ಇತ್ತೀಚಿನ ದಿನಗಳಲ್ಲಿ ಸ್ಥೂಲಕಾಯತೆ ಆತಂಕಕಾರಿ ವಿಚಾರವಾಗಿದೆ. ಏಕೆಂದರೆ ಇದು ವಿವಿಧ ರೋಗಗಳಿಗೆ ಮುಖ್ಯ ಕಾರಣವಾಗಿದೆ. ವಾಸ್ತವವಾಗಿ, ಬೊಜ್ಜು ಹೃದಯ ಮತ್ತು ಮೂತ್ರಪಿಂಡಗಳಂತಹ ಪ್ರಮುಖ ಅಂಗಗಳ ಮೇಲೆ ಪರಿಣಾಮ ಬೀರುತ್ತದೆ. ಮಧುಮೇಹದ ಅಪಾಯವೂ ಕೂಡ ಹೆಚ್ಚು. ಪ್ರಪಂಚದಾದ್ಯಂತ ಸುಮಾರು 2 ಬಿಲಿಯನ್ ಜನರು ಸ್ಥೂಲಕಾಯತೆಯಿಂದ ಬಳಲುತ್ತಿದ್ದಾರೆ. https://ainlivenews.com/geeta-rajkumar-was-elected-unopposed-as-bhadravati-municipal-council-president/ ಪ್ರಪಂಚದಾದ್ಯಂತ ಸಾಕಷ್ಟು ಮಂದಿಯನ್ನು ಕಾಡುತ್ತಿರುವ ಅತಿ ದೊಡ್ಡ ಸಮಸ್ಯೆ ಬೊಜ್ಜು. ದೇಹದ ತೂಕ ಒಮ್ಮೆ ಹೆಚ್ಚಾದರೆ ಇಳಿಸಿಕೊಳ್ಳುವುದು ಬಹಳ ಕಷ್ಟ. ವಿಶೇಷವಾಗಿ ಹೊಟ್ಟೆಯ ಬೊಜ್ಜು ಹೆಚ್ಚಾದರೆ, ಇದನ್ನು ಕರಗಿಸಿಕೊಳ್ಳಲು, ಜನರು ಜಿಮ್, ಯೋಗ, ವ್ಯಾಯಾಮ, ಏರೋಬಿಕ್ಸ್, ವಾಕಿಂಗ್ ಹೀಗೆ ನಾನಾ ಪ್ರಯತ್ನಗಳನ್ನು ಮಾಡುತ್ತಾರೆ. ಕಳಪೆ ಆಹಾರ ಪದ್ಧತಿ ಮತ್ತು ಅನಾರೋಗ್ಯಕರ ಜೀವನಶೈಲಿಯೇ ಬೊಜ್ಜಿನ ಸಮಸ್ಯೆಗೆ ಪ್ರಮುಖ ಕಾರಣವಾಗಿದೆ. ಆದರೆ ಇತ್ತೀಚಿನ ದಿನಗಳಲ್ಲಿ ಸಮತೋಲನ ಆಹಾರ ಪದ್ಧತಿ ಮತ್ತು ದೈಹಿಕ ಚಟುವಟಿಕೆಗಳಲ್ಲಿ ಜನರು ತೊಡಗಿಸಿಕೊಳ್ಳುವುದು ತುಂಬಾ ಕಡಿಮೆಯಾಗಿದೆ. ಇದರಿಂದಾಗಿ, ವಯಸ್ಕರಿಂದ ಹಿಡಿದು ಮಕ್ಕಳವರೆಗೆ ಎಲ್ಲರೂ ಬೊಜ್ಜಿನ ಸಮಸ್ಯೆಗೆ ಒಳಗಾಗಿದ್ದಾರೆ. ಬೊಜ್ಜಿನಿಂದ ಮಧುಮೇಹ, ಮೂತ್ರಪಿಂಡ ಕಾಯಿಲೆ ಮತ್ತು…
Author: AIN Author
ಬೆಳಗಾವಿ: ಒಂದು ಕಡೆ ಹಿಡಕಲ್ ಜಲಾಶಯದಿಂದ ಹುಬ್ಬಳ್ಳಿ ಧಾರವಾಡ ಕೈಗಾರಿಕಾ ಪ್ರದೇಶಕ್ಕೆ ನೀರು ಬಿಡಲಾಗುತ್ತಿದ್ದು, ಬೆಳಗಾವಿ ನಗರದಲ್ಲಿ ಕೂಡಿಯು ನೀರಿಗೂ ಹಾಹಾಕಾರ ಆರಂಭವಾಗುತ್ತಿದೆ. https://ainlivenews.com/i-am-always-ready-to-fight-for-irrigation-projects-former-prime-minister-deve-gowda/ ಕಳೆದ ಕೆಲವು ವರ್ಷಗಳ ಹಿಂದೆ ಬೆಳಗಾವಿ ನಗರದ ಜನತೆಗೆ ದಿನದ ಇಪ್ಪತ್ನಾಲ್ಕು ಗಂಟೆಗಳ ಕಾಲ ಕುಡಿಯುವ ನೀರಿನ ವ್ಯವಸ್ಥೆ ಇತ್ತು, ಅಭಿವೃದ್ಧಿ, ಹಾಳು, ಮೂಳು, ಮಣ್ಣು ಮಸಿ ಎಂದು ನಗರದ ಜನತೆಗೆ ಎಂಟು ದಿನಗಳಿಗೊಮ್ಮೆ ಕುಡಿಯುವ ನೀರಿನ ಭಾಗ್ಯ ನೀಡಲಾಗುತ್ತಿದೆ. ಫೆಬ್ರವರಿ ತಿಂಗಳಲ್ಲೆ ಬೆಳಗಾವಿಯಲ್ಲಿ ಬಿಸಿಲಿನ ತಾಪ ಹೆಚ್ಚಾಗಿದ್ದು ಇದರ ಜೊತೆಗೆ ನಗರದ ಅನೇಕ ಭಾಗದಲ್ಲಿ ನೀರಿನ ಬವಣೆ ಆರಂಭವಾಗಿದೆ. ನೀರು ಇಲ್ಲದೆ ಜನ ಬಿದಿಗೆ ಬಂದಿದ್ದು, ದಯವಿಟ್ಟು ಪ್ರತಿನಿತ್ಯ ನೀರು ಬರವ ಹಾಗೆ ಮಾಡಿ ಎಂದು ಅಂಗಲಾಚುತ್ತಿದ್ದಾರೆ. 2024ರಲ್ಲಿ ನಗರದಲ್ಲಿ ತುಂಬಾ ಚೆನ್ನಾಗಿ ಮಳೆ ಆಗಿದ್ದು, ಕುಡಿಯುವ ನೀರು ಪೂರೈಕೆಯ ಜಲಾಶಯಗಳು ಭರ್ತಿ ಆಗಿದ್ದವು, ಆದರೆ ಈಗಿನ್ನೂ ಫೆಬ್ರುವರಿ ತಿಂಗಳಲ್ಲೇ ನಗರಕ್ಕೆ ಎಂಟು ದಿನಗಳಿಗೆ ಒಮ್ಮೆ ನೀರು ನೀಡುತ್ತಿರುವುದು ಸಾಮಾನ್ಯವಾಗಿದೆ, ಈಗಾಗಲೆ ನಗರದ ಮಜಗಾವಿ…
ಬೆಂಗಳೂರು:- ಪ್ರಕರಣ ಒಂದಕ್ಕೆ ಸಂಬಂಧಿಸಿದಂತೆ ಕೋರ್ಟ್ ನಲ್ಲಿ ಸಾಕ್ಷಿ ಹೇಳಿದ್ರೆ ಸುಮ್ಮನೆ ಬಿಡಲ್ಲ ಎಂದು ಅಪರಿಚತರು ಕಾಂಗ್ರೆಸ್ ಮುಖಂಡನಿಗೆ ಜೀವ ಬೆದರಿಕೆ ಕರೆ ಮಾಡಿದ್ದಾರೆ. https://ainlivenews.com/attention-train-passengers-train-service-between-maddur-mysore-partially-cancelled/ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿ.ಕೆ.ಅಲ್ತಾಫ್ ಖಾನ್ ಜೆ.ಜೆ.ನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಇದೀಗ ಎಫ್ಐಆರ್ ದಾಖಲಾಗಿದೆ. ಪಿಎಫ್ಐ ಸಂಘಟನೆಯವರೊಂದಿಗೆ ಆಟವಾಡಬೇಡ, ಆರ್ಎಸ್ಎಸ್ ಏಜೆಂಟ್ ಆಗಿ ಕೆಲಸ ಮಾಡಬೇಡ. ನಾಳೆ ನಿನ್ನ ಮಗಳ ಮದುವೆ ಇದೆ. ನಮ್ಮಿಂದ ನೀನು ಹಲವು ಬಾರಿ ಬಚಾವ್ ಆಗಿದ್ದೀಯಾ. ಇನ್ಮುಂದೆ ನೀನು ಬಚಾವ್ ಆಗಲು ಆಗಲ್ಲ. ನಿನ್ನ ತಮ್ಮಂದಿರನ್ನು ನೀನು ಉಳಿಸಿಕೊಳ್ಳಲು ಸಾಧ್ಯವಾಗುವುದಿಲ್ಲ. ನಿನ್ನ ಮತ್ತು ನಿನ್ನ ಕುಟುಂಬದವರನ್ನು ಜೀವ ಸಹಿತ ಬಿಡುವುದಿಲ್ಲ. ನೀನು ನ್ಯಾಯಾಲಯದಲ್ಲಿ ಕೇಸ್ಗೆ ಸಾಕ್ಷಿ ಹೇಳಲು ಹೋಗಬಾರದು. ಹೋದರೇ ನೀನಿ ಉಳಿಯುವುದಿಲ್ಲ. ಆರ್ಎಸ್ಎಸ್ಗೆ ಚಮಚಗಿರಿ ಮಾಡಿದರೆ ಪಿಎಫ್ಐ ನಿನ್ನನ್ನು ಸುಮ್ಮನೆ ಬಿಡುವುದಿಲ್ಲ” ಎಂದು ಅಪರಿಚಿತ ವ್ಯಕ್ತಿ ಬೆದರಿಕೆ ಹಾಕಿದ್ದಾನೆ ಎಂದು ದೂರಿನಲ್ಲಿ ದಾಖಲಾಗಿದೆ. ಸದ್ಯ ಪ್ರಕರಣ ಜೆಜೆ ನಗರ ಠಾಣೆಯಿಂದ ಸಿಸಿಬಿಗೆ ವರ್ಗಾವಣೆವಾಗಿದೆ. ಅಲ್ತಾಫ್ ಕರೆ…
ಮೈಸೂರು:- ಬೆಂಗಳೂರು-ಮೈಸೂರು ಮಧ್ಯೆ ಸಂಚರಿಸುವ ಮೆಮು ರೈಲುಗಳು ಮದ್ದೂರು ಮತ್ತು ಮೈಸೂರು ನಡುವೆ ಭಾಗಶಃ ರದ್ದಾಗಲಿವೆ. ನೈಋತ್ಯ ರೈಲ್ವೆಯು ಎಲಿಯೂರು ರೈಲು ನಿಲ್ದಾಣದಲ್ಲಿ ಕಾಮಗಾರಿ ಕೈಗೊಂಡಿದ್ದರಿಂದ ಭಾಗಶಃ ರದ್ದಾಗಲಿವೆ. ಮಾರ್ಚ್ 3ರಂದು ಮದ್ದೂರು ಮತ್ತು ಮೈಸೂರು ನಿಲ್ದಾಣಗಳ ನಡುವೆ ಈ ಕೆಳಗಿನ ರೈಲು ಸೇವೆಗಳನ್ನು ಭಾಗಶಃ ರದ್ದುಗೊಳಿಸಲಾಗುತ್ತವೆ. https://ainlivenews.com/i-had-information-about-financial-harassment-long-ago-lakshmi-hebballar/ ರೈಲು ಸಂಖ್ಯೆ 66551: ಕೆಎಸ್ಆರ್ ಬೆಂಗಳೂರು-ಮೈಸೂರು ಮೆಮು ರೈಲು ಮದ್ದೂರು ಮತ್ತು ಮೈಸೂರು ನಿಲ್ದಾಣಗಳ ನಡುವೆ ಭಾಗಶಃ ರದ್ದಾಗಲಿದೆ. ಇದು ಮದ್ದೂರಿನಲ್ಲಿ ಕೊನೆಗೊಳ್ಳುತ್ತದೆ. ರೈಲು ಸಂಖ್ಯೆ 66552: ಮೈಸೂರು-ಕೆಎಸ್ಆರ್ ಬೆಂಗಳೂರು ಮೆಮು ರೈಲು ಮೈಸೂರು ಮತ್ತು ಮದ್ದೂರು ನಿಲ್ದಾಣಗಳ ನಡುವೆ ಭಾಗಶಃ ರದ್ದಾಗಲಿದೆ. ಇದು ಮೈಸೂರು ಬದಲು ಮದ್ದೂರಿನಿಂದ ನಿಗದಿತ ಸಮಯದಲ್ಲಿ ಹೊರಡಲಿದೆ. ರೈಲು ಸಂಖ್ಯೆ 06525: ಕೆಎಸ್ಆರ್ ಬೆಂಗಳೂರು-ಮೈಸೂರು ಮೆಮು ರೈಲು ಮದ್ದೂರು ಮತ್ತು ಮೈಸೂರು ನಿಲ್ದಾಣಗಳ ನಡುವೆ ಭಾಗಶಃ ರದ್ದಾಗಲಿದೆ. ಇದು ಮದ್ದೂರಿನಲ್ಲಿ ಕೊನೆಗೊಳ್ಳುತ್ತದೆ. ರೈಲು ಸಂಖ್ಯೆ 06526: ಮೈಸೂರು-ಕೆಎಸ್ಆರ್ ಬೆಂಗಳೂರು ಮೆಮು ರೈಲು ಮೈಸೂರು ಮತ್ತು ಮದ್ದೂರು…
ಬೆಳಗಾವಿ: ನನ್ನ ಮತಕ್ಷೇತ್ರದಲ್ಲಿ ಕಳೆದ ಆರೇಳು ತಿಂಗಳು ಹಿಂದೆಯೇ ಫೈನಾನ್ಸ್ ಕಿರುಕುಳದ ಬಗ್ಗೆ ನನಗೆ ಮಾಹಿತಿ ಇತ್ತು. ಆಗಲೇ ನಾನು ಅವರಿಗೆ ಕರೆದು ಎಚ್ಚರಿಕೆ ನೀಡಿದ್ದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆ ಲಕ್ಷ್ಮೀ ಹೆಬ್ಬಾಳ್ಳರ್ ಹೇಳಿದರು. https://ainlivenews.com/for-five-generations-kuvempus-secular-values-have-continued-to-reform-society/ ಶುಕ್ರವಾರ ಬೆಳಗಾವಿ ಕುವೆಂಪು ನಗರದ ಅವರ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. ಫೈನಾನ್ಸ್ ದವರಿಂದ ಜನರಿಗೆ ಮೋಸ ಆಗಬಾರದು ಎಂದು ಪೊಲೀಸರ ಗಮನಕ್ಕೆ ತಂದಿದ್ದೆ. ಆದರೂ ಮೋಸ ಆಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಸಕಲೇಶಪುರ ಜ 14: ಐದು ತಲೆಮಾರುಗಳಿಂದ ಕುವೆಂಪು ಅವರ ಜಾತ್ಯತೀತ ಮೌಲ್ಯಗಳು ಸಮಾಜವನ್ನು ತಿದ್ದುತ್ತಲೇ, ಪ್ರಭಾವಿಸುತ್ತಲೇ ಇವೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅವರು ನುಡಿದರು. https://ainlivenews.com/car-hits-bus-10-devotees-killed-in-horrific-accident/ ಸಕಲೇಶಪುರದಲ್ಲಿ ಆದಿಚುಂಚನಗಿರಿ ಮಹಾಸಂಸ್ಥಾನದ ವತಿಯಿಂದ ಆಯೋಜಿಸಿದ್ದ 125ನೇ ಶತೋತ್ತರ ಹುಣ್ಣಿಮೆ ಬೆಳದಿಂಗಳೋತ್ಸವ ಕಾರ್ಯಕ್ರಮದಲ್ಲಿ ಸಂಸ್ಥಾನ ಕೊಡ ಮಾಡುವ ಕುವೆಂಪು ಪ್ರಶಸ್ತಿಯನ್ನು ಆದಿ ಚುಂಚನಗಿರಿ ಮಹಾ ಸಂಸ್ಥಾನದ ಪೀಠಾಧ್ಯಕ್ಷರಾದ ಶ್ರೀ ಶ್ರೀ ನಿರ್ಮಲಾನಂದ ಶ್ರೀಗಳಿಂದ ಸ್ವೀಕರಿಸಿ ಮಾತನಾಡಿದರು. ವಿಶ್ವಮಾನವ ಸಂದೇಶ ಮತ್ತು ಜಾತ್ಯತೀತ ಮೌಲ್ಯಗಳಿಂದ ಐದು ತಲೆಮಾರುಗಳನ್ನು ಪ್ರಭಾವಿಸಿದ ರಾಷ್ಟ್ರಕವಿ ಕುವೆಂಪು ಹೆಸರಿನ ಪ್ರಶಸ್ತಿ ಸ್ವೀಕರಿಸುತ್ತಿರುವುದು ನನಗೆ ಬಹಳ ದೊಡ್ಡ ಹೆಮ್ಮೆಯ ಸಂಗತಿ. ಅದರಲ್ಲೂ ಆದಿಚುಂಚನಗಿರಿ ಮಹಾಸಂಸ್ಥಾನದ ಜ್ಞಾನಯೋಗಿ ನಿರ್ಮಲಾನಂದ ಶ್ರೀಗಳ ಕೈಗಳಿಂದ ಈ ಪ್ರಶಸ್ತಿ ಸ್ವೀಕರಿಸುವ ಧನ್ಯತೆ ಇಂದು ನನ್ನದಾಗಿದೆ ಎಂದು ಕೃತಜ್ಞತೆ ಸಲ್ಲಿಸಿದರು. ಕುವೆಂಪು ಅವರು ಕೇವಲ ಶ್ರೇಷ್ಠ ಸಾಹಿತಿ ಮಾತ್ರವಲ್ಲ, ನೂರಾರು ಮಂದಿ ಶ್ರೇಷ್ಠ ಸಾಹಿತಿಗಳನ್ನು ರೂಪಿಸಿದವರು. ಕುವೆಂಪು ಅವರು ಕೇವಲ ವೈಚಾರಿಕ ಕ್ರಾಂತಿಗೆ ಕರೆ ನೀಡಲಿಲ್ಲ, ಬದಲಿಗೆ…
ಪ್ರಯಾಗ್ರಾಜ್:- ಉತ್ತರ ಪ್ರದೇಶದ ಪ್ರಯಾಗ್ರಾಜ್ನಲ್ಲಿ ಮಹಾ ಕುಂಭಮೇಳಕ್ಕೆ ತೆರಳುತ್ತಿದ್ದ ಬಸ್ಸಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ 10 ಭಕ್ತರು ಸಾವನ್ನಪ್ಪಿರುವ ಘಟನೆ ಜರುಗಿದೆ. https://ainlivenews.com/accident-at-vatehole-falls-two-youths-slip-and-fall-into-the-water/ ಬೊಲೆರೊ ಕಾರು ಬಸ್ಗೆ ಡಿಕ್ಕಿ ಹೊಡೆದು ಅವಘಡ ಸಂಭವಿಸಿವೆ. 19 ಜನರು ಗಾಯಗೊಂಡಿದ್ದಾರೆ. ಗಂಗಾ, ಯಮುನಾ ಮತ್ತು ಪೌರಾಣಿಕ ಸರಸ್ವತಿ ನದಿಗಳ ಸಂಗಮವಾದ ಸಂಗಮದಲ್ಲಿ ಸ್ನಾನ ಮಾಡಲು ಛತ್ತೀಸ್ಗಢದ ಕೊರ್ಬಾ ಜಿಲ್ಲೆಯಿಂದ ಭಕ್ತರು ಪ್ರಯಾಣಿಸುತ್ತಿದ್ದರು. ಭಕ್ತರನ್ನು ಕರೆದೊಯ್ಯುತ್ತಿದ್ದ ಬೊಲೆರೊ ಮಧ್ಯಪ್ರದೇಶದ ರಾಜ್ಗಢ ಜಿಲ್ಲೆಯಿಂದ ಪ್ರಯಾಣಿಸುತ್ತಿದ್ದ ಬಸ್ಗೆ ಡಿಕ್ಕಿ ಹೊಡೆದಿದೆ. ಅಪಘಾತದ ಬಗ್ಗೆ ಮಾಹಿತಿ ಪಡೆದ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಪರಿಹಾರ ಕಾರ್ಯಗಳನ್ನು ತ್ವರಿತಗೊಳಿಸುವಂತೆ ಮತ್ತು ಗಾಯಾಳುಗಳಿಗೆ ಸರಿಯಾದ ಚಿಕಿತ್ಸೆ ನೀಡುವುದನ್ನು ಖಚಿತಪಡಿಸಿಕೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.
ಕಾರವಾರ:- ವಾಟೆಹೊಳೆ ಫಾಲ್ಸ್ನಲ್ಲಿ ಅವಘಡ ಸಂಭವಿಸಿ ಕಾಲು ಜಾರಿ ಬಿದ್ದು ಇಬ್ಬರು ಯುವಕರು ನೀರು ಪಾಲಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರದ ನಿಲ್ಕುಂದ ಸಮೀಪದಲ್ಲಿ ಜರುಗಿದೆ. https://ainlivenews.com/if-you-are-deficient-in-this-vitamin-you-are-at-risk-of-a-heart-attack/ ಸುಹಾಸ್ ಶಟ್ಟಿ (22) ಹಾಗೂ ಅಕ್ಷಯ್ ಭಟ್ (22) ಮೃತರು. ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಮುಳುಗು ತಜ್ಞರು ಆಗಮಿಸಿ ಶೋಧಕಾರ್ಯ ನಡೆಸಿ ಮೃತದೇಹವನ್ನು ಹೊರತೆಗೆದಿದ್ದಾರೆ. ಈ ಸಂಬಂಧ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇಂದಿನ ದಿನಗಳಲ್ಲಿ ಹೃದಯಕ್ಕೆ ಸಂಬಂಧಪಟ್ಟ ಕಾಯಿಲೆಗೆ ಗುರಿಯಾಗುತ್ತಿರುವವರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದೆ. ಇನ್ನೂ ಬಾಳಿ ಬದುಕಬೇಕಾದ ಯುವಜನತೆಯರು, ಸಣ್ಣ ವಯಸ್ಸಿನಲ್ಲಿಯೇ ಈ ಕಾಯಿಲೆಗೆ ಬಲಿಯಾಗುತ್ತಿರುವುದು, ನಿಜಕ್ಕೂ ನೋವುಂಟು ಮಾಡುತ್ತಿದೆ. https://ainlivenews.com/richa-ghosh-who-wrote-the-rcb-record/ ಯಾಕೆ ಈ ಕಾಯಿಲೆಯಿಂದಾಗಿ ಹೆಚ್ಚಿನವರು ತಮ್ಮ ಪ್ರಾಣವನ್ನು ಕಳೆದುಕೊಳ್ಳುತ್ತಿದ್ದಾರೆ ಎನ್ನುವುದನ್ನು ನೋಡುವುದಾದರೆ, ಕೆಲವರು ತಮ್ಮ ದೈಹಿಕ ಫಿಟ್ನೆಸ್ ಕಾಯ್ದುಕೊಳ್ಳುವ ಸಲುವಾಗಿ ಜಿಮ್ನಲ್ಲಿ ಮಾಡುವ ಅತಿಯಾದ ವರ್ಕೌಟ್ನಿಂದಾಗಿ, ಹೃದಯಕ್ಕೆ ಅತಿಯಾದ ಒತ್ತಡ ಬೀಳುವುದರಿಂದ, ಇಂದಿನ ದಿನಗಳಲ್ಲಿ ಹೃದಯಕ್ಕೆ ಸಂಬಂಧಪಟ್ಟ ಸಮಸ್ಯೆಗಳು ಹೆಚ್ಚಾಗುತ್ತಿವೆ, ಎನ್ನುವ ಕೂಗು ಒಂದು ಕಡೆ ಯಾದರೆ, ಜಡಜೀವನ ಶೈಲಿ, ಅನಾರೋಗ್ಯಕಾರಿ ಆಹಾರಪದ್ಧತಿಯಿಂದಾಗಿಯೂ ಕೂಡ ಸಣ್ಣ ವಯಸ್ಸಿನ ಲ್ಲಿಯೇ ಹೃದಯದ ಸಮಸ್ಯೆಗಳು ಕಾಣಿಸಿ ಕೊಳ್ಳುತ್ತಿದೆ ಎನ್ನುವ ಮಾತು ಇನ್ನೊಂದು ಕಡೆ. ವಿಟಮಿನ್ ಡಿ ಮತ್ತು ಬಿ 12 ಕೊರತೆಯು ಹೃದಯಾಘಾತದ ಅಪಾಯವನ್ನು ಹೆಚ್ಚಿಸುತ್ತದೆ. ಮೂಳೆಗಳಿಗೆ ವಿಟಮಿನ್ ಡಿ ಅತ್ಯಗತ್ಯ ಎಂದು ಪರಿಗಣಿಸಲಾಗಿದೆ, ಆದರೆ ಇತ್ತೀಚಿನ ಸಂಶೋಧನೆಯು ವಿಟಮಿನ್ ಡಿ ಹೃದಯಕ್ಕೂ ಬಹಳ ಮುಖ್ಯ ಎಂದು ಬಹಿರಂಗಪಡಿಸಿದೆ. ವಿಟಮಿನ್ ಡಿ…
ಗುಜರಾತ್ ವಿರುದ್ಧದ ಪಂದ್ಯದಲ್ಲಿ RCB ಆಟಗಾರ್ತಿ ರಿಚಾ ಘೋಷ್ ಭರ್ಜರಿ ದಾಖಲೆ ಬರೆದಿದ್ದಾರೆ. https://ainlivenews.com/bangalore-rcb-built-new-history/ ಗುಜರಾತ್ ಜೈಂಟ್ಸ್ ತಂಡ ನೀಡಿದ 202 ರನ್ಗಳ ಸವಾಲನ್ನು ಬೆನ್ನತ್ತಿದ ಆರ್ಸಿಬಿ ಪರ ಇಬ್ಬರು ಅರ್ಧಶತಕ ಬಾರಿಸಿದ್ದರು. ಮೊದಲಿಗೆ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಎಲ್ಲಿಸ್ ಪೆರ್ರಿ (57) 27 ಎಸೆತಗಳಲ್ಲಿ ಹಾಫ್ ಸೆಂಚುರಿ ಸಿಡಿಸಿದ್ದರು. ಇದಾದ ಬಳಿಕ ಆರ್ಭಟಿಸಿದ್ದು ರಿಚಾ ಘೋಷ್. ಗುಜರಾತ್ ಜೈಂಟ್ಸ್ ಬೌಲರ್ಗಳನ್ನು ಮನಸೋ ಇಚ್ಛೆ ದಂಡಿಸಿದ ರಿಚಾ ಘೋಷ್ ಸಿಕ್ಸ್-ಫೋರ್ಗಳ ಸುರಿಮಳೆಗೈದರು. ಪರಿಣಾಮ ಆರ್ಸಿಬಿ ವಿಕೆಟ್ ಕೀಪರ್ ಬ್ಯಾಟರ್ ಕಡೆಯಿಂದ ಕೇವಲ 23 ಎಸೆತಗಳಲ್ಲಿ ಅರ್ಧಶತಕ ಮೂಡಿಬಂತು. ಇದರೊಂದಿಗೆ ವುಮೆನ್ಸ್ ಪ್ರೀಮಿಯರ್ ಲೀಗ್ ಇತಿಹಾಸದಲ್ಲಿ ಆರ್ಸಿಬಿ ಪರ ಸ್ಪೋಟಕ ಅರ್ಧಶತಕ ಸಿಡಿಸಿದ ಭಾರತೀಯ ಬ್ಯಾಟರ್ ಎಂಬ ದಾಖಲೆ ರಿಚಾ ಘೋಷ್ ಪಾಲಾಯಿತು. ಅಲ್ಲದೆ WPL ನಲ್ಲಿ ಅತೀ ವೇಗದ ಅರ್ಧಶತಕ ಬಾರಿಸಿದ ಐದನೇ ಆಟಗಾರ್ತಿ ಎಂಬ ಹೆಗ್ಗಳಿಕೆಗೂ ಪಾತ್ರರಾದರು. ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವುದು ಸೋಫಿಯಾ ಡಂಕ್ಲಿ. 2023 ರಲ್ಲಿ ಗುಜರಾತ್ ಜೈಂಟ್ಸ್…