ನವದೆಹಲಿ:- ಮಹಾ ಕುಂಭಮೇಳದಲ್ಲಿ ಡಿಕೆಶಿ ಪುಣ್ಯಸ್ನಾನ ಮಾಡಿರುವ ವಿಚಾರವಾಗಿ ಬಸನಗೌಡ ಪಾಟೀಲ್ ಯತ್ನಾಳ್ ಪ್ರತಿಕ್ರಿಯೆ ಕೊಟ್ಟಿದ್ದಾರೆ. https://ainlivenews.com/pm-modi-embarks-on-three-day-tour-first-visit-to-france/ ಈ ಸಂಬಂಧ ಮಾತನಾಡಿದ ಅವರು, ಅವರವರ ವೈಯಕ್ತಿಕ ಭಕ್ತಿಯ ಬಗ್ಗೆ ಮಾತನಾಡುವುದು ಸೂಕ್ತವಲ್ಲ. ಅವರು ಮಹಾ ಕುಂಭಮೇಳದಲ್ಲಿ ಪುಣ್ಯಸ್ನಾನ ಮಾಡಿದ್ದಾರೆ. ಎಷ್ಟು ಪಾಪ ಕಳೆದು ಹೋಯಿತು ಎಂದು ಮಲ್ಲಿಕಾರ್ಜುನ ಖರ್ಗೆ ವರದಿ ಪಡೆಯಬೇಕು. ಹಿಂದೂಗಳೇ ವೋಟ್ ಹಾಕೋದು, ಕಡೆಗೆ ಮುಸ್ಲಿಮರಿಂದ ಗೆದ್ದೆವು ಅಂತ ಹೇಳುತ್ತಾರೆ ಎಂದು ವ್ಯಂಗ್ಯವಾಡಿದರು. ಯತ್ನಾಳ್ ಟೀಂ ದೆಹಲಿಗೆ ತೆರಳಿರುವ ಬಗ್ಗೆ ಪ್ರತಿಕ್ರಿಯಿಸಿ, ನಾವು ದೆಹಲಿಗೆ ಸೋಮಣ್ಣ ಮನೆ ಪೂಜೆ ಸಲುವಾಗಿ ಬಂದಿದ್ದೇವೆ. ಮುಂದೆ ಏನಾಗುತ್ತದೆ ಎಂದು ನಮಗೆ ಗೊತ್ತಿಲ್ಲ. ಎಲ್ಲರಿಗೂ ಬನ್ನಿ ಎಂದು ಆಹ್ವಾನ ನೀಡಿದ್ದರು ಹಾಗಾಗಿ ಬಂದಿದ್ದೇವೆ. ಸೋಮಣ್ಣನವರು ನಮಗೆ ಆತ್ಮೀಯರಿದ್ದಾರೆ. ರೈಲ್ವೇ ಮಂತ್ರಿಗಳಾದ ಮೇಲೆ ನಮ್ಮ ಕೆಲಸ ಮಾಡಿಕೊಟ್ಟಿದ್ದಾರೆ ಎಂದರು
Author: AIN Author
ನವದೆಹಲಿ:- ಪ್ರಧಾನಿ ನರೇಂದ್ರ ಮೋದಿ ಅವರು ಮೂರು ದಿನಗಳ ಕಾಲ ಪ್ರವಾಸ ಕೈಗೊಂಡಿದ್ದಾರೆ. ಮೊದಲು ಫ್ರಾನ್ಸ್ ಗೆ ಭೇಟಿ ಕೊಡಲಿದ್ದಾರೆ. ಸಂಜೆ ವೇಳೆಗೆ ಫ್ರಾನ್ಸ್ ತಲುಪಲಿರುವ ಫ್ರಾನ್ಸ್ ಅಧ್ಯಕ್ಷ ಇಮ್ಯಾನುಯೆಲ್ ಮ್ಯಾಕ್ರನ್ ಅವರೊಂದಿಗೆ 3ನೇ ಆವೃತ್ತಿಯ ಕೃತಕ ಬುದ್ಧಿಮತ್ತೆ ಆ್ಯಕ್ಷನ್ ಶೃಂಗಸಭೆಯ ಸಹ-ಅಧ್ಯಕ್ಷತೆಯನ್ನು ಪ್ರಧಾನಿ ಮೋದಿ ವಹಿಸಲಿದ್ದಾರೆ. https://ainlivenews.com/president-draupadi-murmu-takes-holy-dip-at-the-maha-kumbh-mela/ ಇನ್ನು ತಮ್ಮ ಫ್ರಾನ್ಸ್ ಭೇಟಿಯನ್ನು ʻಭಾರತ ಮತ್ತು ಫ್ರಾನ್ಸ್ ನಡುವಿನ ಸಂಬಂಧ ಬಲಪಡಿಸುವ ಪ್ರಮುಖ ಕ್ಷಣ..ʼ ಎಂದು ಬಣ್ಣಿಸಿರುವ ಪ್ರಧಾನಿ ಮೋದಿ, AI ಮತ್ತು ಪರಮಾಣು ಶಕ್ತಿ ಸೇರಿದಂತೆ ಪ್ರಮುಖ ವಿಷಯಗಳನ್ನು ಚರ್ಚಿಸುವುದಾಗಿ ಹೇಳಿದ್ದಾರೆ. ಫ್ರಾನ್ಸ್ ಪ್ರವಾಸದ ಬಳಿಕ ಫೆಬ್ರವರಿ 12ರಂದು ಎರಡು ದಿನಗಳ ಪ್ರವಾಸಕ್ಕಾಗಿ ಪ್ರಧಾನಿ ಮೋದಿ ಅಮೆರಿಕಕ್ಕೆ ತೆರಳಲಿದ್ದಾರೆ. ಅಮೆರಿಕದಲ್ಲಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗೆ ಮಾತುಕತೆ ನಡೆಸಲಿರುವ ಪ್ರಧಾನಿ ಮೋದಿ, ಭಾರತ-ಅಮೆರಿಕ ದ್ವಿಪಕ್ಷೀಯ ಸಂಬಂಧ ವೃದ್ಧಿ ಕುರಿತು ಚರ್ಚಿಸಲಿದ್ದಾರೆ. ಅಮೆರಿಕದ 47ನೇ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್ 2ನೇ ಬಾರಿಗೆ ಅಧಿಕಾರ ಸ್ವೀಕರಿಸಿದ ಬಳಿಕ ಇದು ಪ್ರಧಾನಿ ಮೋದಿ…
ಪ್ರಯಾಗ್ರಾಜ್:- ಇಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪುಣ್ಯಸ್ನಾನ ಮಾಡಿದ್ದು, ದೇಶದ ಒಳಿತಿಗಾಗಿ ಪ್ರಾರ್ಥನೆ ಮಾಡಿದ್ದಾರೆ. https://ainlivenews.com/metro-ticket-prices-are-expensive-transport-minister-says-passenger-numbers-may-decrease/ ಪ್ರಯಾಗ್ರಾಜ್ಗೆ ಬಂದಿಳಿದ ದ್ರೌಪದಿ ಮುರ್ಮು ಅವರನ್ನು ಉತ್ತರ ಪ್ರದೇಶ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಹಾಗೂ ಸಿಎಂ ಯೋಗಿ ಆದಿತ್ಯನಾಥ್ ಬರಮಾಡಿಕೊಂಡರು ರಾಷ್ಟçಪತಿ ದ್ರೌಪದಿ ಮುರ್ಮು 8 ಗಂಟೆಗಳ ಕಾಲ ಪ್ರಯಾಗ್ರಾಜ್ನಲ್ಲಿ ಸಮಯ ಕಳೆಯಲಿದ್ದಾರೆ. ಅಕ್ಷಯವತ್ ಹಾಗೂ ಹನುಮಾನ್ ಮಂದಿರಕ್ಕೆ ತೆರಳಿ ದೇವರ ದರ್ಶನ ಪಡೆದು ಪೂಜೆ ಸಲ್ಲಿಸಲಿದ್ದಾರೆ. ಬಳಿಕ ಡಿಜಿಟಲ್ ಕುಂಭ ಅನುಭವ ಕೇಂದ್ರಕ್ಕೆ ಭೇಟಿ ನೀಡಲಿದ್ದಾರೆ ಎಂದು ರಾಷ್ಟ್ರಪತಿ ಭವನ ತಿಳಿಸಿದೆ.
ಬೆಂಗಳೂರು:- ಮೆಟ್ರೋ ಟಿಕೆಟ್ ದರ ದುಬಾರಿ ಆಗಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ರಾಮಲಿಂಗಾರೆಡ್ಡಿ ಪ್ರತಿಕ್ರಿಯೆ ನೀಡಿದ್ದಾರೆ. https://ainlivenews.com/kionics-vendors-explode-again-call-for-protest-against-drinking-poison/ ಈ ಸಂಬಂಧ ಮಾತನಾಡಿದ ಅವರು, ಮೆಟ್ರೋ ಟಿಕೆಟ್ ದರ ಏರಿಕೆಯಿಂದ ಪ್ರಯಾಣಿಕರ ಸಂಖ್ಯೆ ಕಡಿಮೆ ಆಗುತ್ತೆ. ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರಗಳು ಯೋಚನೆ ಮಾಡಬೇಕು. ಮೆಟ್ರೋ ಅಂದರೆ ಜಾಸ್ತಿ ಅನುದಾನ ಕೊಡುತ್ತಾರೆ. ಸಾವಿರಾರು ಕೋಟಿ ಖರ್ಚು ಮಾಡುತ್ತಾರೆ. ಮೆಟ್ರೋದಲ್ಲಿ 8-9 ಲಕ್ಷ ಜನ ಮಾತ್ರ ನಿತ್ಯ ಓಡಾಟ ಮಾಡುತ್ತಾರೆ. ಮೆಟ್ರೋ ಜಾಲ ಜಾಸ್ತಿ ವಿಸ್ತರಣೆ ಆಗಲಿ. ಆದರೆ ಮೆಟ್ರೋ ಕೊಡುವ ಅಷ್ಟು ಅನುದಾನ ಬಿಎಂಟಿಸಿಗೂ ಕೊಡಲಿ. ಬಿಎಂಟಿಸಿಯಲ್ಲಿ ನಿತ್ಯ 40 ಲಕ್ಷ ಜನ ಓಡಾಟ ಮಾಡುತ್ತಾರೆ. ಬಿಎಂಟಿಸಿಗೆ ಹೆಚ್ಚು ಆದ್ಯತೆ ಕೊಟ್ಟರೆ ಜನಕ್ಕೆ ಅನುಕೂಲ ಆಗುತ್ತದೆ ಎಂದರು. ಮೆಟ್ರೋ ಟಿಕೆಟ್ ದರ ಏರಿಕೆಗೆ ಏನು ಕಾರಣ ಅಂದರೆ ಬಿಎಂಟಿಸಿ, ಬಿಡಬ್ಲ್ಯೂಎಸ್ಎಸ್ಬಿ, ಬಿಡಿಎ, ಕೆಇಬಿ ಎಲ್ಲಾ ಸಂಸ್ಥೆಗಳು ಉಳಿಬೇಕು. ಈ ಸಂಸ್ಥೆಗಳು ಲಾಭ ಮಾಡೋದು ಬೇಡ. ಕೊನೆ ಪಕ್ಷ ಲಾಭ-ನಷ್ಟ ಇಲ್ಲದೇ ಸಮವಾಗಿ…
ಬೆಂಗಳೂರು:- ಕಿಯೋನಿಕ್ಸ್ ವೆಂಡರ್ಸ್ ಮತ್ತೆ ಸರ್ಕಾರದ ವಿರುದ್ಧ ಸಿಡಿದೆದ್ದಿದ್ದು, ವಿಷ ಕುಡಿಯುವ ಪ್ರತಿಭಟನೆಗೆ ಕರೆ ಕೊಟ್ಟಿದ್ದಾರೆ. https://ainlivenews.com/sslc-puc-degree-passed-then-here-is-a-great-job/ ಇಲ್ಲಿನ ಕುಮಾರ ಪಾರ್ಕ್ ರಸ್ತೆಯಲ್ಲಿರುವ ಕಿಯೋನಿಕ್ಸ್ ಕಚೇರಿ ಎದುರು ಭಾರೀ ಹೈಡ್ರಾಮಾ ನಡೆದಿದ್ದು, ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ವಿಷ ಕುಡಿಯುವ ಪ್ರತಿಭಟನೆಗೆ ಕರೆ ಕೊಟ್ಟಿದ್ದಾರೆ. ಈಗಾಗಲೇ ಬಾಕಿ ಹಣ ಪಾವತಿ ಮಾಡುವಂತೆ ಒತ್ತಾಯಿಸಿ ಈ ಹಿಂದೆ ದಯಾಮರಣ ಕೋರಿದ್ದ ಕಿಯೋನಿಕ್ಸ್ ವೆಂಡರ್ಸ್ ಇದೀಗ ವಿಷ ಕುಡಿಯುವ ಪ್ರತಿಭಟನೆಗೆ ಕರೆ ಕೊಟ್ಟಿದ್ದರು. ಅಲ್ಲದೇ ಸಚಿವ ಪ್ರಿಯಾಂಕ್ ಖರ್ಗೆ, ಕಿಯೋನಿಕ್ಸ್ ಅಧ್ಯಕ್ಷ ಶರತ್ ಬಚ್ಚೇಗೌಡ ಹೆಸರಿನಲ್ಲಿ ಡೆತ್ ನೋಟ್ ಸಹ ಬರೆದುಕೊಂಡಿದ್ದರು. ಬಾಕಿ ಬಿಲ್ ಪಾವತಿ ಮಾಡುವುದಾಗಿ ಈ ಹಿಂದೆ ಕಿಯೋನಿಕ್ಸ್ ಅಧ್ಯಕ್ಷ ಶರತ್ ಬಚ್ಚೇಗೌಡ ಭರವಸೆ ಕೊಟ್ಟಿದ್ದರು. ಇದೀಗ ವಿಳಂಭ ಧೋರಣೆ ಖಂಡಿಸಿ ಇಂದು ಪ್ರತಿಭಟನೆ ಕರೆ ಕೊಟ್ಟಿದ್ದಾರೆ. ಕಚೇರಿಯ ಮುಂಭಾಗ ವೆಂಡರ್ಸ್ ಪ್ರತಿಭಟನೆ ಬೆನ್ನಲ್ಲೇ ಬಿಗಿ ಪೊಲೀಸ್ ಭದ್ರತೆ ನಿಯೋಜಿಸಲಾಗಿತ್ತು. ಈ ವೇಳೆ ವೆಂಡರ್ಸ್ ಕಚೇರಿಗೆ ಬರುತ್ತಿದ್ದ ವ್ಯಕ್ತಿಯಯನ್ನ ಪೊಲೀಸರು ವಶಕ್ಕೆ…
ಬೆಂಗಳೂರು: ನೀವು ನೌಕರಿ ( Job ) ಹುಡುಕುತ್ತಾ ಇದ್ದೀರಾ. SSLC / PUC ಯಾವುದೇ ಪದವಿ ಆಗಿದ್ರೆ ಕೂಡಲೆ ಇಲ್ಲಿ ಭೇಟಿ ಕೊಡಿ. ಇಲ್ಲಿ ವಾಕ್ ಇನ್ ಸಂದರ್ಶನವಿದ್ದು, ಪುರುಷರು ಮತ್ತು ಮಹಿಳೆಯರಿಗೆ ನೇಮಕಾತಿ ಆರಂಭವಾಗಿದೆ. ಶ್ರೀ ಸಾಯಿ ಗೋಲ್ಡ್ ಪ್ಯಾಲೇಸ್ ನಲ್ಲಿ ಬ್ರ್ಯಾಂಚ್ ಮ್ಯಾನೆಜರ್, ಮ್ಯಾನೆಜರ್, ಅಸಿಸ್ಟೆಂಟ್ ಸೇಲ್ಸ್ ಎಕ್ಸಿಕ್ಯೂಟಿವ್, ಬಿಲ್ಲಿಂಗ್ ಎಕ್ಸಿಕ್ಯೂಟಿವ್, ಕ್ಯಾಶಿಯರ್ , ಸುಪರವೈಸರ್ ಸೇರಿದಂತೆ ಅನೇಕ ಹುದ್ದೆಗಳಿಗೆ ಇಲ್ಲಿ ಅವಕಾಶವಿದೆ. SSLC /PUC ಯಾವುದೇ ಪದವಿ ಮಾಡಿದ್ರು ಇಲ್ಲಿ ಕೆಲಸವಿದ್ದು. ಜೊತೆಗೆ ವಸತಿ + ಸ್ಥಿರ ಮತ್ತು ಆಕರ್ಷಕ ಸಂಬಳ + PF + ಪ್ರೋತ್ಸಾಹ ಧನ ಕೊಡಲಾಗುತ್ತದೆ. (Job alert – contact – 97406 26853 ) ದಿನಾಂಕ- 11-02-2025 ರಂದು ಮಧ್ಯಾಹ್ನ 3 ಗಂಟೆಯಿಂದ 5 ಗಂಟೆವರೆಗೆ ಸಂದರ್ಶನವಿದ್ದು, ನೌಕರಿ ಹುಡುಕುತ್ತಿರುವವರು ಸಂದರ್ಶನಕ್ಕೆ ಹಾಜರಾಗಬಹುದು ಸಂದರ್ಶನ ನಡೆಯುವ ಸ್ಥಳ:-#41 ಡಿ.ವಿ.ಜಿ ರಸ್ತೆ ಬಸವನಗುಡಿ, ಬೆಂಗಳೂರು ಹೆಚ್ಚಿನ ಮಾಹಿತಿಗಾಗಿ ಇಲ್ಲಿರುವ ನಂಬರಿಗೆ…
ಬೆಂಗಳೂರು:- ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ನೆರಳೂರು ಬಳಿ ಮನೆಯೊಂದರ ಬಳಿ ಸಿಲಿಂಡರ್ ಸ್ಫೋಟಗೊಂಡು ಓರ್ವನಿಗೆ ಗಂಭೀರ ಗಾಯಗಳಾಗಿರುವ ಘಟನೆ ಜರುಗಿದೆ. https://ainlivenews.com/bangalore-is-the-air-force-capital-of-india-dcm-dk-bannane/ ದಿನೇಶ್ ದಾಸ್ಗೆ ಗಂಭೀರ ಗಾಯಗೊಂಡ ವ್ಯಕ್ತಿ. ಮನೆಯಲ್ಲಿ ಗ್ಯಾಸ್ ಸೋರಿಕೆಯಿಂದ ಬೆಳಗ್ಗೆ 7 ಗಂಟೆ ಸುಮಾರಿಗೆ ಸಿಲಿಂಡರ್ ಸ್ಫೋಟಗೊಂಡಿದೆ. ಸ್ಫೋಟದ ತೀವ್ರತೆಗೆ ಮನೆ ಛಾವಣಿಯೇ ಚಿಂದಿ ಚಿಂದಿಯಾಗಿದೆ. ಈ ವೇಳೆ ಮನೆಯಲ್ಲಿದ್ದ ದಿನೇಶ್ ದಾಸ್ಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಅಗ್ನಿಶಾಮಕ ದಳ ಧಾವಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಯಿತು.
ಬೆಂಗಳೂರು:- ಬೆಂಗಳೂರು ಭಾರತದ ಏರ್ಫೋರ್ಸ್ ಕ್ಯಾಪಿಟಲ್ ಎಂದು DCM ಡಿಕೆಶಿ ಬಣ್ಣಿಸಿದ್ದಾರೆ. https://ainlivenews.com/betel-leaves-are-not-ordinary-they-are-a-panacea-for-various-diseases-lets-consume-them-like-this/ ಏರ್ ಶೋ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, 15ನೇ ಆವೃತ್ತಿಯ ಏರ್ ಶೋದಲ್ಲಿ ಭಾಗವಹಿಸುತ್ತಿರುವುದಕ್ಕೆ ಸಂತೋಷವಾಗುತ್ತಿದೆ. ಬೆಂಗಳೂರು ಭಾರತದ ಏರ್ಫೋರ್ಸ್ ಕ್ಯಾಪಿಟಲ್. ಇಲ್ಲಿ 1.5 ಲಕ್ಷ ಜನ ಏರ್ಫೋರ್ಸ್ನಲ್ಲಿ ಕೆಲಸ ಮಾಡುತ್ತಿದ್ದಾರೆ. ಈ ವೈಮಾನಿಕ ಪ್ರದರ್ಶನ ಬರೀ ಪ್ರದರ್ಶನವಲ್ಲ, ನಮ್ಮ ಭದ್ರತಾ ಸಾಮರ್ಥ್ಯದ ಪ್ರದರ್ಶನ. ಇವತ್ತು ಬೆಂಗಳೂರು ಡಿಫೆನ್ಸ್ ಮತ್ತು ಮಾರುಕಟ್ಟೆಯನ್ನು ನಿರ್ವಹಿಸುವ ಏಕೈಕ ಕೇಂದ್ರವಾಗಿದೆ. ಇಂದು ಏರ್ಫೋರ್ಸ್ನಲ್ಲಿ ಮಹಿಳೆಯರ ಭಾಗವಹಿಸುವಿಕೆ ಹೆಚ್ಚಾಗಿದೆ. ಹೆಲಿಕಾಪ್ಟರ್ ತಯಾರಿಕೆಯಲ್ಲಿ ಬೆಂಗಳೂರು ಮುಂಚೂಣಿಯಲ್ಲಿದೆ ಎಂದರು. ಕರ್ನಾಟಕದಲ್ಲಿ ಇಂದು ಏರ್ ಕ್ರಾಫ್ಟ್ ಅಧ್ಯಯನಕ್ಕೆ ಸಂಬಂಧಿಸಿದ ಅನೇಕ ಇಂಜಿನಿಯರಿಂಗ್ ಕಾಲೇಜು ಹಾಗೂ ಸಂಸ್ಥೆಗಳಿವೆ. ಪ್ರತಿಭೆಗಳಿಗೆ ಕರ್ನಾಟಕ ಉತ್ತಮ ವೇದಿಕೆ ಒದಗಿಸುತ್ತಿದೆ. ಏರ್ ಶೋ ಎಲ್ಲರಿಗೂ ಒಂದು ಉತ್ತಮ ವೇದಿಕೆಯಾಗಲಿದೆ. ಏರ್ ಇಂಡಿಯಾ -2025ರ ಯಶಸ್ಸಿಗೆ ಕಾರಣವಾಗುತ್ತಿರುವ ಎಲ್ಲಾ ಸಿಬ್ಬಂದಿ ಹಾಗೂ ಅಧಿಕಾರಿಗಳನ್ನು ಈ ಸಂದರ್ಭದಲ್ಲಿ ಶ್ಲಾಘಿಸುತ್ತೇನೆ ಎಂದು ಡಿಕೆ ಶಿವಕುಮಾರ್ ಹೇಳಿದರು.
ನಿಸರ್ಗದಿಂದ ಸಿಗುವ ಯಾವುದೇ ವಸ್ತುವಾದರೂ ಅಷ್ಟೇ. ತುಂಬಾ ಆರೋಗ್ಯಕರ. ನಿಸರ್ಗದ ಮಡಿಲಿನಿಂದ ಸಿಗುವ ಪ್ರತಿಯೊಂದು ಆಹಾರ ಕೂಡ ನಮಗೆ ಉತ್ತಮ ಆರೋಗ್ಯವನ್ನು ದಯಪಾಲಿಸುತ್ತದೆ. ಯಾವುದೇ ತರಹದ ಅಡ್ಡ ಪರಿಣಾಮಗಳು ಎದುರಾಗುವುದಿಲ್ಲ. ಒಂದು ವೇಳೆ ಆದರೂ ತುಂಬಾ ಕಡಿಮೆ. ಊಟ ಆದ ತಕ್ಷಣ ಪ್ರತಿಯೊಬ್ಬರೂ ಎಲೆ ಅಡಿಕೆ ಹಾಕಿಕೊಳ್ಳಬೇಕು ಎಂದು ಹೇಳುತ್ತಾರೆ. https://ainlivenews.com/this-pile-has-dhanaprapri-yoga-in-the-horoscope-but-the-reality-is-different/ ದೇಹದಲ್ಲಿ ಯೂರಿಕ್ ಆಸಿಡ್ ಮಟ್ಟವನ್ನು ನಿಯಂತ್ರಣದಲ್ಲಿಟ್ಟುಕೊಳ್ಳುವುದು ಬಹಳ ಮುಖ್ಯ. ಇವುಗಳ ಜೊತೆಗೆ ಕೆಲವು ನೈಸರ್ಗಿಕ ವಿಧಾನಗಳನ್ನು ಅನುಸರಿಸುವ ಮೂಲಕ ಸಹ ಯೂರಿಕ್ ಆಸಿಡ್ ಮಟ್ಟವನ್ನು ಸುಲಭವಾಗಿ ಕಡಿಮೆ ಮಾಡಿಕೊಳ್ಳಬಹುದು. ರಾಷ್ಟ್ರೀಯ ಜೈವಿಕ ತಂತ್ರಜ್ಞಾನ ಮಾಹಿತಿ ಕೇಂದ್ರ ದ ವರದಿಯ ಪ್ರಕಾರ, ವೀಳ್ಯೆದೆಲೆ ಅನೇಕ ಔಷಧೀಯ ಗುಣಗಳಿಂದ ಸಮೃದ್ಧವಾಗಿದೆ. ಇದನ್ನು ಜಗಿಯುವುದರಿಂದ ಯೂರಿಕ್ ಆಸಿಡ್ ಮಟ್ಟ ಸ್ವಲ್ಪ ಮಟ್ಟಿಗೆ ಕಡಿಮೆಯಾಗುತ್ತದೆ. ವೀಳ್ಯೆದೆಲೆಗಳು ಉತ್ಕರ್ಷಣ ನಿರೋಧಕಗಳು ಮತ್ತು ಉರಿಯೂತ ನಿವಾರಕ ಗುಣಗಳನ್ನು ಹೊಂದಿದ್ದು, ದೇಹದಿಂದ ವಿಷವನ್ನು ತೆಗೆದುಹಾಕಲು ಸಹಾಯ ಮಾಡುತ್ತದೆ. ವೀಳ್ಯೆದೆಲೆಗಳು ಜೀರ್ಣಾಂಗ ವ್ಯವಸ್ಥೆಯನ್ನು ಆರೋಗ್ಯಕರವಾಗಿಡಲು ಸಹಾಯ ಮಾಡುತ್ತದೆ ಮತ್ತು ಯೂರಿಕ್…
ಬೆಂಗಳೂರು:- ಇಂದಿನಿಂದ ಲೋಹದ ಹಕ್ಕಿಗಳ ಕಲರವ ಹಿನ್ನಲೆ ಯಲಹಂಕ ಸುತ್ತ ಮುತ್ತ ಟ್ರಾಫಿಕ್ ಜಾಮ್ ಉಂಟಾಗಿದೆ.. https://ainlivenews.com/adulteration-in-thimmappas-laddu-prasad-four-arrested/ ಬೆಳ್ಳಂಬೆಳಗ್ಗೆ ಫ್ಲೈ ಓವರ್ ನಲ್ಲಿ ಫುಲ್ ಟ್ರಾಫಿಕ್ ಜಾಮ್ ಆಗಿದ್ದು ಕಿಲೋ ಮೀಟರ್ ಗಟ್ಟಲೆ ವಾಹನಗಳು ಸರತಿ ಸಾಲಾಗಿ ನಿಂತಿದೆ… ಈಗಲೇ ಇಷ್ಟು ಟ್ರಾಫಿಕ್ ಆದ್ರೆ ಏರ್ ಶೋ ಮುಗಿಯೋ ಅಷ್ಟರಲ್ಲಿ ನಮ್ಮ ಕತೆ ಏನು ಅಂತ ಜನ ಸಾಮಾನ್ಯರು ಟೆನ್ಶನ್ ಆಗಿದ್ದಾರೆ. ಇನ್ನೂ ಏಷ್ಯಾದ ಅತಿದೊಡ್ಡ ವೈಮಾನಿಕ ಮತ್ತು ರಕ್ಷಣಾ ಪ್ರದರ್ಶನ ಏರೋ ಇಂಡಿಯಾ ಶೋ ಆರಂಭಗೊಂಡಿದೆ. ಉತ್ತರದಲ್ಲಿ ಮಹಾಕುಂಭ.. ದಕ್ಷಿಣದಲ್ಲಿ ತಂತ್ರಜ್ಞಾನ ಕುಂಭ ಅಂತಾ ಗೃಹಸಚಿವ ರಾಜನಾಥ್ ಸಿಂಗ್ ಏರ್ ಶೋವನ್ನು ಬಣ್ಣಿಸಿದ್ದಾರೆ. ಐದು ದಿನಗಳ ಕಾಲ ನಡೆಯಲಿರುವ ಏರ್ ಶೋ ದೇ ರನ್ ವೇ ಟು ಎ ಬಿಲಿಯನ್ ಆಪರ್ಚುನಿಟೀಸ್ ಎಂಬ ಧ್ಯೇಯದೊಂದಿಗೆ ಅದ್ದೂರಿ ಚಾಲನೆ ಪಡೆದಿದೆ. ಪ್ರತಿಬಾರಿಯಂತೆ ಹೈಟೆಕ್ ಸಿಟಿ, ಐಟಿಬಿಟಿ ಸಿಟಿ ಅಂತಾನೇ ಕರೆಸಿಕೊಳ್ಳೋ ಬೆಂಗಳೂರು ಸಾಕ್ಷಿಯಾಗುತ್ತಿದೆ. ಈವರೆಗೂ ನಡೆದ ಏರ್ ಶೋಗಳಲ್ಲಿ ಇದೇ ಅತಿದೊಡ್ಡ…