ಬೆಂಗಳೂರು, ಫೆಬ್ರುವರಿ 11, 2025: ಬೆಂಗಳೂರಿನಲ್ಲಿ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶ ಇನ್ವೆಸ್ಟ್ ಕರ್ನಾಟಕಕ್ಕೆ ಅದ್ಧೂರಿ ಚಾಲನೆ ಸಿಕ್ಕಿದೆ. ನಾಲ್ಕು ದಿನ ನಡೆಯುವ ಸಮಾವೇಶವನ್ನು ರಕ್ಷಣಾ ಮಂತ್ರಿ ರಾಜನಾಥ್ ಸಿಂಗ್ ಸಿಎಂ ಸಿದ್ದರಾಮಯ್ಯ ದೀಪ ಬೆಳಗುವ ಮೂಲಕ ಉದ್ಘಾಟಿಸಿದರು https://ainlivenews.com/let-us-make-karnataka-a-global-center-in-addition-to-bangalore/ ಮಂಗಳವಾರ ಇಲ್ಲಿ ನಡೆದ ಇನ್ವೆಸ್ಟ್ ಕರ್ನಾಟಕ 2025- ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶದಲ್ಲಿ ಪ್ರಕಟಿಸಲಾಗಿರುವ 20 ಪ್ರಮುಖ ಹೂಡಿಕೆ ಯೋಜನೆಗಳ ವಿವರ ಹೀಗಿದೆ. 1. ಜೆಎಸ್ಡಡಬ್ಲ್ಯು ನಿಯೊ ಎನರ್ಜಿ ಲಿಮಿಟೆಡ್ – ಸೌರ ಯೋಜನೆ , ಗಾಳಿ ಶಕ್ತಿ ಯೋಜನೆಗಳು, ಬ್ಯಾಟರಿ ಶಕ್ತಿ ಸಂಗ್ರಹಣೆ, ಬ್ಲೇಡ್ ತಯಾರಿಕೆ ಮತ್ತು ವಿಂಡ್ ಟರ್ಬೈನ್ ಜನರೇಟರ್ ಸ್ಥಾವರ ಸ್ಥಾಪನೆಗೆ ₹ 56,000 ಕೋಟಿ ಹೂಡಿಕೆ. 2. ಬಲ್ಡೋಟಾ ಸ್ಟೀಲ್ ಆ್ಯಂಡ್ ಪವರ್ ಲಿಮಿಟೆಡ್ – ಸಮಗ್ರ ಉಕ್ಕು ತಯಾರಿಕಾ ಸ್ಥಾವರಕ್ಕೆ ರೂ ₹ 54,000 ಕೋಟಿ ಹೂಡಿಕೆ. 3. ಟಾಟಾ ಪವರ್ ರಿನ್ಯೂವೇಬಲ್ ಎನರ್ಜಿ ಲಿಮಿಟೆಡ್ – ರಾಜ್ಯದಾದ್ಯಂತ ನವೀಕರಿಸಬಹುದಾದ ಇಂಧನ ವಿದ್ಯುತ್…
Author: AIN Author
ಬಿಸಿಸಿಐನಿಂದ ಬಿಗ್ ಶಾಕ್ ಎದುರಾಗಿದ್ದು, ಟೀಮ್ ಇಂಡಿಯಾದಿಂದ ಕೆ.ಎಲ್ ರಾಹುಲ್ಗೆ ಗೇಟ್ಪಾಸ್ ಸಿಕ್ಕಿದೆ. ಇಂದು ಟೀಮ್ ಇಂಡಿಯಾ, ಇಂಗ್ಲೆಂಡ್ ನಡುವಿನ ಕೊನೆಯ ಏಕದಿನ ಪಂದ್ಯ ನಡೆಯಲಿದ್ದು, ಬಿಗ್ ಅಪ್ಡೇಟ್ ಒಂದಿದೆ. https://ainlivenews.com/global-investors-summit-12-special-investment-zones-to-be-established-m-b-patil/ ಐಸಿಸಿ ಚಾಂಪಿಯನ್ಸ್ ಟ್ರೋಫಿಗೆ ಮುನ್ನ ಟೀಮ್ ಇಂಡಿಯಾದ ಆಲ್ರೌಂಡರ್ ಪ್ರದರ್ಶನವೂ ಅಭಿಮಾನಿಗಳಲ್ಲಿ ಭಾರೀ ಸಂತಸ ತಂದಿದೆ. ಅದರಲ್ಲೂ ತಂಡದ ಬ್ಯಾಟಿಂಗ್ ವಿಭಾಗ ಬಲಿಷ್ಠ ಆಗಿರುವುದು ಬಿಸಿಸಿಐಗೆ ನಿರಾಳ ಮೂಡಿಸಿದೆ. ಇದರ ಮಧ್ಯೆ ಕೆಎಲ್ ರಾಹುಲ್ ಕಳಪೆ ಫಾರ್ಮ್ ತಂಡಕ್ಕೆ ತಲೆನೋವು ತಂದಿರುವುದು ನಿಜ. ಹಾಗಾಗಿ ಇವರಿಗೆ 3ನೇ ಪಂದ್ಯದಿಂದ ಗೇಟ್ಪಾಸ್ ಸಿಗೋ ಸಾಧ್ಯತೆ ಇದೆ. ಇಂಗ್ಲೆಂಡ್ ವಿರುದ್ಧ ನಡೆದ ಕಳೆದ ಎರಡು ಪಂದ್ಯಗಳಲ್ಲೂ ಕೆ.ಎಲ್ ರಾಹುಲ್ ರನ್ ಕಲೆ ಹಾಕುವಲ್ಲಿ ಎಡವಿದ್ದಾರೆ. ಕಟಕ್ನಲ್ಲಿ 14 ಎಸೆತಗಳಲ್ಲಿ 10 ರನ್ ಗಳಿಸಿದ್ದ ರಾಹುಲ್, ನಾಗ್ಪುರದಲ್ಲಿ ನಡೆದ ಮೊದಲ ಪಂದ್ಯದಲ್ಲಿ ಕೇವಲ 2 ರನ್ ಗಳಿಸಿ ವಿಕೆಟ್ ಒಪ್ಪಿಸಿದ್ದರು. ಮೊದಲ 2 ಏಕದಿನ ಪಂದ್ಯಗಳಲ್ಲಿ ರಾಹುಲ್ ಗಳಿಸಿದ್ದು ಕೇವಲ 12 ರನ್.…
ಬೆಂಗಳೂರು, ಫೆ. 11:ರ್ನಾಟಕ ಅತ್ಯುತ್ತಮ ಮೂಲಸೌಕರ್ಯ, ಗುಣಮಟ್ಟದ ಶಿಕ್ಷಣ, ಮಾನವ ಸಂಪನ್ಮೂಲವನ್ನು ಹೊಂದಿದ್ದು, ಬೆಂಗಳೂರು ಜೊತೆಗೆ ಕರ್ನಾಟಕ ಹೂಡಿಕೆ ಮಾಡಲು ಅತ್ಯುತ್ತಮ ಪ್ರದೇಶವಾಗಿದೆ. ನಾವೆಲ್ಲರೂ ಸೇರಿ ಕರ್ನಾಟಕವನ್ನು ಜಾಗತಿಕ ಕೇಂದ್ರವಾಗಿ ಮಾಡಬೇಕು” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಅಭಿಪ್ರಾಯಪಟ್ಟರು. ನಗರದ ಅರಮನೆ ಮೈದಾನದಲ್ಲಿ ನಡೆದ ಇನ್ವೆಸ್ಟ್ ಕರ್ನಾಟಕ 2025 ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಶಿವಕುಮಾರ್ ಅವರು ಮಂಗಳವಾರ ಮಾತನಾಡಿದರು. https://ainlivenews.com/udayagiri-stone-pelting-what-did-mp-basavaraj-bommai-say/ “ಬೆಂಗಳೂರು ನಗರ ಸ್ಟಾರ್ಟ್ಅಪ್ ಗಳನ್ನು ಸ್ಥಾಪಿಸುವ ಯುವ ಉದ್ಯಮಿಗಳಿಗೆ ಅತ್ಯಂತ ಜನಪ್ರಿಯ ನಗರ. ಜೊತೆಗೆ ಜಾಗತಿಕ ಹೂಡಿಕೆದಾರರಿಗೆ ಕರ್ನಾಟಕವೇ ಮೊದಲ ಆಯ್ಕೆ” ಎಂದರು. “ನಂಜುಂಡಪ್ಪ ವರದಿಯ ಅನ್ವಯದಂತೆ ಈಗಾಗಲೇ ಒಂದಷ್ಟು ಹಿಂದುಳಿದ ತಾಲೂಕುಗಳು ಹಾಗು ಪ್ರದೇಶಗಳನ್ನು ಗುರುತಿಸಲಾಗಿದೆ. ಇಲ್ಲಿ ನೀವುಗಳು ಉದ್ದಿಮೆಗಳನ್ನು ಸ್ಥಾಪಿಸಬೇಕಾಗಿ ಮನವಿ ಮಾಡುತ್ತೇನೆ. ಏಕೆಂದರೆ ಬೆಂಗಳೂರಿನ ಜನಸಂಖ್ಯೆ 1.40 ಕೋಟಿ ಮುಟ್ಟಿದೆ. ವಾಹನಗಳ ಸಂಖ್ಯೆ 1.1 ಕೋಟಿ ಮುಟ್ಟಿದೆ. ಹೊರ ಜಿಲ್ಲೆಗಳಲ್ಲಿ ಉದ್ದಿಮೆ ಸ್ಥಾಪನೆ ಮಾಡಿದರೆ ಹೆಚ್ಚಿನ ಸಬ್ಸಿಡಿ ನೀಡಲಾಗುವುದು” ಎಂದರು. “ನಾವೆಲ್ಲರೂ ಒಟ್ಟಿಗೆ ಸೇರಿ ಭವಿಷ್ಯದ…
ಬೆಂಗಳೂರು:- ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ದುಷ್ಕರ್ಮಿಗಳು ಬಾಂಬ್ ಬೆದರಿಕೆ ಹಾಕಿದ್ದಾರೆ. https://ainlivenews.com/udayagiri-stone-pelting-what-did-mp-basavaraj-bommai-say/ [email protected] ಎನ್ನುವ ಐಡಿಯಿಂದ ಬಾಂಬ್ ಬೆದರಿಕೆ ಇಮೇಲ್ ಬಂದಿದ್ದು, ಕರ್ನಾಟಕದ ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಯಿಗೆ ಪತ್ರ ಬರೆದಿದ್ದೇನೆ. ಆ ನನ್ನ ಪತ್ರಕ್ಕೆ ಪ್ರತಿಕ್ರಿಯೆ ಬರದಿದ್ದರೆ ಡ್ರೋನ್ ಬಾಂಬ್ ದಾಳಿ ಮಾಡುವುದಾಗಿ ಬೆದರಿಕೆ ಹಾಕಲಾಗಿದೆ. ಈ ಸಂಬಂಧ ಬೆಂಗಳೂರು ಏರ್ಪೋರ್ಟ್ ಪೊಲೀಸ್ ಠಾಣೆಯಲ್ಲಿ BNS ಕಾಯ್ದೆ ಸೆಕ್ಷನ್ 125, 351, 353ರ ಅಡಿಯಲ್ಲಿ ಎಫ್ಐಆರ್ ದಾಖಲಾಗಿದ್ದು, ಈ ಬಗ್ಗೆ ಪೊಲೀಸರು ತನಿಖೆ ನಡೆಸಿದ್ದಾರೆ. ಇನ್ನು ಬೆದರಿಕೆ ಬಂದಿರುವ ಹಿನ್ನೆಲೆಯಲ್ಲಿ ಏರ್ಪೋರ್ಟ್ಗೆ ಭದ್ರತೆ ಹೆಚ್ಚಿಸಲಾಗಿದೆ.
ನವದೆಹಲಿ:- ಉದಯಗಿರಿ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಬಸವರಾಜ್ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದಾರೆ. https://ainlivenews.com/this-is-not-pakistan-you-are-causing-havoc-mutaliks-warning-to-muslims/ ಮೈಸೂರಿನಲ್ಲಿ ಪೊಲೀಸ್ ಸ್ಟೇಷನ್ ಮೇಲೆ ರಾಜಕಾರಣಿಗಳ ಕುಮ್ಮಕ್ಕಿನಿಂದ ದಾಳಿ ನಡೆದಿದ್ದು, ಇದು ನೇರವಾಗಿ ಕಾಂಗ್ರೆಸ್ ಸರ್ಕಾರದ ಮೇಲಿನ ದಾಳಿಯಾಗಿದೆ. ಸಿಎಂ ಇದನ್ನು ಎಷ್ಟು ಗಂಭೀರವಾಗಿ ತೆಗೆದುಕೊಳ್ಳುತ್ತಾರೆ ನೋಡಬೇಕು ಎಂದರು. ಕರ್ನಾಟಕ, ಕೇರಳ ತಮಿಳುನಾಡಿನಲ್ಲಿ ಒಂದು ವರ್ಗ ಮತ್ತು ಸಂಘಟನೆ, ನಮ್ಮ ಇಡೀ ದೇಶ ಹಾಗೂ ವ್ಯವಸ್ಥೆಯನ್ನು ಸವಾಲು ಮಾಡುವ ರೀತಿ ಕಾರ್ಯ ಚಟುವಟಿಕೆ ಮಾಡುತ್ತಿವೆ. ಪಿಎಫ್ಐ ನಿಷೇಧ ಆಗಿದೆ. ಆದರೂ ಕೂಡ ಆ ಸಂಸ್ಥೆಯ ಕಾರ್ಯಕರ್ತರು ಬೇರೆ ಬೇರೆ ಹೆಸರಿನಲ್ಲಿ ಕಾರ್ಯಚಟುವಟಿಕೆ ಮಾಡುತ್ತಿದ್ದಾರೆ ಎಂದರು. ನಮ್ಮ ಸರ್ಕಾರ ಇದ್ದಾಗ ಕಠಿಣ ಕ್ರಮ ಕೈಗೊಂಡು ಹಲವಾರು ಜನರನ್ನು ಜೈಲಿಗೆ ಹಾಕಿದ್ದೆವು. ಈ ಸರ್ಕಾರ ಬಂದ ಮೇಲೆ ಹುಬ್ಬಳ್ಳಿಯಲ್ಲಿ ನಡೆದ ಘಟನೆಯಲ್ಲಿ ಭಾಗಿಯಾದವರ ಮೇಲಿನ ಎಲ್ಲ ಪ್ರಕರಣಗಳನ್ನು ವಾಪಸ್ ಪಡೆದು ಅವರೆಲ್ಲರೂ ಅಮಾಯಕರು ಎಂದು ಹೇಳಿದರು.
ದಾವಣಗೆರೆ:- ಮುಸ್ಲಿಮರು ದಾಂಧಲೆ ಮಾಡೋಕೆ ಇದು ಪಾಕ್, ಬಾಂಗ್ಲಾ ಅಲ್ಲ ಹುಷಾರಾಗಿರಿ ಎಂದು ಪ್ರಮೋದ್ ಮುತಾಲಿಕ್ ಎಚ್ಚರಿಕೆ ಕೊಟ್ಟಿದ್ದಾರೆ. https://ainlivenews.com/global-investors-summit-12-special-investment-zones-to-be-established-m-b-patil/ ಈ ಸಂಬಂಧ ಮಾತನಾಡಿದ ಅವರು, ಮೈಸೂರಿನ ಉದಯಗಿರಿ ಪೊಲೀಸ್ ಠಾಣೆ ಮೇಲೆ ನಡೆದ ಕಲ್ಲು ತೂರಾಟದ ವಿಚಾರಕ್ಕೆ ಪ್ರತಿಕ್ರಿಯಿಸಿದರು. ಈ ವೇಳೆ, ತಪ್ಪು ಮಾಡಿದ್ದರೆ ಅದಕ್ಕೆ ಶಿಕ್ಷೆ ನೀಡಲು ಕಾನೂನು, ಸಂವಿಧಾನ ಇದೆ. ನೀವು ಬೇಕಾದರೆ ದೂರು ನೀಡಬೇಕಿತ್ತು. ಇಲ್ಲವೇ ಧರಣಿ ಮಾಡಬೇಕಿತ್ತು ಅದನ್ನು ಬಿಟ್ಟು ಪೊಲೀಸ್ ಠಾಣೆಯ ಮೇಲೆ ಕಲ್ಲು ತೂರಾಟ ಮಾಡೋದು, ಪೊಲೀಸರಿಗೆ ಕಲ್ಲು ಹೊಡೆಯುವುದನ್ನು ಬಿಡಬೇಕು ಎಂದಿದ್ದಾರೆ. ಉದಯಗಿರಿ ಮುಸ್ಲಿಮರೇ ಜಾಸ್ತಿ ಇರುವ ಏರಿಯಾವಾಗಿದ್ದು, ಅಲ್ಲಿ ಈ ಘಟನೆ ನಡೆದಿದೆ. ತಪ್ಪು ಮಾಡಿದವನನ್ನು ಈಗಾಗಲೇ ಪೊಲೀಸರು ಬಂಧಿಸಿದ್ದಾರೆ. ಕಾನೂನು ಇದೆ ಸಂವಿಧಾನ ಇದೆ ತಪ್ಪಿತಸ್ಥನಿಗೆ ಶಿಕ್ಷೆ ಆಗುತ್ತದೆ. ಅದನ್ನು ಬಿಟ್ಟು ಕಲ್ಲು ತೂರಾಟ ನಡೆಸಿ ದಾಂಧಲೆ ನಡೆಸಿದ್ದು ಎಷ್ಟು ಸರಿ. ಇದು ಪಾಕಿಸ್ತಾನ, ಅಪಘಾನಿಸ್ತಾನ, ಬಾಂಗ್ಲಾ ದೇಶ ಅಲ್ಲ. ನಿಮಗೆ ಏನು ತೊಂದರೆಯಾಗಿದೆ ಎಂದು ದೂರು…
ಬೆಂಗಳೂರು: ರಾಜ್ಯದಲ್ಲಿ ಸಮಗ್ರ ಕೈಗಾರಿಕಾ ಬೆಳವಣಿಗೆ ಸಾಧಿಸಲು ಈಗ ಇರುವ 200ಕ್ಕೂ ಹೆಚ್ಚು ಕೈಗಾರಿಕಾ ಪ್ರದೇಶಗಳ ಜತೆಗೆ 30 ಸಾವಿರ ಎಕರೆ ವಿಸ್ತೀರ್ಣದಲ್ಲಿ 12 ವಿಶೇಷ ಹೂಡಿಕೆ ವಲಯಗಳನ್ನು ಸ್ಥಾಪಿಸಲಾಗುವುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಮಂಗಳವಾರ ಹೇಳಿದ್ದಾರೆ. https://ainlivenews.com/anand-mahindras-memory-of-giving-investment-cheer/ ಜಾಗತಿಕ ಹೂಡಿಕೆದಾರರ ಸಮಾವೇಶ ಉದ್ದೇಶಿಸಿ ಮಾತನಾಡಿದ ಅವರು, ಇದಕ್ಕಾಗಿ ಇತ್ತೀಚೆಗೆ ಅಧಿಸೂಚನೆ ಹೊರಡಿಸಿದ್ದು, ಇಲ್ಲೆಲ್ಲ ವಿಶ್ವ ದರ್ಜೆಯ ಮೂಲಸೌಕರ್ಯ ಒದಗಿಸಲಾಗುವುದು. ಕೆಐಎಡಿಬಿ ರಾಜ್ಯದಲ್ಲಿ ಈಗಾಗಲೇ 85 ಸಾವಿರ ಎಕರೆಗೂ ಹೆಚ್ಚು ವಿಸ್ತೀರ್ಣದ ಕೈಗಾರಿಕಾ ಪ್ರದೇಶಗಳನ್ನು ಅಭಿವೃದ್ಧಿ ಪಡಿಸಿದ್ದು, ಇಲ್ಲಿ 25 ಸಾವಿರ ಕೈಗಾರಿಕೆಗಳು ನೆಲೆಯೂರಿವೆ’ ಎಂದರು. ಉತ್ಪಾದನಾ ವೆಚ್ಚ ಕಡಿಮೆಯಾಗಿ, ದಕ್ಷತೆ ಹೆಚ್ಚಾಗಬೇಕು ಎನ್ನುವುದು ಸರಕಾರದ ನೀತಿಯಾಗಿದೆ. ಇದನ್ನು ಸಾಧಿಸಲು `ಕ್ಲಸ್ಟರ್ ಆಧಾರಿತ ನೀತಿ’ ಅಳವಡಿಸಿಕೊಳ್ಳಲಾಗಿದೆ. ಹೀಗಾಗಿ ಬೇರೆಬೇರೆ ಭಾಗಗಳಲ್ಲಿ ಏರೋಸ್ಪೇಸ್ ಮತ್ತು ಡಿಫೆನ್ಸ್, ಇ.ವಿ.ತಯಾರಿಕೆ ಕ್ಲಸ್ಟರ್, ಫಾರ್ಮಾ, ಡೀಪ್-ಟೆಕ್ ಮತ್ತು ಡ್ರೋನ್ ಪಾರ್ಕ್ ಗಳನ್ನು ಸ್ಥಾಪಿಸಲಾಗುತ್ತಿದೆ. ಕೈಗಾರಿಕಾ ಪ್ರದೇಶಗಳಿಗೆ ಹತ್ತಿರದ ನದೀಮೂಲಗಳಿಂದ…
ಬೆಂಗಳೂರು: ಹೂಡಿಕೆದಾರರ ಸಮಾವೇಶದಲ್ಲಿ ಭಾಗವಹಿಸಿದ್ದ ಗಣ್ಯ ಉದ್ಯಮಿ ಆನಂದ್ ಮಹೀಂದ್ರ ಕನ್ನಡದಲ್ಲೇ ಮಾತು ಆರಂಭಿಸಿದರು. ಅವರು 60 ವರ್ಷಗಳ ನೆನಪಿನಾಳಕ್ಕೆ ಜಾರಿ, 1960ರ ಆಚೀಚೆ ತಾವು ತಮ್ಮ ತಂದೆ-ತಾಯಿಗಳೊಂದಿಗೆ ಕೊಡಗಿನ ಕುಟ್ಟದಲ್ಲಿ ಬೆಳೆದ ದಿನಗಳ ಅನುಭವಗಳನ್ನು ಹಂಚಿಕೊಂಡರು. ಪಂಜಾಬಿನವರಾದ ತಾವು ಇಲ್ಲಿನ ಕಾಫಿ ಪ್ಲಾಂಟೇಶನ್ ನಲ್ಲಿ ಕಲಿತ ಪಾಠಗಳನ್ನೇ ಉದ್ಯಮದಲ್ಲೂ ಅಳವಡಿಸಿಕೊಂಡಿರುವುದಾಗಿ ಹೇಳಿದರು. https://ainlivenews.com/20-lakh-jobs-in-5-years-emphasis-on-backward-districts-taluks-dcm-dk/ ಬಳಿಕ ಅವರು, ಮುಂದಿನ ಐದು ವರ್ಷಗಳಲ್ಲಿ ತಾವು ರಾಜ್ಯದಲ್ಲಿ ಮರುಬಳಕೆ ಇಂಧನ, ಪ್ರವಾಸ ಮತ್ತು ಆತಿಥ್ಯೋದ್ಯಮ, ವೈಮಾಂತರಿಕ್ಷ ಮತ್ತು ರಕ್ಷಣೆ, ವಿದ್ಯುಚ್ಚಾಲಿತ ತ್ರಿಚಕ್ರ ವಾಹನ ತಯಾರಿಕೆ ಮತ್ತು ರಿಯಲ್ ಎಸ್ಟೇಟ್ ಕ್ಷೇತ್ರಗಳಲ್ಲಿ 40 ಸಾವಿರ ಕೋಟಿ ರೂ. ಬಂಡವಾಳ ಹೂಡುವುದಾಗಿ ಘೋಷಿಸಿದರು. ಮಹೀಂದ್ರ ಸಮೂಹವು ರಿಯಲ್ ಎಸ್ಟೇಟ್ ಕ್ಷೇತ್ರದಲ್ಲಿ ಬೆಂಗಳೂರಿನಲ್ಲಿ ಸದ್ಯಕ್ಕೆ 5,000 ಕೋಟಿ ರೂ. ಮೊತ್ತದ ಯೋಜನೆಗಳನ್ನು ಕೈಗೊಂಡಿದೆ. ಮುಂದಿನ ದಿನಗಳಲ್ಲಿ 6,000 ಕೋಟಿ ರೂ. ಹೂಡುವುದಾಗಿ ಅವರು ಪ್ರಕಟಿಸಿದರು. ಕೊನೆಯಲ್ಲಿ `ಕರ್ನಾಟಕಕ್ಕೆ ಧನ್ಯವಾದಗಳು’ ಎನ್ನುವ ಮೂಲಕ ಕನ್ನಡದಲ್ಲೇ ಮಾತು ಮುಗಿಸಿ, ಎಲ್ಲರ ಮನ…
ಬೆಂಗಳೂರು: ರಾಜ್ಯ ಸರಕಾರವು ಮುಂದಿನ ಐದು ವರ್ಷಗಳ (2025-30) ಉದ್ಯಮ ಬೆಳವಣಿಗೆಗೆ ರೂಪಿಸಿರುವ ನೂತನ ಕೈಗಾರಿಕಾ ನೀತಿಯನ್ನು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಬಿಡುಗಡೆ ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಮಂಗಳವಾರ ಅನಾವರಣಗೊಳಿಸಿದರು. https://ainlivenews.com/indias-future-lies-here-rajnath-singhs-golden-words-about-bengaluru/ ಹೊಸ ನೀತಿಯು ಇನ್ನು ಐದು ವರ್ಷಗಳಲ್ಲಿ ರಾಜ್ಯಕ್ಕೆ 7.50 ಲಕ್ಷ ಕೋಟಿ ರೂಪಾಯಿ ಬಂಡವಾಳ ಹೂಡಿಕೆ ಆಕರ್ಷಿಸುವ, 20 ಲಕ್ಷ ಉದ್ಯೋಗ ಸೃಷ್ಟಿಸುವ ಮತ್ತು ಸನ್-ರೈಸ್ ವಲಯದಲ್ಲಿ ರಾಜ್ಯವನ್ನು ಇಡೀ ದೇಶಕ್ಕೆ ನಂಬರ್ ಒನ್ ಆಗಿ ಪ್ರತಿಷ್ಠಾಪಿಸುವ ಹೆಗ್ಗುರಿಗಳನ್ನು ಹೊಂದಿದೆ. ಇದನ್ನೆಲ್ಲ ಸಾಧಿಸಲು ಬೆಂಗಳೂರಿನ ಆಚೆಗೆ ಹಾಗೂ ಹಿಂದುಳಿದ ಮತ್ತು ಅತೀ ಹಿಂದುಳಿದ ಜಿಲ್ಲೆ/ತಾಲ್ಲೂಕುಗಳಿಗೆ ಆದ್ಯತೆ ಕೊಡಲಾಗಿದೆ. ಇದಕ್ಕಾಗಿ ಕೈಗಾರಿಕಾ ಬೆಳವಣಿಗೆ ಆಧರಿಸಿ ಪ್ರದೇಶವಾರು ಪ್ರೋತ್ಸಾಹಕ ಭತ್ಯೆಗಳನ್ನು ನೀಡಲಾಗುವುದು ಎಂದು ಹೊಸ ನೀತಿಯಲ್ಲಿ ತಿಳಿಸಲಾಗಿದೆ. ಹೊಸ ನೀತಿಯಲ್ಲಿ ಅಂಶಗಳನ್ನು ಬೃಹತ್ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ಅವರು ವಿವರಿಸಿದ್ದಾರೆ. ಈ ನೀತಿಯಲ್ಲಿ ಡಿ ಎಂ ನಂಜುಂಡಪ್ಪ ವರದಿ ಆಧರಿಸಿ ಕೈಗಾರಿಕಾ ಬೆಳವಣಿಗೆಯಲ್ಲಿ ಹಿಂದುಳಿದಿರುವ ಜಿಲ್ಲೆ/ತಾಲ್ಲೂಕುಗಳನ್ನು ಝೋನ್-1 ಮತ್ತು…
ಬೆಂಗಳೂರು:- ಬೆಂಗಳೂರಿನ ಕೈಯಲ್ಲಿ ಭಾರತದ ಭವ್ಯ ಭವಿಷ್ಯ ಅಡಗಿದೆ ಎಂದು ರಾಜನಾಥ್ ಸಿಂಗ್ ಹೇಳಿದ್ದಾರೆ. ಅರಮನೆ ಮೈದಾನದಲ್ಲಿ ನಡೆದ `ಜಾಗತಿಕ ಹೂಡಿಕೆದಾರರ ಸಮಾವೇಶ’ವಾದ ಇನ್ವೆಸ್ಟ್ ಕರ್ನಾಟಕ-2025ಕ್ಕೆ ಅವರು ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ವಿಶ್ವ ದರ್ಜೆಯ ಮೂಲಸೌಕರ್ಯ ಮತ್ತು ಕಾರ್ಯ ಪರಿಸರ ಹೊಂದಿರುವ ಕರ್ನಾಟಕವು ಬಂಡವಾಳ ಹೂಡಿಕೆಗೆ ಹೇಳಿ ಮಾಡಿಸಿದ ರಾಜ್ಯವಾಗಿದೆ. ಭಾರತದ ಭವ್ಯ ಭವಿಷ್ಯ ಬೆಂಗಳೂರಿನ ಕೈಯಲ್ಲಿದೆ ಎಂದರು. https://ainlivenews.com/the-khadims-who-sacrificed-a-person-for-the-desire-for-wealth-those-who-believed-the-astrologer-ended-up-in-jail/ ಹೂಡಿಕೆದಾರರು ಇಲ್ಲಿ ಬಂಡವಾಳ ಹೂಡಿದರೆ ಇಡೀ ದೇಶವೇ ಅವರ ಬೆನ್ನಿಗಿರಲಿದೆ. ಭಾರತದ ಭವಿಷ್ಯದ ಬಗ್ಗೆ ಅನುಮಾನವಿರುವವರು ಒಮ್ಮೆ ಬೆಂಗಳೂರಿಗೆ ಬಂದು ಇಲ್ಲಿನ ಐಟಿ, ಸ್ಟಾರ್ಟಪ್ ಮತ್ತು ಇನ್ನಿತರ ಕ್ರಾಂತಿಕಾರಕ ಸಂಶೋಧನೆಗಳನ್ನು ನೋಡಿದರೆ, ಅವರ ಸಂಶಯಗಳೆಲ್ಲ ನಿವಾರಣೆಯಾಗಿ ಹೋಗುತ್ತವೆ ಎಂದರು. ಕರ್ನಾಟಕವು ಜ್ಞಾನ ಮತ್ತು ಸಂಪತ್ತು ಎರಡರಿಂದಲೂ ಮೇಳೈಸಿರುವ ರಾಜ್ಯವಾಗಿದೆ. ದೇಶದ ತಂತ್ರಜ್ಞಾನ ರಾಜಧಾನಿಯಾಗಿರುವ ಬೆಂಗಳೂರು ವೈಮಾಂತರಿಕ್ಷ, ಕೃತಕ ಬುದ್ಧಿಮತ್ತೆ, ಪ್ರತಿಭೆ ಮತ್ತು ಯುವಜನರ ಆಗರವಾಗಿದೆ. ಇಲ್ಲಿರುವ ಶಕ್ತಿ, ಮಹತ್ತ್ವಾಕಾಂಕ್ಷೆ ಮತ್ತು ಇಲ್ಲಿ ನಡೆಯುತ್ತಿರುವ ನಿರ್ಣಾಯಕ ಕೆಲಸಗಳು ದೇಶವನ್ನು…