ಧಾರವಾಡ: ಕರ್ತವ್ಯ ನಿರತ ಯೋಧರೊಬ್ಬರ ಮನೆಗೆ ಕಳ್ಳರು ಕನ್ನ ಹಾಕಿರುವ ಘಟನೆ ಇತ್ತೀಚೆಗೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. https://ainlivenews.com/i-also-want-to-strengthen-the-party-as-the-president-of-the-state-by-vijayendra/ ಧಾರವಾಡದ ಗಿರಿನಗರದಲ್ಲಿರುವ ಹಾಗೂ ಪ್ರಸ್ತುತ ಅರುಣಾಚಲ ಪ್ರದೇಶದ ತವಾಂಗ್ನಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಯೋಧ ಖುತ್ಬುದ್ದೀನ್ ಹಕ್ಕಿ ಎಂಬುವವರ ಮನೆಗೆ ಕಳ್ಳರು ಕನ್ನ ಹಾಕಿದ್ದಾರೆ. ಮನೆಯ ಕೀಲಿ ಮುರಿದು ಒಳನುಗ್ಗಿರುವ ಇಬ್ಬರು ಕಳ್ಳರು ಮನೆಯ ಅಲ್ಮೆರಾದಲ್ಲಿದ್ದ 110 ಗ್ರಾಂ ತೂಕದ ಚಿನ್ನಾಭರಣ, ಅರ್ಧ ಕೆಜಿಗೂ ಹೆಚ್ಚು ಬೆಳ್ಳಿ ಹಾಗೂ 30 ಸಾವಿರ ನಗದು ಸೇರಿ ಒಟ್ಟು 7 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ದೋಚಿಕೊಂಡು ಹೋಗಿದ್ದಾರೆ. ಕಳ್ಳರ ಚಲನವಲನ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಮನೆಯಲ್ಲಿ ಯಾರೂ ಇಲ್ಲದ್ದನ್ನು ಗಮನಿಸಿಯೇ ಕಳ್ಳರು ಹೊಂಚು ಹಾಕಿ ಮನೆಗೆ ಕನ್ನ ಹಾಕಿದ್ದಾರೆ. ಮನೆಯಲ್ಲಿ ಕಳ್ಳತನವಾಗಿದ್ದು ಗೊತ್ತಾದ ಕೂಡಲೇ ಅರುಣಾಚಲ ಪ್ರದೇಶದಿಂದ ಬಂದು ಯೋಧ ಖುತ್ಬುದ್ದೀನ್ ಅವರು ಧಾರವಾಡ ವಿದ್ಯಾಗಿರಿ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
Author: AIN Author
ಬೆಂಗಳೂರು: ಬೆಂಗಳೂರಿನ ಬಿಜೆಪಿ ಕಚೇತಿಯಲ್ಲಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಮಾಜಿ ಶಾಸಕರು, ಪರಾಜಿತರ ಸಭೆ ನಡೆಸಿದ್ದೇವೆ.ನಾನು ಅಧ್ಯಕ್ಷನಾದ ಮೇಲೆ ಕೆಲಸದ ಒತ್ತಡ, ಬೇರೆ ಬೇರೆ ಕಾರಣಕ್ಕೆ ಸಭೆ ಮಾಡಲು ಆಗಿರಲಿಲ್ಲ.ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು, ಜಿ.ಪಂ., ತಾ.ಪಂ. ಚುನಾವಣೆ ಎದುರಿಸಬೇಕು ಅಂತಾ ಚರ್ಚೆ ಮಾಡಿದ್ದೇವೆ. https://ainlivenews.com/breaking-news-notorious-rowdy-arrested-under-hooligan-law/ ಸಣ್ಣ ಪುಟ್ಟ ಗೊಂದಲ, ವ್ಯತ್ಯಾಸಗಳು ಇರುತ್ತವೆ.ಅದೆಲ್ಲವನ್ನೂ ವರಿಷ್ಠರು ಗಮನಿಸುತ್ತಿದ್ದಾರೆ.ಯಡಿಯೂರಪ್ಪ ಸೇರಿ ಹಿರಿಯರು ಎಲ್ಲಾ ಮಾರ್ಗದರ್ಶನ ಕೊಟ್ಟಿದ್ದಾರೆ.ರಾಜ್ಯದ ರಾಜಕೀಯ ಪರಿಸ್ಥಿತಿಗಳ ಬಗ್ಗೆಯೂ ಚರ್ಚೆ ಮಾಡಿದ್ದೇವೆ.ಇವತ್ತಿನ ಸಭೆ ಯಾವುದೇ ಬಲ ಪ್ರದರ್ಶನ, ಯಾರನ್ನೋ ಪಕ್ಷದಿಂದ ಉಚ್ಛಾಟನೆ ಮಾಡಬೇಕು ಅಂತಾ ಮಾಡಿರುವುದಲ್ಲ.ಪಕ್ಷವನ್ನು ಬಲಪಡಿಸಲು ನಾನು ಚರ್ಚೆ ಮಾಡಿದ್ದೇವೆ.ರಾಜ್ಯದ ಅಧ್ಯಕ್ಷನಾಗಿ ಪಕ್ಷವನ್ನು ಬಲಪಡಿಸಬೇಕು ಅಂತಾ ನನಗೂ ಇದೆ ಎಂದು ಬಿ.ವೈ ವಿಜಯೇಂದ್ರ ಹೇಳಿದ್ದಾರೆ.
ಬೆಂಗಳೂರು:- ಗೂಂಡಾಕಾಯ್ದೆಯಡಿ ಕುಖ್ಯಾತ ರೌಡಿಯನ್ನ ಹನುಮಂತನಗರ ಪೊಲೀಸರು ಅರೆಸ್ಟ್ ಮಾಡಿದ್ದಾರೆ. https://ainlivenews.com/driver-suicide-at-home-of-bjp-mla-what-did-chandru-lamani-say/ ಅಜಿತ್ @ ಕರಿಯಾ ರಾಜೇಶ್ ಬಂಧಿತ ಆರೋಪಿ. ಕರಿಯ ರಾಜೇಶ್ ಕೊಲೆ ಯತ್ನ, ಹಲ್ಲೆ, ದರೋಡೆಗೆ ಸಂಚು, ಸುಲಿಗೆ, ಬೆದರಿಕೆ ಸೇರಿದಂತೆ ಹಲವು ಕೃತ್ಯಗಳಲ್ಲಿ ಭಾಗಿಯಾಗಿದ್ದ. 2016ರಿಂದಲೂ ನಿರಂತರವಾಗಿ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿದ್ದರು. ಕರಿಯ ರಾಜೇಶ್ ಹನುಮಂತ ನಗರ ರೌಡಿಶೀಟರ್ ಕೂಡ ಆಗಿದ್ದು, ಜಾಮೀನು ಪಡೆದು ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ. ಈತನ ವಿರುದ್ಧ NBW ವಾರೆಂಟ್ ಜಾರಿ ಮಾಡಿತ್ತು ನ್ಯಾಯಾಲಯ. ನಾಲ್ಕು ಪ್ರಕರಣಗಳಲ್ಲಿ NBW ವಾರೆಂಟ್ ಇಶ್ಯೂ ಮಾಡಲಾಗಿತ್ತು. ಕಮಿಷನರ್ ಸೂಚನೆ ಮೇರೆಗೆ ಗೂಂಡಾ ಕಾಯ್ದೆಯಡಿ ಬಂಧಿಸಲಾಗಿದೆ. ಕರಿಯ ರಾಜೇಶ್ ನನ್ನ ಬಂಧಿಸಿ ಪೊಲೀಸರು ಜೈಲಿಗಟ್ಟಿದ್ದಾರೆ.
ಗದಗ:- ಶಿರಹಟ್ಟಿ ಶಾಸಕ ಚಂದ್ರು ಲಮಾಣಿ ಡ್ರೈವರ್ ಆತ್ಮಹತ್ಯೆ ಕೇಸ್ ಗೆ ಸಂಬಂಧಿಸಿದಂತೆ ಶಾಸಕ ಚಂದ್ರು ಲಮಾಣಿ ಪ್ರತಿಕ್ರಿಯೆ ಕೊಟ್ಟಿದ್ದಾರೆ. https://ainlivenews.com/vijayendra-continues-as-bjp-state-president-yeddyurappa-khadak-warning-to-opponents/ ಈ ಸಂಬಂಧ ಲಕ್ಷ್ಮೇಶ್ವರದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಮೂರು ವರ್ಷದಿಂದ ಮೃತ ಸುನಿಲ್ ನಮ್ಮ ಜೊತೆಗೆ ಇದ್ದ. ಡ್ರೈವರ್ ಅನ್ನೋದಕ್ಕಿಂತ ಸುನಿಲ್ ನಮ್ಮ ಸಂಬಂಧಿ. ಕುಟುಂಬದ ಜೊತೆ ಉತ್ತಮ ಬಾಂಧವ್ಯ ಹೊಂದಿದ್ದ. ಆತ ಸೂಸೈಡ್ ಮಾಡಿಕೊಂಡ ಬಗ್ಗೆ ಬೆಳಗ್ಗೆ 10 :30 ಗಂಟೆ ಬಳಿಕ ನನಗೆ ಮಾಹಿತಿ ಸಿಕ್ತು. ಬೆಳಗ್ಗೆ ಮನೆ ಹತ್ತಿರ ಹೋಗಿ ನೋಡಿದಾಗ ವಿಷಯ ಗೊತ್ತಾಯ್ತು. ಅವರಿಗೆ ಅಂತಹ ದುಷ್ಮನ್ ಗಳು ಯಾರು ಇಲ್ಲ. ಸಧ್ಯ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ ಮೊಬೈಲ್ ವಶಕ್ಕೆ ಪಡೆದು ಇನ್ವೆಸ್ಟಿಗೇಷನ್ ನಡೀತಿದೆ. ಇನ್ವೆಷ್ಟಿಗೇಷನ್ ಪ್ರೊಸಿಜರ್ ಲ್ಯಾಪ್ಸ್ ಆಗಿಲ್ಲ. ನಾನೂ ಪೊಲೀಸರಿಗೆ ಯಾವುದೇ ಸೂಚನೆ ಕೊಟ್ಟಿಲ್ಲ.. ನಿನ್ನೆ ಅಣ್ಣತಮ್ಮ ಇಬ್ಬರೇ ಮಾತ್ನಾಡಿದ್ದಾರೆ ಅಂತಿದ್ದಾರೆ. ಏನಿದೆ ಅಂತಾ ಸ್ಪಷ್ಟವಾಗಿ ಗೊತ್ತಿಲ್ಲ. ಅವನಿಗೆ ಬಯ್ಯೋದಕ್ಕೆ ಯಾರೂ ಹೋಗಿಲ್ಲ. ಪತ್ನಿಗೆ ಸಹೋದರನಾಗಬೇಕು.…
ಬೆಂಗಳೂರು:- ಬಿಜೆಪಿ ರಾಜ್ಯಾಧ್ಯಕ್ಷರಾಗಿ ವಿಜಯೇಂದ್ರ ಮುಂದುವರಿಯಲಿದ್ದಾರೆ ಎಂದು ಬಿವೈ ಯಡಿಯೂರಪ್ಪ ಸುಳಿವು ಕೊಟ್ಟಿದ್ದಾರೆ. ಬೆಂಗಳೂರಿನ ಖಾಸಗಿ ಹೊಟೇಲ್ನಲ್ಲಿ 130ಕ್ಕೂ ಹೆಚ್ಚು ಪರಾಜಿತರ ಸಭೆ ನಡೆಸಿದ್ದಾರೆ. ಸಭೆಯಲ್ಲಿ ವಿಜಯೇಂದ್ರ ಅವರೇ ರಾಜ್ಯಾಧ್ಯಕ್ಷರಾಗಿ ಮುಂದುವರೆಯುವ ಸುಳಿವನ್ನೂ ಕೊಡಲಾಗಿದೆ. ಸಭೆಯಲ್ಲಿ ಒಗ್ಗಟ್ಟಿನಿಂದ ಪಕ್ಷ ಸಂಘಟಿಸುವ ಪಣ ತೊಟ್ಟಿದ್ದು, ಈ ಮೂಲಕ ಮಾಜಿಗಳು ಹಾಗೂ ಪರಾಜಿತರ ವಿಶ್ವಾಸಗಳಿಸುವ ಕಸರತ್ತು ನಡೆಸಿದ್ದಾರೆ. ಈ ಮೂಲಕ ಮುಂದಿನ ಜಿ.ಪಂ ಹಾಗೂ ತಾ.ಪಂ ಚುನಾವಣೆಗೆ ಸೂಕ್ತ ತಯಾರಿಗೂ ಮುಂದಾಗಿದ್ದಾರೆ https://ainlivenews.com/note-to-metro-commuters-train-timings-change/ ಸಭೆಯಲ್ಲಿ ಪಕ್ಷದ ಒಳಗಿನ ವಿಚಾರಗಳೂ ಚರ್ಚೆಯಾಗಿದ್ದು, ಯತ್ನಾಳ್ ವಿರುದ್ಧ ಇನ್ನೂ ಶಿಸ್ತು ಕ್ರಮ ಆಗದ ಬಗ್ಗೆ ರೇಣುಕಾಚಾರ್ಯ ಆಕ್ಷೇಪಿಸಿದರು. ಪಕ್ಷದ ನಾಯಕತ್ವದ ವಿರುದ್ಧ ಬಹಿರಂಗ ಮಾತಾಡುವ ಯತ್ನಾಳ್ ವಿರುದ್ಧ ಕ್ರಮಕ್ಕೆ ಮತ್ತೆ ಹೈಕಮಾಂಡ್ ಮೇಲೆ ಒತ್ತಡ ತರಬೇಕೆಂಬ ಸಲಹೆ ಕೊಟ್ಟರು. ಇದೇ ವೇಳೆ, ಯಡಿಯೂರಪ್ಪ ಉತ್ಸವವನ್ನು ತಾವೇ ಹಣ ಹಾಕಿ ದಾವಣೆಗೆರೆಯಲ್ಲಿ ಮಾಡುವುದಾಗಿ ಅವರು ತಿಳಿಸಿದ್ದಾರೆ. ಸಭೆಯಲ್ಲಿ ಭಿನ್ನರ ಬಗ್ಗೆ ಮಾತಾಡದಂತೆ ಪಕ್ಷದ ನಾಯಕರಿಗೆ ಯಡಿಯೂರಪ್ಪ ಸೂಚನೆ ನೀಡಿದ್ದಾರೆ. ಯತ್ನಾಳ್…
ಬೆಂಗಳೂರು:- ಬೆಂಗಳೂರು ನಮ್ಮ ಮೆಟ್ರೋ ಸಂಚಾರ ಸಮಯ ಬದಲಾವಣೆ ಮಾಡಲಾಗಿದೆ. ಬೆಂಗಳೂರು ನಗರದಿಂದ ವಾರಾಂತ್ಯದಲ್ಲಿ ಊರಿಗೆ ತೆರಳಿ ನಂತರ ಸೋಮವಾರ ನಗರಕ್ಕೆ ಹಿಂದಿರುಗುವ ಪ್ರಯಾಣಿಕರ ಅನುಕೂಲಕ್ಕಾಗಿ ಸಿಟಿ ರೈಲ್ವೆ ನಿಲ್ದಾಣ, ಬಸ್ ನಿಲ್ದಾಣಕ್ಕೆ ಮುಂಜಾನೆ ಸಂಪರ್ಕವನ್ನು ಒದಗಿಸಬೇಕಿದೆ https://ainlivenews.com/big-shock-for-team-india-star-cricketer-who-announced-his-immigration-retirement/ ಸೋಮವಾರ (ಜನವರಿ 13) ದಿನದಂದು ಮಾತ್ರ ಮೆಟ್ರೋ ಸೇವೆ ಮುಂಜಾನೆ ಬೆಳಗ್ಗೆ 4.15ರಿಂಲದೇ ಆರಂಭವಾಗಲಿದೆ ಎಂದು ಬೆಂಗಳೂರು ಮೆಟ್ರೋ ರೈಲ್ ಕಾರ್ಪೋರೇಷನ್ ಲಿ ಪ್ರಕಟಣೆಯಲ್ಲಿ ತಿಳಿಸಿದೆ. ಸಂಸ್ಥೆಯು ಬೆಂಗಳೂರು ನಗರದಿಂದ ವಾರಾಂತ್ಯದಲ್ಲಿ ಊರಿಗೆ ತೆರಳಿ ನಂತರ ಸೋಮವಾರ ನಗರಕ್ಕೆ ಹಿಂದಿರುಗುವ ಪ್ರಯಾಣಿಕರ ಅನುಕೂಲಕ್ಕಾಗಿ ಸಿಟಿ ರೈಲ್ವೆ ನಿಲ್ದಾಣ, ಬಸ್ ನಿಲ್ದಾಣಕ್ಕೆ ಮುಂಜಾನೆ ಸಂಪರ್ಕವನ್ನು ಒದಗಿಸಬೇಕಿದೆ. ಈ ಹಿನ್ನೆಲೆಯಲ್ಲಿ, ನಮ್ಮ ಮೆಟ್ರೋ ನಿಗಮವು ಪ್ರತಿ ಸೋಮವಾರದಂದು ಮಾತ್ರ ಎಲ್ಲಾ ನಿಲ್ದಾಣಗಳಿಂದ ಮೆಟ್ರೋ ಸೇವೆಯನ್ನು 2025ರ ಜನವರಿ 13ರಿಂದ ಜಾರಿಗೆ ಬರುವಂತೆ ಬೆಳಗ್ಗೆ 4:15 ರಿಂದ ಪ್ರಾರಂಭಿಸಲಿದೆ. ಈಗ ಮುಂಜಾನೆ 5:00 ಮೆಟ್ರೋ ಸೇವೆ ಆರಂಭವಾಗುತ್ತಿದ್ದು, ಅದನ್ನು ಸೋಮವಾರ ಮಾತ್ರ 45 ನಿಮಿಷ ಮುಂಚಿತವಾಗಿ…
ಟೀಮ್ ಇಂಡಿಯಾಗೆ ಮತ್ತೊಂದು ಶಾಕ್ ಎದುರಾಗಿದ್ದು,R ಅಶ್ವಿನ್ ಬೆನ್ನಲ್ಲೇ ಸ್ಟಾರ್ ಕ್ರಿಕೆಟರ್ ನಿವೃತ್ತಿ ಘೋಷಿಸಿದ್ದಾರೆ. https://ainlivenews.com/actress-rashmika-mandanna-hit-worried-fans-what-happened/ ಇತ್ತೀಚೆಗಷ್ಟೇ ಆರ್. ಅಶ್ವಿನ್ ನಿವೃತ್ತಿ ಘೋಷಿಸಿದ್ದರು. ಈಗ ಟೀಮ್ ಇಂಡಿಯಾದಲ್ಲಿ ಸ್ಥಾನ ಸಿಗದ ಕಾರಣ ಮತ್ತೊಬ್ಬ ಬೌಲರ್ ತಮ್ಮ ಅಂತಾರಾಷ್ಟ್ರೀಯ ಕ್ರಿಕೆಟ್ ವೃತ್ತಿಜೀವನಕ್ಕೆ ತೆರೆ ಎಳೆದಿದ್ದಾರೆ. ಟೀಮ್ ಇಂಡಿಯಾದ ರೈಟ್ ಆರ್ಮ್ ಬೌಲರ್ ವರುಣ್ ಆರನ್. ಇವರು ತಮ್ಮ ಫಾಸ್ಟ್ ಬೌಲಿಂಗ್ನಿಂದಲೇ ತಂಡದಲ್ಲಿ ಸ್ಥಾನ ಗಿಟ್ಟಿಸಿಕೊಂಡವರು. 35 ವರ್ಷದ ಆರನ್ 2011ರಲ್ಲಿ ಎಂಎಸ್ ಧೋನಿ ನಾಯಕತ್ವದಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ಡೆಬ್ಯೂ ಮಾಡಿದ್ರು. ಕ್ರಿಕೆಟ್ ಲೋಕದಲ್ಲಿ ಸಂಚಲನ ಮೂಡಿಸಿದ್ದ ಇವರು ಆಗಾಗ ಗಾಯಕ್ಕೆ ಒಳಗಾಗಿ ತಂಡದಿಂದ ಹೊರಗುಳಿದಿದ್ರು. ಕೊನೆಗೂ ಅವಕಾಶ ಸಿಗದ ಕಾರಣ ಈ ನಿರ್ಧಾರಕ್ಕೆ ಬಂದಿದ್ದಾರೆ. ಅಂತರಾಷ್ಟ್ರೀಯ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದ ಬಗ್ಗೆ ವರುಣ್ ಆರನ್ ತಮ್ಮ ಇನ್ಸ್ಟಾಗ್ರಾಮ್ನಲ್ಲಿ ಪೋಸ್ಟ್ ಹಾಕಿದ್ದಾರೆ. ಕಳೆದ 20 ವರ್ಷಗಳಿಂದ ನಾನು ಕ್ರಿಕೆಟರ್ ಆಗಿದ್ದೇನೆ. ನನ್ನ ವೇಗದ ಬೌಲಿಂಗ್ನಲ್ಲಿ ಸೋಲು ಗೆಲುವು ಕಂಡಿದ್ದೇನೆ. ಬದುಕಿದ್ದೇನೆ, ಉಸಿರಾಡಿದ್ದೇನೆ ಮತ್ತು ಯಶಸ್ಸು…
ಕೊಡಗಿನ ಬೆಡಗಿ ಹಾಗೂ ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ ಫ್ಯಾನ್ಸ್ ಗೆ ಒಂದು ಬ್ಯಾಡ್ ನ್ಯೂಸ್ ಇದೆ. ನಟನೆ, ಫ್ಯಾಷನ್ ಜೊತೆ ಫಿಟ್ನೆಸ್ ಗೆ ಹೆಸರಾಗಿರುವ ರಶ್ಮಿಕಾ ಮಂದಣ್ಣಗೆ ನೋವಾಗಿದೆ. ಜಿಮ್ ನಲ್ಲಿ ವರ್ಕೌಟ್ ಮಾಡುವ ವೇಳೆ ರಶ್ಮಿಕಾ ಗಾಯಗೊಂಡಿದ್ದಾರೆ. ಸದ್ಯ ಅವರು ವಿಶ್ರಾಂತಿ ಪಡೆಯುತ್ತಿದ್ದಾರೆ https://ainlivenews.com/srinivasa-kalyanotsava-was-held-in-chikkavalagamadi-village-with-grandeur-thousands-of-devotees-participated/ ಪುಷ್ಮಾ 2 ಸಕ್ಸಸ್ ನಂತ್ರ ರಶ್ಮಿಕಾ ಹಿಂದಿ ಸೇರಿದಂತೆ ಅನೇಕ ಸಿನಿಮಾಗಳಿಗೆ ಸೈನ್ ಹಾಕಿದ್ದಾರೆ. ಕೆಲ ಚಿತ್ರಗಳ ಶೂಟಿಂಗ್ ಈಗಾಗಲೇ ಶುರುವಾಗಿದ್ದು, ಮತ್ತೊಂದಿಷ್ಟು ಮುಗಿಯುವ ಹಂತದಲ್ಲಿದೆ. ಈ ಮಧ್ಯೆ ರಶ್ಮಿಕಾ ಮಂದಣ್ಣ ಗಾಯಗೊಂಡಿದ್ದಾರೆ. ಜಿಮ್ನಲ್ಲಿ ವರ್ಕೌಟ್ ಮಾಡುವಾಗ ನ್ಯಾಷನಲ್ ಕ್ರಷ್ ರಶ್ಮಿಕಾ ಮಂದಣ್ಣಗೆ ಪೆಟ್ಟಾಗಿದೆ. ಹೀಗಾಗಿ ರಶ್ಮಿಕಾ ಒಪ್ಪಿಕೊಂಡಿದ್ದ ಸಲ್ಮಾನ್ ಖಾನ್ ಜೊತೆಗಿನ ‘ಸಿಖಂದರ್’ ಚಿತ್ರದ ಶೂಟಿಂಗ್ ಕೂಡ ನಿಲ್ಲಿಸಲಾಗಿದೆ. ಮೂಲಗಳ ಪ್ರಕಾರ, ನಟಿ ರಶ್ಮಿಕಾಗೆ ಸಣ್ಣದಾಗಿ ಪೆಟ್ಟಾಗಿದೆ ಎನ್ನಲಾಗಿದೆ. ಜಿಮ್ನಲ್ಲಿ ವ್ಯಾಯಾಮ ಮಾಡುವಾಗ ನಟಿ ಗಾಯಗೊಂಡಿದ್ದಾರೆ. ಆತಂತಪಡುವಂತಹದ್ದು ಏನಿಲ್ಲ. ಕೆಲ ದಿನಗಳ ಕಾಲ ಅವರು ವಿಶ್ರಾಂತಿ ಪಡೆಯಲಿದ್ದಾರೆ ಎನ್ನಲಾಗಿದೆ ಸಂಪೂರ್ಣವಾಗಿ ಚೇತರಿಸಿಕೊಂಡ…
ಬಂಗಾರಪೇಟೆ – ತಾಲೂಕಿನ ಕಸಬಾ ಹೋಬಳಿ ದೊಡ್ಡ ವಲಗಮಾದಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕ ವಲಗಮಾದಿ ಗ್ರಾಮದ 700 ವರ್ಷಗಳ ಇತಿಹಾಸವುಳ್ಳ ಶ್ರೀದೇವಿ, ಭೂದೇವಿ ಸಮೇತ ಶ್ರೀತಿಮ್ಮರಾಯಸ್ವಾಮಿ ದೇವಾಲಯದಲ್ಲಿ ಶುಕ್ರವಾರ ವೈಕುಂಠ ಏಕಾದಶಿ ಪ್ರಯುಕ್ತ ಶ್ರೀನಿವಾಸ ಕಲ್ಯಾಣೋತ್ಸವವು ಸತತ ಮೂರನೇ ಬಾರಿಗೆ ದೇವಾಲಯದ ಧರ್ಮಾಧಿಕಾರಿಗಳು ಹಾಗೂ ಕರ್ನಾಟಕ ಆಹಾರ ಗುತ್ತಿಗೆದಾರರಾದ ಆರ್.ಮುನಿರಾಜು ರವರ ನೇತೃತ್ವದಲ್ಲಿ ಅತ್ಯಂತ ವೈಭವದಿಂದ ನಡೆಯಿತು. https://ainlivenews.com/death-8-year-old-boy-who-died-of-heart-attack/ ಬೆಳಿಗ್ಗೆ ಸುಪ್ರಭಾತ ಸೇವೆ,ಗಣಪತಿ ಪೂಜೆ,ಗಣಪತಿ ಹೋಮ, ನವಗ್ರಹ ಹೋಮ, ಶ್ರೀನಿವಾಸ ಕಲ್ಯಾಣ, ಪೂರ್ಣಾವತಿ, ಪಂಚಾಮೃತ ಅಭಿಷೇಕ, ಕುಂಭಾಭಿಷೇಕ, ಪುಷ್ಪಾಲಂಕಾರ,ಅಷ್ಟವದಾನ ಸೇವೆ, ಮಹಾಮಂಗಳಾರತಿ ಹಾಗೂ ತೀರ್ಥ ಪ್ರಸಾದ ವಿನಿಯೋಗ ನಡೆಯಿತು.ಸಹಸ್ರಾರು ಸಂಖ್ಯೆಯಲ್ಲಿನ ಭಕ್ತರ ನಡುವೆ ಶ್ರೀನಿವಾಸ ಕಲ್ಯಾಣೋತ್ಸವವು ವೈಭವದಿಂದ ನಡೆದಿದ್ದು,ಭಕ್ತರು ಈ ವೇಳೆ ಗೋವಿಂದನ ನಾಮ ಸ್ಮರಣೆ ಮಾಡುತ್ತಾ ಪುನೀತರಾದರು. ಈ ಸಂದರ್ಭದಲ್ಲಿ ಬುದಿಕೋಟೆ ಸಬ್ ಇನ್ಸ್ಪೆಕ್ಟರ್ ಸುನಿಲ್, ಹರೀಶ್, ಗ್ರಾಮ ಪಂಚಾಯತಿ ಸದಸ್ಯರಾದ ಮಲ್ಲೇಶ್ ಚೌಡಪ್ಪ ಪಿಡಿಒ ಮಧುಚಂದ್ರ, ಎಂ.ಮುನಿರಾಜು, ತಾಲೂಕು ಕುರುಬರ ಸಂಘದ ಅಧ್ಯಕ್ಷ ರಾಮಕೃಷ್ಣಪ್ಪ ಮುಂತಾದವರು ಇದ್ದರು.
ಗಾಂಧಿನಗರ:- ಗುಜರಾತ್ನ ಅಹಮದಾಬಾದ್ನ ಶಾಲೆಯಲ್ಲಿ ಹೃದಯಾಘಾತದಿಂದ 8 ವರ್ಷದ ಬಾಲಕಿ ಸಾವನ್ನಪ್ಪಿರುವ ಘಟನೆ ಜರುಗಿದೆ. https://ainlivenews.com/how-to-keep-potato-fresh-without-sprouting-follow-these-tips-ladies/ 3ನೇ ತರಗತಿ ಓದುತ್ತಿದ್ದ ಬಾಲಕಿ ಮೃತ ಬಾಲಕಿ. ಇಂದು ಬೆಳಗ್ಗೆ ಈ ಘಟನೆ ನಡೆದಿದ್ದು, ಬಾಲಕಿಗೆ ಹೃದಯಾಘಾತವಾಗುವ ದೃಶ್ಯ ಶಾಲೆಯಲ್ಲಿದ್ದ ಸಿಸಿಟಿವಿಯೊಂದರಲ್ಲಿ ಸೆರೆಯಾಗಿದೆ. ದೃಶ್ಯದಲ್ಲಿ ಶಾಲೆಯ ಕಾರಿಡಾರ್ನಲ್ಲಿ ಸ್ನೇಹಿತರೊಂದಿಗೆ ನಡೆದುಕೊಂಡು ಹೋಗುತ್ತಿದ್ದಳು. ಈ ವೇಳೆ ನಿಂತಲ್ಲಿಯೇ ನಿಲ್ಲುತ್ತಾಳೆ. ಬಳಿಕ ಮತ್ತೆ ಮುಂದೆ ಹೋಗಿ ಪಕ್ಕದಲ್ಲಿದ್ದ ಬೆಂಚ್ನಲ್ಲಿ ಕುಳಿತುಕೊಳ್ಳುತ್ತಾಳೆ. ಸ್ವಲ್ಪ ಹೊತ್ತು ಕುಳಿತುಕೊಂಡವಳೆ ದಿಢೀರ್ ನೆಲಕ್ಕೆ ಕುಸಿಯುತ್ತಾಳೆ. ಆಗ ಅಲ್ಲೇ ನಿಂತಿದ್ದ ಶಿಕ್ಷಕಿಯರು ಆಕೆಯನ್ನು ತಕ್ಷಣವೇ ಆಸ್ಪತ್ರೆಗೆ ರವಾನಿಸಿದರು. ಆಸ್ಪತ್ರೆಯಲ್ಲಿ ವೈದ್ಯರ ತಪಾಸಣೆಯ ಬಳಿಕ ಮೃತಪಟ್ಟಿರುವುದಾಗಿ ತಿಳಿಸಿದರು. ಶಾಲೆಯ ಪ್ರಾಂಶುಪಾಲೆ ಶರ್ಮಿಷ್ಠ ಸಿನ್ಹಾ ಪ್ರಕಾರ, ಬಾಲಕಿಗೆ ಉಸಿರಾಟದ ತೊಂದರೆ ಇತ್ತು. ಅಸ್ವಸ್ಥಳಾಗಿದ್ದ ಆಕೆ ಶಾಲೆಯ ಕಾರಿಡಾರ್ನಲ್ಲಿ ಕುಸಿದು ಬಿದ್ದಿದ್ದಾಳೆ ಎಂದು ತಿಳಿಸಿದರು.