Author: AIN Author

ಮಡಿಕೇರಿ:- ಇತ್ತೀಚಿನ ದಿನಗಳಲ್ಲಿ ಕ್ಷುಲ್ಲಕ ವಿಚಾರಕ್ಕೆ ಕ್ರೈಂ ಪ್ರಕರಣಗಳು ಹೆಚ್ಚಾಗುತ್ತಿದೆ. ಅದರಂತೆ ಇಲ್ಲೊಂದು ಬೆಚ್ಚಿ ಬೀಳಿಸೋ ಘಟನೆ ಜರುಗಿದ್ದು, ಬಾಮೈದುನನ ಕತ್ತು ಕತ್ತರಿಸಿ ಬಾವ ಕೊಲೆಗೈದಿರುವ ಘಟನೆ ಜರುಗಿದೆ. https://ainlivenews.com/current-cut-in-this-area-of-bangalore-today-is-this-your-area/ ಕೋಳಿ ಕಾಲು ಸುಡದಿದ್ದಕ್ಕೆ ಬಾಮೈದುನನ ಕತ್ತು ಕತ್ತರಿಸಿ ಬಾವ ಕೊಲೆಗೈದಿರುವ ಘಟನೆ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲ್ಲೂಕಿನ ಕದೆಮುಳ್ಳೂರು ತೋರ ಗ್ರಾಮದಲ್ಲಿ ಜರುಗಿದೆ. ಮೃತ ದುರ್ದೈವಿಯನ್ನು ಮಂಜು ಎಂದು ಗುರುತಿಸಲಾಗಿದೆ. ಅಭಿ ಕೊಲೆ ಮಾಡಿದ ಆರೋಪಿ. ಮೃತ ಮಂಜು ತೋರ ಗ್ರಾಮದ ತೋಟದ ಅಚ್ಚಯ್ಯ ಎಂಬವರ ಲೈನ್ ಮನೆಯಲ್ಲಿ ವಾಸವಿದ್ದ. ಮೃತ ಮಂಜು ತಂಗಿ ಕಾವ್ಯಳನ್ನು ಆರೋಪಿ ಅಭಿ ವಿವಾಹವಾಗಿದ್ದ. ಜ.07 ಮಂಗಳವಾರದಂದು ತೋಟದ ಕಾರ್ಮಿಕರಿಗೆ ಮುಂಗಡ ಸಂಬಳವನ್ನು ನೀಡಲಾಗಿತ್ತು. ಅಂದು ಸಂಜೆ ಮಂಜು ಮತ್ತು ಅರೋಪಿ ಅಭಿ ಕಂಠಪೂರ್ತಿ ಮದ್ಯ ಸೇವನೆ ಮಾಡಿದ್ದರು. ತೋಟದ ಮಾಲೀಕರ ನಿರ್ದೇಶನದ ಮೇರೆಗೆ ರಾತ್ರಿ ಕಾಫಿ ಕಣದಲ್ಲಿ ಕಾವಲು ಕಾಯುವಂತೆ ತಿಳಿಸಿದ್ದರು. ಈ ವೇಳೆ ಕಾಫಿ ಕಣದಲ್ಲಿ ಕೋಳಿ ಕಾಲು ಸುಡಲು ಇಬ್ಬರು…

Read More

ಬೆಂಗಳೂರು:- ರಾಜಧಾನಿ ಬೆಂಗಳೂರಿನ ಹಲವು ಏರಿಯಾದಲ್ಲಿ ಇಂದು ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ. https://ainlivenews.com/haveri-farewell-to-the-departed-cow/ ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾರ್ಯ ಹಿನ್ನೆಲೆಯಲ್ಲಿ 66/11 ಕೆವಿ ವೆಲ್ ಕ್ಯಾಸ್ಟ್ ಉಪಕೇಂದ್ರದಲ್ಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ರವೀಂದ್ರ ನಗರ, ಪ್ರಸಹನಾಥ್ ನಗರ, ಸಂತೋಷ್ ನಗರ, ಏರ್ ಫೋರ್ಸ್ ಜಾಲಹಳ್ಳಿ ವೆಸ್ಟ್, ವೈಷ್ಣವಿ ನಾಕಾಶ್ತ್ರ ಅಪಾರ್ಟ್ ಮೇಂಟ್, ಕೆಎಸ್ ಆರ್ ಟಿ ಸಿ ಬಸ್ ನಿಲ್ದಾಣ, ಗತಿ ರಸ್ತೆ, ತ್ರಿವೇಣಿ, ಎಚ್ ಎಚ್ ವಿ, ಡಿಎಂಜಿ, ಕೃಷ್ಣಾ ಫ್ಯಾಚ್ರಿಕೇಶನ್ಸ್, ಜೆಮಿನಿ ಇಂಡಸ್ಟ್ರೀಸ್ ರವಿ-ಕಿರ್ಲೋಸ್ಕರ್ ಆಸ್ಪತ್ರೆ, ಜಾನ್ ಕ್ರೇನ್, ಪ್ರಿಸ್ ಐಎಲ್, ಎಮ್ ಎಸ್ ಐಎಲ್, ವಿಪ್ರೋವೆಲ್ಕಾಸ್ಟ್ ಫ್ಯಾಕ್ಟರಿ, ಐಟಿಸಿ, ವೋಲ್ ವೋ, ಏವೆರಿ ಡೆನ್ನಿಸನ್, ಹಿಟಾಚ್ ಇಂಡಸ್ಟ್ರೀಸ್, ಗೀತಾ ಟಿಂಬರ್ ಮತ್ತು ಸುತ್ತ ಮುತ್ತಲಿನ ಪ್ರದೇಶದಲ್ಲಿ ಪವರ್ ಕಟ್ ಇರಲಿದೆ. ಇಂದು ಬೆಳಗ್ಗೆ 10 ರಿಂದ ಮಧ್ಯಾಹ್ನ 3.30 ರವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಮಾಧ್ಯಮ…

Read More

ಹಾವೇರಿ: ದನ ಬೆದರಿಸುವ ಸ್ಪರ್ಧೆಯಲ್ಲಿ ರಾಜ್ಯ ನೆರೆ ರಾಜ್ಯದಲ್ಲಿ ಹೆಸರು ಮಾಡಿದ್ದ ಕಾಶಂಬಿಯ ಹುಲಿ ಖ್ಯಾತಿಯ ಕೊಬ್ಬರಿ ಹೋರಿ ಸಾವನ್ನಪ್ಪಿದೆ. ಹಾವೇರಿ ಜಿಲ್ಲೆ ಬ್ಯಾಡಗಿ ತಾಲೂಕು ಕಾಶಂಬಿ ಗ್ರಾಮದ ಹೋರಿ ಕಾಶಂಬಿ ಹುಲಿ ಎಂದೇ ಆಖಾಡದಲ್ಲಿ ಪ್ರಸಿದ್ದಿಯಾಗಿತ್ತು. https://ainlivenews.com/countdown-to-win-the-champions-trophy-team-india-prepares-hard/ ಹಾವೇರಿ ಜಿಲ್ಲೆಗಳಲ್ಲದೆ ನೆರೆ ರಾಜ್ಯದ ಸ್ಪರ್ಧೆಯಲ್ಲಿ ಹೋರಿ ತನ್ನದೇ ಆದ ಛಾಪು ಮೂಡಿಸಿತ್ತು. ದನ ಬೆದರಿಸುವ ಸ್ಪರ್ಧೆಯಲ್ಲಿ ಪೀಪಿಹೋರಿಯಾಗಿದ್ದ ಕಾಶಂಬಿ ಹುಲಿ ಹಲವು ಪ್ರಶಸ್ತಿಗಳನ್ನು ಪಡೆದುಕೊಂಡಿತ್ತು. ಹೋರಿ ಸಾವನ್ನಪ್ಪಿದ ವಿಷಯ ತಿಳಿಯುತ್ತಿದ್ದಂತೆ ರಾಜ್ಯದ ವಿವಿಧಡೆಯಲ್ಲಿರುವ ಹೋರಿ ಅಭಿಮಾನಿಗಳು ಆಗಮಿಸಿ ನೆಚ್ಚಿನ ಹೋರಿಯ ದರ್ಶನ ಪಡೆದರು. ಪೂಜೆ ಸಲ್ಲಿಸಿ ಅಂತಿಮದರ್ಶನ ಪಡೆದರು‌. ಹೋರಿ ಮಾಲೀಕ ರಮೇಶ ಮುತ್ತಳ್ಳಿ ಮನುಷ್ಯರ ಅಂತ್ಯಕ್ರಿಯೆಯಂತೆ ಹೋರಿ ಅಂತ್ಯಕ್ರಿಯೆ ನಡೆಸಿದರು.

Read More

ಚಾಂಪಿಯನ್ಸ್ ಟ್ರೋಫಿ ಗೆಲ್ಲಲು ಟೀಮ್ ಇಂಡಿಯಾ ಮಾಸ್ಟರ್ ಪ್ಲಾನ್ ಮಾಡಿದೆ. ಪಾಕಿಸ್ತಾನ ಹಾಗೂ ಯುಎಇ ಆತಿಥ್ಯದಲ್ಲಿ ನಡೆಯಲ್ಲಿರುವ ಚಾಂಪಿಯನ್ಸ್ ಟ್ರೋಫಿಗಾಗಿ ಟೀಂ ಇಂಡಿಯಾ ಈಗಾಗಲೇ ತನ್ನ ಸಿದ್ಧತೆಯನ್ನು ಆರಂಭಿಸಿದೆ. ಈ ಐಸಿಸಿ ಟೂರ್ನಿಯ ತಯಾರಿಯ ಭಾಗವಾಗಿ ಇನ್ನು ಕೆಲವೇ ದಿನಗಳಲ್ಲಿ ಟೀಂ ಇಂಡಿಯಾ ಇಂಗ್ಲೆಂಡ್ ವಿರುದ್ಧ ಮೂರು ಪಂದ್ಯಗಳ ಏಕದಿನ ಸರಣಿಯನ್ನು ಆಡಲಿದೆ. ಆ ಬಳಿಕ ಚಾಂಪಿಯನ್ಸ್ ಟ್ರೋಫಿಗೆ ಕಾಲಿಡಲಿದೆ https://ainlivenews.com/only-ambulance-allowed-in-bandipur-at-night-minister-ishwara-khandre-clarified/ ಭಾರತ ತಂಡ ದುಬೈ ತಲುಪಿದ ಬಳಿಕ ಅಭ್ಯಾಸ ಪಂದ್ಯವನ್ನು ಆಡಲಿದೆ ಎಂದು ವರದಿಯೊಂದು ಬಹಿರಂಗಪಡಿಸಿದೆ. ಈ ಪಂದ್ಯ ಯಾವಾಗ ಮತ್ತು ಯಾವ ತಂಡದೊಂದಿಗೆ ನಡೆಯಲಿದೆ ಎಂಬುದು ಇನ್ನೂ ಬಹಿರಂಗವಾಗಿಲ್ಲ. ಭಾರತ ಸೇರಿದಂತೆ ಎಲ್ಲಾ ತಂಡಗಳಿಗೆ ಐಸಿಸಿ ಅಭ್ಯಾಸ ಪಂದ್ಯಗಳನ್ನು ಆಯೋಜಿಸುತ್ತಿದೆಯೇ ಅಥವಾ ಟೀಂ ಇಂಡಿಯಾದ ಸಿದ್ಧತೆಗಳನ್ನು ಸಂಪೂರ್ಣವಾಗಿ ಮಾಡಲು ಬಿಸಿಸಿಐ ತನ್ನದೇ ಆದ ಮಟ್ಟದಲ್ಲಿ ವ್ಯವಸ್ಥೆಗಳನ್ನು ಮಾಡುತ್ತಿದೆಯೇ ಎಂಬುದು ಸಹ ಸದ್ಯಕ್ಕೆ ಸ್ಪಷ್ಟವಾಗಿಲ್ಲ. ಈ ಪಂದ್ಯದ ಮೂಲಕ ಟೀಂ ಇಂಡಿಯಾ ಕೌಶಲ್ಯದ ಮಟ್ಟದಲ್ಲಿ ಮಾತ್ರವಲ್ಲದೆ ಪರಿಸ್ಥಿತಿಯ ಮಟ್ಟಕ್ಕೂ ಹೊಂದಿಕೊಳ್ಳಲು…

Read More

ಬೆಂಗಳೂರು:- ಬಂಡೀಪುರದಲ್ಲಿ ರಾತ್ರಿ ವೇಳೆ ಆ್ಯಂಬುಲೆನ್ಸ್​ಗೆ ಮಾತ್ರ ಅವಕಾಶ ನೀಡಲಾಗಿದೆ ಎಂದು ಸಚಿವ ಈಶ್ವರ್ ಖಂಡ್ರೆ ಸ್ಪಷ್ಟನೆ ಕೊಟ್ಟಿದ್ದಾರೆ. https://ainlivenews.com/he-is-a-cheater-star-cricketer-is-very-angry-against-gambhir/ ಈ ಸಂಬಂಧ ಮಾತನಾಡಿದ ಅವರು, ಬಂಡೀಪುರ ಅರಣ್ಯ ಪ್ರದೇಶದೊಳಗೆ ರಾತ್ರಿ ವೇಳೆ ಎರಡು ಬಸ್‌ಗಳು ಮತ್ತು ಆ್ಯಂಬುಲೆನ್ಸ್ ಸೇರಿದಂತೆ ನಿರ್ಬಂಧಿತ ವಾಹನ ಸಂಚಾರಕ್ಕೆ ಅವಕಾಶ ನೀಡಲಾಗುವುದು ಎಂದರು. ಸೂಕ್ಷ್ಮ ವನ್ಯಜೀವಿಗಳ ಆವಾಸ ಸ್ಥಾನವನ್ನು ರಕ್ಷಿಸಲು ಜಾರಿಯಲ್ಲಿರುವ ಕಟ್ಟುನಿಟ್ಟಾದ ರಾತ್ರಿ ಪ್ರಯಾಣ ನಿಷೇಧವನ್ನು ಈ ನಿರ್ಧಾರವು ಸ್ವಲ್ಪ ಸಡಿಲಗೊಳಿಸುತ್ತದೆ ಎಂದಿದ್ದರು. ಆದರೆ, ಇದೀಗ ಬಂಡೀಪುರದಲ್ಲಿ ರಾತ್ರಿ 9 ಗಂಟೆಯವರೆಗೆ ಮಾತ್ರ ವಾಹನ ಸಂಚಾರಕ್ಕೆ ಅನುಮತಿ ನೀಡಲಾಗುತ್ತದೆ. ಬಳಿಕ, ಕೇರಳದಿಂದ ಕರ್ನಾಟಕದ ಕಡೆ 2 ಬಸ್​ಗಳಿಗೆ ಮತ್ತು 1 ಆ್ಯಂಬುಲೆನ್ಸ್​ಗೆ ಮಾತ್ರ ಸಂಚಾರಕ್ಕೆ ಅವಕಾಶ ನೀಡಲಾಗುತ್ತದೆ ಎಂದರು. ಬಂಡೀಪುರದಲ್ಲಿ ರಾತ್ರಿ ವಾಹನ ಸಂಚಾರದ ಬಗ್ಗೆ ಮತ್ತೊಮ್ಮೆ ಚರ್ಚೆಗಳು ಆರಂಭವಾಗಿದೆ. ಸಾಮಾಜಿಕ ಜಾಲತಾಣದಲ್ಲಿ ‘ಸೇವ್ ಬಂಡೀಪುರ’ ಎಂಬ ಅಭಿಯಾನ ಆರಂಭವಾಗಿದೆ. ಕರ್ನಾಟಕ ಸರ್ಕಾರ ಬಂಡೀಪುರ ಅರಣ್ಯದಲ್ಲಿ ರಾತ್ರಿ ವೇಳೆ 2 ಬಸ್‌ಗಳ ಸಂಚಾರಕ್ಕೆ ಅನುಮತಿ…

Read More

ಗಂಭೀರ್​​ ಒಬ್ಬ ಮೋಸಗಾರ ಎಂದು ಮುಖ್ಯ ಕೋಚ್​​ ವಿರುದ್ಧ ಸ್ಟಾರ್​ ಕ್ರಿಕೆಟರ್​​ ಆಕ್ರೋಶ ಹೊರ ಹಾಕಿದ್ದಾರೆ. https://ainlivenews.com/the-husband-told-his-friend-to-sleep-with-his-wife-for-money/ ಟೀಮ್​​ ಇಂಡಿಯಾ ಕ್ಯಾಪ್ಟನ್​​ ರೋಹಿತ್​ ಶರ್ಮಾ ವೃತ್ತಿಜೀವನದ ಬಗ್ಗೆ ಹಲವು ಪ್ರಶ್ನೆಗಳು ಎದ್ದಿವೆ. ಅಷ್ಟೇ ಅಲ್ಲ ಟೀಮ್ ಇಂಡಿಯಾ ಕಳಪೆ ಪ್ರದರ್ಶನಕ್ಕೆ ಹೆಡ್‌ ಕೋಚ್ ಗೌತಮ್ ಗಂಭೀರ್ ಹೊಣೆ ಅನ್ನೋ ಚರ್ಚೆ ಜೋರಾಗಿದೆ. ಈಗ ಟೀಮ್​ ಇಂಡಿಯಾ ಮಾಜಿ ಕ್ರಿಕೆಟರ್​ ಮನೋಜ್ ತಿವಾರಿ ಗೌತಮ್​​ ಗಂಭೀರ್​​ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಗೌತಮ್ ಗಂಭೀರ್​ ಮೋಸಗಾರ. ಅವನು ಹೇಳಿದಂತೆ ಯಾವತ್ತೂ ನಡೆದುಕೊಳ್ಳುವುದೇ ಇಲ್ಲ. ಕ್ಯಾಪ್ಟನ್​ ರೋಹಿತ್​​ ಶರ್ಮಾ ಎಲ್ಲಿಯವರು? ಅಭಿಷೇಕ್ ನಾಯರ್ ಎಲ್ಲಿಂದ ಬಂದವರು? ಎಲ್ಲರೂ ಮುಂಬೈನವರೇ. ಇವರನ್ನು ಮುಂದೆ ತರುವ ಅವಕಾಶ ಸಿಕ್ಕಿತ್ತು. ಜಲಜ್ ಸಕ್ಸೇನಾ ಪರ ಮಾತನಾಡಲು ಯಾರೂ ಇಲ್ಲ. ಅವರು ಉತ್ತಮವಾಗಿ ಕಾರ್ಯನಿರ್ವಹಿಸುತ್ತಾರೆ. ಆದರೆ ಮೌನವಾಗಿರುತ್ತಾರೆ ಎಂದರು. ಬೌಲಿಂಗ್ ಕೋಚ್‌ನಿಂದ ಏನು ಪ್ರಯೋಜನ? ಇವರು ಕೋಚ್ ಏನೇ ಹೇಳಿದ್ರೂ ಒಪ್ಪುತ್ತಾರೆ. ಮೋರ್ನೆ ಮೊರ್ಕೆಲ್ ಲಕ್ನೋ ಸೂಪರ್ ಜೈಂಟ್ಸ್‌ನಿಂದ ಬಂದವರು. ಕೆಕೆಆರ್​​​ನಲ್ಲಿ…

Read More

ನವದೆಹಲಿ:- ಹಣಕ್ಕಾಗಿ ಗೆಳೆಯರಿಗೆ ಹೆಂಡತಿ ಮೇಲೆ ಅತ್ಯಾಚಾರವೆಸಗಲು ಗಂಡ ಹೇಳಿರುವ ಘಟನೆ ಉತ್ತರ ಪ್ರದೇಶದ ಬುಲಂದ್‌ಶಹರ್‌ನಲ್ಲಿ ಜರುಗಿದೆ. https://ainlivenews.com/yatnal-against-waqf-by-vijayendra-meeting-tomorrow-with-defeated-candidates/ ಮಹಿಳೆ ಸ್ಥಳೀಯ ಪೊಲೀಸ್ ಠಾಣೆಯನ್ನು ಸಂಪರ್ಕಿಸಿ ತನ್ನ ಪತಿಯ ಇಬ್ಬರು ಸ್ನೇಹಿತರು ಕಳೆದ ಮೂರು ವರ್ಷಗಳಿಂದ ತನ್ನ ಮೇಲೆ ಅತ್ಯಾಚಾರ ನಡೆಸುತ್ತಿದ್ದಾರೆ ಎಂದು ಹೇಳಿಕೊಂಡಿದ್ದಾರೆ. ತನ್ನ ಗಂಡನ ಗೆಳೆಯರು ಅತ್ಯಾಚಾರ ನಡೆಸುವಾಗ ಅದನ್ನು ವಿಡಿಯೋ ರೆಕಾರ್ಡ್​ ಕೂಡ ಮಾಡಿಕೊಂಡಿದ್ದಾರೆ. ಆ ವಿಡಿಯೋಗಳನ್ನು ತನ್ನ ಗಂಡನಿಗೆ ಕಳುಹಿಸುತ್ತಿದ್ದರು ಎನ್ನಲಾಗಿದೆ. ಈ ತಾನು 1 ತಿಂಗಳ ಗರ್ಭಿಣಿಯಾಗಿದ್ದೇನೆ. ತನ್ನ ಪತಿ ಸೌದಿ ಅರೇಬಿಯಾದಲ್ಲಿ ಕೆಲಸ ಮಾಡುತ್ತಿದ್ದಾನೆ ಎಂದು ಆ ಮಹಿಳೆ ಬಹಿರಂಗಪಡಿಸಿದ್ದಾರೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ. 35 ವರ್ಷದ ಮಹಿಳೆ ಈ ಬಗ್ಗೆ ಗಂಭೀರ ಆರೋಪ ಮಾಡಿದ್ದು, ಹೆಂಡತಿಯನ್ನು ತಮ್ಮ ಜೊತೆ ಲೈಂಗಿಕ ಕ್ರಿಯೆ ನಡೆಸಲು ಅವಕಾಶ ನೀಡಿದ್ದಕ್ಕಾಗಿ ನನ್ನ ಗಂಡನ ಸ್ನೇಹಿತರು ನನ್ನ ಗಂಡನಿಗೆ ಹಣ ನೀಡುತ್ತಿದ್ದಾರೆ ಎಂದು ಕೂಡ ಆರೋಪಿಸಿದ್ದಾರೆ. ಈ ವಿಷಯವನ್ನು ಯಾರೊಂದಿಗೂ ಹೇಳುವಂತಿಲ್ಲ ಎಂದು…

Read More

ಬೆಂಗಳೂರು:- ವಕ್ಫ್ ವಿರುದ್ಧ 3ನೇ ಹಂತದ ಹೋರಾಟಕ್ಕೆ ಯತ್ನಾಳ್ ಬಣ ಸಜ್ಜಾಗಿದ್ದು, ಮತ್ತೊಂದೆಡೆ ಪರಾಜಿತ ಅಭ್ಯರ್ಥಿಗಳೊಂದಿಗೆ ನಾಳೆ ವಿಜಯೇಂದ್ರ ಸಭೆ ನಡೆಸಲಿದ್ದಾರೆ. https://ainlivenews.com/forced-bandh-people-of-twin-cities-are-cursing-trouble-for-those-who-go-to-hospital-and-work/ ವಕ್ಫ್ ಬೋರ್ಡ್​ ವಿರುದ್ಧ ನಮ್ಮ ಹೋರಾಟ ನಿಲ್ಲೋದಿಲ್ಲ, 3ನೇ ಹಂತದ ಹೋರಾಟವನ್ನೂ ಮಾಡುತ್ತೇವೆ ಅಂತಾ ಶಾಸಕ ಯತ್ನಾಳ್ ಕರೆ ಕೊಟ್ಟಿದ್ದಾರೆ. ಇತ್ತಾ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಪಕ್ಷವನ್ನ ಸಂಘಟಿಸುವ ಕೆಲಸದಲ್ಲಿ ಹೆಚ್ಚು ಬ್ಯುಸಿ ಆಗಿದ್ದಾರೆ. ಪಕ್ಷವನ್ನ ಒಗ್ಗಟ್ಟಾಗಿ ತೆಗೆದುಕೊಂಡುವ ಹೋಗುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿದ್ದಾರೆ. ಕಳೆದ ವಿಧಾನಸಭೆ, ಲೋಕಸಭೆ ಚುನಾವಣೆಯಲ್ಲಿ ಸೋತಿರುವವರ ಜೊತೆ ನಾಳೆ ಸಭೆ ಮಾಡಲಿದ್ದಾರೆ. ಬೆಂಗಳೂರಿನ ಖಾಸಗಿ ಹೋಟೆಲ್​ನಲ್ಲಿ ವಿಜಯೇಂದ್ರ ಸಭೆ ಕರೆದಿದ್ದಾರೆ. ಚುನಾವಣೆಯಲ್ಲಿ ಸೋತಿರೋದು ಒಂದುಕಡೆಯಾದರೆ, ಮುಂದೆ ಯಾವ ರೀತಿಯಲ್ಲಿ ಅಧಿಕಾರಕ್ಕೆ ಬರುವ ನಿಟ್ಟಿನಲ್ಲಿ ಕೆಲಸ ಮಾಡಬೇಕು ಅಂತಾ ಚರ್ಚೆ ನಡೆಸಲಿದ್ದಾರೆ. ಇನ್ನು ಮುಂದೆ ಬರುವ ಜಿಲ್ಲಾ ಪಂಚಾಯ್ತಿ, ತಾಲೂಕು ಪಂಚಾಯ್ತಿ ಚುನಾವಣೆಗಳ ಬಗ್ಗೆಯೂ ಚರ್ಚೆ ಮಾಡುವ ಸಾಧ್ಯತೆ ಇದೆ. ಸರ್ಕಾರದ ವಿರುದ್ಧ 60 ಪರ್ಸೆಂಟೇಜ್ ಕಮಿಷನ್​ ಆರೋಪಿಸಿರುವ ಕೇಂದ್ರ ಸಚಿವ…

Read More

ಹುಬ್ಬಳ್ಳಿ: ಕಾಂಗ್ರೆಸ್ ಬೆಂಬಲಿತ ದಲಿತಪರ ಮತ್ತು ವಿವಿಧ ಸಂಘಟನೆಗಳು ಇಂದು ಹುಬ್ಳಳ್ಳಿ-ಧಾರವಾಡ ಅವಳಿ ನಗರಗಳ ಬಂದ್ ಗೆ ಕರೆ ಹಿನ್ನೆಲೆಯಲ್ಲಿ ಜನಸಾಮಾನ್ಯರು ಪಡಬಾರದ ಕಷ್ಟ ಪಟ್ಟರು. ಕೂಲಿ ನಾಲಿ ಮಾಡಿಕೊಂಡು ಬದುವವರು ಉದ್ಯೋಗ ಹಾಗೂ ಊಟಕ್ಕೋ ಅನ್ನ ಸಿಗದೇ ನಲುಗಿ ಹೋದರು. ಧಾರವಾಡದಲ್ಲಿ ಬೀದಿ ಬದಿ ಇಡ್ಲಿ ಮಾರಾಟ ಮಾಡಿ ಬದುಕುವ ಬಡ ವ್ಯಾಪಾರಿಗೆ ಕಪಾಳ ಮೋಕ್ಷ ಮಾಡಿದ್ದು ಕಾನೂನು ಮಹಾವಿದ್ಯಾಲಯಕ್ಕೆ ನುಗ್ಗಿ ಕಾಲೇಜು ಬಂದ್ ಮಾಡಬೇಕು ಇಲ್ಲದಿದ್ದರೆ ಗಾಜು ಪುಡಿ ಪುಡಿ ಮಾಡುವ ಬೆದರಿಕೆ ಹಾಕಿದ್ದಾರೆ. https://ainlivenews.com/congress-ready-to-fall-in-april-renukacharya/ ಇನ್ನೊಂದು ಕಡೆ ಅಂದೇ ದುಡಿದು ಅಂದೇ ತಿನ್ನುವ ಜನರು ಕೆಲಸಕ್ಕೆ ಹೋಗಲು 10 ರಿಂದ 12 ಕಿಲೋ ಮೀಟರ್ ನಡೆದುಕೊಂಡೇ ಹೋಗಿದ್ದು ಪ್ರತಿಭಟನಾಕಾರರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. .ಇನ್ನು ಒತ್ತಾಯ ಪೂರ್ವಕವಾಗಿ ಅಟೋ ಸಂಚಾರ ಸ್ಥಗಿತ ಮಾಡಿ ಅಟ್ಟ ಹಾಸ ಮೆರೆದರು. ಪೊಲೀಸ್ ಕಮೀಶನರ್ ಹೇಳುವ ಪ್ರಕಾರ ಶಾಲ ಕಾಲೇಜುಗಳು ಸಹ ನಡೆಯುತ್ತಿಲ್ಲ. ಹುಬ್ಬಳ್ಳಿ ನಗರದ ಪ್ರದೇಶವೊಂದರಲ್ಲಿ ಆಟೋರಿಕ್ಷಾವೊಂದು ಸವಾರಿಗಳನ್ನು ಹೇರಿಕೊಂಡು…

Read More

ದಾವಣಗೆರೆ:- ಏಪ್ರಿಲ್ ನಲ್ಲಿ ಕಾಂಗ್ರೆಸ್ ಸರ್ಕಾರ ಬೀಳೋದು ಶತಃ ಸಿದ್ಧ ಎಂದು MP ರೇಣುಕಾಚಾರ್ಯ ಹೇಳಿದ್ದಾರೆ. https://ainlivenews.com/two-children-died-in-a-collision-between-a-ksrtc-bus-and-a-bike/ ಈ ಸಂಬಂಧ ಮಾತನಾಡಿದ ಅವರು, ಡಿನ್ನರ್ ಪಾಲಿಟಿಕ್ಸ್‌ನಲ್ಲಿ ಬ್ಯುಸಿಯಾಗಿರುವ ಕಾಂಗ್ರೆಸ್‌ ಸರ್ಕಾರ ಏಪ್ರಿಲ್‌ನಲ್ಲಿ ಬೀಳಲಿದೆ. ಸೂರ್ಯ ಚಂದ್ರ ಇರುವುದು ಎಷ್ಟು ಸತ್ಯವೋ ಸರ್ಕಾರ ಬೀಳುವುದು ಅಷ್ಟೇ ಸತ್ಯ ಎಂದರು. ಈ ವೇಳೆ, ಗ್ಯಾರಂಟಿ ಹೆಸರು ಹೇಳಿಕೊಂಡು ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಸರ್ಕಾರ ಹಣ ಹೊಂದಿಸಲು ಪರದಾಡುತ್ತಿದೆ. ಶಾಸಕರು ಖರ್ಚಿಗಾಗಿ ಹಾದಿ ಬೀದಿಯಲ್ಲಿ‌ ಕಿತ್ತಾಡುತ್ತಿದ್ದಾರೆ. ಪ್ರತ್ಯೇಕವಾಗಿ ಅವರವರ ಬಣದ ಡಿನ್ನರ್ ಪಾರ್ಟಿ ಮಾಡಿಕೊಳ್ಳುತ್ತಿದೆ‌ ಎಂದು ಕಿಡಿಕಾರಿದ್ದಾರೆ. ರಾಜ್ಯ ಸರ್ಕಾರದಲ್ಲಿ 60% ಕಮಿಷನ್ ದಂಧೆ ನಡೆಯುತ್ತಿದೆ. ಕಮಿಷನ್ ಅರೋಪಕ್ಕೆ ಸಿಎಂ ದಾಖಲೆ ಬಿಡುಗಡೆ ಮಾಡಿ ಎಂದು ಹೇಳಿದ್ದಾರೆ. ಓತಿಕ್ಯಾತಕ್ಕೆ ಬೇಲಿ ಸಾಕ್ಷಿ ಎನ್ನುವಂತಾಗಿದೆ ಇವರು ಹೇಳುವ ಮಾತು. ರಾಜ್ಯದ ಜನರು ನಿಮ್ಮ ಅಂಗಿ ಹರಿತಾರೆ, ವಿಧಾನಸೌಧದ ಮೂರನೇ ಮಹಡಿಯಲ್ಲಿ ಕೂರಲು ಬಿಡುವುದಿಲ್ಲ ಎಂದು ಆಕ್ರೋಶ ಹೊರಹಾಕಿದ್ದಾರೆ.

Read More