ಲವಂಗದಿಂದ ನಮ್ಮ ಆರೋಗ್ಯಕ್ಕೆ ಸಾಕಷ್ಟು ಪ್ರಯೋಜನಗಳಿವೆ. ಲವಂಗ ಉತ್ಕರ್ಷಣ ನಿರೋಧಕ ಮತ್ತು ಉರಿಯೂತದ ಗುಣಲಕ್ಷಣಗಳನ್ನು ಹೊಂದಿರುವ ಮಸಾಲೆ ಪದಾರ್ಥವಾಗಿದೆ. ಇದರೊಂದಿಗೆ ಲವಂಗದ ಎಣ್ಣೆ ಹಲವಾರು ಔಷಧಿಯ ಗುಣಗಳು ಇವೆ. ಹಲ್ಲು ನೋವಿನ ನಿವಾರಣೆ ಯಿಂದ ಹಿಡಿದು ಮಾನಸಿಕ ಒತ್ತಡದ ನಿವಾರಣೆಯವರೆಗೂ ಇದರ ಪ್ರಯೋಜನಗಳನ್ನು ಪಡೆಯಬಹುದು. ನಿಮ್ಮ ಹಲವಾರು ಆರೋಗ್ಯ ಸಮಸ್ಯೆಗಳಿಗೆ ಬೇರೆ ಬೇರೆ ಪರಿಹಾರಗಳನ್ನು ಕಂಡು ಕೊಳ್ಳುವ ತರಹ ಲವಂಗದ ಎಣ್ಣೆಯಿಂದ ಲಾಭ ಪಡೆದು ಕೊಳ್ಳಬಹುದು.. ಚಳಿಗಾಲದಲ್ಲಿ ಲವಂಗದ ಎಣ್ಣೆ ಸೇವಿಸುವುದು ತುಂಬಾ ಪ್ರಯೋಜನಕಾರಿ ಎಂದು ಹೇಳಲಾಗುತ್ತದೆ. ತ್ವರಿತ ಸ್ಖಲನವನ್ನು ತಡೆಯುತ್ತದೆ ಲವಂಗದ ಎಣ್ಣೆಯು ಬೆಚ್ಚಗಾಗುತ್ತಿದೆ, ಇದು ನಿಮ್ಮ ದೇಹದಲ್ಲಿ ರಕ್ತದ ಹರಿವನ್ನು ಸುಧಾರಿಸುತ್ತದೆ. ಇದಲ್ಲದೆ, ಇದು ದೇಹದ ಉಷ್ಣತೆಯನ್ನು ಹೆಚ್ಚಿಸುತ್ತದೆ. ಅಂತಹ ಪರಿಸ್ಥಿತಿಯಲ್ಲಿ ನೀವು ಒತ್ತಡದಿಂದ ದೂರವಿರಿ, ಇದು ನಿಮ್ಮ ದೇಹದಲ್ಲಿ ಶಕ್ತಿ ಮತ್ತು ನರಗಳ ಪ್ರಚೋದನೆಯನ್ನು ಹೆಚ್ಚಿಸುತ್ತದೆ. ಅಕಾಲಿಕ ಸ್ಖಲನದ ಸಮಸ್ಯೆಯಿಂದ ಬಳಲುತ್ತಿರುವ ಪುರುಷರಿಗೆ ಈ ಎಣ್ಣೆಯು ತುಂಬಾ ಪರಿಣಾಮಕಾರಿಯಾಗಿದೆ. ಬಂಜೆತನವನ್ನು ನಿವಾರಿಸುತ್ತದೆ ಲವಂಗದ ಎಣ್ಣೆ ಕಾಮೋತ್ತೇಜಿಸುತ್ತದೆ. ಇದು…
Author: AIN Admin
ಗ್ರಾಮೀಣ ಭಾಗದ ಯುವಕರು ಉದ್ಯೋಗಕ್ಕಾಗಿ ನಾನಾ ಕಂಪನಿಗಳ ಕದ ತಟ್ಟುವ ಬದಲು ಕೃಷಿ ಕ್ಷೇತ್ರದಲ್ಲಿ ಹೊಸ ಆಲೋಚನೆ, ತಂತ್ರಜ್ಞಾನಗಳೊಂದಿಗೆ ಸ್ವಂತ ಉದ್ಯಮ ಆರಂಭಿಸುವವರಿಗೆ ಕೃಷಿ ಇಲಾಖೆಯು ‘ಕೃಷಿ ನವೋದ್ಯಮ’ದಡಿ ಆರ್ಥಿಕ ನೆರವು ನೀಡುತ್ತಿದೆ. ರಾಜ್ಯಾದ್ಯಂತ ಕೃಷಿ ವಲಯದಲ್ಲಿ ನೂತನ ಆವಿಷ್ಕಾರಗಳು, ನವೀನ ಉತ್ಪನ್ನಗಳು ಹಾಗೂ ಸೇವೆಗಳನ್ನು ಒಳಗೊಂಡಿರುವ ಕೃಷಿ ನವೋದ್ಯಮಗಳಿಗೆ ಉತ್ತೇಜನ ನೀಡುವ ಉದ್ದೇಶದೊಂದಿಗೆ ‘ಕೃಷಿ ನವೋದ್ಯಮ’ ಯೋಜನೆಯನ್ನು ಅನುಷ್ಠಾನಗೊಳಿಸಲಾಗಿದೆ. https://ainlivenews.com/government-provides-financial-assistance-of-%e2%82%b920000-to-puc-passed-students-apply-today/ ಅರ್ಜಿ ಸಲ್ಲಿಸಲಾದ ಕೃಷಿ ನವೋದ್ಯಮಗಳ ಪೈಕಿ ಅರ್ಹ ಕೃಷಿ ನವೋದ್ಯಮಗಳನ್ನು ವಿವಿಧ ಹಂತಗಳಲ್ಲಿ ಪರಿಶೀಲನೆ ನಡೆಸಿ ಹೊಸ ಕೃಷಿ ನವೋದ್ಯಮಗಳಿಗೆ ಕನಿಷ್ಠ ರೂ. 5 ಲಕ್ಷದಿಂದ ಗರಿಷ್ಠ ರೂ. 20 ಲಕ್ಷ ಹಾಗೂ ಈಗಾಗಲೇ ಸ್ಥಾಪಿಸಲಾದ ಕೃಷಿ ನವೋದ್ಯಮಗಳ ವಿಸ್ತರಣೆಗೆ ಕನಿಷ್ಠ ರೂ. 20 ಲಕ್ಷದಿಂದ ಗರಿಷ್ಠ ರೂ. 50 ಲಕ್ಷದವರೆಗಿನ ಸಹಾಯಧನವನ್ನು ಶೇ. 50 ರಷ್ಟು ರಿಯಾಯಿತಿಯೊಂದಿಗೆ ಖಜಾನೆ-2 ಮೂಲಕ ನೀಡಲಾಗುವುದು. ಹೀಗೆ ಆಯ್ಕೆಯಾದ ಕೃಷಿ ನವೋದ್ಯಮಗಳ ಸಾಮರ್ಥ್ಯಾಭಿವೃದ್ಧಿಗಾಗಿ ವಿವಿಧ ತರಬೇತಿ ಕೇಂದ್ರಗಳಲ್ಲಿ ಹಾಗೂ ಇನ್ಕ್ಯುಬೇಷನ್ ಸೆಂಟರ್ ಗಳಲ್ಲಿ…
ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಪ್ಯಾನ್ ಕಾರ್ಡ್ ಪ್ರಮುಖ ದಾಖಲೆಯಾಗಿದೆ. ಸರ್ಕಾರಿ ಮತ್ತು ಖಾಸಗಿ ಕೆಲಸ ಮಾಡಲು ಪ್ಯಾನ್ ಕಾರ್ಡ್ ಬಳಕೆ ಕಡ್ಡಾಯವಾಗಿದೆ. ಬ್ಯಾಂಕಿನಲ್ಲಿ ಖಾತೆ ತೆರೆಯಲು, ಕ್ರೆಡಿಟ್ ಕಾರ್ಡ್ ಮತ್ತು ಡೆಬಿಟ್ ಕಾರ್ಡ್ ತೆಗೆದುಕೊಳ್ಳಲು ಅಥವಾ ಐಟಿಆರ್ ಫೈಲ್ ಮಾಡಲು, ಪ್ಯಾನ್ ಕಾರ್ಡ್ ಬೇಕೇ ಬೇಕು. ಹೀಗಿದ್ದಾಗ ಪ್ರಧಾನಿ ನೇತೃತ್ವದ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿ ಪ್ಯಾನ್ 2.0 ಯೋಜನೆಗೆ ಅನುಮೋದನೆ ನೀಡಿದೆ. ಈ ಯೋಜನೆಗೆ ಸರ್ಕಾರ 1,435 ಕೋಟಿ ರೂ ವ್ಯಯಿಸಲಿದೆ. ಏನಿದು ಪ್ಯಾನ್ 2.0 ಯೋಜನೆ? ಪ್ಯಾನ್ ಅಥವಾ ಪರ್ಮನೆಂಟ್ ಅಕೌಂಟ್ ನಂಬರ್ ಎನ್ನುವುದು ಒಬ್ಬ ವ್ಯಕ್ತಿಯ ಅಥವಾ ಸಂಸ್ಥೆಯ ಎಲ್ಲಾ ಹಣಕಾಸು ವಹಿವಾಟುಗಳು, ತೆರಿಗೆಗಳ ಮಾಹಿತಿಯನ್ನು ಕ್ರೋಢೀಕರಿಸುವ ಸಾಧನ. ಇದರ ತಂತ್ರಜ್ಞಾನವನ್ನು ಇನ್ನೊಂದು ಹಂತ ಮೇಲ್ದರ್ಜೆಗೆ ಏರಿಸಲಾಗುತ್ತಿದೆ. ಅದುವೇ ಪ್ಯಾನ್ 2.0. ಎರಡನೇ ಆವೃತ್ತಿಯ ಪ್ಯಾನ್ನಲ್ಲಿ ಕ್ಯೂಆರ್ ಕೋಡ್ ಅನ್ನು ಒಳಗೊಂಡಿರಲಾಗುತ್ತದೆ. ಪ್ಯಾನ್ 2.0 ಹೆಚ್ಚು ನಿಖರವಾಗಿರುತ್ತದೆ. ಇದರ ಡಿಜಿಟಲ್ ಇನ್ಫ್ರಾಸ್ಟ್ರಕ್ಚರ್ ಹೆಚ್ಚು ಸಮರ್ಪಕವಾಗಿರುತ್ತದೆ. ಸಮಸ್ಯೆಗೆ ಪರಿಹಾರ…
ಗುರುವಾರದ ಉಪಾಯವನ್ನು ಭಗವಾನ್ ವಿಷ್ಣುವಿಗೆ ಸಮರ್ಪಿಸಲಾಗಿದೆ, ಈ ಪರಿಹಾರವು ಸಂಪತ್ತು ಮತ್ತು ಸಮೃದ್ಧಿಯನ್ನು ನೀಡಲು ಸಹಕಾರಿ ಎಂದು ಹೇಳಲಾಗುತ್ತದೆ. ಈ ದಿನದಂದು ಭಗವಾನ್ ವಿಷ್ಣುವನ್ನು ವಿಶೇಷವಾಗಿ ಪೂಜಿಸಲಾಗುತ್ತದೆ. ಇದರೊಂದಿಗೆ ಲಕ್ಷ್ಮಿ ದೇವಿಯನ್ನು ಪೂಜಿಸಿದರೆ, ಅದು ತುಂಬಾ ಫಲಪ್ರದವೆಂದು ಪರಿಗಣಿಸಲಾಗುತ್ತದೆ. ಭಗವಾನ್ ವಿಷ್ಣುವು ಯಾವಾಗಲೂ ಲಕ್ಷ್ಮಿ ದೇವಿಯ ಜೊತೆಯಲ್ಲಿರುತ್ತಾನೆ ಎಂದು ಶಾಸ್ತ್ರಗಳಲ್ಲಿ ಹೇಳಲಾಗಿದೆ. ಅದರಂತೆ ಕೆಲವು ಕೆಲಸಗಳನ್ನು ಮಾಡಲು ವಿಶೇಷ ನಿಷೇಧವಿದೆ ಮತ್ತು ಈ ಕೆಲಸಗಳನ್ನು ಮಾಡಿದರೆ ವ್ಯಕ್ತಿಯು ಕೆಟ್ಟ ಪರಿಣಾಮಗಳನ್ನು ಎದುರಿಸಬೇಕಾಗಬಹುದು. ಧಾರ್ಮಿಕ ನಂಬಿಕೆಗಳ ಪ್ರಕಾರ, ಗುರುವಾರದಂದು ಈ ನಿಷೇಧಿತ ಕೆಲಸಗಳನ್ನು ಮಾಡಿದರೆ, ನಂತರ ಮಹಿಳೆಯರು ತಮ್ಮ ಮಕ್ಕಳು ಮತ್ತು ಪುರುಷರು ಯಾವ ಸಮಸ್ಯೆಗಳನ್ನು ಅನುಭವಿಸಬೇಕಾಗುತ್ತದೆ, ನೋಡೋಣ. ಹಾಗಾದರೆ ಗುರುವಾರದಂದು ಮಾಡಬಾರದ ಕೆಲಸಗಳೇನು ನೋಡೋಣ. ಹಿರಿಯರನ್ನು ಅವಮಾನಿಸುವುದನ್ನು ತಪ್ಪಿಸಿ: ನಾವು ಹಿರಿಯರನ್ನು ಎಂದಿಗೂ ಅವಮಾನಿಸಬಾರದು. ಅದರಲ್ಲೂ ವಿಶೇಷವಾಗಿ ಗುರುವಾರದಂದು ಈ ಕೆಲಸಗಳನ್ನು ಮಾಡಲೇಬಾರದು ಎನ್ನುವುದನ್ನು ಗಮನದಲ್ಲಿಟ್ಟುಕೊಳ್ಳಬೇಕು. ಹಿರಿಯರನ್ನು ನಾವು ಯಾವುದೇ ಕಾರಣಕ್ಕೂ ದುಃಖಿಕ್ಕೆ ತಳ್ಳಬಾರದು. ಇವರಲ್ಲಿ ಪೋಷಕರು, ಗುರುಗಳು, ಋಷಿಗಳು ಮತ್ತು…
ಸೂರ್ಯೋದಯ: 06:32, ಸೂರ್ಯಾಸ್ತ : 05:35 ಶಾಲಿವಾಹನ ಶಕೆ -1946 ಸಂವತ್-2080 ಕ್ರೋಧಿನಾಮ ಸಂವತ್ಸರ, ದಕ್ಷಿಣ ಅಯಣ, ಶುಕ್ಲ ಪಕ್ಷ, ಶರದ ಋತು, ಕಾರ್ತಿಕ್ ಮಾಸ, ತಿಥಿ:ತ್ರಯೋದಶಿ ನಕ್ಷತ್ರ: ಚಿತ್ತ ರಾಹು ಕಾಲ: 01:30 ನಿಂದ 03:00 ತನಕ ಯಮಗಂಡ: 06:00 ನಿಂದ 07:30 ತನಕ ಗುಳಿಕ ಕಾಲ: 09:00 ನಿಂದ 10:30 ತನಕ ಅಮೃತಕಾಲ: ರಾ .12:30 ನಿಂದ ರಾ .2:17 ತನಕ ಅಭಿಜಿತ್ ಮುಹುರ್ತ: ಬೆ.11:42 ನಿಂದ ಮ.12:26 ತನಕ ಮೇಷ ರಾಶಿ: ವಾಹನ ಬದಲಾಯಿಸಿ ಹೊಸ ವಾಹನ ಖರೀದಿ,ರಾಶಿಯ ಕೌಟುಂಬಿಕ ಜೀವನ ತುಂಬಾ ಮಧುರ,ವ್ಯಾಪಾರ ಮಧ್ಯಮ,ಹಣದ ವಿಷಯದಲ್ಲಿ ಸಾಮಾನ್ಯ ದಿನವಾಗಿದೆ. ಕೆಲವೊಮ್ಮೆ ಅಪಾಯಕಾರಿ ಪರಿಸ್ಥಿತಿ ಎದುರಿಸುವಿರಿ. ಇವರ ಹಠಾತ್ ನಿರ್ಧಾರಗಳಿಂದಾಗಿ ಎಡವಟ್ಟೇ ಹೆಚ್ಚು. ನೀವು ಆರ್ಥಿಕವಾಗಿ ಅಷ್ಟೇನೂ ಉತ್ತಮ ನಿರ್ಧಾರಗಳನ್ನು ತೆಗೆದುಕೊಳ್ಳುವವರಲ್ಲ. ಇವರು ಕ್ಷಣಿಕ ಆಕರ್ಷಣೆಗೆ ಹೆಚ್ಚು ಒಳಗಾಗುತ್ತಾರೆ. ಹೊಸ ಬಟ್ಟೆ, ಕಾರು, ವಸ್ತುಗಳನ್ನು ಖರೀದಿಸುವಲ್ಲಿ ಬೇಗ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಾರೆ,ಆದರೆ, ಇವರು ತಮ್ಮ ಗಳಿಕೆಯ ಸಾಮರ್ಥ್ಯವನ್ನು ಚೆನ್ನಾಗಿ…
ಬೆಂಗಳೂರು: ರಾಜ್ಯ ಸಚಿವ ಸಂಪುಟ ಪುನಾರಚನೆ ವಿಚಾರ ದೊಡ್ಡ ಮಟ್ಟದಲ್ಲೇ ಸದ್ದುಮಾಡ್ತಿದೆ.ಡಿಸೆಂಬರ್ ಇಲ್ಲವೇ ಜನವರಿಯಲ್ಲಿ ಸಂಪುಟ ಪುನಾರಚನೆ ಮಾಡೋಕೆ ವರಿಷ್ಠರು ಆಸಕ್ತಿವಹಿಸಿದ್ದಾರೆ. ನಾಳೆ ಸಿಎಂ ಸಿದ್ದರಾಮಯ್ಯ ಎಐಸಿಸಿ ಕಾರ್ಯಕಾರಿಣಿ ಸಭೆಯ ಹಿನ್ನೆಲೆ ದೆಹಲಿಗೆ ತೆರಳುತ್ತಿದ್ದು,ವರಿಷ್ಠರನ್ನ ಭೇಟಿ ಮಾಡಲಿದ್ದಾರೆ..ಈವೇಳೆ ಸಂಪುಟ ಪುನಾರಚನೆಗೆ ಸಂಬಂಧಿಸಿದಂತೆ ಚರ್ಚೆ ನಡೆಸಲಿದ್ದು ವರಿಷ್ಠರ ಗ್ರೀನ್ ಸಿಗ್ನಲ್ ಪಡೆಯಲಿದ್ದಾರೆ.ಸಿಎಂ ದೆಹಲಿ ಭೇಟಿ ಸಾಕಷ್ಟು ಕುತೂಹಲ ಕೆರಳಿಸಿದೆ. ಯೆಸ್..ಕಳೆದ ಹಲವು ದಿನಗಳಿಂದ ರಾಜ್ಯ ಸಚಿವ ಸಂಪುಟ ಪುನಾರಚನೆಯ ವಿಚಾರ ದೊಡ್ಡಮಟ್ಟದಲ್ಲೇ ಚರ್ಚೆಯಾಗ್ತಿದೆ..ಸರ್ಕಾರಕ್ಕೆ ಎರಡು ವರ್ಷ ಪೂರ್ಣಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಕೆಲವು ಸಚಿವರನ್ನ ಕೈಬಿಡುವ ನಿರ್ಧಾರಕ್ಕೆ ಹೈಕಮಾಂಡ್ ಬಂದಿದೆ..ಸಂಪುಟ ಪುನಾರಚನೆಯ ಮಾಡಿ ಹೊಸಬರಿಗೆ ಅವಕಾಶ ಮಾಡಿಕೊಡುವ ಪ್ರಯತ್ನಕ್ಕೆ ಮುಂದಾಗಿದೆ..ಈಗಾಗಲೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪುನಾರಚನೆಯ ಸುಳಿವನ್ನ ಬಿಟ್ಟುಕೊಟ್ಟಿದ್ದಾರೆ.. https://ainlivenews.com/what-is-the-right-age-to-have-a-child-what-advice-do-doctors-give-to-women-and-men/ ಸಿಎಂ ಸಿದ್ದರಾಮಯ್ಯ ಕೂಡ ಪುನಾರಚನೆಗೆ ಮನಸ್ಸು ಮಾಡಿದ್ದು ವರಿಷ್ಠರ ಅನುಮತಿ ಪಡೆಯೋಕೆ ನಿರ್ಧರಿಸಿದ್ದಾರೆ..ಎಐಸಿಸಿ ಕಾರ್ಯಕಾರಿಣಿ ಸಭೆಗಾಗಿ ನಾಳೆ ಸಂಜೆ ದೆಹಲಿಗೆ ಪ್ರಯಾಣಿಸ್ತಿದ್ದಾರೆ..ಸಭೆಯ ಬಳಿಕ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ,ಸೋನಿಯಾ ಹಾಗೂ ರಾಹುಲ್ ಗಾಂಧಿಯವರನ್ನ ಭೇಟಿ…
ಕೇವಲ ಕ್ಯಾಪ್ಟನ್ಸಿ ಮಾತ್ರವಲ್ಲ ಬ್ಯಾಟಿಂಗ್ ಮತ್ತು ಬೌಲಿಂಗ್ ವಿಭಾಗದಲ್ಲೂ ಮೋಡಿ ಮಾಡಬಲ್ಲ ಆಟಗಾರ ಹಾರ್ದಿಕ್ ಪಾಂಡ್ಯ. ಒತ್ತಡದ ಸನ್ನಿವೇಶದಲ್ಲಿ ಬೌಲಿಂಗ್ ಮಾಡುವ ಕಲೆ ಇವರಿಗಿದೆ. ಆದ್ರೆ ಇದೀಗ ಹಾರ್ದಿಕ್ ಪಾಂಡ್ಯ ಅಭಿಮಾನಿಗಳಿಗೆ ಶಾಕಿಂಗ್ ನ್ಯೂಸ್ ಕಾದಿದೆ. ಮುಂಬೈ ಇಂಡಿಯನ್ಸ್ ಫ್ರಾಂಚೈಸಿ ಬಲಿಷ್ಠ ಪಡೆಯನ್ನು ರೂಪಿಸಿದೆ. ಈ ತಂಡವನ್ನು ಹಾರ್ದಿಕ್ ಪಾಂಡ್ಯ ಮುನ್ನಡೆಸಲಿದ್ದಾರೆ. ಆದರೆ ಮೊದಲ ಮ್ಯಾಚ್ನಲ್ಲಿ ಪಾಂಡ್ಯಗೆ ಕಣಕ್ಕಿಳಿಯಲು ಸಾಧ್ಯವಾಗುವುದಿಲ್ಲ. ಏಕೆಂದರೆ ಕಳೆದ ಸೀಸನ್ನಲ್ಲಿ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಕೊನೆಯ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡವು ನಿಗದಿತ ಸಮಯದೊಳಗೆ 20 ಓವರ್ಗಳನ್ನು ಪೂರ್ಣಗೊಳಿಸಿರಲಿಲ್ಲ. ಹೀಗಾಗಿ ನಾಯಕ ಹಾರ್ದಿಕ್ ಪಾಂಡ್ಯಗೆ 30 ಲಕ್ಷ ರೂ. ದಂಡ ಹಾಗೂ ಒಂದು ಪಂದ್ಯದ ನಿಷೇಧ ಹೇರಲಾಗಿದೆ. https://ainlivenews.com/government-provides-financial-assistance-of-%e2%82%b920000-to-puc-passed-students-apply-today/ ಈ ಒಂದು ಪಂದ್ಯದ ನಿಷೇಧದ ಶಿಕ್ಷೆ ಈ ಬಾರಿಯ ಐಪಿಎಲ್ನಲ್ಲಿ ಮುಂದುವರೆಯಲಿದೆ. ಅದರಂತೆ ಐಪಿಎಲ್ 2025 ರಲ್ಲಿ ಹಾರ್ದಿಕ್ ಪಾಂಡ್ಯ ಮುಂಬೈ ಇಂಡಿಯನ್ಸ್ ಪರ ಮೊದಲ ಪಂದ್ಯವಾಡಲು ಸಾಧ್ಯವಾಗುವುದಿಲ್ಲ. ಹೀಗಾಗಿ ಮೊದಲ ಮ್ಯಾಚ್ನಲ್ಲಿ ಮುಂಬೈ ಪಡೆಯನ್ನು ಜಸ್ಪ್ರೀತ್…
ಬೆಂಗಳೂರು: ಕೆಪಿಎಸ್ಸಿ ಸಂಸ್ಥೆಯಿಂದ ರಾಜ್ಯದ ಉದ್ಯೋಗಾಕಾಂಕ್ಷಿಗಳಿಗೆ ನಿರಂತರವಾಗಿ ಅನ್ಯಾಯವಾಗಯತ್ತಲೇ ಇದ್ದು, ಈ ಸಂಸ್ಥೆಯನ್ನು ರದ್ದು ಮಾಡಬೇಕು ಎಂದು ಆಮ್ ಆದ್ಮಿ ಪಕ್ಷದ ರಾಜ್ಯ ಯುವ ಘಟಕದ ಅಧ್ಯಕ್ಷ ಲೋಹಿತ್ ಕೆ ಹನುಮಾಪುರ ಆಗ್ರಹಿಸಿದ್ದಾರೆ. ನಗರದ ಪಕ್ಷದ ಮುಖ್ಯ ಕಚೇರಿಯಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಕೆಪಿಎಸ್ಸಿ ನಡೆಸಿದ ಪರೀಕ್ಷೆಯಲ್ಲಿ ಕನ್ನಡ-ಇಂಗ್ಲಿಷ್ ಭಾಷಾಂತರದಲ್ಲಿ ಪ್ರಶ್ನೆಗಳೇ ತಪ್ಪಾಗಿದ್ದವು. ಇದನ್ನು ವಿರೋಧಿಸಿ ಅಭ್ಯರ್ಥಿಗಳು ಪ್ರತಿಭಟನೆ ನಡೆಸಿದ ಬಳಿಕ ನಡೆದಿದ್ದ ಪರೀಕ್ಷೆಯನ್ನು ರದ್ದು ಮಾಡಿ ಹೊಸದಾಗಿ ಪರೀಕ್ಷೆ ನಡೆಸುವುದಾಗಿ ಹೇಳಿತ್ತು. ಡಿಸೆಂಬರ್ 29 ರಂದು ಮರುಪರೀಕ್ಷೆಗೆ ದಿನಾಂಕ ನಿಗದಿ ಮಾಡಿತ್ತು. ಹೊಸದಾಗಿ ಪರೀಕ್ಷೆ ಬರೆಯಲು ವಿದ್ಯಾರ್ಥಿಗಳು ಹಾಲ್ ಟಿಕೆಟ್ ಡೌನ್ ಲೋಡ್ ಮಾಡಲು ಹೋದಾಗ ಹಾಲ್ ಟಿಕೆಟ್ ಮತ್ತು ನೋಟಿಫಿಕೇಷನ್ ಅನ್ನು ಕೆಪಿಎಸ್ಸಿ ಡಿಲೀಟ್ ಮಾಡಿರುವುದು ಗಮನಕ್ಕೆ ಬಂದಿದೆ. ಇದಕ್ಕೆ ಪ್ರಮುಖ ಕಾರಣವೆಂದರೆ, ವಿದ್ಯಾರ್ಥಿನಿಯೊಬ್ಬರು ನ್ಯಾಯಾಲಯದ ಮೊರೆ ಹೋಗಿದ್ದು, ಈಗಾಗಲೇ ಬರೆಸಿರುವ ಪರೀಕ್ಷೆಯನ್ನೇ ಮಾನ್ಯ ಮಾಡಲಿ, ಹೊಸದಾಗಿ ಪರೀಕ್ಷೆ ಬರೆಸುವುದು ಬೇಡ ಎಂದು ಮನವಿ ಮಾಡಿದ್ದಾರೆ. ಹೀಗಾಗಿ…
ಮುಂಬೈ: ಮಹಾರಾಷ್ಟ್ರ ಚುನಾವಣೆಯಲ್ಲಿ ಬಿಜೆಪಿ, ಏಕನಾಥ್ ಶಿಂಧೆ ಬಣ ಅಜಿತ್ ಪವಾರ್ ನೇತೃತ್ವದ ಎನ್ಸಿಪಿ ಬಣಗಳ ಮಹಾಯುತಿ ಮೈತ್ರಿಕೂಟ ಬಂಪರ್ ಬಹುಮತ ಪಡೆದಿವೆ. ಭರ್ಜರಿ ಗೆಲುವಿನೊಂದಿಗೆ ನೂತನ ಸರ್ಕಾರ ರಚನೆಗೆ ಕಸರತ್ತು ಜೋರಾಗಿದೆ. ಬಿಜೆಪಿ 132 ಸ್ಥಾನಗಳನ್ನು ಗೆದ್ದಿದ್ದು ಶಿವಸೇನೆ 54 ಸ್ಥಾನಗಳನ್ನು ಗೆದ್ರೆ ಅಜಿತ್ ಪವಾರ್ ಎನ್ಸಿಪಿ 43 ಸ್ಥಾನಗಳನ್ನು ಗೆದ್ದು ಬೀಗಿದೆ. ಸದ್ಯ ಶಾಸಕಾಂಗ ಪಕ್ಷದ ನಾಯಕನ ರಚನೆ ಕಸರತ್ತು ನಡೆಯುತ್ತಿದ್ದು ಸಿಎಂ ಯಾರು ಅನ್ನೋದು ಫೈನಲ್ ಆಗಬೇಕಿದೆ. ಇದರ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಮತ್ತು ಅಮಿತ್ ಶಾ ಯಾವುದೇ ನಿರ್ಧಾರ ತೆಗೆದುಕೊಂಡರೂ ನಾವು ಅದನ್ನು ಒಪ್ಪಿಕೊಳ್ಳುತ್ತೇವೆ ಎಂದು ಏಕನಾಥ್ ಶಿಂಧೆ ಹೇಳಿದ್ದಾರೆ. ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನಾನು ಜನಪ್ರಿಯತೆಗಾಗಿ ಯಾವ ಕೆಲಸವನ್ನೂ ಮಾಡಲಿಲ್ಲ. ಜನರಿಗಾಗಿ ನಮ್ಮ ಸರ್ಕಾರ ಮಾಡಿದ ಕೆಲಸವೇ ನಮಗೆ ಜನಪ್ರಿಯತೆಯನ್ನು ತಂದುಕೊಟ್ಟಿತು. https://ainlivenews.com/what-is-the-right-age-to-have-a-child-what-advice-do-doctors-give-to-women-and-men/ ನಾನು ಮತ್ತು ನಮ್ಮ ಸರ್ಕಾರದ ಉಪಮುಖ್ಯಮಂತ್ರಿಗಳು ದಿನದ 24 ಗಂಟೆಯೂ ಕೆಲಸ ಮಾಡಿದ್ದೇವೆ. ಮುಂದಿನ ಮುಖ್ಯಮಂತ್ರಿ ಯಾರಾಗುತ್ತಾರೆ ಎಂಬ ನಿರ್ಧಾರವನ್ನು…
ಬೆಂಗಳೂರು: ಸೋಲಿನ ಹತಾಶೆಯಲ್ಲಿ ಗೆದ್ದವರ ಮೇಲೆ ನಾನು ವಿಷ ಕಾರಿಕೊಳ್ಳಲಿಲ್ಲ ಎಂದು ಯುವ ಜನತಾದಳ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ. ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಸೋಲಿನ ಬಳಿಕ ಕಾರ್ಯಕರ್ತರಿಗೆ ಸುದೀರ್ಘ ಪತ್ರ ಬರೆದಿರುವ ನಿಖಿಲ್, ಚನ್ನಪಟ್ಟಣ ವಿಧಾನಸಭೆ ಕ್ಷೇತ್ರದ ಉಪ ಚುನಾವಣೆಯಲ್ಲಿ #NDA ಅಭ್ಯರ್ಥಿಯಾಗಿದ್ದ ನನ್ನ ಸೋಲು ಅನಿರೀಕ್ಷಿತ. ಸೋಲು ಯಾಕಾಯಿತೆಂದು ಈಗಾಗಲೇ ಕಾರಣ ಕೊಟ್ಟಿದ್ದೇನೆ. ಹಾಗೆಂದು, ಸೋಲಿಗೆ ಹೆದರಿ ಸುಮ್ಮನೆ ಕೂರುವ ಜಾಯಮಾನ ನನ್ನದಲ್ಲ, ನಮ್ಮ ಪಕ್ಷದ್ದೂ ಅಲ್ಲ. ಇಂಥ ಅನೇಕ ಸೋಲುಗಳನ್ನು ಪಕ್ಷ ಜೀರ್ಣಿಸಿಕೊಂಡಿದೆ. ಸತತ ಹೋರಾಟಗಳ ಮೂಲಕ ಪಕ್ಷವು ಫೀನಿಕ್ಸ್ನಂತೆ ಎದ್ದು ಬಂದಿದೆ. ಪಕ್ಷದ ಇಂತಹ ಅನೇಕ ಏಳುಬೀಳಿನ ದಾರಿಯಲ್ಲಿ ನಾನೊಬ್ಬ ಸಣ್ಣ ಪಯಣಿಗ. ಅಷ್ಟಾಗಿಯೂ ಅನೇಕ ನಾಯಕರನ್ನು ಪಕ್ಷವು ರಾಜ್ಯಕ್ಕೆ ಧಾರೆಯೆರೆದು ಕೊಟ್ಟಿದೆ, ಅದು ಮಣ್ಣಿನಮಗ ಪೂಜ್ಯ ದೇವೇಗೌಡರ ಗರಡಿಯ ಫಲ. ಈ ಸೋಲು ನನಗೆ ನೋವುಂಟು ಮಾಡಿದೆ, ನಿಜ. ಇಲ್ಲ ಎಂದು ಹೇಳಿ ಆತ್ಮವಂಚನೆ ಮಾಡಿಕೊಳ್ಳುವುದಿಲ್ಲ. ಹಾಗಂತ, ಸೋಲುತ್ತೇನೆ ಎಂದು ನಾನು ಚುನಾವಣೆಗೆ ಸ್ಪರ್ಧಿಸಿರಲಿಲ್ಲ. ಗೆಲ್ಲಲು…