ದಾವಣಗೆರೆ:- ಮುಸ್ಲಿಮರು ದಾಂಧಲೆ ಮಾಡೋಕೆ ಇದು ಪಾಕ್, ಬಾಂಗ್ಲಾ ಅಲ್ಲ ಹುಷಾರಾಗಿರಿ ಎಂದು ಪ್ರಮೋದ್ ಮುತಾಲಿಕ್ ಎಚ್ಚರಿಕೆ ಕೊಟ್ಟಿದ್ದಾರೆ. https://ainlivenews.com/global-investors-summit-12-special-investment-zones-to-be-established-m-b-patil/ ಈ ಸಂಬಂಧ ಮಾತನಾಡಿದ ಅವರು, ಮೈಸೂರಿನ ಉದಯಗಿರಿ ಪೊಲೀಸ್ ಠಾಣೆ ಮೇಲೆ ನಡೆದ ಕಲ್ಲು ತೂರಾಟದ ವಿಚಾರಕ್ಕೆ ಪ್ರತಿಕ್ರಿಯಿಸಿದರು. ಈ ವೇಳೆ, ತಪ್ಪು ಮಾಡಿದ್ದರೆ ಅದಕ್ಕೆ ಶಿಕ್ಷೆ ನೀಡಲು ಕಾನೂನು, ಸಂವಿಧಾನ ಇದೆ. ನೀವು ಬೇಕಾದರೆ ದೂರು ನೀಡಬೇಕಿತ್ತು. ಇಲ್ಲವೇ ಧರಣಿ ಮಾಡಬೇಕಿತ್ತು ಅದನ್ನು ಬಿಟ್ಟು ಪೊಲೀಸ್ ಠಾಣೆಯ ಮೇಲೆ ಕಲ್ಲು ತೂರಾಟ ಮಾಡೋದು, ಪೊಲೀಸರಿಗೆ ಕಲ್ಲು ಹೊಡೆಯುವುದನ್ನು ಬಿಡಬೇಕು ಎಂದಿದ್ದಾರೆ. ಉದಯಗಿರಿ ಮುಸ್ಲಿಮರೇ ಜಾಸ್ತಿ ಇರುವ ಏರಿಯಾವಾಗಿದ್ದು, ಅಲ್ಲಿ ಈ ಘಟನೆ ನಡೆದಿದೆ. ತಪ್ಪು ಮಾಡಿದವನನ್ನು ಈಗಾಗಲೇ ಪೊಲೀಸರು ಬಂಧಿಸಿದ್ದಾರೆ. ಕಾನೂನು ಇದೆ ಸಂವಿಧಾನ ಇದೆ ತಪ್ಪಿತಸ್ಥನಿಗೆ ಶಿಕ್ಷೆ ಆಗುತ್ತದೆ. ಅದನ್ನು ಬಿಟ್ಟು ಕಲ್ಲು ತೂರಾಟ ನಡೆಸಿ ದಾಂಧಲೆ ನಡೆಸಿದ್ದು ಎಷ್ಟು ಸರಿ. ಇದು ಪಾಕಿಸ್ತಾನ, ಅಪಘಾನಿಸ್ತಾನ, ಬಾಂಗ್ಲಾ ದೇಶ ಅಲ್ಲ. ನಿಮಗೆ ಏನು ತೊಂದರೆಯಾಗಿದೆ ಎಂದು ದೂರು…
Author: AIN Author
ಬೆಂಗಳೂರು: ರಾಜ್ಯದಲ್ಲಿ ಸಮಗ್ರ ಕೈಗಾರಿಕಾ ಬೆಳವಣಿಗೆ ಸಾಧಿಸಲು ಈಗ ಇರುವ 200ಕ್ಕೂ ಹೆಚ್ಚು ಕೈಗಾರಿಕಾ ಪ್ರದೇಶಗಳ ಜತೆಗೆ 30 ಸಾವಿರ ಎಕರೆ ವಿಸ್ತೀರ್ಣದಲ್ಲಿ 12 ವಿಶೇಷ ಹೂಡಿಕೆ ವಲಯಗಳನ್ನು ಸ್ಥಾಪಿಸಲಾಗುವುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಮಂಗಳವಾರ ಹೇಳಿದ್ದಾರೆ. https://ainlivenews.com/anand-mahindras-memory-of-giving-investment-cheer/ ಜಾಗತಿಕ ಹೂಡಿಕೆದಾರರ ಸಮಾವೇಶ ಉದ್ದೇಶಿಸಿ ಮಾತನಾಡಿದ ಅವರು, ಇದಕ್ಕಾಗಿ ಇತ್ತೀಚೆಗೆ ಅಧಿಸೂಚನೆ ಹೊರಡಿಸಿದ್ದು, ಇಲ್ಲೆಲ್ಲ ವಿಶ್ವ ದರ್ಜೆಯ ಮೂಲಸೌಕರ್ಯ ಒದಗಿಸಲಾಗುವುದು. ಕೆಐಎಡಿಬಿ ರಾಜ್ಯದಲ್ಲಿ ಈಗಾಗಲೇ 85 ಸಾವಿರ ಎಕರೆಗೂ ಹೆಚ್ಚು ವಿಸ್ತೀರ್ಣದ ಕೈಗಾರಿಕಾ ಪ್ರದೇಶಗಳನ್ನು ಅಭಿವೃದ್ಧಿ ಪಡಿಸಿದ್ದು, ಇಲ್ಲಿ 25 ಸಾವಿರ ಕೈಗಾರಿಕೆಗಳು ನೆಲೆಯೂರಿವೆ’ ಎಂದರು. ಉತ್ಪಾದನಾ ವೆಚ್ಚ ಕಡಿಮೆಯಾಗಿ, ದಕ್ಷತೆ ಹೆಚ್ಚಾಗಬೇಕು ಎನ್ನುವುದು ಸರಕಾರದ ನೀತಿಯಾಗಿದೆ. ಇದನ್ನು ಸಾಧಿಸಲು `ಕ್ಲಸ್ಟರ್ ಆಧಾರಿತ ನೀತಿ’ ಅಳವಡಿಸಿಕೊಳ್ಳಲಾಗಿದೆ. ಹೀಗಾಗಿ ಬೇರೆಬೇರೆ ಭಾಗಗಳಲ್ಲಿ ಏರೋಸ್ಪೇಸ್ ಮತ್ತು ಡಿಫೆನ್ಸ್, ಇ.ವಿ.ತಯಾರಿಕೆ ಕ್ಲಸ್ಟರ್, ಫಾರ್ಮಾ, ಡೀಪ್-ಟೆಕ್ ಮತ್ತು ಡ್ರೋನ್ ಪಾರ್ಕ್ ಗಳನ್ನು ಸ್ಥಾಪಿಸಲಾಗುತ್ತಿದೆ. ಕೈಗಾರಿಕಾ ಪ್ರದೇಶಗಳಿಗೆ ಹತ್ತಿರದ ನದೀಮೂಲಗಳಿಂದ…
ಬೆಂಗಳೂರು: ಹೂಡಿಕೆದಾರರ ಸಮಾವೇಶದಲ್ಲಿ ಭಾಗವಹಿಸಿದ್ದ ಗಣ್ಯ ಉದ್ಯಮಿ ಆನಂದ್ ಮಹೀಂದ್ರ ಕನ್ನಡದಲ್ಲೇ ಮಾತು ಆರಂಭಿಸಿದರು. ಅವರು 60 ವರ್ಷಗಳ ನೆನಪಿನಾಳಕ್ಕೆ ಜಾರಿ, 1960ರ ಆಚೀಚೆ ತಾವು ತಮ್ಮ ತಂದೆ-ತಾಯಿಗಳೊಂದಿಗೆ ಕೊಡಗಿನ ಕುಟ್ಟದಲ್ಲಿ ಬೆಳೆದ ದಿನಗಳ ಅನುಭವಗಳನ್ನು ಹಂಚಿಕೊಂಡರು. ಪಂಜಾಬಿನವರಾದ ತಾವು ಇಲ್ಲಿನ ಕಾಫಿ ಪ್ಲಾಂಟೇಶನ್ ನಲ್ಲಿ ಕಲಿತ ಪಾಠಗಳನ್ನೇ ಉದ್ಯಮದಲ್ಲೂ ಅಳವಡಿಸಿಕೊಂಡಿರುವುದಾಗಿ ಹೇಳಿದರು. https://ainlivenews.com/20-lakh-jobs-in-5-years-emphasis-on-backward-districts-taluks-dcm-dk/ ಬಳಿಕ ಅವರು, ಮುಂದಿನ ಐದು ವರ್ಷಗಳಲ್ಲಿ ತಾವು ರಾಜ್ಯದಲ್ಲಿ ಮರುಬಳಕೆ ಇಂಧನ, ಪ್ರವಾಸ ಮತ್ತು ಆತಿಥ್ಯೋದ್ಯಮ, ವೈಮಾಂತರಿಕ್ಷ ಮತ್ತು ರಕ್ಷಣೆ, ವಿದ್ಯುಚ್ಚಾಲಿತ ತ್ರಿಚಕ್ರ ವಾಹನ ತಯಾರಿಕೆ ಮತ್ತು ರಿಯಲ್ ಎಸ್ಟೇಟ್ ಕ್ಷೇತ್ರಗಳಲ್ಲಿ 40 ಸಾವಿರ ಕೋಟಿ ರೂ. ಬಂಡವಾಳ ಹೂಡುವುದಾಗಿ ಘೋಷಿಸಿದರು. ಮಹೀಂದ್ರ ಸಮೂಹವು ರಿಯಲ್ ಎಸ್ಟೇಟ್ ಕ್ಷೇತ್ರದಲ್ಲಿ ಬೆಂಗಳೂರಿನಲ್ಲಿ ಸದ್ಯಕ್ಕೆ 5,000 ಕೋಟಿ ರೂ. ಮೊತ್ತದ ಯೋಜನೆಗಳನ್ನು ಕೈಗೊಂಡಿದೆ. ಮುಂದಿನ ದಿನಗಳಲ್ಲಿ 6,000 ಕೋಟಿ ರೂ. ಹೂಡುವುದಾಗಿ ಅವರು ಪ್ರಕಟಿಸಿದರು. ಕೊನೆಯಲ್ಲಿ `ಕರ್ನಾಟಕಕ್ಕೆ ಧನ್ಯವಾದಗಳು’ ಎನ್ನುವ ಮೂಲಕ ಕನ್ನಡದಲ್ಲೇ ಮಾತು ಮುಗಿಸಿ, ಎಲ್ಲರ ಮನ…
ಬೆಂಗಳೂರು: ರಾಜ್ಯ ಸರಕಾರವು ಮುಂದಿನ ಐದು ವರ್ಷಗಳ (2025-30) ಉದ್ಯಮ ಬೆಳವಣಿಗೆಗೆ ರೂಪಿಸಿರುವ ನೂತನ ಕೈಗಾರಿಕಾ ನೀತಿಯನ್ನು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಬಿಡುಗಡೆ ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಮಂಗಳವಾರ ಅನಾವರಣಗೊಳಿಸಿದರು. https://ainlivenews.com/indias-future-lies-here-rajnath-singhs-golden-words-about-bengaluru/ ಹೊಸ ನೀತಿಯು ಇನ್ನು ಐದು ವರ್ಷಗಳಲ್ಲಿ ರಾಜ್ಯಕ್ಕೆ 7.50 ಲಕ್ಷ ಕೋಟಿ ರೂಪಾಯಿ ಬಂಡವಾಳ ಹೂಡಿಕೆ ಆಕರ್ಷಿಸುವ, 20 ಲಕ್ಷ ಉದ್ಯೋಗ ಸೃಷ್ಟಿಸುವ ಮತ್ತು ಸನ್-ರೈಸ್ ವಲಯದಲ್ಲಿ ರಾಜ್ಯವನ್ನು ಇಡೀ ದೇಶಕ್ಕೆ ನಂಬರ್ ಒನ್ ಆಗಿ ಪ್ರತಿಷ್ಠಾಪಿಸುವ ಹೆಗ್ಗುರಿಗಳನ್ನು ಹೊಂದಿದೆ. ಇದನ್ನೆಲ್ಲ ಸಾಧಿಸಲು ಬೆಂಗಳೂರಿನ ಆಚೆಗೆ ಹಾಗೂ ಹಿಂದುಳಿದ ಮತ್ತು ಅತೀ ಹಿಂದುಳಿದ ಜಿಲ್ಲೆ/ತಾಲ್ಲೂಕುಗಳಿಗೆ ಆದ್ಯತೆ ಕೊಡಲಾಗಿದೆ. ಇದಕ್ಕಾಗಿ ಕೈಗಾರಿಕಾ ಬೆಳವಣಿಗೆ ಆಧರಿಸಿ ಪ್ರದೇಶವಾರು ಪ್ರೋತ್ಸಾಹಕ ಭತ್ಯೆಗಳನ್ನು ನೀಡಲಾಗುವುದು ಎಂದು ಹೊಸ ನೀತಿಯಲ್ಲಿ ತಿಳಿಸಲಾಗಿದೆ. ಹೊಸ ನೀತಿಯಲ್ಲಿ ಅಂಶಗಳನ್ನು ಬೃಹತ್ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ಅವರು ವಿವರಿಸಿದ್ದಾರೆ. ಈ ನೀತಿಯಲ್ಲಿ ಡಿ ಎಂ ನಂಜುಂಡಪ್ಪ ವರದಿ ಆಧರಿಸಿ ಕೈಗಾರಿಕಾ ಬೆಳವಣಿಗೆಯಲ್ಲಿ ಹಿಂದುಳಿದಿರುವ ಜಿಲ್ಲೆ/ತಾಲ್ಲೂಕುಗಳನ್ನು ಝೋನ್-1 ಮತ್ತು…
ಬೆಂಗಳೂರು:- ಬೆಂಗಳೂರಿನ ಕೈಯಲ್ಲಿ ಭಾರತದ ಭವ್ಯ ಭವಿಷ್ಯ ಅಡಗಿದೆ ಎಂದು ರಾಜನಾಥ್ ಸಿಂಗ್ ಹೇಳಿದ್ದಾರೆ. ಅರಮನೆ ಮೈದಾನದಲ್ಲಿ ನಡೆದ `ಜಾಗತಿಕ ಹೂಡಿಕೆದಾರರ ಸಮಾವೇಶ’ವಾದ ಇನ್ವೆಸ್ಟ್ ಕರ್ನಾಟಕ-2025ಕ್ಕೆ ಅವರು ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ವಿಶ್ವ ದರ್ಜೆಯ ಮೂಲಸೌಕರ್ಯ ಮತ್ತು ಕಾರ್ಯ ಪರಿಸರ ಹೊಂದಿರುವ ಕರ್ನಾಟಕವು ಬಂಡವಾಳ ಹೂಡಿಕೆಗೆ ಹೇಳಿ ಮಾಡಿಸಿದ ರಾಜ್ಯವಾಗಿದೆ. ಭಾರತದ ಭವ್ಯ ಭವಿಷ್ಯ ಬೆಂಗಳೂರಿನ ಕೈಯಲ್ಲಿದೆ ಎಂದರು. https://ainlivenews.com/the-khadims-who-sacrificed-a-person-for-the-desire-for-wealth-those-who-believed-the-astrologer-ended-up-in-jail/ ಹೂಡಿಕೆದಾರರು ಇಲ್ಲಿ ಬಂಡವಾಳ ಹೂಡಿದರೆ ಇಡೀ ದೇಶವೇ ಅವರ ಬೆನ್ನಿಗಿರಲಿದೆ. ಭಾರತದ ಭವಿಷ್ಯದ ಬಗ್ಗೆ ಅನುಮಾನವಿರುವವರು ಒಮ್ಮೆ ಬೆಂಗಳೂರಿಗೆ ಬಂದು ಇಲ್ಲಿನ ಐಟಿ, ಸ್ಟಾರ್ಟಪ್ ಮತ್ತು ಇನ್ನಿತರ ಕ್ರಾಂತಿಕಾರಕ ಸಂಶೋಧನೆಗಳನ್ನು ನೋಡಿದರೆ, ಅವರ ಸಂಶಯಗಳೆಲ್ಲ ನಿವಾರಣೆಯಾಗಿ ಹೋಗುತ್ತವೆ ಎಂದರು. ಕರ್ನಾಟಕವು ಜ್ಞಾನ ಮತ್ತು ಸಂಪತ್ತು ಎರಡರಿಂದಲೂ ಮೇಳೈಸಿರುವ ರಾಜ್ಯವಾಗಿದೆ. ದೇಶದ ತಂತ್ರಜ್ಞಾನ ರಾಜಧಾನಿಯಾಗಿರುವ ಬೆಂಗಳೂರು ವೈಮಾಂತರಿಕ್ಷ, ಕೃತಕ ಬುದ್ಧಿಮತ್ತೆ, ಪ್ರತಿಭೆ ಮತ್ತು ಯುವಜನರ ಆಗರವಾಗಿದೆ. ಇಲ್ಲಿರುವ ಶಕ್ತಿ, ಮಹತ್ತ್ವಾಕಾಂಕ್ಷೆ ಮತ್ತು ಇಲ್ಲಿ ನಡೆಯುತ್ತಿರುವ ನಿರ್ಣಾಯಕ ಕೆಲಸಗಳು ದೇಶವನ್ನು…
ಚಿತ್ರದುರ್ಗ:- ಜಿಲ್ಲೆ ಚಳ್ಳಕೆರೆ ತಾಲೂಕಿನ ಪರಶುರಾಂಪುರದಲ್ಲಿ ನಿಧಿ ಆಸೆಗಾಗಿ ಚಪ್ಪಲಿ ಹೊಲೆಯುವನನ್ನು ಕರೆದೊಯ್ದು ಖದೀಮರು ಬಲಿ ಕೊಟ್ಟಿರುವ ಘಟನೆ ಜರುಗಿದೆ. https://ainlivenews.com/honest-officials-in-the-state-are-not-worth-a-penny-n-ravikumar/ ಪ್ರಭಾಕರ್ ಹತ್ಯೆಯಾದ ವ್ಯಕ್ತಿ ಎಂದು ಹೇಳಲಾಗಿದೆ. ಜ್ಯೋತಿಷಿ ರಾಮಕೃಷ್ಣನ ಮಾತು ಕೇಳಿ ಆನಂದ್ ರೆಡ್ಡಿ ಎಂಬಾತ ಹಿಂದೆ ಮುಂದೆ ನೋಡದೇ ನರಬಲಿ ಕೊಟ್ಟೇ ಬಿಟ್ಟಿದ್ದಾನೆ. ಆದ್ರೆ, ಇದೀಗ ಪೊಲೀಸರು, ನರಬಲಿ ಕೊಟ್ಟ ಆರೋಪಿ ಆಂಧ್ರದ ಕಲ್ಯಾಣ ದುರ್ಗ ತಾಲೂಕಿನ ಕುಂದುರ್ಪಿ ಗ್ರಾಮದ ಆನಂದ ರೆಡ್ಡಿ ಹಾಗೂ ಜ್ಯೋತಿಷಿಯನ್ನು ಬಂಧಿಸಿದ್ದಾರೆ. ಜ್ಯೋತಿಷಿ ರಾಮಕೃಷ್ಣ, ಆನಂದ ರೆಡ್ಡಿಗೆ ಪರಶುರಾಮಪುರ ಪಶ್ಚಿಮದಲ್ಲಿ ನರಬಲಿ ಕೊಟ್ರೆ ನಿಧಿ ಸಿಗುತ್ತೆ. ಆ ರಕ್ತವನ್ನು ಮಾರಮ್ಮ ದೇವಿಗೆ ಅರ್ಪಿಸಲು ಹೇಳಿದ್ದನಂತೆ. ಜ್ಯೋತಿಷಿ ಮಾತು ಕೇಳಿದ ಆನಂದ ರೆಡ್ಡಿ, ಕಳೆದ ಭಾನುವಾರ ಸಂಜೆ ಪಶ್ಚಿಮ ದಿಕ್ಕಲ್ಲಿ ಬಂದ ಪ್ರಭಾಕರನ ಬರ್ಬರ ಹತ್ಯೆ ಮಾಡಿದ್ದಾನೆ. ಬಸ್ ನಿಲ್ದಾಣದಲ್ಲಿ ಚಪ್ಪಲಿ ಹೊಲೆಯುವ ಕಾಯಕ ಮಾಡಿಕೊಂಡಿದ್ದ ಪ್ರಭಾಕರನನ್ನು ಬೈಕಲ್ಲಿ ಡ್ರಾಪ್ ನೀಡುವುದಾಗಿ ಹೇಳಿ ಕರೆದೊಯ್ದು ಮಚ್ಚಿನಿಂದ ಕೊಚ್ಚಿ ಕೊಂದಿದ್ದಾನೆ. ಕೊಲೆ ಆರೋಪಿ ಆನಂದ…
ಬೆಂಗಳೂರು:- ರಾಜ್ಯದಲ್ಲಿ ಪ್ರಾಮಾಣಿಕ ಅಧಿಕಾರಿಗಳಿಗೆ ಕವಡೆ ಕಾಸಿನ ಬೆಲೆ ಇಲ್ಲ ಎಂದು ಎನ್.ರವಿಕುಮಾರ್ ಹೇಳಿದ್ದಾರೆ. https://ainlivenews.com/ask-here-people-how-to-avoid-bp-in-the-summer/ ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಪ್ರಾಮಾಣಿಕ ಅಧಿಕಾರಿಗಳಿಗೆ ಕವಡೆ ಕಾಸಿನ ಬೆಲೆಯೂ ಇಲ್ಲ ಎಂಬುದು ಮತ್ತೆ ಮತ್ತೆ ಸಾಬೀತಾಗುತ್ತಿದೆ. ಭದ್ರಾವತಿಯಲ್ಲಿ ಭೂ ಮತ್ತು ಗಣಿ ವಿಜ್ಞಾನ ಇಲಾಖೆಯಲ್ಲಿ ಕೆಲಸ ಮಾಡುವ ಮಹಿಳಾ ಅಧಿಕಾರಿ ಜ್ಯೋತಿಯವರಿಗೆ ಶಾಸಕ ಸಂಗಮೇಶ್ ಅವರ ಪುತ್ರ ಬಸವೇಶ್ ಎಂಬವರು ಅತ್ಯಂತ ಕೆಳಮಟ್ಟದ ಭಾಷೆ ಉಪಯೋಗಿಸಿ ಬೈದಿದ್ದಾರೆ. ಆ ಭಾಷೆ ಉಪಯೋಗಿಸಲು ನನಗೂ ನಾಚಿಕೆ ಆಗುತ್ತದೆ ಎಂದು ಅಸಮಾಧಾನ ಹೊರಹಾಕಿದ್ದಾರೆ. ಸಿದ್ದರಾಮಯ್ಯನವರು ಬಸವೇಶ್ ಅವರನ್ನು ಬಂಧಿಸಲು ಸೂಚಿಸಿ ಕಠಿಣ ಶಿಕ್ಷೆ ವಿಧಿಸುವಂತೆ ನೋಡಿಕೊಳ್ಳಬೇಕು. ಇದುವರೆಗೆ ಯಾಕೆ ಅವರನ್ನು ಬಂಧಿಸಿಲ್ಲ? ರಾಜ್ಯದಲ್ಲಿ ಮಹಿಳೆಯರಿಗೆ ರಕ್ಷಣೆ ಇಲ್ಲವೇ? ಮಹಿಳೆಯರಿಗೆ ಹೇಗೆ ಬೇಕೋ ಹಾಗೆ ಬೈಯ್ಯುವುದೇ? ರಾಜ್ಯದಲ್ಲಿ ಏನು ನಡೆಯುತ್ತಿದೆ. ಸಿದ್ದರಾಮಯ್ಯರಂಥ ಒಬ್ಬ ಸಮರ್ಥ ಮುಖ್ಯಮಂತ್ರಿ ರಾಜ್ಯದಲ್ಲಿ ಇದ್ದರೂ ಕೂಡ ಹೀಗಾಗುತ್ತಿದೆ. ಎರಡನೇ ಬಾರಿ ಸಿಎಂ ಆದ ಬಳಿಕ ಅವರು ಸಂಪೂರ್ಣ ವಿಫಲವಾಗಿದ್ದಾರೆ…
ಅಧಿಕ ರಕ್ತದೊತ್ತಡ ಹೃದ್ರೋಗದ ಅಪಾಯವನ್ನು ತಂದೊಡ್ಡಬಹುದು. ಇದನ್ನು ಪರಿಣಾಮಕಾರಿಯಾಗಿ ನಿಯಂತ್ರಿಸಲು ಅಥವಾ ನಿಭಾಯಿಸಲು ವೈದ್ಯರು ಮಾತ್ರೆಗಳನ್ನು ಶಿಫಾರಸು ಮಾಡುತ್ತಾರೆ. ಮೂಲಗಳ ಪ್ರಕಾರ, ಪ್ರಪಂಚದಾದ್ಯಂತ 1 ಶತಕೋಟಿಗೂ ಅಧಿಕ ಮಂದಿ ಅಧಿಕ ರಕ್ತದೊತ್ತಡ ಸಮಸ್ಯೆಯನ್ನು ಹೊಂದಿದ್ದಾರೆ. https://ainlivenews.com/is-it-true-that-yatnal-received-a-show-cause-notice-did-vijayendra-form-the-rebel-team/ ಸಾಮಾನ್ಯವಾಗಿ 120/80 ರಕ್ತದೊತ್ತಡವನ್ನು ನಾರ್ಮಲ್ ಎಂದು ಪರಿಗಣಿಸಲಾಗುತ್ತದೆ. ಅದಕ್ಕಿಂತ ಹೆಚ್ಚು ಅಥವಾ ಕಡಿಮೆ ಇದ್ದರೆ ರಕ್ತದೊತ್ತಡದ ಸಮಸ್ಯೆಯನ್ನು ನೀವು ಹೊಂದಿರುತ್ತೀರಿ. ವೈದ್ಯರು ನೀಡುವ ಔಷಧಿಗಳ ಜೊತೆಗೆ ನೈಸರ್ಗಿಕವಾಗಿ ಬಿಪಿ ಕಡಿಮೆ ಮಾಡುವ ಆರೋಗ್ಯಕರ ಆಹಾರವನ್ನು ಸೇವಿಸಲು ಪ್ರಯತ್ನಿಸಿ. ಬಿಪಿಯಿಂದ ಬಳಲುತ್ತಿರುವವರು ವೈದ್ಯರು ಸೂಚಿಸಿರುವ ಕೆಲವು ಔಷಧಿಗಳನ್ನು ತೆಗೆದುಕೊಳ್ಳುತ್ತಿದ್ದರೂ, ಇವುಗಳ ಜೊತೆಗೆ ಆಹಾರ ಪದ್ಧತಿಯಲ್ಲಿ ಕೆಲ ಬದಲಾವಣೆಗಳನ್ನು ಮಾಡಿಕೊಳ್ಳುವುದು ಬಹಳ ಅವಶ್ಯಕ. ಅಧಿಕ ರಕ್ತದೊತ್ತಡವು ಒಟ್ಟಾರೆ ಆರೋಗ್ಯದ ಮೇಲೆ, ವಿಶೇಷವಾಗಿ ಮೂತ್ರಪಿಂಡಗಳ ಮೇಲೆ ಪರಿಣಾಮ ಬೀರುತ್ತದೆ ಇದಲ್ಲದೇ, ಇದು ತಲೆನೋವು, ತಲೆ ತಿರುಗುವಿಕೆ ಮತ್ತು ದೃಷ್ಟಿಹೀನತೆಯಂತಹ ಸಮಸ್ಯೆಗಳನ್ನು ಸಹ ಉಂಟು ಮಾಡಬಹುದು. ಕೆಲವೊಮ್ಮೆ ಮೂಗಿನಲ್ಲಿ ರಕ್ತಸ್ರಾವವಾಗುವುದು ಸಹ ಅಧಿಕ ರಕ್ತದೊತ್ತಡದಿಂದ ಉಂಟಾಗಬಹುದು. ಆದ್ದರಿಂದ, ರಕ್ತದೊತ್ತಡವನ್ನು ಯಾವಾಗಲೂ…
ಬೆಂಗಳೂರು:- ಮಾಜಿ ಸಿಎಂ ಯಡಿಯೂರಪ್ಪ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ವಿರುದ್ದ ಸಮರ ಸಾರಿರೋ ಶಾಸಕ ಬಸನಗೌಡ ಯತ್ನಾಳ್ಗೆ ಇದೀಗ ಮತ್ತೊಂದು ಸಂಕಷ್ಟ ಎದುರಾಗಿದೆ.. ವಿಜಯೇಂದ್ರರನ್ನ ಕೆಳಗಿಳಿಸೋಕೆ ಅಂತಾ ತಂಡ ಕಟ್ಕೊಂಡು ದೆಹಲಿಗೆ ಹೋಗಿದ್ದ ಯತ್ನಾಳ್ ವಾಪಸ್ ಬರ್ತಾ ವಿಜಯದ ಹಾರ ಕೈಯಲ್ಲಿ ಇಡ್ಕೊಂಡು ಬಂದಿದ್ದೀವಿ ಅಂದ್ರಿದ್ರು.. ಆದ್ರೆ ವಿಜಯದ ಮಾಲೆ ಅಂದ ಯತ್ನಾಳ್ ಕೈ ಸೇರಿದೆ ಶೋಕಾಸ್ ನೋಟಿಸ್.. ಇದಕ್ಕೆ ಯತ್ನಾಳ್ ಸಹ ಖಡಕ್ ಆಗೇ ತಿರುಗೇಟು ಕೊಟ್ಟಿದ್ದಾರೆ. ಹಾಗಿದ್ರೆ ಯತ್ನಾಳ್ ಶೋಕಾಸ್ ನೋಟಿಸ್ ಬಂದಿದ್ದು ನಿಜಾನ.. ಅವರ ಉತ್ತರ ಹೀಗಿದೆ. https://ainlivenews.com/suggestions-are-being-sought-from-citizens-for-the-comprehensive-development-of-bengaluru/ ಹೌದು ಹೋಧಲ್ಲಿ ಬಂದಲ್ಲಿ ಮಾಜಿ, ಸಿಎಂ ಬಿಎಸ್ವೈ, ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ವಿರುದ್ಧ ವಾಗ್ದಾಳಿ ನಡೆಸುತ್ತಲೇ ಬಂದಿದ್ದಾರೆ ಯತ್ನಾಳ್… ಅದು ಅಲ್ದೇ ಕುಟುಂಬ ರಾಜಕಾರಣ ವಿರುದ್ದದ ಹೋರಾಟ ಅಂತಾ ವಿಜಯೆಂದ್ರರನ್ನು ರಾಜ್ಯಾಧ್ಯಕ್ಷ ಸ್ಥಾನದಿಂದ ಕೆಳಗಿಳಿಸೋಕೆ ಅಂತಲೂ ಶತ ಪ್ರಯತ್ನಗಳ ಮಾಡ್ತಿದ್ದಾರೆ. ರಮೇಶ್ ಜಾರಕಿಹೊಳಿ, ಕುಮಾರಬಂಗಾಋರಪ್ಪ ಸೇರಿದಂತೆ ಕೆಲ ರೆಬಲ್ ಶಾಸಕರ ಜೊತೆಗೆ ಸೇರಿಸ್ಕೊಂಡು ದೆಹಲಿಗೂ…
ಬೆಂಗಳೂರು: ಫೆ. 11: ಬೆಂಗಳೂರಿನ ಹಿತದೃಷ್ಟಿಯನ್ನು ಕಾಯುವ ನಾಗರಿಕರಿಂದ ಸಲಹೆಗಳನ್ನು ಪಡೆದು, ಉತ್ತಮ ಸಲಹೆಗಳನ್ನು ಅಳವಡಿಸಿಕೊಳ್ಳಲಾಗುವುದೆಂದು ಕರ್ನಾಟಕ ವಿಧಾನ ಮಂಡಲ ಜಂಟಿ ಪರಿಶೀಲನಾ ಸಮಿತಿಯ ಅಧ್ಯಕ್ಷರಾದ ಶ್ರೀ ರಿಜ್ವಾನ್ ಹರ್ಷದ್ ರವರು ತಿಳಿಸಿದರು. https://ainlivenews.com/this-is-a-leafy-green-easy-to-eat-with-sugar-control/ ಬಿಬಿಎಂಪಿ ವ್ಯಾಪ್ತಿಯ ದಕ್ಷಿಣ, ಬೊಮ್ಮನಹಳ್ಳಿ ವಲಯಗಳು ಸೇರಿ ಆರ್.ವಿ ಡೆಂಟಲ್ ಕಾಲೇಜು ಹಾಗೂ ರಾಜರಾಜೇಶ್ವರಿ ನಗರ, ಪಶ್ಚಿಮ ವಲಯಗಳು ಸೇರಿ ಜ್ಞಾನಭಾರತಿ ಕ್ಯಾಂಪಸ್ ನ ಡಾ. ನರಸಿಂಹಯ್ಯ ಸಭಾಂಗಣದಲ್ಲಿ ಇಂದು ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ ಕುರಿತು ಸಾರ್ವಜನಿಕರಿಂದ ಸಲಹೆ ಮತ್ತು ಅಭಿಪ್ರಾಯ ಸ್ವೀಕರಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಬಳಿಕ ಅವರು ಮಾತನಾಡಿದರು. ನಗರದಲ್ಲಿ ಸದ್ಯ ಇರುವ ಯಾವುದೇ ಕಾನೂನು, ಕಾಯ್ದೆಗಳಿಗೆ ಬೆಲೆ ಕೊಡುವವರಿಲ್ಲ. ಆದ್ದರಿಂದ ಉತ್ತ ಆಡಳಿತ ನಡೆಸಲುವಾಗಿ ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕವನ್ನು ಜಾರಿ ತರಲಾಗುತ್ತಿದೆ. ಜನರಿಗೆ ಯಾವ ಸೌಲಭ್ಯಗಳನ್ನು ನೀಡಬೇಕು, ಯಾವ ರೀತಿ ಆಡಳಿತವನ್ನು ನಡೆಸಬೇಕು ಎಂಬುದರ ಕುರಿತು ಹಲವಾರು ಆಯಾಮಗಳಲ್ಲಿ ಅಧ್ಯಯನ ನಡೆಸಿ ಅದನ್ನು ಜಾರಿಗೆ ತರಲು ಮುಂದಾಗಲಾಗುತ್ತಿದೆ ಎಂದು…