ಯಾರಿಗೆ ತಾನೇ ಸೀಬೆಹಣ್ಣು ಎಂದರೆ ಇಷ್ಟ ಇಲ್ಲ ಹೇಳಿ? ರುಚಿಯಿಂದಲೇ ಹೆಸರು ಮಾಡಿರುವ ಸೀಬೆಹಣ್ಣು ಮಾರುಕಟ್ಟೆಯಲ್ಲಿ ಇತ್ತೀಚಿನ ದಿನಗಳಲ್ಲಿ ಚಾಟ್ಸ್ ಸ್ವರೂಪದಲ್ಲಿ ಕೂಡ ಸಿಗುತ್ತಿದೆ. ಅರ್ಧಂಬರ್ಧ ಹಣ್ಣದ ಸೀಬೆಕಾಯಿ ಹಲ್ಲು ನೋವು ನಿವಾರಣೆಯ ಜೊತೆಗೆ ವಸಡುಗಳ ಆರೋಗ್ಯವನ್ನು ಕೂಡ ಕಾಪಾಡುತ್ತದೆ. ಇದೇ ಆರೋಗ್ಯ ಪ್ರಯೋಜನಗಳನ್ನು ಸೀಬೆ ಮರದ ಎಲೆಗಳು ಕೂಡ ನೀಡುತ್ತವೆ. https://ainlivenews.com/attempt-to-rape-teacher-by-entering-anganwadi-center-file-fir/ ಅನೇಕ ಜನರು ಪೇರಲ ತಿನ್ನಲು ಇಷ್ಟಪಡುತ್ತಾರೆ. ಪೇರಲ ಹಣ್ಣನ್ನು ತಿನ್ನುವುದರಿಂದ ಹಲವಾರು ಪ್ರಯೋಜನಗಳಿವೆ. ಸೇಬಿನಲ್ಲಿ ಕಂಡುಬರುವ ಎಲ್ಲಾ ಪೋಷಕಾಂಶಗಳು ಪೇರಲದಲ್ಲಿ ಲಭ್ಯವಿದೆ. ಸಕ್ಕರೆ ಕಾಯಿಲೆ ಇರುವವರು ಪೇರಲ ಹಣ್ಣನ್ನು ಯಾವುದೇ ಭಯವಿಲ್ಲದೇ ತಿನ್ನಬಹುದು ಪೇರಲ ಎಲೆಗಳನ್ನು ಸೇವಿಸುವುದರಿಂದ ಮಧುಮೇಹವನ್ನು ನಿಯಂತ್ರಣದಲ್ಲಿಡಬಹುದು. ಇದರಲ್ಲಿರುವ ಫೀನಾಲಿಕ್ ಸಂಯುಕ್ತವು ಹೈಪರ್ಗ್ಲೈಸೆಮಿಕ್ ವಿರೋಧಿ ಗುಣಗಳನ್ನು ಹೊಂದಿದೆ. ಇವು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತವೆ. ಹಾಗಾಗಿ ಮಧುಮೇಹಿಗಳು ಪೇರಲ ಎಲೆಗಳನ್ನು ಜಗಿಯುವುದು ತುಂಬಾ ಒಳ್ಳೆಯದು. ಪೇರಲ ಎಲೆಗಳನ್ನು ಸೇವಿಸುವುದರಿಂದ ಮಧುಮೇಹವನ್ನು ನಿಯಂತ್ರಣದಲ್ಲಿಡಬಹುದು. ಇದರಲ್ಲಿರುವ ಫೀನಾಲಿಕ್ ಸಂಯುಕ್ತವು ಹೈಪರ್ಗ್ಲೈಸೆಮಿಕ್ ವಿರೋಧಿ ಗುಣಗಳನ್ನು ಹೊಂದಿದೆ.…
Author: AIN Author
ಚಿಕ್ಕೋಡಿ:- ಬೆಳಗಾವಿ ಜಿಲ್ಲೆಯ ರಾಯಬಾಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಂಗನವಾಡಿ ಕೇಂದ್ರಕ್ಕೆ ನುಗ್ಗಿ ಶಿಕ್ಷಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ಜರುಗಿದೆ. https://ainlivenews.com/congress-mla-voiced-the-cry-of-dk-next-cm/ ತಾಲೂಕಿನ ಅಂಗನವಾಡಿ ಕೇಂದ್ರದಲ್ಲಿರುವ ಅಡುಗೆ ಸಿಬ್ಬಂದಿಗೆ ಶೌಚಾಲಯ ಸ್ವಚ್ಛ ಮಾಡುವಂತೆ ಅಡುಗೆ ಮಾಡುವ ಮಹಿಳೆಗೆ ಶಿಕ್ಷಕಿ ಹೇಳಿದ್ದಾರೆ. ಈ ವಿಚಾರವನ್ನ ತನ್ನ ಗಂಡನಿಗೆ ಅಡುಗೆ ಸಿಬ್ಬಂದಿ ಸಾವಿತ್ರಿ ಕರ್ಲಟ್ಟಿ ಹೋಗಿ ಹೇಳಿದ್ದಾರೆ. ಇದರಿಂದ ಕೋಪಗೊಂಡು ಅಂಗನವಾಡಿಗೆ ಆಗಮಿಸಿದ್ದ ಆರೋಪಿ ಸಿದ್ರಾಯಿ ಕರ್ಲಟ್ಟಿ, ತನ್ನ ಹೆಂಡತಿಗೆ ಶೌಚಾಲಯ ಕ್ಲಿನ್ ಮಾಡಲು ಹಚ್ಚುತ್ತಿಯಾ ಅಂತಾ ಅವಾಚ್ಯವಾಗಿ ನಿಂದಿಸಿದ್ದಾರೆ. ರಾಯಬಾಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದೇ ವೇಳೆ ಶಿಕ್ಷಕಿ ಸೀರೆ ಎಳೆದು ಮಾನಭಂಗ ಪಡಿಸಲು ಯತ್ನಿಸಿರುವುದಾಗಿ ಆರೋಪಿಸಲಾಗಿದೆ. ಇನ್ನು ಶಿಕ್ಷಕಿ ಬ್ರೈನ್ ಟ್ಯೂಮರ್ದಿಂದ ಬಳಲುತ್ತಿದ್ದು, ಮಾನಸಿಕ ಕಿರುಕುಳ ತಾಳಲಾರದೇ ಆತ್ಮಹತ್ಯೆಗೂ ಯತ್ನಿಸಿದ್ದಾರೆ.
ಬೆಂಗಳೂರು:- ಡಿಕೆ ಮುಂದಿನ ಸಿಎಂ ಕೂಗಿಗೆ ಕಾಂಗ್ರೆಸ್ ಶಾಸಕ ಶಿವಗಂಗಾ ಬಸವರಾಜು ಧ್ವನಿಗೂಡಿಸಿದ್ದಾರೆ. https://ainlivenews.com/if-the-congress-government-stops-the-five-guarantees-people-will-be-beaten-in-the-middle-of-the-road-ks-eshwarappa/ ಡಿ.ಕೆ ಶಿವಕುಮಾರ್ ಸಿಎಂ ಆಗೇ ಆಗುತ್ತಾರೆ. ಒಳ್ಳೇ ದಿನ ಬಂದೇ ಬರುತ್ತೆ. ನಾವು ಅವರ ಪರ ಇರುತ್ತೇವೆ ಎಂದು ಕಿಚ್ಚು ಹೊತ್ತಿಸಿದ್ದಾರೆ. ಡಿಕೆ ಶಿವಕುಮಾರ್ ಸಿಎಂ ಆಗೇ ಆಗುತ್ತಾರೆ ಎಂದ ಶಿವಗಂಗಾ ಬಸವರಾಜು, ಕುರ್ಚಿ ಖಾಲಿಯಾದಾಗ ಕ್ಲೈಮ್ ಮಾಡೇ ಮಾಡುತ್ತೇವೆ ಎಂದಿದ್ದಾರೆ. ಸಚಿವರು ಅಧಿಕಾರಕ್ಕಾಗಿ ಮಾತನಾಡ್ತಿದ್ದಾರೆ. ಮಾತನಾಡುತ್ತಿರುವರು ಆಪರೇಷನ್ ಮಾಡಿ ನಾಲ್ಕು ಜನರನ್ನ ಕರೆದುಕೊಂಡು ಬರಲಿ ಎಂದು ಸವಾಲ್ ಹಾಕಿದ್ದಾರೆ. ಮತ್ತೊಂದೆಡೆ ಮಾತನಾಡಿರೋ ಸಚಿವ ಕೆ.ಎನ್ ರಾಜಣ್ಣ, ಪವರ್ ಶೇರಿಂಗ್ ವಿಚಾರ ಹೈಕಮಾಂಡ್ಗೆ ಬಿಟ್ಟದ್ದು ಎಂದಿದ್ದಾರೆ. ಹಾಗೆಯೇ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ನಾನು ಅರ್ಜಿ ಹಾಕಿಲ್ಲ ಅಂತಾ ಕೊಟ್ರೆ ನಿಭಾಯಿಸ್ತೀನಿ ಎಂದು ಹೇಳಿದ್ದಾರೆ. ಇನ್ನೂ ಕರ್ನಾಟಕ ಕಾಂಗ್ರೆಸ್ನಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು, ದಿನಕ್ಕೊಂದು ಬೆಳವಣಿಗೆಗಳು ನಡೆಯುತ್ತಿವೆ. ಒಂದೆಡೆ ಡಿಕೆ ಶಿವಕುಮಾರ್ಗೆ ಸಿಎಂ ಹುದ್ದೆ ನೀಡುವ ಕುರಿತು ಚರ್ಚೆ ಶುರುವಾಗಿದ್ದರೆ, ಮತ್ತೊಂದೆಡೆ ಸಂಪುಟ ವಿಸ್ತರಣೆ ಸುದ್ದಿ ಮುನ್ನಲೆಗೆ…
ಬಾಗಲಕೋಟೆ:-ಕಾಂಗ್ರೆಸ್ ಸರ್ಕಾರ ಐದು ಗ್ಯಾರಂಟಿ ನಿಲ್ಲಿಸಿದ್ರೆ ನಡು ರಸ್ತೆಯಲ್ಲೇ ಜನ ಹೊಡಿತಾರೆ ಎಂದು ಕೆಎಸ್ ಈಶ್ವರಪ್ಪ ಹೇಳಿದ್ದಾರೆ. https://ainlivenews.com/leopard-forest-in-bengaluru-cabs-autos-hesitate-to-travel-here/ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ರಬಕವಿಯ ದಲಾಲ ಫಾರ್ಮ್ ಹೌಸ್ ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಕರ್ನಾಟಕ ರಾಜ್ಯದಲ್ಲಿ ಐದು ಗ್ಯಾರಂಟಿ ಯೋಜನೆ ಜಾರಿ ಮಾಡಿದ್ದಕ್ಕೆ ಕಾಂಗ್ರೆಸ್ ಸರ್ಕಾರ ಕರ್ನಾಟಕದಲ್ಲಿ ಜೀವಂತವಾಗಿದೆ ಐದು ಗ್ಯಾರೆಂಟಿಯನ್ನು ನಿಲ್ಲಿಸಿ ಬಿಟ್ಟರೆ ರಾಜ್ಯದ ಜನರು ನಡು ರಸ್ತೆಯಲ್ಲಿ ಹೊಡಿತಾರೆ. ಸಿದ್ದರಾಮಯ್ಯ ಸರ್ಕಾರ ಕೂಡಲೇ ಎಚ್ಚೆತ್ತುಕೊಂಡು ರಾಜ್ಯದಲ್ಲಿ ರಸ್ತೆ ಗುಂಡಿಗಳನ್ನ ಮುಚ್ಚಿ ಕುಡಿಯುವ ನೀರು ಮತ್ತು ಸಮರ್ಪಕವಾದ ವಿದ್ಯುತ್ಕ್ಕೆ ಕೂಡಲೇ ಹಣ ಬಿಡುಗಡೆ ಮಾಡಿ ರಾಜ್ಯದ ಜನರು ಮತ್ತು ಗ್ರಾಮೀಣ ಮಟ್ಟದಲ್ಲಿ ಇರುವ ಗುಡಿಸಲು ವಾಸಿಗಳಿಗೆ ಇದು ಅನುಕೂಲವಾಗುತ್ತದೆ ಸರ್ಕಾರ ಇದರ ಬಗ್ಗೆ ಎಚ್ಚೆತ್ತುಕೊಳ್ಳಬೇಕೆಂದು ಮಾಜಿ ಸಚಿವ ಕೆ ಹೆಚ್ ಈಶ್ವರಪ್ಪ ಹೇಳಿದರು.
ಬೆಂಗಳೂರು:- ಬೆಂಗಳೂರಿನ ತುರಹಳ್ಳಿ ಫಾರೆಸ್ಟ್ ಪಕ್ಕದ ಬನಶಂಕರಿ 6ನೇ ಹಂತದ ಫಸ್ಟ್ ಬ್ಲಾಕ್ನಲ್ಲಿ ತಾಯಿ ಮತ್ತು ಮರಿ ಚಿರತೆ ಪ್ರತ್ಯಕ್ಷವಾಗಿದೆ. 3 ತಿಂಗಳಲ್ಲಿ 10ಕ್ಕೂ ಹೆಚ್ಚು ನಾಯಿ, ಮೇಕೆ, ಕುರಿಯನ್ನು ಚಿರತೆ ಕೊಂದಿದೆ. ಕೂಡಲೇ ಚಿರತೆ ಸೆರೆ ಹಿಡಿಯುವಂತೆ ಸ್ಥಳೀಯ ನಿವಾಸಿಗಳು ಒತ್ತಾಯಿಸಿದ್ದಾರೆ. https://ainlivenews.com/chamarajanagar-a-female-elephant-died-in-the-forest-area-of-hoogyam-zone/ ಬೆಳಗ್ಗೆ, ಸಂಜೆ ವೇಳೆ ಮನೆಯಿಂದ ಹೊರಬರಲು ನಿವಾಸಿಗಳಿಗೆ ಆತಂಕ ಪಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಮಕ್ಕಳನ್ನು ನಿತ್ಯ ಶಾಲೆಗೆ ಕಳಿಸಲು ಪೋಷಕರು ಭಯ ಬೀಳುತ್ತಿದ್ದಾರೆ. ಚಿರತೆ ಪ್ರತ್ಯಕ್ಷ ಹಿನ್ನೆಲೆ ನೀರಿನ ಟ್ಯಾಂಕರ್ನವರೂ ಏರಿಯಾಗೆ ಬರುತ್ತಿಲ್ಲ. ಕುಡಿಯಲು ನೀರಿಲ್ಲದೆ ಪರದಾಡುವಂತಾಗಿದೆ ಎಂದು ನಿವಾಸಿಗಳು ಅಳಲು ತೊಡಿಕೊಂಡಿದ್ದಾರೆ. ಈ ಹಿಂದೆಯೂ ಬಿಎಂಟಿಸಿ ಬಸ್ ಚಾಲಕನ ಮೇಲೆ ಚಿರತೆ ದಾಳಿ ನಡೆಸಿತ್ತು. ಹಾಗಾಗಿ ನಿವಾಸಿಗಳು ಜೀವ ಕೈಯಲ್ಲಿಡಿದು ಜೀವನ ಮಾಡುವಂತಾಗಿದೆ.
ಚಾಮರಾಜನಗರ:- ಮಲೆಮಹದೇಶ್ವರ ವನ್ಯಧಾಮ ವ್ಯಾಪ್ತಿಯ ಹೂಗ್ಯಂ ವಲಯದ ಅರಣ್ಯ ಪ್ರದೇಶದಲ್ಲಿ ಶನಿವಾರ ಹೆಣ್ಣಾನೆಯೊಂದು ಮೃತಪಟ್ಟಿದೆ. https://ainlivenews.com/a-bison-who-was-running-to-escape-from-a-leopard-fell-into-a-well-and-died/ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆಮಹದೇಶ್ವರ ವನ್ಯಧಾಮ ವ್ಯಾಪ್ತಿಯಲ್ಲಿ ಬರುವ ಹೂಗ್ಯಂ ವಲಯದ ಸೂಳೆಕೋಬೆ ಗಸ್ತಿನಲ್ಲಿ ಅರಣ್ಯ ಸಿಬ್ಬಂದಿ ಆನೆಯ ಕಳೇಬರವನ್ನು ಪತ್ತೆ ಹಚ್ಚಿದ್ದಾರೆ. ಈ ಆನೆಯು 25ರಿಂದ26 ವರ್ಷದಾಗಿದ್ದು, ಮಲೆಮಹದೇಶ್ವರ ವನ್ಯದಾಮದ ಉಪ ಅರಣ್ಯ ಸಂರಕ್ಷಣಾಧಿಕಾರಿ ಡಾ.ಸಂತೋಷ್ ಕುಮಾರ್ ಅವರ ಮಾರ್ಗದರ್ಶನದಲ್ಲಿ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಶಿವರಾಮ್ ನೇತ್ರತ್ವದಲ್ಲಿ ವಲಯ ಅರಣ್ಯಾಧಿಕಾರಿಗಳಾದ ಪುಟ್ಟರಾಜು, ಪಶು ವೈದ್ಯಾಧಿಕಾರಿ ಸಿದ್ದರಾಜು ಅವರ ಸಮ್ಮುಖದಲ್ಲಿ ಹೆಣ್ಣಾನೆಯ ಕಳೇಬರವನ್ನು ಮರಣೋತ್ತರ ಪರೀಕ್ಷೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ. ಪ್ರಾಥಮಿಕ ವರದಿಯಲ್ಲಿ ಆನೆ ಸ್ವಾಭಾವಿಕವಾಗಿ ಮೃತಪಟ್ಟಿದೆ ಎಂದು ತಿಳಿದು ಬಂದಿದೆ.
ಚಾಮರಾಜನಗರ: ಹನೂರು ತಾಲೂಕಿನ ಪಚ್ಚೆದೊಡ್ಡಿ ಅರಣ್ಯ ಪ್ರದೇಶದಲ್ಲಿ ಚಿರತೆ ಧಾಳಿಯಿಂದ ತಪ್ಪಿಸಿಕೊಳ್ಳಲು ಹೋಗಿ ಕಾಡೆಮ್ಮೆ ಭಾವಿಗೆ ಬಿದ್ದು ಮೃತಪಟ್ಟಿರುವ ಘಟನೆ ಸಂಭವಿಸಿದೆ. https://ainlivenews.com/party-went-crazy-disaster-student-died-after-falling-from-7th-floor/ ಮಲೆಮಹದೇಶ್ವರ ವನ್ಯಧಾಮ ವ್ಯಾಪ್ತಿಯ ಪಚ್ಚೆದೊಡ್ಡಿ ಅರಣ್ಯದಲ್ಲಿ, ಚಿರತೆಯೊಂದು ಕಾಡೆಮ್ಮೆಯ ಮೇಲೆ ಧಾಳಿ ನಡೆಸಿದ್ದು, ಅದರಿಂದ ತಪ್ಪಿಸಿಕೊಳ್ಳಲು ಹೂಡಲು ಹೋಗಿ, ಕಾಡೆಮ್ಮೆ ಭಾವಿಗೆ ಬಿದ್ದು ಅಸುನೀಗಿದೆ. ಈ ಸಂಬಂಧ, ವಲಯ ಅರಣ್ಯ ಅಧಿಕಾರಿ ಪ್ರವೀಣ್ ನೇತೃತ್ವದ ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಭಾವಿಯಲ್ಲಿ ಬಿದ್ದ ಕಾಡೆಮ್ಮೆಯನ್ನು ಮೇಲಕ್ಕೆ ಎತ್ತಿ ಮುಂದಿನ ಕ್ರಮಗಳನ್ನು ಕೈಗೊಂಡಿದ್ದಾರೆ.
ನೋಯ್ಡಾ:- ಫ್ರೆಂಡ್ಸ್ ಜತೆ ಪಾರ್ಟಿ ಮಾಡಲು ಹೋಗಿ ಕಟ್ಟಡದ 7ನೇ ಮಹಡಿಯಿಂದ ಬಿದ್ದು ವಿದ್ಯಾರ್ಥಿ ಸಾವನ್ನಪ್ಪಿದ ಘಟನೆ ನೋಯ್ಡಾದಲ್ಲಿ ಜರುಗಿದೆ. https://ainlivenews.com/the-issue-of-harvesting-the-udders-of-four-cows-muthalik-said-this-is-a-despicable-act/ ವಿದ್ಯಾರ್ಥಿಯನ್ನು ತಪಸ್ ಎಂದು ಗುರುತಿಸಿದ್ದಾರೆ. ಅವರ ತಂದೆ ಗಾಜಿಯಾಬಾದ್ ಮೂಲದ ವಕೀಲರಾಗಿದ್ದಾರೆ. ಏಳನೇ ಮಹಡಿಯಲ್ಲಿ ನಡೆಯುತ್ತಿದ್ದ ತನ್ನ ಸ್ನೇಹಿತರ ಪಾರ್ಟಿಯಲ್ಲಿ ಪಾಲ್ಗೊಳ್ಳಲು ವಿದ್ಯಾರ್ಥಿ ನೋಯ್ಡಾದ ಸೆಕ್ಟರ್ 99 ನಲ್ಲಿರುವ ಸುಪ್ರೀಂ ಟವರ್ಗೆ ಹೋಗಿದ್ದ. ಸ್ವಲ್ಪ ಸಮಯದ ನಂತರ, ಬಾಲಕ ಏಳನೇ ಮಹಡಿಯಿಂದ ಬಿದ್ದು ಸಾವನ್ನಪ್ಪಿದ್ದಾನೆ ಎಂದು ಪೊಲೀಸರಿಗೆ ತಿಳಿಸಲಾಯಿತು. ಪೊಲೀಸರು ಮೃತರ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದು, ಅಪಘಾತವೇ ಅಥವಾ ಇನ್ನೇನಾದರೂ ಆಗಿದೆಯೇ ಎಂದು ತಿಳಿಯಲು ಆತನ ಸ್ನೇಹಿತರನ್ನು ವಿಚಾರಣೆ ನಡೆಸುತ್ತಿದ್ದಾರೆ. ವಿದ್ಯಾರ್ಥಿಯ ಕುಟುಂಬಕ್ಕೆ ತಿಳಿಸಲಾಗಿದೆ ಮತ್ತು ವಿಷಯವನ್ನು ಎಲ್ಲಾ ಕೋನಗಳಿಂದ ಕೂಲಂಕಷವಾಗಿ ತನಿಖೆ ಮಾಡಲಾಗುತ್ತಿದೆ ಎಂದು ಹೇಳಿದೆ. ಸುಪ್ರೀಂ ಟವರ್ ಸೊಸೈಟಿಯ ಏಳನೇ ಮಹಡಿಯಿಂದ ಯುವಕನೊಬ್ಬ ಬಿದ್ದಿರುವ ಬಗ್ಗೆ ಮಾಹಿತಿ ಬಂದಿತ್ತು. ಸ್ಥಳಕ್ಕಾಗಮಿಸಿದಾಗ, ಫ್ಲಾಟ್ನಲ್ಲಿ ಸ್ನೇಹಿತರೊಂದಿಗೆ ಇದ್ದ ತಪಸ್ ಬಿದ್ದು ಮೃತಪಟ್ಟಿರುವುದು ಕಂಡುಬಂದಿದೆ.
ಬೆಂಗಳೂರು:- ಹಸುಗಳ ಕೆಚ್ಚಲು ಕೊಯ್ದ ನೀಚರನ್ನು ಒದ್ದು ಒಳಗಡೆ ಹಾಕದಿದ್ದರೇ ಶ್ರೀರಾಮ ಸೇನೆಯಿಂದ ರಾಜ್ಯದಲ್ಲಿ ಹೋರಾಟ ಮಾಡುತ್ತೇವೆ ಎಂದು ಸಚಿವ ಜಮೀರ್ ಅಹಮ್ಮದ್ ಖಾನ್ಗೆ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ನೀಡಿದ್ದಾರೆ. https://ainlivenews.com/minister-priyanka-kharge-should-go-to-jail-ks-eshwarappa/ ಈ ಸಂಬಂಧ ಮಾತನಾಡಿದ ಅವರು, ಬೆಂಗಳೂರಿನ ಚಾಮರಾಜಪೇಟೆಯಲ್ಲಿ ನಾಲ್ಕು ಹಸುವಿನ ಕೆಚ್ಚಲು ಕೊಯ್ದಿದ್ದಾರೆ. ಇದು ನೀಚ ಕೃತ. ಇಸ್ಲಾಮಿಕ್ ಶಕ್ತಿಯ ಪ್ರದರ್ಶನ ಆಗುತ್ತಿದೆ, ರಾಕ್ಷಸ ಕೃತ್ಯಕ್ಕೆ ಇದು ಉದಾಹರಣೆ. ಜಮೀರ್ ಅಹ್ಮದ್ ಇದು ನಿಮ್ಮ ಕ್ಷೇತ್ರದಲ್ಲಿ ಆಗಿದೆ. ಇದನ್ನು ತಾವು ಗಂಭೀರವಾಗಿ ತೆಗೆದುಕೊಳ್ಳಬೇಕು. ಕೆಚ್ಚಲು ಕೊಯ್ದ ನೀಚರನ್ನು ಒದ್ದು ಒಳಗಡೆ ಹಾಕದಿದ್ದರೇ ಶ್ರೀರಾಮ ಸೇನೆಯಿಂದ ರಾಜ್ಯದಲ್ಲಿ ಹೋರಾಟ ಮಾಡುತ್ತೇವೆ ಎಂದು ಸಚಿವ ಜಮೀರ್ ಅಹಮ್ಮದ್ ಖಾನ್ಗೆ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ನೀಡಿದ್ದಾರೆ. ಹಸು ಹಿಂದೂಗಳಿಗೆ ಅತ್ಯಂತ ಪೂಜ್ಯ ಪ್ರಾಣಿ. ಅದು ಬರೀ ಪ್ರಾಣಿ ಅಲ್ಲಾ, ಅದು ನಮಗೆ ಅನ್ನ ಹಾಕುತ್ತೆ, ಗೊಬ್ಬರ ಕೊಡುತ್ತೆ, ಔಷಧಿ ಕೊಡುತ್ತದೆ. ರೈತರ ಬೆನ್ನೆಲುಬು ಅದು. ಅದರ ಕೆಚ್ಚಲು…
ಬಾಗಲಕೋಟೆ:-ಸಚಿವ ಪ್ರಿಯಾಂಕ ಖರ್ಗೆ ಜೈಲಿಗೆ ಹೋಗೋದು ಶತಸಿದ್ಧ ಎಂದು ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಹೇಳಿದ್ದಾರೆ. https://ainlivenews.com/r-ashok-cows-udder-issue-r-ashok-says-this-is-a-jihadi-mentality/ ಜಿಲ್ಲೆಯ ರಬಕವಿ ಬನಹಟ್ಟಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಸಂತೋಷ್ ಕಾಂಟ್ರಾಕ್ಟರ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಟ್ರಾಕ್ಟರ್ ಸಂತೋಷ್ ತನ್ನ ಡೆತ್ ನೋಟ್ನಲ್ಲಿ ನನ್ನ ಸಾವಿಗೆ ಸಚಿವ ಪ್ರಿಯಾಂಕ ಖರ್ಗೆ ಕಾರಣ ಎಂದು ಡೆತ್ ನೋಟ್ನಲ್ಲಿ ನಲ್ಲಿ ಬರೆದಿದ್ದಾನೆ. ನೈತಿಕ ಹೊಣೆ ಹೊತ್ತು ತಮ್ಮ ಸಚಿವ ಸ್ಥಾನಕ್ಕೆ ಕೂಡಲೇ ರಾಜೀನಾಮೆ ಕೊಟ್ಟು ತನಿಖೆಗೆ ಒಳಪಡಬೇಕೆಂದು ಆಗ್ರಹಿಸಿದರು. ಸಚಿವ ಪ್ರಿಯಾಂಕ ಖರ್ಗೆ ಜೈಲಿಗೆ ಹೋಗುವುದು ಶತಸಿದ್ಧ ಯಾಕೆಂದರೆ ಕಾಂಟ್ರಾಕ್ಟರ ಸಂತೋಷನ ಸಾವಿಗೆ ನೇರ ಕಾರಣ ಆಗಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡಲೇ ಸಚಿವ ಪ್ರಿಯಾಂಕ ಖರ್ಗೆ ರಾಜೀನಾಮೆಯನ್ನು ಪಡೆದುಕೊಳ್ಳಬೇಕೆಂದು ಮಾಜಿ ಉಪ ಮುಖ್ಯಮಂತ್ರಿ ಕೆ ಎಸ್ ಈಶ್ವರಪ್ಪ ಹೇಳಿದರು.