Author: AIN Author

ಬೆಂಗಳೂರು:- ರಾಜಧಾನಿ ಬೆಂಗಳೂರಿನ ಹಲವು ಏರಿಯಾಗಳಲ್ಲಿ ನಾಳೆ ಪವರ್ ಕಟ್ ಇರಲಿದೆ ಎಂದು ಬೆಸ್ಕಾಂ ತಿಳಿಸಿದೆ. https://ainlivenews.com/citizens-of-bangalore-note-there-is-no-current-in-these-areas-on-monday/ 66/11 kV ಬಿಟಿಎಂ ವಿವಿ ಕೇಂದ್ರದಲ್ಲಿ ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗುತ್ತಿರುವ ಹಿನ್ನೆಲೆ ಎಚ್‌.ಎಸ್.ಆರ್. ವಿಭಾಗದಲ್ಲಿನ ಹಲವು ಪ್ರದೇಶಗಳಲ್ಲಿ ನಾಳೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಮಾಹಿತಿ ನೀಡಿದೆ. ನಾಳೆ ಬೆಳಗ್ಗೆ 10ರಿಂದ ಮಧ್ಯಾಹ್ನ 1 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ತಿಳಿಸಿದೆ. ಕಾವೇರಿನಗರ, ಹುಳಿಮಾವು, ಅಕ್ಷಯ ನಗರ, ಹೊಂಗಸಂದ್ರ, ಬಿ.ಟಿ.ಎಸ್ ಲೇಔಟ್, ಕೋಡಿಚಿಕ್ಕನಹಳ್ಲಿ, ವಿಜಯಬ್ಯಾಂಕ್ ಲೇಔಟ್, ವಿಶ್ವಪ್ರಿಯಾ ಲೇಔಟ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ಕಡಿತವಾಗಲಿದೆ. ಮಲ್ಲೇಶ್ವರಂ, ಎಂ.ಡಿ.ಬ್ಲಾಕ್, ವೈಯಾಲಿಕಾವಲ್, ಈಜುಕೊಳ ವಿಸ್ತರಣೆ, ಕೋದಂಡರಾಮಪುರ, ರಂಗನಾಥಪುರ, ಬಿಎಚ್‌ಇಎಲ್, ಐಐಎಸ್‌ಸಿ ಬ್ರೈನ್ ಸೆಂಟರ್, ಅಂಬೇಡ್ಕರ್ ನಗರ, ಯಶವಂತ ಪುರ ಪೈಪ್‌ಲೈನ್ ರಸ್ತೆ, ಎಲ್‌ಎನ್ ಕಾಲೋನಿ, ಸುಬೇದ್ರಪಾಳ್ಯ, ದಿವಾನರ ಪಾಳ್ಯ, ಯಶವಂತಪುರ 1ನೇ ಮುಖ್ಯರಸ್ತೆ, ಎಚ್.ಎಂ.ಟಿ. ಮುಖ್ಯ ರಸ್ತೆ, ಶರೀಫ್ ನಗರ ಸೇರಿದಂತೆ ಸುತ್ತಮುತ್ತಲಿನ…

Read More

ಅಘೋರಿಗಳ ವಿಚಾರದಲ್ಲಿ ಅನೇಕ ತಪ್ಪು ಕಲ್ಪನೆಗಳಿವೆ. ಅವರನ್ನು ಕಂಡರೆ ಅನಾವಶ್ಯಕ ಭಯಗಳು ಕೂಡ ಇವೆ. ಆದ್ರೆ ಅಘೋರಿಗಳು ನಮ್ಮ ಕಲ್ಪನೆ ಹಾಗೂ ಭಯದ ಆಚೆ ಒಂದು ವಿಚಿತ್ರ ವಿಸ್ಮಯವಾದ ಬದುಕನ್ನು ಬದುಕುತ್ತಾರೆ. https://ainlivenews.com/there-is-no-caste-religion-fence-for-kambala-sports-and-arts-its-a-celebration-for-everyone-cm-bannane/ ಅಘೋರಿ ಸಾಧುಗಳನ್ನು ತಾಂತ್ರಿಕರು, ತಂತ್ರವಿದ್ಯೆಯನ್ನು ಕರಗತ ಮಾಡಿಕೊಂಡವರು, ವಶೀಕರಣ ಅವರಿಗೆ ಅತ್ಯಂತ ಸುಲಭವಾದ ಕೆಲಸ ಹೀಗೆ ಹಲವು ಕಲ್ಪನೆಗಳು ಇವೆ. ಆದ್ರೆ ಅಘೋರಿಗಳು ಪಕ್ಕಾ ಪರಶಿವನ ಮಹಾಭಕ್ತರು. ಕಪಾಲಿಕ ಸಂಪ್ರದಾಯವನ್ನು ತಮ್ಮದಾಗಿಸಿಕೊಂಡಿರುವ ಇವರು. ಸಾಮಾನ್ಯವಾಗಿ ಕಪಾಲವೊಂದನ್ನು ಧರಿಸಿಕೊಂಡು ಅಲೆದಾಡುವುದು ನಮಗೆ ಕಾಣಸಿಗುತ್ತದೆ. ಅಘೋರಿ ಎಂಬ ಪದ ಸಂಸ್ಕೃತದ ಅಘೋರ್ ಪದದಿಂದ ಬಂದಂತಹುದು ಉತ್ತರ ಪ್ರದೇಶದ ಪ್ರಯಾಗರಾಜ್‌ನಲ್ಲಿ ಕೆಲವೇ ದಿನಗಳಲ್ಲಿ ಮಹಾಕುಂಭ ಮೇಳ ಆರಂಭವಾಗಲಿದೆ. ಹಿಂದೂ ಧರ್ಮದಲ್ಲಿ ಮಹಾಕುಂಭ ಮೇಳಕ್ಕೆ ಬಹಳ ಮಹತ್ವವಿದೆ. ನಂಬಿಕೆಗಳ ಪ್ರಕಾರ, ಮಹಾಕುಂಭದಲ್ಲಿ ಯಾರು ಪವಿತ್ರ ಸ್ನಾನ ಮಾಡುತ್ತಾರೊ, ಅವರ ಪಾಪಗಳೆಲ್ಲವೂ ಅಳಿಸಿಹೋಗುತ್ತವೆ ಎಂದು ನಂಬಲಾಗಿದೆ… ಈ ಬಾರಿ ಮಹಾಕುಂಭಕ್ಕೆ ಭಾರತ ಹಾಗೂ ವಿದೇಶಗಳಿಂದ ಕೋಟ್ಯಂತರ ಭಕ್ತರು ಆಗಮಿಸುವ ನಿರೀಕ್ಷೆ ಇದೆ. ಇದರೊಂದಿಗೆ ಅನೇಕ…

Read More

ಬೆಂಗಳೂರು:- ನಮ್ಮ ಮೆಟ್ರೋ ಪ್ರಯಾಣಿಕರಿಗೆ BMRCL ಮತ್ತೊಂದು ಸಿಹಿ ಸುದ್ದಿ ನೀಡಿದೆ. ನಾಳೆಯಿಂದ ಮೆಟ್ರೋ ಸಮಯದಲ್ಲಿ ಬದಲಾವಣೆ ಮಾಡಲಾಗುತ್ತಿದೆ. ವೀಕೆಂಡ್ ಅಂತ ಊರಿಗೆ ಹೋಗಿ ಬೆಂಗಳೂರಿಗೆ ವಾಪಸ್ ಆಗುವ ಪ್ರಯಾಣಿಕರಿಗೆ ಇದರಿಂದ ಅನುಕೂಲವಾಗಲಿದೆ. https://ainlivenews.com/illicit-relationship-with-nadini-anna-who-killed-herself-because-of-the-obstacle/ ನಾಳೆಯಿಂದ ಮೆಟ್ರೋ ಸಂಚಾರ ಬೆಳಗ್ಗೆ 4.15ರಿಂದ ಆರಂಭವಾಗಲಿದೆ. ಇಷ್ಟು ದಿನ ಸೋಮವಾರ ಬೆಳ್ಳಗೆ 5ಗಂಟೆಗೆ ಮೊದಲ ರೈಲು ಸಂಚಾರ ಆರಂಭವಾಗುತ್ತಾ ಇತ್ತು. ಶನಿವಾರ, ಭಾನುವಾರದ ವೀಕೆಂಡ್‌ನಲ್ಲಿ ಸಿಟಿ ಹೊರಗೆ ಹೋಗುವ ಪ್ರಯಾಣಿಕರು ಸೋಮವಾರ ಬೆಳಗಿನ ಜಾವ ಆಟೋ, ಬಸ್‌ಗಳ ಕಡೆ ಮುಖ ಮಾಡುತ್ತಿದ್ದರು. ಸೋಮವಾರ ಬೆಳಗಿನ ಜಾವ ಸಿಲಿಕಾನ್ ಸಿಟಿ ವಾಪಸ್‌ ಆಗುವ ಪ್ರಯಾಣಿಕರಿಗಾಗಿ ಮೆಟ್ರೋ ಸಮಯದಲ್ಲಿ ಬದಲಾವಣೆ ಮಾಡಲಾಗಿದೆ. ಇನ್ಮುಂದೆ ಮೆಟ್ರೋ ಪ್ರಯಾಣಿಕರು ಬೆಳಗ್ಗೆ 4.15ಕ್ಕೆ ಮೆಟ್ರೋ ಸೇವೆ ಬಳಸಬಹುದು. ನಗರಕ್ಕೆ ಹಿಂತಿರುಗುವ ಪ್ರಯಾಣಿಕರ ಅನುಕೂಲಕ್ಕಾಗಿ ನಮ್ಮ ಮೆಟ್ರೋ ಸಂಚಾರದಲ್ಲಿ ಈ ಬದಲಾವಣೆ ಮಾಡಲಾಗಿದೆ. ಇದೇ ಜನವರಿ 13ರ ಸೋಮವಾರದಿಂದ ಈ ಸೇವೆ ಜಾರಿಗೆ ಬರಲಿದೆ.

Read More

ಮಂಗಳೂರು:- ತುಳು ಅಧಿಕೃತ ಭಾಷೆಯಾಗಿಸಲು ಗಂಭೀರ ಪ್ರಯತ್ನ ಮಾಡಲಾಗುತ್ತದೆ ಎಂದು CM ಸಿದ್ದರಾಮಯ್ಯ ಹೇಳಿದ್ದಾರೆ. https://ainlivenews.com/life-threats-from-anonymous-persons-what-did-ct-ravi-say/ ಈ ಸಂಬಂಧ ಮಾತನಾಡಿದ ಅವರು, ತುಳು ಭಾಷೆಯನ್ನು ಎರಡನೇ ಭಾಷೆ ಮಾಡಬೇಕು ಎಂಬ ಬೇಡಿಕೆಯನ್ನು ಗಂಭೀರವಾಗಿ ಪರಿಗಣಿಸುತ್ತೇವೆ ಎಂದು ಹೇಳಿದ್ದಾರೆ. ಕಂಬಳ ಬಹಳ ಪುರಾತನವಾದ ಗ್ರಾಮೀಣ ಕ್ರೀಡೆಯಾಗಿದೆ. ಇದು ಬಹಳ ಜನಪ್ರಿಯವಾಗಿದೆ ಎಂಬುದು ಇಲ್ಲಿ ಸೇರಿದ ಜನರನ್ನು ನೋಡಿದಾಗಲೇ ಗೊತ್ತಾಗುತ್ತದೆ. ಸುಪ್ರೀಂ ಕೋರ್ಟ್ ಕಂಬಳವನ್ನು ನಿಷೇಧ ಮಾಡಿತ್ತು. ಆದರೆ, ನಮ್ಮ ಸರ್ಕಾರ ಆ ನಿಷೇಧವನ್ನು ತೆರವುಗೊಳಿಸಿ ಮತ್ತೊಮ್ಮೆ ಕಂಬಳ ಕ್ರೀಡೆ ನಡೆಸಲು ನೆರವಾಗಿದೆ ಎಂದಿದ್ದಾರೆ. ಕೋಣ ಸಾಕಿದ ಹಾಗೆ ಮಗನನ್ನು ಸಾಕಲು ಸಾಧ್ಯವಿಲ್ಲ. ಕಂಬಳವನ್ನು ಬೆಳಸಬೇಕು, ಸಂಪ್ರದಾಯವಾದ ಈ ಕ್ರೀಡೆಯನ್ನು ಉಳಿಸಬೇಕು. ತುಳುನಾಡಿನ ಜನ ಕಂಬಳ ಉಳಿಸಿ, ಬೆಳೆಸಿಕೊಂಡು ಬರುತ್ತಿದ್ದಾರೆ. ಇದರಲ್ಲಿ ವಿದ್ಯಾವಂತರೂ ಭಾಗವಹಿಸುತ್ತಿದ್ದಾರೆ. ಇದೇ ಕಾರಣದಿಂದ ಕಂಬಳವನ್ನು ಉಳಿಸುವ ಪ್ರಯತ್ನ ಮಾಡಿದ್ದೇವೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

Read More

ಚಿಕ್ಕಮಗಳೂರು:- ಅನಾಮಧೇಯ ವ್ಯಕ್ತಿಗಳಿಂದ ಜೀವ ಬೆದರಿಕೆ ಬಂದಿರುವ ವಿಚಾರವಾಗಿ CT ರವಿ ಪ್ರತಿಕ್ರಿಯೆ ಕೊಟ್ಟಿದ್ದಾರೆ. https://ainlivenews.com/by-vijayendra-ct-ravi-and-son-are-getting-life-threats-by-vijayendra/ ಈ ಸಂಬಂಧ ಮಾತನಾಡಿದ ಅವರು, ಈ ಎಲ್ಲಾ ಬೆದರಿಕೆಗಳಿಗೆ ನಾನು ಹೆದರುವುದಿಲ್ಲ. ನಮ್ಮ ಆಯಸ್ಸು ಬರೆಯುವವನು ಭಗವಂತ. ಆ ಬೆದರಿಕೆಯನ್ನು ನಾನು ಗಂಭೀರವಾಗಿ ತೆಗೆದುಕೊಂಡಿಲ್ಲ. ತನಿಖೆಯಾಗಬೇಕು, ನಿರ್ಲಕ್ಷವಾಗಬಾರದು ಎಂದಿದ್ದಾರೆ. ನಾನು ವಿಜಯಪುರ ಪ್ರವಾಸದಲ್ಲಿದ್ದಾಗ ಕಾರ್ಯಾಲಯಕ್ಕೆ ಪತ್ರ ಬಂದಿದೆ ಎಂದು ಸಿಬ್ಬಂದಿಗಳು ತಿಳಿಸಿದರು. ಕಚೇರಿಯಿಂದ ಪತ್ರವನ್ನು ವಾಟ್ಸಪ್ ಮೂಲಕ ತರಿಸಿಕೊಂಡೆ. ತಕ್ಷಣ ಎಸ್​ಪಿ ಅವರಿಗೆ ಫಾರ್ವರ್ಡ್ ಮಾಡಿ, ಕಾರ್ಯಾಲಯದಿಂದ ದೂರು ಸಲ್ಲಿಸಲು ತಿಳಿಸಿದ್ದೇನೆ. ಅದಕ್ಕೆ ಸಂಬಂಧಿಸಿದಂತೆ ಎಸ್​ಪಿಯವರು ಈಗಾಗಲೇ ತಂಡ ರಚನೆ ಮಾಡಿ, ಎಲ್ಲಿಂದ ಪೋಸ್ಟ್ ಮಾಡಿದ್ದಾರೆ, ಯಾರ್ಯಾರು ಹೋಗಿದ್ದಾರೆ. ಸಿಸಿಟಿವಿ ನೋಡಿ ಪರಿಶೀಲನೆ ನಡೆಸುವುದಾಗಿ ಹೇಳಿದ್ದಾರೆ ಎಂದರು. ಅಧಿಕಾರ ಕೊಡುವವನು ಭಗವಂತ. ಜನರ ಮೂಲಕ ಅಧಿಕಾರ ಕೊಡಬೇಕು ಅಂದರೆ ಭಗವಂತನೇ ಕೊಡುತ್ತಾನೆ. ಬೆದರಿಕೆಯನ್ನ 35-40 ವರ್ಷದಿಂದಲೂ ಕೇಳಿಕೊಂಡೆ ಬಂದಿದ್ದೇನೆ. ಆ ಬೆದರಿಕೆಗಳಿಗೆ ಹೆದರಿ ಸಾರ್ವಜನಿಕ ಜೀವನದಲ್ಲಿ ಇರುವುದಕ್ಕೆ ಆಗಲ್ಲ ಎಂದಿದ್ದಾರೆ.

Read More

ಬೆಂಗಳೂರು:- ಸಿ.ಟಿ.ರವಿ ಹಾಗೂ ಪುತ್ರನಿಗೆ ಜೀವ ಬೆದರಿಕೆ ಬರುತ್ತಿದೆ ಎಂದು BY ವಿಜಯೇಂದ್ರ ಹೇಳಿದ್ದಾರೆ. https://ainlivenews.com/citizens-of-bangalore-note-there-is-no-current-in-these-areas-on-monday/ ಈ ಸಂಬಂಧ ಮಾತನಾಡಿದ ಅವರು, ಪರಿಷತ್ ಬಿಜೆಪಿ ಸದಸ್ಯ ಸಿಟಿ ರವಿ ಅವರಿಗೆ ಬೆದರಿಕೆ ಒಡ್ಡಲಾಗುತ್ತಿರುವ ಶಕ್ತಿಗಳು ಯಾವುದು ಎಂಬುದು ಸರ್ಕಾರ ಹಾಗೂ ಪೊಲೀಸರಿಗೆ ತಿಳಿದೇ ಇದೆ. ಇಷ್ಟಾಗಿಯೂ ದುಷ್ಟ ಶಕ್ತಿಗಳ ಮೇಲೆ ಕ್ರಮ ಕೈಗೊಳ್ಳುತ್ತಿಲ್ಲ. ಏಕೆಂದರೆ ಅವರು ಕಾಂಗ್ರೆಸ್ ಪಕ್ಷದ ಭಾಗವೇ ಆಗಿದ್ದಾರೆ ಎಂಬುದು ಬಹಿರಂಗ ಸತ್ಯ ಎಂದರು. ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹಾಗೂ ಪರಿಷತ್ ಬಿಜೆಪಿ ಸದಸ್ಯ ಸಿಟಿ ರವಿ ನಡುವಿನ ಜಟಾಪಟಿ ಮತ್ತೊಂದು ಹಂತಕ್ಕೆ ಹೋಗುವ ಸಾಧ್ಯತೆ ಇದೆ. ಒಂದು ಕಡೆ ಸಿಐಡಿ ತನಿಖೆ ನಡುತ್ತಿದೆ. ಮತ್ತೊಂದೆಡೆ ಸಿ.ಟಿ.ರವಿ ಹಾಗೂ ಪುತ್ರನಿಗೆ ಅನಾಮಧೇಯ ವ್ಯಕ್ತಿಗಳಿಂದ ಜೀವ ಬೆದರಿಕೆ ಹಾಕ್ತಿದ್ದಾರಂತೆ. ಬೆಳಗಾವಿಯ ಸುವರ್ಣ ಸೌಧದಲ್ಲಿ ನಮ್ಮ ಪಕ್ಷದ ಪ್ರಮುಖರಾದ ವಿಧಾನ ಪರಿಷತ್ ಸದಸ್ಯರಾದ ಸಿಟಿ ರವಿ ಅವರ ಮೇಲೆ ಪ್ರಜಾಪ್ರಭುತ್ವವನ್ನು ನಾಚಿಸುವ ರೀತಿಯಲ್ಲಿ ದೌರ್ಜನ್ಯ ಹಾಗೂ ಹಲ್ಲೆಗೆ ಯತ್ನ ನಡೆಯಿತು. ಅದರ…

Read More

ಬೆಂಗಳೂರು:- ರಾಜಧಾನಿ ಬೆಂಗಳೂರಿನ ಹಲವು ಏರಿಯಾಗಳಲ್ಲಿ ಸೋಮವಾರ ಪವರ್ ಕಟ್ ಇರಲಿದೆ ಎಂದು ಬೆಸ್ಕಾಂ ತಿಳಿಸಿದೆ. https://ainlivenews.com/countdown-to-icc-champions-trophy-team-india-announcement-likely-to-be-delayed/ 66/11 kV ಬಿಟಿಎಂ ವಿವಿ ಕೇಂದ್ರದಲ್ಲಿ ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗುತ್ತಿರುವ ಹಿನ್ನೆಲೆ ಎಚ್‌.ಎಸ್.ಆರ್. ವಿಭಾಗದಲ್ಲಿನ ಹಲವು ಪ್ರದೇಶಗಳಲ್ಲಿ ಸೋಮವಾರ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಮಾಹಿತಿ ನೀಡಿದೆ. ಸೋಮವಾರ ಬೆಳಗ್ಗೆ 10ರಿಂದ ಮಧ್ಯಾಹ್ನ 1 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ತಿಳಿಸಿದೆ. ಕಾವೇರಿನಗರ, ಹುಳಿಮಾವು, ಅಕ್ಷಯ ನಗರ, ಹೊಂಗಸಂದ್ರ, ಬಿ.ಟಿ.ಎಸ್ ಲೇಔಟ್, ಕೋಡಿಚಿಕ್ಕನಹಳ್ಲಿ, ವಿಜಯಬ್ಯಾಂಕ್ ಲೇಔಟ್, ವಿಶ್ವಪ್ರಿಯಾ ಲೇಔಟ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ಕಡಿತವಾಗಲಿದೆ. ಮಲ್ಲೇಶ್ವರಂ, ಎಂ.ಡಿ.ಬ್ಲಾಕ್, ವೈಯಾಲಿಕಾವಲ್, ಈಜುಕೊಳ ವಿಸ್ತರಣೆ, ಕೋದಂಡರಾಮಪುರ, ರಂಗನಾಥಪುರ, ಬಿಎಚ್‌ಇಎಲ್, ಐಐಎಸ್‌ಸಿ ಬ್ರೈನ್ ಸೆಂಟರ್, ಅಂಬೇಡ್ಕರ್ ನಗರ, ಯಶವಂತ ಪುರ ಪೈಪ್‌ಲೈನ್ ರಸ್ತೆ, ಎಲ್‌ಎನ್ ಕಾಲೋನಿ, ಸುಬೇದ್ರಪಾಳ್ಯ, ದಿವಾನರ ಪಾಳ್ಯ, ಯಶವಂತಪುರ 1ನೇ ಮುಖ್ಯರಸ್ತೆ, ಎಚ್.ಎಂ.ಟಿ. ಮುಖ್ಯ ರಸ್ತೆ, ಶರೀಫ್ ನಗರ ಸೇರಿದಂತೆ ಸುತ್ತಮುತ್ತಲಿನ…

Read More

ICC ಚಾಂಪಿಯನ್ಸ್ ಟ್ರೋಫಿಗೆ ದಿನಗಣನೆ ಶುರುವಾಗಿದ್ದು, ಟೀಂ ಇಂಡಿಯಾ ಘೋಷಣೆ ವಿಳಂಬ ಸಾಧ್ಯತೆ ಇದೆ. https://ainlivenews.com/just-kiss-sabri-yatnal-revenge-for-parameshwar/ ಐಸಿಸಿಯ ಸೂಚನೆಗಳನ್ನು ಅನುಸರಿಸಿ ಟೀಂ ಇಂಡಿಯಾದ ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಸಮಯಕ್ಕೆ ತಂಡವನ್ನು ಪ್ರಕಟಿಸುತ್ತಾರೆ ಎಂದು ನಿರೀಕ್ಷಿಸಲಾಗಿತ್ತು. ಆದರೆ ಇತ್ತೀಚಿನ ಮಾಹಿತಿಯ ಪ್ರಕಾರ, ಬಿಸಿಸಿಐ ತನ್ನ ತಂಡವನ್ನು ಪ್ರಕಟಿಸಲು ಐಸಿಸಿ ಬಳಿ ಸಮಯಾವಕಾಶ ಕೇಳಬಹುದು. ಆದರೆ, ಇಂಗ್ಲೆಂಡ್ ವಿರುದ್ಧದ 5 ಪಂದ್ಯಗಳ ಟಿ20 ಸರಣಿಗೆ ಭಾರತ ತಂಡವನ್ನು ಎರಡು ಮೂರು ದಿನಗಳಲ್ಲಿ ಪ್ರಕಟಿಸಬಹುದು. ಸಾಮಾನ್ಯವಾಗಿ ತನ್ನ ಯಾವುದೇ ಪಂದ್ಯಾವಳಿಗಳಿಗೆ 4 ವಾರಗಳ ಮೊದಲು ತಾತ್ಕಾಲಿಕ ತಂಡವನ್ನು ಘೋಷಿಸಲು ಎಲ್ಲಾ ಮಂಡಳಿಗಳಿಗೆ ಸೂಚನೆ ನೀಡುತ್ತದೆ. ಇದಾದ ನಂತರ ತಂಡದಲ್ಲಿ ಬದಲಾವಣೆಗಳನ್ನು ಮಾಡಲು ಕಾಲಾವಕಾಶವನ್ನು ನೀಡುತ್ತದೆ. ಆದರೆ ಪಾಕಿಸ್ತಾನ ಮತ್ತು ದುಬೈನಲ್ಲಿ ನಡೆಯಲಿರುವ ಚಾಂಪಿಯನ್ಸ್ ಟ್ರೋಫಿಗಾಗಿ ಐಸಿಸಿ, 5 ವಾರಗಳ ಮುಂಚಿತವಾಗಿಯೇ ಎಲ್ಲಾ 8 ಮಂಡಳಿಗಳಿಗೆ ತಮ್ಮ ತಂಡವನ್ನು ಪ್ರಕಟಿಸುವಂತೆ ಸೂಚಿಸಿದೆ. ಸಮಯ ಮುಗಿಯುತ್ತಾ ಬಂದರೂ ಇಂಗ್ಲೆಂಡ್‌ ಹೊರತುಪಡಿಸಿ ಯಾವ ಮಂಡಳಿಯೂ ತನ್ನ ತಂಡವನ್ನು ಪ್ರಕಟಿಸಿಲ್ಲ.…

Read More

ವಿಜಯಪುರ:- ಮುತ್ತು ನಮಗೆ ಕೊಡ್ಬೇಡಿ, ಸಾಬ್ರಿಗೆ ಕೊಟ್ಕೊಂಡಿರಿ ಎಂದು ಸಚಿವ ಜಿ ಪರಮೇಶ್ವರ್‌ಗೆ ಯತ್ನಾಳ್‌ ತಿರುಗೇಟು ಕೊಟ್ಟಿದ್ದಾರೆ. https://ainlivenews.com/there-is-no-caste-religion-fence-for-kambala-sports-and-arts-its-a-celebration-for-everyone-cm-bannane/ ಈ ಸಂಬಂಧ ಮಾತನಾಡಿದ ಅವರು, ನಕ್ಸಲರಿಗೆ ವಿಶೇಷ ಪ್ಯಾಕೇಜ್ ಕೊಟ್ಟಿದ್ದು ತಪ್ಪು. ಈ ನಕ್ಸಲರಿಂದ ಎಷ್ಟು ಪೊಲೀಸ್ ಅಧಿಕಾರಿಗಳು ಪ್ರಾಣ ಕೊಟ್ಟಿದ್ದಾರೆ. ಎಷ್ಟೋ ರೈತರ, ಸಾಮಾನ್ಯ ಜನರ ಹತ್ಯೆ ಮಾಡಿದ್ದಾರೆ. ನಕ್ಸಲರಿಗೆ ಏನು ಕೊಡಬೇಕು ಎಂದು ನ್ಯಾಯಾಲಯ ತೀರ್ಮಾನ ಮಾಡುತ್ತದೆ. ಅವರು ಎಲ್ಲೆಲ್ಲಿ ಶಸ್ತ್ರಾಸ್ತ್ರಗಳನ್ನು ಅಡಗಿಸಿಟ್ಟಿದ್ದಾರೆ ಅವುಗಳನ್ನು ಮುಂದಿಟ್ಟು ಶರಣಾಗಬೇಕಿತ್ತು. ಆದರೆ ಸಿದ್ಧರಾಮಯ್ಯ ಅವರೇ ನಕ್ಸಲರಿಗೆ ಶರಣಾಗಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ. ಇವತ್ತು ಶರಣಾಗಿ ನಾಳೆ ಶಸ್ತ್ರಾಸ್ತ್ರಗಳನ್ನು ತಂದು ಕೊಡಿ ಎಂದು ಹೇಳಿರಬೇಕು. ಮುಂದಿನ ದಿನಗಳಲ್ಲಿ ಇದೊಂದು ಸ್ಟೈಲ್ ಆಗುತ್ತದೆ. ಕೆಲ ದಿನ ಬಂದೂಕು ಹಾಕಿಕೊಂಡು ಓಡಾಡುತ್ತಾರೆ. ನಂತರ 6 ತಿಂಗಳು ಮಾಯ ಆಗುತ್ತಾರೆ. ಬಳಿಕ ಶರಣಾಗುತ್ತಾರೆ. ಅವರಿಗೆಲ್ಲ ವಿಶೇಷ ಪ್ಯಾಕೇಜ್ ಕೊಡುತ್ತೀರಾ? ಹಾಗಾದರೆ ಪೋಲಿಸರ ಕುಟುಂಗಳಿಗೆ ಏನು ಹೇಳ್ತಿರಿ? ಅವರಿಂದ ಹತ್ಯೆಯಾದ ಪೊಲೀಸರು, ನಾಗರಿಕರಿಗೆ ಏನು ಕೊಟ್ಟಿದ್ದೀರಿ? ನಕ್ಸಲರು ಮುಖ್ಯವಾಹಿನಿಗೆ…

Read More

ಮಂಗಳೂರು ಜ 11: ಕಂಬಳ ಕ್ರೀಡೆ ಮತ್ತು ಕಲೆಗೆ ಜಾತಿ-ಧರ್ಮದ ಬೇಲಿ ಇಲ್ಲ. ಇದು ಸರ್ವರ ಸಂಭ್ರಮ.‌ ನಮ್ಮ ದೇಶ ಬಹುತ್ವದ ದೇಶ‌ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಣ್ಣಿಸಿದರು. https://ainlivenews.com/guaranteed-to-be-out-of-bigg-boss-this-week-where-the-strong-are-weak/ ಉಳ್ಳಾಲ ನರಿಂಗಾನದ ಮೂರನೇ ವರ್ಷದ ಲವ-ಕುಶ ಜೋಡುಕೆರೆ ಕಂಬಳೋತ್ಸವವನ್ನು ಉದ್ಘಾಟಿಸಿ ಮಾತನಾಡಿದರು. ಜನಪದ ಕ್ರೀಡೆ ಕಂಬಳ ಸರ್ವ ಜಾತಿ ಧರ್ಮದ ಜನಸಮುದಾಯವನ್ನು ಬೆಸೆಯುವಂತೆ ಮಾಡುತ್ತಿದೆ. ವಿವಿಧತೆಯಲ್ಲಿ ಏಕತೆಯನ್ನು ಕಾಣುವ ಭಾರತ ಸಂಸ್ಕೃತಿಯ ಒಂದು ಭಾಗ ಕರಾವಳಿ ಜಿಲ್ಲೆಗಳ ಸಂಸ್ಕೃತಿಯಾಗಿದೆ. ನಮ್ಮ ಸರ್ಕಾರ ಕೂಡ ಎಲ್ಲಾ ಜಾತಿ, ಎಲ್ಲಾ ಧರ್ಮದ ಪರವಾಗಿ ಕಾರ್ಯಕ್ರಮಗಳನ್ನು ರೂಪಿಸುತ್ತಿದೆ. ಮಹಿಳೆಯರಿಗೆ ಆರ್ಥಿಕ ಶಕ್ತಿ ಕೊಡುವ ಮೂಲಕ‌ ಕುಟುಂಬಗಳ ಮತ್ತು ಮಹಿಳಾ ಸಮಾಜದ ಆರ್ಥಿಕ‌ ಶಕ್ತಿಯನ್ನು ಹೆಚ್ಚಿಸುವ ಕಾರ್ಯಕ್ರಮಗಳನ್ನು ಇಡೀ ದೇಶದಲ್ಲಿ ಮೊದಲಿಗೆ ಕೊಟ್ಟಿದ್ದು ನಮ್ಮ ಸರ್ಕಾರ. ಆಶಾ ಕಾರ್ಯಕರ್ತೆಯರ ಬೇಡಿಕೆ ಈಡೇರಿಸಿ ಅವರು ಪ್ರತಿಭಟನೆ ಹಿಂತೆಗೆದುಕೊಳ್ಳುವಂತೆ ಮಾಡಿದ್ದು ನಮ್ಮ ಸರ್ಕಾರ. ಆಶಾ ಕಾರ್ಯಕರ್ತೆಯರಿಗೆ ತಿಂಗಳಿಗೆ 10 ಸಾವಿರ ಸಿಗುವಂತೆ ಮಾಡುವ ಜವಾಬ್ದಾರಿಯನ್ನು ನಮ್ಮ ಸರ್ಕಾರ ವಹಿಸಿಕೊಂಡಿದೆ…

Read More