Author: AIN Author

ಬೆಂಗಳೂರು:- ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಹಿರಿಯ ಸಾಹಿತಿ ಡಾ. ನೋರ್ಬೆರ್ಟ್ ಡಿಸೋಜ ತೀವ್ರ ಅನಾರೋಗ್ಯದಿಂದ ವಿಧಿವಶರಾಗಿದ್ದಾರೆ. 88 ವರ್ಷದ ಡಿಸೋಜ ಅವರು ಅನಾರೋಗ್ಯ ಹಿನ್ನೆಲೆಯಲ್ಲಿ ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ 7.50ಕ್ಕೆ ಆಸ್ಪತ್ರೆಯಲ್ಲೇ ಕೊನೆಯುಸಿರೆಳೆದಿದ್ದಾರೆ. https://ainlivenews.com/youth-fund-special-registration-campaign-from-jan-6-know-full-details-here/ ಇನ್ನೂ ಅವರ ನಿಧನದ ಗೌರವಾರ್ಥ ಇಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಬೇಕು ಎಂದು ನೆಟ್ಟಿಗರು ಒತ್ತಾಯಿಸಿದ್ದಾರೆ. ರಾಜಕೀಯ ವ್ಯಕ್ತಿಗಳು ನಿಧನ ಹೊಂದಿದಾಗ ರಜೆ ಘೋಷಿಸುವ ಸರ್ಕಾರಗಳು, ಇಂತಹ ಸರ್ವ ಧರ್ಮಸಮಭಾವದ ಪ್ರತಿಪಾದಕ, ಕನ್ನಡದ ನಾಡಿ ಎಂದೇ ಜನಜನಿತರಾಗಿದ್ದ ನಾ. ಡಿಸೋಜ ಅವರ ನಿಧನಕ್ಕೆ ಸಂತಾಪ ಸೂಚಿಸಲು ಇಂದು ರಜೆ ನೀಡಬೇಕು ಎಂದು ಆಗ್ರಹಿಸಿದ್ದಾರೆ. ಆದರೆ ಇಂದು ರಜೆ ಘೋಷಿಸಲಾಗಿಲ್ಲ. ಇನ್ನೂ ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ 1937ರ ಜೂನ್ 6ರಂದು ಡಿಸೋಜ ಜನಿಸಿದರು. ಪರಿಸರ ಕಾಳಜಿ ಜೊತೆಗೆ ಕನ್ನಡ ಸಾಹಿತ್ಯ ಲೋಕದಲ್ಲಿ ಮಕ್ಕಳ ಸಾಹಿತ್ಯವನ್ನು ಒಳಗೊಂಡಂತೆ ಅಪಾರವಾದ ಕೃಷಿ ನಡೆಸಿದ್ದಾರೆ. ಅಲ್ಲದೆ ಅವರು ಬರೆದಿರುವ ಹಲವು ಕಾದಂಬರಿಗಳು ಸಿನಿಮಾಗಳಾಗಿ…

Read More

ಬೆಂಗಳೂರು:- ರಾಜ್ಯ ಸರ್ಕಾರದ 5 ಗ್ಯಾರಂಟಿ ಯೋಜನೆಗಳಲ್ಲಿ ‘ಯುವನಿಧಿ’ ಸಹ ಒಂದು. ವಿದ್ಯಾವಂತ ಯುವಕ/ ಯುವತಿಯರಿಗೆ ನಿರುದ್ಯೋಗ ಭತ್ಯೆಯನ್ನು ನೀಡುವ ಜೊತೆಗೆ ಕೌಶಲ್ಯಾಭಿವೃದ್ಧಿಗೊಳಿಸಿ, ಉದ್ಯೋಗಕ್ಕೆ ಸಜ್ಜುಗೊಳಿಸಲು ಆದ್ಯತೆ ನೀಡುವ ಯೋಜನೆ ಇದಾಗಿದೆ. 2024ರ ಜನವರಿ 12ರಂದು ಈ ಯೋಜನೆಗೆ ಶಿವಮೊಗ್ಗದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದ್ದರು. ಕೆಲವೇ ದಿನಗಳಲ್ಲಿ ಯೋಜನೆಗೆ ಚಾಲನೆ ಸಿಕ್ಕಿ 1 ವರ್ಷ ಆಗಲಿದೆ. https://ainlivenews.com/has-the-caste-census-report-been-fixed-what-did-cm-siddaramaiah-say/ ಯುವನಿಧಿ ಯೋಜನೆ ಅಡಿಯಲ್ಲಿ 2023–24ನೇ ಸಾಲಿನಲ್ಲಿ ತೇರ್ಗಡೆಯಾದ ಪದವಿ, ಸ್ನಾತಕೋತ್ತರ ಪದವಿ ಮತ್ತು ಡಿಪ್ಲೋಮಾ ಅಭ್ಯರ್ಥಿಗಳನ್ನು ಯುವ ನಿಧಿ ಯೋಜನೆ ವ್ಯಾಪ್ತಿಗೆ ತರುವ ಸಂಬಂಧ ಜನವರಿ 6 ರಿಂದ 20 ರವರೆಗೆ ಜಿಲ್ಲೆಯಾದ್ಯಂತ ಯುವನಿಧಿ ವಿಶೇಷ ನೋಂದಣಿ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ. ಅಭ್ಯರ್ಥಿಗಳು ಮೇಲೆ ತಿಳಿಸಿದ ನೋಂದಣಿ ಕೇಂದ್ರಗಳಲ್ಲಿ ಅಥವಾ www.sevasindhugs.karnataka.gov.in ನೋಂದಾಯಿಸಬಹುದಾಗಿದೆ. 2024ನೇ ಸಾಲಿನ ಪದವಿ ಸ್ನಾತಕೋತ್ತರ ಪದವಿ ಹಾಗೂ ಡಿಪ್ಲೋಮಾದಲ್ಲಿ ತೆರ್ಗಡೆ ಹೊಂದಿ 180 ದಿನಗಳೊಳಗೆ ಇರುವ ಅಭ್ಯರ್ಥಿಗಳು ಕೂಡ ಅರ್ಜಿ ಸಲ್ಲಿಸಬಹುದು. ಯೋಜನೆಯ ಅರ್ಹ ಅಭ್ಯರ್ಥಿಗಳು ನಿರುದ್ಯೋಗ ಭತ್ಯೆಯನ್ನು…

Read More

ಬೆಂಗಳೂರು/ದಾವಣಗೆರೆ:- ಜಾತಿಗಣತಿ ಕುರಿತು ಎಚ್.ಕಾಂತರಾಜ ಆಯೋಗದ ವರದಿ ಜಾರಿಗೆ ಸಂಪುಟದಲ್ಲಿ ಚರ್ಚೆ ಮಾಡಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. https://ainlivenews.com/60-percent-commission-in-congress-government-minister-kumaraswamy-serious-accusation/ ಭಾನುವಾರ ನಗರದಲ್ಲಿ ಆಯೋಜಿಸಿದ್ದ ಕನಕದಾಸರ ಜಯಂತ್ಯುತ್ಸವ ಉದ್ಘಾಟಿಸಿ ಅವರು ಮಾತನಾಡಿದರು. ಜಾತಿಗಣತಿ ಕುರಿತು ಎಚ್.ಕಾಂತರಾಜ ಆಯೋಗದ ವರದಿ ಜಾರಿಗೆ ಬಹಳ ವರ್ಷಗಳಿಂದ ಒತ್ತಾಯ ಇದೆ. ಸರ್ಕಾರ ವರದಿಯನ್ನು ಈಗಾಗಲೇ ಸ್ವೀಕರಿಸಿಯಾಗಿದೆ. ಸಚಿವ ಸಂಪುಟದ ಮುಂದಿನ ಸಭೆಯಲ್ಲಿ ವರದಿಯನ್ನು ಮಂಡಿಸಿ ಚರ್ಚೆ ನಡೆಸುತ್ತೇನೆ ಎಂದರು. ನಾವು ಜಾತಿ ಜನಗಣತಿ ಪರ ಇದ್ದೇವೆ. ಜಾತಿ ಆಧಾರದ ಮೇಲೇ ಬಡವರನ್ನು, ಶೋಷಿತರನ್ನು ಗುರುತಿಸುವ ಕೆಲಸವಾಗುತ್ತದೆ. ಅದರ ಆಧಾರದ ಮೇಲೇ ಸರ್ಕಾರ ಕಾರ್ಯಕ್ರಮಗಳನ್ನು ರೂಪಿಸಬೇಕಾಗುತ್ತದೆ. ಸಮಾಜದಲ್ಲಿ ಸಮಾನತೆ ತರಲು ಇದೆಲ್ಲ ಅವಶ್ಯ. ಹೀಗಾಗಿ ಕಾಂತರಾಜ ಆಯೋಗದ ವರದಿ ಜಾರಿಗೆ ನಮ್ಮ ಸರ್ಕಾರ ಪ್ರಾಮಾಣಿಕ ಪ್ರಯತ್ನ ನಡೆಸಲಿದೆ’ ಎಂದು ಭರವಸೆ ನೀಡಿದರು.

Read More

ಬೆಂಗಳೂರು:- ಕರ್ನಾಟಕ ಕಾಂಗ್ರೆಸ್ ಸರ್ಕಾರದಲ್ಲಿ 60 ಪರ್ಸೆಂಟ್ ಕಮಿಷನ್ ನಡೆಯುತ್ತಿದೆ ಎಂದು ಹೆಚ್​ಡಿ ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ. https://ainlivenews.com/men-of-karnataka-should-not-vote-for-congress-from-now-on-bjp-mla-yatnal/ ಈ ಸಂಬಂಧ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರದಲ್ಲಿ ಶೇ 60 ರಷ್ಟು ಕಮಿಷನ್ ಇದೆ ಎಂದು ಅವರ ಕಾಂಗ್ರೆಸ್ ಗುತ್ತಿಗೆದಾರರೇ ಹೇಳುತ್ತಿದ್ದಾರೆ ಎಂದು ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ಆರೋಪಿಸಿದ್ದಾರೆ. ವಿಧಾನಸೌಧದಲ್ಲೇ ಮಂತ್ರಿಗಳಿಗೆ ಕಮಿಷನ್ ಹೋಗುತ್ತಿದೆ ಎಂದು ಕಾಂಗ್ರೆಸ್‌ಗೆ ತಿವಿದಿದ್ದಾರೆ. ಪ್ರತಿ ಇಲಾಖೆಯಲ್ಲೂ ಸಚಿವರಿಗೆ ಮೊದಲು ಪರ್ಸೆಂಟೇಜ್ ಕೊಟ್ಟು ಆಮೇಲೆ ಹಣ ಬಿಡುಗಡೆ ಮಾಡುವ ಕೆಲಸ ಆಗುತ್ತಿದೆ ಎಂದು ಕುಮಾರಸ್ವಾಮಿ ಸ್ಫೋಟಕ ಆರೋಪ ಮಾಡಿದ್ದಾರೆ. ಇದಕ್ಕೆ ತಿರುಗೇಟು ಕೊಟ್ಟ ಸಿಎಂ ಸಿದ್ದರಾಮಯ್ಯ, ಸಾಬೀತು ಮಾಡಿ ನೋಡೋಣ ಎಂದು ಸವಾಲು ಹಾಕಿದ್ದಾರೆ. ಸರ್ಕಾರದ ವಿರುದ್ಧ 60 ಪರ್ಸೆಂಟ್ ಲಂಚದ ಆರೋಪ ಮಾಡಿರುವ ಕುಮಾರಸ್ವಾಮಿ ವಿರುದ್ಧ ಕಾಂಗ್ರೆಸ್ ನಾಯಕರು ಕಿಡಿಕಾರಿದ್ದಾರೆ. ಕುಮಾರಸ್ವಾಮಿ ಆರೋಪ ಸಾಬೀತುಪಡಿಸಲಿ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಬಾಯಿ ಚಪಲಕ್ಕೆ ಮಾತನಾಡುತ್ತಿದ್ದಾರೆ ಎಂದು ಚಲುವರಾಯಸ್ವಾಮಿ ಹೇಳಿದ್ದಾರೆ. ಕುಮಾರಸ್ವಾಮಿ ಹತಾಶರಾಗಿದ್ದಾರೆ ಎಂದು…

Read More

ವಿಜಯಪುರ:- ಕರ್ನಾಟಕದ ಗಂಡಸರು ಇನ್ಮುಂದೆ ಕಾಂಗ್ರೆಸ್ ಮತ ಹಾಕಬೇಡಿ ಎಂದು ಬಿಜೆಪಿ ಶಾಸಕ ಯತ್ನಾಳ್ ಕರೆ ಕೊಟ್ಟಿದ್ದಾರೆ. https://ainlivenews.com/thousands-more-scholarship-distribution/ ಕರ್ನಾಟಕದಲ್ಲಿ ಬಸ್ ಟಿಕೆಟ್ ದರ 15% ಏರಿಕೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಯತ್ನಾಳ್, ಕರ್ನಾಟಕ ಗಂಡಸರು ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಮತ ಹಾಕಬಾರದು. ಹೆಣ್ಣುಮಕ್ಕಳಿಗೆ ಉಚಿತ ಕೊಟ್ಟು ಗಂಡಸರಿಗೆ ಹೆಚ್ಚಿನ ದುಡ್ಡು ಹಾಕಿದ್ದಾರೆ. ಗಂಡಸರು ಏನು ಪಾಪ ಮಾಡಿದ್ದಾರೆ? ಇದು ಹೆಣ್ಣು ಮಕ್ಕಳಿಗೂ ಅನ್ಯಾಯವಾಗುತ್ತದೆ. ಮಕ್ಕಳು ಮನೆಯ ಯಜಮಾನರಿಗೂ ಅನ್ಯಾಯವಾಗುತ್ತದೆ. ಇವರ ರಕ್ಷಣೆ ಮಾಡಬೇಕೆಂದರೆ ಹೆಣ್ಣು ಮಕ್ಕಳೂ ಸಹ ಕಾಂಗ್ರೆಸ್‌ಗೆ ಮತ ಹಾಕಬಾರದೆಂದು ಎಂದು ವಿರೋಧ ವ್ಯಕ್ತಪಡಿಸಿದ್ದಾರೆ. ಕಲಬುರಗಿ ಪ್ರತಿಭಟನೆಯಲ್ಲಿ ವಿಜಯೇಂದ್ರ ಭಾಗಿ ಆಗದ ವಿಚಾರವಾಗಿ ಮಾತನಾಡಿ, ವಿಜಯೇಂದ್ರ ಅವರ ನೇತೃತ್ವದಲ್ಲಿ ಎಲ್ಲೆಡೆ ಪ್ರತಿಭಟನೆ ಎಂದು ಹೇಳಿಕೊಂಡಿದ್ದರು. ಪಾಪಾ ವಿಜಯೇಂದ್ರ ಅವರಿಗೆ ಏನು ಕೆಲಸ ಇತ್ತು ಗೊತ್ತಿಲ್ಲ. ನಿನ್ನೆ ಮೂರು ಕಡೆ ಹೋರಾಟ ಆಗಿದೆ. ಒಂದು ವಕ್ಫ್ ವಿರುದ್ಧ, ಪ್ರಿಯಾಂಕ್ ಖರ್ಗೆ ವಿರುದ್ಧ ಹೋರಾಟ, ಇನ್ನೊಂದು ಬಾಣಂತಿಯರ ಸಾವು ಹೋರಾಟ. ಆ…

Read More

ಹುಬ್ಬಳ್ಳಿ: ಶ್ರೀರಾಫೈನಾನ್ಸ್ ಲಿಮಿಟೆಡ್ ವತಿಯಿಂದ 1200ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಿಸಲಾಯಿತು. ಧಾರವಾಡದ ಶ್ರೀ ಡಾ. ಅಣ್ಣಾಜಿರಾವ್‌ ಸಿರೂರ ಸೃಜನಾ ರಂಗಮಂದಿರದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ವಿಧಾನ ಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ ವಿದ್ಯಾರ್ಥಿ ವೇತನ ವಿತರಿಸಿ ಮಾತನಾಡಿ, ವಿದ್ಯಾರ್ಥಿಗಳು ಬಾಲ್ಯದಲ್ಲಿಯೇ ಸಂಸ್ಕಾರವಂತರಾಗಬೇಕು. ನೌಕರಿಗಾಗಿ ಕಾಯದೇ ಉದ್ಯಮ ಸ್ಥಾಪನೆ ಮಾಡಿ ಸ್ವಾವಲಂಬಿಯಾಗಿ ಬದುಕಬೇಕು. ವಿದ್ಯಾರ್ಥಿ ವೇತನವನ್ನು ಸದುಪಯೋಗ ಪಡಿಸಿಕೊಂಡು ವಿದ್ಯಾರ್ಥಿಗಳು ಭವಿಷ್ಯದಲ್ಲಿ ಸಮಾಜಕ್ಕೆ ಸಹಾಯ ಮಾಡುವ ಮನೋಭಾವ ಹೊಂದಬೇಕು ಎಂದರು. https://ainlivenews.com/bjp-congress-tweet-war-congress-has-released-the-list-of-scandals-of-the-previous-government/ ಶ್ರೀರಾಮ ಫೈನಾನ್ಸ್ ಲಿಮಿಟೆಡ್‌ನ ಕಾರ್ಯನಿರ್ವಾಹಕ ನಿರ್ದೇಶಕ ಶ್ರೀಧರ ಮಠ ಅವರು ಸಂಸ್ಥೆಯ ಬೆಳವಣಿಗೆ ಹಾಗೂ ನಡೆದು ಬಂದ ದಾರಿಯ ಬಗ್ಗೆ ವಿವರಿಸಿದರು. ವಿಶಾಲ ಅಬ್ಬಯ್ಯ, ರಾಮಲಿಂಗೇಗೌಡ, ಶಿವಾನಂದ ಸವದತ್ತಿ, ವಾದಿರಾಜ ಸಿ., ಜು ಬಳಿಗಾರ, ಪದ್ಮರಾಜ, ರಾಮಚಂದ್ರ, ನಾಗರಾಜ ಸಿ., ಪ್ರಕಾಶ ಮೇಟಿ, ಪ್ರಶಾಂತ ಸಕ್ರೆಣ್ಣನವರ, ಗೋಪಾಲ ಹರ್ಲಾಪುರ, ರಾಜು ಜಂಗಮಗೌಡರ, ಅಧಿಕಾರಿಗಳು ಭಾಗವಹಿಸಿದ್ದರು. ಪ್ರಕಾಶ ಪದಕಿ ಹಾಗೂ ರಾಜಶೇಖರ ಪಲ್ಲಟ್ಟಿ ಕಾರ್ಯಕ್ರಮ ನಿರೂಪಿಸಿದರು.

Read More

ತೆಂಗಿನಕಾಯಿ ದಕ್ಷಿಣ ಭಾರತದ ಬಹುತೇಕ ಆಹಾರದಲ್ಲಿ ನಿತ್ಯ ಬಳಕೆಯಾಗುತ್ತದೆ. ತೆಂಗು ಮತ್ತೆ ಇಂಗು ಇದ್ದರೆ ಮಂಗ ಸಹ ಚೆನ್ನಾಗಿ ಅಡುಗೆ ಮಾಡಬಲ್ಲದು ಎಂಬ ಗಾದೆ ಮಾತೇ ಇದೆ. ತೆಂಗಿನ ಕಾಯಿ ತುರಿಯನ್ನು ಅಡುಗೆಯಲ್ಲಿ ಬಳಸುವುದು ಸಾಮಾನ್ಯ. ತೆಂಗಿನ ಕಾಯಿಯ ಹಸಿ ಚೂರನ್ನು ತಿನ್ನುವುದು ಕೆಲವರಿಗೆ ಇಷ್ಟವಾಗುವುದಿಲ್ಲ. ಆದರೆ, ಆರೋಗ್ಯಕ್ಕೆ ಇಷ್ಟೆಲ್ಲಾ ಪ್ರಯೋಜಗಳಿದ್ದಾಗ ಮನೆಯಲ್ಲಿಯೇ ಸಿಗುವ ಆಹಾರ ಪದಾರ್ಥಗಳಿಂದ ಪ್ರಯೋಜನ ಪಡೆದುಕೊಳ್ಳಬೇಕು. ಇನ್ನೂಹಬ್ಬ, ಅಥವಾ ನೆಂಟರು ಬಂದ ಸಂದರ್ಭದಲ್ಲಿ ಅನಿವಾರ್ಯವಾಗಿ ಹೆಚ್ಚು ಕಾಯಿಗಳನ್ನು ಒಡೆಯಬೇಕಾಗುತ್ತದೆ. ಆಗ ಅಡುಗೆ ಮುಗಿದ ಮೇಲೂ ಕೆಲವು ಕಾಯಿಗಳು ಬಳಕೆಯಾಗದೆ ಹಾಗೆಯೇ ಉಳಿದಿರುತ್ತದೆ. ಅದನ್ನು ಕೆಡದಂತೆ ಕಾಪಾಡುವುದು ಕೂಡ ಸವಾಲಿನ ಕೆಲಸವೇ. ಬಿಸಿಲಿದ್ದರೆ ಒಣಗಿಸಿ: ಬಿಸಿಲಿದ್ದರೆ ಕಾಯಿಯನ್ನು ಒಣಗಿಸಿ ಮರುದಿನ ಅಡುಗೆಗೆ ಬಳಸಬಹುದು. ಕಾಯಿ ತುರಿಯನ್ನು ಬೆಚ್ಚಗೆ ಮಾಡಿ ಇರಿಸಬಹುದು: ಕಾಯಿ ತುರಿಯನ್ನು ಫ್ರಿಜ್​ನಲ್ಲಿ ಇಡಬಹುದು, ಇಲ್ಲವಾದಲ್ಲಿ ಕಾಯಿ ತುರಿಯನ್ನು ಪಾತ್ರೆಗಾಗಿ ಒಲೆಯ ಮೇಲಿಟ್ಟು ಸ್ವಲ್ಪ ಬೆಚ್ಚಗೆ ಮಾಡಿಟ್ಟರೆ ನಂತರ ಅಡುಗೆಗೆ ಬಳಸಬಹುದು. ಉಪ್ಪಿನ ಪಾತ್ರೆಯಲ್ಲಿ ಹಾಕಿಡಬಹುದು: ಒಡೆದ ಕಾಯಿಯನ್ನು…

Read More

ಬೆಂಗಳೂರು:- ಬಿಜೆಪಿ ಮತ್ತು ಕಾಂಗ್ರೆಸ್​ ನಡುವೆ ಟ್ವೀಟ್ ವಾರ್​ ಶುರುವಾಗಿದೆ. ಅಧಿಕಾರದುದ್ದಕ್ಕೂ ಬಿಜೆಪಿ ಮಾಡಿದ್ದು, ಕೇವಲ ರಾಜ್ಯದ ಲೂಟಿ. ಬಿಜೆಪಿ ಕಾಲದಲ್ಲಿ ನಡೆದಿದೆ ಎನ್ನಲಾದ ಹಗರಣಗಳನ್ನು ಉಲ್ಲೇಖಿಸಿ ಕಾಂಗ್ರೆಸ್​ ಕಿಡಿಕಾರಿದೆ. https://ainlivenews.com/unmarried-husbands-hushar-kanrappa-be-aware-of-the-fraud-network/ ಈ ಬಗ್ಗೆ x ಮಾಡಿರುವ ಕಾಂಗ್ರೆಸ್, ಅಧಿಕಾರದುದ್ದಕ್ಕೂ ಬಿಜೆಪಿ ಮಾಡಿದ್ದು ಕೇವಲ ರಾಜ್ಯದ ಲೂಟಿ, ಈಗ ಜನಪರ ಕಾಂಗ್ರೆಸ್ ಸರ್ಕಾರದ ಬಗ್ಗೆ ಟೀಕಿಸಲು ವಿಷಯಗಳೇ ಇಲ್ಲದೆ, ತಮ್ಮ ಅವಧಿಯ ಅಕ್ರಮ, ಅನಾಚಾರಗಳು ಬೆತ್ತಲಾಗುತ್ತವೆ ಎಂಬ ಆತಂಕದಲ್ಲಿ ವೈಯಕ್ತಿಕವಾಗಿ ಕಾಂಗ್ರೆಸ್ ನಾಯಕರ, ಸಚಿವರ ತೇಜೋವಧೆಗೆ ಇಳಿದು ಕ್ಷುಲ್ಲಕ ರಾಜಕಾರಣ ಮಾಡುತ್ತಿದೆ, ಗ್ಯಾರಂಟಿ ಯೋಜನೆಗಳ ವಿರುದ್ಧ ವಿಷ ಕಾರುತ್ತಿದೆ. ಭ್ರಷ್ಟಾಚಾರದ ಪಿತಾಮಹರಾದ ಬಿಜೆಪಿ ನಾಯಕರು ಅವರ ಘನ ಕಾರ್ಯಗಳ ಬಗ್ಗೆ ಕೇಳಿದರೆ ಮಾತ್ರ ಬೆನ್ನು ತಿರುಗಿಸಿ ಓಡುತ್ತಾರೆ ಎಂದು ವಾಗ್ದಾಳಿ ಮಾಡಲಾಗಿದೆ. ಹೆಣದ ಮೇಲೆ ಹಣ ಲೂಟಿ ಮಾಡಿದ ಸಾವಿರಾರು ಕೋಟಿ ಕೋವಿಡ್ ಹಗರಣ ನೂರಾರು ಕೋಟಿ ರೂ. ಕೊಳ್ಳೆ ಹೊಡೆದ ಪಿಎಸ್‌ಐ ನೇಮಕಾತಿ ಅಕ್ರಮ ಬೋವಿ ನಿಗಮದಲ್ಲಿ 87 ಕೋಟಿ…

Read More

ಕನ್ಯೆ ಸಿಗದ ಯುವ ರೈತರೇ ಇವರ ಟಾರ್ಗೆಟ್, ಮದುವೆ ಆಗದ ಗಂಡು ಮಕ್ಕಳೇ ಸ್ವಲ್ಪ ಹುಷಾರ್ ಆಗಿರ್ರಪ್ಪ. ಉತ್ತರ ಕರ್ನಾಟಕದಲ್ಲಿ ಮದುವೆ ವಂಚನೆ ಜಾಲ ಪತ್ತೆ ಆಗಿದೆ. https://ainlivenews.com/famous-senior-literature-dr-na-dsouja-passed-away/ ಯುವ ರೈತನಿಗೆ ಮೋಸ ಮಾಡಿದವಳು ಎರಡು ಮದುವೆ, ಎರಡು ಹೆಣ್ಮಕ್ಕಳು, ಅಷ್ಟೇ ಅಲ್ಲ ಇಬ್ಬರು ‌ಮೊಮ್ಮಕ್ಕಳು ಹೊಂದಿದ ಅಜ್ಜಿ ಎಂದು ಗೊತ್ತಾಗಿದೆ. ಮೇಲಾಗಿ ಮೋಸ ಹೋದ ರೈತನಿಗೆ 55 ಸಾವಿರ ರೂ. ಬೇಡಿಕೆ ಇಡುವುದರ ಮೂಲಕ ಮತ್ತೊಂದು ಮದುವೆ ಆಫರ್‌ ನೀಡಿದ್ದು ಬೆಳಕಿಗೆ ಬಂದಿದೆ. ಜಿಲ್ಲೆಯ ಮುಧೋಳ ತಾಲ್ಲೂಕಿನ ಬಿದರಿ ಗ್ರಾಮದ ಸೋಮಶೇಖರ್​​ಗೆ ಕಳೆದ ಐದ ವರ್ಷದಿಂದ ಕನ್ಯೆ ಹುಡುಕುತ್ತಿದ್ದರು. ಆದರೆ ಸಿಕ್ಕರಲಿಲ್ಲ. ಇದನ್ನೆ ಅಸ್ತ್ರ ಮಾಡಿಕೊಂಡ ಆರೋಪಿಗಳಾದ ಸತ್ಯಪ್ಪ, ಸಂಜು ಸಿದ್ದಪ್ಪ, ರವಿ ಮದುವೆಯಾದ ಮಂಜುಳಾ, ಸಂಬಂಧಿಕರ‌ ಸೋಗಿನಲ್ಲಿ ಬಂದ ಲಕ್ಷ್ಮಿ, ನಾಗವ್ವ ಸೇರಿ ಏಳು ಜನರು ವಂಚನೆ ಎಸಗಿದ್ದಾರೆ. ಸೋಮಶೇಖರ್ ಕಡೆಯಿಂದ 4-5 ಸಾವಿರ ರೂ. ಹಣ ಪಡೆದು ವಂಚಿಸಿದ್ದಾರೆ. ಮದುವೆಯಾಗಿ ತಿಂಗಳ ನಂತರ ಮಂಜುಳಾ ಎರಡು ಮದುವೆಯಾಗಿದ್ದು,…

Read More

ಖ್ಯಾತ ಹಿರಿಯ ಸಾಹಿತಿ ಡಾ ನಾ ಡಿಸೋಜ ನಿಧನ ಹೊಂದಿದ್ದಾರೆ. ಅನಾರೋಗ್ಯ ಹಿನ್ನೆಲೆ ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ಭಾನುವಾರ 7.50ಕ್ಕೆ ನಿಧನರಾದರು. https://ainlivenews.com/i-am-not-against-guarantee-scheme-please-dont-stop-hd-kumaraswamy/#google_vignette ಆ ಮೂಲಕ ಕನ್ನಡ ಸಾಹಿತ್ಯ ಲೋಕಕ್ಕೆ ತೀವ್ರ ನಷ್ಟಉಂಟಾಗಿದೆ. ಗಣ್ಯರ ಅಗಲಿಕೆಗೆ ಹಲವರು ಸಂತಾಪ ಸೂಚಿಸಿದ್ದಾರೆ. ಅವರ ಪಾರ್ಥಿವ ಶರೀರವನ್ನು ಇಂದು ಮಧ್ಯಾಹ್ನದ ನಂತರ ಸಾಗರದ ಅವರ ಸ್ವಗೃಹದಲ್ಲಿ ಸಾರ್ವಜನಿಕ ವೀಕ್ಷಣೆಗೆ ಇಡಲಾಗುವುದು ಎಂದು ನಾ.ಡಿಸೋಜ ಅವರ ಪುತ್ರ ನವೀನ್ ನಾ.ಡಿಸೋಜ ತಿಳಿಸಿದ್ದಾರೆ. ಡಿಸೋಜರವರು ಈವರೆಗೆ 37 ಕಾದಂಬರಿಗಳು, ನಾಲ್ಕು ನಾಟಕಗಳು, ಇಪ್ಪತ್ತೆಂಟು ಮಕ್ಕಳ ಕೃತಿಗಳು ಸೇರಿದಂತೆ ನೂರಾರು ಕತೆಗಳನ್ನು ಬರೆದಿದ್ದಾರೆ. ಇವರ ಕಾದಂಬರಿ ‘ಕಾಡಿನ ಬೆಂಕಿ’ ಹಾಗೂ ‘ದ್ವೀಪ’ ಚಲನಚಿತ್ರಗಳಾಗಿ ‘ರಜತಕಮಲ’ ಹಾಗೂ ‘ಸ್ವರ್ಣಕಮಲ’ ಪ್ರಶಸ್ತಿಗಳನ್ನು ಪಡೆದುಕೊಂಡಿವೆ. ‘ಬಳುವಳಿ’ ಕಾದಂಬರಿ ಕೊಂಕಣಿಯಲ್ಲಿ ಚಲನಚಿತ್ರವಾಗಿದೆ. ‘ಸಾರ್ಕ್’ ದೇಶಗಳ ಸಾಹಿತಿಗಳ ಸಮ್ಮೇಳನದಲ್ಲಿ ಸ್ವಂತ ಕಥಾವಾಚನ ಮಾಡಿದ್ದರು.

Read More