Author: AIN Author

ನವದೆಹಲಿ:- ಉಪರಾಷ್ಟ್ರಪತಿ ಜಗದೀಪ್‌ ಧನಕರ್ ದೆಹಲಿಯ ಏಮ್ಸ್‌ ಆಸ್ಪತ್ರೆಗೆ ಇಂದು ಮುಂಜಾನೆ ದಾಖಲಿಸಲಾಗಿದೆ. ಎದೆಯಲ್ಲಿ ನೋವು ಕಾಣಿಸಿಕೊಂಡ ಹಿನ್ನೆಲೆ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. https://ainlivenews.com/villagers-take-patient-to-hospital-on-dolly-kadanchin-village-residents-cry/ 73 ವಯಸ್ಸಿನ ಅವರನ್ನು ತಡರಾತ್ರಿ 2 ಗಂಟೆ ಸುಮಾರಿಗೆ ಆಸ್ಪತ್ರೆಗೆ ದಾಖಲಿಸಲಾಯಿತು. ಎಐಐಎಂಎಸ್‌ನಲ್ಲಿ ಕಾರ್ಡಿಯಾಲಜಿ ವಿಭಾಗದ ಮುಖ್ಯಸ್ಥ ಡಾ.ರಾಜಿವ್ ನಾರಾಂಗ್ ಅವರು ಮೇಲ್ವಿಚಾರಣೆ ಮಾಡುತ್ತಿದ್ದಾರೆ. ಧನಕರ್‌ ಆರೋಗ್ಯ ಸ್ಥಿತಿ ಸ್ಥಿರವಾಗಿದೆ. ವೈದ್ಯರ ತಂಡವು ಅವರ ಆರೋಗ್ಯವನ್ನು ನಿಕಟವಾಗಿ ಮೇಲ್ವಿಚಾರಣೆ ಮಾಡುತ್ತಿದೆ.

Read More

ಬೆಂಗಳೂರು:- ಬೆಂಗಳೂರಿನ ಕೊತ್ತನೂರಿನ ಕೆ.ನಾರಾಯಣಪುರದಲ್ಲಿ ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜರುಗಿದೆ. https://ainlivenews.com/health-tips-dont-make-this-mistake-after-eating-watermelon-in-summer-suffering-guaranteed/ ಯಶವಂತಪುರ ನಿವಾಸಿಯಾಗಿದ್ದ 28 ವರ್ಷದ ಸುನೀಲ್ ಆತ್ಮಹತ್ಯೆ ಮಾಡಿಕೊಂಡ ಯುವಕ. ಮಾ.7ರಂದು ತಡರಾತ್ರಿ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಸುನೀಲ್‌ಗೆ ಡ್ರಗ್ಸ್ ಜೊತೆಗೆ ಹುಡುಗಿಯರ ಶೋಕಿ ಕೂಡ ಇತ್ತು. ತನ್ನ ಚಟಕ್ಕಾಗಿ ಮನೆಯಲ್ಲಿಯೇ ಚಿನ್ನ, ಹಣ ಕಳ್ಳತನ ಮಾಡುತ್ತಿದ್ದ. ಇದನ್ನು ಮನೆಯವರು ಪ್ರಶ್ನಿಸಿದರೇ ಸಾಯೋದಾಗಿ ಹೇಳುತ್ತಿದ್ದ. ನಂತರ ಮನೆಬಿಟ್ಟು ಕೊತ್ತನೂರು ಪಿಜಿ ಸೇರಿದ್ದ ಸುನೀಲ್, ಗ್ಯಾರೇಜ್‌ನಲ್ಲಿ ಕೆಲಸಕ್ಕೆ ಸೇರಿಕೊಂಡಿದ್ದ. ಮಾ.7ರಂದು ರಾತ್ರಿ ಮಾಲೀಕನಿಗೆ ಸಾಯೋದಾಗಿ ಮೆಸೆಜ್ ಮಾಡಿದ್ದ. ಬಳಿಕ ಪಿಜಿಯಲ್ಲಿ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.

Read More

ಬೇಸಿಗೆ ಎಂದ ತಕ್ಷಣ ನಮಗೆ ನೆನಪಿಗೆ ಬರುವ ಹಣ್ಣು ಕಲ್ಲಂಗಡಿ. ಸುಲಭವಾಗಿ ಜೀರ್ಣವಾಗುವ ಈ ಹಣ್ಣು ದೇಹಕ್ಕೆ ಸಾಕಷ್ಟು ತೇವಾಂಶವನ್ನು ಒದಗಿಸುತ್ತದೆ ಮತ್ತು ಶಾಖವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಅದಕ್ಕಾಗಿಯೇ ಬೇಸಿಗೆಯಲ್ಲಿ ಅನೇಕ ಜನರು ಇದನ್ನು ಹೆಚ್ಚಾಗಿ ತಿನ್ನುತ್ತಾರೆ. ಕೆಲವರು ಕಲ್ಲಂಗಡಿ ಹಣ್ಣನ್ನು ಪೂರ್ತಿಯಾಗಿ ತಿನ್ನುವುದಿಲ್ಲ, ಒಂದು ಭಾಗವನ್ನು ಫ್ರಿಡ್ಜ್ ನಲ್ಲಿಟ್ಟು ನಂತರ ತಿನ್ನುತ್ತಾರೆ. https://ainlivenews.com/stomach-fat-increased-eat-these-seeds-daily-and-you-will-become-flat-in-just-two-months/ ಬೇಸಿಗೆಯ ಬಿಸಿಲು ಶುರುವಾಗಿದೆ. ಈಗಂತೂ ಮಾರುಕಟ್ಟೆಯಲ್ಲಿ ಕಲ್ಲಂಗಡಿ ಹಣ್ಣು ಹೆಚ್ಚಾಗಿ ಸಿಗುತ್ತದೆ. ಬಾಯಲ್ಲಿ ನೀರೂರಿಸುವ ಈ ಹಣ್ಣು ಬೇಸಿಗೆಯ ಶಾಖದಿಂದ ಉತ್ತಮ ಪರಿಹಾರವನ್ನು ನೀಡುತ್ತದೆ. ಕಲ್ಲಂಗಡಿಯಲ್ಲಿ ನೀರು ಮತ್ತು ನಾರಿನ ಅಂಶ ಹೇರಳವಾಗಿದೆ. ಕಲ್ಲಂಗಡಿ ಹಣ್ಣು ನಿರ್ಜಲೀಕರಣವನ್ನು ಕಡಿಮೆ ಮಾಡುತ್ತದೆ. ಆದರೆ, ಅನೇಕ ಮಂದಿ ಕಲ್ಲಂಗಡಿ ತಿಂದ ತಕ್ಷಣ ನೀರು ಕುಡಿಯುತ್ತಾರೆ. ಆದರೆ ಎಂದಿಗೂ ಈ ತಪ್ಪನ್ನು ಮಾಡಬೇಡಿ ಎಂದು ವೈದ್ಯರು ಹೇಳುತ್ತಾರೆ. ಇದಕ್ಕೆ ನಿಖರವಾದ ವೈಜ್ಞಾನಿಕ ಕಾರಣವಿಲ್ಲದಿದ್ದರೂ, ಕೆಲವು ಆರೋಗ್ಯ ತಜ್ಞರು ಇದರಿಂದ ಅಜೀರ್ಣ, ಗ್ಯಾಸ್ಟ್ರಿಕ್ ಮತ್ತು ಇತರ ಸಮಸ್ಯೆಗಳು ಉಂಟಾಗಬಹುದು…

Read More

ಮಹಿಳೆಯರು, ಪುರುಷರು ಎಷ್ಟೇ ದಪ್ಪ ಅದ್ರೂ ಅಷ್ಟೊಂದು ತಲೆ ಕೆಡಿಸಿಕೊಳ್ಳಲ್ಲ, ಅದೇ ಹೊಟ್ಟೆಯ ಬೊಜ್ಜು ಬರಲು ಶುರುವಾದರೆ, ಅಯ್ಯೋ ಹೊಟ್ಟೆ ಬಂದ್ಬಿಟ್ಟಿದೆ ಇದನ್ನು ಕರಗಿಸಲೇ ಬೇಕು ಅಂತಾ ಶತಪ್ರಯತ್ನ ಮಾಡುತ್ತಾರೆ. ದೇಹದ ಯಾವುದೇ ಭಾಗದ ಬೊಜ್ಜನ್ನು ಸ್ವಲ್ಪ ಪ್ರಯತ್ನ ಮಾಡುವ ಮೂಲಕ ಕರಗಿಸಬಹುದು, ಆದರೆ ಈ ಹೊಟ್ಟೆ ಬೊಜ್ಜು ಇದೆಯಲ್ಲಾ ಅದು ಸುಲಭವಾಗಿ ನಮ್ಮ ಮಾತು ಕೇಳೋಲ್ಲ. ಅದಕ್ಕೆ ಸರಿಯಾದ ಆಹಾರ, ಕ್ರಮಬದ್ಧ ವ್ಯಾಯಾಮ ಎಲ್ಲವೂ ಬೇಕಾಗುತ್ತದೆ. https://ainlivenews.com/india-new-zealand-final-clash-today-best-wishes-for-indias-victory/ ತೂಕ ಇಳಿಕೆಗೆ ಆರೋಗ್ಯಕರ ಆಹಾರಗಳನ್ನು ಸೇವಿಸುವುದು ಬಹಳ ಮುಖ್ಯ. ಅದರಲ್ಲೂ ಕೆಲ ಸೂಪರ್ ಫುಡ್ಗಳು ನಮಗೆ ಪೌಷ್ಟಿಕಾಂಶ ಒದಗಿಸುವುದರ ಜೊತೆಗೆ ದೇಹವನ್ನು ಆರೋಗ್ಯಕರವಾಗಿರಿಸುತ್ತದೆ. ವಿಶೇಷವಾಗಿ ತೂಕ ಇಳಿಕೆಯಲ್ಲಿ ಇದು ಪ್ರಮುಖ ಪಾತ್ರವಹಿಸುತ್ತದೆ. ಇವು ಕಡಿಮೆ ಕ್ಯಾಲೋರಿಗಳನ್ನು ಹೊಂದಿದ್ದು, ದೇಹಕ್ಕೆ ಅಗತ್ಯವಾದ ಶಕ್ತಿಯನ್ನು ನೀಡುತ್ತದೆ. ಆರೋಗ್ಯಕರ ಆಹಾರಗಳ ಪಟ್ಟಿಯಲ್ಲಿ ಚಿಯಾ ಬೀಜಗಳು ಒಂದಾಗಿದ್ದು, ಇದು ಹೊಟ್ಟೆ ತುಂಬಿದ ಭಾವನೆಯನ್ನು ನೀಡುತ್ತದೆ. ಇದರಿಂದ ಅನಗತ್ಯ ಆಹಾರ ಸೇವನೆ ಕಡಿಮೆ ಮಾಡುತ್ತದೆ. ಇವುಗಳ ಉತ್ಕರ್ಷಣ ನಿರೋಧಕಗಳು…

Read More

ಬೆಂಗಳೂರು:- ಸೋಲದೇವನಹಳ್ಳಿ ಜಯರಾಮ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. https://ainlivenews.com/fire-breaks-out-in-shahapur-forest-area-huge-amount-of-vegetation-destroyed/ ಮುನಿರಾಜು @ ಮುನಿ,ರಾಜೇಶ್ @ ಬಬ್ಲು, ಯತೀಶ್ ಗೌಡ, ವಿನಯ್ ,ಉದಯ್ ಸೇರಿ ಐವರು ಬಂಧಿತರು. ಹಳೆ ದ್ವೇಷ ಹಿನ್ನಲೆ ಆರೋಪಿಗಳು, ಜಯರಾಂ ನನ್ನ ಕೊಲೆ ಮಾಡಿದ್ದರು. 2016 ರಲ್ಲಿ ಮನೋಜ್ ಸಹೋದರ ಕಿರಣ್ ಎಂಬಾತನನ್ನು ಜಯರಾಮ್ ಕೊಲೆ ಮಾಡಿದ್ದ. ಯುವತಿ ವಿಚಾರಕ್ಕೆ ಗಲಾಟೆ ಮಾಡಿ ಕೊಲೆ ಮಾಡಿದ್ದ. ಸದ್ಯ ಇದೀಗ ಪರಪ್ಪನ ಅಗ್ರಹಾರ ಜೈಲಿನಲ್ಲಿ ಮನೋಜ್ ಇದ್ದು, 2023 ರಲ್ಲಿ ಮನೋಜ್ ನನ್ನ ಗೂಂಡಾ ಕಾಯ್ದೆಯಲ್ಲಿ ಬಂಧಿಸಿ ಸಿಸಿಬಿ ಪೊಲೀಸರು, ಜೈಲಿಗಟ್ಟಿದ್ದರು. ಅಲ್ಲದೇ ಜೈಲಿನಲ್ಲಿದ್ದುಕೊಂಡೆ ಜಯರಾಮ್ ಕೊಲೆಗೆ ಸಂಚು ರೂಪಿಸಲಾಗಿತ್ತು. ಮುನಿರಾಜು ಮತ್ತು ರಾಜೇಶ್ ಜೊತೆ ಮನೋಜ್ ಸಂಪರ್ಕದಲ್ಲಿದ್ದ. ಉದಯ್ ಜಯರಾಮ್ ಮೂವ್ಮೆಂಟ್ ವಾಚ್ ಮಾಡಿದ್ದ. ಬಾರ್ ಒಳಗೆ ಜಯರಾಮ್ ಬರ್ತಿದ್ದಂತೆ ಮಾರಕಾಸ್ರ್ತಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ. ಮಾರ್ಚ್ 4 ರಂದು ರಾತ್ರಿ ವೇಳೆ ಜಯರಾಮ್ ಕೊಲೆ‌ಯಾಗಿತ್ತು. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು…

Read More

ಇಂದು ದುಬೈ ಅಂತಾರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ನಡೆಯುವ ಐಸಿಸಿ ಚಾಂಪಿಯನ್ಸ್ ಟ್ರೋಫಿ ಫೈನಲ್​ನಲ್ಲಿ ನ್ಯೂಜಿಲೆಂಡ್ ಮಣಿಸಿ 25 ವರ್ಷಗಳ ಲೆಕ್ಕಾ ಚುಪ್ತಾ ಮಾಡಲು ಟೀಮ್ ಇಂಡಿಯಾ ಸಿದ್ದವಾಗಿದೆ https://ainlivenews.com/champions-trophy-india-vs-new-zealand-final-match-tomorrow-how-is-the-pitch-report/ ಚಾಂಪಿಯನ್ಸ್ ಟ್ರೋಫಿಯ ಫೈನಲ್​ಗೂ ಮುನ್ನ ಭಾರತ ತಂಡವು ಲೀಗ್​ನಲ್ಲಿ ಅಜೇಯವಾಗಿತ್ತು. ಬಾಂಗ್ಲಾದೇಶ, ಪಾಕಿಸ್ತಾನ ಮತ್ತು ನ್ಯೂಜಿಲೆಂಡ್ ವಿರುದ್ಧ ಲೀಗ್​ನಲ್ಲಿ ಗೆದ್ದಿದ್ದ ಭಾರತ ಸೆಮಿಫೈನಲ್​ನಲ್ಲಿ ಬಲಿಷ್ಠ ಆಸ್ಟ್ರೇಲಿಯಾವನ್ನು ಸೋಲಿಸಿತ್ತು. ಇದೀಗ ಫೈನಲ್​ನಲ್ಲಿ ಕಿವೀಸ್ ಎದುರಿಸಲು ಸಜ್ಜಾಗಿದೆ. ಅತ್ತ ನ್ಯೂಜಿಲೆಂಡ್ ಲೀಗ್​ನಲ್ಲಿ ಬಾಂಗ್ಲಾದೇಶ, ಪಾಕಿಸ್ತಾನವನ್ನು ಮಣಿಸಿತ್ತು. ಸೆಮೀಸ್​ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಭರ್ಜರಿ ಗೆಲುವು ಸಾಧಿಸಿದೆ. ಆದರೆ ಭಾರತವು ದುಬೈನ ಒಂದೇ ಪಿಚ್​​ನಲ್ಲಿ ಆಡುವ ಮೂಲಕ ಲಾಭ ಪಡೆಯುತ್ತಿದೆ ಎಂಬ ಆರೋಪಗಳನ್ನು ಎದುರಿಸುತ್ತಿದೆ. ಭಾರತ ತಂಡವು ಅಜೇಯವಾಗಿ ಫೈನಲ್ ತಲುಪಿದ್ದು, ಫೈನಲ್ ಪಂದ್ಯವನ್ನೂ ಗೆಲ್ಲುವ ವಿಶ್ವಾಸದಲ್ಲಿದೆ. ಭಾರತ ತಂಡವು ಫೈನಲ್‌ಗೆ ತಲುಪುವ ಹಾದಿಯಲ್ಲಿ ಕಿವೀಸ್ ತಂಡವನ್ನು ಸೋಲಿಸಿದ್ದು, ಗೆಲುವಿನ ಭರವಸೆ ಮತ್ತಷ್ಟು ಹೆಚ್ಚಿಸಿದೆ. ಐಸಿಸಿ ಟೂರ್ನಿಗಳ ಎರಡು ಫೈನಲ್‌ಗಳಲ್ಲಿ ಭಾರತ ತಂಡವು ನ್ಯೂಜಿಲೆಂಡ್ ವಿರುದ್ಧ…

Read More

ಭಾರತ ಮತ್ತು ನ್ಯೂಜಿಲೆಂಡ್​ ಮಧ್ಯೆ ಚಾಂಪಿಯನ್ಸ್​ ಟ್ರೋಫಿಯ ಫೈನಲ್​ ಪಂದ್ಯ ನಾಳೆ ನಡೆಯಲಿದೆ. https://ainlivenews.com/metro-passengers-there-will-be-disruption-to-train-services-on-this-route-tomorrow/ ಪ್ರಶಸ್ತಿ ಪಂದ್ಯವು ದುಬೈನ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿದೆ. ಈ ಟೂರ್ನಿಯಲ್ಲಿ ಆಡಿರುವ ನಾಲ್ಕು ಪಂದ್ಯಗಳಲ್ಲಿ ಗೆಲುವು ಸಾಧಿಸಿ ಅಜೇಯವಾಗಿ ಫೈನಲ್​ಗೆ ಲಗ್ಗೆ ಇಟ್ಟಿರುವ ಭಾರತ ಫೈನಲ್​ನಲ್ಲೂ ಗೆದ್ದು ಪ್ರಶಸ್ತಿ ಮುಡಿಗೇರಿಸಿ ಕೊಳ್ಳಬೇಕು ಎಂಬ ದೃಢಸಂಕಲ್ಪ ತೊಟ್ಟಿದೆ. ಮತ್ತೊಂದೆಡೆ ದಕ್ಷಿಣ ಆಫ್ರಿಕಾ ವಿರುದ್ಧ ಭರ್ಜರಿ ಜಯ ಸಾಧಿಸಿ ಫೈನಲ್‌ಗೆ ಲಗ್ಗೆ ಇಟ್ಟಿರುವ ಕಿವೀಸ್ ತಂಡ, ಚಾಂಪಿಯನ್ಸ್ ಟ್ರೋಫಿಯ ಮೇಲೆ ಕಣ್ಣಿಟ್ಟಿದೆ. ಚಾಂಪಿಯನ್ಸ್ ಟ್ರೋಫಿಯ ಫೈನಲ್​ಗೂ ಮುನ್ನ ಭಾರತ ತಂಡವು ಲೀಗ್​ನಲ್ಲಿ ಅಜೇಯವಾಗಿತ್ತು. ಬಾಂಗ್ಲಾದೇಶ, ಪಾಕಿಸ್ತಾನ ಮತ್ತು ನ್ಯೂಜಿಲೆಂಡ್ ವಿರುದ್ಧ ಲೀಗ್​ನಲ್ಲಿ ಗೆದ್ದಿದ್ದ ಭಾರತ ಸೆಮಿಫೈನಲ್​ನಲ್ಲಿ ಬಲಿಷ್ಠ ಆಸ್ಟ್ರೇಲಿಯಾವನ್ನು ಸೋಲಿಸಿತ್ತು. ಇದೀಗ ಫೈನಲ್​ನಲ್ಲಿ ಕಿವೀಸ್ ಎದುರಿಸಲು ಸಜ್ಜಾಗಿದೆ. ಅತ್ತ ನ್ಯೂಜಿಲೆಂಡ್ ಲೀಗ್​ನಲ್ಲಿ ಬಾಂಗ್ಲಾದೇಶ, ಪಾಕಿಸ್ತಾನವನ್ನು ಮಣಿಸಿತ್ತು. ಸೆಮೀಸ್​ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಭರ್ಜರಿ ಗೆಲುವು ಸಾಧಿಸಿದೆ. ಆದರೆ ಭಾರತವು ದುಬೈನ ಒಂದೇ ಪಿಚ್​​ನಲ್ಲಿ ಆಡುವ ಮೂಲಕ ಲಾಭ…

Read More

ಬೆಂಗಳೂರು:- ನಾಳೆ ನಮ್ಮ ಮೆಟ್ರೋ ಸಂಚಾರದಲ್ಲಿ ವ್ಯತ್ಯಯವಾಗಲಿದ್ದು, 3 ಗಂಟೆಗಳ ಕಾಲ ರೈಲು ಸಂಚಾರ ಸ್ಥಗಿತ ಆಗಲಿದೆ ಎಂದು BMRCL ತಿಳಿಸಿದೆ. https://ainlivenews.com/provide-security-to-rashmika-from-our-community-kovava-organizations-letter-to-state-and-central-home-ministers/ ನಮ್ಮ ಮೆಟ್ರೋ ನಿಗಮವು ಅಂದು ನೇರಳ ಮಾರ್ಗದಲ್ಲಿ ಮಾಗಡಿ ರಸ್ತೆ ಮತ್ತು ಎಂಜಿ ರಸ್ತೆ ಮೆಟ್ರೋ ನಿಲ್ದಾಣಗಳ ನಡುವೆ ಹಳಿ ನಿರ್ವಹಣಾ ಕಾಮಗಾರಿಯನ್ನು ಬೆಳಿಗೆ 07:00 ರಿಂದ 10:00 ಗಂಟೆಯವರೆಗೆ (ಮೂರು ಗಂಟೆಗಳ ಕಾಲ) ಕೈಗೊಳ್ಳಲಿದೆ. ಈ ಹಿನ್ನೆಲೆಯಲ್ಲಿ ಮಾಗಡಿ ರಸ್ತೆ ಮತ್ತು ಎಂಜಿ ರಸ್ತೆ ಮೆಟ್ರೋ ನಿಲ್ಯಾಣಗಳ ನಡುವಿನ ಮೆಟ್ರೋ ಸೇವೆಗಳನ್ನು ರದ್ದುಪಡಿಸಲಾಗುತ್ತದೆ ಎಂದು ತಿಳಿಸಿದೆ. ಅವಧಿಯಲ್ಲಿ ಕಬ್ಬನ್ ಪಾರ್ಕ್, ಡಾ. ಬಿ.ಆರ್. ಅಂಬೇಡ್ಕರ್ ನಿಲ್ದಾಣ, ವಿಧಾನಸೌಧ, ಸ‌ರ್.ಎಂ ವಿಶ್ವೇಶ್ವರಯ್ಯ ನಿಲ್ದಾಣ, ಸೆಂಟ್ರಲ್ ಕಾಲೇಜು, ನಾಡಪ್ರಭು ಕೆಂಪೇಗೌಡ ನಿಲ್ದಾಣ, ಮೆಜೆಸ್ಟಿಕ್ (ನೇರಳೆ ಮಾರ್ಗ) ಮತ್ತು ಕ್ರಾಂತಿವೀರ ಸಂಗೋಳಿ ರಾಯಣ್ಣ ರೈಲು ನಿಲ್ದಾಣಗಳು ಮುಚ್ಚಲಾಗಿರುತ್ತದೆ ಎಂದು ಮಾಹಿತಿ ನೀಡಿದೆ. ಬೆಳಗ್ಗೆ 10.00 ಗಂಟೆಯವರೆಗೆ ಈ ರದ್ದತಿಯ ಕಾರಣದಿಂದಾಗಿ, ಕ್ಯೂಆರ್ ಟಿಕೆಟ್‌ಗಳ ಖರೀದಿಯನ್ನು ನಿಷ್ಕ್ರಿಯಗೊಳಿಸಲಾಗುತ್ತದೆ. ನೇರಳೆ ಮಾರ್ಗದಲ್ಲಿನ ನಾಡಪ್ರಭು…

Read More

ಮಡಿಕೇರಿ:- ನಮ್ಮ ಸಮುದಾಯದ ರಶ್ಮಿಕಾಗೆ ಭದ್ರತೆ ಕೊಡಿ ಎಂದು ರಾಜ್ಯ, ಕೇಂದ್ರ ಗೃಹ ಸಚಿವರಿಗೆ ಕೊಡವ ಸಂಘಟನೆಯು ಪತ್ರ ಬರೆದಿದೆ. https://ainlivenews.com/prajwal-will-be-released-in-another-month-suraj-revanna-gives-a-hint/ ನಟಿ ರಶ್ಮಿಕಾ ಮಂದಣ್ಣ ಅವರಿಗೆ ಭದ್ರತೆ ನೀಡುವಂತೆ ಕೊಡವ ಸಮುದಾಯ ಆಗ್ರಹಿಸಿದೆ. ನಮ್ಮ ಸಮುದಾಯದ ಹೆಣ್ಣುಮಗಳಿಗೆ ಸೂಕ್ತ ಭದ್ರತೆ ಒದಗಿಸಬೇಕು ಎಂದಿದ್ದಾರೆ. ಕೊಡವ ನ್ಯಾಷನಲ್ ಕೌನ್ಸಿಲ್ ಅಧ್ಯಕ್ಷ ಎನ್.ಯು ನಾಚಪ್ಪ ಅವರು, ನಮ್ಮ ಕೊಡಗು ಮೂಲದ ರಶ್ಮಿಕಾ ಮಂದಣ್ಣ ಅವರಿಗೆ ಭದ್ರತೆ ನೀಡುವಂತೆ ಪತ್ರದ ಮೂಲಕ ಒತ್ತಾಯಿಸಿದ್ದಾರೆ. ರಶ್ಮಿಕಾ ಮಂದಣ್ಣ ಅವರು ನಮ್ಮ ಆದಿಮಸಂಜಾತ ಕೊಡವ ಬುಡಕಟ್ಟು ಜನಾಂಗಕ್ಕೆ ಸೇರಿದವರು. ತಮ್ಮ ಕಠಿಣ ಪರಿಶ್ರಮ ಮತ್ತು ಪ್ರತಿಭೆ ಮೂಲಕ ಅವರಿಂದು ಭಾರತೀಯ ಚಿತ್ರರಂಗದಲ್ಲಿ ಯಶಸ್ಸು ಕಂಡಿದ್ದಾರೆ. ಆದರೆ, ನಟಿಯ ಜನಪ್ರಿಯತೆ ಹಾಗೂ ಕಲಾಪ್ರತಿಭೆಯನ್ನ ತಿಳಿಯದ ಕೆಲವರು ವಿನಾಕಾರಣ ಟೀಕೆ ಮಾಡುವ ಮೂಲಕ ಅವರಿಗೆ ಮಾನಸಿಕ ಕಿರುಕುಳ ನೀಡಿದ್ದಾರೆ. ಇದು ಘೋರ ಮಾತ್ರವಲ್ಲದೆ ಬೆದರಿಕೆಗೆ ಸಮ ಎಂದು ಪತ್ರದಲ್ಲಿ ದೂರಿದ್ದಾರೆ. ರಶ್ಮಿಕಾ ಮಂದಣ್ಣ ಭಾರತೀಯ ಚಲನಚಿತ್ರರಂಗಕ್ಕೆ ಸಿಕ್ಕಿರುವ ಅಪೂರ್ವ ಕೊಡುಗೆ.…

Read More

ಹಾಸನ:- ಪ್ರಜ್ವಲ್ 30 ದಿನದಲ್ಲಿ ಹೊರ ಬರ್ತಾರೆ ಎಂದು ಸಹೋದರ ಸೂರಜ್ ಸ್ಪೋಟಕ ಹೇಳಿಕೆ ಕೊಟ್ಟಿದ್ದಾರೆ. ಈ ಸಂಬಂಧ ಮಾತನಾಡಿದ ಅವರು, ಪ್ರಜ್ವಲ್‌ ರೇವಣ್ಣ ಇನ್ನೊಂದು ತಿಂಗಳಲ್ಲಿ ಹೊರಗೆ ಬರ್ತಾರೆ, ಯಾರು ತಲೆಕೆಡಿಸಿಕೊಳ್ಬೇಡಿ ಎಂದು ವಿಧಾನ ಪರಿಷತ್ ಸದಸ್ಯ ಸೂರಜ್‌ ರೇವಣ್ಣ ಹೇಳಿದ್ದಾರೆ. https://ainlivenews.com/women-today-are-not-helpless-they-are-capable-dr-ashwini-hr/ ಚಾಕೇನಹಳ್ಳಿಕಟ್ಟೆ ಗ್ರಾಮದಲ್ಲಿ ದನು ಸ್ಮರಣಾರ್ಥ ಆಯೋಜಿಸಿದ್ದ ಕ್ರಿಕೆಟ್ ಪಂದ್ಯಾವಳಿ ಉದ್ಘಾಟಿಸಿ ಅವರು ಮಾತನಾಡಿದರು. ಈ ವೇಳೆ ಪ್ರಜ್ವಲ್‌ ರೇವಣ್ಣ ಈ ಗ್ರಾಮಕ್ಕೆ ಕೊಡುಗೆ ಕೊಟ್ಟಿದ್ದಾರೆ. ಅವರು ಶೀಘ್ರದಲ್ಲೇ ಬಿಡುಗಡೆಯಾಗುತ್ತಾರೆ. ನಾವು, ನೀವು ಎಲ್ಲರೂ ಒಟ್ಟಿಗೆ ಸ್ವಾಗತ ಮಾಡೋಣ. ಇವತ್ತಿಗೆ ಪ್ರಪಂಚ ಮುಗಿದು ಹೋಗಿಲ್ಲ. ಮುಂದಕ್ಕೂ ರಾಜಕೀಯ ಏನು ಅನ್ನೋದು ನನಗೂ ಗೊತ್ತಿದೆ ಎಂದಿದ್ದಾರೆ. ದಿನ ನಿತ್ಯ ನಾವು ನಿಮ್ಮ ಜೊತೆ ಎಲ್ಲಾ ಕಾರ್ಯಕ್ರಮಗಳಲ್ಲೂ ಭಾಗವಹಿಸುತ್ತೇವೆ. ರೇವಣ್ಣ ಅವರು ಎಲ್ಲಾ ಹಳ್ಳಿಗಳಿಗೂ ರಸ್ತೆಗಳನ್ನು ಮಾಡಿದ್ರು. ಈಗಿನವರು ಎಲ್ಲಾ ಹಳ್ಳಿಗಳಲ್ಲೂ ದೇವಾಲಯ ನಿರ್ಮಾಣ ಮಾಡ್ತಿದ್ದಾರೆ. ನಮ್ಮ ಗ್ರಾಮಕ್ಕೆ ಯಾರು ಹಿತ, ಯಾರು ಅಹಿತ ಎಂದು ಯೋಚನೆ ಮಾಡಬೇಕು. ಶಾಶ್ವತವಾಗಿ…

Read More