ಚಿಕ್ಕಬಳ್ಳಾಪುರ:- ಚಿಕ್ಕಬಳ್ಳಾಪುರದ ತಮ್ಮನಾಯಕನಹಳ್ಳಿ ಗೇಟ್ ಬಳಿ ಲಾಂಗ್ನಿಂದ ಕೊಚ್ಚಿ ಜೆಡಿಎಸ್ ಮುಖಂಡನನ್ನು ಬರ್ಬರವಾಗಿ ಕೊಲೆಗೈದಿದ್ದ ಆರೋಪಿಗಳನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. https://ainlivenews.com/test-century-against-australia-mohammad-siraj-has-reached-a-special-milestone/ ಬಂಧಿತ ಆರೋಪಿಗಳನ್ನು ಧನು ಅಲಿಯಾಸ್ ಧನರಾಜ್ ಹಾಗೂ ಆತನ ಸಹಚರ ಸತೀಶ್ ಎಂದು ಗುರುತಿಸಲಾಗಿದೆ. ಹಳೆಯ ದ್ವೇಷ ಹಿನ್ನಲೆ ಹತ್ಯೆ ಮಾಡಿದ್ದಾಗಿ ಆರೋಪಿಗಳು ಒಪ್ಪಿಕೊಂಡಿದ್ದಾರೆ ಎಂದು ಚಿಕ್ಕಬಳ್ಳಾಪುರ ಎಸ್ಪಿ ಕುಶಾಲ್ ಚೌಕ್ಸೆ ಮಾಹಿತಿ ನೀಡಿದ್ದಾರೆ. ಘಟನೆ ಹಿನ್ನೆಲೆ:- ವೆಂಕಟೇಶ್ ಶುಕ್ರವಾರ ರಾತ್ರಿ 9 ಗಂಟೆ ಸುಮಾರಿಗೆ ತಮ್ಮನಾಯ್ಕನಹಳ್ಳಿ ಗೆಟ್ ಬಳಿ ಇದ್ದ ಮೆಡಿಕಲ್ ಶಾಪ್ನಿಂದ ಬೈಕ್ನಲ್ಲಿ ವಾಪಸ್ ಮನೆಗೆ ಹೊರಟಿದ್ದರು. ದಾರಿ ಮಧ್ಯೆ ವೆಂಕಟೇಶ್ನನ್ನು ಅಡ್ಡಗಟ್ಟಿದ ದುಷ್ಕರ್ಮಿಗಳು ಅವರ ಮೈ-ಕೈ, ಬೆನ್ನು ಮತ್ತು ಹೊಟ್ಟೆಗೆ ಹಿಗ್ಗಾ ಮುಗ್ಗಾ ಲಾಂಗ್ನಿಂದ ಹೊಡೆದು ಬರ್ಬರವಾಗಿ ಹತ್ಯೆ ಮಾಡಿದ್ದಾರೆ.
Author: AIN Author
ಆಸ್ಟ್ರೇಲಿಯಾ ವಿರುದ್ಧದ 5ನೇ ಟೆಸ್ಟ್ ಪಂದ್ಯದಲ್ಲಿ RCB ಮಾಜಿ ಆಟಗಾರ ಟೀಮ್ ಇಂಡಿಯಾ ವೇಗಿ ಮೊಹಮ್ಮದ್ ಸಿರಾಜ್ ವಿಶೇಷ ಮೈಲಿಗಲ್ಲು ದಾಟಿದ್ದಾರೆ. https://ainlivenews.com/cm-siddaramaiah-started-filming-on-kumarakrupa-road/ ಸಿಡ್ನಿಯಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ 5ನೇ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ವೇಗಿ ಮೊಹಮ್ಮದ್ ಸಿರಾಜ್ 4 ವಿಕೆಟ್ ಕಬಳಿಸಿ ಮಿಂಚಿದ್ದಾರೆ. ಈ ನಾಲ್ಕು ವಿಕೆಟ್ಗಳೊಂದಿಗೆ ಸಿರಾಜ್ ಟೆಸ್ಟ್ ಕ್ರಿಕೆಟ್ನಲ್ಲಿ 100 ವಿಕೆಟ್ಗಳ ಸಾಧನೆ ಮಾಡಿದ್ದಾರೆ. ಅಲ್ಲದೆ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಸರಣಿಯಲ್ಲಿ ನೂರು ವಿಕೆಟ್ ಕಬಳಿಸಿ ಭಾರತದ 4ನೇ ಬೌಲರ್ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ. ಸರಣಿಯಲ್ಲಿ ಅತ್ಯಧಿಕ ವಿಕೆಟ್ ಕಬಳಿಸಿದ ಭಾರತೀಯ ಬೌಲರ್ಗಳ ಪಟ್ಟಿಯಲ್ಲಿ ರವಿಚಂದ್ರನ್ ಅಶ್ವಿನ್ (195) ಅಗ್ರಸ್ಥಾನದಲ್ಲಿದ್ದರೆ, ಜಸ್ಪ್ರೀತ್ ಬುಮ್ರಾ (156) ಹಾಗೂ ರವೀಂದ್ರ ಜಡೇಜಾ (131) ನಂತರದ ಸ್ಥಾನಗಳಲಿದ್ದಾರೆ. ಇದೀಗ ಈ ಪಟ್ಟಿಗೆ ಮೊಹಮ್ಮದ್ ಸಿರಾಜ್ ಕೂಡ ಎಂಟ್ರಿ ಕೊಟ್ಟಿದ್ದಾರೆ. ಟೀಮ್ ಇಂಡಿಯಾ ಪರ ಈವರೆಗೆ 36 ಟೆಸ್ಟ್ ಪಂದ್ಯಗಳನ್ನಾಡಿರುವ ಮೊಹಮ್ಮದ್ ಸಿರಾಜ್ 67 ಇನಿಂಗ್ಸ್ಗಳಲ್ಲಿ 5306 ಎಸೆತಗಳನ್ನು ಎಸೆದಿದ್ದಾರೆ. ಈ…
ಬೆಂಗಳೂರು:- ಸಾವಿರಾರು ಕಲಾವಿದರ ಪ್ರತಿಭೆ ಅನಾವರಣಕ್ಕೆ ವೇದಿಕೆ ಕಲ್ಪಿಸುವ ಹಾಗೂ ಅವರು ರಚಿಸಿದ ಕಲಾಕೃತಿಗಳ ಮಾರಾಟಕ್ಕೆ ಅವಕಾಶ ಒದಗಿಸುವ 22ನೇ ‘ಚಿತ್ರಸಂತೆ’ಯನ್ನು ಸಿಎಂ ಸಿದ್ದರಾಮಯ್ಯ ಇಂದು ಉದ್ಘಾಟಿಸಿದರು. https://ainlivenews.com/firing-four-maoists-killed-in-encounter/ ಈ ಬಾರಿಯ ಚಿತ್ರಸಂತೆಯನ್ನು ‘ಹೆಣ್ಣು ಮಗುವಿಗೆ’ ಸಮರ್ಪಣೆ ಮಾಡಲಾಗಿದೆ. ಬೆಳಿಗ್ಗೆ 6ರಿಂದ ರಾತ್ರಿ 9ರವರೆಗೆ ಕಲಾಕೃತಿಗಳ ಪ್ರದರ್ಶನ ಮತ್ತು ಮಾರಾಟ ನಡೆಯಲಿದೆ. ಚಿತ್ರಕಲಾ ಪರಿಷತ್ನ ಪ್ರವೇಶ ದ್ವಾರದಲ್ಲಿ 35 ಅಡಿ ಎತ್ತರದ ಕಲಾಕೃತಿ ನಿರ್ಮಿಸಲಾಗಿದೆ. ಬೆಳಗ್ಗೆ 6 ಕ್ಕೆ ಆರಂಭವಾಗಿರುವ ಚಿತ್ರಸಂತೆ ರಾತ್ರಿ 9 ರವರೆಗೂ ನಡೆಯಲಿದ್ದು, ಪ್ರತಿ ಬಾರಿಯಂತೆ ಈ ಬಾರಿಯೂ ಸಾವಿರಾರು ಕಲಾವಿದರು ತಮ್ಮ ಕಲಾ ಪ್ರತಿಭೆಯನ್ನು ಅರಳಿಸಿದ್ದಾರೆ. ಬೇರೆ ಬೇರೆಯ ರಾಜ್ಯಗಳ ಮೂರೂವರೆ ಸಾವಿರಕ್ಕೂ ಹೆಚ್ಚು ಕಲಾವಿದರು ಚಿತ್ರಸಂತೆಯಲ್ಲಿ ಪಾಲ್ಗೊಂಡಿದ್ದಾರೆ. ಪೆನ್ಸಿಲ್ ಸ್ಕೆಚ್ನಿಂದ ಹಿಡಿದು ತೈಲವರ್ಣ, ಜಲವರ್ಣ, ಆಕ್ರೋಲಿಕ್, ಮೈಸೂರು ಶೈಲಿ, ರಾಜಸ್ಥಾನಿ ಶೈಲಿ, ಆಕ್ರೋಲಿಕ್, ಪಾರಂಪರಿಕ, ಆಧುನಿಕ ಪ್ರಕಾರಗಳ ಕಲಾಕೃತಿಗಳನ್ನು ಪ್ರದರ್ಶನಕ್ಕಿಡಲಾಗಿದೆ. ಕನಿಷ್ಟ 100 ರೂ.ನಿಂದ ಮೂರ್ನಾಲ್ಕು ಲಕ್ಷ ರೂ. ವರೆಗೂ ಕಲಾಕೃತಿಗಳನ್ನು ಮಾರಾಟ ಮಾಡಲಾಗ್ತಿದೆ.
ರಾಯ್ಪುರ:- ಛತ್ತೀಸ್ಗಢದ ಬಸ್ತಾರ್ ಪ್ರದೇಶದಲ್ಲಿ ಭದ್ರತಾ ಪಡೆ ಗುಂಡಿನ ದಾಳಿಗೆ ನಾಲ್ವರು ಮಾವೋವಾದಿಗಳು ಬಲಿ ಆಗಿರುವ ಘಟನೆ ಜರುಗಿದೆ. https://ainlivenews.com/the-husband-who-left-his-wife-for-the-2nd-marriage-how-come-the-one-who-had-his-eyes-on-the-young-woman-is-a-woman/ ನಾರಾಯಣಪುರ ಮತ್ತು ದಾಂತೇವಾಡ ಜಿಲ್ಲೆಗಳ ಗಡಿಯಲ್ಲಿರುವ ದಕ್ಷಿಣ ಅಬುಜ್ಮಾದ್ನ ಕಾಡಿನಲ್ಲಿ ಭದ್ರತಾ ಸಿಬ್ಬಂದಿ ಹಾಗೂ ಮಾವೋವಾದಿಗಳ ನಡುವೆ ಗುಂಡಿನ ಚಕಮಕಿ ನಡೆದಿದೆ. ಗುಂಡಿನ ದಾಳಿಗೆ ನಾಲ್ವರು ಮಾವೋವಾದಿಗಳು ಬಲಿಯಾಗಿದ್ದಾರೆ. ಅಲ್ಲದೇ ಜಿಲ್ಲಾ ಮೀಸಲು ಗಾರ್ಡ್ನ ಹೆಡ್ ಕಾನ್ಸ್ಟೇಬಲ್ ಸನ್ನು ಕರಮ್ ತೀವ್ರಗಾಯಗೊಂಡು ಸಾವನ್ನಪ್ಪಿದ್ದಾರೆ. ಗುಂಡಿನ ದಾಳಿ ಬಳಿಕ ನಾಲ್ವರು ಮಾವೋವಾದಿಗಳ ಮೃತದೇಹ ಮತ್ತು ಎಕೆ -47 ರೈಫಲ್ ಮತ್ತು ಸ್ವಯಂ ಲೋಡಿಂಗ್ ರೈಫಲ್ ಸೇರಿದಂತೆ ಸ್ವಯಂಚಾಲಿತ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿದು ಬಂದಿದೆ.
ಕೋಲಾರ:- ಹೆಂಡತಿ ಬಿಟ್ಟು 2ನೇ ಮದುವೆಗೆ ಪತಿ ಮುಂದಾಗಿದ್ದು, ಯುವತಿ ಮೇಲೆ ಕಣ್ಣಾಕಿದ್ದವನನ್ನು ಪೋಷಕರು ಕೊಲೆಗೈದ ಘಟನೆ ಕೋಲಾರದ ನೂರ್ ನಗರದಲ್ಲಿ ಶನಿವಾರ ಮಧ್ಯರಾತ್ರಿ ನಡೆದಿದೆ. https://ainlivenews.com/centering-tree-fell-death-of-girl-case-notice-issued-to-the-accused/ ಉಸ್ಮಾನ್ ಕೊಲೆಯಾದ ದುರ್ದೈವಿ. ಆತ ತನ್ನ ಪ್ರೇಯಸಿ ಮನೆಗೆ ಹೋಗಿ ಬರುವಾಗ ಆಕೆಯ ಕುಟುಂಬಸ್ಥರು ಹಾಗೂ ಸ್ಥಳೀಯರು ಅಟ್ಟಾಡಿಸಿ ಹೊಡೆದಿದ್ದಾರೆ. ಬಳಿಕ ಪೊಲೀಸರು ಆತನನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಆತ ಸಾವನ್ನಪ್ಪಿದ್ದಾನೆ. ಉಸ್ಮಾನ್ ಕಳೆದೆ ಐದು ವರ್ಷಗಳ ಹಿಂದೆ ಜಬೀನ್ ಎಂಬಾಕೆಯನ್ನು ಪ್ರೀತಿಸಿ ಮದುವೆಯಾಗಿದ್ದ. ಆಕೆಗೆ ಕಿಡ್ನಿ ವಿಫಲವಾಗಿ ಅನಾರೋಗ್ಯದಿಂದ ಬಳಲುತ್ತಿದ್ದು, ಈ ವೇಳೆ ಆರೋಗ್ಯ ವಿಚಾರಿಸಲು ಬಂದಿದ್ದ ಜಬೀನಾ ಸಂಬಂಧಿ ಯುವತಿಯೊಂದಿಗೆ ಉಸ್ಮಾನ್ಗೆ ಪ್ರೀತಿಯಾಗಿದೆ. ಈ ವಿಷಯ ತಿಳಿದು ಆತನ ಪತ್ನಿ ಮಹಿಳಾ ಠಾಣೆಗೆ ದೂರು ನೀಡಿದ್ದಳು. ಬಳಿಕ ತನ್ನ ಪತಿಯಿಂದ ದೂರಾಗಿ ತವರು ಮನೆ ಸೇರಿದ್ದಳು. ಹೀಗಿರುವಾಗ ಕಳೆದ ರಾತ್ರಿ ಉಸ್ಮಾನ್ ಯುವತಿ ಮನೆಗೆ ಹೋಗಿ ಅವರಿಗೆ ಅವಾಜ್ ಹಾಕಿದ್ದಾನಂತೆ. ಮಗಳನ್ನು ಮದುವೆ ಮಾಡಿಕೊಡಿ ಎಂದು…
ಬೆಂಗಳೂರು:- ಸೆಂಟ್ರಿಂಗ್ ಮರ ಬಿದ್ದು ಬಾಲಕಿ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಿಗೆ ವಿವಿ ಪುರಂ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ. https://ainlivenews.com/central-government-is-responsible-for-bus-fare-hike-lad/ ಬಿಲ್ಡಿಂಗ್ ಮಾಲೀಕರು ನಿಯಮ ಗಾಳಿಗೆ ತೂರಿ ನಿರ್ಮಾಣ ಮಾಡುತ್ತಿದ್ದಾರೆ. ರಸ್ತೆಗೆ ಅಂಟಿಕೊಳ್ಳುವಂತೆ ಬಿಲ್ಡಿಂಗ್ ನಿರ್ಮಾಣ ಮಾಡುತ್ತಿದ್ದು, ರಸ್ತೆಯಲ್ಲೇ ಬಿಲ್ಡಿಂಗ್ ಸಾಮಗ್ರಿಗಳನ್ನ ಇಡಲಾಗಿದೆ. ಯಾವುದೇ ಸೇಫ್ಟಿ ಪ್ರಿಕಾಷನ್ ತೆಗೆದುಕೊಳ್ಳದೆ ಕಟ್ಟಡ ನಿರ್ಮಾಣ ಮಾಡಲಾಗುತ್ತಿದೆ. ರಸ್ತೆ ಪಕ್ಕದಲ್ಲಿ ಯಾವುದೇ ವಸ್ತುಗಳು ಬೀಳದಂತೆ ನೆಟ್ ಕಟ್ಟಬೇಕಿತ್ತು. ಆದರೆ ಅದೂ ಕೂಡ ಬಿಲ್ಡಿಂಗ್ ಮಾಲೀಕರು ಮಾಡಿಲ್ಲ. ಇನ್ನೂ ಪೊಲೀಸರು ಮಹಜರ್ ಮಾಡಿಲ್ಲ ಎಂಬ ಆರೋಪ ಕೇಳಿ ಬಂದಿದೆ. ಇದೀಗ 8 ಜನ ಮಾಲೀಕರು, ಇಂಜಿನಿಯರ್ ಚಂದ್ರಶೇಖರ್ ಬಿಬಿಎಂಪಿ ಅಧಿಕಾರಿಗಳ ವಿರುದ್ಧ ದೂರು ದಾಖಲಾಗಿದೆ. ಹೀಗಾಗಿ ಆರೋಪಿಗಳಿಗೆ ಪೊಲೀಸರು ನೋಟಿಸ್ ಕೊಟ್ಟಿದ್ದು, ವಿಚಾರಣೆಗೆ ಹಾಜರಾಗುವಂತೆ ಸೂಚನೆ ಕೊಟ್ಟಿದ್ದಾರೆ.
ಹುಬ್ಬಳ್ಳಿ : ಸಾರಿಗೆ ಬಸ್ ದರ ಏರಿಕೆಗೆ ಕೇಂದ್ರ ಸರ್ಕಾರವೇ ಕಾರಣ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಆರೋಪ ಮಾಡಿದರು. ನಗರದಲ್ಲಿಂದು ಸುದ್ದಿಗಾರರ ಜೊತೆಗೆ ಅವರು ಮಾತನಾಡಿದರು, https://ainlivenews.com/do-you-know-the-benefits-of-having-a-spoonful-of-ghee-in-tea/ ಸಾರಿಗೆ ಬಸ್ ದರ ಏರಿಕೆ ಅನಿವಾರ್ಯವಿತ್ತು. ಬಸ್ ದರ ಏರಿಕೆಗೆ ಕಾರಣ ಕೂಡ ಇದ್ದನುದಿನಕ್ಕೆ 1.16 ಕೋಟಿ ಜನ ಪ್ರಯಾಣಿಸುತ್ತಾರೆ ಅದರಲ್ಲಿ 65 ಲಕ್ಷ ಜನ ಹೆಣ್ಣು ಮಕ್ಕಳಿದ್ದಾರೆ ಅದರ ಜೊತೆಗೆ 5,300 ಹೊಸ ಬಸ್ ಗಳನ್ನ ಖರೀದಿ ಮಾಡಿದ್ದೇವೆ. 8000 ಹೊಸ ಸಿಬ್ಬಂದಿಗಳನ್ನು ತೆಗೆದುಕೊಳ್ಳಲು ಫೈನಾನ್ಸ್ ಡಿಪಾರ್ಟ್ಮೆಂಟ್ ಅನುಮತಿ ಕೊಟ್ಟಿದೆ ಈಗಾಗಲೇ ನಾಲ್ಕರಿಂದ ಐದು ಸಾವಿರ ಜನರನ್ನು ತೆಗೆದುಕೊಂಡಾಗಿದೆ. ಹೀಗಾಗಿ ದರ ಏರಿಕೆ ಮಾಡಲಾಗಿದೆ ಆದರೆಬಿಜೆಪಿಯವರು ದರ ಏರಿಕೆಗೆ ಮಾತಾಡ್ತಾ ಇದ್ದಾರೆಚರ್ಚೆಗೆ ಬಂದ್ರೆ ಮಾತನಾಡೋಣ ಕೇಂದ್ರ ಸರ್ಕಾರ ಮನಸ್ಸು ಮಾಡಿದ್ರೆ ಡೀಸೆಲ್ ಅನ್ನು 30 ರಿಂದ 40 ರೂಪಾಯಿಗೆ ಕೊಡಬಹುದು ಮನಮೋಹನ ಸಿಂಗ್ ಅವರು 103 ಡಾಲರ್ ಗೆ 1 ಬ್ಯಾರಲ್ ಖರೀದಿ ಮಾಡ್ತಿದ್ರು 90 ಸಾವಿರ ಕೋಟಿ…
ತುಮಕೂರು:- ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ದೇವಲಕೆರೆ ಗ್ರಾಮದಲ್ಲಿ ವ್ಯಕ್ತಿಯನ್ನ ಬರ್ಬರವಾಗಿ ಕೊಂದು 30 ಮೇಕೆಗಳನ್ನ ಆರೋಪಿ ಕದ್ದೊಯ್ದ ಘಟನೆ ಜರುಗಿದೆ. https://ainlivenews.com/do-you-like-nidrena-so-much-if-so-beware-of-these-diseases-chasing-you/ ಕೊಲೆಯಾದ ವ್ಯಕ್ತಿಯನ್ನು 60 ವರ್ಷದ ನರಸಿಂಹಪ್ಪ ಎಂದು ಗುರುತಿಸಲಾಗಿದ್ದು, ಮಣಿಕಂಠ ಎಂಬಾತನಿಂದ ದುಷ್ಕೃತ್ಯ ನಡೆದಿದೆ. 30ಮೇಕೆಗಳಿಗಾಗಿ ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಲಾಗಿದೆ. ಕೊಲೆ ಬಳಿಕ 30 ಮೇಕೆಗಳನ್ನ ಚಿತ್ರದುರ್ಗ ಜಿಲ್ಲೆಯ ಹಿರಿಯೂರಿನ ಕುರಿಸಂತೆಯಲ್ಲಿ ಮಾರಾಟಕ್ಕೆ ಯತ್ನಿಸಿದ್ದಾನೆ. ಮೇಕೆ ಮತ್ತು ನರಸಿಂಹಪ್ಪ ಮನೆಗೆ ಬಾರದಿದ್ದಕ್ಕೆ ಅನುಮಾನದಿಂದ ಹಿರಿಯೂರು ಸಂತೆಯಲ್ಲಿ ನರಸಿಂಹಪ್ಪ ಪುತ್ರ ಚೆಕ್ ಮಾಡಿದ್ದರು. ಈ ವೇಳೆ ಮೇಕೆಗಳ ಸಮೇತ ಸಂತೆಯಲ್ಲಿ ಮಣಿಕಂಠ ಸಿಕ್ಕಿಬಿದ್ದಿದ್ದಾನೆ. ತಕ್ಷಣ ಮಣಿಕಂಠನನ್ನ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದರು. ಈ ವೇಳೆ ಮೇಕೆಗಳಿಗಾಗಿ ಕೊಲೆ ಮಾಡಿರುವುದಾಗಿ ಮಣಿಕಂಠ ಬಾಯಿ ಬಿಟ್ಟಿದ್ದಾನೆ.
ಶಿವಮೊಗ್ಗ:- ಪರಿಷತ್ ಸದಸ್ಯ ಡಾ.ಧನಂಜಯ ಸರ್ಜಿ ಹೆಸರಿನಲ್ಲಿ ಹೊಸ ವರ್ಷಕ್ಕೆ ವಿಷ ಪದಾರ್ಥ ಬೆರೆಸಿರುವ ಸಿಹಿ ತಿಂಡಿಯನ್ನ ನಗರದ ಮೂವರಿಗೆ ಕೊರಿಯರ್ ಮೂಲಕ ರವಾನಿಸಿರುವ ಘಟನೆ ಶಿವಮೊಗ್ಗದಲ್ಲಿ ಬೆಳಕಿಗೆ ಬಂದಿದೆ. https://ainlivenews.com/cooperate-with-me-the-principal-is-sarcastic-with-the-female-students-a-case-has-been-registered/ ಹೊಸ ವರ್ಷಕ್ಕೆ ಶುಭಾಶಯ ಕೋರುವ ನೆಪದಲ್ಲಿ ಡಿಟಿಡಿಸಿ ಕೋರಿಯರ್ ಮೂಲಕ ಸರ್ಜಿ ಗ್ರೂಪ್ ಆಫ್ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕರೂ ಆದ ವಿಧಾನಪರಿಷತ್ ಸದಸ್ಯ ಡಾ.ಧನಂಜಯ ಸರ್ಜಿ ಅವರ ಹೆಸರಿನಲ್ಲಿ ನಗರ ವೈದ್ಯರೂ ಸೇರಿ ವಿವಿಧ ಗಣ್ಯ ವ್ಯಕ್ತಿಗೆ ವಿಷಮಿಶ್ರಿತ ಲಾಡುಗಳಿರುವ ಪಾರ್ಸಲ್ ಅನ್ನು ಕೋರಿಯರ್ ಮೂಲಕ ಕಳುಹಿಸಿರುವ ಅಘಾತಕಾರಿ ಘಟನೆ ಗುರುವಾರ ನಡೆದಿದೆ. ಡಿಟಿಡಿಸಿ ಕೋರಿಯರ್ ಮೂಲಕ ಭದ್ರಾವತಿಯಿಂದ ಈ ಪಾರ್ಸೆಲ್ ಕಳುಹಿಸಲಾಗಿದೆ. ಒಬ್ಬರು ಇದನ್ನು ಬಾಯಲ್ಲಿ ಹಾಕಿಕೊಂಡ ತಕ್ಷಣ ಕಹಿ ಅಂಶ ಪತ್ತೆಯಾಗಿದೆ. ಕೂಡಲೇ ಪ್ರಕರಣ ಬೆಳಕಿಗೆ ಬಂದಿದ್ದು, ದೊಡ್ಡ ಗಂಡಾಂತರ ತಪ್ಪಿದಂತಾಗಿದೆ. ಈ ವಿಚಾರ ತಿಳಿಯುತ್ತಿದ್ದಂತೆ ಎಂಎಲ್ಸಿ ಧನಂಜಯ ಸರ್ಜಿ ಅವರು ಸ್ವೀಟ್ ಅನ್ನು ಲ್ಯಾಬ್ಗೆ ರವಾನೆ ಮಾಡಿದ್ದಾರೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರಿಗೆ ದೂರು ನೀಡಿದ್ದಾರೆ.…
ವಿಜಯಪುರ:- ವಿದ್ಯಾರ್ಥಿನಿಯರರೊಂದಿಗೆ ಅಸಭ್ಯ ವರ್ತನೆ ತೋರಿ, ಸಹಕರಿಸುವಂತೆ ಕಿರಿಕಿರಿ ಕೊಟ್ಟ ಪ್ರಿನ್ಸ್ಪಾಲ್ ವಿರುದ್ಧ ವಿದ್ಯಾರ್ಥಿನಿಯರು ಕೇಸ್ ದಾಖಲಿಸಿರುವ ಘಟನೆ ಜರುಗಿದೆ. https://ainlivenews.com/are-you-interested-in-working-in-the-department-of-agriculture-there-are-945-vacancies-interested-apply-today/ ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ಪಟ್ಟಣದ ಮನಗೂಳಿಯಲ್ಲಿ ಘಟನೆ ಜರುಗಿದೆ. ಮನಗೂಳಿಯಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರಿನ್ಸಿಪಾಲ್ ಸಚೀನಕುಮಾರ ಪಾಟೀಲ ವಿರುದ್ಧ ಎಪ್ ಐ ಆರ್ ದಾಖಲು ಮಾಡಲಾಗಿದೆ. ಅದೇ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳಿಂದ ಕೇಸ್ ದಾಖಲು ಮಾಡಲಾಗಿದೆ. ದಿನನಿತ್ಯ ಕಾಲೇಜಿನಲ್ಲಿ ನನ್ನೊಂದಿಗೆ ಸಹಕರಿಸುವಂತೆ ಪ್ರಿನ್ಸಿಪಾಲ್ ವಿದ್ಯಾರ್ಥಿನಿಯರಿಗೆ ಕಿರಿಕಿರಿ ಹಾಗೂ ಮಾನಸಿಕ ಹಿಂಸೆ ನೀಡುತ್ತಿದ್ದ. ರೋಸಿಹೋಗಿದ್ದ ವಿದ್ಯಾರ್ಥಿಗಳಿಂದ ಪ್ರಿನ್ಸಿಪಾಲ್ ಪಾಟೀಲ ವಿರುದ್ಧ ಕೇಸ್ ದಾಖಲಿಸಲಾಗಿದೆ. ಪ್ರಿನ್ಸ್ಪಾಲ ವಿರುದ್ಧ ವಿದ್ಯಾರ್ಥಿಗಳಿಂದ ಕಾಲೇಜು ಎದುರು ಪ್ರತಿಭಟನೆ ಮಾಡಿದ್ದಾರೆ. ಘಟನೆ ಹಿನ್ನೆಲೆ ಪೊಲೀಸರು, ಪ್ರೀನ್ಸಿಪಾಲ್ ರನ್ನು ವಶಕ್ಕೆ ಪಡೆದಿದ್ದಾರೆ. ಮನಗೂಳಿ ಪೋಲಿಸ್ ಠಾಣೆಯಲ್ಲಿ ಪ್ರೀನ್ಸಿಪಾಲ್ ವಿರುದ್ದ ದೂರು ದಾಖಲಾಗಿದೆ.