Author: AIN Author

ಗದಗ:- ನರೇಗಾ ಯೋಜನೆಯಡಿ ಕೆಲಸ ನೀಡದ ಹಿನ್ನೆಲೆ ಗ್ರಾಮ ಪಂಚಾಯತ್ ಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿರುವ ಘಟನೆ ಗದಗ ಜಿಲ್ಲೆ ಮುಂಡರಗಿ ತಾಲೂಕಿನ ಜಂತ್ಲಿ-ಶಿರೂರು ಗ್ರಾಮದಲ್ಲಿ ಜರುಗಿದೆ https://ainlivenews.com/kai-governments-anti-farmer-stance-bjp-workers-protest/ ಸಲಿಕೆ, ಗುದ್ದಲಿ, ಬುಟ್ಟಿಗಳ ಸಮೇತ ಗ್ರಾಮ ಪಂಚಾಯತಗೆ ಮುತ್ತಿಗೆ ಹಾಕಲಾಗಿದೆ. ಕೆಲಸದ ನೀಡದ ಜಂತ್ಲಿ-ಶಿರೂರು ಗ್ರಾಮ ಪಂಚಾಯತ ಪಿಡಿಓ ವಸಂತ ಗೋಕಾವಿ ವಿರುಧ್ಧ ಆಕ್ರೋಶ ಹೊರ ಹಾಕಲಾಗಿದೆ. ಪ್ರತಿ ವರ್ಷ ಕನಿಷ್ಟ ನೂರು ದಿನ ಮಹಾತ್ಮಾ ಗಾಂಧಿ ನರೇಗಾ ಯೋಜನೆ ಅಡಿಯಲ್ಲಿ ಕೂಲಿ ಕೆಲಸ ನೀಡಬೇಕೆಂಬ ಆದೇಶವಿದೆ. ಆದ್ರೆ ಜಂತ್ಲಿ-ಶಿರೂರು ಗ್ರಾಮದಲ್ಲಿ ಕೇವಲ ಮೂರು ದಿನ ಕೆಲಸ ನೀಡಿ ಕೈ ತೊಳೆದುಕೊಂಡಿದ್ದಾರೆ ಅಂತಾ ಕಿಡಿಕಾರಿದ್ದಾರೆ. ನರೇಗಾ ಕೂಲಿ ಕಾರ್ಮಿಕರು ಕೆಲಸ ಕೇಳಿದ್ರೆ ಹಣವಿಲ್ಲ ಅಂತಾ ಪಿಡಿಓ ಸಬೂಬು ನೀಡ್ತಾರೆ ಅನ್ನೋ ಆರೋಪ ಮಾಡಲಾಗಿದೆ. ಸರ್ಕಾರ ಹಾಗೂ ಅಧಿಕಾರಿಗಳ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ಹೊರ ಹಾಕಿದ್ದಾರೆ. ಜಂತ್ಲಿ-ಶಿರೂರು ಗ್ರಾಮ ಪಂಚಾಯತ ಅಧಿಕಾರಿಗಳ ನಿರ್ಲಕ್ಷ್ಯ ದಿಂದ ನರೇಗಾ ಕೂಲಿ ಕೆಲಸ ಸಿಗ್ತಿಲ್ಲ.…

Read More

ಬಳ್ಳಾರಿ:- ಕಾಂಗ್ರೆಸ್ ಸರ್ಕಾರ ವಿರುದ್ಧ ಬಿಜೆಪಿ ಕಾರ್ಯಕರ್ತರು ಬಳ್ಳಾರಿ ಡಿಸಿ ಕಛೇರಿ ಮುಂದೆ ಪ್ರೊಟೆಸ್ಟ್ ನಡೆಸಿದ್ದಾರೆ. https://ainlivenews.com/rape-the-girl-by-taking-her-to-give-chocolate/ ಬಿಜೆಪಿ ರೈತ ಮೋರ್ಚಾ ಘಟಕದಿಂದ ಕಾಂಗ್ರೆಸ್ ಸರ್ಕಾರ ರೈತ ವಿರೋಧಿ ನೀತಿ ಅಂತಾ ಪ್ರತಿಭಟನೆ ಮಾಡಿದ್ದಾರೆ. ರಾಜ್ಯ ಸರ್ಕಾರ ಕೃಷಿ ಸನ್ಮಾನ ಯೋಜನೆ ನಿಲ್ಲಿಸಿದೆ, ಜನ ಪರ ಆಡಳಿತ ನೀಡಲು ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಬಿಜೆಪಿ ರೈತ ಮೋರ್ಚಾ ಕಾರ್ಯಕರ್ತರ ಆಕ್ರೋಶ ಹೊರ ಹಾಕಿದ್ದಾರೆ. ನೂರಾರು ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ ಜರುಗಿದೆ.

Read More

ಬೆಂಗಳೂರು:- 10 ವರ್ಷದ ಬಾಲಕಿಗೆ ಚಾಕೊಲೇಟ್ ಕೊಡಿಸುವುದಾಗಿ ಆಮೀಷವೊಡ್ಡಿ ಕರೆದುಕೊಂಡು ಹೋಗಿ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಘಟನೆ ಜರುಗಿದೆ. ರಾಜೇಶ್ ಗುಪ್ತಾ ಎಂಬಾತ ಈ ಪೈಶಾಚಿಕ ಕೃತ್ಯ ಎಸಗಿದ್ದು ಹೆಬ್ಬಾಳ ಪೊಲೀಸರು ಪೋಕ್ಸೋ ಕಾಯ್ದೆ ಅಡಿ ಆರೋಪಿಯನ್ನು ಬಂಧಿಸಿ ಎಫ್ಐಆರ್ ದಾಖಲಿಸಿದ್ದಾರೆ. https://ainlivenews.com/rave-party-of-techies-model-in-the-name-of-birthday-ccb-police-attack/#google_vignette ಉದ್ಯೋಗಕ್ಕಾಗಿ ಕೆಲ ವರ್ಷಗಳ ಹಿಂದೆ ನಗರಕ್ಕೆ ಬಂದಿದ್ದ ಆರೋಪಿ ರಾಜೇಶ್‌ ನಾಗೇನಹಳ್ಳಿಯಲ್ಲಿ ಸೆಕ್ಯೂರಿಟಿ ಗಾರ್ಡ್‌ ಆಗಿ ಕೆಲಸ ಮಾಡುತ್ತಿದ್ದ. ನೇಪಾಳ ಮೂಲದ ಬಾಲಕಿಯ ಪೋಷಕರು ನಾಗೇನಹಳ್ಳಿಯ ಅಪಾರ್ಟ್‌ಮೆಂಟ್​ವೊಂದರಲ್ಲಿ ಕೆಲಸ ಮಾಡುತ್ತಿದ್ದರು. ಶನಿವಾರ ರಾತ್ರಿ ಬಾಲಕಿಗೆ ಚಾಕೊಲೇಟ್ ಕೊಡಿಸುವುದಾಗಿ ಕಾಮುಕ ರಾಜೇಶ್ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಈ ಬಗ್ಗೆ ಬಾಲಕಿ ತನ್ನ ತಾಯಿಯ ಬಳಿ ಹೇಳಿಕೊಂಡಿದ್ದು ತಕ್ಷಣ ಹೆಬ್ಬಾಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

Read More

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಖಾಸಗಿ ಫಾರ್ಮ್ ಹೌಸ್ ನಲ್ಲಿ ನಡೆಯುತ್ತಿದ್ದ ಮಿಡ್ ನೈಟ್ ರೇವ್ ಪಾರ್ಟಿಯ ಮೇಲೆ ಸಿಸಿಬಿ ತಂಡ ರೈಡ್ ಮಾಡಿದೆ. ರೇವ್ ಪಾರ್ಟಿಯಲ್ಲಿ ಚಿತ್ರ ನಟಿಯರು, ಮಾಡೆಲ್ ಗಳು, ರಾಜಕಾರಣಿಗಳ ಮಕ್ಕಳು, ಸೇರಿದಂತೆ ಕಾಲೇಜು ಯುವಕ-ಯುವತಿಯರು ಭಾಗಿಯಾಗಿದ್ದಾರೆ. ಅಷ್ಟಕ್ಕೂ ಆ ರೇವ್ ಪಾರ್ಟಿ ಆಯೋಜನೆಗೊಂಡಿದ್ದು ಎಲ್ಲಿ, ಸಿಸಿಬಿ ರೈಡ್ ಹೇಗಿತ್ತು ನೋಡಿ ಈ ಕಂಪ್ಲೀಟ್ ರಿಪೋರ್ಟ್ ನಲ್ಲಿ.. https://ainlivenews.com/vijayapura-oil-party-at-hescom-power-distribution-center/ ಹೌದು ಉದ್ಯಾನ ನಗರಿ ಎಲೆಕ್ಟ್ರಾನಿಕ್ ಸಿಟಿ ಬಳಿಯಿರುವ ಜಿ.ಆರ್. ಫಾರ್ಮ್ ಹೌಸ್ ನಲ್ಲಿ ಮೇ 19ರ ತಡರಾತ್ರಿಯವರೆಗೂ ನಡೆದಿದ್ದ ರೇವ್ ಪಾರ್ಟಿಯೊಂದರ ಮೇಲೆ ಬೆಂಗಳೂರಿನ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದು ಆ ದಾಳಿಯಲ್ಲಿ ಡ್ರಗ್ಸ್ ಪತ್ತೆಯಾಗಿರುವ ವಿಚಾರ ಬೆಳಕಿಗೆ ಬಂದಿದೆ. ಬೆಳಗಿನ ಜಾವ 3 ಗಂಟೆಯ ಸುಮಾರಿಗೆ ಈ ಪಾರ್ಟಿ ಮೇಲೆ ರೈಡ್ ನಡೆಸಲಾಗಿದೆ. ಎಂಡಿಎಂಎನ್ ಮಾತ್ರೆಗಳು, ಕೊಕೇನ್ ರೀತಿಯ ಡ್ರಗ್ಸ್ ಪತ್ತೆಯಾಗಿದೆ. ಈ ಪಾರ್ಟಿಯನ್ನು ಉದ್ಯಮಿ ವಾಸು ಎಂಬಾತ ತನ್ನ ಹುಟ್ಟುಹಬ್ಬದ ಹೆಸರಿನಲ್ಲಿ ಆಯೋಜನೆ ಮಾಡಿದ್ದ…

Read More

ವಿಜಯಪುರ:- ಹೆಸ್ಕಾಂ ವಿದ್ಯುತ್ ವಿತರಣಾ ಕೇಂದ್ರದಲ್ಲೇ ಎಣ್ಣೆ ಪಾರ್ಟಿ ನಡೆದಿದ್ದು, ಸ್ಥಳೀಯರು ಆಕ್ರೋಶ ಹೊರ ಹಾಕಿದ ಘಟನೆ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಹಿರೇಮಸಳ್ಳಿಯಲ್ಲಿ ಜರುಗಿದೆ. https://ainlivenews.com/the-siddaramaiah-government-has-completed-1-year-by-giving-a-guarantee-as-promised/ ಹೆಸ್ಕಾಂ ಜೆಇ ಗೊಲ್ಲಾಳಪ್ಪ ಪಾಟೀಲ ಅವರು ತಮ್ಮ ಸ್ನೇಹಿತನ ಜೊತೆ ನಿನ್ನೆ ರಾತ್ರಿ ಮದ್ಯ ಸೇವನೆ ಮಾಡಿದ್ದಾರೆ. ಈ ಹಿಂದೆಯೂ ಇದೇ ರೀತಿ ಕಚೇರಿಯ ಆವರಣದಲ್ಲೇ ಮದ್ಯ ಸೇವನೆ ಮಾಡಿದ್ದರು ಎಂದು ತಿಳಿದು ಬಂದಿದೆ. ಹೆಸ್ಕಾಂ ಜೆಇ ಗೊಲ್ಲಾಳಪ್ಪ ಪಾಟೀಲ ಅವರ ನಡೆಯ ಬಗ್ಗೆ ಸ್ಥಳೀಯರು ಪ್ರಶ್ನೆ ಮಾಡಿದ್ದು ತಾನು ಏನೂ ತಪ್ಪು ಮಾಡಿಲ್ಲ ಎಂದು ಜೆಇ ಸಾಹೇಬ್ರು ವಾದ ಮಾಡಿದ್ದಾರೆ. ನಮ್ಮ ಕಚೇರಿ ಆವರಣದಲ್ಲಿ ಮದ್ಯ ಸೇವನೆಗೆ ಅವಕಾಶವಿದೆ ಎಂದಿದ್ದಾರೆ. ಇಂತ ಆಧಿಕಾರಿ ವಿರುದ್ದ ಮೇಲಾಧಿಕಾರಿಗಳು ಕ್ರಮ ತೆಗೆದುಕೊಳ್ಳಬೇಕೆಂದು ಜನರು ಒತ್ತಾಯಿಸಿದ್ದಾರೆ. ಅನಾರೋಗ್ಯದಿಂದ ಮೃತಪಟ್ಟ ದೇವರ ಹಸುವನ್ನು ಭವ್ಯ ಮೆರವಣಿಗೆ ಮಾಡಿ, ದೇವಸ್ಥಾನದ ಮುಂದೆಯೇ ಅಂತ್ಯಕ್ರಿಯೆ ಮಾಡಿರುವ ಅಪರೂಪದ ಘಟನೆ ಇಂಡಿ ತಾಲೂಕಿನ ಹೊರ್ತಿಯಲ್ಲಿ ನಡೆದಿದೆ. ಗ್ರಾಮದ ಆರಾಧ್ಯ ದೈವ ಶ್ರೀ…

Read More

ಬೆಂಗಳೂರು:- ಕಾಂಗ್ರೆಸ್​​ ರಾಜ್ಯದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿದು ಇಂದಿಗೆ ಒಂದು ವರ್ಷ ಪೂರ್ಣವಾಗಿದೆ. ಈ ಒಂದು ವರ್ಷದಲ್ಲಿ ರಾಜ್ಯ ಸರ್ಕಾರ ಹಲವು ಸವಾಲುಗಳನ್ನು ಎದುರಿಸಿತು. ಹಾಗೆ ಚುನಾವಣೆ ಪೂರ್ವದಲ್ಲಿ ತಾನು ಘೋಷಿಸಿದ್ದ ಹಲವು ಗ್ಯಾರೆಂಟಿಗಳನ್ನು ಜಾರಿ ಮಾಡಿದೆ. ಒಂದು ವರ್ಷ ಪೂರೈಸಿದ ಸಂತಸದಲ್ಲಿರುವ ಸರ್ಕಾರ ಎದುರಿಸಿದ ಸವಾಲುಗಳೇನು? ಮಾಡಿದ ಸಾಧನೆಗಳೇನು? ಪ್ರತಿಪಕ್ಷಗಳಿಗೆ ಕೊಟ್ಟ ಚಾಟಿ ಏಟಿನ ಕುರಿತಾದ ಸಂಪೂರ್ಣ ಮಾಹಿತಿ ಇಲ್ಲಿದೆ. https://ainlivenews.com/hema-participated-in-a-rave-party-in-bangalore/ ಈ ಒಂದು ವರ್ಷದ ಅವಧಿಯಲ್ಲಿ ಹಲವು ಸವಾಲುವಳನ್ನು ಎದರಿಸಿರುವ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರಕ್ಕೆ ಐದು ಗ್ಯಾರಂಟಿ ಯೋಜನೆಗಳೇ ಮೂಲಬೇರು. ಗ್ಯಾರಂಟಿ ಭರವಸೆಗಳನ್ನು ನೀಡಿಯೇ ಕಾಂಗ್ರೆಸ್​ ಅಧಿಕಾರಿಕ್ಕೆ ಬಂತು. ಚುನಾವಣೆಯಲ್ಲಿ ಘೋಷಣೆ ಮಾಡಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೊದಲ ಕ್ಯಾಬಿನೆಟ್​ನಲ್ಲಿಯೇ ಐದು ಗ್ಯಾರಂಟಿಗಳಿಗೆ ಅನುಮೋದನೆ ನೀಡಿತು. ಶಕ್ತಿ ಯೋಜನೆ, ಅನ್ನ ಭಾಗ್ಯದ ಹೆಚ್ಚುವರಿ ಹಣ, ಗೃಹ ಲಕ್ಷ್ಮಿ, ಗೃಹ ಜ್ಯೋತಿ, ಯುವನಿಧಿ ಮೂಲಕ ಮಹಿಳೆಯರ ಮತ್ತು ಯುವಕರ ಮನಗೆದ್ದ ಸರ್ಕಾರ ಈ ಗ್ಯಾರಂಟಿ ಜಾರಿಗೆ ಹಣ ಸರಿದೂಗಿಸಲು…

Read More

ಬೆಂಗಳೂರು:- ಬೆಂಗಳೂರಿನಲ್ಲಿ ರೇವ್ ಪಾರ್ಟಿಯಲ್ಲಿ ಭಾಗಿಯಾಗಿರುವ ಬಗ್ಗೆ ನಟಿ ಹೇಮಾ ಪ್ರತಿಕ್ರಿಯೆ ನೀಡಿದ್ದಾರೆ. https://ainlivenews.com/rain-storm-bbmp-commissioners-response-to-rajkaluve-water-problem/ ಈ ಸಂಬಂಧ ಮಾತನಾಡಿದ ಅವರು, ನಾನು ಹೈದ್ರಾಬಾದ್ ನಲ್ಲಿ ಇದೀನಿ. ಯಾವುದೇ ರೀವ್ ಪಾರ್ಟಿಯಲ್ಲಿ ಭಾಗಿಯಾಗಿಲ್ಲ..ಹೈದ್ರಾಬಾದ್ ಪಾರ್ಮ್ ಹೌಸ್ ನಲ್ಲಿ ಇದೀನಿ ನೋಡಿ.. ಸುಮ್ನೆ ಸುಳ್ಳು ಸುದ್ದಿ ನಂಬಬೇಡಿ.. ಎಂದು ವಿಡಿಯೋ ಮೂಲಕ ನಟಿ ಹೇಮಾ ಸ್ಪಷ್ಟನೆ ನೀಡಿದ್ದಾರೆ.

Read More

ಬೆಂಗಳೂರು:- ನಗರದ ಯಲಹಂಕ , ನಾರ್ಥ್ ವುಡ್ ವಿಲ್ಲಾ ಜಲಾವೃತದ ಬಗ್ಗೆ ಕಮಿಷನರ್ ತುಷಾರ್ ಗಿರಿನಾಥ್ ಪ್ರತಿಕ್ರಿಯೆ ನೀಡಿದ್ದಾರೆ. https://ainlivenews.com/helicopter-crash-irans-president-burned-alive/ ಈ ಸಂಬಂಧ ಮಾತನಾಡಿದ ಅವರು, ರಾಜಕಾಲುವೆ ನೀರಿನ ಸಮಸ್ಯೆ ಬಗ್ಗೆ ಮಾತಾನಾಡಿದ್ದಾರೆ. ಕೆರೆಗೆ ನೀರು ಬಿಡಲು ಅನುಮತಿ ಕೊಟ್ಟಿಲ್ಲ. ಹೀಗಾಗಿ ಕಾಮಗಾರಿ ಅರ್ಧಕ್ಕೆ ನಿಂತಿತ್ತು. ಮಳೆ ಬಂದಾಗ ಆ ನೀರು ಮೈದಾನಕ್ಕೆ ಹರಿಯುತ್ತಿತ್ತು. ದ್ರೆ ಈಗ ಅಲ್ಲಿ ಕೂಡ ಅಡೆತಡೆ ಇರೋದರಿಂದ ನೀರು ನುಗ್ಗಿತ್ತು. ಸದ್ಯ ಅಲ್ಲಿಗೆ ಪರ್ಯಾಯ ವ್ಯವಸ್ಥೆ ಮಾಡ್ತೀವೆ. ದೊಡ್ಡ ಪೈಪ್ ಅಳವಡಿಸಿ ಬೇರೆಡೆ ನೀರು ಹೋಗುವಂತೆ ಮಾಡ್ತೀವೆ. ಸದ್ಯ ಅಲ್ಲಿ ನಿಂತಿದ್ದ ನೀರನ್ನ ಮೋಟಾರ್ ಮೂಲಕ ಹೊರಹಾಕಿದ್ದೇವೆ. ಮುಂದೆ ಪೈಪ್ ಲೈನ್ ಅಳವಡಿಸಿ ಪರ್ಯಾಯ ಮಾರ್ಗ ಮಾಡ್ತೀವೆ. ರಾಜಕಾಲುವೆ ಸಮಸ್ಯೆ ಬಗ್ಗೆ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಹೇಳಿದ್ದಾರೆ.

Read More

ನವದೆಹಲಿ:- ಹೆಲಿಕಾಪ್ಟರ್ ಪತನಗೊಂಡ ಹಿನ್ನೆಲೆ ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಸಾವನ್ನಪ್ಪಿದ ಘಟನೆ ಜರುಗಿದೆ. https://ainlivenews.com/rain-in-bengaluru-more-than-twenty-roads-are-flooded/ ಇಬ್ರಾಹಿಂ ರೈಸಿ ಸಹಿತ ಎಲ್ಲರೂ ಮೃತಪಟ್ಟಿರುವುದಾಗಿ ಇರಾನ್‌ ಮಾಧ್ಯಮಗಳು ವರದಿ ಮಾಡಿವೆ. ದುರ್ಘಟನೆಯಲ್ಲಿ ವಿದೇಶಾಂಗ ಸಚಿವ ಹುಸೇನ್ ಅಮೀರ್ ಅಬ್ದುಲ್ಲಾಹಿಯಾನ್, ಪೂರ್ವ ಅಜೆರ್ಬೈಜಾನ್ ಪ್ರಾಂತ್ಯದ ಗವರ್ನರ್ ಮಾಲೆಕ್ ರಹಮತಿ, ತಬ್ರಿಜ್‌ನ ಇಮಾಮ್ ಮೊಹಮ್ಮದ್ ಅಲಿ ಅಲೆಹಶೆಮ್, ಪೈಲಟ್, ಕೋ ಪೈಲಟ್, ಸಿಬ್ಬಂದಿ ಮುಖ್ಯಸ್ಥ, ಭದ್ರತಾ ಮುಖ್ಯಸ್ಥ ಹಾಗೂ ಗನ್‌ಮ್ಯಾನ್‌ಗಳು ಮೃತಪಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ. ರೈಸಿ ನೆರೆಯ ರಾಷ್ಟ್ರವಾದ ಅಝರ್ಬೈಜಾನ್​ನಲ್ಲಿ ಆ ದೇಶದ ಅಧ್ಯಕ್ಷ ಇಲ್ಹಾಮ್ ಅಲಿಯಎವ್ ಜತೆ ಅಣೆಕಟ್ಟು ಉದ್ಘಾಟಿಸಿದ್ದರು. ಉಭಯ ರಾಷ್ಟ್ರಗಳು ಅರಾಸ್​ ನದಿಗೆ ನಿರ್ಮಿಸಿದ ಮೂರನೇ ಅಣೆಕಟ್ಟು ಇದಾಗಿದೆ. ರೈಸಿ ಅವರಿದ್ದ ಹೆಲಿಕಾಪ್ಟರ್​ನೊಂದಿಗೆ ಪ್ರಯಾಣಿಸುತ್ತಿದ್ದ ಇತರೆ ಎರಡು ಬೆಂಗಾವಲು ಹೆಲಿಕಾಪ್ಟರ್​ಗಳು ಸುರಕ್ಷಿತವಾಗಿ ಹಿಂದಿರುಗಿವೆ. ಬೆಂಗಾವಲು ಹೆಲಿಕಾಪ್ಟರ್​ಗಳಲ್ಲಿ ಇಂಧನ ಸಚಿವ ಅಲಿ ಅಕ್ಬರ್ ಮೆಹ್ರಾಬಿಯಾನ್ ಹಾಗೂ ವಸತಿ ಸಚಿವ ಮೆಹ್ರದಾದ್ ಇದ್ದು ಅವರು ಸುರಕ್ಷಿತವಾಗಿ ಮರಳಿದ್ದಾರೆ ರೆಡ್ ಕ್ರೆಸೆಂಟ್ ಅನ್ನು ಉಲ್ಲೇಖಿಸಿ ಹಲವಾರು…

Read More

ಬೆಂಗಳೂರು:- ಬೆಂಗಳೂರಿನಲ್ಲಿ ಕಳೆದ ರಾತ್ರಿ ಸುರಿದ ಭಾರೀ ಮಳೆ ಹಿನ್ನೆಲೆ ನಗರದ ಇಪ್ಪತ್ತಕ್ಕೂ ಹೆಚ್ಚ ಕಡೆ ರಸ್ತೆಗಳು ಜಲಾವೃತವಾಗಿದೆ. ರಸ್ತೆಗಳ ಜಲಾವೃತದಿಂದ ಮಧ್ಯರಾತ್ರಿವರೆಗೂ ವಾಹನಸವಾರರು ಪರದಾಡಿದ್ದಾರೆ. https://ainlivenews.com/a-crack-appeared-in-the-bmtc-station-of-shivajinagar-people-are-worried/ ಒಂದು ಕಡೆ ರಸ್ತೆಗಳು ಜಲಾವೃತ ಮತ್ತೊಂದು ಕಡೆ ಮರಗಳ ನೆಲಸಮವಾಗಿದೆ. ಟ್ರಾಫಿಕ್ ನಿಯಂತ್ರಣಕ್ಕೆ ಟ್ರಾಫಿಕ್ ಪೊಲೀಸರಿಂದಲೂ ಪರದಾಟ ನಡೆಸಿದ್ದಾರೆ. ನೀರು ನಿಂತಕಡೆಯಲ್ಲೆಲ್ಲಾ ಸ್ವತಃ ಪೊಲೀಸರಿಂದಲೇ ನೀರಿನ ತೆರವು ಕಾರ್ಯ ನಡೆದಿದೆ. ಹೆಬ್ಬಾಳ, ಮಾನ್ಯತಾಟೆಕ್ ಪಾರ್ಕ್ ರಸ್ತೆ, ಕಸ್ತೂರಿ ನಗರ MMT ಜಂಕ್ಷನ್, ಬಿಇಎಲ್, ಟಿನ್ ಫ್ಯಾಕ್ಟರಿ, ಟ್ಯಾನರಿ ರೋಡ್ ಸೇರಿ ಇತೆರಡೆ ತೊಂದರೆ ಆಗಿತ್ತು. ಈ ವೇಳೆ ಸ್ವತಃ ಟ್ರಾಫಿಕ್ ಪೊಲೀಸರಿಂದಲೇ ರಸ್ತೆಯಲ್ಲಿ ನಿಂತಿದ್ದ ನೀರಿನ ತೆರವು ಕಾರ್ಯ ನಡೆದಿದೆ. ಸಂಚಾರಿ ಪೊಲೀಸರ ಕಾರ್ಯಕ್ಕೆ ನೆಟ್ಟಿಗರು ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

Read More