Author: AIN Author

ಮಹಿಳೆಯರಿಗೆ ಸ್ವಯಂ ಉದ್ಯೋಗ ಉತ್ತೇಜಿಸಲು, ಆರ್ಥಿಕ ಸ್ವಾವಲಂಬನೆಯನ್ನು ಸಾಧಿಸಲು ಉತ್ತಮ ಅವಕಾಶವನ್ನು ಒದಗಿಸಲು SBI ಮುಂದಾಗಿದೆ. ವ್ಯಾಪಾರ ಕ್ಷೇತ್ರದಲ್ಲಿ ಹೊಸತನವನ್ನು ಆಶಿಸುವ ಮಹಿಳೆಯರಿಗೆ ನಾವು ಹೇಳುತ್ತಿರುವ ಈ ಯೋಜನೆ ಅತ್ಯಂತ ಪ್ರಯೋಜನಕಾರಿ ಎಂದು ಹೇಳಬಹುದು. https://ainlivenews.com/do-you-know-when-the-19th-installment-of-pm-kisan-will-be-credited-to-the-farmers-accounts-here-is-the-answer/ ದೇಶದ ಅತಿದೊಡ್ಡ ಸಾರ್ವಜನಿಕ ವಲಯದ ಬ್ಯಾಂಕ್ ಆಗಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ವಿಶೇಷವಾಗಿ ಮಹಿಳಾ ಉದ್ಯಮಿಗಳನ್ನು ಪ್ರೋತ್ಸಾಹಿಸಲು ಹೊಸ ಯೋಜನೆಯನ್ನು ಪರಿಚಯಿಸಿದೆ. ಈ ಯೋಜನೆಗೆ ಎಸ್‌ಬಿಐ ಸ್ತ್ರೀ ಶಕ್ತಿ ಸಾಲ ಯೋಜನೆ ಎಂದು ಹೆಸರಿಸಲಾಗಿದೆ. ಈ ಯೋಜನೆಯು ಮಹಿಳೆಯರಿಗೆ ರೂ. 24 ಲಕ್ಷದವರೆಗೆ ಆರ್ಥಿಕ ನೆರವು ನೀಡಲಾಗುವುದು. ನೀವು ಕೂಡ ಈ ಯೋಜನೆಯ ಲಾಭವನ್ನು ಪಡೆದುಕೊಳ್ಳಬಹುದು. ಯೋಜನೆಯ ವೈಶಿಷ್ಟ್ಯಗಳು: ಈ ಯೋಜನೆಯ ಮೂಲಕ ಮಹಿಳಾ ಉದ್ಯಮಿಗಳು ಕಡಿಮೆ ಬಡ್ಡಿದರದಲ್ಲಿ ಸಾಲವನ್ನು ಪಡೆಯಬಹುದು. ರೂ. 2 ಲಕ್ಷಕ್ಕಿಂತ ಕಡಿಮೆ ಸಾಲಕ್ಕೆ 0.5% ಹೆಚ್ಚುವರಿ ಬಡ್ಡಿ ಸಬ್ಸಿಡಿ ಲಭ್ಯವಿದೆ. ರೂ. 10 ಲಕ್ಷಕ್ಕಿಂತ ಕಡಿಮೆ ಸಾಲಗಳಿಗೆ ಯಾವುದೇ ಮೇಲಾಧಾರ ಅಗತ್ಯವಿಲ್ಲ. ಈ ಯೋಜನೆಯ ಸಾಲಗಳ ಮೇಲೆ…

Read More

ಬೆಂಗಳೂರು:- ಹಸುಗಳ ಕೆಚ್ಚಲು ಕೊಯ್ದು ಬೆಂಗಳೂರಿನಲ್ಲಿ ಕಿಡಿಗೇಡಿಗಳು ವಿಕೃತಿ ಮೆರೆದಿದ್ದರು. ಇದೇ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಬಿಜೆಪಿ, ಇದೆಲ್ಲಾ ಸರ್ಕಾರದ ವೈಫಲ್ಯ ಎಂದು ಆರೋಪಿಸಿ ಜಿ. ಪರಮೇಶ್ವರ್ ಮನೆಮುಂದೆ ಪ್ರತಿಭಟನೆಗೆ ಕರೆ ಕೊಟ್ಟಿದೆ. https://ainlivenews.com/power-cut-tomorrow-in-these-areas-of-bangalore-here-is-the-list-of-areas-where-the-current-will-be-cut/ ತುಮಕೂರಿನ ಹೆಗ್ಗೆರೆ ಬಳಿಯ ಸಿದ್ದಾರ್ಥ ನಗರದಲ್ಲಿರುವ ಪರಮೇಶ್ವರ್ ಮನೆಮುಂದೆ ಬೆಳಗ್ಗೆ 10:30ಕ್ಕೆ ಪ್ರತಿಭಟನೆ ನಡೆಸಲು ಜಿಲ್ಲಾ ಬಿಜೆಪಿ ಘಟಕ ಕರೆ ನೀಡಿದೆ. ಪ್ರತಿಭಟನೆ ಹಿನ್ನೆಲೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಭದ್ರತೆ ಒದಗಿಸಲಾಗಿದೆ. ಒಬ್ಬರು ಎಎಸ್‌ಪಿ, ಇಬ್ಬರು ಡಿವೈಎಸ್‌ಪಿ, ನೇತೃತ್ವದಲ್ಲಿ ಭದ್ರತೆ ನೀಡಿದ್ದು, ಸುಮಾರು ನೂರೈವತ್ತಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿದೆ.

Read More

ಬೆಂಗಳೂರು:- ಸಿಲಿಕಾನ್ ಸಿಟಿಯಲ್ಲಿ ತುರ್ತು ಕಾಮಗಾರಿ ಹಿನ್ನೆಲೆ ರಾಜಧಾನಿ ಬೆಂಗಳೂರಿನ ವಿವಿಧ ಪ್ರದೇಶಗಳಲ್ಲಿ ನಾಳೆ ವಿದ್ಯುತ್‌ ಕಡಿತವಾಗಲಿದೆ. https://ainlivenews.com/lakshmi-hebbalkar-accident-case-government-driver-who-filed-a-complaint-against-the-truck-driver/ ರಾಜಧಾನಿ ಬೆಂಗಳೂರಿನ ನಾಗೇನಪಾಳ್ಯ, ಸತ್ಯನಗರ, ಗಜೇಂದ್ರನಗರ, ಎಸ್.ಕುಮಾರ್ ಲೇಔಟ್, ಆಂಧ್ರ ಬ್ಯಾಂಕ್ ರಸ್ತೆ, ಕುಕ್ಸನ್ ರಸ್ತೆ, ಡೇವಿಸ್ ರಸ್ತೆ, ಆಯಿಲ್ ಮಿಲ್ ರಸ್ತೆ, ಸದಾಶಿವ ದೇವಸ್ಥಾನ ರಸ್ತೆ, ಕಾಮನಹಳ್ಳಿ ಮುಖ್ಯರಸ್ತೆ, ಕೆ ಎಚ್ ಬಿ ಕಾಲೋನಿ, ಜೈಭಾರತ್ ನಗರ, ಸಿ.ಕೆ. ಗಾರ್ಡನ್‌, ಡಿ’ಕೋಸ್ಟಾ ಲೇಔಟ್, ಹಚಿನ್ಸ್ ರಸ್ತೆ, ಉತ್ತರ ರಸ್ತೆ, ವೀಲರ್ ರಸ್ತೆ, ಅಶೋಕ ರಸ್ತೆ, ಬಾಣಸವಾಡಿ ರೈಲು ನಿಲ್ದಾಣ ರಸ್ತೆ, ಮರಿಯಮ್ಮ ಟೆಂಪಲ್ ಸ್ಟ್ರೀಟ್, ಲಾಜರ್ ಲೇಔಟ್, ಹಚಿನ್ಸ್ ರಸ್ತೆ, ಉತ್ತರ ರಸ್ತೆ, ವೀಲರ್ ರಸ್ತೆ, ಅಶೋಕ ರಸ್ತೆ, ಬಾಣಸವಾಡಿ ರೈಲು ನಿಲ್ದಾಣ ರಸ್ತೆ, ಮರಿಯಮ್ಮ ಟೆಂಪಲ್ ಸ್ಟ್ರೀಟ್, ಲಾಜರ್ ಲೇಔಟ್, ವಿವೇಕಾನಂದ ನಗರ, ಕ್ಲೈನ್ ರಸ್ತೆ, ಟೆಲಿಫೋನ್ ಎಕ್ಸ್‌ಚೇಂಜ್ ರಸ್ತೆ, ಗ್ಯಾಂಗ್‌ಮೆನ್ ಕ್ವರ‍್ಟರ‍್ಸ್, ಹಚಿನ್ಸ್ ರಸ್ತೆ ಪರ‍್ಕ್ ರಸ್ತೆ, ದೇಶೀಯನಗರ ಸ್ಲಂ, 5ನೇ ಮತ್ತು 6ನೇ ಅಡ್ಡ ಹಚಿನ್ಸ್…

Read More

ಬೆಳಗಾವಿ:- ಸಂಕ್ರಾಂತಿ ಹಬ್ಬದ ದಿನವೇ ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಕಾರು ಭೀಕರ ಅಪಘಾತಕ್ಕೀಡಾಗಿದ್ದು, ಅದೃಷ್ಟವಶಾತ್ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆದರೆ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಗಂಭೀರ ಗಾಯವಾಗಿದ್ದು, ಇನ್ನೂ ಒಂದು ತಿಂಗಳ ಗೃಹ ವಿಶ್ರಾಂತಿ ಅವಶ್ಯಕತೆ ಇದೆ ಎಂದು ವೈದ್ಯರು ಈಗಾಗಲೇ ತಿಳಿಸಿದ್ದಾರೆ. https://ainlivenews.com/car-drivers-perversion-on-stray-dogs-oh-man-you-are-so-cruel/ ಇನ್ನೂ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಬೆನ್ನುಮೂಳೆ ಮುರಿತ ಕೇಸ್ ಗೆ ಸಂಬಂಧಪಟ್ಟಂತೆ ಟ್ರಕ್ ಚಾಲಕನ ವಿರುದ್ಧ ಹಿಟ್ ಅಂಡ್ ರನ್ ಕೇಸ್ ದಾಖಲಾಗಿದೆ. ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರಯಾಣಿಸುತ್ತಿದ್ದ ಕಾರು ಅಪಘಾತವಾದ ಘಟನೆ ಸಂಬಂಧ ನಿನ್ನೆ ಕಾರು ಚಾಲಕನ ವಿರುದ್ಧ ದೂರು ದಾಖಲಾಗಿತ್ತು. ಅದರ ಬೆನ್ನಲ್ಲೇ ಇದೇ ಸರ್ಕಾರಿ ಚಾಲಕನು ಟ್ರಕ್ ವಾಹನ ಚಾಲಕನ ವಿರುದ್ಧ ದೂರು ನೀಡಿದ್ದಾರೆ. ಟ್ರಕ್ ಚಾಲಕ ತಮ್ಮನ್ನು ಓವರ್​ಟೇಕ್ ಮಾಡುವ ಪ್ರಯತ್ನದಲ್ಲಿ ಕಾರಿಗೆ ಗುದ್ದಿದ ಪರಿಣಾಮ ಈ ಅಪಘಾತವಾಗಿದೆ ಎಂದು ಕಾರಿನ ಚಾಲಕ ಜಿ. ಶಿವಪ್ರಸಾದ್ ಅವರು ನೀಡಿದ…

Read More

ಬೆಂಗಳೂರು:- ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಇತ್ತೀಚಿನ ದಿನಗಳಲ್ಲಿ ಮುಕ ಪ್ರಾಣಿಗಳ ಮೇಲಿನ ಕ್ರೌರ್ಯ ಜಾಸ್ತಿ ಆಗುತ್ತಿವೆ. ಮನುಷ್ಯತ್ವವೇ ಇಲ್ಲ ಎಂಬಂತೆ ಮನುಷ್ಯರು ವರ್ತನೆ ಮಾಡುತ್ತಿದ್ದಾರೆ. ತನ್ನ ಪಾಡಿಗೆ ಇದ್ದ ಬೀದಿ ನಾಯಿಗಳ ಮೇಲೆ ಕಾರು ಚಾಲಕರು ವಿಕೃತಿ ಮೆರೆಯುತ್ತಿದ್ದಾರೆ. ಜೆಪಿ ನಗರ ಬೆನ್ನಲ್ಲೇ…ಈಗ ಸಹಕಾರ ನಗರದಲ್ಲೂ ಮತ್ತೊಂದು ಪ್ರಕರಣ ಬಯಲಿಗೆ ಬಂದಿದೆ. ಸಹಕಾರ ನಗರದಲ್ಲಿ ಬೀದಿ ನಾಯಿ ಮೇಲೆ ಹರಿದ ರೆಡ್ ಕಲರ್ ಥಾರ್ ನಡೆಸಿದೆ. https://ainlivenews.com/vinishs-celebration-with-father-uncle-sankranti-is-loud-in-dasans-house/ ಸಹಕಾರ ನಗರದ ಎಫ್ ಬ್ಲಾಕ್ ನ 14ನೇ ಮುಖ್ಯರಸ್ತೆಯ ಫೋಸ್ಟ್ ಆಫೀಸ್ ಬಳಿ ಘಟನೆ ಜರುಗಿದೆ. ರೆಡ್ ಕಲರ್ ಥರ್ ಚಾಲಕನ ವಿಕೃತಿ ಸಿಸಿಟಿವಿ ಕ್ಯಾಮೆರದಲ್ಲಿ ಸೆರೆಯಾಗಿದೆ. ಜನವರಿ 4ರಂದು ನಡೆದ ಘಟನೆಗೆ ಸ್ಥಳೀಯ ನಿವಾಸಿಗಳು, ಪ್ರಾಣಿ ಪ್ರಿಯರ ಆಕ್ರೋಶ ಹೊರ ಹಾಕುತ್ತಿದ್ದಾರೆ. ಅಕ್ಕ-ಪಕ್ಕದ ನಿವಾಸಿಗಳಿಗೆ ನಾಯಿ ಹಾಗೂ ಮರಿ ಬಹಳ ಹತ್ತಿರವಾಗಿದ್ದರು. ಏರಿಯಾದ ನಿವಾಸಿಗಳು ನಿತ್ಯ ತಾಯಿ ಹಾಗೂ ಮರಿಗಳಿಗೆ ಊಟ ನೀಡ್ತಿದ್ದರು. ಡಿಸೆಂಬರ್ 4ರ ನಡುರಾತ್ರಿ ರಸ್ತೆಯಲ್ಲಿ ತಮ್ಮ ಪಾಡಿಗೆ…

Read More

ಸಂಕ್ರಾಂತಿ ಹಬ್ಬದ ಹಿನ್ನೆಲೆ ಮಂಗಳವಾರ ದರ್ಶನ್ ಮನೆಯಲ್ಲಿ ಹಬ್ಬದ ಸಂಭ್ರಮ ಕಳೆಗಟ್ಟಿತ್ತು. ಖುಷಿಯಲ್ಲಿ ಚಿಕ್ಕಪ್ಪ ದಿನಕರ್ ಹಾಗೂ ಅಪ್ಪನ ಜೊತೆ ವಿನೀಶ್ ಫೋಟೋಗೆ ಪೋಸ್ ಕೊಟ್ಟಿದ್ದಾರೆ. ಖುಷಿಯ ಕ್ಷಣಗಳ ಫೋಟೋಗಳನ್ನು ದರ್ಶನ್ ಪುತ್ರ ಇನ್ಸ್ಟ್ರಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. https://ainlivenews.com/big-day-for-siddaramaiah-today-muda-case-to-be-transferred-to-cbi/ ಮೈಸೂರಿನಲ್ಲಿರುವ ಫಾರಂ ಹೌಸ್‌ನಲ್ಲಿ ದರ್ಶನ್ ಹಾಗೂ ದಿನಕರ್ ಜೊತೆ ವಿನೀಶ್ ಸಂಕ್ರಾಂತಿ ಹಬ್ಬ ಆಚರಿಸಿದ್ದಾರೆ. ಕೋರ್ಟ್ ಟೆನ್ಶನ್ ನಡುವೆ ದರ್ಶನ್ ಹಬ್ಬದ ಸೆಲೆಬ್ರೇಷನ್‌ನಲ್ಲಿ ಭಾಗಿಯಾಗಿದ್ದಾರೆ. ಅಪ್ಪ ಹಾಗೂ ಚಿಕ್ಕಪ್ಪನ ಜೊತೆ ವಿನೀಶ್ ಖುಷಿಯಲ್ಲಿರುವ ಫೋಟೋ ಈಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ನಿನ್ನೆ ನಟ ದರ್ಶನ್ ಸಾಮಾಜಿಕ ಜಾಲತಾಣದಲ್ಲಿ ಸಂಕ್ರಾಂತಿ ವಿಶ್ ಮಾಡಿದ್ದರು. ನಾಡಿನ ಸಮಸ್ತ ಜನತೆಗೆ ಮಕರ ಸಂಕ್ರಾಂತಿಯ ಹಾರ್ದಿಕ ಶುಭಾಶಯಗಳು. ನಿಮ್ಮ ಜೀವನದಲ್ಲಿ ಸಂತೋಷವೆಂಬ ಗಾಳಿಪಟಗಳು ಎತ್ತರಕ್ಕೆ ಹಾರಲಿ, ಸಮೃದ್ಧಿ ಮತ್ತು ಸಂತೋಷವನ್ನು ತರಲಿ. ಎಳ್ಳು ಬೆಲ್ಲ ಹಂಚಿ ಹೊಸ ಭರವಸೆಯೊಂದಿಗೆ ಮಕರ ಸಂಕ್ರಾಂತಿಯನ್ನು ಬರಮಾಡಿಕೊಳ್ಳೋಣ ಎಂದು ಬರೆದುಕೊಂಡಿದ್ದಾರೆ.

Read More

ಮೈಸೂರು:- CM ಸಿದ್ದರಾಮಯ್ಯಗೆ ಇಂದು ಬಿಗ್ ಡೇ ಅಂದ್ರೆ ತಪ್ಪಾಗೋದಿಲ್ಲ. ಏಕೆಂದರೆ ಮುಡಾ ಕೇಸ್ CBI ಗೆ ವರ್ಗಾವಣೆ ಮಾಡುವ ಕುರಿತು ಇಂದು ನ್ಯಾಯಾಲಯ ಮಹತ್ವದ ತೀರ್ಪು ಕೊಡಲಿದೆ. https://ainlivenews.com/how-did-hebbalakas-back-break-a-case-was-registered-against-chakak/ ಸಿಎಂ ಸಿದ್ದರಾಮಯ್ಯ ಪಾಲಿಗೆ ಇಂದು ಬಿಗ್ ಡೇ. ಮುಡಾ ಹಗರಣದ ತನಿಖೆಯನ್ನು ಸಿಬಿಐಗೆ ವಹಿಸುವಂತೆ ದೂರುದಾರ ಸ್ನೇಹಮಹಿ ಕೃಷ್ಣ ಸಲ್ಲಿಸಿರುವ ಅರ್ಜಿಯ ಸಂಬಂಧ ಬುಧವಾರ ಮಹತ್ತರವಾದ ಆದೇಶ ಹೊರ ಬೀಳುವ ಸಾಧ್ಯತೆ ಇದೆ. ಧಾರವಾಡ ವಿಭಾಗೀಯ ಪೀಠದಲ್ಲಿ ನ್ಯಾಯಮೂರ್ತಿ ನಾಗಪ್ರಸನ್ನ ಅವರು ಇಂದು ಬಹುತೇಕ ಈ ಪ್ರಕರಣದ ಆದೇಶ ನೀಡುವ ಸಾಧ್ಯತೆ ಹೆಚ್ಚಿದೆ. ದೂರುದಾರ ಸ್ನೇಹಮಹಿ ಕೃಷ್ಣ, ಇವತ್ತು ನಿಶ್ಚಿತವಾಗಿಯೂ ಪ್ರಕರಣದ ತನಿಖೆ ಸಿಬಿಐಗೆ ಹೋಗುತ್ತದೆ. ಆದೇಶದ ನಂತರ ಸಿದ್ದರಾಮಯ್ಯ ತಮ್ಮ ಸ್ಥಾನಕ್ಕೆ ನೀಡುವ ಬೆಳವಣಿಗೆಯೂ ನಡೆಯುತ್ತದೆ ಎಂದಿದ್ದಾರೆ. ಮುಡಾದಿಂದ 14 ಸೈಟ್‌ಗಳನ್ನು ಅಕ್ರಮವಾಗಿ ಪಡೆದ ಆರೋಪ ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಮೇಲಿದೆ. ಪ್ರಕರಣ ಸಂಬಂಧ ಲೋಕಾಯುಕ್ತ ಮತ್ತು ಇ.ಡಿ ಅಧಿಕಾರಿಗಳು ಸಿಎಂ ಕುಟುಂಬಸ್ಥರ ವಿಚಾರಣೆ ನಡೆಸಿದ್ದಾರೆ.

Read More

ಬೆಳಗಾವಿ;- ರಾಜ್ಯ ಸಚಿವೆ ಲಕ್ಷ್ಮೀ ಹೆಬ್ಬಾಕ್ಳರ್ ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿತ್ತು. ನಿನ್ನೆ ಸಂಕ್ರಾಂತಿ ಹಬ್ಬದ ದಿನವೇ ಬೆಳಗಾವಿಯ ಕಿತ್ತೂರು ತಾಲೂಕಿನ ಅಂಬಡಗಟ್ಟಿ ಗ್ರಾಮದ ಬಳಿ ನಾಯಿಗಳು ಅಡ್ಡಬಂದಿದ್ದರಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದಿದ್ದು, ಹೆಬ್ಬಾಳ್ಕರ್​ ಗಾಯಗಳಾಗಿತ್ತು. ಇನ್ನು ಈ ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​​ ಸರ್ಕಾರಿ ಕಾರು ಚಾಲಕನ ವಿರುದ್ಧ ದೂರು ದಾಖಲಾಗಿದೆ. ಲಕ್ಷ್ಮೀ ಹೆಬ್ಬಾಳ್ಕರ್​ ಗನ್​ಮ್ಯಾನ್ ಈರಪ್ಪ ಹುಣಶಿಕಟ್ಟಿ ದೂರಿನ ಮೇರೆಗೆ ಕಾರು ಚಾಲಕ ಜಿ.ಶಿವಪ್ರಸಾದ್ ವಿರುದ್ಧ ಕಿತ್ತೂರು ಠಾಣೆಯಲ್ಲಿ 281, 125ಎ, 125ಬಿ ಅಡಿ ಪ್ರಕರಣ ದಾಖಲಾಗಿದೆ. https://ainlivenews.com/heavy-rain-is-likely-in-these-districts-of-karnataka-today-5/ ಜೀವಕ್ಕೆ ಕುತ್ತು ತುರುವ ಹಾಗೂ ನಿಷ್ಕಾಳಜಿ ವಾಹನ ಚಾಲನೆ, ಅಜಾಗರುತೆಯಿಂದ ವಾಹನ ಚಾಲನೆ ಕಲಂಗಳಲ್ಲಿ ಬೆಳಗಾವಿಯ ಕಿತ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು:- ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇಂದು ಭಾರೀ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ. https://ainlivenews.com/will-you-turn-off-the-fridge-in-winter-be-careful-it-might-explode/ ದಕ್ಷಿಣ ಕನ್ನಡ, ಉಡುಪಿ, ಚಾಮಾರಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರಿನಲ್ಲಿ ಮಳೆಯಾಗಲಿದೆ. ವಿಜಯನಗರ, ತುಮಕೂರು, ಶಿವಮೊಗ್ಗ, ರಾಮನಗರ, ಮಂಡ್ಯ, ಕೋಲಾರ, ದಾವಣಗೆರೆ, ಚಿತ್ರದುರ್ಗ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಯಾದಗಿರಿ, ರಾಯಚೂರು, ಕೊಪ್ಪಳ, ಕಲಬುರಗಿ, ಹಾವೇರಿ, ಗದಗ, ಧಾರವಾಡ, ಬೀದರ್, ಬೆಳಗಾವಿ, ಬಾಗಲಕೋಟೆಯಲ್ಲಿ ಒಣಹವೆ ಮುಂದುವರೆಯಲಿದೆ ಇಂದಿನಿಂದ ಚಳಿ ಹೆಚ್ಚಾಗಿದೆ. ವಿಜಯಪುರದಲ್ಲಿ 15 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಶೃಂಗೇರಿ, ಕೋಲಾರದಲ್ಲಿ ಮಳೆಯಾಗಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದೆ, ಎಚ್​ಎಎಲ್​ನಲ್ಲಿ 26.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 26.3ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 26.5ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 27.0 ಡಿಗ್ರಿ…

Read More

ಅನೇಕ ಜನರು ರೆಫ್ರಿಜರೇಟರ್ ಬಳಕೆಯನ್ನು ಕಡಿಮೆ ಮಾಡುತ್ತಾರೆ. ಕೆಲವರು ತಂಪಾದ ವಾತಾವರಣ ಇರುವುದರಿಂದ ಕೆಲವು ವಸ್ತುಗಳನ್ನು ಫ್ರಿಡ್ಜ್‌ನಲ್ಲಿ ಇಡುವುದಿಲ್ಲ. ಹೀಗಿರುವಾಗ ಚಳಿಗಾಲದಲ್ಲಿ ರೆಫ್ರಿಜರೇಟರ್ ಎಷ್ಟು ಶಕ್ತಿಯಿಂದ ಕಾರ್ಯನಿರ್ವಹಿಸಬೇಕು ಎಂಬುದನ್ನು ತಿಳಿದುಕೊಳ್ಳುವುದು ಬಹಳ ಮುಖ್ಯ https://ainlivenews.com/surya-rashmi-for-gavigangadhareshwar-forecast-for-the-next-danger/ ಮನೆಯಲ್ಲಿ ಫ್ರಿಜ್ ಅನ್ನು ಸರಿಯಾಗಿ ಬಳಸುವ ವಿಧಾನ ತಿಳಿದಿರಬೇಕು.ಇಲ್ಲದಿದ್ದರೆ ಮುಂದೊಂದು ದಿನ ದೊಡ್ಡ ಹಾನಿಯನ್ನು ಉಂಟು ಮಾಡುವ ಸಾಧ್ಯತೆ ಇದೆ. ಆದ್ದರಿಂದ ಫ್ರಿಡ್ಜ್ ಬಳಸುವ ಮುನ್ನ ಅದರ ಬಗ್ಗೆ ಕೆಲವು ಪ್ರಮುಖ ವಿಚಾರಗಳನ್ನು ತಿಳಿದಿರಬೇಕು. ಇಲ್ಲದಿದ್ದರೆ ಫ್ರಿಡ್ಜ್ ಸ್ಫೋಟಗೊಳ್ಳಬಹುದು. ಸಾಮಾನ್ಯವಾಗಿ ಚಳಿಗಾಲದಲ್ಲಿ ಆಹಾರ ಉತ್ಪನ್ನಗಳು ನೈಸರ್ಗಿಕವಾಗಿ ಹಲವಾರು ದಿನಗಳವರೆಗೆ ತಾಜಾವಾಗಿರುತ್ತವೆ. ಹೀಗಾಗಿ ಅನೇಕ ಮಂದಿ ಚಳಿಗಾಲ ಎಂಬ ಕಾರಣಕ್ಕೆ ತಮ್ಮ ಫ್ರಿಜ್ ಅನ್ನು ಆಫ್ ಮಾಡುತ್ತಾರೆ. ಆದರೆ ಈ ಕೆಲಸ ಮಾಡುವುದು ದೊಡ್ಡ ತಪ್ಪು. ಏಕೆಂದರೆ ಹೀಗೆ ಮಾಡುವುದರಿಂದ ಅದರ ಕಂಪ್ರೆಸರ್ ಜಾಮ್ ಆಗುತ್ತದೆ. ಆದ್ದರಿಂದ ನೀವು ಅದನ್ನು ಮತ್ತೆ ಆನ್ ಮಾಡಿದಾಗ, ಫ್ರಿಡ್ಜ್ ಹೆಚ್ಚು ಬಿಸಿಯಾಗುತ್ತದೆ. ಹಾಗಾಗಿ ಬೇಸಿಗೆ ಆಗಿರಲಿ ಅಥವಾ ಚಳಿಗಾಲವೇ ಆಗಿರಲಿ…

Read More