ತೆಂಗಿನಕಾಯಿ ದಕ್ಷಿಣ ಭಾರತದ ಬಹುತೇಕ ಆಹಾರದಲ್ಲಿ ನಿತ್ಯ ಬಳಕೆಯಾಗುತ್ತದೆ. ತೆಂಗು ಮತ್ತೆ ಇಂಗು ಇದ್ದರೆ ಮಂಗ ಸಹ ಚೆನ್ನಾಗಿ ಅಡುಗೆ ಮಾಡಬಲ್ಲದು ಎಂಬ ಗಾದೆ ಮಾತೇ ಇದೆ. ತೆಂಗಿನ ಕಾಯಿ ತುರಿಯನ್ನು ಅಡುಗೆಯಲ್ಲಿ ಬಳಸುವುದು ಸಾಮಾನ್ಯ. ತೆಂಗಿನ ಕಾಯಿಯ ಹಸಿ ಚೂರನ್ನು ತಿನ್ನುವುದು ಕೆಲವರಿಗೆ ಇಷ್ಟವಾಗುವುದಿಲ್ಲ. ಆದರೆ, ಆರೋಗ್ಯಕ್ಕೆ ಇಷ್ಟೆಲ್ಲಾ ಪ್ರಯೋಜಗಳಿದ್ದಾಗ ಮನೆಯಲ್ಲಿಯೇ ಸಿಗುವ ಆಹಾರ ಪದಾರ್ಥಗಳಿಂದ ಪ್ರಯೋಜನ ಪಡೆದುಕೊಳ್ಳಬೇಕು. ಇನ್ನೂಹಬ್ಬ, ಅಥವಾ ನೆಂಟರು ಬಂದ ಸಂದರ್ಭದಲ್ಲಿ ಅನಿವಾರ್ಯವಾಗಿ ಹೆಚ್ಚು ಕಾಯಿಗಳನ್ನು ಒಡೆಯಬೇಕಾಗುತ್ತದೆ. ಆಗ ಅಡುಗೆ ಮುಗಿದ ಮೇಲೂ ಕೆಲವು ಕಾಯಿಗಳು ಬಳಕೆಯಾಗದೆ ಹಾಗೆಯೇ ಉಳಿದಿರುತ್ತದೆ. ಅದನ್ನು ಕೆಡದಂತೆ ಕಾಪಾಡುವುದು ಕೂಡ ಸವಾಲಿನ ಕೆಲಸವೇ. ಬಿಸಿಲಿದ್ದರೆ ಒಣಗಿಸಿ: ಬಿಸಿಲಿದ್ದರೆ ಕಾಯಿಯನ್ನು ಒಣಗಿಸಿ ಮರುದಿನ ಅಡುಗೆಗೆ ಬಳಸಬಹುದು. ಕಾಯಿ ತುರಿಯನ್ನು ಬೆಚ್ಚಗೆ ಮಾಡಿ ಇರಿಸಬಹುದು: ಕಾಯಿ ತುರಿಯನ್ನು ಫ್ರಿಜ್ನಲ್ಲಿ ಇಡಬಹುದು, ಇಲ್ಲವಾದಲ್ಲಿ ಕಾಯಿ ತುರಿಯನ್ನು ಪಾತ್ರೆಗಾಗಿ ಒಲೆಯ ಮೇಲಿಟ್ಟು ಸ್ವಲ್ಪ ಬೆಚ್ಚಗೆ ಮಾಡಿಟ್ಟರೆ ನಂತರ ಅಡುಗೆಗೆ ಬಳಸಬಹುದು. ಉಪ್ಪಿನ ಪಾತ್ರೆಯಲ್ಲಿ ಹಾಕಿಡಬಹುದು: ಒಡೆದ ಕಾಯಿಯನ್ನು…
Author: AIN Author
ಬೆಂಗಳೂರು:- ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಟ್ವೀಟ್ ವಾರ್ ಶುರುವಾಗಿದೆ. ಅಧಿಕಾರದುದ್ದಕ್ಕೂ ಬಿಜೆಪಿ ಮಾಡಿದ್ದು, ಕೇವಲ ರಾಜ್ಯದ ಲೂಟಿ. ಬಿಜೆಪಿ ಕಾಲದಲ್ಲಿ ನಡೆದಿದೆ ಎನ್ನಲಾದ ಹಗರಣಗಳನ್ನು ಉಲ್ಲೇಖಿಸಿ ಕಾಂಗ್ರೆಸ್ ಕಿಡಿಕಾರಿದೆ. https://ainlivenews.com/unmarried-husbands-hushar-kanrappa-be-aware-of-the-fraud-network/ ಈ ಬಗ್ಗೆ x ಮಾಡಿರುವ ಕಾಂಗ್ರೆಸ್, ಅಧಿಕಾರದುದ್ದಕ್ಕೂ ಬಿಜೆಪಿ ಮಾಡಿದ್ದು ಕೇವಲ ರಾಜ್ಯದ ಲೂಟಿ, ಈಗ ಜನಪರ ಕಾಂಗ್ರೆಸ್ ಸರ್ಕಾರದ ಬಗ್ಗೆ ಟೀಕಿಸಲು ವಿಷಯಗಳೇ ಇಲ್ಲದೆ, ತಮ್ಮ ಅವಧಿಯ ಅಕ್ರಮ, ಅನಾಚಾರಗಳು ಬೆತ್ತಲಾಗುತ್ತವೆ ಎಂಬ ಆತಂಕದಲ್ಲಿ ವೈಯಕ್ತಿಕವಾಗಿ ಕಾಂಗ್ರೆಸ್ ನಾಯಕರ, ಸಚಿವರ ತೇಜೋವಧೆಗೆ ಇಳಿದು ಕ್ಷುಲ್ಲಕ ರಾಜಕಾರಣ ಮಾಡುತ್ತಿದೆ, ಗ್ಯಾರಂಟಿ ಯೋಜನೆಗಳ ವಿರುದ್ಧ ವಿಷ ಕಾರುತ್ತಿದೆ. ಭ್ರಷ್ಟಾಚಾರದ ಪಿತಾಮಹರಾದ ಬಿಜೆಪಿ ನಾಯಕರು ಅವರ ಘನ ಕಾರ್ಯಗಳ ಬಗ್ಗೆ ಕೇಳಿದರೆ ಮಾತ್ರ ಬೆನ್ನು ತಿರುಗಿಸಿ ಓಡುತ್ತಾರೆ ಎಂದು ವಾಗ್ದಾಳಿ ಮಾಡಲಾಗಿದೆ. ಹೆಣದ ಮೇಲೆ ಹಣ ಲೂಟಿ ಮಾಡಿದ ಸಾವಿರಾರು ಕೋಟಿ ಕೋವಿಡ್ ಹಗರಣ ನೂರಾರು ಕೋಟಿ ರೂ. ಕೊಳ್ಳೆ ಹೊಡೆದ ಪಿಎಸ್ಐ ನೇಮಕಾತಿ ಅಕ್ರಮ ಬೋವಿ ನಿಗಮದಲ್ಲಿ 87 ಕೋಟಿ…
ಕನ್ಯೆ ಸಿಗದ ಯುವ ರೈತರೇ ಇವರ ಟಾರ್ಗೆಟ್, ಮದುವೆ ಆಗದ ಗಂಡು ಮಕ್ಕಳೇ ಸ್ವಲ್ಪ ಹುಷಾರ್ ಆಗಿರ್ರಪ್ಪ. ಉತ್ತರ ಕರ್ನಾಟಕದಲ್ಲಿ ಮದುವೆ ವಂಚನೆ ಜಾಲ ಪತ್ತೆ ಆಗಿದೆ. https://ainlivenews.com/famous-senior-literature-dr-na-dsouja-passed-away/ ಯುವ ರೈತನಿಗೆ ಮೋಸ ಮಾಡಿದವಳು ಎರಡು ಮದುವೆ, ಎರಡು ಹೆಣ್ಮಕ್ಕಳು, ಅಷ್ಟೇ ಅಲ್ಲ ಇಬ್ಬರು ಮೊಮ್ಮಕ್ಕಳು ಹೊಂದಿದ ಅಜ್ಜಿ ಎಂದು ಗೊತ್ತಾಗಿದೆ. ಮೇಲಾಗಿ ಮೋಸ ಹೋದ ರೈತನಿಗೆ 55 ಸಾವಿರ ರೂ. ಬೇಡಿಕೆ ಇಡುವುದರ ಮೂಲಕ ಮತ್ತೊಂದು ಮದುವೆ ಆಫರ್ ನೀಡಿದ್ದು ಬೆಳಕಿಗೆ ಬಂದಿದೆ. ಜಿಲ್ಲೆಯ ಮುಧೋಳ ತಾಲ್ಲೂಕಿನ ಬಿದರಿ ಗ್ರಾಮದ ಸೋಮಶೇಖರ್ಗೆ ಕಳೆದ ಐದ ವರ್ಷದಿಂದ ಕನ್ಯೆ ಹುಡುಕುತ್ತಿದ್ದರು. ಆದರೆ ಸಿಕ್ಕರಲಿಲ್ಲ. ಇದನ್ನೆ ಅಸ್ತ್ರ ಮಾಡಿಕೊಂಡ ಆರೋಪಿಗಳಾದ ಸತ್ಯಪ್ಪ, ಸಂಜು ಸಿದ್ದಪ್ಪ, ರವಿ ಮದುವೆಯಾದ ಮಂಜುಳಾ, ಸಂಬಂಧಿಕರ ಸೋಗಿನಲ್ಲಿ ಬಂದ ಲಕ್ಷ್ಮಿ, ನಾಗವ್ವ ಸೇರಿ ಏಳು ಜನರು ವಂಚನೆ ಎಸಗಿದ್ದಾರೆ. ಸೋಮಶೇಖರ್ ಕಡೆಯಿಂದ 4-5 ಸಾವಿರ ರೂ. ಹಣ ಪಡೆದು ವಂಚಿಸಿದ್ದಾರೆ. ಮದುವೆಯಾಗಿ ತಿಂಗಳ ನಂತರ ಮಂಜುಳಾ ಎರಡು ಮದುವೆಯಾಗಿದ್ದು,…
ಖ್ಯಾತ ಹಿರಿಯ ಸಾಹಿತಿ ಡಾ ನಾ ಡಿಸೋಜ ನಿಧನ ಹೊಂದಿದ್ದಾರೆ. ಅನಾರೋಗ್ಯ ಹಿನ್ನೆಲೆ ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ಭಾನುವಾರ 7.50ಕ್ಕೆ ನಿಧನರಾದರು. https://ainlivenews.com/i-am-not-against-guarantee-scheme-please-dont-stop-hd-kumaraswamy/#google_vignette ಆ ಮೂಲಕ ಕನ್ನಡ ಸಾಹಿತ್ಯ ಲೋಕಕ್ಕೆ ತೀವ್ರ ನಷ್ಟಉಂಟಾಗಿದೆ. ಗಣ್ಯರ ಅಗಲಿಕೆಗೆ ಹಲವರು ಸಂತಾಪ ಸೂಚಿಸಿದ್ದಾರೆ. ಅವರ ಪಾರ್ಥಿವ ಶರೀರವನ್ನು ಇಂದು ಮಧ್ಯಾಹ್ನದ ನಂತರ ಸಾಗರದ ಅವರ ಸ್ವಗೃಹದಲ್ಲಿ ಸಾರ್ವಜನಿಕ ವೀಕ್ಷಣೆಗೆ ಇಡಲಾಗುವುದು ಎಂದು ನಾ.ಡಿಸೋಜ ಅವರ ಪುತ್ರ ನವೀನ್ ನಾ.ಡಿಸೋಜ ತಿಳಿಸಿದ್ದಾರೆ. ಡಿಸೋಜರವರು ಈವರೆಗೆ 37 ಕಾದಂಬರಿಗಳು, ನಾಲ್ಕು ನಾಟಕಗಳು, ಇಪ್ಪತ್ತೆಂಟು ಮಕ್ಕಳ ಕೃತಿಗಳು ಸೇರಿದಂತೆ ನೂರಾರು ಕತೆಗಳನ್ನು ಬರೆದಿದ್ದಾರೆ. ಇವರ ಕಾದಂಬರಿ ‘ಕಾಡಿನ ಬೆಂಕಿ’ ಹಾಗೂ ‘ದ್ವೀಪ’ ಚಲನಚಿತ್ರಗಳಾಗಿ ‘ರಜತಕಮಲ’ ಹಾಗೂ ‘ಸ್ವರ್ಣಕಮಲ’ ಪ್ರಶಸ್ತಿಗಳನ್ನು ಪಡೆದುಕೊಂಡಿವೆ. ‘ಬಳುವಳಿ’ ಕಾದಂಬರಿ ಕೊಂಕಣಿಯಲ್ಲಿ ಚಲನಚಿತ್ರವಾಗಿದೆ. ‘ಸಾರ್ಕ್’ ದೇಶಗಳ ಸಾಹಿತಿಗಳ ಸಮ್ಮೇಳನದಲ್ಲಿ ಸ್ವಂತ ಕಥಾವಾಚನ ಮಾಡಿದ್ದರು.
ಸೂರ್ಯೋದಯ – 6:51ಬೆ ಸೂರ್ಯಾಸ್ತ – 5:52 ಸಂ ಶಾಲಿವಾಹನ ಶಕೆ -1946 ಸಂವತ್-2080 ಕ್ರೋಧಿನಾಮ ಸಂವತ್ಸರ, ದಕ್ಷಿಣ ಅಯಣ, ಶುಕ್ಲ ಪಕ್ಷ, ಹೇಮಂತ್ ಋತು, ಪುಷ್ಯ ಮಾಸ, ತಿಥಿ – ಸಪ್ತಮಿ ನಕ್ಷತ್ರ – ಉತ್ತರಾಭಾದ್ರೆ ರಾಹು ಕಾಲ – 07:30 ದಿಂದ 09:00 ವರೆಗೆ ಯಮಗಂಡ – 10:30 ದಿಂದ 12:00 ವರೆಗೆ ಗುಳಿಕ ಕಾಲ – 01:30 ದಿಂದ 03:00 ವರೆಗೆ ಬ್ರಹ್ಮ ಮುಹೂರ್ತ – 5:15 ಬೆ ದಿಂದ 6:03 ಬೆ ವರೆಗೆ ಅಮೃತ ಕಾಲ – 2:32 ಮ ದಿಂದ 4:03 ಮ ವರೆಗೆ ಅಭಿಜಿತ್ ಮುಹುರ್ತ – 12:00 ಮ ದಿಂದ 12:44 ಮ ವರೆಗೆ ಜಾತಕ ಬರೆದು ತಿಳಿಸಲಾಗುವುದು, ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ. “ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು” ಸೋಮಶೇಖರ್ ಗುರೂಜಿB.Sc ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು. Mob. 93534 88403 ಮೇಷ…
ಮೈಸೂರು:- ಗ್ಯಾರಂಟಿ ಯೋಜನೆಗೆ ನನ್ನ ವಿರೋಧವಿಲ್ಲ, ದಯವಿಟ್ಟು ನಿಲ್ಲಿಸಬೇಡಿ ಎಂದು ಕೇಂದ್ರ ಸಚಿವ HD ಕುಮಾರಸ್ವಾಮಿ ಹೇಳಿದ್ದಾರೆ. https://ainlivenews.com/as-long-as-marriage-is-ok-no-entry-to-oyo-room-for-these-people/#google_vignette ಸರ್ಕಾರಿ ಬಸ್ಗಳ ಟಿಕೆಟ್ ದರ ಹೆಚ್ಚಳ ವಿಚಾರವಾಗಿ ಮಾತನಾಡಿದ HDK, ಸರ್ಕಾರಿ ಬಸ್ಗಳ ಟಿಕೆಟ್ ದರ ಹೆಚ್ಚಳ ಮಾಡಿ, ಬಡವರ ಮತ್ತು ಮಧ್ಯಮ ವರ್ಗದ ಜನರ ಬದುಕಿನ ಜೊತೆ ಸರ್ಕಾರ ಚೆಲ್ಲಾಟವಾಡುತ್ತಿದೆ. ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆ ನಿಲ್ಲಿಸಲು ಕಾರಣ ಹುಡುಕುತ್ತಿದೆ. ಹೇಗಾದರೂ ಮಾಡಿ ಗ್ಯಾರಂಟಿಗಳನ್ನು ನಿಲ್ಲಿಸಲು ನೆಪ ಹುಡುಕುತ್ತಿದ್ದಾರೆ. ಆದರೆ, ಯಾವುದೇ ಕಾರಣಕ್ಕೂ 5 ಗ್ಯಾರಂಟಿಗಳನ್ನು ನಿಲ್ಲಿಸಬೇಡಿ ಜನ ಹೇಳುತ್ತಿದ್ದಾರೆ. ಸಾಕಷ್ಟು ಜನರಿಗೆ ಇದರಿಂದ ಅನುಕೂಲವಾಗಿದೆ ಎಂದು ಹೇಳುತ್ತಿದ್ದಾರೆ. ಗ್ಯಾರಂಟಿ ಯೋಜನೆಗೆ ನನ್ನ ವಿರೋಧವಿಲ್ಲ. ದಯವಿಟ್ಟು ನಿಲ್ಲಿಸಬೇಡಿ, ಮುಂದುವರೆಸಿ ಎಂದು ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ಹೇಳಿದರು ಆದರೆ, ಜನರಿಂದಲೇ ಕಿತ್ತುಕೊಂಡು ಅವರಿಗೆ ಕೊಡುವ ಕೆಲಸ ಮಾಡಬಾರದು. ಅತ್ತೆಯ ಆಸ್ತಿಯನ್ನು ಅಳಿಯ ದಾನ ಮಾಡಿದ ಎನ್ನುವ ಮಾತಿನಂತೆ ಜನರಿಂದ ಕಿತ್ತುಕೊಂಡು ಅವರಿಗೆ ಕೊಡುವುದಕ್ಕೆ ಇವರೇ ಬೇಕಾ? ಎಂದು ಹೆಚ್ಡಿ ಕುಮಾರಸ್ವಾಮಿ…
ಬೆಂಗಳೂರು/ನವದೆಹಲಿ:- ಇನ್ಮುಂದೆ ಮದ್ವೆಯಾಗದ ಜೋಡಿಗೆ ಓಯೋ ರೂಮ್ ಎಂಟ್ರಿ ಇಲ್ಲ ಎಂದು ಹೇಳಲಾಗಿದೆ. ಅವಿವಾಹಿತ ಪುರುಷ ಮಹಿಳಾ ಜೋಡಿಗೆ ಹೋಟೆಲ್ಗಳಲ್ಲಿ ಅನುಮತಿ ಇರುವುದಿಲ್ಲ ಎಂದು ಟ್ರಾವೆಲ್ ಬುಕಿಂಗ್ ಕಂಪನಿ ಓಯೋ ಪ್ರಕಟಿಸಿದೆ. https://ainlivenews.com/a-truck-collided-with-a-car-two-bjp-leaders-died/ ದೇಶದ ಪ್ರಮುಖ ಲಾಡ್ಜ್ ಬುಕ್ಕಿಂಗ್ ಕಂಪನಿಗಳಲ್ಲಿ ಓಯೋ ಕೂಡ ಒಂದಾಗಿದೆ. ದೇಶದ ಎಲ್ಲಾ ನಗರಗಳಲ್ಲಿಯೂ ತನ್ನ ಹೋಟಲ್ ಬುಕ್ಕಿಂಗ್ ಜಾಲವನ್ನು ವಿಸ್ತರಣೆ ಮಾಡಿಕೊಂಡಿದೆ. ಕಡಿಮೆ ದರ, ಗುಣಮಟ್ಟದ ಸೇವೆ, ದೊಡ್ಡ ಜಾಲದಿಂದ ಈ ಓಯೋ ಹೋಟೆಲ್ಗಳು ಹೆಸರುವಾಸಿಯಾಗಿವೆ. ಅದರಲ್ಲೂ ಅವಿವಾಹಿತರಿಗೆ ಹೋಟೆಲ್ ಚೆಕ್ಇನ್ಗೆ ಅವಕಾಶ ನೀಡುವ ಕಾರಣಕ್ಕೆ ಈ ಹೋಟೆಲ್ ಗ್ರಾಹಕರ ನೆಚ್ಚಿನ ಆಯ್ಕೆಯಾಗಿತ್ತು. ಇದೀಗ ಅವಿವಾಹಿತರಿಗೆ ನಿರ್ಬಂಧ ವಿಧಿಸಿ ಹೊಸ ನಿಯಮ ಜಾರಿಗೊಳಿಸಿದೆ. ಪರಿಷ್ಕೃತ ನೀತಿಯ ಅಡಿಯಲ್ಲಿ, ಪುರುಷ ಮತ್ತು ಮತ್ತು ಮಹಿಳಾ ಜೋಡಿಗಳು ಆನ್ಲೈನ್ ಬುಕಿಂಗ್ ಮಾಡುವಾಗ ಅಥವಾ ಚೆಕ್ ಇನ್ ಮಾಡುವಾಗ ಅವರು ತಮ್ಮ ಮಧ್ಯದ ಸಂಬಂಧವನ್ನು ತೋರಿಸುವ ಪುರಾವೆಗಳನ್ನು ನೀಡುವುದು ಕಡ್ಡಾಯವಾಗಲಿದೆ. ಸ್ಥಳೀಯ ಸಾಮಾಜಿಕ ಪರಿಸ್ಥಿತಿಗಳನ್ನು ನೋಡಿಕೊಂಡು ಪಾಲುದಾರ ಹೋಟೆಲ್ಗಳು ಸಂಗಾತಿಗಳಿಗೆ…
ಭುವನೇಶ್ವರ:- ಒಡಿಶಾದ ಸಂಬಲ್ಪುರ್ ಜಿಲ್ಲೆಯಲ್ಲಿ ಕಾರಿಗೆ ಟ್ರಕ್ ಡಿಕ್ಕಿ ಹೊಡೆದು, ಕಾರಿನಲ್ಲಿದ್ದ ಇಬ್ಬರು ಬಿಜೆಪಿ ನಾಯಕರು ಸಾವಿಗೀಡಾಗಿರುವ ಘಟನೆ ಜರುಗಿದೆ. https://ainlivenews.com/are-the-dark-circles-around-the-neck-too-much-if-so-then-follow-these-tips/ ದೇಬೇಂದ್ರ ನಾಯಕ್ ಮತ್ತು ಮುರಳೀಧರ್ ಚುರಿಯಾ ಮೃತರು. ನಾಯಕ್ ಬಿಜೆಪಿಯ ಗೋಶಾಲಾ ಮಂಡಲ ಅಧ್ಯಕ್ಷರಾಗಿದ್ದರೆ, ಚುರಿಯಾ ಮಾಜಿ ಸರಪಂಚ್ ಆಗಿದ್ದರು. ಇವರಿಬ್ಬರೂ ಬಿಜೆಪಿಯ ಹಿರಿಯ ನಾಯಕಿ ನೌರಿ ನಾಯ್ಕ್ಗೆ ಆಪ್ತರಾಗಿದ್ದರು. ಕಾರಿನಲ್ಲಿ ಚಾಲಕ ಸೇರಿದಂತೆ ಆರು ಜನರಿದ್ದರು. ಭುವನೇಶ್ವರದಿಂದ ಕಾರ್ಡೋಲಾದಲ್ಲಿ ಮನೆಗೆ ಮರಳುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಎಲ್ಲಾ ಆರು ಜನರನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ ಎಂದು ವೈದ್ಯರು ಘೋಷಿಸಿದರು.
ವಿಜಯಪುರ:- ಕ್ರಾಂತಿವೀರ ಬ್ರಿಗೇಡ್ ಉದ್ಘಾಟನೆಗೆ ಮುಹೂರ್ತ ಫಿಕ್ಸ್ ಆಗಿದ್ದು, ರಾಜ್ಯ ರಾಜಕಾರಣದಲ್ಲಿ ಕೆ ಎಸ್ ಈಶ್ವರಪ್ಪ ಸಂಚಲನ ಮೂಡಿಸಿದ್ದಾರೆ. https://ainlivenews.com/ksrtc-bmtc-bus-ticket-price-hike-followed-by-auto-travel-price-increase-passengers-shock/ ಫೆಬ್ರವರಿ 4 ರಂದು ಬಸವನಬಾಗೇವಾಡಿಯಲ್ಲಿ ಕ್ರಾಂತಿವೀರ ಬ್ರಿಗೇಡ್ ಉದ್ಘಾಟನೆ ಮುಹೂರ್ತ ಫಿಕ್ಸ್ ಆಗಿದ್ದು, ಆ ಮೂಲಕ ರಾಜ್ಯ ರಾಜಕಾರಣದಲ್ಲಿ ಸಂಚಲನ ಸೃಷ್ಟಿಸಲು ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಮುಂದಾಗಿದ್ದಾರೆ. ಕನ್ಹೇರಿ ಮಠದ ಶ್ರೀಗಳು ಹಾಗೂ ಕಾಗಿನೆಲೆ ಮಹಾ ಸಂಸ್ಥಾನದ ಕನಕ ಗುರುಪೀಠದ ತಿಂಥಣಿ ಶಾಖಾ ಮಠದ ಸಿದ್ದರಾಮಾನಂದಪುರಿ ಸ್ವಾಮೀಜಿ ಉದ್ಘಾಟನೆ ಮಾಡುತ್ತಾರೆ. ಜನವರಿ 12 ರಿಂದ ರಾಜ್ಯಾದ್ಯಂತ ಪ್ರವಾಸ ಮಾಡುತ್ತೇವೆ. ಪ್ರವಾಸದ ಮೂಲಕ ಬ್ರಿಗೇಡ್ ಬಗ್ಗೆ ಜಾಗೃತಿ ಮೂಡಿಸುತ್ತೇವೆ ಎಂದು ಹೇಳಿದ್ದಾರೆ. ಹಿಂದೂ ಸಮಾಜದ ಪರವಾಗಿ ಬ್ರಿಗೇಡ್ ಹೋರಾಟ ಮಾಡಲಿದೆ. ಹಿಂದುಳಿದ ವರ್ಗದ ಸ್ವಾಮೀಜಿಗಳ ಪರ ಬ್ರಿಗೇಡ್ ಕೆಲಸ ಮಾಡಲಿದೆ. ಬ್ರಿಗೇಡ್ ಸ್ಥಾಪನೆ ಮಾಡುವುದಕ್ಕೆ ಮುಖ್ಯ ಉದ್ದೇಶ ಹಿಂದುಳಿದ ಮಠಗಳ ಅಭಿವೃದ್ಧಿ. ಹಿಂದೂಗಳಿಗೆ ಆಗುತ್ತಿರುವ ಅನ್ಯಾಯದ ವಿರುದ್ಧ ನಮ್ಮ ಹೋರಾಟ ಇರಲಿದೆ ಎಂದಿದ್ದಾರೆ. ನನ್ನ ಜೀವನದಲ್ಲಿ ನಾನು ರಾಜಕಾರಣದ ಜೊತೆ ಜೊತೆಗೆ…
ಬೆಂಗಳೂರು:- KSRTC, BMTC ಬಸ್ ಟಿಕೆಟ್ ದರ ಏರಿಕೆ ಬೆನ್ನಲ್ಲೇ ಆಟೋ ಪ್ರಯಾಣ ಬೆಲೆ ಹೆಚ್ಚಳವಾಗಿದ್ದು, ಪ್ರಯಾಣಿಕರು ಶಾಕ್ ಆಗಿದ್ದಾರೆ. https://ainlivenews.com/actor-darshans-stay-in-mysore-ends-today-agtara-das-returns-to-bangalore-today/ ಈ ನಡುವೆ ಆಟೋರಿಕ್ಷಾ ಪ್ರಯಾಣ ದರ ಕೂಡ ಏರಿಕೆ ಮಾಡುವಂತೆ ಒತ್ತಡ ಹೇರಲಾಗುತ್ತಿದೆ. ಆಟೋರಿಕ್ಷಾ ಪ್ರಯಾಣ ದರ ಏರಿಕೆ ಮಾಡುವಂತೆ ಬೆಂಗಳೂರು ನಗರ ಜಿಲ್ಲಾಧಿಕಾರಿಗಳಿಗೆ ಕೆಲ ಆಟೋ ಚಾಲಕ ಸಂಘಟನೆಗಳು ಮನವಿ ಮಾಡಿವೆ. ಒಂದು ಕಿಲೋಮೀಟರ್ಗೆ 5 ರೂಪಾಯಿ, ಎರಡು ಕಿಲೋಮೀಟರ್ಗೆ 10 ರೂಪಾಯಿ ಏರಿಕೆ ಮಾಡುವಂತೆ ಮಾಡಿವೆ. ಸದ್ಯ ಆಟೋರಿಕ್ಷಾ ಪ್ರಯಾಣ ದರ ಕಿಲೋಮೀಟರ್ಗೆ 30 ರೂಪಾಯಿ ಇದೆ. ಇದೀಗ 40 ರೂಪಾಯಿಗೆ ಏರಿಕೆ ಮಾಡುವಂತೆ ಮನವಿ ಮಾಡಿವೆ. ದರ ಏರಿಕೆ ಸಂಬಂಧ 2024ರ ಡಿಸೆಂಬರ್ 23 ರಂದು ಅಸೋಸಿಯೇಷನ್ಗಳ ಸಭೆ ಕರೆಯಲಾಗಿತ್ತು. ಆದರೆ, ಕಾರಣಾಂತರಗಳಿಂದ ಸಭೆಯನ್ನು ಮುಂದೂಡಲಾಯಿತು. ಈಗ ಮತ್ತೆ ಇದೇ ತಿಂಗಳು ಮೂರನೇ ವಾರದಲ್ಲಿ ಸಭೆ ನಡೆಯಲಿದ್ದು, ಪ್ರಯಾಣ ದರ ಏರಿಕೆ ಬಗ್ಗೆ ತೀರ್ಮಾನ ಆಗಲಿದೆ. ಆದರೆ, ಆಟೋ ಸಂಘಟನೆಗಳಲ್ಲೇ ದರ ಏರಿಕೆ ಬಗ್ಗೆ…