ಬೆಂಗಳೂರು:- ಮುಡಾ ಹಗರಣ ಕೇಸ್ ಗೆ ಸಂಬಂಧಿಸಿದಂತೆ ಸಿಎಂ ಪತ್ನಿ ಪಾರ್ವತಿ ಸಿದ್ದರಾಮಯ್ಯ ಹಾಗೂ ಸಚಿವ ಭೈರತಿ ಸುರೇಶ್ಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ. ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಹಾಗೂ ಸಚಿವ ಭೈರತಿ ಸುರೇಶ್ಗೆ ಇಡಿ ಸಮನ್ಸ್ಗೆ ನೀಡಿದ್ದ ತಡೆಯಾಜ್ಞೆ ವಿಸ್ತರಣೆಯಾಗಿದೆ. ಇಡಿ ನೀಡಿರುವ ಸಮನ್ಸ್ ರದ್ದುಕೋರಿ ಸಿಎಂ ಪತ್ನಿ ಪಾರ್ವತಿ ಹಾಗೂ ಸಚಿವ ಭೈರತಿ ಸುರೇಶ್ ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ಮುಂದಿನ ವಿಚಾರಣೆಯನ್ನು ಫೆಬ್ರವರಿ 20ಕ್ಕೆ ಮುಂದೂಡಿದೆ. https://ainlivenews.com/do-you-cut-vegetables-on-a-wooden-board-first-give-it-up/ ಹೀಗಾಗಿ ಫೆ.20ರ ರವರೆಗೆ ಇಡಿ ಸಮನ್ಸ್ ಗೆ ತಡೆಯಾಜ್ಞೆ ವಿಸ್ತರಣೆಯಾಗಿದೆ. ಇಡಿ ಪರ ಹೆ್ಚ್ಚುವರಿ ಸಾಲಿಸಿಟರ್ ಜನರಲ್ ಅರವಿಂದ್ ಕಾಮತ್ ವಾದ ಮಂಡಿಸಿದ್ದು, ಇಡಿ ಸಮನ್ಸ್ ಜಾರಿಗೊಳಿಸಿದಾಗ ಹೈಕೋರ್ಟ್ ಮಧ್ಯಪ್ರವೇಶ ಮಾಡಬಾರದು. ಈ ಬಗ್ಗೆ ಸುಪ್ರೀಂಕೋರ್ಟ್ ನ ಇತ್ತೀಚಿನ ತೀರ್ಪು ಇದ್ದು, ಆರೋಪಿಗೆ ಸಮನ್ಸ್ ಜಾರಿಗೊಳಿಸಬೇಕೆಂಬ ನಿಯಮವಿಲ್ಲ ಎಂದರು. ಇಡಿ ತನಿಖಾಧಿಕಾರಿಗಳು ನಮೂನೆಯೊಂದನ್ನು ಕಳುಹಿಸಿದ್ದಾರೆ. ಇದರಲ್ಲಿ ಭೈರತಿ ಕುಟುಂಬದವರು, ಉದ್ಯೋಗಿಗಳು ಇತರರ ವಿವರ ಕೇಳಿದ್ದಾರೆ.…
Author: AIN Author
ತರಕಾರಿ ಹೆಚ್ಚುವುದು ಅಷ್ಟು ಸುಲಭದ ಮಾತಲ್ಲ! ಇದರ ಕಷ್ಟ ಏನೆಂದು ಮನೆಯಲ್ಲಿ ದಿನಾ ಅಡುಗೆ ಮಾಡುವ ಹೆಂಗಸರ ಬಳಿ ಒಮ್ಮೆ ಕೇಳಿ ನೋಡಿ! ಅರೆ ತರಕಾರಿ ಹೆಚ್ಚುವುದು ಎಂದರೆ ಅಷ್ಟೊಂದು ಕಷ್ಟಾನಾ ಎಂದು ನಿಮಗೆ ಅನಿಸಬಹುದು, ಆದರೆ ಬೆಳಗಿನ ಸಮಯದಲ್ಲಿ ಅರ್ಜೆಂಟಾಗಿ ಸಾಂಬಾರ್ ಮಾಡಬೇಕಾದರೆ ಅಥವಾ ತರಕಾರಿ ಬಳಸಿ ಬೆಳಗಿನ ತಿಂಡಿ ರೆಡಿ ಮಾಡಲು,ತರಕಾರಿಗಳನ್ನು ಸರಿಯಾಗಿ ಸ್ವಚ್ಛ ಮಾಡಿ, ಬೇಗಬೇಗನೇ ಇವುಗಳನ್ನು ಹೆಚ್ಚುವುದು ಎಂದರೆ ಅಷ್ಟು ಸುಲಭದ ಮಾತಲ್ಲ! https://ainlivenews.com/kolar-case-worker-caught-in-a-trap-while-accepting-a-bribe/ ತರಕಾರಿ ಅಚ್ಚಲು ಅನೇಕ ಮಂದಿ ಮರದ ಹಲಗೆಯನ್ನು ಬಳಸಲು ಶುರು ಮಾಡಿದ್ದಾರೆ. ಆದರೆ ಈ ಮರದ ಹಲಗೆಯ ಬಳಕೆಯೂ ಒಳ್ಳೆಯದಲ್ಲ ಎಂಬ ಮಾತುಗಳು ಆಗಾಗ ಕೇಳಿ ಬರುತ್ತಿರುತ್ತದೆ. ಅಷ್ಟಕ್ಕೂ ಈ ಮಾತು ಎಷ್ಟು ಸತ್ಯ ಎಂಬುವುದರ ಬಗ್ಗೆ ನಾವಿಂದು ತಿಳಿಯೋಣ ಬನ್ನಿ. ಪ್ಲಾಸ್ಟಿಕ್ ಒಳ್ಳೆಯದಲ್ಲ ಎಂದು ಮರದ ಹಲಗೆಯ ಮೇಲೆ ತರಕಾರಿ ಕಟ್ ಮಾಡುವವರಿಗೆ ಈ ವಿಚಾರ ಕೇಳಿದ್ರೆ ಆಶ್ಚರ್ಯ ಎನಿಸಬಹುದು. ಆದರೆ ನಿಜಕ್ಕೂ ತರಕಾರಿಗಳನ್ನು ಕತ್ತರಿಸಲು ನಾವು ಬಳಸುವ…
ಕೋಲಾರ – ಕೋಲಾರ ಉಪ ವಿಭಾಗಾಧಿಕಾರಿ ಕಚೇರಿಯ ಕೇಸ್ ವರ್ಕರ್ ಲೋಕಾ ಬಲೆಗೆ ಸಿಕ್ಕಿ ಬಿದ್ದಿದ್ದಾರೆ. ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿರುವ ಉಪವಿಭಾಗಾಧಿಕಾರಿ ಕಚೇರಿಯಲ್ಲೇ 20 ಸಾವಿರ ಲಂಚ ಪಡೆಯುವ ವೇಳೆ ಕೇಸ್ ವರ್ಕರ್ ಕೋಮಲ ಲೋಕಾ ಬಲೆಗೆ ಬಿದ್ದಿದ್ದಾರೆ. https://ainlivenews.com/i-think-piyush-goyal-has-no-common-sense-ramalinga-reddy-kidi/ ಉತ್ತನೂರು ಗ್ರಾಮದ ರೈತ ಸುರೇಶ್ ಎಂಬುವರ ಪೌತಿ ಖಾತೆಗೆ 50 ಸಾವಿರ ಲಂಚಕ್ಕೆ ಭೇಡಿಕೆ ಇರಿಸಿ, ಮುಂಗಡವಾಗಿ 20 ಸಾವಿರ ಲಂಚ ಪಡೆಯುವ ವೇಳೆ ಹಣದ ಸಮೇತ ಸಿಕ್ಕಿಬಿದ್ದ ಕೋಮಲರನ್ನು ಕೋಲಾರ ಲೋಕಾಯುಕ್ತ ಇನ್ಸ್ಪೆಕ್ಟರ್ ರೇಣುಕ ಮತ್ತು ಸಿಬ್ಬಂದಿ ಬಂಧಿಸಿದ್ದಾರೆ.
ಬೆಂಗಳೂರು:- ನನ್ನ ಪ್ರಕಾರ ಕೇಂದ್ರ ಸಚಿವ ಪಿಯೂಷ್ ಗೋಯಲ್ಗೆ ಕಾಮನ್ ಸೆನ್ಸ್ ಇಲ್ಲ ಎಂದು ಸಚಿವ ರಾಮಲಿಂಗಾ ರೆಡ್ಡಿ ಆಕ್ರೋಶ ಹೊರ ಹಾಕಿದ್ದಾರೆ. https://ainlivenews.com/the-corpse-breathed-its-last-as-soon-as-the-waiter-asked-if-they-would-like-to-eat-shocked-relatives/ ಈ ಸಂಬಂಧ ಮಾತನಾಡಿದ ಅವರು, ರಾಜ್ಯಗಳು ಹೆಚ್ಚಿನ ತೆರಿಗೆ ಕೇಳೋದು ಸಣ್ಣತನ ಎಂಬ ಕೇಂದ್ರ ಸಚಿವ ಪಿಯೂಷ್ ಗೋಯಲ್ ಹೇಳಿಕೆಯೇ ಸಣ್ಣತನ. ರಾಜ್ಯಗಳು ಹೆಚ್ಚು ತೆರಿಗೆ ಕೇಳಬಾರದು ಎನ್ನುವ ಪಿಯೂಷ್ ಗೋಯಲ್ ಹೇಳಿಕೆಯೇ ಸಣ್ಣತನ. ಪಿಯೂಷ್ ಗೋಯಲ್ಗೆ ಕಾಮನ್ ಸೆನ್ಸ್ ಇಲ್ಲದೇ ಇರುವುದರಿಂದ ಹಾಗೆ ಮಾತನಾಡುತ್ತಾರೆ ಎಂದು ವಾಗ್ದಾಳಿ ನಡೆಸಿದರು. ನಮ್ಮ ರಾಜ್ಯ ಇಷ್ಟು ತೆರಿಗೆ ಕಟ್ಟಿ ನಮ್ಮ ರಾಜ್ಯದ ಅಭಿವೃದ್ಧಿಗೆ ಹಣ ಕೊಡೋದಿಲ್ಲ. ಹೆಚ್ಚು ಕೇಳೋದು ಸರಿಯಲ್ಲ ಅನ್ನೋದು ಸರಿಯಲ್ಲ. ಹೆಚ್ಚು ಪಾಲು ಕೊಡಿ ಅಂತ ಕೇಳೋದು ತಪ್ಪಲ್ಲ. ಪಿಯೂಷ್ ಗೋಯಲ್ ಕರ್ನಾಟಕದವರು ಆಗಿದ್ದರೆ ಏನು ಮಾಡುತ್ತಿದ್ದರು? ಇದೇ ರೀತಿ ಹೇಳ್ತಿದ್ರಾ? ಹಾಗಾದ್ರೆ ನಾವು ಹೆಚ್ಚು ತೆರಿಗೆ ಕಟ್ಟೋದು ತಪ್ಪಾ ಎಂದು ಪ್ರಶ್ನಸಿದರು
ಹಾವೇರಿ:- ಹುಟ್ಟು ಸಾವು ಅನ್ನೋದು ಬ್ರಹ್ಮ ಲಿಖಿತ. ಇಲ್ಲಿ ದೇವರ ಅಪ್ಪಣೆ ಇಲ್ಲದೇ ನಾವು ಜನಿಸಲು ಸಾಧ್ಯವಿಲ್ಲ ಹಾಗೆಯೇ ಸಾಯಲು ಸಾಧ್ಯವಿಲ್ಲ. ಹಾಗೆಯೇ ಇಲ್ಲಿನ ಶಿಗ್ಗಾಂವಿ ತಾಲೂಕಿನ ಬಂಕಾಪುರ ಗ್ರಾಮದಲ್ಲಿ ವಿಚಿತ್ರ ಘಟನೆಯೊಂದು ನಡೆದಿದೆ. https://ainlivenews.com/cockroaches-found-in-food-served-to-police-during-aero-show-rehearsal-dcp-inspects/ 45 ವರ್ಷದ ಬಿಷ್ಟಪ್ಪ ಗುಡಿಮನಿ ಎಂಬವರು ಕಳೆದ ಮೂರು-ನಾಲ್ಕು ದಿನಗಳ ಹಿಂದೆ ಬಿಳಿ ಕಾಮಾಲೆ ರೋಗದಿಂದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ವೈದ್ಯರು ಬಿಷ್ಟಪ್ಪ ಗುಡಿಮನಿ ಮೃತಪಟ್ಟಿದ್ದಾರೆ ಶವವನ್ನು ಊರಿಗೆ ತೆಗೆದುಕೊಂಡು ಹೋಗಿ ಎಂದು ಕುಟುಂಬಸ್ಥರಿಗೆ ತಿಳಿಸಿದ್ದರು. ಕುಟುಂಬಸ್ಥರು ಮೃತ ಬಿಷ್ಟಪ್ಪ ಗುಡಿಮನಿ ಶವ ತೆಗೆದುಕೊಂಡು ಊರಿಗೆ ವಾಪಸು ಬರುತ್ತಿದ್ದ ವೇಳೆ, ದಾರಿಯಲ್ಲಿ ಅವರಿಗೆ ಇಷ್ಟವಾದ ಡಾಬಾ ಕಂಡಿದೆ. ಆಗ, ಕುಟುಂಬಸ್ಥರು ಡಾಬಾ ಬಂತು ನೋಡು, ಊಟ ಮಾಡುತ್ತೀಯಾ ಎಂದು ಗೋಳಾಡಿ ಕಣ್ಣೀರಿಟ್ಟಾಗ, ಮೃತ ಬಿಷ್ಟಪ್ಪ ಗುಡಿಮನಿ ಉಸಿರಾಡಿದ್ದಾರೆ. ಬಳಿಕ, ಬಿಷ್ಟಪ್ಪ ಗುಡಿಮನಿಗೆ ಶಿಗ್ಗಾಂವಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ, ಸದ್ಯ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ
ಬೆಂಗಳೂರು:- ಭಾನುವಾರ ಏರೋ ಇಂಡಿಯಾ ಏರ್ ಶೋಗೆ ಸಿದ್ಧತೆ ನಡೆಯುತ್ತಿದ್ದು, ಭದ್ರತೆಗೆ ನಿಯೋಜಿಸಿದ್ದ ಪೊಲೀಸರಿಗೆ ನೀಡಿದ್ದ ಊಟದಲ್ಲಿ ಜಿರಳೆ ಪತ್ತೆಯಾಗಿತ್ತು. ಈ ಹಿನ್ನೆಲೆ ಇಂದು ಆಹಾರ ಪರಿಶೀಲಿಸಿ ಖುದ್ದು ಡಿಸಿಪಿ ಸಹ ಉಪಹಾರ ಸೇವನೆ ಮಾಡಿದ್ದಾರೆ. https://ainlivenews.com/kumbh-mela-remember-taking-a-holy-bath-in-the-sangam-prem/ ಈಶಾನ್ಯ ವಿಭಾಗದ ಡಿಸಿಪಿ ವಿ.ಜೆ.ಸಜಿತ್ ರಿಂದ ಸಿಬ್ಬಂದಿ ಉಪಹಾರ ಸೇವನೆ ಮಾಡಿದ್ದಾರೆ. ನಿನ್ನೆ ಬೆಳಗಿನ ತಿಂಡಿಯಲ್ಲಿ ಜಿರಳೆ ಪತ್ತೆಯಾಗಿತ್ತು. ಭದ್ರತೆಗೆ ನಿಯೋಜಿಸಲಾಗಿದ್ದ ಸಿಬ್ಬಂದಿಗೆ ಯಲಹಂಕ ಪೊಲೀಸ್ ಠಾಣೆವತಿಯಿಂದ ಊಟದ ವ್ಯವಸ್ಥೆ ಮಾಡಿಸಲಾಗಿತ್ತು. ಮಧ್ಯಾಹ್ನ ಪಾರ್ಸೆಲ್ ಬಾಕ್ಸ್ ತೆರೆದಾಗ ಓರ್ವ ಪೊಲೀಸ್ ಅಧಿಕಾರಿಗೆ ಊಟದಲ್ಲಿ ಜಿರಳೆ ಸಿಕ್ಕಿದೆ. ಜಿರಳೆ ಕಂಡು ಪೊಲೀಸರು ಊಟ ಮಾಡದೆ ಬಾಕ್ಸ್ ಅನ್ನು ಹಾಗೇ ಬಿಟ್ಟು ತೆರಳಿದ್ದಾರೆ. ಗುಣಮಟ್ಟದ ಊಟ ನೀಡದಿದ್ದಕ್ಕೆ ಪೊಲೀಸ್ ಸಿಬ್ಬಂದಿ ಬೇಸರ ವ್ಯಕ್ತಪಡಿಸಿದ್ದಾರೆ. ಇನ್ನು, ಎರಡು ವರ್ಷಗಳ ಹಿಂದೆ 2023ರಲ್ಲೂ ಇಂತಹದ್ದೇ ಘಟನೆ ನಡೆದಿತ್ತು. 2023ರ ಸೆಪ್ಟೆಂಬರ್ 26ರಂದು ವಿವಿಧ ಸಂಘಟನೆಗಳು ಬೆಂಗಳೂರು ಬಂದ್ಗೆ ಕರೆ ಕೊಟ್ಟಿದ್ದವು. ಈ ಹಿನ್ನೆಲೆಯಲ್ಲಿ ಅಂದು ಬೆಳಗ್ಗೆ ಯಾರ್ಡ್ ಪೊಲೀಸ್…
ಕನ್ನಡದ ನಟ ‘ನೆನೆಪಿರಲಿ’ ಪ್ರೇಮ್ ಅವರು ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದ್ದಾರೆ. ಈ ಕುರಿತು ನಟ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಕೂಡ ಹಂಚಿಕೊಂಡು ಮಾಹಿತಿ ನೀಡಿದ್ದಾರೆ. https://ainlivenews.com/dkshis-holy-bath-at-the-maha-kumbh-mela-this-is-how-yatnal-made-a-satire/ ಕುಂಭ ಮೇಳ ಪುಣ್ಯ ಸ್ನಾನ. ಎಲ್ಲರ ಬಾಳು ಅಮೃತಮಯವಾಗಿರಲಿ’ ಎಂದು ಪ್ರೇಮ್ ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ಇದರೊಂದಿಗೆ ಪುಣ್ಯ ಸ್ನಾನದ ಫೋಟೋ ಕೂಡ ನಟ ಹಂಚಿಕೊಂಡಿದ್ದಾರೆ. ಇನ್ನೂ ಇತ್ತೀಚೆಗೆ ಕನ್ನಡದ ಕಲಾವಿದರಾದ ರಾಜ್ ಬಿ ಶೆಟ್ಟಿ, ನಿರೂಪಕಿ ಅನುಶ್ರೀ, ಕೆಜಿಎಫ್ ನಟಿ ಶ್ರೀನಿಧಿ ಶೆಟ್ಟಿ, ಬಿಗ್ ಬಾಸ್ ಸಾನ್ಯ ಅಯ್ಯರ್ ಸೇರಿದಂತೆ ಅನೇಕರು ಮಹಾ ಕುಂಭಮೇಳದಲ್ಲಿ ಭಾಗಿಯಾಗಿದ್ದರು.
ನವದೆಹಲಿ:- ಮಹಾ ಕುಂಭಮೇಳದಲ್ಲಿ ಡಿಕೆಶಿ ಪುಣ್ಯಸ್ನಾನ ಮಾಡಿರುವ ವಿಚಾರವಾಗಿ ಬಸನಗೌಡ ಪಾಟೀಲ್ ಯತ್ನಾಳ್ ಪ್ರತಿಕ್ರಿಯೆ ಕೊಟ್ಟಿದ್ದಾರೆ. https://ainlivenews.com/pm-modi-embarks-on-three-day-tour-first-visit-to-france/ ಈ ಸಂಬಂಧ ಮಾತನಾಡಿದ ಅವರು, ಅವರವರ ವೈಯಕ್ತಿಕ ಭಕ್ತಿಯ ಬಗ್ಗೆ ಮಾತನಾಡುವುದು ಸೂಕ್ತವಲ್ಲ. ಅವರು ಮಹಾ ಕುಂಭಮೇಳದಲ್ಲಿ ಪುಣ್ಯಸ್ನಾನ ಮಾಡಿದ್ದಾರೆ. ಎಷ್ಟು ಪಾಪ ಕಳೆದು ಹೋಯಿತು ಎಂದು ಮಲ್ಲಿಕಾರ್ಜುನ ಖರ್ಗೆ ವರದಿ ಪಡೆಯಬೇಕು. ಹಿಂದೂಗಳೇ ವೋಟ್ ಹಾಕೋದು, ಕಡೆಗೆ ಮುಸ್ಲಿಮರಿಂದ ಗೆದ್ದೆವು ಅಂತ ಹೇಳುತ್ತಾರೆ ಎಂದು ವ್ಯಂಗ್ಯವಾಡಿದರು. ಯತ್ನಾಳ್ ಟೀಂ ದೆಹಲಿಗೆ ತೆರಳಿರುವ ಬಗ್ಗೆ ಪ್ರತಿಕ್ರಿಯಿಸಿ, ನಾವು ದೆಹಲಿಗೆ ಸೋಮಣ್ಣ ಮನೆ ಪೂಜೆ ಸಲುವಾಗಿ ಬಂದಿದ್ದೇವೆ. ಮುಂದೆ ಏನಾಗುತ್ತದೆ ಎಂದು ನಮಗೆ ಗೊತ್ತಿಲ್ಲ. ಎಲ್ಲರಿಗೂ ಬನ್ನಿ ಎಂದು ಆಹ್ವಾನ ನೀಡಿದ್ದರು ಹಾಗಾಗಿ ಬಂದಿದ್ದೇವೆ. ಸೋಮಣ್ಣನವರು ನಮಗೆ ಆತ್ಮೀಯರಿದ್ದಾರೆ. ರೈಲ್ವೇ ಮಂತ್ರಿಗಳಾದ ಮೇಲೆ ನಮ್ಮ ಕೆಲಸ ಮಾಡಿಕೊಟ್ಟಿದ್ದಾರೆ ಎಂದರು
ನವದೆಹಲಿ:- ಪ್ರಧಾನಿ ನರೇಂದ್ರ ಮೋದಿ ಅವರು ಮೂರು ದಿನಗಳ ಕಾಲ ಪ್ರವಾಸ ಕೈಗೊಂಡಿದ್ದಾರೆ. ಮೊದಲು ಫ್ರಾನ್ಸ್ ಗೆ ಭೇಟಿ ಕೊಡಲಿದ್ದಾರೆ. ಸಂಜೆ ವೇಳೆಗೆ ಫ್ರಾನ್ಸ್ ತಲುಪಲಿರುವ ಫ್ರಾನ್ಸ್ ಅಧ್ಯಕ್ಷ ಇಮ್ಯಾನುಯೆಲ್ ಮ್ಯಾಕ್ರನ್ ಅವರೊಂದಿಗೆ 3ನೇ ಆವೃತ್ತಿಯ ಕೃತಕ ಬುದ್ಧಿಮತ್ತೆ ಆ್ಯಕ್ಷನ್ ಶೃಂಗಸಭೆಯ ಸಹ-ಅಧ್ಯಕ್ಷತೆಯನ್ನು ಪ್ರಧಾನಿ ಮೋದಿ ವಹಿಸಲಿದ್ದಾರೆ. https://ainlivenews.com/president-draupadi-murmu-takes-holy-dip-at-the-maha-kumbh-mela/ ಇನ್ನು ತಮ್ಮ ಫ್ರಾನ್ಸ್ ಭೇಟಿಯನ್ನು ʻಭಾರತ ಮತ್ತು ಫ್ರಾನ್ಸ್ ನಡುವಿನ ಸಂಬಂಧ ಬಲಪಡಿಸುವ ಪ್ರಮುಖ ಕ್ಷಣ..ʼ ಎಂದು ಬಣ್ಣಿಸಿರುವ ಪ್ರಧಾನಿ ಮೋದಿ, AI ಮತ್ತು ಪರಮಾಣು ಶಕ್ತಿ ಸೇರಿದಂತೆ ಪ್ರಮುಖ ವಿಷಯಗಳನ್ನು ಚರ್ಚಿಸುವುದಾಗಿ ಹೇಳಿದ್ದಾರೆ. ಫ್ರಾನ್ಸ್ ಪ್ರವಾಸದ ಬಳಿಕ ಫೆಬ್ರವರಿ 12ರಂದು ಎರಡು ದಿನಗಳ ಪ್ರವಾಸಕ್ಕಾಗಿ ಪ್ರಧಾನಿ ಮೋದಿ ಅಮೆರಿಕಕ್ಕೆ ತೆರಳಲಿದ್ದಾರೆ. ಅಮೆರಿಕದಲ್ಲಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗೆ ಮಾತುಕತೆ ನಡೆಸಲಿರುವ ಪ್ರಧಾನಿ ಮೋದಿ, ಭಾರತ-ಅಮೆರಿಕ ದ್ವಿಪಕ್ಷೀಯ ಸಂಬಂಧ ವೃದ್ಧಿ ಕುರಿತು ಚರ್ಚಿಸಲಿದ್ದಾರೆ. ಅಮೆರಿಕದ 47ನೇ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್ 2ನೇ ಬಾರಿಗೆ ಅಧಿಕಾರ ಸ್ವೀಕರಿಸಿದ ಬಳಿಕ ಇದು ಪ್ರಧಾನಿ ಮೋದಿ…
ಪ್ರಯಾಗ್ರಾಜ್:- ಇಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪುಣ್ಯಸ್ನಾನ ಮಾಡಿದ್ದು, ದೇಶದ ಒಳಿತಿಗಾಗಿ ಪ್ರಾರ್ಥನೆ ಮಾಡಿದ್ದಾರೆ. https://ainlivenews.com/metro-ticket-prices-are-expensive-transport-minister-says-passenger-numbers-may-decrease/ ಪ್ರಯಾಗ್ರಾಜ್ಗೆ ಬಂದಿಳಿದ ದ್ರೌಪದಿ ಮುರ್ಮು ಅವರನ್ನು ಉತ್ತರ ಪ್ರದೇಶ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಹಾಗೂ ಸಿಎಂ ಯೋಗಿ ಆದಿತ್ಯನಾಥ್ ಬರಮಾಡಿಕೊಂಡರು ರಾಷ್ಟçಪತಿ ದ್ರೌಪದಿ ಮುರ್ಮು 8 ಗಂಟೆಗಳ ಕಾಲ ಪ್ರಯಾಗ್ರಾಜ್ನಲ್ಲಿ ಸಮಯ ಕಳೆಯಲಿದ್ದಾರೆ. ಅಕ್ಷಯವತ್ ಹಾಗೂ ಹನುಮಾನ್ ಮಂದಿರಕ್ಕೆ ತೆರಳಿ ದೇವರ ದರ್ಶನ ಪಡೆದು ಪೂಜೆ ಸಲ್ಲಿಸಲಿದ್ದಾರೆ. ಬಳಿಕ ಡಿಜಿಟಲ್ ಕುಂಭ ಅನುಭವ ಕೇಂದ್ರಕ್ಕೆ ಭೇಟಿ ನೀಡಲಿದ್ದಾರೆ ಎಂದು ರಾಷ್ಟ್ರಪತಿ ಭವನ ತಿಳಿಸಿದೆ.