ಸಾಮಾನ್ಯವಾಗಿ ಜನ ಮಾತನಾಡುವಾಗ ಶುಗರ್ ಇದೆ ಅಂದಾಕ್ಷಣ ಅನ್ನ ಬಿಟ್ಟು ಬಿಡಿ. ಮುದ್ದೆ ತಿನ್ನಿ ಮಧುಮೇಹ ನಿಯಂತ್ರಣಕ್ಕೆ ಬರುತ್ತೆ ಅಂತ ಹೇಳುವುದನ್ನು ಕೇಳಿರುತ್ತೀರಿ. https://ainlivenews.com/special-priority-to-agriculture-sector-n-chaluvarayaswamy/ ಮಧುಮೇಹ ಇರುವವರಿಗೆ ಅಕ್ಕಿ ಒಳ್ಳೇಯದಾ, ಗೋಧಿ ಒಳ್ಳೇಯದಾ, ರಾಗಿ ತಿನ್ನಬಹುದಾ? ಯಾಕಂದ್ರೆ ಮಧುಮೇಹ ಬಂದ ಬಹುತೇಕ ಮಂದಿ ಅನ್ನ ಬಿಟ್ಟು, ಚಪಾತಿ ಅಥವಾ ರಾಗಿ ಮುದ್ದೆ ತಿನ್ನಲು ಆರಂಭಿಸುತ್ತಾರೆ. ಅಕ್ಕಿ, ರಾಗಿ, ಗೋಧಿ, ಜೋಳ, ಸಿರಿಧಾನ್ಯಗಳು ಎಲ್ಲವೂ ಕಾರ್ಬೋಹೈಡ್ರೇಟ್ಗಳೇ. ಅಂದರೆ ಇವುಗಳನ್ನು ಅತಿಯಾಗಿ ಸೇವಿಸಿದರೆ ಮಧುಮೇಹ ಹೆಚ್ಚಳವಾಗುವುದರಲ್ಲಿ ಎರಡು ಮಾತಿಲ್ಲ. ಮಧುಮೇಹ ನಿಯಂತ್ರಣಕ್ಕೆ ನಾವು ಯಾವುದೇ ರೀತಿಯ ಔಷಧಿ ತೆಗೆದುಕೊಂಡರೂ, ಇದರಿಂದ ಉತ್ತಮ ಫಲಿತಾಂಶ ಸಿಗುತ್ತಿಲ್ಲ ಎಂದು ಅನೇಕ ಮಂದಿ ದೂರುತ್ತಾರೆ. ಹೌದು, ಮಧುಮೇಹಕ್ಕೆ ಔಷಧಿ ತೆಗೆದುಕೊಳ್ಳುವುದರಿಂದ ನಿಮ್ಮ ದೇಹದಲ್ಲಿನ ಸಕ್ಕರೆ ಮಟ್ಟವನ್ನು ತಕ್ಷಣವೇ ನಿಯಂತ್ರಿಸಬಹುದು, ಆದರೆ ಸೂಕ್ತವಾದ ಆಹಾರ ಕ್ರಮ ಅನುಸರಿಸದಿದ್ದರೆ ಅಥವಾ ಸಮಯಕ್ಕೆ ಸರಿಯಾಗಿ ಔಷಧಿ ತೆಗೆದುಕೊಳ್ಳದಿದ್ದರೆ, ನಿಮ್ಮ ರಕ್ತದಲ್ಲಿನ ಸಕ್ಕರೆ ಮಟ್ಟ ಏರಿಕೆ ಆಗುತ್ತಲೇ ಇರುತ್ತದೆ. ಆದರೆ ಮಧುಮೇಹವನ್ನು ಸಂಪೂರ್ಣವಾಗಿ ನಿಯಂತ್ರಿಸಲು…
Author: AIN Author
ಚಿತ್ರದುರ್ಗ ಫೆ, 11..ನಮ್ಮದು ಸದಾ ರೈತ ಪರ, ಜನ ಪರ ಸರ್ಕಾರವಾಗಿದ್ದು ಮುಂದೆಯೂ ಕೃಷಿ ಕ್ಷೇತ್ರದ ಶ್ರೇಯೋಭಿವೃದ್ದಿಗೆ ವಿಶೇಷ ಆದ್ಯತೆ ನೀಡಲಿದೆ ಎಂದು ಕೃಷಿ ಸಚಿವರಾದ ಎನ್ ಚಲುವರಾಯಸ್ವಾಮಿ ತಿಳಿಸಿದರು. https://ainlivenews.com/good-news-for-virat-fans-kohli-is-the-captain-of-rcb-team/ ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲ್ಲೂಕು ರೇಣುಕಾಪುರ ಗ್ರಾಮದಲ್ಲಿ ಜಲಾನಯನ ಇಲಾಖೆ ವತಿಯಿಂದ ಮಳೆ ಆಶ್ರಿತ ಪ್ರದೇಶದಲ್ಲಿ ಆದಾಯೋತ್ಪನ್ನ ಮಾರ್ಗಗಳ ಮೂಲಕ ಕೃಷಿ ಸಂಬಂಧಿತ ವಲಯಗಳ ಅಭಿವೃದ್ಧಿ ಮತ್ತು ಪುನಶ್ಚೇತನಗೊಳಿಸುವ ಯೋಜನಯ ಫಲಶೃತಿ ಪರಿಶೀಲನಾ ಕಾರ್ಯಕ್ರಮ ಉದ್ಘಾಟಿಸಿ ಸಚಿವರು ಮಾತನಾಡಿದರು. ಸರ್ಕಾರದ ಯೋಜನೆ ಪರಿಣಾಕಾರಿ ಅನುಷ್ಠಾನ ವಾದರೆ ಗ್ರಾಮದ ಅಭಿವೃದ್ದಿಯ ಚಿತ್ರಣ ಹೇಗೆ ಬದಲಾಗಬಹುದು ಎಂಬುದಕ್ಕೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನ ರೇಣುಕಾಪುರ ಗ್ರಾಮ ಉದಾಹರಣೆಯಾಗಿದೆ ಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದರು. ಚಿತ್ರದುರ್ಗ ಅತ್ಯಂತ ಕಡಿಮೆ ಮಳೆ ಬೀಳುವ ಜಿಲ್ಲೆಯಾಗಿದೆ ಹಾಗಾಗಿ ಜಲಾನಯನ ಇಲಾಖೆಯ RAD – RFTRAAR ಯೋಜನೆಯ ಮೂಲಕ ಜಿಲ್ಲೆಗೆ 5 ಕೋಟಿ ರೂ ಅನುದಾನ ನೀಡಲಾಗಿದೆ.60 ಗ್ರಾಮಗಳಲ್ಲಿ ಇದು ಅನುಷ್ಠಾನವಾಗುತ್ತಿದೆ ಕೃಷಿ ಸಚಿವರು ಹೇಳಿದರು. ಪ್ರತಿ…
ಟೀಮ್ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿ ಅವರ ಅಭಿಮಾನಿಗಳಿಗೆ ಗುಡ್ ನ್ಯೂಸ್ ಸಿಕ್ಕಿದೆ. ಪ್ರಸಕ್ತ ಸಾಲಿನಲ್ಲಿ ನಡೆಯುವ IPL 2025ರ ಪ್ರೀಮಿಯರ್ ಲೀಗ್ ನಲ್ಲಿ RCB ತಂಡದ ನಾಯಕರಾಗಿ ವಿರಾಟ್ ಕೊಹ್ಲಿ ಹೆಸರು ಫೈನಲ್ ಆಗಿದೆ ಎಂದು ತಿಳಿದು ಬಂದಿದೆ. ಇಂಗ್ಲೆಂಡ್ ವಿರುದ್ಧದ 2ನೇ ಏಕದಿನ ಪಂದ್ಯದ ವೇಳೆ ಸುರೇಶ್ ರೈನಾ ಕಾಮೆಂಟರಿ ಬಾಕ್ಸ್ನಲ್ಲಿ ಕಾಣಿಸಿಕೊಂಡಿದ್ದರು. ಈ ವೇಳೆ ಮೈದಾನದಲ್ಲಿ ವಿರಾಟ್ ಕೊಹ್ಲಿ ಹಾಗೂ ಫಿಲ್ ಸಾಲ್ಟ್ ಮಾತುಕತೆ ನಡೆಸುತ್ತಿರುವುದನ್ನು ವರ್ಣಿಸುತ್ತಾ ರೈನಾ, ಇಂಗ್ಲೆಂಡ್ ಆಟಗಾರ ಆರ್ಸಿಬಿ ತಂಡದ ನಾಯಕನೊಂದಿಗೆ ಕುಶಲೋಪರಿ ನಡೆಸುತ್ತಿದ್ದಾರೆ ಎಂದಿದ್ದಾರೆ. https://ainlivenews.com/you-are-not-allowing-the-people-of-the-state-to-live-peacefully-because-of-your-flattery-narayanaswamy-a-traitor-lashes-out-at-the-government/ ಇತ್ತ ಸುರೇಶ್ ರೈನಾ ಹಾಗೂ ವಿರಾಟ್ ಕೊಹ್ಲಿ ನಡುವೆ ಉತ್ತಮ ಬಾಂಧವ್ಯವಿದೆ. ಹೀಗಾಗಿ ಅವರಿಗೆ ಆರ್ಸಿಬಿ ತಂಡದ ಮುಂದಿನ ನಾಯಕ ಯಾರೆಂಬುದು ಗೊತ್ತಿದೆ. ಇದೇ ಕಾರಣದಿಂದಾಗಿ ವಿರಾಟ್ ಕೊಹ್ಲಿಯೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಮುಂದಿನ ನಾಯಕ ಎಂದು ಸುರೇಶ್ ರೈನಾ ಬಹಿರಂಗವಾಗಿ ಹೇಳಿದ್ದಾರೆ. ರೈನಾ ನೀಡಿರುವ ಸುಳಿವಿನಂತೆ ಐಪಿಎಲ್ 2025 ರಲ್ಲಿ…
ಕಲಬುರ್ಗಿ: ಕೂಲಿ ಕೆಲಸದ ವಿಚಾರದಲ್ಲಿ ನಡೆದ ಗಲಾಟೆಯು ವ್ಯಕ್ತಿಯೋರ್ವನ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲ್ಲೂಕಿನ ಸಾಲೆಬೀರನಹಳ್ಳಿ ಗ್ರಾಮದಲ್ಲಿ ಜರುಗಿದೆ, https://ainlivenews.com/activities-of-mischief-destroy-500-nut-plants-in-the-harvest-the-farmers-kangaroo/ ರವಿ ಬೋವಿ (26) ಕೊಲೆಯಾದ ಯುವಕ. ಲಾರಿಯಿಂದ ಕಲ್ಲಿನ ಪರ್ಸಿ ಕೆಳಗಿಳಿಸುವ ವಿಚಾರದಲ್ಲಿ ಗಲಾಟೆ ಶುರುವಾಗಿದೆ. ಸಾಲೆಬೀರನಹಳ್ಳಿ ಗ್ರಾಮದ ಮಧುಸೂದನ್ ರೆಡ್ಡಿ ಎಂಬುವನಿಂದ ರವಿ ಎದೆಗೆ ಒದ್ದು ಹಲ್ಲೆ ನಡೆಸಲಾಗಿದೆ. ರವಿ ಎದೆಗೆ ಒದ್ದ ಹಿನ್ನಲೆ ಸ್ಥಳದಲ್ಲೆ ರವಿ ಬೋವಿ ಪ್ರಜ್ಞೆ ತಪ್ಪಿ ಬಿದ್ದಿದ್ದಾನೆ. ಬೆಳಗ್ಗೆಯವರೆಗೆ ಮನೆಯಲ್ಲಿ ವಾಂತಿ ಬೇಧಿಯಿಂದ ರವಿ ಬಳಲುತ್ತಿದ್ದು, ಆಸ್ಪತ್ರೆಗೆ ಕರೆದುಕೊಂಡು ಹೋಗುವ ವೇಳೆ ರವಿ ಮೃತ ಪಟ್ಟಿದ್ದಾನೆ. ಚಿಂಚೋಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತುಮಕೂರು:- ಕಿಡಿಗೇಡಿಗಳ ಕೃತ್ಯದಿಂದ ಫಸಲಿಗೆ ಬಂದಿದ್ದ 500 ಅಡಿಕೆ ಗಿಡಗಳು ನಾಶವಾಗಿರುವ ಘಟನೆ ತಾಲೂಕಿನ ಬರಗೂರಿನಲ್ಲಿ ಜರುಗಿದೆ. https://ainlivenews.com/national-and-world-level-awards-for-ksrtc/ ಗಣೇಶ್ ಎಂಬ ರೈತರಿಗೆ ಸೇರಿದ ಅಡಿಕೆ ಗಿಡಗಳನ್ನು ರಾತ್ರಿ ವೇಳೆ ಕಿಡಿಗೇಡಿಗಳು ಕಡಿದು ಹಾಕಿದ್ದಾರೆ. ಗಣೇಶ್ ತೋಟಕ್ಕೆ ಬಂದು ನೋಡಿದಾಗ ಗಿಡ ಕಡಿದಿರುವುದು ಬೆಳಕಿಗೆ ಬಂದಿದೆ. ಹಳೇ ದ್ವೇಷದ ಹಿನ್ನೆಲೆ ಕೃತ್ಯ ನಡೆಸಿರುವ ಶಂಕೆ ವ್ಯಕ್ತವಾಗಿದೆ. ಕಿಡಿಗೇಡಿಗಳ ವಿರುದ್ಧ ಹಂದನಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು:-ಕೆಎಸ್ಆರ್ಟಿಸಿಗೆ ರಾಷ್ಟ್ರೀಯ ಹಾಗೂ ವಿಶ್ಚ ಮಟ್ಟದ ಪ್ರಶಸ್ತಿಗಳು ಬಂದಿದೆ. ಕೆಎಸ್ಆರ್ಟಿಸಿ ಜಾರಿಗೆ ತಂದ ಹೊಸ ಹೊಸ ಉಪಕ್ರಮಗಳು ಜನರಿಗೆ ಹತ್ತಿರವಾಗಿದ್ದು, ಈ ಕಾರಣದಿಂದ ಸಂಸ್ಥೆಗೆ ರಾಷ್ಟ್ರೀಯ ಹಾಗೂ ವಿಶ್ಚ ನಾವೀನ್ಯತೆ ಪ್ರಶಸ್ತಿಗಳು ಲಭಿಸಿವೆ. https://ainlivenews.com/tata-winger-vehicle-palty-14-wage-laborers-injured-the-condition-of-four-people/ ಪ್ರಶಸ್ತಿ ವಿವರ ಉತ್ತಮ ಉದ್ಯೋಗದಾತ ಬ್ರಾಂಡ್ ಪ್ರಶಸ್ತಿ ಕನಸುಗಳ ಕಂಪನಿಗಳು ಉದ್ಯೋಗದಲ್ಲಿ ಆರೋಗ್ಯ ನಿರ್ವಹಣೆಗೆ ಗೌರವ ವರ್ಷದ ವ್ಯವಹಾರ ನಾಯಕ ಪ್ರಶಸ್ತಿ ಕಾರ್ಯಸ್ಥಳ ಮತ್ತು ಜನಸಂಪತ್ತು ಅಭಿವೃದ್ಧಿ ವಿಶ್ವ ಆರೈಕೆ ಪ್ರಶಸ್ತಿ ಉತ್ತಮ ಸಾರ್ವಜನಿಕ ಆರೋಗ್ಯ ಉಪಕ್ರಮ ವಿಶ್ವ ನಾವಿನ್ಯತೆ ಪ್ರಶಸ್ತಿ ಆರೋಗ್ಯ ತಂತ್ರಜ್ಞಾನದಲ್ಲಿ ಉತ್ತಮ ನಾವೀನ್ಯತೆ ಜಾಗತಿಕ ತಯಾರಿಕಾ ನಾಯಕರ ಪ್ರಶಸ್ತಿ ಸುಸ್ಥಿರತೆಯ ಗೌರವ ಡಿಜಿಟಲ್ ತಂತ್ರಜ್ಞಾನ ಪ್ರಶಸ್ತಿ
ಹಾಸನ:- ಸಕಲೇಶಪುರ ತಾಲೂಕಿನ ನಿಡನೂರು ಕೂಡಿಗೆ ಬಳಿ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವಾಹನ ಪಲ್ಟಿಯಾಗಿ 14 ಮಂದಿ ಕೂಲಿ ಕಾರ್ಮಿಕರು ಗಾಯಗೊಂಡು, ನಾಲ್ವರು ಸ್ಥಿತಿ ಗಂಭೀರವಾಗಿರುವ ಘಟನೆ ಜರುಗಿದೆ. https://ainlivenews.com/is-the-vision-problem-good-boy-for-glasses-eat-this-fruit-regularly/ ಮಡಿಕೇರಿಯ ಶನಿವಾರಸಂತೆ ಬಳಿ ಇರುವ ಕಾಫಿ ತೋಟಕ್ಕೆ ಕಾರ್ಮಿಕರನ್ನು ಟಾಟಾ ವಿಂಗರ್ ವಾಹನದಲ್ಲಿ ಕೊಂಡೊಯ್ಯುತ್ತಿದ್ದರು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ರಸ್ತೆ ಬದಿಗೆ ವಾಹನ ಪಲ್ಟಿಯಾಗಿದೆ. ವಾಹನದಲ್ಲಿ ಸಿಲುಕಿದ್ದ ಕೂಲಿ ಕಾರ್ಮಿಕರನ್ನು ಸ್ಥಳೀಯರು ಹಾಗೂ ಪೊಲೀಸರು ಸೇರಿ ಹೊರ ತೆಗೆದು ಆಸ್ಪತ್ರೆಗೆ ರವಾನಿಸಿದ್ದಾರೆ. ಗಾಯಾಳುಗಳಿಗೆ ಹಾಸನ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅತೀ ವೇಗವೇ ಅಪಘಾತಕ್ಕೆ ಕಾರಣ ಎನ್ನಲಾಗುತ್ತಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಕಣ್ಣುಗಳು ಮನುಷ್ಯನ ದೇಹದ ಅವಿಭಾಜ್ಯ ಅಂಗಗಳು. ಇಂದು ನಮಗೆ ಕಣ್ಣುಗಳು ಇರುವುದರಿಂದಲೇ ನಮ್ಮ ಪ್ರತಿ ಕೆಲಸ ಕಾರ್ಯಗಳು ಸರಾಗವಾಗಿ ನಡೆಯುತ್ತಿವೆ. ಕೆಲವೊಮ್ಮೆ ನಾವು ಮಾಡುವ ತಪ್ಪಿನಿಂದಾಗಿ ಅಥವಾ ಅನುವಂಶೀಯವಾಗಿ ನಮ್ಮ ಕಣ್ಣುಗಳಿಗೆ ಸಮಸ್ಯೆ ಎದುರಾಗುತ್ತದೆ. https://ainlivenews.com/this-is-the-model-andre-a-new-couple-who-donated-blood-as-saptapadi-fell/ ಕಣ್ಣುಗಳಲ್ಲಿ ಒಂದಕ್ಕೆ ಸಮಸ್ಯೆಯಾದರೂ ನಮಗೆ ಬಹಳ ಕಷ್ಟವಾಗುತ್ತದೆ. ಕಣ್ಣುಗಳ ಆರೋಗ್ಯವನ್ನು ನಾವು ರಕ್ಷಣೆ ಮಾಡಿಕೊಳ್ಳಲು ಕೆಲವೊಂದು ಹಣ್ಣುಗಳು ಸಹಕಾರಿ ಆಗುತ್ತದೆ. ಲೆಟ್ಯೂಸ್ನಲ್ಲಿ ಲ್ಯೂಟೀನ್ ಮತ್ತು ಕ್ಸಾಂಥಿನ್ ಸಮೃದ್ಧವಾಗಿದೆ. ಕ್ಯಾರೊಟಿನಾಯ್ಡ್ಸ್ ಎಂಬ ಉತ್ಕರ್ಷಣ ನಿರೋಧಕಗಳನ್ನು ಹೊಂದಿರುತ್ತದೆ. ಹಾನಿಕಾರಕ UV ಕಿರಣಗಳಿಂದ ಕಣ್ಣುಗಳನ್ನು ರಕ್ಷಿಸುತ್ತವೆ. ಆಕ್ಸಿಡೇಟಿವ್ ಹಾನಿಯನ್ನು ತಡೆಯುತ್ತವೆ. ಲೆಟ್ಯೂಸ್ ಸೊಪ್ಪಿನಲ್ಲಿರುವ ವಿಟಮಿನ್ ಸಿ ಕಣ್ಣಿನ ಆರೋಗ್ಯಕ್ಕೆ ಒಳ್ಳೆಯದು. ಪಾಲಕ್ ಸೊಪ್ಪನ್ನು ನಿಯಮಿತವಾಗಿ ಸೇವಿಸುವುದರಿಂದ ಹೊಟ್ಟೆಯ ಆರೋಗ್ಯ ಸುಧಾರಿಸುವುದಲ್ಲದೆ, ದೃಷ್ಟಿಯೂ ಸುಧಾರಿಸುತ್ತದೆ. ಲೆಟ್ಯೂಸ್ ವಯಸ್ಸಿಗೆ ಸಂಬಂಧಿಸಿದ ಕಣ್ಣಿನ ಸಮಸ್ಯೆಗಳನ್ನು ಸಹ ನಿಯಂತ್ರಣದಲ್ಲಿಡುತ್ತದೆ. ಕ್ಯಾರೆಟ್ ದೃಷ್ಟಿ ಸುಧಾರಿಸುವ ಗುಣಗಳನ್ನು ಸಹ ಹೊಂದಿದೆ. ಇದರಲ್ಲಿರುವ ಬೀಟಾ-ಕ್ಯಾರೋಟಿನ್ ದೃಷ್ಟಿ ಸುಧಾರಿಸುತ್ತದೆ. ಇದು ವಿಟಮಿನ್ ಎ ಆಗಿ ಪರಿವರ್ತನೆಗೊಳ್ಳುತ್ತದೆ. ರೆಟಿನಾವನ್ನು ರಕ್ಷಿಸುತ್ತದೆ. ಉತ್ತಮ…
ಶಿವಮೊಗ್ಗ : ಮದುವೆ ಮನೆಯಾಯ್ತು ರಕ್ತದಾನ ಶಿಬಿರ. ಹೌದು, ನಿನ್ನೆ ಸೋಮವಾರ ನಡೆದಿರುವ ಮದುವೆ ಕಾರ್ಯದಲ್ಲಿ, ಮಧುಮಕ್ಕಳಾದ ಯಶವಂತ್ ಹಾಗೂ ತನುಜಾ ರಕ್ತದಾನ ಮಾಡುವ ಮೂಲಕ ಈ ಬಗ್ಗೆ ಜಾಗೃತಿ ಮೂಡಿಸಿ ಎಲ್ಲರಿಗೂ ಮಾದರಿಯಾಗಿದ್ದಾರೆ. https://ainlivenews.com/fire-accident-burned-sack-bag-merchant-house/ ಶಿವಮೊಗ್ಗದ ಗುಡ್ಡೇಕಲ್ ಸಮುದಾಯ ಭವನದಲ್ಲಿ ಈ ಮದುವೆ ನಡೆದಿದ್ದು, ಹುಡುಗ ಮತ್ತು ಹುಡುಗಿ ಮನೆಯವರಿಗೆ ಒಪ್ಪಿಸಿ ರಕ್ತದಾನ ಶಿಬಿರ ಆಯೋಜಿಸಲಾಗಿತ್ತು. ಮದುವೆಯ ದಿನದಂದೇ ರಕ್ತದಾನ ಮಾಡುವ ವಿಶೇಷ ಕಾರ್ಯಕ್ರಮದ ಮೂಲಕ ರಕ್ತದಾನದ ಬಗ್ಗೆ ಜಾಗೃತಿ ಮೂಡಿಸಲಾಯಿತು. ಸಂತೋಷದಿಂದ ಪುಣ್ಯದ ಕಾರ್ಯ ನಡೆಸಿರುವ ಎರಡು ಮನೆಯವರು, ಬೇರೆ ಸುಶಿಕ್ಷಿತ ಕುಟುಂಬಗಳಿಗೆ ಮಾದರಿಯಾದರು. ಮದುವೆಗೆಂದು ನೆರೆದಿದ್ದ ಅಪಾರ ಜನ ಸಮುದಾಯದ ನಡುವೆ, ತಾಳಿ ಕಟ್ಟುವ ಕಾರ್ಯ ಮುಗಿಯುತ್ತಿದ್ದಂತೆ ನವ ದಂಪತಿಗಳಿಂದ ಮಂಟಪದಲ್ಲಿಯೇ ಬಹಳ ಖುಷಿಯಿಂದ ರಕ್ತದಾನ ಮಾಡಿದ್ರು. ಜೀವನ ಸಾರ್ಥಕವೆನಿಸಿದ ಧನ್ಯತಾ ಭಾವ ವ್ಯಕ್ತಪಡಿಸಿ, ಇತರೆ ಜೋಡಿಗಳಿಗೆ ಈ ಜೋಡಿ ಮಾದರಿಯಾದರು. ಇನ್ನು ಈ ಮದುವೆ ಮನೆಯಲ್ಲಿ ಪಾಲ್ಗೊಂಡಿದ್ದ ಕೆಲವರು ಕೂಡ ರಕ್ತದಾನ ಮಾಡಿ, ನವಜೋಡಿಗಳಿಗೆ ಶುಭ…
ಮಂಗಳೂರು: ಅಕಸ್ಮಿತ ಬೆಂಕಿ ತಗುಲಿ ಗೋಣಿ ಚೀಲ ವ್ಯಾಪಾರಿ ಮನೆಯೊಂದು ಹೊತ್ತಿ ಉರಿದ ಘಟನೆ ದ.ಕ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಡಕಬೈಲ್ ನಲ್ಲಿ ನಡೆದಿದೆ. https://ainlivenews.com/illegal-relationship-with-her-husband-with-girlfriend/ ವಿದ್ಯುತ್ ಶಾಟ್೯ ಸಕ್ರ್ಯುಟ್ ನಿಂದಾಗಿ ಈ ಅವಘಡ ಸಂಭವಿಸಿದೆ. ರಾತ್ರಿ ಈ ಘಟನೆ ನಡೆದಿದೆ ಎನ್ನಲಾಗಿದೆ. ಯಾವುದೇ ಪ್ರಾಣಪಾಯ ನಡೆದಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ