ಕೋಲಾರ – ಅಂಗನವಾಡಿ ಕಾರ್ಯಕರ್ತರು ಹಾಗೂ ಸಹಾಯಕರ ನೇಮಕಾತಿಯಲ್ಲಿ ಯಾರ ಹತ್ತಿರ ಒಂದು ರೂಪಾಯಿ ಲಂಚ ತೆಗೆದುಕೊಳ್ಳದೇ ಪಾರದರ್ಶಕತೆಯಿಂದ ನೇಮಕಾತಿ ಆದೇಶ ಪತ್ರ ನೀಡಿದ್ದೇವೆ ಅದೇ ರೀತಿಯಲ್ಲಿ ನೀವುಗಳು ಅಷ್ಟೇ ಪಾರದರ್ಶಕತೆ ಹಾಗೂ ಪ್ರಾಮಾಣಿಕತೆಯಿಂದ ಕೆಲಸ ಮಾಡಿ ತಾಲೂಕಿಗೆ ಒಳ್ಳೆಯ ಹೆಸರು ತರಬೇಕು ಎಂದು ಶಾಸಕ ಕೊತ್ತೂರು ಮಂಜುನಾಥ್ ತಿಳಿಸಿದರು. https://ainlivenews.com/kolar-immortal-jakanachari-still-alive-in-sculpture-dc-m-r-ravi/ ನಗರದ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ತಾಲೂಕಿನ ಅಂಗನವಾಡಿ ಕೇಂದ್ರಗಳಿಗೆ 7 ಕಾರ್ಯಕರ್ತರಿಗೆ ಹಾಗೂ 53 ಸಹಾಯಕರಿಗೆ ನೇಮಕಾತಿ ಆದೇಶ ಪತ್ರ ನೀಡಿ ಮಾತನಾಡಿದ ಅವರು ಹಿಂದೆ ಎಲ್ಲಾ ಅಂಗನವಾಡಿ ನೌಕರರ ನೇಮಕಾತಿಯಲ್ಲಿ ಮಧ್ಯವರ್ತಿಗಳು ಹೆಚ್ಚಾಗಿದ್ದು ಪ್ರಮಾಣಿಕರಿಗೆ, ಅರ್ಹತೆ ಇರುವವರಿಗೆ ಅವಕಾಶ ಸಿಗುತ್ತಿರಲಿಲ್ಲ ಅ ರೀತಿಯಲ್ಲಿ ನಡೆಯಬಾರದು ಎಂದು ಮೆರಿಟ್ ಆಧಾರದಲ್ಲಿ ಅರ್ಹತೆ ಇದ್ದವರಿಗೆ ಅವಕಾಶ ನೀಡಲಾಗಿದೆ ತಾವುಗಳು ಕೈ ಬಾಯಿ ಶುದ್ದವಾಗಿ ಇಟ್ಟುಕೊಂಡು ಕೆಲಸ ಮಾಡಿ ಅಂಗನವಾಡಿಗೆ ಬರುವ ಮಕ್ಕಳು ಬಡವರು ಅವರನ್ನು ತಮ್ಮ ಮಕ್ಕಳ ರೀತಿಯಲ್ಲಿ ಪೋಷಣೆ ಮಾಡುವಂತೆ ಸಲಹೆ ನೀಡಿದರು.
Author: AIN Author
ಕೋಲಾರ – ಅಮರಶಿಲ್ಪಿ ಜಕಣಾಚಾರಿ ಅವರು ಶಿಲ್ಪ ಕಲೆಗೆ ಅಪಾರ ಕೊಡುಗೆ ನೀಡಿದ್ದು, ಸೂರ್ಯಚಂದ್ರ ಇರುವರೆಗೂ ಇವರ ಹೆಸರು ಅಮರವಾಗಿ ಇರುತ್ತದೆ ಎಂದು ಜಿಲ್ಲಾಧಿಕಾರಿ ಡಾ. ಎಂ.ಆರ್. ರವಿ ಹೇಳಿದರು. ನಗರದ ಟಿ.ಚನ್ನಯ್ಯ ರಂಗಮಂದಿರದಲ್ಲಿ ಇಂದು ಹಮ್ಮಿಕೊಂಡಿದ್ದ, ಅಮರ ಶಿಲ್ಪಿ ಜಕಣಾಚಾರಿ ಅವರು ಸಂಸ್ಮರಣಾ ದಿನಾರಣೆಯಲ್ಲಿ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಅವರು ಮಾತನಾಡಿದರು. https://ainlivenews.com/naxals-who-surrendered-in-the-presence-of-cm-siddaramaiah-sacrifice-weapons-in-front-of-cm/ ಕನ್ನಡ ನಾಡಿನ ಇತಿಹಾಸದಲ್ಲಿ ಹೊಯ್ಸಳರು ತಮ್ಮದೇ ಆದ ಕೊಡುಗೆಯನ್ನು ಶಿಲ್ಪ ಕಲೆಗೆ ನೀಡಿದ್ದಾರೆ. ಇವರಲ್ಲಿ ವಿಷ್ಣುವರ್ಧನ ಅರಸನ ಕಾಲದಲ್ಲಿ ಕಲೆಯು ಉತ್ತುಂಗ ಶಿಖರದಲ್ಲಿತ್ತು. ವಿಷ್ಣುವರ್ಧನನ ಹೆಂಡತಿ ಶಾಂತಲೆ ನಾಟ್ಯ ರಾಣಿ ಎಂದು ಪ್ರಸಿದ್ಧಿಯಾಗಿದ್ದಳು. ಈ ಕಾಲದಲ್ಲಿದ್ದ ಅಮರಶಿಲ್ಪಿ ಜಕಣಾಚಾರಿ ಬೇಲೂರು ಹಳೆಬೀಡಿನ ಚನ್ನಕೇಶವ ದೇವಾಲಯದಲ್ಲಿ ಶಿಲ್ಪಗಳನ್ನು ಕೆತ್ತನೆ ಮಾಡಿ ಹೆಸರಾಗಿದ್ದಾರೆ ಎಂದರು.
ಬೆಂಗಳೂರು:- ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಸಿದ್ದರಾಮಯ್ಯ ಮುಂದೆ 6 ನಕ್ಸಲರು ಶರಣಾಗಿದ್ದಾರೆ. ಮುಂಡಗಾರು ಲತಾ, ಸುಂದರಿ ಕುತ್ಲೂರು, ವನಜಾಕ್ಷಿ ಬಾಳೆಹೊಳೆ, ಮಾರೆಪ್ಪ ಅರೋಲಿ, ವಸಂತ್, ಜಿಶಾ ಶರಣಾದ ನಕ್ಸಲರು. ಪೊಲೀಸ್ ಭದ್ರತೆಯೊಂದಿಗೆ ನಕ್ಸಲರನ್ನು ಬೆಂಗಳೂರಿನ ಮುಖ್ಯಮಂತ್ರಿ ಗೃಹ ಕಚೇರಿ ಕೃಷ್ಣಗೆ ಸಂಜೆ ಹೊತ್ತಿಗೆ ಕರೆತರಲಾಯಿತು. ಬಳಿಕ ಸಿಎಂ ಸಿದ್ದರಾಮಯ್ಯ ಅವರನ್ನು ನಕ್ಸಲರು ಭೇಟಿಯಾದರು. ಈ ವೇಳೆ ನಕ್ಸಲರ ಜೊತೆ ಸಿಎಂ ಮಾತುಕತೆ ನಡೆಸಿದರು. https://ainlivenews.com/say-good-boy-to-mehndi-and-hair-dye-if-you-use-this-leaf-your-hair-will-turn-black-from-root-to-root-guaranteed/ ಡಿಸಿಎಂ ಡಿ.ಕೆ.ಶಿವಕುಮಾರ್, ಗೃಹ ಸಚಿವ ಜಿ.ಪರಮೇಶ್ವರ್ ಮತ್ತು ಡಿಜಿಪಿ ಅಲೋಕ್ ಮೋಹನ್ ಸಮ್ಮುಖದಲ್ಲಿ ನಕ್ಸಲರು ಸಿಎಂ ಮುಂದೆ ಶರಣಾಗತಿ ಪ್ರಕ್ರಿಯೆ ನಡೆಯಿತು. 6 ಮಂದಿ ನಕ್ಸಲರು ಶಸ್ತ್ರ ತ್ಯಜಿಸಿ ಶರಣಾದರು. ಈ ವೇಳೆ ನಕ್ಸಲರ ಜೊತೆ ಅವರ ಕುಟುಂಬಸ್ಥರು ಸಹ ಹಾಜರಿದ್ದರು. ಬೆಳಗ್ಗೆ 7 ಗಂಟೆಗೆ ಶೃಂಗೇರಿಯಿಂದ ಹೊರಟ ನಕ್ಸಲರ ತಂಡ ಚಿಕ್ಕಮಗಳೂರಿನಲ್ಲಿ ಮಾತುಕತೆ ಮುಗಿಸಿ ಬೆಂಗಳೂರಿನತ್ತ ಪ್ರಯಾಣ ಬೆಳೆಸಿತು. ಸಂಜೆ 6 ಗಂಟೆ ಹೊತ್ತಿಗೆ ಸಿಎಂ ಗೃಹ ಕಚೇರಿ ಕೃಷ್ಣಗೆ ತಲುಪಿತು. ಆ…
ಹೆಚ್ಚಿನವರು ಕೂದಲು ಉದುರುತ್ತೆ, ಬೆಳ್ಳಗಾಗುತ್ತೆ ಅಂತ ಸಾಕಷ್ಟು ಮನೆಮದ್ದು, ಹಾಸ್ಪಿಟಲ್ ಮದ್ದುಗಳನ್ನು ಬಳಸುತ್ತಾರೆ. ನೈಸರ್ಗಿಕವಾಗಿ ನೆಲ್ಲಿಕಾಯಿಯನ್ನು ಈ ಕೂದಲಿನ ಆರೈಕೆಗೆ ಬಳಸುತ್ತಾರೆ. ಇದರಲ್ಲಿ ವಿಟಮಿನ್ ಸಿ ತುಂಬಾನೇ ಸಮೃದ್ಧವಾಗಿದೆ ಮತ್ತು ಕೂದಲಿನ ಆರೋಗ್ಯಕ್ಕೆ ತುಂಬಾ ಇದು ಪ್ರಯೋಜನಕಾರಿಯಾಗಿದೆ. ಅದೇ ರೀತಿ ನಿಂಬೆ ರಸ ಕೂಡ ಆರೋಗ್ಯಕ್ಕೆ ತುಂಬಾನೇ ಒಳ್ಳೆಯದು. ಇದು ಕೂದಲಿನ ಹೊಳಪು ಮತ್ತು ಬಣ್ಣವನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ. https://ainlivenews.com/triple-murder-shocked-bangalore-people/ ಬಿಳಿ ಕೂದಲು ಮುಚ್ಚಲು ಕಲರ್, ಮೆಹೆಂದಿ ಹಚ್ಚುತ್ತೇವೆ. ಆದರೆ ಒಂದು ಎಲೆ ಬಳಸಿ ಕೂದಲು ದಟ್ಟವಾಗಿ ಬೆಳೆಸಿ ಬಿಳಿ ಕೂದಲು ಕಡಿಮೆ ಮಾಡಬಹುದು. ಏನದು ಅಂತ ತಿಳಿದುಕೊಳ್ಳೋಣ… ಬಿಳಿ ಕೂದಲು ಮುಚ್ಚಲು ಮೆಹೆಂದಿ ಹಚ್ಚುತ್ತೇವೆ. ಆದರೆ ಮುನಗ ಎಲೆ ಬಳಸಬಹುದು. ಮೆಹೆಂದಿ ರೀತಿ ಪೇಸ್ಟ್ ಮಾಡಿ ಹಚ್ಚಬಹುದು. ಅದರ ಎಣ್ಣೆ ಹಚ್ಚಿದರೂ ಕೂದಲು ದಟ್ಟವಾಗುತ್ತದೆ. ಹೇಗೆ ಬಳಸಬೇಕು ಅಂತ ನೋಡೋಣ… ಮುನಗ ಎಲೆ ಪುಡಿಯಲ್ಲಿ ವಿಟಮಿನ್ ಎ ಇದೆ, ಇದು ಸೆಬಮ್ ಉತ್ಪಾದನೆ ನಿಯಂತ್ರಿಸುತ್ತದೆ. ಕೂದಲು ಉದುರುವುದು ಕಡಿಮೆಯಾಗುತ್ತದೆ.…
ಬೆಂಗಳೂರು:- ಬೆಂಗಳೂರಿನ ಜಾಲಹಳ್ಳಿ ಕ್ರಾಸ್ ಬಳಿ ಪತಿಯಿಂದಲೇ ಪತ್ನಿ ಹಾಗೂ ಇಬ್ಬರು ಮಕ್ಕಳ ಬರ್ಬರ ಹತ್ಯೆ ಮಾಡಿರುವ ಘಟನೆ ಜರುಗಿದೆ. https://ainlivenews.com/do-you-dream-like-this-if-so-this-is-an-ominous-sign/ ಗಂಗರಾಜು ತನ್ನ ಇಬ್ಬರು ಮಕ್ಕಳು ಸೇರಿದಂತೆ ಪತ್ನಿ ಭಾಗ್ಯರನ್ನು ಹತ್ಯೆಗೈದು ಪರಾರಿಯಾಗಿದ್ದರು. ಹತ್ಯೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ. ಪೀಣ್ಯ ಠಾಣೆ ಪೊಲೀಸರು ಘಟನಾ ಸ್ಥಳಕ್ಕೆ ದೌಡಾಯಿಸಿದ್ದಾರೆ. ಸದ್ಯ ಆರೋಪಿ ಗಂಗರಾಜು ನನ್ನು ಪೀಣ್ಯ ಠಾಣೆ ಪೊಲೀಸರು ಬಂಧಿಸಿದ್ದಾರೆ. ಸ್ಥಳೀಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ತನಿಖೆ ಕೈಗೊಂಡಿದ್ದಾರೆ.
ಕನಸುಗಳಿಲ್ಲದ ನಿದ್ರೆ ಅಪೂರ್ಣ ಎಂದು ಹೇಳುತ್ತಾರೆ. ರಾತ್ರಿ ಹೊತ್ತು ಕನಸು ಬೀಳುವುದು ಒಂದು ನೈಸರ್ಗಿಕ ಕ್ರಿಯೆ.ಗಾಢವಾದ ನಿದ್ರೆಗೆ ಜಾರಿದಾಗ ನಮ್ಮ ಸುಪ್ತ ಮನಸ್ಸು ಎಚ್ಚೆತ್ತುಕೊಳ್ಳುತ್ತದೆ. ಮನಸ್ಸಿನಲ್ಲಿ ಅಡಗಿದ್ದ ಭಾವನೆಗಳು ಅರಳುತ್ತವೆ. ಅವುಗಳ ಪ್ರಭಾವದಿಂದ ಒಂದಿಷ್ಟು ಕನಸುಗಳು ಕಾಣುತ್ತವೆ.ಮತ್ಸ್ಯ ಪುರಾಣದಲ್ಲಿ ಕನಸುಗಳ ಬಗ್ಗೆ ಕೆಲವೊಂದು ಉಲ್ಲೇಖಗಳಿವೆ. https://ainlivenews.com/champions-trophy-2025big-change-in-team-india-koke-for-star-player/ ಕೆಲವು ಕನಸುಗಳು ವಿಚಿತ್ರವಾಗಿರುವುದು ಮಾತ್ರವಲ್ಲದೆ ನಮ್ಮ ಜೀವನದ ಮೇಲೆ ನಿಗೂಢ ಮತ್ತು ಆಳವಾದ ಪರಿಣಾಮವನ್ನು ಬೀರುತ್ತವೆ. ಆದ್ದರಿಂದ ಶುಭ ಮತ್ತು ಅಶುಭ ಕನಸುಗಳು ಯಾವುವು? ಸ್ವಪ್ನ ಶಾಸ್ತ್ರ ಏನು ಹೇಳುತ್ತೆ ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ., ಸ್ವಪ್ನ ಶಾಸ್ತ್ರ ಕನಸುಗಳ ಅರ್ಥವನ್ನು ವಿಶ್ಲೇಷಿಸುವ ಮತ್ತು ಅರ್ಥಮಾಡಿಕೊಳ್ಳುವ ಅತ್ಯಂತ ಹಳೆಯ ವಿಜ್ಞಾನವಾಗಿದೆ. ವೈಯಕ್ತಿಕ ಬೆಳವಣಿಗೆಯಲ್ಲಿ ಕನಸುಗಳು ಪ್ರಮುಖ ಪಾತ್ರವಹಿಸುತ್ತವೆ. ಭಾವನೆಗಳು, ಭಯಗಳು, ಆಸೆಗಳನ್ನು ಅರ್ಥಮಾಡಿಕೊಳ್ಳಲು ಸಹಾಯ ಮಾಡುತ್ತದೆ. ಕನಸುಗಳನ್ನು ವಿಶ್ಲೇಷಿಸುವ ಮೂಲಕ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬಹುದು. ಜೀವನದಲ್ಲಿ ಧನಾತ್ಮಕ ಬದಲಾವಣೆಗಳನ್ನು ತರಬಹುದು ಎಂದು ಸ್ವಪ್ನ ಶಾಸ್ತ್ರ ಹೇಳುತ್ತದೆ. ಈ ರೀತಿಯ ಕನಸುಗಳು ಮುಂದಿನ ಜೀವನದಲ್ಲಿ ದುರದೃಷ್ಟದ ಸಂಕೇತಗಳಾಗಿವೆ:…
ಮೀನಿನ ಸೇವನೆ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ವಾಸ್ತವವಾಗಿ, ಮೀನಿನಲ್ಲಿ ಒಮೆಗಾ 3 ಕೊಬ್ಬಿನಾಮ್ಲಗಳಿವೆ, ಇದು ನಮ್ಮ ದೇಹಕ್ಕೆಇದನ್ನು ತಯಾರಿಸಲು ಸಾಧ್ಯವಾಗುವುದಿಲ್ಲ. ಅಂತಹ ಪರಿಸ್ಥಿತಿಯಲ್ಲಿ, ಆಹಾರ ಪದಾರ್ಥಗಳ ಸೇವನೆಯಿಂದ ದೇಹದಲ್ಲಿ ಒಮೆಗಾ -3 ಕೊಬ್ಬಿನಾಮ್ಲವನ್ನು ಮರುಪೂರಣಗೊಳಿಸಬಹುದು. https://ainlivenews.com/the-woman-who-went-to-bathe-went-to-heaven-a-woman-was-attacked-on-the-head-by-a-stranger/ ಭಾರತ ಪ್ರಪಂಚದಲ್ಲಿ ಏಳನೇ ಅತಿ ಹೆಚ್ಚು ಮೀನು ಉತ್ಪಾದಿಸುವ ರಾಷ್ಟ್ರ. ಭಾರತದ ಮಾಂಸಹಾರಿಗಳಿಗೆ ತುಂಬಾ ಪ್ರಿಯ ಆಹಾರ ಅದರಲ್ಲೂ ಕರಾವಳಿ ತೀರದವರಿಗೆ ಅಂತೂ ಮೀನು ಬೇಕೇ ಬೇಕು. ಇದಲ್ಲದೇ ಮೀನಿನಲ್ಲಿ ಪೋಷಕಾಂಶಗಳು ಹೇರಳವಾಗಿವೆ. ಇದು ಒಮೆಗಾ 3 ಕೊಬ್ಬಿನಾಮ್ಲಗಳು, ವಿಟಮಿನ್ ಡಿ, ವಿಟಮಿನ್ ಬಿ 2, ಕಬ್ಬಿಣ, ಸತು, ಅಯೋಡಿನ್, ಮೆಗ್ನೀಸಿಯಮ್, ಪೊಟ್ಯಾಸಿಯಮ್ ಮತ್ತು ಹೆಚ್ಚಿನ ಪ್ರೋಟೀನ್ ಅಂಶಗಳಂತಹ ಆರೋಗ್ಯಕರ ಕೊಬ್ಬುಗಳನ್ನು ಒಳಗೊಂಡಿದೆ. ಇದರಿಂದಾಗಿ ವಾರಕ್ಕೆ ಎರಡು ಬಾರಿಯಾದರೂ ಮೀನು ತಿನ್ನಲು ಆರೋಗ್ಯ ತಜ್ಞರು ಸಲಹೆ ನೀಡುತ್ತಾರೆ ಮೀನು ಸೇವನೆಯಿಂದ ಮಾನವನ ಯುಕ್ತಿ ಹಾಗೂ ಶಕ್ತಿ ಎರಡು ಚುರುಕಾಗುತ್ತದೆ. ಆದರೆ ಎಲ್ಲ ರೀತಿಯ ಮೀನುಗಳು ಸಮಾನ ಪೋಷ್ಠಿಕಾಂಶಗಳನ್ನು ಹೊಂದಿರುತ್ತವೆ ಎಂಬುದು ಕೂಡ ಇಲ್ಲ. ಕೆಲವು…
ನವದೆಹಲಿ:- ಆಂಧ್ರ, ಒಡಿಶಾಗೆ ಪ್ರಧಾನಿ ಮೋದಿ ಎರಡು ದಿನಗಳ ಪ್ರವಾಸ ಕೈಗೊಂಡಿದ್ದಾರೆ. ಇಂದು ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿ ಸುಮಾರು 2 ಲಕ್ಷ ಕೋಟಿ ರೂಪಾಯಿಗಳ ಯೋಜನೆಯನ್ನು ಲೋಕಾರ್ಪಣೆ ಮಾಡಲಿದ್ದಾರೆ. ಅದೇ ಸಮಯದಲ್ಲಿ, ಪ್ರಧಾನಿ ಮೋದಿ ನಾಳೆ ಒಡಿಶಾದ ರಾಜಧಾನಿ ಭುವನೇಶ್ವರದಲ್ಲಿ 18 ನೇ ಪ್ರವಾಸಿ ಭಾರತೀಯ ದಿವಸ್ ಸಮ್ಮೇಳನವನ್ನು ಉದ್ಘಾಟಿಸಲಿದ್ದಾರೆ. https://ainlivenews.com/i-dont-see-sridevi-in-janhvi-kapoor-ram-gopal-verma/3 ಹಸಿರು ಇಂಧನ ಮತ್ತು ಸುಸ್ಥಿರ ಭವಿಷ್ಯದತ್ತ ತನ್ನ ಬದ್ಧತೆಯ ಕಡೆಗೆ ಮತ್ತೊಂದು ಪ್ರಮುಖ ಹೆಜ್ಜೆಯಾಗಿ, ಆಂಧ್ರಪ್ರದೇಶದ ವಿಶಾಖಪಟ್ಟಣಂ ಬಳಿಯ ಪುಡಿಮಾಡಕದಲ್ಲಿ ಅತ್ಯಾಧುನಿಕ NTPC ಗ್ರೀನ್ ಎನರ್ಜಿ ಲಿಮಿಟೆಡ್ನ ಗ್ರೀನ್ ಹೈಡ್ರೋಜನ್ ಹಬ್ ಯೋಜನೆಗೆ ಪ್ರಧಾನಮಂತ್ರಿ ಶಂಕುಸ್ಥಾಪನೆ ಮಾಡಲಿದ್ದಾರೆ. ರಾಷ್ಟ್ರೀಯ ಹಸಿರು ಹೈಡ್ರೋಜನ್ ಮಿಷನ್ ಅಡಿಯಲ್ಲಿ ಇದು ಮೊದಲ ಹಸಿರು ಹೈಡ್ರೋಜನ್ ಹಬ್ ಆಗಿದೆ. ಈ ಯೋಜನೆಯಲ್ಲಿ ಅಂದಾಜು 1,85,000 ಕೋಟಿ ರೂಪಾಯಿ ಹೂಡಿಕೆಯಾಗಲಿದೆ. ಇದು 20 GW ನವೀಕರಿಸಬಹುದಾದ ಇಂಧನ ಸಾಮರ್ಥ್ಯಗಳಲ್ಲಿ ಹೂಡಿಕೆಯನ್ನು ಒಳಗೊಂಡಿರುತ್ತದೆ. ಇದು ಭಾರತದಲ್ಲಿನ ಅತಿ ದೊಡ್ಡ ಸಮಗ್ರ ಹಸಿರು ಹೈಡ್ರೋಜನ್ ಉತ್ಪಾದನಾ ಸೌಲಭ್ಯಗಳಲ್ಲಿ ಒಂದಾಗಿದೆ. ಈ…
ಬೆಂಗಳೂರು:- ಚೀನಾದಲ್ಲಿ ಆರ್ಭಟಿಸಿ ಬೊಬ್ಬಿರಿಯುತ್ತಿರುವ ಎಚ್ಎಂಪಿವಿ ಸೋಂಕು ಭಾರತಕ್ಕೂ ಕಾಲಿಟ್ಟಿದ್ದೂ ಜನತೆ ಆತಂಕಕ್ಕೊಳಗಾಗಿದ್ದಾರೆ. ಅಲ್ಲದೇ ಆಸ್ಪತ್ರೆಯತ್ತ ಪರೀಕ್ಷೆಗೆಂದು ಜನರು ಹೋಗುತ್ತಿದ್ದಾರೆ. https://ainlivenews.com/6-childrens-aunt-ran-away-with-a-beggar-what-this-grandmother-did-right/ ಕರ್ನಾಟಕದಲ್ಲಿ ಎಚ್ಎಂಪಿವಿ ವೈರಸ್ ಟೆಸ್ಟ್ ಕಡ್ಡಾಯವಲ್ಲ ಎಂದು ಆರೋಗ್ಯ ಇಲಾಖೆ ಆಸ್ಪತ್ರೆಗೆ ಹೋಗುವವರಿಗೆ ಸೂಚನೆ ನೀಡಿದೆ. ಜತೆಗೆ, ಖಾಸಗಿ ಲ್ಯಾಬ್ ಹಾಗೂ ಖಾಸಗಿ ಆಸ್ಪತ್ರೆಗಳ ಮೇಲೆ ಇಲಾಖೆ ನಿಗಾ ಇಡುವುದಾಗಿ ತಿಳಿಸಿದೆ. ಎಚ್ಎಂಪಿವಿ ವೈರಸ್ ಟೆಸ್ಟ್ ಮಾಡಿಸಿಕೊಳ್ಳಿ ಎನ್ನುವವರ ಮೇಲೆ ಹದ್ದಿನ ಕಣ್ಣು ಇಡಲು ನಿರ್ಧರಿಸಿದೆ. ಜ್ವರ, ಕೆಮ್ಮು ಎಂದು ಆಸ್ಪತ್ರೆಗೆ ಹೋಗುವವರು ಎಚ್ಎಂಪಿವಿ ವೈರಸ್ ಟೆಸ್ಟ್ ಮಾಡಿಸಿಕೊಳ್ಳುವ ಅಗತ್ಯವಿಲ್ಲ ಎಂದು ಇಲಾಖೆ ಹೇಳಿದೆ ಈ ವಿಚಾರವಾಗಿ ಇಂದು ಸಂಜೆಯೊಳಗೆ ಆರೋಗ್ಯ ಇಲಾಖೆ ಅಧಿಕೃತ ಪ್ರಕಟಣೆ ಹೊರಡಿಸಲಿದೆ. ಖಾಸಗಿ ಆಸ್ಪತ್ರೆಗಳಲ್ಲಿ ಎಚ್ಎಂಪಿವಿ ವೈರಸ್ ಟೆಸ್ಟ್ಗೆ 10 ಸಾವಿರ ರೂ.ನಿಂದ 12 ಸಾವಿರ ರೂ. ದರ ಇದೆ. ಹೀಗಾಗಿ ಟೆಸ್ಟಿಂಗ್ ಅಗತ್ಯ ಇಲ್ಲ ಎಂದು ಇಲಾಖೆ ಪ್ರಕಟಣೆ ಹೊರಡಿಸಲಿದೆ ಎಂದು ಮೂಲಗಳು ಹೇಳಿವೆ.
ಲಕ್ನೋ:- ಪ್ರಸಕ್ತ ವರ್ಷದಲ್ಲಿ ಬಂಜೆತನ ಪ್ರಕರಣಗಳು ಹೆಚ್ಚಾಗುತ್ತಿದೆ. ಮಕ್ಕಳಿಗಾಗಿ ಎಷ್ಟೋ ಮಹಿಳೆಯರು ಅವರು ಕಟ್ಟಡ ಹರಕೆ ಇಲ್ಲ, ಬೇಡದ ದೇವರಿಲ್ಲ. ಆದರೆ ಇನ್ನೂ ಕೆಲವು ಮಂದಿಗೆ ಬೇಡ ಅಂದರೂ ದೇವರು ಮಕ್ಕಳು ಕರುಣಿಸ್ತಾನೆ. ಆದ್ರೆ ಅವರುಗಳನ್ನು ನೋಡಿಕೊಳ್ಳೋ ಯೋಗ್ಯತೆ ಕೆಲವರಿಗೆ ಇರಲ್ಲ. ಮಕ್ಕಳನ್ನು ಬೇಕಾಬಿಟ್ಟಿ ನೋಡುತ್ತಾರೆ. https://ainlivenews.com/drug-sale-three-accused-arrested/ ಅದರಂತೆ ಇಲ್ಲೋರ್ವ ಮಹಾತಾಯಿ 6 ಮಕ್ಕಳನ್ನು ಬಿಟ್ಟು ಭಿಕ್ಷುಕನೊಂದಿಗೆ ಪರಾರಿ ಆಗಿದ್ದಾಳೆ. ಗಂಡ ಮತ್ತು 6 ಮಕ್ಕಳೊಂದಿಗೆ ಸಂಸಾರ ಮಾಡುತ್ತಿದ್ದ ಮಹಾತಾಯಿಯೊಬ್ಬಳು ಭಿಕ್ಷುಕನೊಂದಿಗೆ ಪರಾರಿಯಾದ ಘಟನೆ ಉತ್ತರ ಪ್ರದೇಶದ ಹರ್ದೋಯ್ ಜಿಲ್ಲೆಯಲ್ಲಿ ನಡೆದಿದೆ. ಸುಮಾರು 36 ವರ್ಷದ ಮಹಿಳೆ ರಾಜೇಶ್ವರಿ ಗಂಡ ಮತ್ತು ಮಕ್ಕಳೊಂದಿಗೆ ಸುಖೀ ಜೀವನ ನಡೆಸುತ್ತಿದ್ದಳು. ಆದರೆ ಭಿಕ್ಷೆ ಕೇಳುವ ನೆಪದಲ್ಲಿ ಆಗಾಗ ಮನೆ ಬಳಿ ಬರುತ್ತಿದ್ದ ಭಿಕ್ಷುಕನ ಮೇಲೆ ಪ್ರೇಮಾಂಕುರವಾಗಿ ಗಂಡ ಮತ್ತು ಮಕ್ಕಳನ್ನು ಬಿಟ್ಟು ಭಿಕ್ಷುಕನೊಂದಿಗೆ ಮಹಿಳೆ ಪರಾರಿಯಾಗಿದ್ದಾಳೆ. ಮಗಳಿಗೆ ಬಟ್ಟೆ ಹಾಗೂ ತರಕಾರಿ ತರುತ್ತೇನೆ ಎಂದು ಹೇಳಿ ಪತಿ ಎಮ್ಮೆ ಮಾರಿ ಗಳಿಸಿದ್ದ ಹಣವನ್ನು ತೆಗೆದುಕೊಂಡು…