Author: AIN Author

ಬೆಂಗಳೂರು:- ಬಂಡೀಪುರದಲ್ಲಿ ರಾತ್ರಿ ವೇಳೆ ಆ್ಯಂಬುಲೆನ್ಸ್​ಗೆ ಮಾತ್ರ ಅವಕಾಶ ನೀಡಲಾಗಿದೆ ಎಂದು ಸಚಿವ ಈಶ್ವರ್ ಖಂಡ್ರೆ ಸ್ಪಷ್ಟನೆ ಕೊಟ್ಟಿದ್ದಾರೆ. https://ainlivenews.com/he-is-a-cheater-star-cricketer-is-very-angry-against-gambhir/ ಈ ಸಂಬಂಧ ಮಾತನಾಡಿದ ಅವರು, ಬಂಡೀಪುರ ಅರಣ್ಯ ಪ್ರದೇಶದೊಳಗೆ ರಾತ್ರಿ ವೇಳೆ ಎರಡು ಬಸ್‌ಗಳು ಮತ್ತು ಆ್ಯಂಬುಲೆನ್ಸ್ ಸೇರಿದಂತೆ ನಿರ್ಬಂಧಿತ ವಾಹನ ಸಂಚಾರಕ್ಕೆ ಅವಕಾಶ ನೀಡಲಾಗುವುದು ಎಂದರು. ಸೂಕ್ಷ್ಮ ವನ್ಯಜೀವಿಗಳ ಆವಾಸ ಸ್ಥಾನವನ್ನು ರಕ್ಷಿಸಲು ಜಾರಿಯಲ್ಲಿರುವ ಕಟ್ಟುನಿಟ್ಟಾದ ರಾತ್ರಿ ಪ್ರಯಾಣ ನಿಷೇಧವನ್ನು ಈ ನಿರ್ಧಾರವು ಸ್ವಲ್ಪ ಸಡಿಲಗೊಳಿಸುತ್ತದೆ ಎಂದಿದ್ದರು. ಆದರೆ, ಇದೀಗ ಬಂಡೀಪುರದಲ್ಲಿ ರಾತ್ರಿ 9 ಗಂಟೆಯವರೆಗೆ ಮಾತ್ರ ವಾಹನ ಸಂಚಾರಕ್ಕೆ ಅನುಮತಿ ನೀಡಲಾಗುತ್ತದೆ. ಬಳಿಕ, ಕೇರಳದಿಂದ ಕರ್ನಾಟಕದ ಕಡೆ 2 ಬಸ್​ಗಳಿಗೆ ಮತ್ತು 1 ಆ್ಯಂಬುಲೆನ್ಸ್​ಗೆ ಮಾತ್ರ ಸಂಚಾರಕ್ಕೆ ಅವಕಾಶ ನೀಡಲಾಗುತ್ತದೆ ಎಂದರು. ಬಂಡೀಪುರದಲ್ಲಿ ರಾತ್ರಿ ವಾಹನ ಸಂಚಾರದ ಬಗ್ಗೆ ಮತ್ತೊಮ್ಮೆ ಚರ್ಚೆಗಳು ಆರಂಭವಾಗಿದೆ. ಸಾಮಾಜಿಕ ಜಾಲತಾಣದಲ್ಲಿ ‘ಸೇವ್ ಬಂಡೀಪುರ’ ಎಂಬ ಅಭಿಯಾನ ಆರಂಭವಾಗಿದೆ. ಕರ್ನಾಟಕ ಸರ್ಕಾರ ಬಂಡೀಪುರ ಅರಣ್ಯದಲ್ಲಿ ರಾತ್ರಿ ವೇಳೆ 2 ಬಸ್‌ಗಳ ಸಂಚಾರಕ್ಕೆ ಅನುಮತಿ…

Read More

ಗಂಭೀರ್​​ ಒಬ್ಬ ಮೋಸಗಾರ ಎಂದು ಮುಖ್ಯ ಕೋಚ್​​ ವಿರುದ್ಧ ಸ್ಟಾರ್​ ಕ್ರಿಕೆಟರ್​​ ಆಕ್ರೋಶ ಹೊರ ಹಾಕಿದ್ದಾರೆ. https://ainlivenews.com/the-husband-told-his-friend-to-sleep-with-his-wife-for-money/ ಟೀಮ್​​ ಇಂಡಿಯಾ ಕ್ಯಾಪ್ಟನ್​​ ರೋಹಿತ್​ ಶರ್ಮಾ ವೃತ್ತಿಜೀವನದ ಬಗ್ಗೆ ಹಲವು ಪ್ರಶ್ನೆಗಳು ಎದ್ದಿವೆ. ಅಷ್ಟೇ ಅಲ್ಲ ಟೀಮ್ ಇಂಡಿಯಾ ಕಳಪೆ ಪ್ರದರ್ಶನಕ್ಕೆ ಹೆಡ್‌ ಕೋಚ್ ಗೌತಮ್ ಗಂಭೀರ್ ಹೊಣೆ ಅನ್ನೋ ಚರ್ಚೆ ಜೋರಾಗಿದೆ. ಈಗ ಟೀಮ್​ ಇಂಡಿಯಾ ಮಾಜಿ ಕ್ರಿಕೆಟರ್​ ಮನೋಜ್ ತಿವಾರಿ ಗೌತಮ್​​ ಗಂಭೀರ್​​ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಗೌತಮ್ ಗಂಭೀರ್​ ಮೋಸಗಾರ. ಅವನು ಹೇಳಿದಂತೆ ಯಾವತ್ತೂ ನಡೆದುಕೊಳ್ಳುವುದೇ ಇಲ್ಲ. ಕ್ಯಾಪ್ಟನ್​ ರೋಹಿತ್​​ ಶರ್ಮಾ ಎಲ್ಲಿಯವರು? ಅಭಿಷೇಕ್ ನಾಯರ್ ಎಲ್ಲಿಂದ ಬಂದವರು? ಎಲ್ಲರೂ ಮುಂಬೈನವರೇ. ಇವರನ್ನು ಮುಂದೆ ತರುವ ಅವಕಾಶ ಸಿಕ್ಕಿತ್ತು. ಜಲಜ್ ಸಕ್ಸೇನಾ ಪರ ಮಾತನಾಡಲು ಯಾರೂ ಇಲ್ಲ. ಅವರು ಉತ್ತಮವಾಗಿ ಕಾರ್ಯನಿರ್ವಹಿಸುತ್ತಾರೆ. ಆದರೆ ಮೌನವಾಗಿರುತ್ತಾರೆ ಎಂದರು. ಬೌಲಿಂಗ್ ಕೋಚ್‌ನಿಂದ ಏನು ಪ್ರಯೋಜನ? ಇವರು ಕೋಚ್ ಏನೇ ಹೇಳಿದ್ರೂ ಒಪ್ಪುತ್ತಾರೆ. ಮೋರ್ನೆ ಮೊರ್ಕೆಲ್ ಲಕ್ನೋ ಸೂಪರ್ ಜೈಂಟ್ಸ್‌ನಿಂದ ಬಂದವರು. ಕೆಕೆಆರ್​​​ನಲ್ಲಿ…

Read More

ನವದೆಹಲಿ:- ಹಣಕ್ಕಾಗಿ ಗೆಳೆಯರಿಗೆ ಹೆಂಡತಿ ಮೇಲೆ ಅತ್ಯಾಚಾರವೆಸಗಲು ಗಂಡ ಹೇಳಿರುವ ಘಟನೆ ಉತ್ತರ ಪ್ರದೇಶದ ಬುಲಂದ್‌ಶಹರ್‌ನಲ್ಲಿ ಜರುಗಿದೆ. https://ainlivenews.com/yatnal-against-waqf-by-vijayendra-meeting-tomorrow-with-defeated-candidates/ ಮಹಿಳೆ ಸ್ಥಳೀಯ ಪೊಲೀಸ್ ಠಾಣೆಯನ್ನು ಸಂಪರ್ಕಿಸಿ ತನ್ನ ಪತಿಯ ಇಬ್ಬರು ಸ್ನೇಹಿತರು ಕಳೆದ ಮೂರು ವರ್ಷಗಳಿಂದ ತನ್ನ ಮೇಲೆ ಅತ್ಯಾಚಾರ ನಡೆಸುತ್ತಿದ್ದಾರೆ ಎಂದು ಹೇಳಿಕೊಂಡಿದ್ದಾರೆ. ತನ್ನ ಗಂಡನ ಗೆಳೆಯರು ಅತ್ಯಾಚಾರ ನಡೆಸುವಾಗ ಅದನ್ನು ವಿಡಿಯೋ ರೆಕಾರ್ಡ್​ ಕೂಡ ಮಾಡಿಕೊಂಡಿದ್ದಾರೆ. ಆ ವಿಡಿಯೋಗಳನ್ನು ತನ್ನ ಗಂಡನಿಗೆ ಕಳುಹಿಸುತ್ತಿದ್ದರು ಎನ್ನಲಾಗಿದೆ. ಈ ತಾನು 1 ತಿಂಗಳ ಗರ್ಭಿಣಿಯಾಗಿದ್ದೇನೆ. ತನ್ನ ಪತಿ ಸೌದಿ ಅರೇಬಿಯಾದಲ್ಲಿ ಕೆಲಸ ಮಾಡುತ್ತಿದ್ದಾನೆ ಎಂದು ಆ ಮಹಿಳೆ ಬಹಿರಂಗಪಡಿಸಿದ್ದಾರೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ. 35 ವರ್ಷದ ಮಹಿಳೆ ಈ ಬಗ್ಗೆ ಗಂಭೀರ ಆರೋಪ ಮಾಡಿದ್ದು, ಹೆಂಡತಿಯನ್ನು ತಮ್ಮ ಜೊತೆ ಲೈಂಗಿಕ ಕ್ರಿಯೆ ನಡೆಸಲು ಅವಕಾಶ ನೀಡಿದ್ದಕ್ಕಾಗಿ ನನ್ನ ಗಂಡನ ಸ್ನೇಹಿತರು ನನ್ನ ಗಂಡನಿಗೆ ಹಣ ನೀಡುತ್ತಿದ್ದಾರೆ ಎಂದು ಕೂಡ ಆರೋಪಿಸಿದ್ದಾರೆ. ಈ ವಿಷಯವನ್ನು ಯಾರೊಂದಿಗೂ ಹೇಳುವಂತಿಲ್ಲ ಎಂದು…

Read More

ಬೆಂಗಳೂರು:- ವಕ್ಫ್ ವಿರುದ್ಧ 3ನೇ ಹಂತದ ಹೋರಾಟಕ್ಕೆ ಯತ್ನಾಳ್ ಬಣ ಸಜ್ಜಾಗಿದ್ದು, ಮತ್ತೊಂದೆಡೆ ಪರಾಜಿತ ಅಭ್ಯರ್ಥಿಗಳೊಂದಿಗೆ ನಾಳೆ ವಿಜಯೇಂದ್ರ ಸಭೆ ನಡೆಸಲಿದ್ದಾರೆ. https://ainlivenews.com/forced-bandh-people-of-twin-cities-are-cursing-trouble-for-those-who-go-to-hospital-and-work/ ವಕ್ಫ್ ಬೋರ್ಡ್​ ವಿರುದ್ಧ ನಮ್ಮ ಹೋರಾಟ ನಿಲ್ಲೋದಿಲ್ಲ, 3ನೇ ಹಂತದ ಹೋರಾಟವನ್ನೂ ಮಾಡುತ್ತೇವೆ ಅಂತಾ ಶಾಸಕ ಯತ್ನಾಳ್ ಕರೆ ಕೊಟ್ಟಿದ್ದಾರೆ. ಇತ್ತಾ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಪಕ್ಷವನ್ನ ಸಂಘಟಿಸುವ ಕೆಲಸದಲ್ಲಿ ಹೆಚ್ಚು ಬ್ಯುಸಿ ಆಗಿದ್ದಾರೆ. ಪಕ್ಷವನ್ನ ಒಗ್ಗಟ್ಟಾಗಿ ತೆಗೆದುಕೊಂಡುವ ಹೋಗುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿದ್ದಾರೆ. ಕಳೆದ ವಿಧಾನಸಭೆ, ಲೋಕಸಭೆ ಚುನಾವಣೆಯಲ್ಲಿ ಸೋತಿರುವವರ ಜೊತೆ ನಾಳೆ ಸಭೆ ಮಾಡಲಿದ್ದಾರೆ. ಬೆಂಗಳೂರಿನ ಖಾಸಗಿ ಹೋಟೆಲ್​ನಲ್ಲಿ ವಿಜಯೇಂದ್ರ ಸಭೆ ಕರೆದಿದ್ದಾರೆ. ಚುನಾವಣೆಯಲ್ಲಿ ಸೋತಿರೋದು ಒಂದುಕಡೆಯಾದರೆ, ಮುಂದೆ ಯಾವ ರೀತಿಯಲ್ಲಿ ಅಧಿಕಾರಕ್ಕೆ ಬರುವ ನಿಟ್ಟಿನಲ್ಲಿ ಕೆಲಸ ಮಾಡಬೇಕು ಅಂತಾ ಚರ್ಚೆ ನಡೆಸಲಿದ್ದಾರೆ. ಇನ್ನು ಮುಂದೆ ಬರುವ ಜಿಲ್ಲಾ ಪಂಚಾಯ್ತಿ, ತಾಲೂಕು ಪಂಚಾಯ್ತಿ ಚುನಾವಣೆಗಳ ಬಗ್ಗೆಯೂ ಚರ್ಚೆ ಮಾಡುವ ಸಾಧ್ಯತೆ ಇದೆ. ಸರ್ಕಾರದ ವಿರುದ್ಧ 60 ಪರ್ಸೆಂಟೇಜ್ ಕಮಿಷನ್​ ಆರೋಪಿಸಿರುವ ಕೇಂದ್ರ ಸಚಿವ…

Read More

ಹುಬ್ಬಳ್ಳಿ: ಕಾಂಗ್ರೆಸ್ ಬೆಂಬಲಿತ ದಲಿತಪರ ಮತ್ತು ವಿವಿಧ ಸಂಘಟನೆಗಳು ಇಂದು ಹುಬ್ಳಳ್ಳಿ-ಧಾರವಾಡ ಅವಳಿ ನಗರಗಳ ಬಂದ್ ಗೆ ಕರೆ ಹಿನ್ನೆಲೆಯಲ್ಲಿ ಜನಸಾಮಾನ್ಯರು ಪಡಬಾರದ ಕಷ್ಟ ಪಟ್ಟರು. ಕೂಲಿ ನಾಲಿ ಮಾಡಿಕೊಂಡು ಬದುವವರು ಉದ್ಯೋಗ ಹಾಗೂ ಊಟಕ್ಕೋ ಅನ್ನ ಸಿಗದೇ ನಲುಗಿ ಹೋದರು. ಧಾರವಾಡದಲ್ಲಿ ಬೀದಿ ಬದಿ ಇಡ್ಲಿ ಮಾರಾಟ ಮಾಡಿ ಬದುಕುವ ಬಡ ವ್ಯಾಪಾರಿಗೆ ಕಪಾಳ ಮೋಕ್ಷ ಮಾಡಿದ್ದು ಕಾನೂನು ಮಹಾವಿದ್ಯಾಲಯಕ್ಕೆ ನುಗ್ಗಿ ಕಾಲೇಜು ಬಂದ್ ಮಾಡಬೇಕು ಇಲ್ಲದಿದ್ದರೆ ಗಾಜು ಪುಡಿ ಪುಡಿ ಮಾಡುವ ಬೆದರಿಕೆ ಹಾಕಿದ್ದಾರೆ. https://ainlivenews.com/congress-ready-to-fall-in-april-renukacharya/ ಇನ್ನೊಂದು ಕಡೆ ಅಂದೇ ದುಡಿದು ಅಂದೇ ತಿನ್ನುವ ಜನರು ಕೆಲಸಕ್ಕೆ ಹೋಗಲು 10 ರಿಂದ 12 ಕಿಲೋ ಮೀಟರ್ ನಡೆದುಕೊಂಡೇ ಹೋಗಿದ್ದು ಪ್ರತಿಭಟನಾಕಾರರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. .ಇನ್ನು ಒತ್ತಾಯ ಪೂರ್ವಕವಾಗಿ ಅಟೋ ಸಂಚಾರ ಸ್ಥಗಿತ ಮಾಡಿ ಅಟ್ಟ ಹಾಸ ಮೆರೆದರು. ಪೊಲೀಸ್ ಕಮೀಶನರ್ ಹೇಳುವ ಪ್ರಕಾರ ಶಾಲ ಕಾಲೇಜುಗಳು ಸಹ ನಡೆಯುತ್ತಿಲ್ಲ. ಹುಬ್ಬಳ್ಳಿ ನಗರದ ಪ್ರದೇಶವೊಂದರಲ್ಲಿ ಆಟೋರಿಕ್ಷಾವೊಂದು ಸವಾರಿಗಳನ್ನು ಹೇರಿಕೊಂಡು…

Read More

ದಾವಣಗೆರೆ:- ಏಪ್ರಿಲ್ ನಲ್ಲಿ ಕಾಂಗ್ರೆಸ್ ಸರ್ಕಾರ ಬೀಳೋದು ಶತಃ ಸಿದ್ಧ ಎಂದು MP ರೇಣುಕಾಚಾರ್ಯ ಹೇಳಿದ್ದಾರೆ. https://ainlivenews.com/two-children-died-in-a-collision-between-a-ksrtc-bus-and-a-bike/ ಈ ಸಂಬಂಧ ಮಾತನಾಡಿದ ಅವರು, ಡಿನ್ನರ್ ಪಾಲಿಟಿಕ್ಸ್‌ನಲ್ಲಿ ಬ್ಯುಸಿಯಾಗಿರುವ ಕಾಂಗ್ರೆಸ್‌ ಸರ್ಕಾರ ಏಪ್ರಿಲ್‌ನಲ್ಲಿ ಬೀಳಲಿದೆ. ಸೂರ್ಯ ಚಂದ್ರ ಇರುವುದು ಎಷ್ಟು ಸತ್ಯವೋ ಸರ್ಕಾರ ಬೀಳುವುದು ಅಷ್ಟೇ ಸತ್ಯ ಎಂದರು. ಈ ವೇಳೆ, ಗ್ಯಾರಂಟಿ ಹೆಸರು ಹೇಳಿಕೊಂಡು ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಸರ್ಕಾರ ಹಣ ಹೊಂದಿಸಲು ಪರದಾಡುತ್ತಿದೆ. ಶಾಸಕರು ಖರ್ಚಿಗಾಗಿ ಹಾದಿ ಬೀದಿಯಲ್ಲಿ‌ ಕಿತ್ತಾಡುತ್ತಿದ್ದಾರೆ. ಪ್ರತ್ಯೇಕವಾಗಿ ಅವರವರ ಬಣದ ಡಿನ್ನರ್ ಪಾರ್ಟಿ ಮಾಡಿಕೊಳ್ಳುತ್ತಿದೆ‌ ಎಂದು ಕಿಡಿಕಾರಿದ್ದಾರೆ. ರಾಜ್ಯ ಸರ್ಕಾರದಲ್ಲಿ 60% ಕಮಿಷನ್ ದಂಧೆ ನಡೆಯುತ್ತಿದೆ. ಕಮಿಷನ್ ಅರೋಪಕ್ಕೆ ಸಿಎಂ ದಾಖಲೆ ಬಿಡುಗಡೆ ಮಾಡಿ ಎಂದು ಹೇಳಿದ್ದಾರೆ. ಓತಿಕ್ಯಾತಕ್ಕೆ ಬೇಲಿ ಸಾಕ್ಷಿ ಎನ್ನುವಂತಾಗಿದೆ ಇವರು ಹೇಳುವ ಮಾತು. ರಾಜ್ಯದ ಜನರು ನಿಮ್ಮ ಅಂಗಿ ಹರಿತಾರೆ, ವಿಧಾನಸೌಧದ ಮೂರನೇ ಮಹಡಿಯಲ್ಲಿ ಕೂರಲು ಬಿಡುವುದಿಲ್ಲ ಎಂದು ಆಕ್ರೋಶ ಹೊರಹಾಕಿದ್ದಾರೆ.

Read More

ರಾಮನಗರ:- ರಾಮನಗರ ತಾಲೂಕಿನ ಅಚ್ಚಲುದೊಡ್ಡಿ ಗ್ರಾಮದ ಬಳಿ ಕೆಎಸ್‌ಆರ್‌ಟಿಸಿ ಬಸ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಎರಡು ಮಕ್ಕಳು ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಜರುಗಿದೆ. https://ainlivenews.com/the-issue-of-land-coffee-crops-destroyed-by-miscreants/ ಘಟನೆಯಲ್ಲಿ ಭೈರಪ್ಪ ಎಂಬವರ ಮಕ್ಕಳಾದ ಪ್ರದೀಪ್, ಭವ್ಯ ಮೃತರು. ಕಳೆದ ಒಂದು ವರ್ಷದ ಹಿಂದೆ ತಮಿಳುನಾಡಿನಿಂದ ಇಬ್ಬರು ಮಕ್ಕಳು ಹಾಗೂ ಕುಟುಂಬಸ್ಥರೊಡನೆ ಇಲ್ಲಿಗೆ ಬಂದು ವಾಸವಾಗಿದ್ದರು. ಇಂದು ಬೆಳಿಗ್ಗೆ ಗೋವಿಂದ ಹಾಗೂ ಮಧು ಎಂಬವರ ಜೊತೆ ತನ್ನ ಇಬ್ಬರು ಮಕ್ಕಳನ್ನು ಬೈಕ್‌ನಲ್ಲಿ ಸಂಬಂಧಿಕರ ಮನೆಗೆ ಕಳುಹಿಸಿದ್ದಾರೆ. ಈ ವೇಳೆ ಅಚ್ಚಲುದೊಡ್ಡಿ ಗ್ರಾಮದ ರಸ್ತೆ ತಿರುವಿನಲ್ಲಿ ಬೈಕ್‌ಗೆ ಬಸ್ ಡಿಕ್ಕಿಯಾಗಿ ಇಬ್ಬರು ಮಕ್ಕಳು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನಿಬ್ಬರ ಸ್ಥಿತಿ ಚಿಂತಾಜನಕವಾಗಿದ್ದು, ಚಿಕಿತ್ಸೆ ಮುಂದುವರೆದಿದೆ. ಇನ್ನೂ ಅಪಘಾತಕ್ಕೆ ರಸ್ತೆ ತಿರುವಿನಲ್ಲಿರುವ ಗಿಡಗೆಂಟೆಗಳನ್ನು ತೆರವು ಮಾಡದಿರುವುದೇ ಕಾರಣ ಎಂದು ಸ್ಥಳೀಯರು ಆರೋಪಿಸಿದ್ದಾರೆ. ತಿರುವಿನಲ್ಲಿ ಎದುರಿಗೆ ಬರುವ ವಾಹನಗಳು ಗೊತ್ತಾಗದೇ ಅಪಘಾತ ಸಂಭವಿಸಿದೆ.

Read More

ಹಾಸನ:- ಬೇಲೂರಿನ ದೋಲನಮನೆ ಗ್ರಾಮದಲ್ಲಿ ಜಮೀನಿನ ವಿಚಾರಕ್ಕೆ ಸಂಬಂಧಿಸಿದ ವಿವಾದದ ಹಿನ್ನೆಲೆ ಕಿಡಿಗೇಡಿಗಳು ಒಂದು ಎಕರೆ ಪ್ರದೇಶದಲ್ಲಿ ಬೆಳೆದಿದ್ದ ಕಾಫಿ ಗಿಡಗಳನ್ನು ನಾಶಪಡಿಸಿದ ಘಟನೆ ಜರುಗಿದೆ. https://ainlivenews.com/naxal-surrender-package-announcement-not-right-yatnal/ ಹತ್ತಾರು ವರ್ಷಗಳಿಂದ ಬೆಳೆದಿದ್ದ ಕಾಫಿ ಗಿಡಗಳನ್ನು ಜೆಸಿಬಿಯಿಂದ ನಾಶ ಮಾಡಲಾಗಿದ್ದು, ಗ್ರಾಮದ ಕುರಂ ಎಂಬವರಿಗೆ ಸೇರಿದ ಕಾಫಿ ತೋಟವನ್ನು ಕಿಡಿಗೇಡಿಗಳು ನಾಶ ಮಾಡಿದ್ದಾರೆ. ಗ್ರಾಮದ ಮೊಸೀನ್, ಜಾಹಿದ್, ಅಫನಾನ್ ಶಾಕೀರ್ ಎಂಬವರು ಕಾಫಿ ತೋಟವನ್ನು ನಾಶ ಮಾಡಿದ್ದಾರೆ ಎಂದು ಕುರುಂ ಆರೋಪಿಸಿದ್ದಾರೆ. ಇನ್ನೂ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಅವರು ಆಗ್ರಹಿಸಿದ್ದಾರೆ.

Read More

ವಿಜಯಪುರ:- ನಕ್ಸಲರು ಶರಣಾಗುವುದಕ್ಕೆ ಪ್ಯಾಕೇಜ್ ಘೋಷಣೆ ಸರಿಯಲ್ಲ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. https://ainlivenews.com/judicial-arrest-for-6-naxalites-who-surrendered-before-siddaramaiah/ ಆರು ನಕ್ಸಲರು ಸಮಾಜದ ಮುಖ್ಯವಾಹಿನಿಗೆ ಬಂದಿರುವ ವಿಚಾರಕ್ಕೆ ಸಂಬಂಧಿಸಿದಂತೆ X ಮಾಡಿರುವ ಯತ್ನಾಳ್, ನಕ್ಸಲರ ಬೇಡಿಕೆಗಳನ್ನು ಆಲಿಸಿ ಅವರನ್ನು ಮುಖ್ಯವಾಹಿನಿಗೆ ತಂದು ಅವರು ಕೂಡ ಸಾಮಾನ್ಯರಂತೆ ಬದುಕುವುದಕ್ಕೆ ಹಕ್ಕಿದೆ. ಆದರೆ, ಶರಣಾಗಲು ಪ್ಯಾಕೇಜ್ ಕೊಡುವುದು ಸರಿಯಾದ ಕ್ರಮವಲ್ಲ. ನಕ್ಸಲರು ಕೈಗೊಂಡ ಹಿಂಸೆಗಳಿಂದ ಅನೇಕ ಪೊಲೀಸ್ ಅಧಿಕಾರಿಗಳು, ಕಾರ್ಯಾಚರಣಾ ತಂಡದ ಸದಸ್ಯರು ಜೀವ ಕಳೆದುಕೊಂಡಿದ್ದಾರೆ. ಯಾರದ್ದೋ ಮೇಲೆ ಕೋಪಕ್ಕೆ ಬಡ ಗ್ರಾಮಸ್ಥರ ಮೇಲೆ, ಪೊಲೀಸರನ್ನು ಬಲಿ ತೆಗೆದುಕೊಂಡವರಿಗೆ ವಿಶೇಷ ಆತಿಥ್ಯ ಕೊಡುವುದು ಖಂಡಿತ ಸರಿಯಾದ ಕ್ರಮವಲ್ಲ. ಅವರು ಮಾಡಿರುವ ಅಪರಾಧಕ್ಕೆ ತಕ್ಕಂತೆ ಶಿಕ್ಷೆ ಅನುಭವಿಸಿ ನಂತರ ಮುಖ್ಯವಾಹಿನಿಗೆ ಬರಲಿ ಎಂದು ಪೋಸ್ಟ್ ಹಾಕಿಕೊಂಡಿದ್ದಾರೆ.

Read More

ಬೆಂಗಳೂರು:- ಮುಖ್ಯಮಂತ್ರಿ ಸಿದ್ದರಾಮಯ್ಯ ಮುಂದೆ ಶರಣಾಗಿದ್ದ 6 ನಕ್ಸಲರಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. https://ainlivenews.com/attention-citizens-power-outage-tomorrow-in-this-area-of-bangalore/ ಮುಂಡಗಾರು ಲತಾ, ಸುಂದರಿ ಕೊತ್ಲೂರು, ವನಜಾಕ್ಷಿ ಬಾಳೆಹೊಳೆ, ಜಿಶಾ, ವಸಂತ್ ಟಿ.ಎನ್, ಮಾರೆಪ್ಪ ಅರೋಲಿ ಅವರನ್ನು ಇಂದು ಚಿಕ್ಕಮಗಳೂರು ಡಿವೈಎಸ್‌ಪಿ ಬಾಲಾಜಿ ಸಿಂಗ್ ಎನ್‌ಐಎ ವಿಶೇಷ ಕೋರ್ಟ್‌ನ ನ್ಯಾಯಾಧೀಶರಾದ ಗಂಗಾಧರ್ ಮುಂದೆ ಹಾಜರುಪಡಿಸಿದ್ದರು. ಆರು ನಕ್ಸಲರಿಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಲಾಗಿದೆ. ಜನವರಿ 30ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಕೋರ್ಟ್​ ಆದೇಶಿಸಿದೆ. ಕೆಲವೇ ಕ್ಷಣಗಳಲ್ಲಿ ನಕ್ಸಲರನ್ನು ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್ ಮಾಡಲಾಗುವುದು. ಶರಣಾದ 6 ನಕ್ಸಲರನ್ನು ಪೊಲೀಸರು ಕೋರ್ಟ್​ಗೆ ಹಾಜರುಪಡಿಸಿದ್ದರು. ಸಿಟಿ ಸಿವಿಲ್ ಕೋರ್ಟ್ ಸಂಕೀರ್ಣದ NIA ಕೋರ್ಟ್​ಗೆ ಹಾಜರು ಪಡಿಸಲಾಗಿತ್ತು. ನಕ್ಸಲರನ್ನು ಕೋರ್ಟ್​ಗೆ ಹಾಜರು ಪಡಿಸಿರುವ ಹಿನ್ನೆಲೆಯಲ್ಲಿ ಖುದ್ದು ಡಿಸಿಪಿ ಹೆಚ್.ಟಿ. ಶೇಖರ್ ನೇತೃತ್ವದಲ್ಲಿ ಬಿಗಿ ಬಂದೋಬಸ್ತ್ ವಹಿಸಲಾಗಿತ್ತು. ನಕ್ಸಲರನ್ನು ಕೋರ್ಟ್​ಗೆ ಹಾಜರುಪಡಿಸುವ ಮುನ್ನ 6 ನಕ್ಸಲರಿಗೆ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್ ನಡೆಸಲಾಗಿತ್ತು. ಅವರ ಆರೋಗ್ಯ ಸ್ಥಿರವಾಗಿದೆ ಎಂದು…

Read More