Author: AIN Author

ಬೆಂಗಳೂರು: ಬೆಂಗಳೂರಿನ ಅರಮನೆ ಮೈದಾನದಲ್ಲಿ ಮೂರು‌ ದಿನಗಳಿಂದ ನಡೆಯುತ್ತಿದ್ದ ಇನ್ವೆಸ್ಟ್ ಕರ್ನಾಟಕ- 2025 ಹೂಡಿಕೆದಾರರ ಸಮಾವೇಶಕ್ಕೆ ವಿದ್ಯುಕ್ತ ತೆರೆ ಬಿದ್ದಿದೆ.‌ ಹೆಚ್ಚು ಬಂಡವಾಳ ಹೂಡಿಕೆಯ ನಿರೀಕ್ಷೆಯಲ್ಲಿದ್ದ ಕರ್ನಾಟಕ ಸರ್ಕಾರಕ್ಕೆ ನಿರೀಕ್ಷೆಗೂ ಮೀರಿ ಜಯ ಸಿಕ್ಕಿದೆ.‌ ವಸ್ತು ಪ್ರದರ್ಶನದಲ್ಲಿನ ತಂತ್ರಜ್ಞಾನ, ಒಂಡಬಡಿಕೆ, ಗೋಷ್ಠಿ, ಸಂವಾದ ಕಾರ್ಯಕ್ರಮಗಳೂ ಕಳೆದ ಬಾರಿಯ ಇನ್ವೆಸ್ಟ್ ಕರ್ನಾಟಕದ ರೆಕಾರ್ಡ್ ಬ್ರೇಕ್ ಮಾಡಿವೆ…. https://ainlivenews.com/good-news-applications-invited-for-4500-teacher-posts-eligible-candidates-should-apply-today/ ಇನ್ವೆಸ್ಟ್ ಕರ್ನಾಟಕ ಸಮ್ಮಿಟ್ ಗೆ ಮುನ್ನುಡಿ ಬರೆದಿದ್ದೇ ಕರ್ನಾಟಕ, ಇದೀಗ ಅನ್ಯ ರಾಜ್ಯಗಳು ಕರ್ನಾಟಕದ ಇನ್ವೆಸ್ಟ್ ಮೀಟ್ ಅನುಸರಿಸುತ್ತಿದೆ. ಅದರಲ್ಲೂ ಈ ಬಾರಿ ನಡೆದ ಬಂಡವಾಳ ಹೂಡಿಕೆದಾರರ ಸಮಾವೇಶ ನವೋದ್ಯಮಿ, ಉದ್ಯಮಿಗಳಿಗೆ, ಹೂಡಿಕೆದಾರರಿಗೆ ಸರ್ಕಾರ ಅವಕಾಶ ಮಾಡಿಕೊಟ್ಟಿದೆ. 3 ದಿನಗಳ ಕಾಲ ನಡೆದ ಇನ್ವೆಸ್ಟ್ ಕರ್ನಾಟಕ ಸಮಾವೇಶಕ್ಕೆ ಇಂದು ಅದ್ಧೂರಿ ತೆರೆ ಬಿದ್ದಿದೆ. ಇಂದು ಅರಮನೆ ಮೈದಾನದಲ್ಲಿ ಸಮಾರೋಪ ಸಮಾರಂಭ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಕೇಂದ್ರ ಸಚಿವ ವಿ.ಸೋಮಣ್ಣ, ಸಂಸದ ಶಿಶಿ ತರೂರ್, ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್, ಡಿಸಿಎಂ ಡಿ‌ಕೆ‌ ಶಿವಕುಮಾರ್ ಸೇರಿದಂತೆ ರಾಜ್ಯ…

Read More

ಶಿಕ್ಷಕ ಹುದ್ದೆಯ ನಿರೀಕ್ಷೆಯಲ್ಲಿ ಇದ್ದವರಿಗೆ ಗುಡ್ ನ್ಯೂಸ್ ಸಿಕ್ಕಿದೆ. ಖಾಲಿ ಇರುವ 4,500 ಕಿರಿಯ ಮತ್ತು ಹಿರಿಯ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿಗೆ ಅರ್ಜಿಗಳನ್ನು ಅಸ್ಸಾಂನ ಪ್ರಾಥಮಿಕ ಶಿಕ್ಷಣ ನಿರ್ದೇಶನಾಲಯ ಅರ್ಜಿ ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಫೆಬ್ರವರಿ 15 ರಿಂದ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಅಧಿಕೃತ ವೆಬ್‌ಸೈಟ್ dee.assam.gov.in ಗೆ ಭೇಟಿ ನೀಡುವ ಮೂಲಕ ಆನ್‌ಲೈನ್ ಮೋಡ್‌ನಲ್ಲಿ ಅರ್ಜಿ ಸಲ್ಲಿಸಬೇಕು. https://ainlivenews.com/a-case-of-abuse-of-an-officer-mla-sangamesh-nikhil-kumaraswamy-sparks-against-his-son/ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಮಾರ್ಚ್ 31. ಹುದ್ದೆಗಳ ಪೈಕಿ, 2900 ಹುದ್ದೆಗಳು ಕಿರಿಯ ಪ್ರಾಥಮಿಕ ಶಾಲೆಗಳಲ್ಲಿ ಸಹಾಯಕ ಶಿಕ್ಷಕರ ಹುದ್ದೆಗಳಿಗೆ ಮತ್ತು 1,600 ಹುದ್ದೆಗಳು ಹಿರಿಯ ಪ್ರಾಥಮಿಕ (ಯುಪಿ) ಶಾಲೆಗಳಲ್ಲಿ ಸಹಾಯಕ ಶಿಕ್ಷಕರು, ವಿಜ್ಞಾನ ಶಿಕ್ಷಕರು ಮತ್ತು ಹಿಂದಿ ಶಿಕ್ಷಕರ ಹುದ್ದೆಗಳಿಗೆ ಸೇರಿವೆ. ಅಭ್ಯರ್ಥಿಯು ಅರ್ಜಿ ಸಲ್ಲಿಸಲು ಯಾವ ಅರ್ಹತೆಗಳನ್ನು ಹೊಂದಿರಬೇಕು ಮತ್ತು ಆಯ್ಕೆಯನ್ನು ಹೇಗೆ ಮಾಡಲಾಗುತ್ತದೆ ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ ಅರ್ಜಿದಾರರು TET CTET ಉತ್ತೀರ್ಣರಾಗಿರಬೇಕು. ಪ್ರಾಥಮಿಕ ಶಿಕ್ಷಣದಲ್ಲಿ 2 ವರ್ಷಗಳ ಡಿಪ್ಲೊಮಾ ಕೂಡ…

Read More

ಹುಬ್ಬಳ್ಳಿ: 144 ವರ್ಷಗಳಿಗೊಮ್ಮೆ ನಡೆಯುವ ಮಹಾಕುಂಭಮೇಳ ಒಂದು ಅದ್ಭುತವೇ ಸರಿ! ಭಗೀರಥನ ತಪಸ್ಸಿನಿಂದ ಸ್ವರ್ಗದಿಂದ ಧರೆಗಿಳಿದು, ನಮ್ಮ ಭೂಮಿಯನ್ನು ಉದ್ಧರಿಸಿದ ತಾಯಿ ಗಂಗಾ ಮಾತೆ ಹೇಗೆ ತಾಯಿ ಯಮುನೆ ಮತ್ತು ತಾಯಿ ಸರಸ್ವತಿ ಯರನ್ನು ಸೇರುವ ಸಂಗಮದಲ್ಲಿ ನಿರ್ಮಲವಾಗಿ, ರಭಸದಿಂದ ಸಲಿಲವಾಗಿ ಪ್ರಯಾಗದಲ್ಲಿ ಹರಿಯುತ್ತಿದ್ದಾಳೆ. ಸನಾತನ ಸಂಸ್ಕೃತಿಯ ಏಕತೆಯ ಮಹಾಯಜ್ಞ ಕುಂಭಮೇಳದ ಅನುಭವ ಪಡೆದ ನಾನು ಧನ್ಯ ಎಂದು‌ ಸಾಮಾನ್ಯರಂತೆ ಕುಟುಂಬ ಸಮೇತ ಪ್ರಯಾಗ್ ರಾಜ್ ನ ಕುಂಭಮೇಳದಲ್ಲಿ ಭಾಗಿಯಾದ ಶಾಸಕ ಅರವಿಂದ ಬೆಲ್ಲದ ಅವರು ತಮ್ಮ ಅನುಭವವನ್ನು ಹಂಚಿಕೊಂಡಿದ್ದಾರೆ. ಕೋಟ್ಯಾಂತರ ಭಕ್ತರು ಸೇರುವ ಸ್ಥಳವನ್ನು ವ್ಯವಸ್ಥಿತವಾಗಿ‌ ಯೋಜಿಸುವುದೆಂದರೆ ಅದು ಸಾಹಸವೇ ಸರಿ! ಪ್ರಧಾನಿ ಶ್ರೀ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಯೋಗಿ ಜೀ ಸರ್ಕಾರವು ಕಲ್ಪಿಸಿದ ಅದ್ಭುತ ವ್ಯವಸ್ಥೆಗೆ ಅನಂತಾನಂತ ಧನ್ಯವಾದಗಳು ಎಂದು ಕೃತಜ್ಞತೆ ತಿಳಿಸಿದ್ದಾರೆ. ಸರಿಯಾದ ಲೈನಿಂಗ್ ಮಾಡಿರುವ ಕಸದ ಬುಟ್ಟಿಯಿಂದ ಹಿಡಿದು, ಪ್ರತಿ 800 ಮೀಟರ್ ಗೆ ಪುರುಷರಿಗೆ ನೀಲಿ ಬಣ್ಣದ ಹಾಗೂ ಮಹಿಳೆಯರಿಗೆ ಗುಲಾಬಿ ಬಣ್ಣದ ಸ್ವಚ್ಛ…

Read More

ಬೆಂಗಳೂರು:- ರಾಜಧಾನಿ ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ನಾಳೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ. https://ainlivenews.com/the-accused-was-arrested-for-growing-ganja-plants-on-the-floor/ 66/11 ಕೆವಿ ಎಲಿಟಾ ಪ್ರೋಮೊನೇಡ್ ಉಪಕೇಂದ್ರದಲ್ಲಿ ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆ ನಗರದ ಹಲವು ಪ್ರದೇಶಗಳಲ್ಲಿ ಫೆಬ್ರವರಿ 15 ರಂದು ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಅಧಿಕಾರಿಗಳು ತಿಳಿಸಿದ್ದಾರೆ. ಫೆಬ್ರವರಿ 15ರ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆವರೆಗೆ ಶ್ರೀನಗರ, ಹೊಕೆರೆಹಳ್ಳಿ, ಪಿಇಎಸ್ ಎಂಜಿನಿಯರಿಂಗ್ ಕಾಲೇಜು, ವೀರಭದ್ರನಗರ, ಬ್ಯಾಂಕ್ ಕಾಲೋನಿ, ಹನುಮಂತನಗರ, ಗಿರಿನಗರ, ಸೀತಾ ವೃತ್ತ, ವಿದ್ಯಾಪೀಠ ವೃತ್ತ, ಪ್ರಮೋದ್ ಲೇಔಟ್, ಮುನೇಶ್ವರ ಬ್ಲಾಕ್, ನಾಗೇಂದ್ರ ಬ್ಲಾಕ್, ಬುಲ್ ಟೆಂಪಲ್ ರಸ್ತೆ, ಕತ್ರಿಗುಪ್ಪೆ, ಅವಲಹಳ್ಳಿ, ಸ್ಟರ್ಲಿಂಗ್ ಅಪಾರ್ಟ್‌ಮೆಂಟ್, ಎನ್ ಟಿ ವೈ ಲೇಔಟ್, ತ್ಯಾಗರಾಜನಗರ. ಬಸವನಗುಡಿ, ಬನಶಂಕರಿ 3ನೇ ಹಂತ, ನಿಮ್ಹಾನ್ಸ್, ಕಿದ್ವಾಯ್, ರಾಜೀವ್ ಗಾಂಧಿ, ಸಂಜಯ್ ಗಾಂಧಿ, ಇಂಧಿರಾಗಾಂಧಿ, ಜಯನಗರ-1ನೇ, 2ನೇ, 3ನೇ, 4ನೇ,…

Read More

ಬೆಂಗಳೂರು:- ಎಫ್​ಐಆರ್ ದಾಖಲಾದ 2 ತಿಂಗಳ ಬಳಿಕ ಕೋವಿಡ್ ಹಗರಣದ ತನಿಖೆ ಹೊಣೆ ಸಿಐಡಿಗೆ ವಹಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. https://ainlivenews.com/a-series-of-accidents-on-the-k-r-market-flyover/ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿತ್ತು ಎನ್ನಲಾದ ಕೋವಿಡ್ ಹಗರಣದ ತನಿಖೆ ಹೊಣೆಯನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ಇದೀಗ ಸಿಐಡಿಗೆ ವಹಿಸಿದೆ. ಪ್ರಕರಣ ಸಂಬಂಧ ಎಫ್ಐಆರ್ ದಾಖಲಾದ ಎರಡು ತಿಂಗಳ ಬಳಿಕ ಸಿಐಡಿ ತನಿಖೆಗೆ ಆದೇಶಿಸಲಾಗಿದೆ. ಡಿಸೆಂಬರ್ 13ರಂದು ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ವೈದ್ಯಕೀಯ ಶಿಕ್ಷಣ ಇಲಾಖೆ ನಿರ್ದೇಶಕ ಡಾ. ಪಿಜಿ ಗಿರೀಶ್, ಲೆಕ್ಕಪತ್ರ ಇಲಾಖೆ ಜಂಟಿ ನಿಯಂತ್ರಕ ಜೆಪಿ ರಘು, ಚುನಾಯಿತ ಪ್ರತಿನಿಧಿಗಳು ಸೇರಿ ಇತರರ ವಿರುದ್ಧ ಎಫ್ಐಆರ್ ದಾಖಲಾಗಿತ್ತು. ಈ ಹಿಂದೆ ಕೋವಿಡ್ ಅಕ್ರಮದ ತನಿಖೆಗೆ ವಿಶೇಷ ತನಿಖಾ ತಂಡ ರಚಿಸುವ ಬಗ್ಗೆ ಸಚಿವ ಸಂಪುಟ ನಿರ್ಧಾರ ಕೈಗೊಂಡಿತ್ತು. ಆದರೆ ಹಗರಣದಲ್ಲಿ ಪ್ರಭಾವಿ ರಾಜಕಾರಣಿಗಳು ಹಾಗೂ ಐಎಎಸ್ ಅಧಿಕಾರಿಗಳ ಹೆಸರು ಪ್ರಸ್ತಾಪವಾಗಿರುವುದರಿಂದ ಎಸ್ಐಟಿ ನೇತೃತ್ವ ವಹಿಸಲು ಐಪಿಎಸ್ ಅಧಿಕಾರಿಗಳು ಹಿಂದೇಟು ಹಾಕಿದ್ದರು. ಹೀಗಾಗಿ…

Read More

ಬೆಂಗಳೂರು:- ಕೆ.ಆರ್.ಮಾರ್ಕೆಟ್ ಫ್ಲೈಓವರ್ ಮೇಲೆ ಸರಣಿ ಅಪಘಾತ ಸಂಭವಿಸಿದೆ. BMTC ಬಸ್ , ಬೈಕ್ ಗಳ ನಡುವೆ ಅಪಘಾತ ಸಂಭವಿಸಿ ಎರಡು ಬೈಕ್ ನಲ್ಲಿದ್ದ ಮೂವರು ಸವಾರರಿಗೆ ಗಾಯವಾಗಿದೆ. https://ainlivenews.com/elephant-attack-at-temple-three-dead-in-kerala/ ಬಸ್ ನಡಿ ಸಿಲುಕಿದ್ದ ಎರಡೂ ಬೈಕ್ ಗಳು ಸಂಪೂರ್ಣ ಜಖಂ ಆಗಿವೆ. ಘಟನೆ ಬಳಿಕ ರಸ್ತೆಯಲ್ಲೇ ಬಸ್ ಬಿಟ್ಟು ಚಾಲಕ ಪರಾರಿ ಆಗಿದ್ದಾನೆ. ಕೆಂಗೇರಿಯಿಂದ ಮೆಜೆಸ್ಟಿಕ್ ಕಡೆಗೆ ಬರುತ್ತಿದ್ದ ಬಸ್ ಡಿಕ್ಕಿ ಹೊಡೆದಿದ್ದು, ಗಾಯಾಳುಗಳಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

Read More

ತಿರುವನಂತಪುರಂ:- ಆನೆ ದಾಳಿಯಿಂದ ಉಂಟಾದ ಕಾಲ್ತುಳಿತಕ್ಕೆ 3 ವೃದ್ಧರು ಸಾವನ್ನಪ್ಪಿದ ಘಟನೆ ಕೇರಳದ ಕೊಯಿಲಾಂಡಿ ಬಳಿಯ ಮನಕುಲಂಗರ ದೇವಸ್ಥಾನದಲ್ಲಿ ಜರುಗಿದೆ. https://ainlivenews.com/the-tanker-followed-the-driver-as-he-got-out-and-crashed-into-the-grocery-store/ ಗುರುವಾರ ಸಂಜೆ ನಡೆದ ದೇವಾಲಯದ ಉತ್ಸವಕ್ಕೆ ದೇವಾಲಯದ ಉತ್ಸವಕ್ಕಾಗಿ ಆನೆಗಳನ್ನು ತರಲಾಗಿತ್ತು. ಈ ಸಂದರ್ಭದಲ್ಲಿ ಪಟಾಕಿ ಸಿಡಿಸಿದಾಗ ಎರಡು ಆನೆಗಳು ಆತಂಕಕ್ಕೊಳಗಾಗಿ ಅಡ್ಡದಿಡ್ಡಿ ಚಲಿಸಿವೆ. ಇದರ ಪರಿಣಾಮದಿಂದ ಉಂಟಾದ ಕಾಲ್ತುಳಿತದಲ್ಲಿ ಮೂವರು ವೃದ್ಧರು ಸಾವನ್ನಪ್ಪಿದ್ದಾರೆ ಆನೆಗಳು ದೇವಾಲಯದ ಕಟ್ಟಡಕ್ಕೆ ಡಿಕ್ಕಿ ಹೊಡೆದಾಗ, ಅದರ ಗೋಡೆಯ ಒಂದು ಭಾಗ ಕುಸಿದು ಬಿದ್ದಿದೆ. ಕೆಲವರು ಅದರ ಕೆಳಗೆ ಸಿಲುಕಿಕೊಂಡರು. ಇದುವರೆಗೆ ಬಂದಿರುವ ಮಾಹಿತಿಯ ಪ್ರಕಾರ, ಗೋಡೆ ಕುಸಿದು ಇಬ್ಬರು ಮಹಿಳೆಯರು ಮತ್ತು ಒಬ್ಬ ಪುರುಷ ಸಾವನ್ನಪ್ಪಿದ್ದಾರೆ. ಸುಮಾರು 20 ಜನರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ನೀಡಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Read More

ಕಲಬುರ್ಗಿ:- ಆತ ಡ್ರೈವರ್… ಹೀಗೆ ಟೀ, ಕಾಫಿ ಕುಡಿಯಲೆಂದೋ ಕಿರಾಣಿ ಅಂಗಡಿ ಹತ್ತಿರ ಹೋಗಿದ್ದಾನೆ. ಇದೇ ವೇಳೆ ಡೀಸೆಲ್ ಟ್ಯಾಂಕರ್ ಸೈಡ್ ಗೆ ಹಾಕಿ ಹೆೋಗಿದ್ದಾನೆ. ಆತ ಇಳಿಯುತ್ತಿದ್ದಂತೆ ಚಾಲಕನನ್ನೇ ಟ್ಯಾಂಕರ್ ಫಾಲೋ ಮಾಡಿದೆ. ಆಮೇಲೆ ನಡೆದ ಅವಾಂತರ ತಿಳಿಯಲು ಸ್ಟೋರಿ ಓದಿ. https://ainlivenews.com/there-is-a-cure-for-diabetes-right-in-your-kitchen/ ಹೌದು, ಕಲಬುರಗಿ ಜಿಲ್ಲೆ ಶಹಬಾದ್ ತಾಲೂಕಿನ ಭಂಕೂರು ಗ್ರಾಮದಲ್ಲಿ ಚಾಲಕನ ನಿರ್ಲಕ್ಷ್ಯದಿಂದ ಡಿಸೆಲ್ ಟ್ಯಾಂಕರ್ ಅಂಗಡಿಯೊಂದಕ್ಕೆ ನುಗ್ಗಿದೆ. ಟ್ಯಾಂಕರ್‌ನ ಹ್ಯಾಂಡ್‌ಬ್ರೇಕ್ ಹಾಕದೇ ನಿಲ್ಲಿಸಿದ್ದ ಚಾಲಕ ಕಿರಾಣಿ ಅಂಗಡಿಗೆ ಹೋಗಿದ್ದ. ಈ ವೇಳೆ ಡ್ರೈವರ್ ಹಿಂದೆಯೇ ಡೀಸೆಲ್ ಟ್ಯಾಂಕರ್ ಕಿರಾಣ ಅಂಗಡಿಗೆ ನುಗ್ಗಿದೆ. ವಿಜಪ್ಪಗೌಡ ಎಂಬವರಿಗೆ ಸೇರಿದ ಕಿರಾಣಿ ಅಂಗಡಿ ಇದಾಗಿದ್ದು, ಅದೃಷ್ಟವಶಾತ್ ಭಾರಿ ಅನಾಹುತ ತಪ್ಪಿದೆ. ಕಿರಾಣ ಅಂಗಡಿ ಸಂಪೂರ್ಣ ಜಖಂಗೊಂಡಿದೆ. ಶಹಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಮನುಷ್ಯನನ್ನು ಹೆಚ್ಚು ಬಾಧಿಸುವ ಕಾಯಿಲೆಗಳಲ್ಲಿ ಮಧುಮೇಹ ಕೂಡ ಒಂದು. ಮಧುಮೇಹವನ್ನು ಸಕ್ಕರೆ ಕಾಯಿಲೆ ಎಂದು ಕರೆಯಲಾಗುತ್ತದೆ. ಒಮ್ಮೆ ಈ ಕಾಯಿಲೆ ಆರಂಭವಾದರೆ ಜೀವನಪರ್ಯಂತ ಔಷಧ ತೆಗೆದುಕೊಳ್ಳಲೇಬೇಕೆಂದು ಹೇಳಲಾಗುತ್ತದೆ. ಇರಿಸಲು ಔಷಧ ಸೇವನೆ ಇಲ್ಲದೇ ಮಧುಮೇಹವನ್ನು ನಿಯಂತ್ರಣದಲ್ಲಿ ಇರಿಸಲು ಸಾಧ್ಯವೇ ಇಲ್ಲ ಎಂಬ ಅಭಿಪ್ರಾಯ ಸಾರ್ವತ್ರಿಕವಾಗಿದೆ. https://ainlivenews.com/attention-train-passengers-bengaluru-hubballi-vijayapura-traffic-cancelled/ ಆದರೆ ಈ ಮನೆ ಮದ್ದು ಉಪಯೋಗಿಸಿದರೆ ರಿಸಲ್ಟ್ ಗ್ಯಾರಂಟಿ ಎನ್ನಲಾಗಿದೆ. ಏಲಕ್ಕಿ ರುಚಿ ಮತ್ತು ಸುವಾಸನೆಗೆ ಹೆಸರುವಾಸಿಯಾಗಿದೆ. ಪ್ರತಿದಿನ ಒಂದು ಅಥವಾ ಎರಡು ಏಲಕ್ಕಿ ಕಾಳುಗಳನ್ನು ಸೇವಿಸುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಣದಲ್ಲಿಡಲು ಸಹಾಯ ಮಾಡುತ್ತದೆ ಎಂದು ತಜ್ಞರು ಹೇಳುತ್ತಾರೆ. ಅಲ್ಲದೆ, ಇದರಲ್ಲಿರುವ ಔಷಧೀಯ ಗುಣಗಳು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ಇದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟವು 150 ಮೀರುವುದಿಲ್ಲ. ಆದ್ದರಿಂದ, ಮಧುಮೇಹಿಗಳು ತಮ್ಮ ಆಹಾರದಲ್ಲಿ ವಿಶೇಷವಾಗಿ ಏಲಕ್ಕಿಯನ್ನು ಸೇರಿಸಿಕೊಳ್ಳಬೇಕು ಎಂದು ರಾಷ್ಟ್ರೀಯ ಆರೋಗ್ಯ ಸಂಸ್ಥೆಗಳು ಹೇಳುತ್ತವೆ. ಏಲಕ್ಕಿಯಲ್ಲಿ ನಾರಿನಂಶ ಹೆಚ್ಚಾಗಿದ್ದು, ಜೀರ್ಣಕ್ರಿಯೆ ಸುಧಾರಿಸುತ್ತದೆ. ನಿಮ್ಮ ಜೀರ್ಣಕ್ರಿಯೆ ಉತ್ತಮವಾಗಿದ್ದರೆ, ನಿಮ್ಮ ಸಕ್ಕರೆ…

Read More

ಹುಬ್ಬಳ್ಳಿ:- ಬೆಂಗಳೂರು, ಹುಬ್ಬಳ್ಳಿ-ವಿಜಯಪುರ ರೈಲು ರದ್ದು ಮಾಡಲಾಗಿದೆ. ವಿಜಯಪುರದ ಮುಗಳೊಳ್ಳಿ–ಜಡ್ರಾಮಕುಂಟಿ–ಆಲಮಟ್ಟಿ ನಿಲ್ದಾಣಗಳ ನಡುವೆ ಜೋಡಿ ರೈಲು ಮಾರ್ಗದ ಕಾಮಗಾರಿ ಹಿನ್ನೆಲೆ ಸಂಚಾರ ರದ್ದು ಮಾಡಲಾಗಿದೆ. https://ainlivenews.com/valentines-day-do-you-know-why-do-we-fall-in-love-is-it-true/ ಎಸ್‌ಎಸ್ಎಸ್ ಹುಬ್ಬಳ್ಳಿಯಿಂದ ಹೊರಡುವ ಹುಬ್ಬಳ್ಳಿ–ಸೋಲಾಪುರ ಡೈಲಿ ಪ್ಯಾಸೆಂಜರ್ (56906) ಫೆಬ್ರವರಿ 17 ರಿಂದ 25 ರವರೆಗೆ, ಸೋಲಾಪುರ–ಧಾರವಾಡ ಡೈಲಿ ಪ್ಲಾಸೆಂಜರ್ ಸ್ಪೆಷಲ್ ಫೆಬ್ರವರಿ 18 ರಿಂದ 26 ರವರೆಗೆ, ಸೋಲಾಪುರ–ಹೊಸಪೇಟೆ ಡೈಲಿ ಎಕ್ಸ್ ಪ್ರೆಸ್ (11415) ಫೆ 25 ರಂದು ಮತ್ತು ಫೆಬ್ರವರಿ 26 ರಂದು ಹೊಸಪೇಟೆ–ಸೋಲಾಪುರ ಡೈಲಿ ಎಕ್ಸ್ ಪ್ರೆಸ್ (11416) ರೈಲುಗಳ ಪ್ರಯಾಣವನ್ನು ತಾತ್ಕಾಲಿಕವಾಗಿ ರದ್ದು ರದ್ದುಗೊಳಿಸಲಾಗಿದೆ. ರೈಲುಗಳ ಸಂಚಾರ ಭಾಗಶಃ ರದ್ದು ಯಶವಂತಪುರದಿಂದ ಹೊರಡುವ ರೈಲು ಸಂಖ್ಯೆ 06545: ಯಶವಂತಪುರ–ವಿಜಯಪುರ ಡೈಲಿ ಎಕ್ಸ್‌ಪ್ರೆಸ್ ವಿಶೇಷ ರೈಲು ಗದಗ–ವಿಜಯಪುರ ನಿಲ್ದಾಣಗಳ ನಡುವೆ ಫೆಬ್ರವರಿ16 ರಿಂದ 24 ರವರೆಗೆ ಭಾಗಶಃ ರದ್ದುಗೊಳ್ಳುತ್ತದೆ. ಈ ರೈಲು ವಿಜಯಪುರ ನಿಲ್ದಾಣದ ಬದಲಾಗಿ ಗದಗದಲ್ಲಿ ಕೊನೆಗೊಳ್ಳಲಿದೆ. ರೈಲು ಸಂಖ್ಯೆ 06546 ವಿಜಯಪುರ–ಯಶವಂತಪುರ ಡೈಲಿ ವಿಶೇಷ ಎಕ್ಸ್‌ಪ್ರೆಸ್ ರೈಲು…

Read More