ಜನಪ್ರಿಯ ನಟ ಡಾಲಿ ಧನಂಜಯ ಅವರು ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಡಾಕ್ಟರ್ ಧನ್ಯತಾ ಜೊತೆ ಅವರ ಮದುವೆ ನೆರವೇರಿದೆ. ಬಾಳ ಬಂಧನಕ್ಕೆ ಒಳಗಾಗಿರುವ ಧನ್ಯತಾ ಹಾಗೂ ಡಾಲಿ ಧನಂಜಯ ಅವರಿಗೆ ಎಲ್ಲರೂ ಅಭಿನಂದನೆ ತಿಳಿಸುತ್ತಿದ್ದಾರೆ. https://ainlivenews.com/you-are-bjps-cheerleader-modi-siddaramaiah-sarcastically-mocks-hdd/ ಆ್ಯಕ್ಟರ್ ಡಾಲಿ ಧನಂಜಯ್ ಹಾಗೂ ಡಾಕ್ಟರ್ ಧನ್ಯತಾ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದು, ಸ್ಯಾಂಡಲ್ವುಡ್ನ ಸ್ಟಾರ್ ಬಳಗ ಮದುವೆಗೆ ಆಗಮಿಸಿ ಶುಭ ಕೋರಿದೆ. ಮೈಸೂರಿನ ವಸ್ತುಪ್ರದರ್ಶನ ಮೈದಾನದಲ್ಲಿ ಆ್ಯಕ್ಟರ್-ಡಾಕ್ಟರ್ ಮದುವೆ ಅದ್ದೂರಿಯಾಗಿ ನೆರವೇರಿದ್ದು, ಸಿನಿರಂಗದ ನಟ-ನಟಿಯರು ಆಗಮಿಸಿ, ಧನಂಜಯ ಹಾಗೂ ಧನ್ಯತಾ ಜೋಡಿಗೆ ವಿಶ್ ಮಾಡಿದ್ದಾರೆ. ಡಾಲಿ ಮದುವೆಗೆ ಆಗಮಿಸಿದ ಸ್ಯಾಂಡಲ್ವುಡ್ ಕ್ವೀನ್ ರಮ್ಯಾ ನೇರಳೆ ಬಣ್ಣದ ಸೀರೆಯಲ್ಲಿ ಮಿಂಚುತ್ತಿದ್ದು, ಡಾಲಿಯನ್ನು ತಬ್ಬಿಕೊಂಡು ಶುಭಹಾರೈಸಿದರು. ಇನ್ನೂ ನಟ ಶಿವರಾಜಕುಮಾರ್, ಕಾಂತಾರ ಖ್ಯಾತಿಯ ಸಪ್ತಮಿ ಗೌಡ, ದೊಡ್ಡಣ್ಣ, ತರುಣ್ ಸುಧೀರ್-ಸೋನಲ್, ವಸಿಷ್ಠ ಸಿಂಹ, ಸಾಧು ಕೋಕಿಲ, ಯುವರಾಜ ಕುಮಾರ್, ವಿನಯ್ ರಾಜ್, ಬಿಗ್ಬಾಸ್ ಖ್ಯಾತಿಯ ದಿವ್ಯ ಉರುಡುಗ ಮದುವೆಗೆ ಬಂದು ಜೋಡಿಗೆ ವಿಶ್ ಮಾಡಿದ್ದಾರೆ ಗೋಲ್ಡನ್ ಬಣ್ಣದ…
Author: AIN Author
ಬೆಂಗಳೂರು:- ಪಕ್ಷ ರಾಜಕಾರಣವನ್ನು ಮೀರಿ, ಒಬ್ಬ ಮುತ್ಸದ್ದಿ ನಾಯಕನ ರೀತಿಯಲ್ಲಿ ಕನ್ನಡ-ಕನ್ನಡಿಗ-ಕರ್ನಾಟಕದ ಹಿತರಕ್ಷಣೆಗೆ ಮುಂದಾಗಬೇಕು ಎಂದು ಮಾಜಿ ಪ್ರಧಾನಿ HD ದೇವೇಗೌಡರಿಗೆ ಸಿದ್ದರಾಮಯ್ಯ ಸಲಹೆ ಕೊಟ್ಟಿದ್ದಾರೆ. https://ainlivenews.com/happy-birthday-to-darshan-vijayalakshmi-wishes-her-beloved-husband/ ಮಾಧ್ಯಮ ಪ್ರಕಟಣೆ ಮೂಲಕ ಟೀಕಿಸಿರುವ ಅವರು, ದೇವೇಗೌಡರು ಬಿಜೆಪಿ ಮತ್ತು ನರೇಂದ್ರ ಮೋದಿಯವರ ಚಿಯರ್ ಲೀಡರ್ ರೀತಿ ವರ್ತಿಸುತ್ತಿದ್ದಾರೆ ಎಂದು ವಿಷಾದದಿಂದ ಹೇಳಬೇಕಾಗಿದೆ ಎಂದರು. ಕೇಂದ್ರದಲ್ಲಿ ಯಾವ ಪಕ್ಷದ ಸರ್ಕಾರವಿದ್ದರೂ ನೀವು ಮುಲಾಜಿಗೆ ಬೀಳದೇ ಕರ್ನಾಟಕದ ಹಿತಾಸಕ್ತಿಯ ರಕ್ಷಣೆಯ ಪ್ರಶ್ನೆ ಎದುರಾದಾಗ ದನಿ ಎತ್ತುತ್ತಾ ಬಂದ್ದಿದ್ದೀರಿ. ಆ ಮುತ್ಸದ್ದಿ ದೇವೇಗೌಡರನ್ನು ಕಾಣಲು ಕನ್ನಡಿಗರು ಬಯಸುತ್ತಿದ್ದಾರೆ. ದೇವೇಗೌಡರೇ ದೈಹಿಕವಾಗಿ ನೀವು ಸ್ವಲ್ಪ ಕುಗ್ಗಿದಂತೆ ಕಂಡರೂ, ಮಾನಸಿಕವಾಗಿ ನೀವಿನ್ನೂ ದೃಢವಾಗಿದ್ದೀರಿ. ದಯವಿಟ್ಟು ಈಗಲಾದರೂ ಪಕ್ಷ ರಾಜಕಾರಣವನ್ನು ಮೀರಿ, ಒಬ್ಬ ಮುತ್ಸದ್ದಿ ನಾಯಕನ ರೀತಿಯಲ್ಲಿ ಕನ್ನಡ-ಕನ್ನಡಿಗ-ಕರ್ನಾಟಕದ ಹಿತರಕ್ಷಣೆಗೆ ಮುಂದಾಗಬೇಕು ಎಂದು ಹೇಳಿದರು. ಮಾಜಿ ಪ್ರಧಾನಿ ದೇವೇಗೌಡರು, ಕೇಂದ್ರ ಸರ್ಕಾರದ ವಕ್ತಾರರಂತೆ, ಪಕ್ಷಪಾತಿಯಾಗಿ ವರ್ತಿಸುತ್ತಿದ್ದಾರೆ. ಕೇಂದ್ರ ಸಂಪುಟದಲ್ಲಿ ಮಗನನ್ನು ಸಚಿವನನ್ನಾಗಿ ಮಾಡಲು ಇಷ್ಟೊಂದು ರಾಜಿ ಮಾಡಿಕೊಳ್ಳುವ ಅಗತ್ಯ ಇತ್ತಾ?…
ಬೆಂಗಳೂರು:- ಚಾಲೆಂಜಿಂಗ್ ಸ್ಟಾರ್ ನಟ ದರ್ಶನ್ ಗೆ ಬರ್ತ್ಡೇ ಸಂಭ್ರಮ ಮನೆ ಮಾಡಿದ್ದು, ಪತಿ ಜೊತೆಗಿನ ಫೋಟೊ ಹಂಚಿಕೊಂಡು ವಿಜಯಲಕ್ಷ್ಮೀ ವಿಶ್ ಮಾಡಿದ್ದಾರೆ. https://ainlivenews.com/is-the-ice-in-your-freezer-at-home-getting-so-hard-so-how-do-you-prevent-this/ ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ದರ್ಶನ್ ಜೈಲು ಸೇರಿದ್ದ ಸಂದರ್ಭದಿಂದಲೂ ಜೊತೆಯಾಗಿದ್ದ ನಟ ಧನ್ವೀರ್ ಸಹ ಶುಭಾಶಯ ತಿಳಿಸಿದ್ದಾರೆ. ಧನ್ವೀರ್ ದರ್ಶನ್ ಜೊತೆಗಿನ ಫೋಟೋವನ್ನು ಇನ್ಸ್ಟಾಗ್ರಾಂನಲ್ಲಿ ಶೇರ್ ಮಾಡಿ, ಸಂತೋಪ ಮತ್ತು ಯಶಸ್ಸು ಸದಾ ನಿಮ್ಮ ಜೊತೆಗಿರಲಿ. ನೀವು ನಡೆವ ಪ್ರತಿ ಹೆಜ್ಜೆಯೂ ಯಶಸ್ಸಿನ ಪಥವಾಗಲಿ. ಹುಟ್ಟುಹಬ್ಬದ ಶುಭಾಶಯಗಳು ಅಣ್ಣ (ಬಾಸ್) #ಉಸಿರಿರುವವರೆಗೂ ಇರ್ತಿವಿ ನಿಮ್ಮಿಂದೆ ಎಂದು ಬರೆದುಕೊಂಡಿದ್ದಾರೆ. ನಟ ಚಿಕ್ಕಣ್ಣ ಸಹ ತಮ್ಮ ಇನ್ಸ್ಟಾ ಖಾತೆಯಲ್ಲಿ, ಹುಟ್ಟುಹಬ್ಬದ ಶುಭಾಶಯಗಳು ಸರ್ ಎಂದು ಬರೆದುಕೊಂಡು ದರ್ಶನ್ ಜೊತೆಗಿನ ಫೋಟೋ ಹಂಚಿಕೊಂಡಿದ್ದಾರೆ.
ರೆಫ್ರಿಜರೇಟರ್ ಅನ್ನು ಪ್ರತಿಯೊಬ್ಬರ ಮನೆಯಲ್ಲೂ ಬಳಸಲಾಗುತ್ತದೆ. ಅದರಲ್ಲೂ ಬೇಸಿಗೆಯಲ್ಲಂತೂ ಫ್ರಿಡ್ಜ್ನ ಬಳಕೆ ಹೆಚ್ಚು. ತಂಪಾಗಿಸುವ ನೀರಿನಿಂದ ಹಿಡಿದು ಪಾನೀಯಗಳಿಗಾಗಿ ಐಸ್ ಕ್ಯೂಬ್ಗಳನ್ನು ತಯಾರಿಸುವುದು ಮತ್ತು ಆಹಾರವನ್ನು ತಾಜಾವಾಗಿಡಲು ರೆಫ್ರಿಜರೇಟರ್ನ್ನು ಹೆಚ್ಚಾಗಿ ಬಳಸಲಾಗುತ್ತದೆ. ಆದರೆ ಕೆಲವೊಮ್ಮೆ ರೆಫ್ರಿಜರೇಟರ್ ದೋಷಗಳಿಂದಾಗಿ ಹೆಚ್ಚು ಐಸ್ನ್ನು ಉತ್ಪತ್ತಿ ಮಾಡಲು ಪ್ರಾರಂಭಿಸುತ್ತದೆ. ಇದರಿಂದಾಗಿ ಫ್ರೀಜರ್ನಲ್ಲಿ ಸ್ಥಳಾವಕಾಶದ ಕೊರತೆ ಉಂಟಾಗುತ್ತದೆ. ಇದು ಹೆಚ್ಚಾಗಿ ಹಳೆಯ ಫ್ರಿಡ್ಜ್ಗಳಲ್ಲಿ ನಡೆಯುತ್ತದೆ. ಆದರೆ ಕೆಲವೊಮ್ಮೆ ನಿರ್ಲಕ್ಷ್ಯದಿಂದ ಹೊಸ ಫ್ರಿಡ್ಜ್ ನಲ್ಲೂ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ. https://ainlivenews.com/big-shock-for-alcohol-lovers-oil-ban-in-this-area-from-april-1st/ ಪ್ರತಿಯೊಬ್ಬರ ಮನೆಯಲ್ಲೂ ಚಿಕ್ಕದೋ ದೊಡ್ಡದೋ ಫ್ರಿಜ್ ಇರುತ್ತದೆ. ಆದರೆ, ಅದನ್ನು ಹೇಗೆ ನಿರ್ವಹಿಸಬೇಕೆಂದು ಬಹಳಷ್ಟು ಜನರಿಗೆ ತಿಳಿದಿಲ್ಲ. ಸರಿಯಾಗಿ ಬಳಸದಿದ್ದರೆ ಫ್ರೀಜರ್ನಲ್ಲಿ ನೀರು ಐಸ್ ಆಗಿ ಜಮೆಯಾಗುತ್ತದೆ. ಇದನ್ನು ನಿರ್ಲಕ್ಷಿಸಿದರೆ ಫ್ರೀಜರ್ ಬಾಗಿಲು ತೆರೆಯುವುದು ಮತ್ತು ಮುಚ್ಚುವುದು ಕಷ್ಟವಾಗುತ್ತದೆ. ನಂತರ ಫ್ರಿಜ್ನ ಕಾರ್ಯಕ್ಷಮತೆಯೂ ಹಾಳಾಗುತ್ತದೆ. ಫ್ರಿಜ್ನಲ್ಲಿ ಐಸ್ ಜಮೆಯಾಗಲು ಕಾರಣಗಳು: 1. ಫ್ರಿಜ್ ಬಾಗಿಲು ಅಥವಾ ಗ್ಯಾಸ್ಕೆಟ್ ಹಾಳಾದರೆ ಫ್ರೀಜರ್ನಲ್ಲಿ ಐಸ್ ಜಮೆಯಾಗುತ್ತದೆ. ಗಾಳಿ ಒಳಗೆ ಹೋಗಿ…
ಮದ್ಯಪ್ರಿಯರಿಗೆ ಶಾಕಿಂಗ್ ಸುದ್ದಿ ಒಂದು ಹೊರ ಬಿದ್ದಿದ್ದು, ಏ.1 ರಿಂದ ಎಣ್ಣೆ ಬ್ಯಾನ್ ಮಾಡಲಾಗುತ್ತಿದೆ. https://ainlivenews.com/another-sexual-harassment-case-filed-against-television-actor-charith-balappa/ ಹೌದು, ಮಧ್ಯಪ್ರದೇಶ ಸರ್ಕಾರ ರಾಜ್ಯದ 19 ಪವಿತ್ರ ಸ್ಥಳಗಳಲ್ಲಿ ಮದ್ಯ ನಿಷೇಧ ಮಾಡಲು ನಿರ್ಧರಿಸಲಾಗಿದ್ದು, ಕೆಲವೇ ದಿನಗಳಲ್ಲಿ ಈ ಆದೇಶ ಜಾರಿಗೆ ಬರಲು ನಿರ್ಧರಿಸಲಾಗಿದೆ. ಆದ್ದರಿಂದ ಮಧ್ಯಪ್ರದೇಶದ ಈ ಸ್ಥಳಗಳಲ್ಲಿ ಏಪ್ರಿಲ್ 1 ರಿಂದ ಮದ್ಯದಂಗಡಿಗಳು ಮುಚ್ಚಲ್ಪಡುತ್ತವೆ. ಇದಕ್ಕಾಗಿ ಈಗಾಗಲೇ ಅಧಿಸೂಚನೆಯನ್ನೂ ಹೊರಡಿಸಲಾಗಿದೆ. ರಾಜ್ಯ ಮುಖ್ಯಮಂತ್ರಿ ಮೋಹನ್ ಯಾದವ್ ಇತ್ತೀಚೆಗೆ ಮಧ್ಯ ಪ್ರದೇಶದ 19 ಪವಿತ್ರ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಸಂಪೂರ್ಣ ಮದ್ಯ ನಿಷೇಧ ಮಾಡುವುದಾಗಿ ಘೋಷಿಸಿದರು. ಈ ನಿರ್ಧಾರವನ್ನು ತಕ್ಷಣ ಜಾರಿಗೆ ತರಲು, ಶುಕ್ರವಾರ ರಾಜಭವನದಿಂದ ಅಧಿಸೂಚನೆಯನ್ನು ಸಹ ಹೊರಡಿಸಲಾಗಿದೆ. ಅದರಂತೆ, ರಾಜ್ಯದ 13 ನಗರ ಮತ್ತು 6 ಗ್ರಾಮೀಣ ಸ್ಥಳಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಮದ್ಯದಂಗಡಿಗಳು ಏಪ್ರಿಲ್ 1 ರಿಂದ ಮುಚ್ಚಲ್ಪಡುತ್ತವೆ ಎನ್ನಲಾಗಿದೆ ರಾಜಭವನ ಹೊರಡಿಸಿದ ಅಧಿಸೂಚನೆಯ ಪ್ರಕಾರ, ಉಜ್ಜಯಿನಿ ಮಹಾನಗರ ಪಾಲಿಕೆ, ಓಂಕಾರೇಶ್ವರ ನಗರ ಪಂಚಾಯತ್, ಮಹೇಶ್ವರ ನಗರ ಪಂಚಾಯತ್, ಮಂಡ್ಲೇಶ್ವರ…
ಬೆಂಗಳೂರು:- ಕಿರುತೆರೆ ನಟ ಚರಿತ್ ಬಾಲಪ್ಪ ವಿರುದ್ಧ ಮತ್ತೊಂದು ಲೈಗಿಂಕ ಕಿರುಕುಳ ಕೇಸ್ ದಾಖಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಎಫ್.ಐ.ಆರ್ ದಾಖಲಾಗಿದೆ. https://ainlivenews.com/theft-of-gold-in-jewelery-given-to-hallmark-two-khadeems-in-police-trap/ ಬ್ಲಾಕ್ ಮೇಲ್ ಮಾಡಿ ಹಣ ಸುಲಿಗೆ ಮಾಡಿದ್ದಲ್ಲದೆ ಲೈಗಿಂಕ ಕಿರುಕುಳ ನೀಡಿದ್ದಾಗಿ ಮಹಿಳೆ ದೂರು ನೀಡಿದ್ದಾರೆ. ಕಿರುತೆರೆ ನಟ ಚರಿತ್ ಬಾಲಪ್ಪ ಅಲಿಯಾಸ್ ಧ್ರುವಂತ್ ವಿರುದ್ಧ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಬ್ಲಾಕ್ಮೇಲ್ ಮಾಡಿ ಹಣ ಸುಲಿಗೆ, ಲೈಂಗಿಕ ಕಿರುಕುಳ ನೀಡಿದ್ದಾಗಿ ದೂರು ನೀಡಲಾಗಿತ್ತು. ದೂರು ದಾಖಲಾಗ್ತಿದ್ದಂತೆ ಚರಿತ್ ಬಾಲಪ್ಪ ನಾಪತ್ತೆಯಾಗಿದ್ದಾರೆ. ಈ ಹಿಂದೆಯೂ ಲೈಂಗಿಕ ದೌರ್ಜನ್ಯ ಆರೋಪದಲ್ಲಿ ನಟ ಜೈಲು ಸೇರಿದ್ದರು. ಸೀರಿಯಲ್ ಶೂಟಿಂಗ್ ನೋಡಲು ಹೋದಾಗ ಸಂತ್ರಸ್ತೆಗೆ ಚರಿತ್ ಪರಿಚಯವಾಗಿತ್ತು. ಬಳಿಕ ಚರಿತ್ ಒತ್ತಾಯದ ಮೇರೆಗೆ ಇಬ್ಬರ ನಡುವೆ ಪ್ರೀತಿ ಶುರುವಾಯಿತು. ಬಳಿಕ ಸಂತ್ರಸ್ತೆ ಬಿಟ್ಟು ಚರಿತ್ ಬೇರೆಯವರ ಮದುವೆಯಾಗಿದ್ದ. ಮದುವೆಯಾಗಿದ್ದರೂ ದೈಹಿಕ ಸಂಪರ್ಕ ಇಟ್ಟುಕೊಳ್ಳಲು ಸಂತ್ರಸ್ತೆಗೆ ಒತ್ತಾಯ ಮಾಡಿದ್ದ. ನಿರಾಕರಿಸಿದಾಗ ಸಂತ್ರಸ್ತೆ ಮನೆ, ಕೆಲಸ ಮಾಡುವ…
ಬೆಂಗಳೂರು : sಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಆಸ್ತಿದಾರರಿಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯು ಶಾಕ್ವೊಂದನ್ನು ಕೊಟ್ಟಿತ್ತು. ಬೆಂಗಳೂರಿನಲ್ಲಿ ಆಸ್ತಿದಾರರು ಶಾಕ್ ಆಗುವಂತಹ ಆದೇಶವೊಂದನ್ನು ಮಾಡಿತ್ತು. ಆದರೆ ಈ ಶಾಕ್ ಎಲ್ಲಾ ಆಸ್ತಿದಾರರಿಗೂ ಅಲ್ಲ ಎನ್ನಲಾಗಿತ್ತು. ಆದರೆ ಇದೀಗ ಬೆಂಗಳೂರಿನಲ್ಲಿ ಎ- ಖಾತಾ ಇರುವ ಬರೋಬ್ಬರಿ 54,000 ಸಾವಿರ ಆಸ್ತಿದಾರರಿಗೂ ಸಹ ಸಂಕಷ್ಟ ಎದುರಾಗಿದೆ. ಎ- ಖಾತಾ ಇದ್ದರೆ ಯಾವುದೇ ಸಮಸ್ಯೆ ಇಲ್ಲ ಎಂದುಕೊಂಡವರು ಸಹ ಇದೀಗ ಸಂಕಷ್ಟಕ್ಕೆ ಸಿಲುಕಿದ್ದಾರೆ. https://ainlivenews.com/parishad-mla-t-saravan-participated-in-the-jds-membership-registration-program/ ಬೆಂಗಳೂರಿನಲ್ಲಿ ಅಂದಾಜು 25 ಲಕ್ಷಕ್ಕೂ ಹೆಚ್ಚು ಆಸ್ತಿಗಳಿವೆ. ಹೊಸದಾಗಿ ಪ್ರತಿ ವರ್ಷ ಬೆಂಗಳೂರಿನಲ್ಲಿ ಆಸ್ತಿಗಳ ಸೇರ್ಪಡೆಯಾಗುತ್ತಿವೆ. ಈ ಬಾರಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಹಾಗೂ ರಾಜ್ಯ ಸರ್ಕಾರವು ಆಸ್ತಿಗೆ ಸಂಬಂಧಿಸಿದಂತೆ ಕಠಿಣ ಕಾನೂನು ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ. ಯಾವುದೇ ಖಾತಾ ಹೊಂದಿದ್ದರೂ ಕಡ್ಡಾಯವಾಗಿ ಇ – ಖಾತಾ ಮಾಡಿಸಿಕೊಳ್ಳಬೇಕು ಎಂದು ಈಗಾಗಲೇ ಸೂಚನೆ ನೀಡಲಾಗಿದೆ. ಅದು ಅಲ್ಲದೆ ಯಾರೆಲ್ಲ ಅಕ್ರಮವಾಗಿ ಎ – ಖಾತಾ ಮಾಡಿಸಿಕೊಂಡಿದ್ದಾರೆ ಎಂದು ಪರಿಶೀಲನೆ ಮಾಡುತ್ತಿದ್ದು,…
ಬೆಂಗಳೂರು:- CM ಕಚೇರಿಯ ಟಿಪ್ಪಣಿ ನಕಲು ಮಾಡಿ ವಂಚನೆ ಮಾಡಿದ್ದ ಆರೋಪಿ ಅರೆಸ್ಟ್ ಮಾಡಲಾಗಿದೆ. https://ainlivenews.com/anekal-police-raid-rowdy-sheeters-residence-in-the-early-hours-of-the-morning/ ವಿಧಾನಸೌಧ ಠಾಣೆ ಪೊಲೀಸರಿಂದ ರಾಘವೇಂದ್ರನನ್ನು ಬಂಧಿಸಲಾಗಿದೆ. ಕೆಎಎಸ್ ಅಧಿಕಾರಿಯೊಬ್ಬರಿಗೆ ಪೋಸ್ಟಿಂಗ್ ನೀಡುವಂತೆ ಆರೋಪಿ ರಾಘವೇಂದ್ರ, ಮುಖ್ಯಮತ್ರಿಗಳ ಕಚೇರಿ ಹೆಸರಿನಲ್ಲಿ ನಕಲಿ ಟಿಪ್ಪಣಿ ಸೃಷ್ಟಿಸಿದ್ದನು. ಈ ಬಗ್ಗೆ ವಿಧಾನಸೌಧದ ಸಚಿವಾಲಯ ದೂರು ನೀಡಿತ್ತು. ದೂರು ದಾಖಲಿಸಿಕೊಂಡು ತನಿಖೆ ನಡೆಸಿದ ವಿಧಾನಸೌಧ ಠಾಣೆ ಪೊಲೀಸರು ಆರೋಪಿ ರಾಘವೇಂದ್ರನನ್ನು ಅರೆಸ್ಟ್ ಮಾಡಿದ್ದಾರೆ. ಆರೋಪಿ ರಾಘವೇಂದ್ರ ಈ ಹಿಂದೆ ಹಲವು ಶಾಸಕರ ಬಳಿ ಪಿಎ ಆಗಿ ಕೆಲಸ ಮಾಡಿದ್ದನು ಎಂದು ತಿಳಿದುಬಂದಿದೆ. ಆರೋಪಿ ರಾಘ್ರವೇಂದ್ರ ವಿರುದ್ಧ ಪೋಸ್ಟಿಂಗ್ ಕೊಡಿಸೋದಾಗಿ ಹಣ ಪಡೆದು ವಂಚಿಸಿದ ಆರೋಪವೂ ಕೇಳಿಬಂದಿದೆ
ಆನೇಕಲ್:- ಬೆಳ್ಳಂಬೆಳಗ್ಗೆ ರೌಡಿ ಶೀಟರ್ ಗಳ ಮನೆ ಮೇಲೆ ಪೊಲೀಸರು ದಾಳಿ ಮಾಡಿದ್ದಾರೆ. ಬೆಂಗಳೂರು ಹೊರವಲಯಗ ಜಿಗಣಿ ಪೊಲೀಸರಿಂದ ರೌಡಿ ಶೀಟರ್ ಗಳ ಮನೆ ಮೇಲೆ ದಾಳಿ ನಡೆದಿದೆ. https://ainlivenews.com/job-fair-held-in-bengaluru-hundreds-of-candidates-secured-jobs/ ಇನ್ಸ್ ಪೆಕ್ಟರ್ ಮಂಜುನಾಥ್ ನೇತೃತ್ವದ ತಂಡದಿಂದ ದಾಳಿ ನಡೆದು ಪರಿಶೀಲಿಸಿದ್ದಾರೆ. ಹೆಚ್ಚು ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿದ್ದ ರೌಡಿ ಶೀಟರ್ ಗಳ ಮನೆಯಲ್ಲಿ ಖಾಕಿ ತಲಾಶ್ ನಡೆಸಿದೆ. ಪೊಲೀಸರಿಂದ ರೌಡಿ ಶೀಟರ್ ಗಳ ಮನೆಗಳ ಸರ್ಚಿಂಗ್ ನಡೆದಿದ್ದು, ಕೆಲವು ರೌಡಿ ಶೀಟರ್ ಗಳ ಮನೆಗಳಲ್ಲಿ ಮಾರಕಸ್ತ್ರಗಳು ಪತ್ತೆಯಾಗಿದೆ. ಕೂಡಲೇ ಆರು ಮಂದಿ ರೌಡಿ ಶೀಟರ್ ಗಳನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಠಾಣೆಗೆ ಕರೆತಂದು ಅವರನ್ನು ಪೊಲೀಸರು, ವಿಚಾರಣೆ ಮಾಡುತ್ತಿದ್ದಾರೆ. ಅಪರಾಧ ಕೃತ್ಯಗಳಲ್ಲಿ ಭಾಗಿಯಾಗದಂತೆ ಖಡಕ್ ಎಚ್ಚರಿಕೆ ಕೊಟ್ಟಿದ್ದಾರೆ. ಜಿಗಣಿ ಇನ್ಸ್ ಪೆಕ್ಟರ್ ಮಂಜುನಾಥ್ ಅವರು ರೌಡಿಗಳ ಬೆವರಿಳಿಸಿದ್ದಾರೆ.
ಬೆಂಗಳೂರು:- ಕೆಲಸ ಹುಡುಕಿ ಸುಸ್ತಾದವರು, ಓದು ಮುಗಿಸಿ ಕೆಲಸ ಹುಡುಕಲು ಹೊರಟವರಿಗೆ ಪ್ರೆಸಿಡೆನ್ಸಿ ಫೌಂಡೇಷನ್ ನಡೆಸಿದ ಉದ್ಯೋಗ ಮೇಳ ಹೊಸ ಆಸೆ ಚಿಗುರಿಸುವ ಕೆಲಸ ಮಾಡಿದೆ. ರಾಷ್ಟ್ರೀಯ ಕೌಶಲ್ಯ ಅಭಿವೃದ್ಧಿ ನಿಗಮ ಹಾಗೂ ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಆಯೋಗದ ಸಹಯೋಗದಲ್ಲಿ ನಡೆದ ಬೃಹತ್ ಉದ್ಯೋಗ ಮೇಳದ ಮಾಹಿತಿ ಇಲ್ಲಿದೆ. https://ainlivenews.com/a-man-who-was-surprised-to-hear-the-name-of-daba-passed-away/ ನಿರುದ್ಯೋಗಿ ಯುವಕ, ಯುವತಿಯರಿಗೆ ಉದ್ಯೋಗ ಸೃಷ್ಟಿಸುವ ಕೆಲಸ ಮಾಡುತ್ತಿರುವ ಪ್ರೆಸಿಡೆನ್ಸಿ ಫೌಂಡೇಷನ್ ಇಂದು ಮಿಲ್ಲರ್ಸ್ ರಸ್ತೆಯ ಈದ್ಗಾ ಮೈದಾನದಲ್ಲಿ ಬೃಹತ್ ಉದ್ಯೋಗ ಮೇಳ ಆಯೋಜಿಸಿತ್ತು. ರಾಷ್ಟ್ರೀಯ ಕೌಶಲ್ಯ ಅಭಿವೃದ್ಧಿ ನಿಗಮ ಹಾಗೂ ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಆಯೋಗದ ಸಹಯೋಗದಲ್ಲಿ ನಡೆದ ಬೃಹತ್ ಉದ್ಯೋಗಮೇಳದಲ್ಲಿ ನೂರಾರು ಉದ್ಯೋಗಾಂಕ್ಷಿಗಳು ಭಾಗಿಯಾಗಿದರು. ಸುಮಾರು 200ಕ್ಕೂ ಹೆಚ್ಚು ಕಂಪನಿಗಳು ಭಾಗವಹಿಸಿದ್ದ ಉದ್ಯೋಗ ಮೇಳದಲ್ಲಿ ಸಚಿವ ಜಮೀರ್ ಅಹ್ಮದ್ ಹಾಗೂ ಮಾಜಿ ಸಚಿವ ಅಶ್ವಥ್ ನಾರಾಯಣ ಭಾಗಿಯಾಗಿ ಉದ್ಯೋಗಾಂಕ್ಷಿಗಳಿಗೆ ಶುಭ ಹಾರೈಸಿದರು