Author: AIN Admin

ಬೆಂಗಳೂರು: ನೇಣು ಬಿಗಿದುಕೊಂಡು ಯುವತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ನಡೆದಿದೆ. ಸೋನಿಯಾ(24) ಮೃತ ಯುವತಿಯಾಗಿದ್ದು, ಸೋಮವಾರ ರಾತ್ರಿ ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಒಂದೂವರೆ ತಿಂಗಳ ಹಿಂದೆ ಬೆಂಗಳೂರಿಗೆ ಬಂದಿದ್ದ ದೆಹಲಿ ಮೂಲದ ಸೋನಿಯಾ ಬೆಂಗಳೂರಿನ ಸ್ಪಾ ಒಂದರಲ್ಲಿ ಕೆಲಸ ಮಾಡುತ್ತಿದ್ದಳು. ಸೋಮವಾರ ರಾತ್ರಿ ಒಂದು ಗಂಟೆಗೂ ಹೆಚ್ಚು ಕಾಲ ತನ್ನ ತಾಯಿಯ ಜೊತೆ ಮಾತನಾಡಿದ್ದ ಯುವತಿ ಮಾತುಕತೆ ಬಳಿಕ ನೇಣು ಬಿಗಿದುಕೊಂಡಿರುವ ಶಂಕೆಯಾಗಿದೆ. ಬೆಳಗ್ಗೆ ಎಂದಿನಂತೆ ಸ್ಪಾಗೆ ಬರಲಿಲ್ಲ ಎಂದು ಸ್ಪಾ ಮಾಲೀಕ ಕರೆ ಮಾಡಿದ್ದಾರೆ. ಕರೆ ಸ್ವೀಕರಿಸಿದಿದ್ದಾಗ ಅನುಮಾನಗೊಂಡು ಮನೆ ಬಳಿ ಬಂದು ನೋಡಿದ್ದಾರೆ. ಮನೆ ಬಾಗಿಲು ತೆರೆಯದಿದ್ದಾಗ ಸ್ಪಾ ಮಾಲೀಕ ಪೊಲೀಸರಿಗೆ ಮಾಹಿತಿ ನೀಡಿದ್ದು, https://ainlivenews.com/you-can-make-healthy-puris-without-using-oil-do-you-know-how-here-are-the-tips/ ಪೊಲೀಸರು ಸ್ಥಳಕ್ಕೆ ಬಂದು ಬಾಗಿಲು ಮುರಿದು ನೋಡಿದಾಗ ಆತ್ಮಹತ್ಯೆಗೆ ಶರಣಾಗಿರುವುದು ಬೆಳಕಿಗೆ ಬಂದಿದೆ. ವಿಕ್ಟೋರಿಯಾ ಆಸ್ಪತ್ರೆಗೆ ಮೃತ ದೇಹ ರವಾನೆ ಮಾಡಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ, ಇನ್ನೂ ಮೃತ ಸೋನಿಯಾ ಪೋಷಕರು…

Read More

ಬೆಂಗಳೂರು: ಭೋವಿ ನಿಗಮ ಅವ್ಯವಹಾರದ ಆರೋಪಿ ವಕೀಲೆ ಜೀವಾ ಆತ್ಮಹತ್ಯೆ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ವಕೀಲರ ಸಂಘದ ಅಧ್ಯಕ್ಷರು ಒತ್ತಾಯಿಸಿದ್ದಾರೆ. ಇದರ ಬೆನ್ನಲ್ಲೇ ಸಿಸಿಬಿ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಘಟನೆ ಸಂಬಂಧ ಸಾಕ್ಷಿಗಳನ್ನು ಕಲೆಹಾಕಲು ಸಿಸಿಬಿ ವಿಶೇಷ ತನಿಖಾಧಿಕಾರಿಗಳ ತಂಡ ಮುಂದಾಗಿದೆ. ಜೀವಾ ತನಿಖೆ ಕರೆಯಲು ಕಾರಣ ಏನು? ಜೀವಾಗೆ ಸಂಬಂಧಿಸಿದ ಬ್ಯಾಂಕ್‌ ಖಾತೆಗೆ ಹಣ ವರ್ಗಾವಣೆ ಆಗಿದ್ಯಾ? https://ainlivenews.com/you-can-make-healthy-puris-without-using-oil-do-you-know-how-here-are-the-tips/ ಎಷ್ಟು ಬಾರಿ ಪ್ರಕರಣಕ್ಕೆ ಸಂಬಂಧಪಟ್ಟಂತೆ ವಿಚಾರಣೆ ಎದುರಿಸಿದ್ದಾರೆ? ಎಂಬ ಆಯಾಮಗಳಲ್ಲಿ ತನಿಖೆ ನಡೆಸಲು, ಅಲ್ಲದೇ ಜೀವಾ ಅವರು ಬರೆದಿದ್ದ ಡೆತ್‌ನೋಟನ್ನ ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಇದರೊಂದಿಗೆ ಸಿಸಿಬಿ ಡಿವೈಎಸ್ಪಿ ಕನಕಲಕ್ಷ್ಮಿ ಅವರಿಗೆ ನೋಟಿಸ್‌ ನೀಡಿ ವಿಚಾರಣೆಗೆ ಕರೆಸಲು‌ ತಯಾರಿ ಮಾಡಿಕೊಳ್ಳಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ. ಸರ್ಕಾರಕ್ಕೆ ಕೋರ್ಟ್‌ ಚಾಟಿ: ಭೋವಿ ನಿಗಮದ ಅಕ್ರಮ ಪ್ರಕರಣದಲ್ಲಿ ಸಿಸಿಬಿ ಡಿವೈಎಸ್ಪಿ ಕನಕಲಕ್ಷ್ಮಿ ಕಿರುಕುಳ ನೀಡುತ್ತಿದ್ದಾರೆ ಎಂದು ಡೆತ್‌ನೋಟ್ ಬರೆದಿಟ್ಟು ವಕೀಲೆ, ಉದ್ಯಮಿ ಜೀವಾ ಆತ್ಮಹತ್ಯೆ ಮಾಡಿಕೊಂಡಿರುವ…

Read More

ನವದೆಹಲಿ: ಟೋಕಿಯೊ ಒಲಿಂಪಿಕ್​ ಕಂಚಿನ ಪದಕ ವಿಜೇತ ಭಾರತದ ಕುಸ್ತಿಪಟು ಬಜರಂಗ್ ಪುನಿಯಾ ಅವರನ್ನು ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಸಂಸ್ಥೆ ನಾಲ್ಕು ವರ್ಷಗಳ ಕಾಲ ಬ್ಯಾನ್‌ ಮಾಡಿದೆ. ಮಾರ್ಚ್ 10 ರಂದು ಸೋನೆಪತ್‌ನಲ್ಲಿ ನಡೆದ ರಾಷ್ಟ್ರೀಯ ತಂಡದ ಆಯ್ಕೆಗೆ ನಡೆದ ಟ್ರಯಲ್ಸ್‌ನಲ್ಲಿ ಆಯ್ಕೆಯಾದ ನಂತರ ಪುನಿಯಾ ಮೂತ್ರದ ಮಾದರಿಯನ್ನು ಪರೀಕ್ಷೆಗೆ ನೀಡಲಿ ನಿರಾಕರಿಸಿದರು. ಇದನ್ನು ನಿಯಮ ಬಾಹಿರ ಎಂದು ಪರಿಗಣಿಸಿರುವ ನಾಡಾ ಪೂನಿಯಾರನ್ನ ನಾಲ್ಕು ವರ್ಷಗಳ ಕಾಲ ಬ್ಯಾನ್‌ ಮಾಡಿದೆ. https://ainlivenews.com/you-can-make-healthy-puris-without-using-oil-do-you-know-how-here-are-the-tips/ ಇದರ ಬೆನ್ನಲ್ಲೇ ಈ ಬಗ್ಗೆ ಪ್ರತಿಕ್ರಿಯಿಸಿರುವ ಬಜರಂಗ್‌ ಪೂನಿಯಾ, ಇದೇನೂ ನನಗೆ ಆಘಾತಕಾರಿ ಸಂಗತಿಯಲ್ಲ.. ಏಕೆಂದರೆ ವಿಚಾರಣೆಯ ವಿಷಯವು ಕಳೆದ ಒಂದು ವರ್ಷದಿಂದ ನಡೆಯುತ್ತಿದೆ. ವೈಯಕ್ತಿಕ ದ್ವೇಷ ಮತ್ತು ರಾಜಕೀಯ ಕಾರಣಗಳಿಗಾಗಿ ಹೀಗೆಲ್ಲಾ ಮಾಡಲಾಗುತ್ತಿದೆ. ಎಲ್ಲವೂ ಕೇಂದ್ರ ಸರ್ಕಾರದ ಮೂಗಿನ ತುದಿಯಲ್ಲಿಯೇ ನಡೆಯುತ್ತಿದೆ. ಮಹಿಳಾ ಕುಸ್ತಿಪಟುಗಳಿಗೆ ಬೆಂಬಲ ವ್ಯಕ್ತಪಡಿಸಿದ್ದಕ್ಕಾಗಿ ಈ ರೀತಿ ಸೇಡು ತೀರಿಸಲಾಗುತ್ತಿದೆ ಅದಲ್ಲದೆ ಒಂದು ವೇಳೆ ನಾನು ಬಿಜೆಪಿಗೆ ಸೇರಿದ್ದೇ ಆದಲ್ಲಿ ಈ ನಿಷೇಧವು ರದ್ದುಗೊಳ್ಳುತ್ತದೆ…

Read More

ಬೆಂಗಳೂರು: ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನ ಮಾಡುವುದು ನಮ್ಮ ಕರ್ತವ್ಯ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ. ಸದಾಶಿವನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎರಡು ಗ್ಯಾರಂಟಿ ಯೋಜನೆ ನಿಲ್ಲಿಸುವಂತೆ ಶಾಸಕ ಗವಿಯಪ್ಪ ನೀಡಿರುವ ಹೇಳಿಕೆ ಕುರಿತು ಪ್ರತಿಕ್ರಿಯಿಸಿ, ಗ್ಯಾರಂಟಿ ಯೋಜನೆಗಳ ಬಗ್ಗೆ ಪಕ್ಷ ಮತ್ತು ಸರ್ಕಾರ ತೀರ್ಮಾನ ತೆಗೆದುಕೊಂಡಿದೆ. ಯಾರಿಗೂ ಗೊತ್ತಿಲ್ಲದೇ ಕದ್ದು ಮುಚ್ಚಿ ತೆಗೆದುಕೊಂಡಿರುವ ತೀರ್ಮಾನವೇನಲ್ಲ. ಚುನಾವಣೆಗೂ ಮೊದಲೇ ಪ್ರಣಾಳಿಕೆಯಲ್ಲಿ ತಿಳಿಸಲಾಗಿತ್ತು. ಗ್ಯಾರಂಟಿ ಯೋಜನೆಗಳ ವಿಚಾರದಲ್ಲಿ ಜನಸಮುದಾಯ ನಮ್ಮನ್ನು ನಂಬಿ ಮತ ಚಲಾಯಿಸಿರಬಹುದು. ಹೀಗಾಗಿ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನ ಮಾಡುವುದು ನಮ್ಮ ಕರ್ತವ್ಯ. ನಮ್ಮನಮ್ಮ ಅಭಿಪ್ರಾಯಗಳು ಬೇರೆ ಇರಬಹುದು. ನಾವು ಕೊಟ್ಟಿರುವ ಮಾತನ್ನು ಉಳಿಸಿಕೊಳ್ಳಬೇಕು. ಯಾವುದೇ ಶಾಸಕರು ತಮ್ಮ ಕ್ಷೇತ್ರಕ್ಕೆ ಅನುದಾನ ಕೇಳುವುದರಲ್ಲಿ ತಪ್ಪಿಲ್ಲ ಎಂದರು. https://ainlivenews.com/you-can-make-healthy-puris-without-using-oil-do-you-know-how-here-are-the-tips/ ಅದಾನಿ ವಿಷಯ ರಾಷ್ಟ್ರೀಯ ವಿಚಾರಕ್ಕೆ ಸಂಬಂಧಿಸಿದ್ದು. ಅಮೆರಿಕನ್ ಎಸ್ಟಬ್ಲಿಷ್‌ಮೆಂಟ್ಸ್ ಯಾವ ರೀತಿ ಅವರ ಕಂಪನಿ ನಡೆದುಕೊಳ್ಳುತ್ತಿದೆ ಎಂಬುದನ್ನು ತೋರಿಸಿದೆ. ಈ ಬಗ್ಗೆ ಅದಾನಿ ವಿರುದ್ಧ ಕ್ರಮ ತೆಗೆದುಕೊಳ್ಳಲು ಕಾಂಗ್ರೆಸ್ ಪಕ್ಷ ಒತ್ತಾಯ ಮಾಡುವುದರಲ್ಲಿ…

Read More

ಬೆಂಗಳೂರು : ಬಳ್ಳಾರಿಯ ವಿಮ್ಸ್ ನಲ್ಲಿ ಕೂಡ್ಲಿಗಿ ಮೂಲದ ಬಾಣಂತಿ ಸಾವು ಪ್ರಕರಣ ಬಗ್ಗೆ ತನಿಖೆ ನಡೆಸಿ ವರದಿ ನೀಡುವಂತೆ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹಮದ್ ಖಾನ್ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಈ ಕುರಿತು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರ ಅವರ ಬಳಿ ಮಾಹಿತಿ ಪಡೆದ ಸಚಿವರು ಘಟನೆಯನ್ನು ಗಂಭೀರ ವಾಗಿ ಪರಿಗಣಿಸಿ ಮುನ್ನಚ್ಚರಿಕೆ ವಹಿಸುವಂತೆ ನಿರ್ದೇಶನ ನೀಡಿದರು. https://ainlivenews.com/you-can-make-healthy-puris-without-using-oil-do-you-know-how-here-are-the-tips/ ಈ ಹಿಂದೆ ಜಿಲ್ಲಾ ಆಸ್ಪತ್ರೆ ಯಲ್ಲಿ ಸಂಭವಿಸಿದ್ದ ನಾಲ್ಕು ಬಾಣಂತಿಯರ ಸಾವು ಪ್ರಕರಣಕ್ಕೂ ಈ ಘಟನೆಗೆ ಸಂಬಂಧ ಇಲ್ಲ. ಕೂಡ್ಲಿಗಿ ಗುಡೇಕೋಟೆ ಪ್ರಾಥಮಿಕ ಅರೋಗ್ಯ ಕೇಂದ್ರ ದಿಂದ ಮಹಾಲಕ್ಷ್ಮಿ ಎಂಬುವರು ವಿಮ್ಸ್ ಗೆ ಇದೇ 24 ರಂದು ದಾಖಲಾಗಿ 26 ರಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುತ್ತಾರೆ. ಈ ಬಗ್ಗೆ ಅರೋಗ್ಯ ಅಧಿಕಾರಿಗಳಿಂದ ವರದಿ ಪಡೆಯಲಾಗಿದೆ. ಮುಂದೆ ಇಂತಹ ಘಟನೆ ನಡೆಯದಂತೆ ಮುನ್ನಚ್ಚರಿಕೆ ವಹಿಸಲಾಗುವುದು ಎಂದು ಜಿಲ್ಲಾಧಿಕಾರಿಗಳು ಸಚಿವರಿಗೆ ತಿಳಿಸಿದರು.

Read More

ಬೆಂಗಳೂರು: ನಾಗಿನಿ ಸೀರಿಯಲ್ ಖ್ಯಾತಿ ನಟಿ ದೀಪಿಕಾ ದಾಸ್ ತಾಯಿಗೆ ಕಿಡಿಗೇಡಿಯೊಬ್ಬ ಬೆದರಿಕೆ ಹಾಕಿರುವ ಘಟನೆ ನಡೆದಿದೆ. ಕಿರುತೆರೆ ನಟಿ ದೀಪಿಕಾ ದಾಸ್ ಅವರ ತಾಯಿ ಪದ್ಮಲತಾಗೆ ಕಿಡಿಗೇಡಿಗಳು ಬೆದರಿಕೆ ಹಾಕಿದ್ದಾರೆ. ಬೆಂಗಳೂರು ಹೊರವಲಯದ ಮಾದನಾಯಕನಹಳ್ಳಿಯಲ್ಲಿ ಇರುವ ದೀಪಿಕಾ ದಾಸ್ ನಿವಾಸಕ್ಕೆ ಕಿಡಿಗೇಡಿಗಳು ಮಧ್ಯರಾತ್ರಿ ಬಂದು ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದಾರೆ. https://ainlivenews.com/you-can-make-healthy-puris-without-using-oil-do-you-know-how-here-are-the-tips/ ಜೊತೆಗೆ ಬೆದರಿಕೆ ಕೂಡ ಹಾಕಿದ್ದಾರೆ. ಸದ್ಯ ಈ ಸಂಬಂಧ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ. ಪೊಲೀಸರು ಕಿಡಿಗೇಡಿಗಳಿಗಾಗಿ ಹುಡುಕಾಟ ನಡೆಸಿದ್ದಾರೆ. ನಟಿ ದೀಪಿಕಾ ದಾಸ್ ಕಿರುತೆರೆಯಲ್ಲಿ ಆಕ್ಟಿವ್ ಆಗಿದ್ದ ನಟಿ. ಇವರ ನಟನೆಯ ನಾಗಿನಿ ಸೀರಿಯಲ್ ಸಖತ್ ಫೇಮಸ್ ಆಗಿತ್ತು. ಆ ಮೇಲೆ ಬಿಗ್‌ಬಾಸ್‌ಗೆ ಹೋದ ನಟಿ ಅಲ್ಲೂ ಸದ್ದು ಮಾಡಿದ್ದರು. ಬಿಗ್ ಬಾಸ್’ ಸೀಸನ್ 9 ಶೋ ಮುಗಿದ ಮೇಲೆ ಮಹಿಳಾ ಪ್ರಧಾನ ಸಿನಿಮಾದಲ್ಲಿ ನಟಿಸಿದ್ದರೂ ಅದೇನು ಅಂಥಾ ಹೆಸರು ತರಲಿಲ್ಲ.

Read More

ಬೆಂಗಳೂರು: ನಾನೇ ನನ್ನ ಸ್ವಂತ ಶಕ್ತಿಯಿಂದ ರಾಜಕೀಯಕ್ಕೆ ಬಂದಿದ್ದೇನೆ ಎಂದು ವಿಧಾನ ಪರಿಷತ್​ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ರಾಜಕೀಯಕ್ಕೆ ಬಂದಮೇಲೆ ಗಾಡ್ ಫಾದರ್ ಶುರುವಾದರು. ಈಗೀಗ ವಿಧಾನಪರಿಷತ್ ಗೌರವ ಕಡಿಮೆ ಆಗುತ್ತಿದೆ. ಕಲಾಪಗಳು ಸರಿಯಾಗಿ ನಡೆಯುತ್ತಿಲ್ಲ. ಎಲ್ಲದ್ದಕ್ಕೂ ಬಾವಿಗೆ ಬಂದು ಇಳಿದು ಧಿಕ್ಕಾರ ಕೂಗುವ ಅಭ್ಯಾಸ ಶುರುವಾಗಿದೆ. ನಾವೆಲ್ಲ ಅಜೆಂಡಾ ಇಟ್ಟುಕೊಂಡು ಓದಿಕೊಂಡು ಬರುತ್ತಿದ್ದೆವು. ಈಗ ಪ್ರಶ್ನೆ ಕೇಳಿ ಎರಡು ನಿಮಿಷಕ್ಕೆ ಹೊರಗೆ ಹೋಗುತ್ತಾರೆ ಎಂದು ಹೊರಟ್ಟಿ ಹೇಳಿದ್ದಾರೆ. https://ainlivenews.com/you-can-make-healthy-puris-without-using-oil-do-you-know-how-here-are-the-tips/ ಇನ್ನೂ ಈಗ ವಿಧಾನ ಪರಿಷತ್ ಅಂದ್ರೆ ಮುನಿಸಿಪಾಲಿಟಿ ಆಗಿದೆ. ನನಗೆ ಇದರ ಬಗ್ಗೆ ಸಾಕಷ್ಟು ನೋವು ಆಗಿದೆ. ರಾಜಕೀಯ ಪುಡಾರಿಗಳು ಯಾರು ಇರ್ತಾರೋ ಅವರನ್ನು ತಂದು ತಂದು ವಿಧಾನ ಪರಿಷತ್​ಗೆ ಹಾಕ್ತಾರೆ. ಪರಿಷತ್ ನಿರಾಶ್ರಿತರ ಕೇಂದ್ರದ ರೀತಿ ಆಗಿದೆ. ಕಲಾಪಗಳು ಕಾಲಕ್ಕೆ ಸರಿಯಾಗಿ ನಡೆಯಲ್ಲ. ಶಿಕ್ಷಕರ ಮತದಾರ ಕ್ಷೇತ್ರದಿಂದಲೂ ದುಡ್ಡು ತಿಂದು ವೋಟ್ ಹಾಕಿಕೊಂಡು ಬಂದಿದ್ದಾರೆ ಎಂದರು.

Read More

ಬೆಂಗಳೂರು: ಅದು ಬಿಹಾರ ಮೂಲದ ಖತರ್ನಾಕ್ ಗ್ಯಾಂಗ್.. ಬೆಂಗಳೂರಿನಲ್ಲಿ ತಮ್ಮ ಕೈಚಳಕ ತೋರಿಸಲು ಬೀಡು ಬಿಟ್ಟಿತ್ತು. ಅಂದುಕೊಂಡಂತೆ ಒಂದು ಅಂಗಡಿಯನ್ನೂ ದೋಚಿದ್ರು. ಆದ್ರೆ ಅವರ ನಸೀಬು ಅಲ್ಲಿಗೆ ಮುಗಿದಿತ್ತು. ಖತರ್ನಾಕ್ ಬೆಡ್ ಶೀಟ್ ಗ್ಯಾಂಗ್ ಪೊಲೀಸರ ಅತಿಥಿಯಾಗಿದೆ. ಅಬ್ಬಬ್ಹಾ.. ಇಬ್ಬರು ಬೆಡ್ ಶೀಟ್ ಹಿಡಿದ್ರೆ.. ಉಳಿದವರು ಅಂಗಡಿ ಒಳಗೆ ನುಗ್ಗೋದಂತೆ.. ಮತ್ತಿಬ್ಬರು ಬೀದಿಯಲ್ಲೇ ವಾಚ್ ಮಾಡುದ್ರೆ, ಎಲ್ಲಾ ಮುಗಿದ್ಮೇಲೆ ಮತ್ತೆ ಇಬ್ಬರು ಬೆಡ್ ಶೀಡ್ ಹಿಡಿಯೋದಂತೆ… ಅಬ್ಬಬ್ಬಾ… ಅದೇನ್ ಪ್ಲಾನ್. ಅದೆಂತ ಸ್ಟಾಟರ್ಜಿ.. ಬೆಂಗಳೂರಿನಲ್ಲಿ ಇಂತ ಖತರ್ನಾಕ್ ಕಳ್ಳತನ ಮಾಡಿದ್ದ ಬೆಡ್ ಶೀಟ್ ಗ್ಯಾಂಗ್ ಈಗ ಅಂದರ್ ಆಗಿದೆ.. ಯೆಸ್.. ಸಿಸಿಟಿವಿಯಲ್ಲಿ ಸೆರೆಯಾಗಿರೋ ಈ ಘಟನೆ ನಡೆದಿದ್ದು ಅಕ್ಟೋಬರ್ 21ರ ಸೂರ್ಯ ಉದಯಿಸೋ ಮುನ್ನ. ಸರಿಯಾಗಿ ಮುಂಜಾನೆ 4-5 ಗಂಟೆ ಒಳಗೆ ಬೈಯಪ್ಪನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಸಿ.ವಿ.ರಾಮನ್ ನಗರದ ಈ ಎಸ್ಎಲ್ಆರ್ ಮೊಬೈಲ್ ಶಾಪ್ ಬೆಡ್ ಶೀಟ್ ಗ್ಯಾಂಗ್ ಎಂಟ್ರಿ ಕೊಟ್ಟಿತ್ತು. 8 ಜನರ ಈ ಟೀಂ ಎರಡು ದಿನದ…

Read More

ತುಮಕೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಜನಪ್ರಿಯ ನಿಕಟಪೂರ್ವ ಶಾಸಕರಾದ ಶ್ರೀ ಡಿಸಿ ಗೌರಿಶಂಕರ್ ಅಣ್ಣನವರ ಅಧ್ಯಕ್ಷತೆಯಲ್ಲಿ ಬೆಳ್ಳಾವಿ ಹೋಬಳಿ ವ್ಯಾಪ್ತಿಯ ಅಗಲಗುಂಟೆ ಗ್ರಾಮದ ಹಿರಿಯ ಕಾಂಗ್ರೆಸ್ ಮುಖಂಡರಾದ ವಾಸಣ್ಣನವರ ನಿವಾಸದಲ್ಲಿ ದಿನಾಂಕ 2.12.2024 ರಂದು ಕರ್ನಾಟಕ ರಾಜ್ಯದ ಜನಪ್ರಿಯ ಗೃಹ ಸಚಿವರು ಹಾಗೂ ತುಮಕೂರು ಜಿಲ್ಲಾ ಉಸ್ತುವಾರಿ ಸಚಿವರೂ ಆದ ಡಾ ಜಿ ಪರಮೇಶ್ವರ್ ರವರ ನೇತೃತ್ವದಲ್ಲಿ ತುಮಕೂರಿನಲ್ಲಿ ನಡೆಯುವಂತಹ ಸಾವಿರಾರು ಕೋಟಿಗಳ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ಹಾಗೂ ಉದ್ಘಾಟನಾ ಕಾರ್ಯಕ್ರಮಕ್ಕೆ ಆಗಮಿಸುತ್ತಿರುವ ಕರ್ನಾಟಕ ರಾಜ್ಯದ ಜನಪ್ರಿಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯನವರು, ಜನಪ್ರಿಯ ಉಪಮುಖ್ಯಮಂತ್ರಿಗಳಾದ ಶ್ರೀ ಡಿ ಕೆ ಶಿವಕುಮಾರ್ ರವರು, ಸಹಕಾರ ಸಚಿವರಾದ ಕೆಎನ್ ರಾಜಣ್ಣನವರು ಹಾಗೂ ರಾಜ್ಯದ ಎಲ್ಲಾ ಸಚಿವರುಗಳು ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯನ್ನು ಉದ್ದೇಶಿಸಿ ಗೌರಿಶಂಕರ್ ರವರು ಮಾತನಾಡಿ ತುಮಕೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರಕ್ಕೆ ಅಂತರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣವನ್ನು ಮಂಜೂರಾತಿ ಮಾಡಿಸಿ ತುಮಕೂರು ಜಿಲ್ಲೆಗೆ ಅತ್ಯುನ್ನತ ಕಿರೀಟವನ್ನು ತಂದುಕೊಟ್ಟ ಡಾ ಜಿ ಪರಮೇಶ್ವರ್…

Read More

ಇತ್ತೀಚಿನ ದಿನಗಳಲ್ಲಿ ಹಳೆಯ ಅಥವಾ ಪುರಾತನ ಕಾಲದ ನಾಣ್ಯಗಳಿಗೆ ಹಾಗೂ ಹಳೆಯ ಕರೆನ್ಸಿ ನೋಟುಗಳನ್ನು ಬೇಡಿಕೆ ಹೆಚ್ಚಿದೆ. ಕೆಲವೊಂದು ವೆಬ್ ಸೈಟ್ ಗಳು ಇಂಥ ಪುರಾತನ ಹಾಗೂ ವಿಶಿಷ್ಟ ನಾಣ್ಯಗಳು ಹಾಗೂ ನೋಟುಗಳ ಬಿಡ್ಡಿಂಗ್ ನಡೆಸುತ್ತಿದ್ದು, ಲಕ್ಷಾಂತರ ರೂ. ಗಳಿಸುವ ಅವಕಾಶವನ್ನು ನೀಡಿವೆ. ಹಾಗೆಯೇ ಒಂದು ರೂ. ಮುಖಬೆಲೆಯ ಹಳೆಯ ನಾಣ್ಯ ನಿಮ್ಮ ಸಂಗ್ರಹದಲ್ಲಿದ್ದರೆ, ಕೋಟ್ಯಂತರ ರೂಪಾಯಿ ಗಳಿಸುವ ಅವಕಾಶವಿದೆ. 1885ರಲ್ಲಿ ಬ್ರಿಟಿಷರ ಕಾಲಾವಧಿಯಲ್ಲಿ ಸಿದ್ಧಗೊಂಡ ಒಂದು ರೂ. ಮುಖಬೆಲೆಯ ನಾಣ್ಯ ಹರಾಜಿನಲ್ಲಿ 10 ಕೋಟಿ ರೂ.ಗೆ ಮಾರಾಟವಾಗಿದೆ. ಹೀಗಾಗಿ ನಿಮ್ಮ ಬಳಿಯು ಇದೇ ಮಾದರಿಯ ನಾಣ್ಯವಿದ್ರೆ ನೀವು ಕೂಡ ಆನ್ ಲೈನ್ ಹರಾಜಿನಲ್ಲಿ ಭಾಗವಹಿಸುವ ಮೂಲಕ 10 ಕೋಟಿ ರೂ. ಗಳಿಸಬಹುದು. ನಿಮ್ಮ ಹತ್ರ ಹಳೆ ನೋಟು, ಚಿಲ್ಲರೆ ಇದ್ಯಾ? ಪ್ರಸ್ತುತ ನಾಣ್ಯಶಾಸ್ತ್ರಜ್ಞರು ನಾಣ್ಯಗಳ ಸಂಗ್ರಾಹಕರಾಗಿದ್ದಾರೆ ಮತ್ತು ನೋಟಫಿಲಿಸ್ಟ್‌ಗಳು  ಅಪರೂಪದ ನಾಣ್ಯಗಳು ಮತ್ತು ನೋಟುಗಳ ಹುಡುಕಾಟದಲ್ಲಿದ್ದಾರೆ. ನೀವು ಅಂತಹ ನಾಣ್ಯಗಳು ಅಥವಾ ನೋಟುಗಳ ಸಂಗ್ರಹವನ್ನು ಹೊಂದಿದ್ದರೆ, ನೀವು ಅವುಗಳನ್ನು ಉತ್ತಮ ಮೊತ್ತಕ್ಕೆ ಮಾರಾಟ ಮಾಡಬಹುದು. ಈ ನಾಣ್ಯಗಳು ಮತ್ತು ನೋಟುಗಳ…

Read More