ಭಾರತದಲ್ಲಿ ಜನರು ಸಂಪ್ರದಾಯಗಳು ಮತ್ತು ಪದ್ಧತಿಗಳಿಗೆ ಹೆಚ್ಚಿನ ಪ್ರಾಮುಖ್ಯತೆಯನ್ನು ನೀಡುತ್ತಾರೆ. ಅಲ್ಲದೇ, ಪ್ರವೃತ್ತಿಗೆ ಅನುಗುಣವಾಗಿ ಜೀವನ ಶೈಲಿಯಲ್ಲಿ ಅಗತ್ಯವಾದ ಬದಲಾವಣೆ ಮತ್ತು ಸೇರ್ಪಡೆಗಳನ್ನು ಮಾಡಿಕೊಳ್ಳುವಲ್ಲಿ ಅವರು ಎಂದಿಗೂ ಮುಂದಿರುತ್ತಾರೆ. ಅದರಲ್ಲಿಯೂ ನೆಮ್ಮದಿಯ ಜೀವನಕ್ಕಾಗಿ ಸುಧಾರಿತ ತಂತ್ರಜ್ಞಾನದೊಂದಿಗೆ ಬರುವ ವಿವಿಧ ಉತ್ಪನ್ನಗಳು ಬಳಕೆಯಲ್ಲಿ ಎಂದಿಗೂ ಹಿಂದುಳಿದಿಲ್ಲ. ಈಗ ಶೌಚಾಲಯದ ವಿಷಯದಲ್ಲೂ ಅದೇ ಟ್ರೆಂಡ್ ಅನುಸರಿಸಲಾಗುತ್ತದೆ. https://ainlivenews.com/a-mother-who-gave-birth-to-her-four-children-in-the-canal-a-story-that-makes-you-feel-blind/ ವೆಸ್ಟರ್ನ್ ಟಾಯ್ಲೆಟ್ ಭಾರತೀಯ ಶೌಚಾಲಯಕ್ಕಿಂತ ಸಂಪೂರ್ಣ ಭಿನ್ನವಾಗಿದೆ. ಇದು ವಯಸ್ಸಾದವರಿಗೆ ತುಂಬಾ ಅನುಕೂಲಕರವಾಗಿದೆ. ಹಿಂದೆಯೆಲ್ಲಾ ಜನರು ಹೆಚ್ಚಾಗಿ ಇಂಡಿಯನ್ ಟಾಯ್ಲೆಟ್ ಬಳಸುತ್ತಿದ್ದರು. ಆದರೆ ಈಗ ಸಿನಿಮಾ, ಶಾಪಿಂಗ್ ಮಾಲ್, ಆಸ್ಪತ್ರೆ ಅಥವಾ ಸಾರ್ವಜನಿಕ ಶೌಚಾಲಯ ಎಲ್ಲೆಲ್ಲೂ ವೆಸ್ಟನ್ ಟಾಯ್ಲೆಟ್ಗಳು ಕಾಣ ಸಿಗುತ್ತದೆ. ಹೀಗಾಗಿ ಪಾಶ್ಚಿಮಾತ್ಯ ಶೌಚಾಲಯಗಳ ಬಳಕೆ ಈಗ ಸರ್ವೇ ಸಾಮಾನ್ಯವಾಗಿ ಬಿಟ್ಟಿದೆ. ಅದರಲ್ಲೂ ಈಗ ಇಂಡಿಯನ್ ಟಾಯ್ಲೆಟ್ ಜೊತೆಗೆ ಒಂದಾದರೂ ವೆಸ್ಟನ್ ಟಾಯ್ಲೆಟ್ ಕಟ್ಟಿಸುವುದು ಅನಿವಾರ್ಯದ ಜೊತೆಗೆ ಒಂದು ರೀತಿ ಟ್ರೆಂಡ್ ಕೂಡ ಆಗಿದೆ. ವೆಸ್ಟನ್ ಟಾಯ್ಲೆಟ್ ಬಳಸುವಾಗ ಮಗ್ ಅಥವಾ ಬಕೆಟ್ನಲ್ಲಿ ನೀರು…
Author: AIN Author
ವಿಜಯಪುರ:- ವಿಜಯಪುರದ ನಿಡಗುಂದಿ ತಾಲೂಕಿನ ಬೇನಾಳ ಬಳಿಯ ಆಲಮಟ್ಟಿ ಎಡದಂಡೆ ಮುಖ್ಯ ಕಾಲುವೆಯಲ್ಲಿ ತಾಯಿಯೊಬ್ಬಳು 4 ಮಕ್ಕಳನ್ನು ಕಾಲುವೆಗೆ ಎಸೆದು ತಾನೂ ಜೀವ ಬಿಡಲು ಯತ್ನಿಸಿದ ದಾರುಣ ಘಟನೆ ಜರುಗಿದೆ. https://ainlivenews.com/actor-ajith-won-the-dubai-car-race-and-hoisted-the-tricolor-flag/ 5 ವರ್ಷದ ತನು ನಿಂಗರಾಜ ಭಜಂತ್ರಿ, 3 ವರ್ಷದ ರಕ್ಷಾ ಭಜಂತ್ರಿ, 2 ವರ್ಷ 13 ತಿಂಗಳ ಹಸೇನ್ ನಿಂಗರಾಜ ಭಜಂತ್ರಿ ಮೃತ ಮಕ್ಕಳು ಎಂದು ಗುರುತಿಸಲಾಗಿದೆ. ಮೃತರು ಕೊಲ್ಹಾರ ತಾಲೂಕಿನ ತೆಲಗಿ ಗ್ರಾಮದ ನಿವಾಸಿಗಳು ಎಂದು ತಿಳಿದುಬಂದಿದೆ. ಕೌಟುಂಬಿಕ ಕಲಹವೇ ಘಟನೆಗೆ ಕಾರಣ ಎನ್ನಲಾಗಿದೆ. ಕಾಲುವೆಗೆ ಜಿಗಿದಿದ್ದ ತಾಯಿ ಭಾಗ್ಯಳನ್ನು ಸ್ಥಳೀಯರು ರಕ್ಷಿಸಿದ್ದಾರೆ. ಕಾಲುವೆಯಿಂದ ತನು, ರಕ್ಷಾ ಮೃತದೇಹವನ್ನು ಮೀನುಗಾರರು ಹೊರತೆಗೆದಿದ್ದು, ಮತ್ತಿಬ್ಬರ ಮೃತದೇಹ ಪತ್ತೆಗಾಗಿ ಶೋಧ ಕಾರ್ಯ ಮುಂದುವರೆದಿದೆ.
ಕೊಪ್ಪಳ:- ಜನನಿಬಿಡ ಪ್ರದೇಶದಲ್ಲಿಯೇ ಮಹಿಳೆಯೋರ್ವಳ ಬರ್ಬರ ಕೊಲೆಯಾಗಿರುವ ಘಟನೆ ಕೊಪ್ಪಳದ ಗವಿಮಠದ ಮುಂದಿನ ಮೈದಾನದಲ್ಲಿ ಜರುಗಿದೆ. https://ainlivenews.com/cows-udder-cut-case-zameer-said-that-these-are-not-human-beings/ ಪ್ರೀತಿಸಿ ಮದುವೆಯಾಗಿದ್ದ ಹೆಂಡ್ತಿಯನ್ನೇ ಪತಿರಾಯ ಬರ್ಬರವಾಗಿ ಹತ್ಯೆ ಮಾಡಿದ್ದಾನೆ. ಜಿಲ್ಲೆಯ ತುರುವೆಕೆರೆ ತಾಲೂಕಿನ ಭುವನಹಳ್ಳಿ ಗ್ರಾಮದ ನಿವಾಸಿಯಾಗಿರೋ ಇಪ್ಪತ್ತಾರು ವರ್ಷದ ಗೀತಾ ಮತ್ತು ಆಕೆಯ ಪತಿ ರಾಜೇಶ್ ಕೂಡಾ ವ್ಯಾಪರಕ್ಕೆಂದೆು ಗವಿಮಠದ ಜಾತ್ರೆಗೆ ಬಂದಿದ್ದಾರೆ. ಬಾಂಡೆ ಸಾಮಾನಿನ ಸ್ಟಾಲ್ ಹಾಕಲು ಜಾಗ ಪಡೆದಿದ್ದು,ಸ್ಟಾಲ್ ಹಾಕಲು ಹತ್ತು ದಿನದ ಹಿಂದೆಯೇ ಕೊಪ್ಪಳಕ್ಕೆ ಬಂದಿದ್ದಾರೆ. ಆದ್ರೆ ಇಂದು ಗೀತಾಳ ಬರ್ಬರ ಕೊಲೆಯಾಗಿದೆ. ಇನ್ನು ಗೀತಾಳನ್ನು ಕೊಲೆ ಮಾಡಿದ್ದು ಬೇರಾರು ಅಲ್ಲಾ, ಆಕೆಯ ಪತಿ ರಾಜೇಶ್. ಮಧ್ಯಾಹ್ನ ಹನ್ನೆರಡು ಗಂಟೆ ಸಮಯದಲ್ಲಿ, ಮೈದಾನದಲ್ಲಿ ಚಾಕುವಿನಿಂದ ಕುತ್ತಿಗೆ ಸೇರಿದಂತೆ ಮೂರು ಕಡೆ ಇರದಿದ್ದಾನೆ. ಇದನ್ನು ಗಮನಿಸಿದ ಸುತ್ತಮುತ್ತಲಿನ ಜನರು ಮಹಿಳೆಯ ನೆರವಿಗೆ ಧಾವಿಸಿದ್ದಾರೆ. ಕೆಲವರು ಆರೋಪಿಯನ್ನು ಹಿಡಿದ್ರೆ, ಕೆಲವರು ಕೂಡಲೇ ಗೀತಾಳನ್ನು ಆಸ್ಪತ್ರೆಗೆ ಸಾಗಿಸುವ ಕೆಲಸ ಮಾಡಿದ್ದಾರೆ. ಆದ್ರೆ ಆಸ್ಪತ್ರೆಗೆ ಹೋಗುವ ಮುನ್ನವೇ ಗೀತಾ ಬಾರದ ಲೋಕಕ್ಕೆ ಹೋಗಿದ್ದಾಳೆ.…
ಬೆಂಗಳೂರು :- ಹಸುಗಳ ಕೆಚ್ಚಲು ಕೊಯ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಜಮೀರ್ ಪ್ರತಿಕ್ರಿಯೆ ಕೊಟ್ಟಿದ್ದಾರೆ. https://ainlivenews.com/mahakumbha-represents-spiritual-heritage-modi/ ಚಾಮರಾಜಪೇಟೆಯಲ್ಲಿ ಹಸುಗಳ ಕೆಚ್ಚಲು ಕೊಯ್ದ ಘಟನಾ ಸ್ಥಳಕ್ಕೆ ಭೇಟಿ ನೀಡಿದ ಅವರು, ಇರಿತಕ್ಕೊಳಗಾಗಿ ಚಿಕಿತ್ಸೆ ಪಡೆಯುತ್ತಿದ್ದ ಹಸುಗಳನ್ನು ಪರಿಶೀಲನೆ ನಡೆಸಿದರು. ಈ ವೇಳೆ ಮಾತನಾಡಿದ ಅವರು, ಪ್ರಾಣಿಗಳ ಮೇಲೆ ಯಾಕೆ ದ್ವೇಷ? ಈ ಥರ ಮಾಡಿದವನು ಮನುಷ್ಯನೇ ಅಲ್ಲ. ಏನೇ ದ್ವೇಷ, ಗಲಾಟೆ ಇದ್ದರೂ ಈ ಥರ ಮಾಡಬಾರದು ಎಂದರು. ನಾನು, ಮುಖ್ಯಮಂತ್ರಿಗಳು ಬಳ್ಳಾರಿಯಲ್ಲಿ ಇದ್ದೆವು. ವಿಚಾರ ಗೊತ್ತಾದ ತಕ್ಷಣ ಮುಖ್ಯಮಂತ್ರಿಗಳು ಕಮೀಷನರ್ಗೆ ಕರೆ ಮಾಡಿ ಅದು ಯಾರೇ ಆಗಿರಲಿ, ಕೂಡಲೇ ಬಂಧಿಸುವಂತೆ ಹೇಳಿದ್ದಾರೆ. ನಾನು ಕೂಡ ಪೊಲೀಸರಿಗೆ ಹೇಳಿದ್ದೇನೆ. ಯಾರೇ ಆದರೂ ಅವನ ಮೇಲೆ ಕಠಿಣ ಕ್ರಮ ಆಗಬೇಕು. ಮೂರು ಹೊಸ ಹಸುಗಳನ್ನು ನಾನೇ ಕೊಡಿಸುತ್ತೇನೆ. ಅವರ ಕುಟುಂಬದ ಜೊತೆಗೆ ನಾನು ಇದ್ದೇನೆ ಎಂದು ಭರವಸೆ ನೀಡಿದರು.
ನವದೆಹಲಿ:- ಮಹಾಕುಂಭವು ಆಧ್ಯಾತ್ಮಿಕ ಪರಂಪರೆ ಪ್ರತಿನಿಧಿಸುತ್ತದೆ ಎಂದು ನರೇಂದ್ರ ಮೋದಿ ಹೇಳಿದ್ದಾರೆ. https://ainlivenews.com/the-election-of-jds-state-president-has-been-fixed/ X ಮಾಡಿರುವ ಅವರು, ಮಹಾಕುಂಭವು ಭಾರತದ ಶಾಶ್ವತ ಆಧ್ಯಾತ್ಮಿಕ ಪರಂಪರೆಯನ್ನು ಪ್ರತಿನಿಧಿಸುತ್ತದೆ ಮತ್ತು ನಂಬಿಕೆ ಮತ್ತು ಸಾಮರಸ್ಯದ ಆಚರಣೆ’’ ಎಂದು ಹೇಳಿದ್ದಾರೆ. ಎಲ್ಲಾ ಯಾತ್ರಾರ್ಥಿಗಳು ಮತ್ತು ಪ್ರವಾಸಿಗರಿಗೆ ಶುಭ ಹಾರೈಸಿದ್ದಾರೆ. ಭಾರತೀಯ ಮೌಲ್ಯಗಳು ಮತ್ತು ಸಂಸ್ಕೃತಿಯನ್ನು ಪಾಲಿಸುವ ಕೋಟಿಗಟ್ಟಲೆ ಜನರಿಗೆ ಬಹಳ ವಿಶೇಷವಾದ ದಿನ. ಮಹಾ ಕುಂಭ 2025 ಪ್ರಯಾಗರಾಜ್ನಲ್ಲಿ ಪ್ರಾರಂಭವಾಗಿದೆ, ಅಸಂಖ್ಯಾತ ಜನರನ್ನು ನಂಬಿಕೆ, ಭಕ್ತಿ ಮತ್ತು ಸಂಸ್ಕೃತಿಯ ಪವಿತ್ರ ಸಂಗಮದಲ್ಲಿ ಒಟ್ಟುಗೂಡಿಸುತ್ತದೆ. ಕುಂಭವು ಭಾರತದ ಕಾಲಾತೀತ ಆಧ್ಯಾತ್ಮಿಕ ಪರಂಪರೆಯನ್ನು ಸಾಕಾರಗೊಳಿಸುತ್ತದೆ ಮತ್ತು ನಂಬಿಕೆ ಮತ್ತು ಸಾಮರಸ್ಯದ ಆಚರಣೆ ಇದಾಗಿದೆ ಎಂದು ಬರೆದಿದ್ದಾರೆ. ವಿವಿಧತೆಯಲ್ಲಿ ಏಕತೆಯನ್ನು ಅನುಭವಿಸಲು, ನಂಬಿಕೆ ಮತ್ತು ಆಧುನಿಕತೆಯ ಸಂಗಮದಲ್ಲಿ ಧ್ಯಾನ ಮಾಡಲು ಮತ್ತು ಪವಿತ್ರ ಸ್ನಾನ ಮಾಡಲು ಬಂದವರು ಹೃತ್ಪೂರ್ವಕವಾಗಿ ಸ್ವಾಗತಿಸುತ್ತೇನೆ ಎಂದು ಸಿಎಂ ಯೋಗಿ ಆದಿತ್ಯನಾಥ್ ಹೇಳಿದ್ದಾರೆ.2025 ರ ಮಹಾಕುಂಭದಲ್ಲಿ ಭಾಗವಹಿಸುವ ಮೂಲಕ ಸನಾತನ ಸಂಸ್ಕೃತಿಯ ಈ ವೈಭವಯುತ ಸಂಪ್ರದಾಯದ…
ಬೆಂಗಳೂರು:- ಜೆಡಿಎಸ್ ಶಾಸಕರು ಕಾಂಗ್ರೆಸ್ ಸೇರ್ತಾರೆ ಎಂಬ ವಿಚಾರ ಬೆನ್ನಲ್ಲೇ ಜೆಡಿಎಸ್ ರಾಜ್ಯಾಧ್ಯಕ್ಷರ ಆಯ್ಕೆಗೆ ಫಿಕ್ಸ್ ಆಗಿದೆ. https://ainlivenews.com/chaitra-kundapura-out-of-the-bigg-boss-house-what-did-she-say-in-tears-in-front-of-kich/ ದಳ ಮನೆಯಲ್ಲಿನ ಭಿನ್ನರಾಗವೇ ಆಪರೇಷನ್ ಹಸ್ತಕ್ಕೆ ಚಾನ್ಸ್ ಕೊಟ್ಟಂತಾಗುತ್ತೆ ಅನ್ನೋ ಭಯದಲ್ಲಿರೋ ಕುಮಾರಸ್ವಾಮಿ ಮುನ್ನೆಚ್ಚರಿಕೆಯಾಗಿ ಸಭೆ ಮಾಡೋ ಮೂಲಕ ವಿಶ್ವಾಸಕ್ಕೆ ತೆಗೆದಕೊಳ್ಳೋ ಪ್ರಯತ್ನ ಮಾಡಿದ್ದಾರೆ. ಈ ಮೂಲಕ ಕಾಂಗ್ರೆಸ್ ನಾಯಕರ ಆಟಕ್ಕೆ ಬ್ರೇಕ್ ಹಾಕುವ ಪ್ರಯತ್ನವನ್ನೂ ನಡೆಸುತ್ತಿದ್ದಾರೆ ಬೆಂಗಳೂರಿನ ಶೇಷಾದ್ರಿಪುರಂನ ಜೆಡಿಎಸ್ ಕಚೇರಿಯಲ್ಲಿ ಸಭೆ ನಡೆಸಲಾಯ್ತು, ಮಾಜಿ ಪ್ರಧಾನಿ ದೇವೇಗೌಡರು, ಕುಮಾರಸ್ವಾಮಿ ನೇತೃತ್ವದಲ್ಲಿ ಸಭೆ ನಡೀತು. ಸಭೆಯಲ್ಲಿ ಜೆಡಿಎಸ್ನ ಹಾಲಿ, ಮಾಜಿ ಶಾಸಕರು, ಪರಿಷತ್ ಸದಸ್ಯರು ಭಾಗಿಯಾದ್ರು, ಪಕ್ಷದಲ್ಲಿನ ಬೆಳವಣಿಗೆ ಬಗ್ಗೆ ಮುಕ್ತವಾಗಿ ಅಭಿಪ್ರಾಯ ಪಡೆದು, ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳೋ ಪ್ರಯತ್ನ ನಡೆಸಿದರು. ಇನ್ನು ಸಭೆ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಕುಮಾರಸ್ವಾಮಿ, ಏಪ್ರಿಲ್ನೊಳಗೆ JDS ರಾಜ್ಯಾಧ್ಯಕ್ಷರ ಆಯ್ಕೆ ಮಾಡುತ್ತೇವೆ. ಚುನಾವಣೆ ಮೂಲಕ JDS ರಾಜ್ಯಾಧ್ಯಕ್ಷರ ಆಯ್ಕೆ ಮಾಡುತ್ತೇವೆ. ನಾನು ನಾಲ್ಕು ದಿನಗಳ ಕಾಲ ನವದೆಹಲಿಯಲ್ಲಿ ಇರುತ್ತೇನೆ. ಹೀಗಾಗಿ ನಮ್ಮ ಪಕ್ಷದ ಎಲ್ಲ…
ಬೆಂಗಳೂರು:- ಇಂದು ಸಿಲಿಕಾನ್ ಸಿಟಿ ಬೆಂಗಳೂರಿಗೆ ಸುರ್ಜೇವಾಲ ಭೇಟಿ ಕೊಡಲಿದ್ದು, ಕಾಂಗ್ರೆಸ್ ಒಳಜಗಳದ ಬಗ್ಗೆ ಚರ್ಚೆ ನಡೆಸುವ ಸಾಧ್ಯತೆ ಇದೆ. https://ainlivenews.com/congress-is-trying-to-finish-kumaraswamy-hd-deve-gowda/ ಮೂಲಗಳ ಪ್ರಕಾರ, ಸುರ್ಜೆವಾಲ ಅವರು ಬೆಳಗಾವಿಯಲ್ಲಿ ಕಾಂಗ್ರೆಸ್ ಆಯೋಜಿಸಿರುವ ಜೈ ಬಾಪು, ಜೈ ಸಂವಿಧಾನ್ ಅಧಿವೇಶನಕ್ಕೆ ಪೂರ್ವಸಿದ್ಧತೆಗೆ ಈ ಸಭೆ ನಡೆಸಲಿದ್ದಾರೆ. ಇದೇ ಹೊತ್ತಲ್ಲಿ, ಕಾಂಗ್ರೆಸ್ನ ಆಂತರಿಕ ಕಲಹ ಸರಿಪಡಿಸುವ ಪ್ರಯತ್ನವನ್ನೂ ಅವರು ಮಾಡುವ ನಿರೀಕ್ಷೆ ಇದೆ. ಕೆಲಸ ಈ ಸಂದರ್ಭದಲ್ಲಿ ಆಗುವ ನಿರೀಕ್ಷೆ ಇದೆ. ರಾಜ್ಯಸಭಾ ಸಂಸದರು ಹಾಗೂ ಎಐಸಿಸಿ ಪ್ರಧಾನ ಕಾರ್ಯದರ್ಶಿಯೂ ಆದ ರಣದೀಪ್ ಸಿಂಗ್ ಸುರ್ಜೆವಾಲ ಅವರು ನಿನ್ನೆ ತಡರಾತ್ರಿ ಆಗಮಿಸಬೇಕಿತ್ತು. ಇವತ್ತು ಸೋಮವಾರ ಬೆಳಗ್ಗೆ 11 ಗಂಟೆಯೊಳಗೆ ಬೆಂಗಳೂರು ತಲುಪಲಿದ್ದಾರೆ. ಇವತ್ತು ಮೂರು ಸಭೆ ನಡೆಯಲಿದ್ದು, ಮೊದಲ ಸಭೆ ಬೆಳಗ್ಗೆ 11 ಗಂಟೆಗೆ ಕೆಪಿಸಿಸಿ ಕಚೇರಿಯಲ್ಲಿ ನಡೆಯಲಿದೆ. ಕೆಪಿಸಿಸಿ ವಿಸ್ತೃತ ಸರ್ವ ಸದಸ್ಯರ ಸಭೆ ಇದಾಗಿದೆ.
ಬೆಂಗಳೂರು:-ಕುಮಾರಸ್ವಾಮಿ ಮುಗಿಸಲು ಕಾಂಗ್ರೆಸ್ ಹುನ್ನಾರ ಮಾಡ್ತಿದೆ ಎಂದು HD ದೇವೇಗೌಡ ಹೇಳಿದ್ದಾರೆ. https://ainlivenews.com/rain-news-two-days-of-heavy-rain-in-these-districts-of-karnataka-2/ ಬೆಂಗಳೂರಿನ ಜೆಪಿ ಭವನದಲ್ಲಿ ಮಾತನಾಡಿದ ದೇವೇಗೌಡರು, ಜೆಡಿಎಸ್ ಪಕ್ಷವನ್ನು ಯಾರಿಂದಲೂ ಮುಗಿಸಲು ಸಾಧ್ಯವಿಲ್ಲ. ಕುಮಾರಸ್ವಾಮಿ ಅವರನ್ನು ಮುಗಿಸಲು ಕಾಂಗ್ರೆಸ್ ಹುನ್ನಾರ ನಡೆಸುತ್ತಿದೆ. ಅವರನ್ನು ಟಾರ್ಗೆಟ್ ಮಾಡಲಾಗುತ್ತಿದೆ. ಕುಮಾರಸ್ವಾಮಿ ಅವರನ್ನಾಗಲೀ, ಜೆಡಿಎಸ್ ಪಕ್ಷವನ್ನಾಗಲೀ ಮುಗಿಸಲು ಸಾಧ್ಯವೇ ಇಲ್ಲ. ಕುಮಾರಸ್ವಾಮಿ ಅವರ ಹಿಂದೆ ಕಾರ್ಯಕರ್ತರ ದೊಡ್ಡ ಪಡೆಯೇ ಇದೆ ಎಂದು ಮಾಜಿ ಪ್ರಧಾನಿಗಳು ಹೇಳಿದ್ದಾರೆ. ಇನ್ನೂ ಆಮಿಷ ಗಳನ್ನು ಒಡ್ಡಿ ಶಾಸಕರನ್ನು ಸಂಪರ್ಕ ಮಾಡುವ ಪ್ರಯತ್ನ ನಡೆಯುತ್ತಿದೆ. ಆದರೆ, ಆ ಪ್ರಯತ್ನ ಈಡೇರುವುದಿಲ್ಲ ಎಂದು ಕೇಂದ್ರ ಸಚಿವರೂ ಆದ ಕುಮಾರಸ್ವಾಮಿ ಹೇಳಿದ್ದಾರೆ. ‘ಜೆಡಿಎಸ್ ಪಕ್ಷದ ಬಗ್ಗೆ ಕಾಂಗ್ರೆಸ್ನಲ್ಲಿ ಕೆಲವರು ಮಾತನಾಡುತ್ತಿದ್ದಾರೆ. ಅವರು ಯಾವ ರೀತಿ ಅಡ್ಜಸ್ಟ್ಮೆಂಟ್ ಮಾಡಿಕೊಂಡು ಚುನಾವಣೆಯಲ್ಲಿ ಗೆದ್ದಿದ್ದಾರೆ ಎನ್ನುವುದು ನಮಗೆ ಗೊತ್ತಿದೆ. ಅಂಥವರ ಮಾತಿಗೆ ಹೆಚ್ಚು ತಲೆ ಕೆಡಿಸಿಕೊಳ್ಳಬೇಡಿ’ ಎಂದು ಜೆಡಿಎಸ್ ಸಭೆಯಲ್ಲಿ ಕುಮಾರಸ್ವಾಮಿ ತಿಳಿ ಹೇಳಿದ್ದಾರೆ.
ಬೆಂಗಳೂರು:- ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಎರಡು ದಿನ ಭಾರೀ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ. https://ainlivenews.com/meet-the-cow-udder-harvester-renukacharya/ ಕರ್ನಾಟಕದ ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಜನವರಿ 14 ರಿಂದ ಮಳೆಯಾಗಲಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಜಿಲ್ಲೆಗಳಲ್ಲಿ ಮಳೆಯಾಗಲಿದೆ. ವಿಜಯನಗರ, ಶಿವಮೊಗ್ಗ, ಹಾಸನ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು, ಬಳ್ಳಾರಿ,ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಹಾವೇರಿ, ಗದಗ,ಧಾರವಾಡ, ಬೀದರ್, ಬೆಳಗಾವಿ, ಬಾಗಲಕೋಟೆ, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡದಲ್ಲಿ ಒಣಹವೆ ಇರಲಿದೆ. ಎಚ್ಎಎಲ್ನಲ್ಲಿ 24.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 24.8ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 25.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 25.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ…
ದಾವಣಗೆರೆ:- ಹಸುಗಳ ಕೆಚ್ಚಲು ಕೊಯ್ದವರನ್ನು ಎನ್ಕೌಂಟರ್ ಮಾಡಿ ಎಂದು ರೇಣುಕಾಚಾರ್ಯ ಆಗ್ರಹಿಸಿದ್ದಾರೆ. https://ainlivenews.com/cow-udder-harvesting-case-in-bangalore-one-accused-arrested/ ಈ ಸಂಬಂಧ ಮಾತನಾಡಿದ ಅವರು, ಪಕ್ಷಾತೀತವಾಗಿ ಈ ಪ್ರಕರಣವನ್ನು ಖಂಡಿಸಬೇಕು. ಹಸುಗಳನ್ನು ದೇವರು ಎಂದು ಸಮಾಜ ಪೂಜಿಸುತ್ತದೆ. ಮತಾಂಧರು ವಿಕೃತ ಮನಸ್ಸಿನಿಂದ ಈ ಕೃತ್ಯ ನಡೆಸಿ ಹಿಂದೂ ಧರ್ಮಕ್ಕೆ ಅಪಮಾನ ಮಾಡಿದ್ದಾರೆ ಎಂದು ಆಕ್ರೋಶ ಹೊರಹಾಕಿದ್ದಾರೆ. ಜಮೀರ್ ಅಹ್ಮದ್ ಕ್ಷೇತ್ರದಲ್ಲಿ ಇಂತಹ ದುರ್ಘಟನೆ ನಡೆದಿದೆ. ಈ ಕೃತ್ಯ ನಡೆಸಿದ್ದು ಭಯೋತ್ಪಾದಕ ಅಲ್ಪಸಂಖ್ಯಾತರು. ಈ ಘಟನೆಗೆ ಕೇವಲ ಜಮೀರ್ ಮಾತ್ರ ಅಲ್ಲ, ಇಡೀ ಕಾಂಗ್ರೆಸ್ ಕಾರಣ. ಅಲ್ಪಸಂಖ್ಯಾತ ಗೂಂಡಾಗಳು ಅಟ್ಟಹಾಸದಿಂದ ಮೆರೆಯುತ್ತಿದ್ದಾರೆ. ಇಂತಹ ಕೃತ್ಯ ನಡೆಸಿದವರನ್ನು ಬಂಧಿಸುವುದಷ್ಟೇ ಅಲ್ಲ, ಎನ್ಕೌಂಟರ್ ಮಾಡಿ ಬಿಸಾಕಬೇಕು ಎಂದು ಆಕ್ರೋಶ ಹೊರಹಾಕಿದ್ದಾರೆ.