ಲಕ್ನೋ:- ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಕಳ್ಳರು ಕೈಚಳಕ ತೋರಿದ್ದಾರೆ. ಅಯೋಧ್ಯೆಗೆ ತೆರಳಿದ್ದ ಧಾರವಾಡದ 2 ಕುಟುಂಬಗಳ ಕಾರಿನ ಗ್ಲಾಸ್ ಒಡೆದು ಬ್ಯಾಗ್, ಮೊಬೈಲ್ ಹಾಗೂ 20,000 ರೂ. ಕಳ್ಳತನ ಮಾಡಿದ್ದಾರೆ. https://ainlivenews.com/champions-trophy-is-more-important-than-india-defeat-pakistan-vice-captain/ ಅರುಣಕುಮಾರ ಬಡಿಗೇರ ಹಾಗೂ ಮಾಳಮಡ್ಡಿಯ ಬಸವರಾಜ್ ಕೊಟ್ಯಾಳ್ ಎಂಬುವವರ ಕುಟುಂಬದವರು ಪ್ರಯಾಗ್ರಾಜ್ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳಕ್ಕೆ ತೆರಳಿದ್ದರು. ಶಾಹಿ ಸ್ನಾನ ಮುಗಿಸಿ ಅಯೋಧ್ಯೆಗೆ ಹೋಗಿದ್ದರು. ಕುಟುಂಬಸ್ಥರು ಶನಿವಾರ ರಾತ್ರಿ ಅಯೋಧ್ಯೆಯಲ್ಲಿ ಕಾರು ಪಾರ್ಕಿಂಗ್ ಮಾಡಿ ದರ್ಶನಕ್ಕೆ ಹೋಗಿದ್ದರು. ಈ ವೇಳೆ ಖದೀಮರು ಕಾರಿನ ಕಿಟಕಿ ಗಾಜು ಒಡೆದು ಬ್ಯಾಗ್, 10 ಮೊಬೈಲ್, 20,000 ರೂ., ಎಟಿಎಂ ಕಾರ್ಡ್ ಸೇರಿ ಬಟ್ಟೆ ಕಳ್ಳತನ ಮಾಡಿದ್ದಾರೆ. ಶ್ರೀರಾಮನ ದರ್ಶನ ಮುಗಿಸಿ ಬಂದು ನೋಡಿದಾಗ ಕಳ್ಳತನ ಆಗಿರುವುದು ಗೊತ್ತಾಗಿದೆ. ಇದರಿಂದ 2 ಕುಟುಂಬಗಳು ಸಂಕಷ್ಟಕ್ಕೆ ಸಿಲುಕಿದೆ. ನಮಗೆ ಆದಂತೆ ಬೇರೆ ಜನರಿಗೆ ಆಗದಿರಲಿ. ರಾಜ್ಯದಿಂದ ಹಲವು ಜನರು ಈಗಲೂ ಕುಂಭಮೇಳಕ್ಕೆ ಹೋಗುತ್ತಿದ್ದಾರೆ. ಹೀಗಾಗಿ ಅವರ ಬ್ಯಾಗ್, ಮೊಬೈಲ್ ಹಾಗೂ ಹಣವನ್ನು ಜೋಪಾನವಾಗಿ ಇಟ್ಟುಕೊಳ್ಳಲಿ…
Author: AIN Author
ಭಾರತವನ್ನು ಬಗ್ಗು ಬಡಿಯುವುದಕ್ಕಿಂತ ಚಾಂಪಿಯನ್ಸ್ ಟ್ರೋಫಿ ಗೆಲ್ಲೋದು ಮುಖ್ಯ ಎಂದು ಪಾಕ್ ಉಪನಾಯಕ ಸಲ್ಮಾನ್ ಅಲಿ ಅಘಾ ಹೇಳಿದ್ದಾರೆ. https://ainlivenews.com/dk-shivakumar-ready-for-local-body-elections-dcm-dk/ ಚಾಂಪಿಯನ್ಸ್ ಟ್ರೋಫಿ ಆರಂಭಕ್ಕೆ ದಿನಗಣನೆ ಶುರುವಾಗಿದೆ. ಫೆಬ್ರವರಿ 19 ರಿಂದ ಆರಂಭವಾಗಲಿರುವ ಈ ಟೂರ್ನಿಗೆ ಪಾಕಿಸ್ತಾನ್ ಕ್ರಿಕೆಟ್ ಬೋರ್ಡ್ ಆತಿಥ್ಯವಹಿಸುತ್ತಿದೆ. ಇದಾಗ್ಯೂ ಈ ಟೂರ್ನಿಯು ಹೈಬ್ರಿಡ್ ಮಾದರಿಯಲ್ಲಿ ನಡೆಯಲಿದ್ದು, ಅದರಂತೆ ಬಹುತೇಕ ಪಂದ್ಯಗಳು ಪಾಕಿಸ್ತಾನದಲ್ಲಿ ನಡೆದರೆ, ಭಾರತದ ಪಂದ್ಯಗಳು ದುಬೈನಲ್ಲಿ ಜರುಗಲಿದೆ ಫೆಬ್ರವರಿ 23 ರಂದು ದುಬೈ ಇಂಟರ್ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆಯಲಿರುವ ಪಂದ್ಯದಲ್ಲಿ ಬದ್ಧ ವೈರಿಗಳಾದ ಭಾರತ ಮತ್ತು ಪಾಕಿಸ್ತಾನ್ ತಂಡಗಳು ಮುಖಾಮುಖಿಯಾಗಲಿದೆ. ಇಡೀ ವಿಶ್ವವೇ ಕಾತುರದಿಂದ ಕಾಯುತ್ತಿರುವ ಈ ಪಂದ್ಯದಲ್ಲಿ ಯಾರು ಗೆಲ್ಲುತ್ತಾರೆ ಎಂಬುದೇ ಈಗ ಕುತೂಹಲ. ಹೀಗಾಗಿಯೇ ಈ ಬಾರಿಯ ಟೂರ್ನಿಯಲ್ಲಿ ಭಾರತದ ವಿರುದ್ಧ ಪಾಕಿಸ್ತಾನ್ ಗೆಲ್ಲಲಿದೆಯಾ ಎಂಬ ಪ್ರಶ್ನೆಯನ್ನು ಪಾಕ್ ತಂಡದ ಉಪನಾಯಕ ಸಲ್ಮಾನ್ ಅಲಿ ಅಘಾ ಅವರಲ್ಲಿ ಕೇಳಲಾಗಿತ್ತು. ಭಾರತವನ್ನು ಸೋಲಿಸುವುದೇ ಅಥವಾ 2025ರ ಐಸಿಸಿ ಚಾಂಪಿಯನ್ಸ್ ಟ್ರೋಫಿ ಗೆಲ್ಲುವುದೇ? ಪಾಕಿಸ್ತಾನ್ ತಂಡದ ಮುಖ್ಯ…
ಬೆಂಗಳೂರು:- ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಕಾರ್ಯಕರ್ತರು ಸಜ್ಜಾಗಿ ಎಂದು DCM ಡಿಕೆ ಶಿವಕುಮಾರ್ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು , ಯಾವುದೇ ಕ್ಷಣದಲ್ಲಾದರೂ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಯಬಹುದು. ಹೀಗಾಗಿ ಪಕ್ಷದ ನಾಯಕರು ಹಾಗೂ ಕಾರ್ಯಕರ್ತರು ಸಜ್ಜಾಗಬೇಕು. https://ainlivenews.com/do-you-check-your-phone-as-soon-as-you-wake-up-in-the-morning-beware-this-problem-is-guaranteed/ ಈ ವೇಳೆ, ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸುವ ವಿಚಾರವಾಗಿ ನ್ಯಾಯಾಲಯದಿಂದ ಸಧ್ಯದಲ್ಲೇ ಸೂಚನೆ ಬರುವ ಸಾಧ್ಯತೆ ಇದೆ. ಇನ್ನೂ ಬೆಂಗಳೂರು ನಗರ ಪಾಲಿಕೆ ಚುನಾವಣೆಯನ್ನು ನಡೆಸಬೇಕಾಗಿದ್ದು ಗ್ರೇಟರ್ ಬೆಂಗಳೂರು ವಿಚಾರವಾಗಿ ಅಭಿಪ್ರಾಯ ಸಂಗ್ರಹಕ್ಕೆ ಮುಂದಾಗಿದ್ದೇವೆ. ಯಾವುದೇ ಕ್ಷಣದಲ್ಲಿ ಈ ಚುನಾವಣೆಗಳು ಘೋಷಣೆಯಾಗಬಹುದು. ಇದಕ್ಕೆ ನಾವೆಲ್ಲರೂ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಹೇಳಿದ್ದಾರೆ ಚುನಾವಣೆಗಳ ಸಿದ್ಧತೆಗಾಗಿ ಕಾರ್ಯಾಧ್ಯಕ್ಷರ ನೇತೃತ್ವದಲ್ಲಿ ಉಪಾಧ್ಯಕ್ಷರುಗಳನ್ನು ಸೇರಿಸಿಕೊಂಡು ವಿಭಾಗವಾರು ಸಮಿತಿ ರಚಿಸಲಿದ್ದೇವೆ. ಈ ಸಮಿತಿ ಮಾರ್ಚ್ ಒಳಗಾಗಿ ರಾಜ್ಯ ಪ್ರವಾಸ ಮಾಡಿ ಎಲ್ಲಾ ಕಡೆ ಸಮನ್ವಯತೆ ಸಾಧಿಸಿ ತಯಾರಿ ಮಾಡಿಕೊಳ್ಳಬೇಕು. ನಾಯಕರ ಮಧ್ಯೆ ಹೊಂದಾಣಿಕೆ ಸಾಧಿಸಿ, 50% ಮಹಿಳಾ ಅಭ್ಯರ್ಥಿಗಳನ್ನು ತಯಾರು ಮಾಡುವ ಬಗ್ಗೆ ವರದಿ ಸಲ್ಲಿಸಬೇಕು ಎಂದು…
ಸ್ಮಾರ್ಟ್ ಫೋನ್ ಇಲ್ಲದೆ ಇದ್ದರೆ ಆಗ ಜೀವನವೇ ಇಲ್ಲವೆನ್ನುವಂತಹ ಪರಿಸ್ಥಿತಿಯು ಇಂದಿನ ಯುಗದಲ್ಲಿದೆ. ಬೆಳಗ್ಗೆ ಬೇಗ ಎದ್ದೇಳಲು ಅಲರಾಂನಿಂದ ಹಿಡಿದು ರಾತ್ರಿ ಮಲಗುವ ತನಕ ಪ್ರತಿಯೊಂದು ವಿಚಾರಕ್ಕೂ ನಾವು ಸ್ಮಾರ್ಟ್ ಫೋನ್ ಅವಲಂಬಿಸಿದ್ದೇವೆ. ಅದರಲ್ಲೂ ಯಾವುದೇ ವಿಚಾರವು ನಮಗೆ ತಿಳಿಯದೆ ಇದ್ದರೆ ಆಗ ನಾವು ಇಂಟರ್ನೆಟ್ ಗೆ ಹೋಗಿ ಹುಡುಕಲು ಆರಂಭಿಸುತ್ತೇವೆ. ಇದು ನಮ್ಮ ಜ್ಞಾಪಕ ಶಕ್ತಿಯನ್ನು ಮತ್ತಷ್ಟು ಕಡಿಮೆ ಮಾಡಿದೆ. https://ainlivenews.com/a-yogi-died-while-doing-yoga-in-cauvery-river/ ಸ್ಮಾರ್ಟ್ ಫೋನ್ ಬಂದ ನಂತರ ಜನರ ದೈನಂದಿನ ಬಹುತೇಕ ಸಮಯವನ್ನು ಕೊಲ್ಲುತ್ತಿದೆ. ಎಲ್ಲಾ ವಯೋಮಾನದವರು ಸ್ಮಾರ್ಟ್ಫೋನ್ ಚಟಕ್ಕೆ ಬಿದ್ದು ಅದರಿಂದ ಅನೇಕ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಮಾತ್ರವಲ್ಲದೆ ಮಾನಸಿಕವಾಗಿ ಮತ್ತು ದೈಹಿಕವಾಗಿ ಅವರನ್ನು ಕುಗ್ಗಿಸುತ್ತಿದೆ. ನಿಮಗೆ ಗೊತ್ತಾ? ಮೆಲಟೋನಿನ್ ನಿದ್ರೆಯನ್ನು ನಿಯಂತ್ರಿಸುವ ಹಾರ್ಮೋನ್. ಆದರೆ ಸ್ಮಾರ್ಟ್ಫೋನ್ ನಿಂದ ಬರುವ ನೀಲಿ ಬೆಳಕು ನಿಮಗೆ ತೊಂದರೆ ನೀಡುತ್ತೆ. ಸ್ಮಾರ್ಟ್ಫೋನ್ ಬಳಕೆಯಿಂದ ಹಾರ್ಮೋನ್ ಉತ್ಪಾದನೆಯನ್ನು ತಡೆಯುತ್ತದೆ. ಬೆಳಗ್ಗೆ ಎದ್ದ ತಕ್ಷಣ ಬಹುತೇಕರು ಸ್ಮಾರ್ಟ್ಫೋನ್ ನೋಡುತ್ತಾರೆ. ಇನ್ನು ಕೆಲವರು ಅಲರಾಂ ಇಟ್ಟುಕೊಂಡಿರುತ್ತಾರೆ. ಆದರೆ…
ಕೆಂಪು, ರಸಭರಿತವಾದ ದಾಳಿಂಬೆ, ಭೂಮಿಯ ಮೇಲಿನ ಆರೋಗ್ಯಕರ ಹಣ್ಣುಗಳಲ್ಲಿ ಒಂದಾಗಿದೆ. ಕುತೂಹಲಕಾರಿಯಾಗಿ, ಇದನ್ನು ಕೆಲವೊಮ್ಮೆ ದೇವರ ಹಣ್ಣು ಎಂದು ಕರೆಯಲಾಗುತ್ತದೆ, ಏಕೆಂದರೆ ಇದು ಹೆಚ್ಚಾಗಿ ಉಲ್ಲೇಖಿಸಲಾದ ಹಣ್ಣಿನ ದೇವತಾಶಾಸ್ತ್ರದ ಹಣ್ಣುಗಳಲ್ಲಿ ಒಂದಾಗಿದೆ. https://ainlivenews.com/former-mp-lr-shivaramegowda-rejoins-congress/ ದಾಳಿಂಬೆಯು ವಿವಿಧ ಪೌಷ್ಟಿಕಾಂಶದ ಪ್ರಯೋಜನಗಳಿಂದ ಕೂಡಿದೆ. ಈ ಹಣ್ಣಿನಲ್ಲಿ ಸುಮಾರು 19 ಗ್ರಾಂ ಕಾರ್ಬೋಹೈಡ್ರೇಟ್ಗಳನ್ನು ಹೊಂದಿದೆ ಎಂದು ಅಧ್ಯಯನಗಳು ಸೂಚಿಸುತ್ತವೆ, ಹಾಗೂ ದಾಳಿಂಬೆ ಹಣ್ಣು 4 ಗ್ರಾಂ ಫೈಬರ್ ಅನ್ನು ಹೊಂದಿದ್ದು, ದಾಳಿಂಬೆ ಹಣ್ಣು 78 % ನೀರು ಹೊಂದಿದೆ ಎಂದು ಅಧ್ಯಯನಗಳು ಸೂಚಿಸುತ್ತವೆ. ದಾಳಿಂಬೆ ಹಣ್ಣು ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಆದರೆ ಇದು ಕೆಲವರಿಗೆ ಹಾನಿ ಮಾಡುತ್ತದೆ. ಹಾಗಾದರೆ ಯಾರು ಈ ಹಣ್ಣು ತಿನ್ನಬಾರದು ತಿಳಿಯಲು ಮುಂದೆ ಓದಿ… ದಾಳಿಂಬೆ ಹಣ್ಣು ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಆದರೆ ಇದು ಕೆಲವರಿಗೆ ಹಾನಿ ಮಾಡುತ್ತದೆ. ಈಗ ದಾಳಿಂಬೆಯನ್ನು ಯಾರು ತಿನ್ನಬಾರದು ಎಂದು ನೋಡೋಣ. ದಾಳಿಂಬೆಯಲ್ಲಿ ವಿಟಮಿನ್ ಸಿ, ಕೆ, ಮೆಗ್ನೀಸಿಯಮ್, ರಂಜಕ, ಪೊಟ್ಯಾಸಿಯಮ್, ಫೈಬರ್ ಮತ್ತು ಪ್ರೋಟೀನ್ನಂತಹ…
ಬೆಂಗಳೂರು:- ಮಾಜಿ ಸಂಸದ ಎಲ್ಆರ್ ಶಿವರಾಮೇಗೌಡ ಕಾಂಗ್ರೆಸ್ ಸೇರ್ಪಡೆ ಆಗಿದ್ದಾರೆ. https://ainlivenews.com/big-shock-for-dboss-fans-actor-darshans-banner-removed-on-his-birthday/ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಪಕ್ಷ ಸೇರ್ಪಡೆ ಕಾರ್ಯಕ್ರಮ ನಡೆಯಿತು. ಮಾಜಿ ಸಂಸದ ಶಿವರಾಮೇಗೌಡ ಮತ್ತು ಪುತ್ರ ಮಂಜೇಗೌಡ, ಬ್ರಿಜೇಶ್ ಕಾಳಪ್ಪ ಮತ್ತು ಎಲ್.ಎಸ್.ಚೇತನ್ ಗೌಡ ಕಾಂಗ್ರೆಸ್ ಸೇರ್ಪಡೆಯಾದರು. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸ್ವಾಗತಿಸಿದರು. ಎಲ್ಆರ್ ಶಿವರಾಮೇಗೌಡ ಅವರು ಇತ್ತೀಚಿಗೆ ಬಿಜೆಪಿ ಸೇರಿದ್ದರು. ಇದೀಗ ಮರಳಿ ಕಾಂಗ್ರೆಸ್ ಪಕ್ಷ ಸೇರಿಕೊಂಡಿದ್ದಾರೆ. ಕಾಂಗ್ರೆಸ್ ತೊರೆದು ಆಮ್ ಆದ್ಮಿ ಪಕ್ಷ ಸೇರ್ಪಡೆಯಾಗಿದ್ದ ಬ್ರಿಜೇಶ್ ಕಾಳಪ್ಪ ಕೂಡ ಮರಳಿ ಮಾತೃ ಪಕ್ಷಕ್ಕೆ ವಾಪಸ್ ಆಗಿದ್ದಾರೆ. ಎಲ್ ಆರ್ ಶಿವರಾಮೇಗೌಡ ಇತ್ತೀಚಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಜೊತೆ ವೇದಿಕೆ ಕಾರ್ಯಕ್ರಮಗಳಲ್ಲಿ ಕಾಣಿಸಿಕೊಂಡಿದ್ದರು. ಚನ್ನಪಟ್ಟಣ ಉಪಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಿಪಿ ಯೋಗೇಶ್ವರ ಪರ ಪ್ರಚಾರದಲ್ಲಿ ಪಾಲ್ಗೊಂಡಿದ್ದರು. ಇದು ಎಲ್ ಆರ್ ಶಿವರಾಮೇಗೌಡ ಕಾಂಗ್ರೆಸ್ ಸೇರ್ಪಡೆ ಬಹುತೇಕ ಖಚಿತ ಎಂಬ ಮಾತುಗಳು ರಾಜಕೀಯ ಪಡಸಾಲೆಯಲ್ಲಿ ಕೇಳಿ ಬರುತ್ತಿದ್ದವು.
ಬೆಂಗಳೂರು:- ರೇಣುಕಾಸ್ವಾಮಿ ಕೇಸ್ನಲ್ಲಿ ನಟ ದರ್ಶನ್ ಅವರು ಜೈಲಿಗೆ ಹೋಗಿ ಬಂದ ನಂತರ ಮತ್ತಷ್ಟು ಫೇಮಸ್ ಆಗಿದ್ದಾರೆ. ಅವರ ಫ್ಯಾನ್ಸ್ ಬೇಸ್ ಸಿಕ್ಕಾಪಟ್ಟೆ ಹೆಚ್ಚಾಗಿದೆ. ಇತ್ತೀಚೆಗಂತೂ ಅವರ ಕ್ರೇಜ್ ಭಾರೀ ಹೆಚ್ಚಾಗಿದ್ದು ರಿ ರಿಲೀಸ್ ಆದ ಸಿನಿಮಾಗಳಿಗೆ ಭರ್ಜರಿ ರೆಸ್ಪಾನ್ಸ್ ಬಂದಿದೆ. https://ainlivenews.com/suspect-of-rape-and-murder-of-a-woman-the-incident-came-to-light-late/ ಇಂದು ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಹುಟ್ಟುಹಬ್ಬದ ಸಂಭ್ರಮ ಮನೆ ಮಾಡಿದೆ. ರಾಜ್ಯಾದ್ಯಂತ ಅವರ ಅಭಿಮಾನಿಗಳು ಡಿಬಾಸ್ ಹುಟ್ಟುಹಬ್ಬವನ್ನು ಸಂಭ್ರಮದಿಂದ ಆಚರಿಸುತ್ತಿದ್ದಾರೆ. ಇದೀಗ ಫ್ಯಾನ್ಸ್ಗೆ ಶಾಕ್ ಆಗಿದೆ. ನಟ ದರ್ಶನ್ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿರುವ ಹೊತ್ತಿನಲ್ಲೇ ಹೊಸಕೋಟೆ ಪುರಸಭೆಯು ದರ್ಶನ್ ಬ್ಯಾನರ್ ತೆರವುಗೊಳಿಸುವ ಮೂಲಕ ಫ್ಯಾನ್ಸ್ಗೆ ಶಾಕ್ ನೀಡಿದೆ. ಹುಟ್ಟುಹಬ್ಬ ಆಚರಣೆ ಹಿನ್ನೆಲೆ ಅಭಿಮಾನಿಗಳು ದರ್ಶನ್ ಬ್ಯಾನರ್ ಹಾಕಿದ್ದರು. ಈ ಬ್ಯಾನರ್ಗಳನ್ನು ಹೊಸಕೋಟೆ ಪುರಸಭೆ ಸಿಬ್ಬಂದಿ ತೆರವುಗೊಳಿಸಿದ್ದು, ಅಭಿಮಾನಿಗಳಲ್ಲಿ ಬೇಸರ ಮೂಡಿಸಿದೆ. ದರ್ಶನ್ 48ನೇ ವರ್ಷದ ಬರ್ತ್ಡೇ ಆಚರಿಸಿಕೊಳ್ಳುತ್ತಿದ್ದಾರೆ. ಪತ್ನಿ ವಿಜಯಲಕ್ಷ್ಮೀ, ನಟ ಧನ್ವೀರ್, ಚಿಕ್ಕಣ್ಣ ಇನ್ಸ್ಟಾಗ್ರಾಂನಲ್ಲಿ ದರ್ಶನ್ ಜೊತೆಗಿನ ಫೋಟೋ ಹಂಚಿಕೊಂಡು ಶುಭಾಶಯ ತಿಳಿಸಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ…
ರೇಣುಕಾಸ್ವಾಮಿ ಕೇಸ್ನಲ್ಲಿ ನಟ ದರ್ಶನ್ ಅವರು ಜೈಲಿಗೆ ಹೋಗಿ ಬಂದ ನಂತರ ಮತ್ತಷ್ಟು ಫೇಮಸ್ ಆಗಿದ್ದಾರೆ. ಅವರ ಫ್ಯಾನ್ಸ್ ಬೇಸ್ ಸಿಕ್ಕಾಪಟ್ಟೆ ಹೆಚ್ಚಾಗಿದೆ. ಇತ್ತೀಚೆಗಂತೂ ಅವರ ಕ್ರೇಜ್ ಭಾರೀ ಹೆಚ್ಚಾಗಿದ್ದು ರಿ ರಿಲೀಸ್ ಆದ ಸಿನಿಮಾಗಳಿಗೆ ಭರ್ಜರಿ ರೆಸ್ಪಾನ್ಸ್ ಬಂದಿದೆ. https://ainlivenews.com/is-this-happening-to-your-body-if-so-wake-up-now/ ಇಂದು ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಹುಟ್ಟುಹಬ್ಬದ ಸಂಭ್ರಮ ಮನೆ ಮಾಡಿದೆ. ರಾಜ್ಯಾದ್ಯಂತ ಅವರ ಅಭಿಮಾನಿಗಳು ಡಿಬಾಸ್ ಹುಟ್ಟುಹಬ್ಬವನ್ನು ಸಂಭ್ರಮದಿಂದ ಆಚರಿಸುತ್ತಿದ್ದಾರೆ. ಇದೀಗ ಫ್ಯಾನ್ಸ್ಗೆ ಗುಡ್ ನ್ಯೂಸ್ ಸಿಕ್ಕಿದೆ. ಹುಟ್ಟುಹಬ್ಬದ ದಿನವೇ ಅವರ ‘ಡೆವಿಲ್’ ಸಿನಿಮಾ ಟೀಸರ್ ಬಿಡುಗಡೆ ಆಗಿದೆ. ಟೀಸರ್ ಕಂಡು ಮಾತೇ ಬರ್ತಾ ಇಲ್ಲಾ ಬಾಸ್ ಅಂತ ಕಮೆಂಟ್ ಮಾಡುತ್ತಿದ್ದಾರೆ. ಅಂತೂ ದರ್ಶನ್ ಟೀಸರ್ ಔಟ್ ಆಗಿದೆ. ಕೊನೆಯ ದರ್ಶನ್ ಡೈಲಾಗ್ಗೆ ಫ್ಯಾನ್ಸ್ ಫಿದಾ ಆಗಿದ್ದಾರೆ. ಬರೀ ಆ್ಯಕ್ಷನ್ನಲ್ಲಿಯೇ ದಚ್ಚು ಮಾಸ್ ಆಗಿ ಉತ್ತರ ಕೊಟ್ಟಿದ್ದಾರೆ. ದರ್ಶನ್ ಲುಕ್, ಆ್ಯಕ್ಷನ್, ಫೈಟಿಂಗ್ ಸೀನ್, ಮ್ಯೂಸಿಕ್ ಎಲ್ಲವೂ ಮಸ್ತ್ ಅಂತಿದ್ದಾರೆ ಫ್ಯಾನ್ಸ್. ದರ್ಶನ್ ಹುಟ್ಟುಹಬ್ಬದ ಸಂಭ್ರಮಕ್ಕೆ ಡೆವಿಲ್…
ಇಂದಿನ ವಿಜ್ಞಾನ-ತಂತ್ರಜ್ಞಾನ ಯುಗದಲ್ಲಿ ಒತ್ತಡಯುಕ್ತ ಜೀವನವನ್ನು ನಾವು ನಮ್ಮ ಅರಿವಿಗೆ ಬಂದೋ ಬಾರದೆಯೋ ಅದನ್ನು ಹಿಂಬಾಲಿಸಿಕೊಂಡು ಹೋಗುತ್ತಿದ್ದೇವೆ. ಕಾಲಿಗೆ ಚಕ್ರ ಕಟ್ಟಿಕೊಂಡು ಓಡಾಡುತ್ತಿದ್ದೇವೆ. ಸ್ವಲ್ಪ ಹೊತ್ತು ಸುಮ್ಮನೆ ಕುಳಿತು ಕಾಫಿ ಹೀರಲು ನಮ್ಮಲ್ಲಿ ಸಮಯವಿಲ್ಲ. ತಂದೆ-ತಾಯಿ, ಬಂಧು- ಬಳಗದೊಂದಿಗೆ ಹತ್ತಿರದಿಂದ ಮಾತ ನಾಡಿಸಲು ನಮ್ಮ ಉದ್ಯೋಗ ಬಿಡುತ್ತಿಲ್ಲ. ಮೊಬೈಲ್ನಲ್ಲಿ ನಾವು ಗಂಟೆಗಟ್ಟಲೆ ವ್ಯವಹರಿ ಸುತ್ತೇವೆ. ಆದರೆ ನಮ್ಮ ಮಕ್ಕಳ ಜತೆ, ಅವರ ಆಸಕ್ತಿ-ಅಭಿರುಚಿಗಳೊಂದಿಗೆ ಬೆರೆಯುವ ಆಸ್ಥೆ ನಮಗಿಲ್ಲ. ಅವರ ಅನುಭವಗಳನ್ನು ನಮ್ಮೊಡನೆ ಹಂಚಿಕೊಳ್ಳಲು ಬಿಡುತ್ತಿಲ್ಲ ನಾವು. ನಮಗೆ ಒಂದು ನಿಮಿಷ ಪ್ರಾರ್ಥಿಸಲು, ಧ್ಯಾನಿಸಲು ಮನಸ್ಸಿಲ್ಲ, ವ್ಯವಧಾನವಿಲ್ಲ. ಎಲ್ಲಕ್ಕಿಂತ ಮುಖ್ಯ ವಾಗಿ ಸಮಯವಿಲ್ಲ. https://ainlivenews.com/dolly-enters-married-life-the-film-fraternity-wishes-the-newlyweds-all-the-best/ ಇಂದಿನ ವೇಗದ ಜಗತ್ತಿನಲ್ಲಿ ಪ್ರತಿಯೊಬ್ಬರು ತುಂಬಾ ಒತ್ತಡವನ್ನು ಹೊಂದಿದ್ದಾರೆ. ಇವರು ಬೆಳಗ್ಗೆ ಎದ್ದಾಗಲಿಂದ ರಾತ್ರಿ ಮಲಗುವವರೆಗೂ ಮನೆಕೆಲಸಗಳು, ಕಚೇರಿಯ ಉದ್ವಿಗ್ನತೆಗಳು ಮತ್ತು ಕೌಟುಂಬಿಕ ಸಮಸ್ಯೆಗಳನ್ನು ನಿರ್ವಹಿಸಲು ಹೆಣಗಾಡುತ್ತಿದ್ದಾರೆ. ಅನೇಕ ಮಂದಿ ಒತ್ತಡವನ್ನು ಆತಂಕ ಮತ್ತು ನಿದ್ರಾಹೀನತೆ ನಡುವೆ ಸಂಬಂಧವಿದೆ ಎಂದು ಹೇಳುತ್ತಾರೆ. ಆದರೆ ಒತ್ತಡವು ನಮ್ಮ ದೇಹದಲ್ಲಿ…
ಜನಪ್ರಿಯ ನಟ ಡಾಲಿ ಧನಂಜಯ ಅವರು ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಡಾಕ್ಟರ್ ಧನ್ಯತಾ ಜೊತೆ ಅವರ ಮದುವೆ ನೆರವೇರಿದೆ. ಬಾಳ ಬಂಧನಕ್ಕೆ ಒಳಗಾಗಿರುವ ಧನ್ಯತಾ ಹಾಗೂ ಡಾಲಿ ಧನಂಜಯ ಅವರಿಗೆ ಎಲ್ಲರೂ ಅಭಿನಂದನೆ ತಿಳಿಸುತ್ತಿದ್ದಾರೆ. https://ainlivenews.com/you-are-bjps-cheerleader-modi-siddaramaiah-sarcastically-mocks-hdd/ ಆ್ಯಕ್ಟರ್ ಡಾಲಿ ಧನಂಜಯ್ ಹಾಗೂ ಡಾಕ್ಟರ್ ಧನ್ಯತಾ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದು, ಸ್ಯಾಂಡಲ್ವುಡ್ನ ಸ್ಟಾರ್ ಬಳಗ ಮದುವೆಗೆ ಆಗಮಿಸಿ ಶುಭ ಕೋರಿದೆ. ಮೈಸೂರಿನ ವಸ್ತುಪ್ರದರ್ಶನ ಮೈದಾನದಲ್ಲಿ ಆ್ಯಕ್ಟರ್-ಡಾಕ್ಟರ್ ಮದುವೆ ಅದ್ದೂರಿಯಾಗಿ ನೆರವೇರಿದ್ದು, ಸಿನಿರಂಗದ ನಟ-ನಟಿಯರು ಆಗಮಿಸಿ, ಧನಂಜಯ ಹಾಗೂ ಧನ್ಯತಾ ಜೋಡಿಗೆ ವಿಶ್ ಮಾಡಿದ್ದಾರೆ. ಡಾಲಿ ಮದುವೆಗೆ ಆಗಮಿಸಿದ ಸ್ಯಾಂಡಲ್ವುಡ್ ಕ್ವೀನ್ ರಮ್ಯಾ ನೇರಳೆ ಬಣ್ಣದ ಸೀರೆಯಲ್ಲಿ ಮಿಂಚುತ್ತಿದ್ದು, ಡಾಲಿಯನ್ನು ತಬ್ಬಿಕೊಂಡು ಶುಭಹಾರೈಸಿದರು. ಇನ್ನೂ ನಟ ಶಿವರಾಜಕುಮಾರ್, ಕಾಂತಾರ ಖ್ಯಾತಿಯ ಸಪ್ತಮಿ ಗೌಡ, ದೊಡ್ಡಣ್ಣ, ತರುಣ್ ಸುಧೀರ್-ಸೋನಲ್, ವಸಿಷ್ಠ ಸಿಂಹ, ಸಾಧು ಕೋಕಿಲ, ಯುವರಾಜ ಕುಮಾರ್, ವಿನಯ್ ರಾಜ್, ಬಿಗ್ಬಾಸ್ ಖ್ಯಾತಿಯ ದಿವ್ಯ ಉರುಡುಗ ಮದುವೆಗೆ ಬಂದು ಜೋಡಿಗೆ ವಿಶ್ ಮಾಡಿದ್ದಾರೆ ಗೋಲ್ಡನ್ ಬಣ್ಣದ…