಾಡಿರುವ ರಮೇಶ್ ಜಾರಕಿಹೊಳಿ ವಿರುದ್ಧ ಬೆಂಕಿ ಕಾರಿದರು. ಯಡಿಯೂರಪ್ಪ ಈ ನಾಡು ಕಂಡ ಅಪ್ರತಿಮ ಹೋರಾಟಗಾರ, ಕಾಲಿಗೆ ಚಕ್ರ ಕಟ್ಟಿಕೊಂಡು ಹಳ್ಳಿಹಳ್ಳಿ ಸುತ್ತುತ್ತ ಪಕ್ಷ ಸಂಘಟನೆ ಮಾಡಿದ್ದಾರೆ, ಅವರ ಬಗ್ಗೆ ಹಗುರವಾಗಿ ಮಾತಾಡಿದರೆ ಲಕ್ಷಾಂತರ ಕಾರ್ಯಕರ್ತರ ಮನಸ್ಸಿಗೆ ನೋವಾಗುತ್ತದೆ ಮತ್ತು ಜಾರಕಿಹೊಳಿ ಹೊರಗಡೆ ತಿರುಗಾಡುವುದು ಕಷ್ಟವಾದೀತು ಎಂದು ಹೇಳಿದರು.

Read More

ಅಕ್ಕಿಯು ಅನೇಕ ಜನರಿಗೆ, ವಿಶೇಷವಾಗಿ ಏಷ್ಯನ್ನರಿಗೆ ಪ್ರಮುಖ ಆಹಾರವಾಗಿದೆ ಮತ್ತು ಇದು ನಮ್ಮ ದೈನಂದಿನ ಆಹಾರದ ಅವಿಭಾಜ್ಯ ಅಂಗವಾಗಿದೆ. ಎಷ್ಟೋ ಜನ ಅನ್ನ ತಿನ್ನದೆ ಇರಲಾರರು. ಆದರೆ, ಅನ್ನದ ಮೇಲೆ ನಮ್ಮ ಅವಲಂಬನೆ ಯಾವಾಗಲೂ ನಮ್ಮ ಆರೋಗ್ಯಕ್ಕೆ ಒಳ್ಳೆಯದಲ್ಲ. https://ainlivenews.com/another-minister-of-the-state-will-be-beheaded-corruption-charges-against-krishna-byre-gowda/ ತೂಕ ಇಳಿಸಲು ಬಯಸುವವರು ಮತ್ತು ರಕ್ತದಲ್ಲಿನ ಸಕ್ಕರೆ ಮಟ್ಟ ಇಳಿಸಬೇಕೆಂದು ಬಯಸುವವರು ಅನ್ನವನ್ನು ದೂರವಿಟ್ಟರೆ ಒಳ್ಳೆಯದು. ಅನ್ನದಲ್ಲಿ ಕಾರ್ಬ್ಸ್ ಅಂಶವು ಹೆಚ್ಚಾಗಿರುವ ಕಾರಣದಿಂದಾಗಿ ಇದನ್ನು ಕೆಟ್ಟದಾಗಿ ಬಿಂಬಿಸಲಾಗಿದೆ. ಆದರೆ ಇದನ್ನು ಸರಿಯಾದ ಸಮಯದಲ್ಲಿ ಸೇವನೆ ಮಾಡಿದರೆ, ಆಗ ಇದು ಆರೋಗ್ಯಕ್ಕೆ ಕೂಡ ಒಳ್ಳೆಯದು. ಅನ್ನವನ್ನು ತೂಕ ಇಳಿಸಿಕೊಳ್ಳಲು ಬಳಸಬಹುದೇ? ಸಾಮಾನ್ಯವಾಗಿ ನಾವೆಲ್ಲರೂ ಕೂಡ ಅನ್ನವನ್ನು ಬೇಯಿಸುವ ಮೊದಲ ಅಕ್ಕಿಯ ಮೇಲ್ಭಾಗದಲ್ಲಿ ಕಂಡುಬರುವ ಸ್ಟಾರ್ಚ್ ಅಂಶವನ್ನು ಚೆನ್ನಾಗಿ ನೀರಿನಲ್ಲಿ ತೊಳೆದು ತೊಳೆದು ತೆಗೆದು ಬಿಡುವುದು. ಆದರೆ ಆರೋಗ್ಯ ತಜ್ಞರು ಹೇಳುವ ಪ್ರಕಾರ, ಅಕ್ಕಿಯ ಸ್ಟಾರ್ಚ್ ಅಂಶದಲ್ಲಿ ನಮ್ಮ ಆರೋಗ್ಯ ವನ್ನು ಆರೋಗ್ಯವನ್ನು ರಕ್ಷಣೆ ಮಾಡುವಂತಹ ಮತ್ತು ವಯಸ್ಸಾಗುವಿಕೆ ಪ್ರಕ್ರಿಯೆಯನ್ನು ದೂರ ಮಾಡುವಂತಹ…

Read More

ಬೆಂಗಳೂರು:- ಸಚಿವ ಕೃಷ್ಣ ಬೈರೇಗೌಡರ ವಿರುದ್ಧ ಭ್ರಷ್ಟಾಚಾರ ಆರೋಪ ಕೇಳಿ ಬಂದಿದ್ದು, ರಾಜ್ಯಪಾಲರಿಗೆ ದೂರು ಕೊಡಲಾಗಿದೆ. ಈ ಮೂಲಕ ರಾಜ್ಯದ ಮತ್ತೊಬ್ಬ ಸಚಿವರ ತಲೆದಂಡವಾಗುತ್ತಾ ಎಂಬ ಪ್ರಶ್ನೆ ಎದ್ದಿದೆ. https://ainlivenews.com/27-year-old-young-doctor-flirts-with-36-year-old-aunty-why-did-khaki-bother/ ಕಂದಾಯ ಇಲಾಖೆಯಲ್ಲಿನ ಭ್ರಷ್ಟಾಚಾರಗಳಿಗೆ ಕಡಿವಾಣ ಹಾಕುತ್ತಿಲ್ಲ. ಭ್ರಷ್ಟಾಚಾರದಲ್ಲಿ ತೊಡಗಿರುವ ಅಧಿಕಾರಿಗಳ ರಕ್ಷಣೆ ಮಾಡುತ್ತಿದ್ದಾರೆ. ಹೀಗಾಗಿ ಸಚಿವರ ವಿರುದ್ಧ ಕ್ರಮ ಕೈಗೊಳ್ಳಬೇಕು. ಹಗರಣಗಳ ತನಿಖೆ ನಡೆಸಿ ಸೂಕ್ತ ಕ್ರಮಕ್ಕೆ ಸರ್ಕಾರಕ್ಕೆ ಸೂಚನೆ ನೀಡಬೇಕು ಎಂದು ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ದೂರು ನೀಡಿದ್ದಾರೆ. ದೊಡ್ಡಬಳ್ಳಾಪುರದ ಹುಲಿಕುಂಟೆ ಗ್ರಾಮದ ಜಮೀನು ವ್ಯವಹಾರಕ್ಕೆ ಸಂಬಂಧಿಸಿದಂತೆ ಸರ್ವೇ ನಂಬರ್ 150ರಲ್ಲಿರುವ ಜಮೀನನ್ನು ಪೋಡಿ, ನಕ್ಷೆ ಆಗದೇ ಸಾಗುವಳಿದಾರರು ಕಾನೂನು ಬಾಹಿರವಾಗಿ ಮಾರಾಟ ಮಾಡಿದ್ದಾರೆ. ಪಲ್ಟಿತ್ ಡೆವಲಪರ್ಸ್ ಎಲ್‌ಎಲ್‌ಪಿ ಕಂಪನಿಗೆ ಮಾರಾಟ ಮಾಡಲಾಗಿದ್ದು, ತಹಶೀಲ್ದಾರ, ಉಪವಿಭಾಗಾಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ

Read More