ಬೆಂಗಳೂರು/ನವದೆಹಲಿ:- ಚೀನಾ ಹಾಗೂ ವಿವಿಧ ದೇಶಗಳಲ್ಲಿ ಹರಡುತ್ತಿರುವ HMP ವೈರಸ್ ಬಗ್ಗೆ ಭಾರಿ ಚರ್ಚೆ ನಡೆಯುತ್ತಿದೆ. ಹ್ಯೂಮನ್ ಮೆಟಾಪ್ನ್ಯೂಮೋ ವೈರಸ್ ಬಗ್ಗೆ ಹೆಚ್ಚು ಚಿಂತಿಸುವ ಅಥವಾ ಭಯಪಡುವ ಅಗತ್ಯವಿಲ್ಲ ಎಂದು ತಜ್ಞ ವೈದ್ಯರು ತಿಳಿಸುತ್ತಾರೆ. ಮುಖ್ಯವಾಗಿ ಐದು ವರ್ಷದೊಳಗಿನ ಮಕ್ಕಳು ಮತ್ತು 65 ವರ್ಷಕ್ಕಿಂತ ಮೇಲ್ಪಟ್ಟ ವೃದ್ಧರ ಮೇಲೆ ಗಂಭೀರ ಪರಿಣಾಮ ಉಂಟಾಗುವ ಸಾಧ್ಯತೆ ಹೆಚ್ಚಿರುತ್ತದೆ ಎಂದು ತಜ್ಞರು ಎಚ್ಚರಿಕೆ ನೀಡಿದ್ದಾರೆ. https://ainlivenews.com/dont-give-any-special-meaning-to-the-dinner-meeting-of-the-state-leaders/ ಇದರಿಂದ ಮಕ್ಕಳ ವಿಷಯದಲ್ಲಿ ಹೆಚ್ಚಿನ ಮುಂಜಾಗ್ರತೆ ವಹಿಸುವುದು ಅಗತ್ಯವಾಗಿದೆ. ಹೆಚ್ಎಂಪಿ ವೈರಸ್ ಕೊರೊನಾ ಮಾರಿಯ ಮರಿ ಎನ್ನಬಹುದು. ಇದು 2001ರ ವೈರಸ್ ಆದ್ರೂ ಈಗ ಚೀನಾದಲ್ಲಿ ಹಾವಳಿ ಎಬ್ಬಿಸಿದ್ದು ಈಗ ನಮ್ಮ ದೇಶಕ್ಕೂ ಕಾಲಿಟ್ಟಿದ್ದು ಮಾತ್ರ ಕೊಂಚ ಆತಂಕ ಅಷ್ಟೇ. ಬೆಂಗಳೂರಿನ ಎರಡು ಹಸುಗೂಸುಗಳಿಗೆ ವಕ್ಕರಿಸಿದ್ರೆ ಗುಜರಾತ್ನಲ್ಲಿ ಒಂದು ಕೇಸ್ ಪತ್ತೆಯಾಗಿದೆ. ಪಕ್ಕದ ತಮಿಳುನಾಡಿನಲ್ಲೂ 2 ಕೇಸ್ಗಳು ದಾಖಲಾಗಿವೆ. ನಿನ್ನೆ ಹೊಸದಾಗಿ ಮಹಾರಾಷ್ಟ್ರದ ನಾಗ್ಪುರದಲ್ಲಿ ಇಬ್ಬರಲ್ಲಿ ಈ ಸೋಂಕು ಕಾಣಿಸಿಕೊಂಡಿದೆ. 7 ವರ್ಷ, 14 ವರ್ಷದ ಮಕ್ಕಳಲ್ಲಿ…
Author: AIN Author
ಬೆಂಗಳೂರು:- ರಾಜ್ಯ ನಾಯಕರ ಡಿನ್ನರ್ ಮೀಟಿಂಗ್ ಗೆ ವಿಶೇಷ ಅರ್ಥ ಕಲ್ಪಿಸೋದು ಬೇಡ ಎಂದು ಮಾಜಿ ಸಂಸದ ಡಿಕೆ ಸುರೇಶ್ ಹೇಳಿದ್ದಾರೆ. https://ainlivenews.com/most-wanted-6-naxals-surrender-today/ ಈ ಸಂಬಂಧ ಮಾತನಾಡಿದ ಅವರು, ವಿಶೇಷ ಸಂದರ್ಭಗಳಲ್ಲಿ ಸಚಿವರು, ನಾಯಕರು ಒಟ್ಟಿಗೆ ಸೇರಿ ಔತಣಕೂಟ ನಡೆಸುವುದು ಸಾಮಾನ್ಯ. ಇದಕ್ಕೆ ರಾಜಕೀಯವಾಗಿ ವಿಶೇಷ ಅರ್ಥ ಕಲ್ಪಿಸುವ ಅಗತ್ಯವಿಲ್ಲ ಎಂದರು. ಡಿಸಿಎಂ ಅನುಪಸ್ಥಿತಿಯಲ್ಲಿ ಅನೇಕ ಡಿನ್ನರ್ ಸಭೆಗಳು ನಡೆಯುತ್ತಿವೆ ಅಂತೇನಿಲ್ಲ. ವಿಶೇಷ ಸಂದರ್ಭಗಳಲ್ಲಿ ಸ್ನೇಹಿತರು ಊಟಕ್ಕೆ ಸೇರುವುದು, ಹೀಗೆ ಊಟಕ್ಕೆ ಸೇರಿದಾಗ ಹಲವಾರು ಚರ್ಚೆ ಮಾಡುವುದು ಸರ್ವೇ ಸಾಮಾನ್ಯ. ಹೊಸ ವರ್ಷದ ಹಿನ್ನೆಲೆಯಲ್ಲಿ ಕೆಲವು ಸಚಿವರು, ನಾಯಕರು ಔತಣಕೂಟಕ್ಕೆ ಸೇರಿದ್ದರು. ಅದರಲ್ಲಿ ಮುಖ್ಯಮಂತ್ರಿಗಳು ಸೇರಿದ್ದಾರೆ. ಇದಕ್ಕೆ ಯಾವುದೇ ವಿಶೇಷ ಅರ್ಥ ಕಲ್ಪಿಸುವ ಅಗತ್ಯವಿಲ್ಲ. ರಾಜಕಾರಣದಲ್ಲಿ ಮಾಧ್ಯಮಗಳು ಹೇಳುವ ರೀತಿ ವಿಶೇಷ ಬದಲಾವಣೆಗೆ ಒತ್ತಡ ಹಾಕಲಾಗುತ್ತಿದೆ ಎಂದು ಅರ್ಥ ಕಲ್ಪಿಸಲು ಸಾಧ್ಯವಿಲ್ಲ ಎಂದರು.
ಬೆಂಗಳೂರು:- ಇಂದು ಮೋಸ್ಟ್ ವಾಂಟೆಡ್ 6 ನಕ್ಸಲ್ ಶರಣಾಗತಿ ಆಗಲಿದ್ದಾರೆ. https://ainlivenews.com/getting-night-traffic-in-bandipur-forest-what-did-minister-ishwar-khandre-say/ ಈಗಾಗಲೇ ಶಾಂತಿಗಾಗಿ ನಾಗರೀಕ ವೇದಿಕೆ ಹಾಗೂ ಶರಣಾಗತಿ ಕಮಿಟಿ ಸದಸ್ಯರು ಕಾಡಿಗೆ ತೆರಳಿ ಮನವೋಲಿಸಿದ್ದಾರೆ. ಶಿವಮೊಗ್ಗದ ಶ್ರೀಪಾಲ್ ಸೇರಿ ಹಲವರು ನಕ್ಸಲರನ್ನ ಕಾಡಿನಲ್ಲಿ ಮನವೊಲಿಸಿ ಮುಖ್ಯವಾಹಿನಿಗೆ ಕರೆತರುವಲ್ಲಿ ಯಶಸ್ವಿಯಾಗಿದ್ದಾರೆ ಈ ಬಗ್ಗೆ ಚಿಕ್ಕಮಗಳೂರಲ್ಲಿ ನಕ್ಸಲ್ ನಾಯಕಿ ಮುಂಡಗಾರು ಲತಾ ಪ್ರತಿಕ್ರಿಯಿಸಿದ್ದು, ಸರ್ಕಾರ ನಮ್ಮ ಬೇಡಿಕೆಗೆ ಒಪ್ಪಿರುವ ಹಿನ್ನೆಲೆ ಶರಣಾಗುತ್ತಿದ್ದೇವೆ. ನಾವು ಸಮಾಜದ ಮುಖ್ಯವಾಹಿನಿಗೆ ಬರುತ್ತೇವೆ. ನಮ್ಮ ಬೇಡಿಕೆಯನ್ನ ಎರಡು ಸಮಿತಿ ಸರ್ಕಾರಕ್ಕೆ ತಲುಪಿಸಿದೆ. ನಾವು ಪ್ರಜಾತಾಂತ್ರಿಕ ಸಾಂವಿಧಾನಿಕ ಹೋರಾಟ ಮಾಡುತ್ತೇವೆ. ಕೊನೆ ವರೆಗೂ ಜನರ ಪರ ನಿಂತು ಹೋರಾಟ ಮಾಡುತ್ತೇವೆ. ಯಾವ ಕಾರಣಕ್ಕೂ ಜನಪರ ಹೋರಾಟದಿಂದ ಹಿಂದೆ ಸರಿಯಲ್ಲ. ನಮ್ಮ ಉಸಿರು ಇರುವವರೆಗೂ ನಾವು ಹೋರಾಟ ಮಾಡುತ್ತೇವೆ.ನಾವೆಲ್ಲರೂ ನಾಳೆ ನಿಮ್ಮ ಮುಂದೆ ಬರುತ್ತೇವೆ ಎಂದು ಸ್ಪಷ್ಟಪಡಿಸಿದರು.
ಬೆಂಗಳೂರು:- ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರು, ಬಂಡೀಪುರ ಅರಣ್ಯದಲ್ಲಿ ರಾತ್ರಿ ಸಂಚಾರಕ್ಕೆ ಅವಕಾಶ ಇಲ್ಲ ಎಂದು ಸ್ಪಷ್ಟನೆ ಕೊಟ್ಟಿದ್ದಾರೆ. https://ainlivenews.com/chikkodi-a-very-pregnant-barbara-the-guest-of-the-athani-police/ ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಬಂಡೀಪುರದಲ್ಲಿ ರಾತ್ರಿ 9 ಗಂಟೆವರೆಗೆ ಮಾತ್ರ ರಾತ್ರಿ ಸಂಚಾರಕ್ಕೆ ಅವಕಾಶ ಇದೆ. ಅದು ಹೊರತುಪಡಿಸಿ ರಾತ್ರಿ 9 ಗಂಟೆ ನಂತರ 2 ಬಸ್ಗಳ ಮಾತ್ರ ಸಂಚಾರಕ್ಕೆ ಅವಕಾಶ ಕೊಡಲಾಗಿದೆ ಎಂದರು. ಇದನ್ನು ಹೊರತುಪಡಿಸಿ ಆಸ್ಪತ್ರೆ ಸೇರಿ ಎಮರ್ಜೆನ್ಸಿ ಇದ್ದರೆ ಅದಕ್ಕೂ ಅವಕಾಶ ಮಾಡಿಕೊಡಲಾಗಿದೆ. ಉಳಿದಂತೆ ವನ್ಯಜೀವಿ ಸಂರಕ್ಷಣೆ ಹಿನ್ನಲೆ ರಾತ್ರಿ ಸಂಚಾರಕ್ಕೆ ಅವಕಾಶ ಇಲ್ಲ. ಹೀಗಾಗಿ ರಾತ್ರಿ ಸಂಚಾರ ಸಾಧ್ಯವಿಲ್ಲ. ಈ ಬಗ್ಗೆ ನಮ್ಮ ನಾಯಕರಿಗೆ ಏನಾದರೂ ಮಾಹಿತಿ ಅಗತ್ಯವಿದ್ದರೆ ಮನವರಿಕೆ ಮಾಡುತ್ತೇನೆ ಎಂದು ಸಚಿವ ಈಶ್ವರ್ ಖಂಡ್ರೆ ಹೇಳಿದ್ದಾರೆ.
ಅಥಣಿ:ಅದೊಂದು ಸುಂದರ ಕುಟುಂಬ,ಇಡಿ ಊರಿನ ಜನರೆ ಇವರನ್ನ ಕಂಡ್ರೆ ಕೈ ಮುಗಿತಿದ್ರುು https://ainlivenews.com/cm-must-fulfill-the-demand-of-transport-workers-kodihalli-chandrasekhara-agraha/ ನಾಲ್ಕು ಜನ ಮುದ್ದಾದ ಹೆಣ್ಣು ಮಕ್ಕಳು ಗಂಡು ಮಗನ ಬರುವ ನಿರೀಕ್ಷೆಯಲ್ಲಿದ್ದ ದಂಪತಿಗೆ ದೇವರು ವರ ಕರುಣಿಸಿದ್ದ ಇನ್ನೇನು ಕೆಲವೆ ದಿನಗಳಲ್ಲಿ ಬಾಣಂತಿಯಾಗಬೇಕಿದ್ದ ಗರ್ಭಿಣಿ ಮಹಿಳೆ ದುರಂತ ಸಾವು ಕಂಡಿದ್ದು ಯಾಕೆ..?ಮಹಿಳೆ ಸಾವಿನ ಹಿಂದಿದೆ ಭಯಾನಕ ಸತ್ಯ,,, ಇದು ಕೀಚಕ ಭಾವನ ನೀಚ ಕೃತ್ಯ ಹೌದು,, ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ಚಿಕ್ಕೂಡ ಗ್ರಾಮದಲ್ಲಿ ಡಿ 20 ರಂದು ನಡೆದ ತುಂಬು ಗರ್ಭಿಣಿ ಸುವರ್ಣ ಮಠಪತಿ ಭೀಕರ ಕೊಲೆಗೆ ಇಡಿ ಗ್ರಾಮವೆ ಬೆಚ್ಚಿ ಬಿದ್ದಿತ್ತು.ಮಠ ಮಠ ಮದ್ಯಾನ ತುಂಬು ಗರ್ಭಿಣಿಗೆ ಹರಿತವಾದ ಆಯುಧದಿಂದ ಹಲ್ಲೆ ಮಾಡಿ ದುಷ್ಕರ್ಮಿ ಪರಾರಿಯಾಗಿದ್ದ. ಮನೆಗೆ ಬಂದ ಪತಿ ಸ್ಥಳೀಯರ ಸಹಾಯದಿಂದ ಮಹಿಳೆಯನ್ನ ಹಾರೋಗೇರಿ ಖಾಸಗಿ ಆಸ್ಪತ್ರೆಗೆ ರವಾಣಿಸಿದ್ದ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ತುಂಬು ಗರ್ಭಿಣಿ ಉಸಿರು ಬಿಡುತ್ತಾಳೆ . ಈ ಘಟನೆ ಸಂಬಂಧ ಅಥಣಿ ಪೊಲೀಸ್ ಠಾಣೆಯಲ್ಲಿ ದೂರು ಧಾಖಲಿಸಲಾಗುತ್ತದೆ. ಸ್ಥಳಕ್ಕೆ…
ಹುಬ್ಬಳ್ಳಿ: ಕಳೆದ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ನ ಪ್ರಣಾಳಿಕೆ ಭರವಸೆಯಂತೆ ರಸ್ತೆ ಸಾರಿಗೆ ಸಂಸ್ಥೆಯ ನೌಕರರ ಬೇಡಿಕೆಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈಡೇರಿಸಬೇಕು, ಬಜೆಟ್ ನಲ್ಲಿ ಈ ಬಗ್ಗೆ ಪ್ರಸ್ತಾಪಿಸಬೇಕು ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಸೇನೆ ಗೌರವಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ ಆಗ್ರಹಿಸಿದರು. https://ainlivenews.com/feb-cabinet-meeting-at-male-mahadeshwar-hill-on-15th-district-in-charge-minister-k-venkatesh/ ನಗರದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಸಾರಿಗೆ ಸಂಸ್ಥೆಯ ನೌಕರರು ರಾಜ್ಯಾದ್ಯಂತ ಮುಷ್ಕರ ಹೂಡಿದಾಗ ಅಂದಿನ ವಿರೋಧ ಪಕ್ಷದ ನಾಯಕರಾಗಿದ್ದ ಸಿದ್ದರಾಮಯ್ಯ ಅವರು ಈ ಬೇಡಿಕೆಗಳನ್ನು ಏಕೆ ಈಡೇರಿಸಲು ಆಗುವುದಿಲ್ಲ? ಎಂದು ಪ್ರಶ್ನಿಸಿ ಅಧಿಕಾರಕ್ಕೆ ಬಂದರೆ ಈಡೇರಿಸುವ ಭರವಸೆ ನೀಡಿದ್ದರು. ಆದರೆ, ಈಗ ನೌಕರರ ವೇತನ ಪರಿಷ್ಕರಣೆ ಮಾಡಲು ಚೌಕಾಶಿ ಮಾಡುತ್ತಿದ್ದಾರೆ ಎಂದು ಆಕ್ಷೇಪಿಸಿದರು. ಸಿಎಂ ಅವರು ಕೊಟ್ಟ ಮಾತಿನಂತೆ ನಡೆದುಕೊಳ್ಳಬೇಕು. ಬಜೆಟ್ ನಲ್ಲಿ ಘೋಷಣೆ ಆಗದೇ ಹೋದರೆ ಮುಂದಿನ ದಿನಗಳಲ್ಲಿ ಮತ್ತೆ ಹೋರಾಟದ ರೂಪುರೇಷೆ ಸಿದ್ಧಪಡಿಸಲಾಗುವುದು ಎಂದು ಎಚ್ಚರಿಸಿದರು. ನೌಕರರಿಗೆ ಹಿಂಸೆ: ನವಲಗುಂದ ಘಟಕದ ನಿರ್ವಾಹಕರೊಬ್ಬರಿಗೆ ಹಿರಿಯ…
ಚಾಮರಾಜನಗರ:- ಸಚಿವ ಸಂಪುಟ ಸಭೆಯನ್ನು ಫೆಬ್ರವರಿ 15ರಂದು ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆಸಲು ತೀರ್ಮಾನಿಸಲಾಗಿದೆ ಎಂದು ಪಶುಸಂಗೋಪನೆ, ರೇಷ್ಮೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ. ವೆಂಕಟೇಶ್ ಅವರು ಹೇಳಿದರು. https://ainlivenews.com/countdown-to-naxal-surrender-for-most-wanted-6-what-did-the-heroine-say-before-that/ ಚಾಮರಾಜನಗರದ ಜಿಲ್ಲಾ ಪಂಚಾಯತ್ ಕೆಡಿಪಿ ಸಭಾಂಗಣದಲ್ಲಿಂದು ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳೊಂದಿಗೆ ಸಚಿವ ಸಂಪುಟ ಸಂಬಂಧ ಪೂರ್ವಭಾವಿ ಸಭೆ ನಡೆಸಿದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ ಜಿಲ್ಲಾ ಉಸ್ತುವಾರಿ ಸಚಿವರು ಈ ವಿಷಯ ತಿಳಿಸಿದರು. ಈ ಮೊದಲು ಫೆಬ್ರವರಿ 13ರಂದು ಮಲೆ ಮಹದೇಶ್ವರ ಬೆಟ್ಟದಲ್ಲಿ ಸಚಿವ ಸಂಪುಟ ಸಭೆ ನಡೆಸಲು ದಿನಾಂಕ ನಿಗದಿ ಮಾಡಲಾಗಿತ್ತು. ಆದರೆ 13, 14ರಂದು ಬೆಂಗಳೂರಿನಲ್ಲಿ ಗ್ಲೋಬಲ್ ಇನ್ವೆಸ್ಟ್ ರ್ ಮೀಟ್ ಇರುವುದರಿಂದ ಸಚಿವ ಸಂಪುಟ ಸಭೆಯನ್ನು ಫೆಬ್ರವರಿ 15ಕ್ಕೆ ನಿಗದಿ ಮಾಡಲಾಗಿದೆ ಎಂದರು. ಸಚಿವ ಸಂಪುಟ ನಡೆಯುತ್ತಿರುವ ಹಿನ್ನೆಲೆಯಲ್ಲಿ ಇಂದು ಅಧಿಕಾರಿಗಳೊಂದಿಗೆ ಪೂರ್ವಭಾವಿ ಸಭೆ ನಡೆಸಲಾಗಿದೆ. ಇಲಾಖಾವಾರು ಅಧಿಕಾರಿಗಳು ಅಭಿವೃದ್ದಿ ಕೆಲಸಗಳ ಸಂಬಂಧ ಮಾಹಿತಿ ವಿವರಗಳನ್ನು ನೀಡಿದ್ದಾರೆ. ಈ ಕುರಿತು ಸಾಧಕ…
ಬಿಗ್ ಬಾಸ್ ಮನೆಯಲ್ಲಿ ಭವ್ಯಾ ಇಲ್ಲಿತನಕ ಬರಲು ನಾನೇ ಕಾರಣ ಎಂದು ತ್ರಿವಿಕ್ರಮ್ ವರಸೆ ಬದಲಿಸಿದ್ದಾರೆ. https://ainlivenews.com/countdown-to-naxal-surrender-for-most-wanted-6-what-did-the-heroine-say-before-that/ ಬಿಗ್ ಬಾಸ್ ಮನೆಯಲ್ಲಿ ಪ್ರೇಮ ಪಕ್ಷಿಗಳಾಗಿದ್ದ ಭವ್ಯಾ ಮತ್ತು ತ್ರಿವಿಕ್ರಮ್ ದೂರ ದೂರ ಆಗಿದ್ದಾರೆ. ಭವ್ಯಾ ಹಾಗೂ ತ್ರಿವಿಕ್ರಮ್ ಮಧ್ಯೆ ಉತ್ತಮ ಒಡನಾಟ ಇತ್ತು. ಇಬ್ಬರೂ ಒಟ್ಟಾಗಿ ಸಮಯ ಕಳೆಯುತ್ತಿದ್ದರು. ಒಬ್ಬರ ನೆರಳು ಒಬ್ಬರ ಮೇಲೆ ಇತ್ತು. ಇತ್ತೀಚೆಗೆ ಕುಟುಂಬದವರು ಬಂದಾಗ ತ್ರಿವಿಕ್ರಮ್ಗೆ ಅವರ ತಾಯಿ ಬುದ್ಧಿ ಮಾತು ಹೇಳಿ ಹೋಗಿದ್ದರು. ಅಲ್ಲದೆ, ಸುದೀಪ್ ಕಡೆಯಿಂದಲೂ ಈ ವಿಚಾರವಾಗಿ ಸಾಕಷ್ಟು ಸಲಹೆ ನೀಡಿದ್ದರು. ಈಗ ತ್ರಿವಿಕ್ರಮ್ ಅವರು ಅದನ್ನು ಗಂಭೀರವಾಗಿ ಪರಿಗಣಿಸಿದ್ದಾರೆ. ಭವ್ಯಾಗೆ ಏನೇ ವಿಚಾರ ಇದ್ದರೂ ನೇರವಾಗಿ ಹೇಳುವ ಕೆಲಸವನ್ನೂ ಮಾಡಿದ್ದಾರೆ. ಇದು ಭವ್ಯಾಗೆ ಬೇಸರ ಮೂಡಿಸಿದೆ. ಹಾಗಾದರೆ ಭವ್ಯಾ ಇಲ್ಲಿಯವರೆಗೆ ಬರೋಕೆ ತ್ರಿವಿಕ್ರಮ್ ಅವರು ಕಾರಣವಾ? ಹೀಗೊಂದು ಪ್ರಶ್ನೆ ಹುಟ್ಟುಹಾಕುವಂಥ ಮಾತು ಅವರ ಕಡೆಯಿಂದ ಬಂದಿದೆ. ನಿನ್ನೆಯ ಸಂಚಿಕೆಯಲ್ಲಿ ತ್ರಿವಿಕ್ರಮ್ ಹಾಗೂ ರಜತ್ ಅವರು ಕುಳಿತು ಮಾತನಾಡುತ್ತಿದ್ದರು. ಮನೆಗೆ ಬಂದು…
ಚಿಕ್ಕಮಗಳೂರು:- ಸಮಾಜದ ಮುಖ್ಯವಾಹಿನಿಗೆ ಬರಲು ನಿರ್ಧರಿಸಿರುವ ಭೂಗತರಾಗಿದ್ದ 6 ಮಂದಿ ನಕ್ಸಲೀಯರು ನಾಳೆ ಚಿಕ್ಕಮಗಳೂರಿನ ಜಿಲ್ಲಾಡಳಿತ ಮುಂದೆ ಶರಣಾಗಲು ಮುಂದಾಗಿದ್ದಾರೆ. https://ainlivenews.com/good-news-for-government-employees-for-the-new-year-money-will-be-deposited-from-the-bank-soon/ ಶರಣಾಗತಿಗೂ ಮುನ್ನ ಮುಂಡುಗಾರು ಲತಾ ಪಶ್ಚಿಮ ಘಟ್ಟಗಳ ಸಾಲಿನಲ್ಲಿ ಆ್ಯಕ್ಟಿವ್ ಆಗಿದ್ದ ನಕ್ಸಲರನ್ನ ಶಾಂತಿಗಾಗಿ ನಾಗರೀಕ ವೇದಿಕೆ ಹಾಗೂ ಶರಣಾಗತಿ ಕಮಿಟಿ ಕಾಡಿನೊಳಗೆ ಭೇಟಿಯಾಗಿ ಸಭೆ ನಡೆಸಿದ್ದಾರೆ. 1. ಮುಂಡುಗಾರು ಲತಾ, 2. ವನಜಾಕ್ಷಿ, 3. ಸುಂದರಿ, 4. ಮಾರಪ್ಪ ಅರೋಳಿ, 5. ವಸಂತ ಟಿ., 6. ಎನ್. ಜೀಶಾ ಈ 6 ಮಂದಿ ನಕ್ಸಲರು ಈಗಾಗಲೇ ಶಾಂತಿಗಾಗಿ ನಾಗರಿಕ ವೇದಿಕೆಗೆ ಶರಣಾಗತಿ ಪತ್ರ ನೀಡಿದ್ದು, ನಾಳೆ ಸಂಜೆ ವೇಳೆಗೆ ಚಿಕ್ಕಮಗಳೂರು ಜಿಲ್ಲಾಡಳಿತದ ಮುಂದೆ ಶರಣಾಗಲಿದ್ದಾರೆ. ರಾಷ್ಟ್ರೀಯ ಗುಪ್ತಚರ ಇಲಾಖೆಯ ಅಧಿಕಾರಿಗಳು ಈ ಬಗ್ಗೆ ಮಹತ್ವದ ಮಾಹಿತಿ ಕಲೆ ಹಾಕಿ ಚಿಕ್ಕಮಗಳೂರಿಗೆ ಆಗಮಿಸಿದ್ದಾರೆ. ಚಿಕ್ಕಮಗಳೂರಲ್ಲಿ ನಕ್ಸಲ್ ನಾಯಕಿ ಮುಂಡಗಾರು ಲತಾ ಪ್ರತಿಕ್ರಿಯಿಸಿದ್ದು, ಸರ್ಕಾರ ನಮ್ಮ ಬೇಡಿಕೆಗೆ ಒಪ್ಪಿರುವ ಹಿನ್ನೆಲೆ ಶರಣಾಗುತ್ತಿದ್ದೇವೆ. ನಾವು ಸಮಾಜದ ಮುಖ್ಯವಾಹಿನಿಗೆ ಬರುತ್ತೇವೆ. ನಮ್ಮ ಬೇಡಿಕೆಯನ್ನ…
ಬೆಂಗಳೂರು/ನವದೆಹಲಿ:- ಕೇಂದ್ರ ಸರ್ಕಾರದಿಂದ ನೌಕರರಿಗೆ ಭರ್ಜರಿ ಗುಡ್ನ್ಯೂಸ್ ಸಿಕ್ಕಿದ್ದು, ಸದ್ಯದಲ್ಲೇ ಬ್ಯಾಂಕ್ ಖಾತೆಗೆ ಹಣ ಜಮೆ ಆಗಲಿದೆ. ಸದ್ಯದಲ್ಲೇ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಕೇಂದ್ರ ನೌಕರರ ಖಾತೆಗೆ 11,250 ರೂ. ಹಣ ಜಮಾ ಮಾಡಲಿದೆ ಎಂದು ತಿಳಿದು ಬಂದಿದೆ. https://ainlivenews.com/madam-when-is-the-wedding-nachi-neeras-charming-star-ramya/ ಕೇಂದ್ರ ಸರ್ಕಾರಿ ನೌಕರರ ತುಟ್ಟಿಭತ್ಯೆ ಮತ್ತು ಪಿಂಚಣಿದಾರರ ತುಟ್ಟಿಭತ್ಯೆ ಶೇ.53ಕ್ಕೆ ಏರಿಕೆ ಆಗಿತ್ತು. ಈ ತುಟ್ಟಿಭತ್ಯೆಯನ್ನು ಇಷ್ಟು ದಿನ ತಡೆ ಹಿಡಿಯಲಾಗಿತ್ತು. ಈಗ ತಡೆ ಹಿಡಿಯಲಾಗಿದ್ದ ಡಿಎ ಬಾಕಿ ಪಾವತಿಯನ್ನು ಬಜೆಟ್ನಲ್ಲಿ ಘೋಷಣೆ ಮಾಡಲು ಕೇಂದ್ರ ಸರ್ಕಾರ ಮುಂದಾಗಿದೆ. ಇದಾದ ಬೆನ್ನಲ್ಲೇ ಕೇಂದ್ರ ನೌಕರರ ಖಾತೆಗೆ ಹಣ ಬರಲಿದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2025-26ನೇ ಹಣಕಾಸು ವರ್ಷದ ಬಜೆಟ್ ಅನ್ನು ಫೆಬ್ರವರಿ 1 ರಂದು ಮಂಡಿಸಲಿದ್ದಾರೆ. ಬಜೆಟ್ ಮಂಡನೆ ವೇಳೆ ಕೇಂದ್ರ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರಿಗೆ ಕೆಲವು ಸಿಹಿ ಸುದ್ದಿಗಳು ಸಿಗಲಿವೆ. ಇಷ್ಟೇ ಅಲ್ಲ ಕೇಂದ್ರ ಸರ್ಕಾರಿ ನೌಕರರು ಹಾಗೂ ಪಿಂಚಣಿದಾರರು ಬಜೆಟ್ನಲ್ಲಿ 8ನೇ…