Author: AIN Author

ಬೆಂಗಳೂರು:- ಬೆಂಗಳೂರು ನಗರದಲ್ಲಿ ಮದ್ಯಪಾನ ಮಾಡಿ ವಾಹನ ಚಾಲನೆ ಮಾಡುವವರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಲೇ ಇದೆ. ಇದರಿಂದ ಸಾಲು ಸಾಲು ಅಪಘಾತಗಳು ಸಂಭವಿಸುತ್ತಿವೆ. https://ainlivenews.com/hubballi-state-wide-non-toxic-bathing-campaign-by-varadashree-foundation/ ಅದರಂತೆ ಡ್ರಂಕ್ ಆ್ಯಂಡ್​ ಡ್ರೈವ್ ಮಾಡುವವರ ವಿರುದ್ಧ ಬೆಂಗಳೂರು ಪೊಲೀಸರು ಸಮರ ಸಾರಿದ್ದು, ದಂಡದ ಬಿಸಿ ಮುಟ್ಟಿಸಲು ಸಜ್ಜಾಗಿದ್ದಾರೆ. ಜ. 6ರಿಂದ 12 ರವರೆಗೆ ವಿಶೇಷ ಕಾರ್ಯಾಚರಣೆ ಕೈಗೊಳ್ಳಲಾಗಿದ್ದು, ನಗರದ 50 ಸಂಚಾರ ಪೊಲೀಸ್ ಠಾಣೆಗಳಲ್ಲಿ ಪ್ರಕರಣಗಳು ದಾಖಲಾಗಿವೆ. ಜೊತೆಗೆ 30,4000 ರೂ ದಂಡ ಸಂಗ್ರಹಿಸಲಾಗಿದೆ. ಬೆಂಗಳೂರು ನಗರ ಸಂಚಾರ ಪೊಲೀಸ್ ವಿಭಾಗವು ಜ. 6 ರಿಂದ 12 ರವರೆಗೆ ಮದ್ಯಪಾನಮಾಡಿ ವಾಹನ ಚಲಾಯಿಸುತ್ತಿದ್ದ ವಾಹನ ಚಾಲಕರು ಮತ್ತು ಸವಾರರ ವಿರುದ್ಧ ಮತ್ತು ಅತಿವೇಗ ವಾಹನ ಚಲಾಯಿಸುವವರ ವಿರುದ್ಧ ನಗರದ 50 ಸಂಚಾರ ಪೊಲೀಸ್ ಠಾಣೆಗಳಲ್ಲಿ ವಿಶೇಷ ಕಾರ್ಯಾಚರಣೆಯನ್ನು ಕೈಗೊಳ್ಳಲಾಗಿದೆ ಮದ್ಯಪಾನ ಮಾಡಿ ವಾಹನ ಚಾಲನೆಯ ವಿವರ ಪರಿಶೀಲಿಸಲಾದ ವಿವಿಧ ಮಾದರಿಯ ವಾಹನಗಳ ಸಂಖ್ಯೆ- 57860 ದಾಖಲಿಸಿದ ಒಟ್ಟು ಪ್ರಕರಣಗಳ ಸಂಖ್ಯೆ-861 ಅತಿವೇಗ ಚಲಾಯಿಸಿದವರ…

Read More

ಹುಬ್ಬಳ್ಳಿ: ಮಕರ ಸಂಕ್ರಾಂತಿ ಹಿನ್ನೆಲೆಯಲ್ಲಿ ವಿಷಮುಕ್ತ ಸ್ನಾನ ಅಭಿಯಾನವನ್ನು ಇಲ್ಲಿಯ ವರದಶ್ರೀ ಫೌಂಡೇಷನ್ ರಾಜ್ಯಾದ್ಯಂತ ಆಯೋಜಿಸಿದೆ. ಜ. 14 ಮತ್ತು 15ರಂದೂ ಈ ಅಭಿಯಾನ ಮುಂದುವರಿಯಲಿದೆ. ಒಟ್ಟಾರೆ 40 ಕ್ವಿಂಟಲ್ ಕಡಲೆಹಿಟ್ಟು ವಿತರಿಸಲಾಗುತ್ತಿದೆ. ನಗರದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವರದಶ್ರೀ ಫೌಂಡೇಷನ್ ಸಂಸ್ಥಾಪಕ ಅಧ್ಯಕ್ಷ ಮಲ್ಲಿಕಾರ್ಜುನ ರಡ್ಡರ, ರಾಜ್ಯದ 23 ತೀರ್ಥಕ್ಷೇತ್ರಗಳಲ್ಲಿ 10 ಲಕ್ಷ ಜನರಿಗೆ ಕಡಲೆ ಇಟ್ಟು (ಚಿಕ್ಕದು) ಪ್ಯಾಕೆಟ್ ವಿತರಿಸಲಾಗುತ್ತಿದೆ ಎಂದರು. https://ainlivenews.com/dinner-meeting-is-not-allowed-surjewala-gave-harsh-instructions-to-kai-leaders/ ಶಾಂಪು, ಸಾಬೂನು ಬಳಸುವುದರಿಂದ ಮಾಲಿನ್ಯ ಹೆಚ್ಚುತ್ತದೆ. ನೀರಿನಲ್ಲಿರುವ ಜೀವ ಸಂಕುಲಕ್ಕೆ ಕಂಟಕವಾಗುತ್ತದೆ. ಗಿಡ- ಮರಗಳಿಗೂ ಅಪಾಯವಾಗುತ್ತದೆ. ಈ ಹಿನ್ನೆಲೆಯಲ್ಲಿ ವಿಷಮುಕ್ತ ಸ್ನಾನ ಅಭಿಯಾನ ಶುರು ಮಾಡಲಾಗಿದೆ ಎಂದರು. ಇದಕ್ಕೆ ಕನ್ಹೇರಿಮಠದ ಶ್ರೀ ಅದೃಶ ಕಾಡಸಿದ್ದೇಶ್ವರ ಸ್ವಾಮೀಜಿ ಸೇರಿದಂತೆ ಬಹಳಷ್ಟು ಸ್ವಾಮೀಜಿಗಳು, ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟ‌ರ್ ಸೇರಿದಂತೆ ಅನೇಕ ಜನಪ್ರತಿನಿಧಿಗಳು ಸಾಥ್ ನೀಡಿದ್ದಾರೆ. ಆಯಾ ತೀರ್ಥ ಕ್ಷೇತ್ರದಲ್ಲಿ ಸಂಘ-ಸಂಸ್ಥೆಗಳು ಸಹಕರಿಸುತ್ತಿವೆ. ಭಿತ್ತಿಪತ್ರ, ಜ್ಞಾನಪತ್ರ, ಐಡಿ ಕಾರ್ಡ್ ಜತೆಗೆ ಕಡಲೆ ಹಿಟ್ಟಿನ ಪ್ಯಾಕೆಟ್ ನೀಡಲಾಗುತ್ತಿದೆ ಎಂದರು. ಕಳೆದ…

Read More

ಬೆಂಗಳೂರು:- ಡಿನ್ನರ್‌ ಮೀಟಿಂಗ್‌, ಪತ್ಯೇಕ ಸಭೆಗೆ ಬ್ರೇಕ್‌ ಹಾಕಿ, ಯಾವುದಕ್ಕೂ ಅವಕಾಶವಿಲ್ಲ ಎಂದು ಉಸ್ತುವಾರಿ ರಣದೀಪ್‌ ಸುರ್ಜೇವಾಲ ತಾಕೀತು ನೀಡಿದ್ದಾರೆ. ಈ ಸಂಬಂಧ ಮಾತನಾಡಿದ ಅವರು, ಎಲ್ಲಾ ರೀತಿಯ ಪ್ರತ್ಯೇಕ ಸಭೆ, ಊಟ, ಡಿನ್ನರ್ ಮೀಟಿಂಗ್ ಯಾವುದಕ್ಕೂ ಅವಕಾಶ ಇಲ್ಲ. ಎಲ್ಲದಕ್ಕೂ ಬ್ರೇಕ್‌ ಹಾಕಿ ಎಂದರು. https://ainlivenews.com/jai-bapu-jai-bheem-jai-constitutional-convention-preparation-and-discussion-about-party-organization/ ಸಮುದಾಯದ ಸಭೆ, ಸಮುದಾಯದ ನಾಯಕರ ಸಭೆ ಮಾಡಬೇಕಾದ ಯಾವುದೇ ಪರಿಸ್ಥಿತಿ ಬಂದರೂ ಹೈಕಮಾಂಡ್ ಅನುಮತಿ‌ ಪಡೆದು ಮಾಡಬೇಕು. ಬಹಿರಂಗವಾಗಿ ಮಾತನಾಡುವ ಎಲ್ಲಾ ಚಟುವಟಿಕೆಗಳನ್ನು ನಿಲ್ಲಿಸಬೇಕು ಎಂದು ಸೂಚಿಸಿದ್ದಾರೆ. ನೀವು ಏನೇ ಮಾತನಾಡಿದರೂ ಅದು ಪಕ್ಷಕ್ಕೆ ದೊಡ್ಡ ಹಾನಿಯಾಗುತ್ತದೆ. ಏನಿದ್ದರೂ ಬಿಜೆಪಿಯವರ ವಿರುದ್ದ ಮಾತನಾಡಿ. ಅವರು ಆರೋಪ ಮಾಡುತ್ತಿರುತ್ತಾರೆ. ನೀವು ನಿಮ್ಮ‌ ಪಾಡಿಗೆ ಸುಮ್ಮನೆ ಇರುತ್ತೀರಿ. ಪಕ್ಷದ ಬಗ್ಗೆ ಮಾತನಾಡುವುದಲ್ಲ. ಬಿಜೆಪಿಯವರ ಆರೋಪದ ವಿರುದ್ದ ಮೊದಲು ಮಾತನಾಡಿ ಎಂದು ಹೇಳಿದರು.

Read More

ಬೆಂಗಳೂರು, ಜ.13: “ಸಂಘಟನೆಗಾಗಿ ನಮ್ಮ ಪಕ್ಷ ಹಾಗೂ ಸರ್ಕಾರ ಇಡೀ ದಿನ ಮುಡಿಪಾಗಿಟ್ಟು ಸಭೆ ನಡೆಸಲಾಗಿದೆ. ಈ ವರ್ಷ ಪಕ್ಷ ಸಂಘಟನೆಗೆ ಆದ್ಯತೆ ನೀಡುವುದು ಹಾಗೂ ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಸಮಾವೇಶದ ಸಿದ್ಧತೆ ಬಗ್ಗೆ ಚರ್ಚೆ ಮಾಡಲಾಗಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. https://ainlivenews.com/time-will-come-will-i-leave-him-hd-revannas-warning-to-whom/ ಭಾರತ ಜೋಡೋ ಭವನದಲ್ಲಿ ಪಕ್ಷದ ಶಾಸಕರು, ಸಚಿವರು, ಬ್ಲಾಕ್ ಹಾಗೂ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು, ಪದಾಧಿಕಾರಿಗಳ ಸಭೆ ಬಳಿಕ ಕಾಂಗ್ರೆಸ್ ಕಚೇರಿಯಲ್ಲಿ ಕೆಪಿಸಿಸಿ ಅಧ್ಯಕ್ಷರೂ ಆದ ಡಿ.ಕೆ. ಶಿವಕುಮಾರ್ ಹಾಗೂ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ ಅವರು ಸೋಮವಾರ ಮಾಧ್ಯಮಗೋಷ್ಠಿ ನಡೆಸಿ ಮಾಹಿತಿ ನೀಡಿದರು. ಈ ವೇಳೆ ಮಾತನಾಡಿದ ಶಿವಕುಮಾರ್ ಅವರು, “ಬೆಳಗ್ಗೆ 12 ಗಂಟೆಗೆ ಶಾಸಕರು, ಮಂತ್ರಿಗಳು, ಪದಾಧಿಕಾರಿಗಳು, ಜಿಲ್ಲಾಧ್ಯಕ್ಷರು, ಪ್ರಮುಖ ಘಟಕಗಳ ಅಧ್ಯಕ್ಷರು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಭೆ ಮಾಡಿದ್ದೇವೆ. ಗಾಂಧಿ ಭಾರತದ ಕಾರ್ಯಕ್ರಮ ಅಂಗವಾಗಿ ಬೆಳಗಾವಿ ಅಧಿವೇಶನದ ಶತಮಾನೋತ್ಸವ ಆಚರಣೆ ಹಿನ್ನೆಲೆಯಲ್ಲಿ ನಡೆದ…

Read More

ಹಾಸನ:- ಸಮಯ ಬರುತ್ತೆ, ನಾನು ಇವರನ್ನ ಬಿಡ್ತಿನಾ ಎಂದು ಅಧಿಕಾರಿಗಳಿಗೆ HD ರೇವಣ್ಣ ಎಚ್ಚರಿಕೆ ಕೊಟ್ಟಿದ್ದಾರೆ. https://ainlivenews.com/siddaramaiah-says-two-children-are-enough-for-hindus-ashok-sparks-cms-statement/ ಹಾಸನದಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಅಧಿಕಾರಿಗಳೆಲ್ಲ ಕಾಂಗ್ರೆಸ್ ಸರ್ಕಾರವೇ ಇರುತ್ತೆ ಎಂದುಕೊಂಡಿದ್ದಾರೆ. ನನ್ನ ಕೈಗೆ ಸಿಗದೇ ಎಲ್ಲಿಗೆ ಹೋಗ್ತಾರೆ? ಸಮಯ ಬರುತ್ತೆ, ನಾನು ಇವರನ್ನ ಬಿಡ್ತಿನಾ ಎಂದು ಡಿಸಿ, ಎಸ್‍ಪಿ, ಜಿ.ಪಂ. ಸಿಇಓ, ಎಸಿ ವಿರುದ್ಧ ಮಾಜಿಸಚಿವ ಹೆಚ್.ಡಿ.ರೇವಣ್ಣ ವಾಗ್ದಾಳಿ ನಡೆಸಿದ್ದಾರೆ. ಈ ವೇಳೆ, ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ಜಿಲ್ಲಾಧಿಕಾರಿ, ಎಸ್‍ಪಿಗೆ ಬಡ್ತಿ ನೀಡಿದ್ದಾರೆ. ಇವರೆಲ್ಲ ಕಾಂಗ್ರೆಸ್ ಸರ್ಕಾರವೇ ಇರುತ್ತೆ ಎಂದುಕೊಂಡಿದ್ದಾರೆ. ನಾನು ಹೆದರಿ ಓಡಿ ಹೋಗುತ್ತೇನೆ, ದೇವೇಗೌಡರ ಕುಟುಂಬದ್ದು ಮುಗಿದೇ ಹೋಯಿತು ಎಂದುಕೊಂಡಿದ್ದಾರೆ ಎಂದು ಕಿಡಿಕಾರಿದ್ದಾರೆ.

Read More

ಬೆಂಗಳೂರು:- ಹಿಂದೂಗಳಿಗೆ ಎರಡು ಮಕ್ಕಳು ಸಾಕು ಎಂಬ ಸಿದ್ದರಾಮಯ್ಯ ಹೇಳಿಕೆಗೆ ಅಶೋಕ್ ಕಿಡಿಕಾರಿದ್ದಾರೆ. https://ainlivenews.com/if-the-situation-becomes-unavoidable-sacrifices-will-have-to-be-made-cm-siddaramaiah/ ಈ ಸಂಬಂಧ ಮಾತನಾಡಿದ ಅವರು, ಸಾಬ್ರುಗೂ ಎರಡು ಮಕ್ಕಳು ಮಾಡಿಕೊಳ್ಳಿ ಅಂತ ಸಿಎಂ ಸಿದ್ದರಾಮಯ್ಯ ಹೇಳಲಿ. ಬಳ್ಳಾರಿಯಲ್ಲಿ ನಡೆದ ಸಾಮೂಹಿಕ ವಿವಾಹದಲ್ಲಿ ಹಿಂದೂಗಳು ಎರಡೇ ಮಕ್ಕಳು ಮಾಡಿಕೊಳ್ಳಿ ಎಂಬ ಸಿಎಂ ಸಿದ್ದರಾಮಯ್ಯ ಸಲಹೆಗೆ ಆಕ್ರೋಶ ವ್ಯಕ್ತಪಡಿಸಿದರು. ಸಿದ್ದರಾಮಯ್ಯ ಇದನ್ನು ಹೋಗಿ ಸಾಬರಿಗೆ ಹೇಳುತ್ತಾರಾ? ಹಿಂದೂಗಳ ಸಂಖ್ಯೆ ಕಡಿಮೆ ಆಗಲಿ, ಮುಸ್ಲಿಮರ ಸಂಖ್ಯೆ ಹೆಚ್ಚಾಗಲಿ ಎಂದು ಸಿದ್ದರಾಮಯ್ಯ ಕುತಂತ್ರ ಮಾಡಿದ್ದಾರೆ. ಸಿಎಂ ಓಲೈಕೆ ಮಾಡುವುದನ್ನು ಬಿಡಬೇಕು. ಇದರಿಂದಲೇ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹಾಳಾಗಿದೆ. ಮೊನ್ನೆ ಸ್ವಾಮೀಜಿಗಳು ಹಿಂದೂಗಳು ಜಾಸ್ತಿ ಮಕ್ಕಳು ಮಾಡಿಕೊಳ್ಳಿ ಎಂದು ಹೇಳಿದ್ದಕ್ಕೆ ಕೌಂಟರ್ ಆಗಿ ಸಿದ್ದರಾಮಯ್ಯ ಹೇಳಿದ್ದಾರೆ ಎಂದು ಆರೋಪ ಮಾಡಿದರು.

Read More

ಬೆಂಗಳೂರು:- ಪರಿಸ್ಥಿತಿ ಅನಿವಾರ್ಯವಾದರೆ ತ್ಯಾಗ ಮಾಡಲೇಬೇಕಾಗುತ್ತೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಸಂಬಂಧ ಸರ್ವ ಸದಸ್ಯರ ಸಭೆಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ಸಿನ ಸಾಕಷ್ಟು ನಾಯಕರು ತ್ಯಾಗ ಮಾಡಿದ್ದಾರೆ ಎಂದು ಮಾತನಾಡುವ ಮೂಲಕ ಹೊಸ ದಾಳ ಉರುಳಿಸಿದ್ದಾರೆ. https://ainlivenews.com/traffic-traffic-bengaluru-traffic-is-making-world-news/ ಸೋನಿಯಾ, ರಾಹುಲ್ ಗಾಂಧಿ ಅವರೇ ಪಕ್ಷಕ್ಕಾಗಿ ಸಾಕಷ್ಟು ತ್ಯಾಗ ಮಾಡಿದ್ದಾರೆ. ಅವರಿಗಿಂತ ನಾವು ದೊಡ್ಡವರಲ್ಲ ಎಂಬ ಸಂದೇಶ ರವಾನೆ ಮಾಡಿದ್ದಾರೆ. ನಾವು ಅನಿವಾರ್ಯ ಪರಿಸ್ಥಿತಿ ಬಂದರೆ ತ್ಯಾಗ ಮಾಡಬೇಕಾಗುತ್ತದೆ ಎಂಬ ಅರ್ಥದಲ್ಲಿ ಸಿಎಂ ಮಾತನಾಡಿದ್ದಾರೆ ತ್ಯಾಗದ ಮಾತನಾಡುವ ಮೂಲಕ ಒಂದು ರೀತಿಯಲ್ಲಿ‌ ಎಲ್ಲರನ್ನೂ ಸಿಎಂ ಗೊಂದಲದಲ್ಲಿ ಇಟ್ಟಿದ್ದಾರೆ. ಸದ್ಯದ ಪರಿಸ್ಥಿತಿ ತಿಳಿಗೊಳಿಸಲು ತ್ಯಾಗದ ಅಸ್ತ್ರ ಹೂಡಿದ ಸಿಎಂ ತಮ್ಮ ಬೆಂಬಲಿಗರಿಗೂ ಹೆಚ್ಚು ಮಾತನಾಡದಂತೆ ಎಚ್ಚರಿಕೆ ನೀಡಿದಂತಿದೆ. ಅಗತ್ಯ ಸಂದರ್ಭದಲ್ಲಿ ತ್ಯಾಗಕ್ಕೆ ಸಿದ್ದ ಎಂಬ ಸಂದೇಶದ ಮೂಲಕ ವಿರೋಧಿ ಬಣಕ್ಕೂ ಸಂದೇಶವನ್ನು ರವಾನೆ ಮಾಡಿದ್ದಾರೆ. ತ್ಯಾಗದ ವಿಚಾರದಲ್ಲಿ ಮಾರ್ಮಿಕ ಮಾತನಾಡಿ ಅವರವರ ಲೆಕ್ಕಾಚಾರದ ಪ್ರಕಾರ ಅರ್ಥೈಸಿಕೊಳ್ಳುವಂತೆ ಮಾಡಿ ಸಿದ್ದರಾಮಯ್ಯ ಈಗ ಹೊಸ ಚರ್ಚೆ…

Read More

ಬೆಂಗಳೂರು:- ಬೆಂಗಳೂರಿನ ಟ್ರಾಫಿಕ್ ಸಮಸ್ಯೆಯನ್ನ ವಿಶ್ವಮಟ್ಟದಲ್ಲಿ ಅನಾವರಣ ಮಾಡಲಾಗಿದೆ. ನೆದರ್ ಲ್ಯಾಂಡ್ ನ ಲೋಕೆಷನ್ ಟೆಕ್ನಾಲಜಿ ಸಂಸ್ಥೆ ಟಾಮ್ ಟಾಮ್ ಬಿಡುಗಡೆ ಮಾಡಿರೋ ವಿಶ್ವದ ಅತಿಹೆಚ್ಚು ಸ್ಲೋ ಮೂವಿಂಗ್ ಟ್ರಾಫಿಕ್ ಹೊಂದಿರುವ ನಗರಗಳ ಪಟ್ಟಿಯಲ್ಲಿ ಸಿಲಿಕಾನ್ ಸಿಟಿ ಬೆಂಗಳೂರಿಗೆ ಮೂರನೇ ಸ್ಥಾನ ಸಿಕ್ಕಿದೆ. https://ainlivenews.com/two-people-were-arrested-for-selling-beef-in-a-sweet-shop/ ರಾಜಧಾನಿಯಲ್ಲಿ ಕಳೆದ ವರ್ಷಕ್ಕಿಂತ ಈ ಬಾರೀ ವಾಹನ ದಟ್ಟಣೆ ಮತ್ತಷ್ಟು ಹೆಚ್ಚಾಗಿರುವ ವರದಿ ಬಹಿರಂಗವಾಗಿದ್ದು, ಬೆಂಗಳೂರಿನಲ್ಲಿ 10 ಕಿಲೋಮೀಟರ್ ದೂರ ತಲುಪೋಕೆ 34 ನಿಮಿಷ 10 ಸೆಕೆಂಡ್ ಸಮಯ ಬೇಕಿದೆ ಎಂದು ವರದಿ ತಿಳಿಸಿದೆ. ಅಲ್ಲದೇ ರಾಜಧಾನಿಯ ಜನರು ವರ್ಷದಲ್ಲಿ ಐದು ದಿನಗಳಷ್ಟು ಸಮಯವನ್ನ ಟ್ರಾಫಿಕ್ ನಲ್ಲೇ ಕಳೆಯುತ್ತಿರುವುದು ವರದಿ ಹೇಳಿದೆ. ಇನ್ನು ಟಾಮ್ ಟಾಮ್ ಸಂಸ್ಥೆಯ ವರದಿ ಹೊರಬೀಳುತ್ತಿದ್ದಂತೆಯೇ ಬಿಜೆಪಿ ನಾಯಕರು ರಾಜ್ಯ ರಾಜಧಾನಿಯ ಟ್ರಾಫಿಕ್ ಕಂಟ್ರೋಲ್ ಮಾಡುವುದಕ್ಕೆ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಚಾಟಿ ಬೀಸಿದ್ದಾರೆ. ರಾಜ್ಯ ಸರ್ಕಾರದ ವೈಫಲ್ಯತೆ ಬಗ್ಗೆ ಟೀಕಿಸಿರೋ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ಬೆಂಗಳೂರು ಅಂದ್ರೆ ಉದ್ಯಾನ ನಗರಿ…

Read More

ಚಿಕ್ಕಮಗಳೂರು:- ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಣಕಲ್‌ ಗ್ರಾಮದಲ್ಲಿ ಮಾರ್ಕೆಟ್​​ನಲ್ಲಿ ಸ್ವೀಟ್ ಅಂಗಡಿ ಹಾಕಿಕೊಂಡು ಗೋಮಾಂಸ ಮಾರಾಟ ಮಾಡುತ್ತಿದ್ದ ಅಸ್ಸಾಂ ಮೂಲದ ಇಬ್ಬರು ವ್ಯಕ್ತಿಗಳನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. https://ainlivenews.com/he-knows-his-pain-rakshita-bats-for-friend-darshan/ ಸ್ವೀಟ್ ಅಂಗಡಿ ಜೊತೆಗೆ ಗೋಮಾಂಸ ಮಾರಾಟ ಮಾಡುತ್ತಿದ್ದರು. ಅಕ್ರಮ ಬಾಂಗ್ಲಾದೇಶದ ನಿವಾಸಿಗಳು ಎಂದು ಸ್ಥಳೀಯರು ಆರೋಪಿಸಿದ್ದಾರೆ. ಸ್ವೀಟ್ ಡಬ್ಬದ ಪಕ್ಕದಲ್ಲಿರುವ ಬ್ಲ್ಯಾಕ್​ ಬ್ಯಾಗ್​ನಲ್ಲಿ ಗೋಮಾಂಸ ಪತ್ತೆಯಾಗಿದ್ದು, ಗೋಮಾಂಸ ಸಮೇತ ಮಾರಾಟಗಾರರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

Read More

ನಟ ದರ್ಶನ್​ ನೋವು ಹೊರಗಿನವರಿಗೆ ಗೊತ್ತಿಲ್ಲ ಎಂದು ಹೇಳುವ ಮೂಲಕ ಸ್ನೇಹಿತನ ಪರ ನಟಿ ರಕ್ಷಿತಾ ಪ್ರೇಮ್​ ಬ್ಯಾಟಿಂಗ್ ಮಾಡಿದ್ದಾರೆ. https://ainlivenews.com/if-you-are-using-more-western-toilets-then-you-have-missed-this-story/ ನಮ್ಮ ಅಪ್ಪಾಜಿ ಕಾಲದಿಂದಲೂ ದರ್ಶನ್ ಜೊತೆ ನನಗೆ ಒಡನಾಟವಿದೆ. ನಾವು ಕಷ್ಟ-ಸುಖ ಎಲ್ಲವನ್ನು ಹಂಚಿಕೊಳ್ಳುವ ಸ್ನೇಹಿತರು ಎಂದ ರಕ್ಷಿತಾ ಪ್ರೇಮ್​, ನಾಳಿನ ಸಂಕ್ರಾಂತಿ ದರ್ಶನ್​ ಜೀವನದಲ್ಲೂ ಒಳ್ಳೆಯ ದಿನಗಳನ್ನು ತರುತ್ತೆ ಎನ್ನುವ ನಂಬಿಕೆ ನನಗಿದೆ ಎಂದಿದ್ದಾರೆ. ನಮ್ಮ ಅಪ್ಪನಿಗೆ ದರ್ಶನ್​ ಮೇಲೆಯೇ ಅಪಾರ ನಂಬಿಕೆ ಇತ್ತು. ನಮ್ಮ ದೊಡಮ್ಮ ನಮ್ಮ ಜೊತೆ ಇದ್ರು. ಅವ್ರು ಡಿಪ್ರೆಶನ್​​ಗೆ ಹೋಗಿ ಮನೆಯಲ್ಲೇ ಬೆಂಕಿ ಹಚ್ಕೊಂಡಿದ್ರು. ಆ ಸಮಯದಲ್ಲಿ ನಮ್ಮ ಅಪ್ಪ ನನಗೆ ಕಾಲ್ ಮಾಡಲಿಲ್ಲ ದರ್ಶನ್​​ಗೆ ಕಾಲ್ ಮಾಡಿದ್ರು. ದರ್ಶನ್ ನಮ್ಮ ಮನೆಗೆ ಬಂದು ಅವನ ಕಾರಲ್ಲಿ ಅವ್ರನ್ನ ಅಸ್ಪತ್ರೆಗೆ ಕರೆದುಕೊಂಡು ಹೋಗಿದ್ದ. ದರ್ಶನ್ ಇವತ್ತಿಂದ ಅಲ್ಲ, ನನ್ನ ತಂದೆಯ ಕಷ್ಟದ ದಿನಗಳಲ್ಲೂ ನಮ್ಮ ಜೊತೆ ಇದ್ದಾನೆ ಎಂದು ರಕ್ಷಿತಾ ಹೇಳಿದ್ರು. ದರ್ಶನ್ ನನ್ನ ಕುಟುಂಬದವರು. ನನಗೆ ಏನಾದ್ರು ತೊಂದರೆ ಆದ್ರೆ…

Read More