Author: AIN Admin

ಹುಬ್ಬಳ್ಳಿ: ಟೊಯೋಟಾ ಕಿರ್ಲೋಸ್ಕರ್ ಮೋಟಾರ್ ಭಾರತದಲ್ಲಿ 1,00,000 ಅರ್ಬನ್ ಕ್ರೂಸರ್ ಹೈರೈಡರ್ ಯುನಿಟ್‌ಗಳನ್ನು ಮಾರಾಟ ಮಾಡಿರುವುದಾಗಿ ಘೋಷಿಸಿದೆ. ಈ ಕುರಿತು ಕಂಪನಿಯ ಸಿಇಓ ನಗರದಲ್ಲಿ ಮಾಹಿತಿ ನೀಡಿದ್ದು 2022ರ ಜುಲೈನಲ್ಲಿ ಬಿಡುಗಡೆಯಾದ ಅರ್ಬನ್ ಕ್ರೂಸರ್ ಹೈರೈಡರ್ ಟೊಯೋಟಾದ ವಿಶ್ವ ದರ್ಜೆಯ ಹೈಬ್ರಿಡ್ ತಂತ್ರಜ್ಞಾನ, ಅಪೂರ್ವ ವಿನ್ಯಾಸ, ಪ್ರೀಮಿಯಂ ಸೌಕರ್ಯ ಮತ್ತು ಅಸಾಧಾರಣ ಕಾರ್ಯಕ್ಷಮತೆ ಹೊಂದಿತ್ತು. https://ainlivenews.com/you-can-get-health-coverage-of-rs-5-lakh-with-just-this-one-card-apply-like-this/ ಅದರಿಂದಲೇ ಜನಪ್ರೀತಿ ಗಳಿಸಿತ್ತು. ಸೆಲ್ಫ್ ಚಾರ್ಜಿಂಗ್ ಸ್ಟ್ರಾಂಗ್ ಹೈಬ್ರಿಡ್ ಎಲೆಕ್ಟ್ರಿಕ್ ನಿಯೋ ಡ್ರೈವ್ ಮತ್ತು ಸಿ ಎನ್ ಜಿ ಪವರ್ ಎಂಬ ಮೂರು ಪವರ್‌ಟೇನ್‌ಗಳಲ್ಲಿ ಈ ವಾಹನ ಲಭ್ಯವಿದೆ ಎಂದಿರುವ ಈ ಕುರಿತು ಮಾತನಾಡಿದ ಕಂಪನಿಯ ಸೇಲ್ಸ್ ಸರ್ವೀಸ್ ಯೂಸ್ಡ್ ಕಾರ್ ಬಿಸಿನೆಸ್ ವಿಭಾಗದ ಉಪಾಧ್ಯಕ್ಷ ಶಬರಿ ಮನೋಹರ್, “ಅರ್ಬನ್ ಕ್ರೂಸರ್ ಹೈರೈಡರ್ಗೆ ಭಾರತೀಯ ಗ್ರಾಹಕರಿಂದ ದೊರೆತಿರುವ ಸಕಾರಾತ್ಮಕ ಪ್ರತಿಕ್ರಿಯೆಯು ಭಾರತೀಯರ ಬದಲಾಗುತ್ತಿರುವ ಆದ್ಯತೆಗಳಿಗೆ ಅನುಗುಣವಾಗಿ ನವೀನ ಸಾರಿಗೆ ಉತ್ಪನ್ನಗಳನ್ನು ಒದಗಿಸುವ ನಮ್ಮ ಬದ್ಧತೆಯನ್ನು ತೋರಿಸುತ್ತದೆ. ಈ ಮೈಲಿಗಲ್ಲು ಕೇವಲ ಒಂದು ಸಂಖ್ಯೆಯಲ್ಲ, ಬದಲಿಗೆ…

Read More

ಹುಬ್ಬಳ್ಳಿ: ಬದುಕನ ಸಾರ ನಿಜವಾಗಿಯೂ ಸಂಭ್ರಮಿ ಸುವುದರಲ್ಲೇ ಕಿಕ್ ಇದೆ. ಅದನ್ನು ಬಿಟ್ಟು ಮಾದಕವಸ್ತು ವ್ಯಸನಕ್ಕೆ ಯಾರೂ ದಾಸರಾಗಬಾರದು’ ಎಂದು ನಟ ಶಿವರಾಜ್ ಕುಮಾರ್ ಸಲಹೆ ನೀಡಿದರು. ನಗರದ ಬಿವಿಬಿ ಕಾಲೇಜು ಆವರಣದಲ್ಲಿ ಕೆಎಲ್ ಇ ತಾಂತ್ರಿಕ ವಿಶ್ವವಿದ್ಯಾಲಯ ಹಾಗೂ ಹು-ಧಾ ಪೊಲೀಸ್ ಕಮಿಷನರೇಟ್ ಸಹಯೋಗದಲ್ಲಿ ಮಂಗಳವಾರ ಆಯೋಜಿಸಿದ್ದ ಮಾದಕ ವ್ಯಸನ ವಿರುದ್ಧ ಜಾಗೃತಿ ಅಭಿಯಾನದಲ್ಲಿ ಮಾತನಾಡಿದರು. ಜನ್ಮ ದೇವರು ನೀಡುವ ಅಮೂಲ್ಯವಾದ ಉಡುಗೊರೆ. ಅದನ್ನು ಜವಾಬ್ದಾರಿಯಿಂದ ಕಾಪಾಡಿ ಕೊಳ್ಳಬೇಕು. ಅದಕ್ಕಾಗಿ ಮಾದಕವಸ್ತು ವ್ಯಸನದಿಂದ ದೂರವಿರುವುದು ಒಳ್ಳೆಯದು. ನೀವು ಎಚ್ಚೆತ್ತುಕೊಂಡು, ಸ್ನೇಹಿತರಿಗೂ ಜಾಗೃತಿ ಮೂಡಿಸಬೇಕು. ಅಗತ್ಯ ಸಂದರ್ಭದಲ್ಲಿ ಪೊಲೀಸರಿಗೂ ಮಾಹಿತಿ ನೀಡಬೇಕು’ ಎಂದರು. https://ainlivenews.com/you-can-get-health-coverage-of-rs-5-lakh-with-just-this-one-card-apply-like-this/ ‘ನಶೆಯನ್ನು ಯಾವುದೋ ವಸ್ತುವಿನಲ್ಲಿ ಹುಡುಕುವ ಬದಲು ಗೆಳೆತನ, ಸಂಬಂಧ, ಓದು, ಕ್ರೀಡೆಯಲ್ಲಿ ಹುಡುಕಬೇಕು. ಪ್ರಾಮಾಣಿಕವಾಗಿ ಬದುಕುವ ರೀತಿಯಲ್ಲೂ ನಶೆ ಇದೆ. ಮಾದಕ ವಸ್ತು ವ್ಯಸನದಿಂದ ಬದುಕು ಹಾಳಾಗುತ್ತದೆ. ತಂದೆ-ತಾಯಿ ಆಸೆ ಈಡೇರಿಸಲು ಶ್ರಮಿಸಬೇಕು. ಒಳ್ಳೆತನಕ್ಕೆ ಹೋರಾಡಬೇಕು. ಸಂತೋಷದಿಂದ ಬದುಕಬೇಕು’ ಎಂದು ಕಿವಿಮಾತು ಹೇಳಿದರು. ಪೊಲೀಸ್ ಕಮಿಷನ‌ರ್…

Read More

ಗದಗ: ಲಾರಿ ಹರಿದು ಹತ್ತಾರು ಕುರಿಗಳು ಸಾವನ್ನಪ್ಪಿ, 20 ಕ್ಕೂ ಹೆಚ್ಚು ಕುರಿಗಳಿಗೆ ಗಾಯಗಳಾಗಿರುವ ಘಟನೆ ಗದಗ ಜಿಲ್ಲೆ ಮುಂಡರಗಿ ತಾಲೂಕಿನ ಕೊರ್ಲಹಳ್ಳಿ ಟೋಲ್ ಗೇಟ್ ಬಳಿ ರಾತ್ರಿ ನಡೆದಿದೆ. ಕಕ್ಕೂರು ಗ್ರಾಮದ ಮಂಜುನಾಥ್ ದಳವಾಯಿ ಎಂಬುವರಿಗೆ ಸೇರಿದ ಕುರಿಗಲಾಗಿದ್ದು, ಮೈಲಾರಲಿಂಗೇಶ್ವರ ಶುಗರ್ಸ್ ಫ್ಯಾಕ್ಟರಿಯಿಂದ ಮುಂಡರಗಿ ಪಟ್ಟಣದತ್ತ ಲಾರಿ ಬರುತ್ತಿತ್ತು‌ ಎನ್ನಲಾಗಿದೆ. https://ainlivenews.com/you-can-get-health-coverage-of-rs-5-lakh-with-just-this-one-card-apply-like-this/ ರಾತ್ರಿಯಾಗಿದ್ದರಿಂದ ವೇಗವಾಗಿ ಬಂದ ಲಾರಿ ಕುರಿಗಳ ಮೇಲೆ, ಹರಿದು ಎದುರಿನಲ್ಲಿದ್ದ ಮತ್ತೊಂದು ಲಾರಿಗೆ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ತಮಿಳನಾಡು ಮೂಲದ‌ ಲಾರಿ ಹಾಗೂ ಚಾಲಕನನ್ನ ಪೊಲೀಸರು ವಶಕ್ಕೆ ಪಡೆದಿದ್ದು, ಸ್ಥಳಕ್ಕೆ ಮುಂಡರಗಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮುಂಡರಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.  

Read More

ವಿಜಯಪುರ: ವಿಜಯಪುರ ಮಹಾನಗರ ಪಾಲಿಕೆ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗೆ ಗೆಲುವು ಸಾದಿಸಿದ್ದಾರೆ. ವಿಜಯಪುರ ಮಹಾನಗರ ಪಾಲಿಕೆ ವಾರ್ಡ್ ನಂ.29 ಕ್ಕೆ ನ.23 ರಂದು ಮತದಾನ ನಡೆದಿತ್ತು. https://ainlivenews.com/you-can-get-health-coverage-of-rs-5-lakh-with-just-this-one-card-apply-like-this/ ಇಂದು ಮತ ಎಣಿಕೆ ನಡೆಯಿತು. ಕಾಂಗ್ರೆಸ್ ಅಭ್ಯರ್ಥಿ ಭಾಗಪ್ಪ ಏಳಗಂಟಿ 1,759 ಮತಗಳನ್ನು ಪಡೆದಿದ್ದು, ಬಿಜೆಪಿ ಅಭ್ಯರ್ಥಿ ಗಿರೀಶ್​ 2,754 ಮತಗಳನ್ನು ಪಡೆದು, 995 ಮತಗಳ ಅಂತರದಿಂದ ಜಯ ಗಳಿಸಿದ್ದಾರೆ. ಫಲಿತಾಂಶ ಬರುತ್ತಲೇ ಬಿಜೆಪಿ ಕಾರ್ಯಕರ್ತರ ಸಂಭ್ರಮಾಚರಣೆ ಮಾಡಿದರು.

Read More

ಬೆಂಗಳೂರು: ಮೂರು ಕ್ಷೇತ್ರಗಳ ಉಪ ಚುನಾವಣೆಯ ಫಲಿತಾಂಶ ರಾಜ್ಯ ಸರ್ಕಾರಕ್ಕೆ ನೀಡಿರುವ ಜನಾದೇಶವಲ್ಲ. ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಆಗುತ್ತಿಲ್ಲ ಎಂದು ಆಡಳಿತ ಪಕ್ಷದ ಶಾಸಕರೇ ಭ್ರಮನಿರಸನಗೊಂಡಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಬಿಜೆಪಿ ಕಚೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಾಮಾನ್ಯವಾಗಿ ಉಪ ಚುನಾವಣೆ ಸರ್ಕಾರದ ಪರವಾಗಿರುತ್ತವೆ. ನಾವು ಅಧಿಕಾರದಲ್ಲಿ ಇದ್ದಾಗ 17 ಉಪ ಚುನಾವಣೆಗಳಲ್ಲಿ 13 ಉಪ ಚುನಾವಣೆ ಗೆದ್ದಿದ್ದೇವೆ. ಕಾಂಗ್ರೆಸ್ ನವರು ಇದು ಸರ್ಕಾರದ ಪರ ಜನರ ತೀರ್ಪು ಅಂತ ತಿಳಿದುಕೊಳ್ಳುವ ಅವಗತ್ಯವಿಲ್ಲ. ಆಡಳಿತ ಪಕ್ಷದ ಶಾಸಕರೇ ಅಭಿವೃದ್ಧಿ ಆಗಿಲ್ಲ ಅಂತ ಭ್ರಮ ನಿರಸನಗೊಂಡಿದ್ದಾರೆ. ಈ ಚುನವಣೆ ಫಲಿತಾಂಶ ಉಪಚುನಾವಣೆ ನಡೆದ ಕ್ಷೇತ್ರಗಳಿಗೆ ಮಾತ್ರ ಸೀಮಿತವಾಗಿರುತ್ತದೆ ಎಂದು ಹೇಳಿದರು. https://ainlivenews.com/these-habits-of-women-are-the-reason-for-the-destruction-of-the-entire-family/ ಇನ್ನು ಗ್ಯಾರೆಂಟಿ ಯೋಜನೆಗಳನ್ನು ಸ್ಥಗಿತಗೊಳಿಸುವ ಬಗ್ಗೆ ಆಡಳಿತ ಪಕ್ಷದ ಶಾಸಕರೇ ತಮ್ಮ ಪಕ್ಷದ ವೇದಿಕೆಯಲ್ಲಿ ಹೇಳಿದ್ದಾರೆ. ರಾಜ್ಯ ಸರ್ಕಾರ ಯಾವುದೇ ಹಣಕಾಸಿನ ಸಿದ್ದತೆ ಮಾಡಿಕೊಳ್ಳದೇ ಗ್ಯಾರೆಂಟಿ ಯೋಜನೆ ಜಾರಿ ಮಾಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ…

Read More

ಉಡುಪಿ: ಸೂರ್ಯ ಅಭಿನಯದ  ಬಿಗ್ ಬಜೆಟ್ ಸಿನಿಮಾ ‘ಕಂಗುವ’ ಹೀನಾಯ ಸೋಲು ಕಂಡ ಬೆನ್ನಲ್ಲೇ ಉಡುಪಿ ಜಿಲ್ಲೆ ಬೈಂದೂರಿನ ಕೊಲ್ಲೂರು ಮೂಕಾಂಬಿಕೆ ದೇವಸ್ಥಾನಕ್ಕೆ ಸೂರ್ಯ ಹಾಗೂ ಜ್ಯೋತಿಕಾ ಭೇಟಿ ನೀಡಿದ್ದಾರೆ. ದೇಗುಲದಲ್ಲಿ ನಡೆಸುವ ವಿಶೇಷ ಚಂಡಿಕಾಯಾಗದಲ್ಲಿ ಭಾಗಿಯಾಗಿ, https://ainlivenews.com/these-habits-of-women-are-the-reason-for-the-destruction-of-the-entire-family/ ದೇವರ ದರ್ಶನ ಪಡೆದರು. ಶಕ್ತಿ ದೇವತೆ ಮೂಕಾಂಬಿಕೆಗೆ ವಿಶೇಷ ಸೇವೆ ಸಲ್ಲಿಕೆ ಮಾಡಿ ತೆರಳಿದ್ದಾರೆ. ಈ ವೇಳೆ, ನೆಚ್ಚಿನ ಜೋಡಿ ಸೂರ್ಯ ದಂಪತಿ ಜೊತೆ ಫೋಟೋ ಕ್ಲಿಕ್ಕಿಸಿಕೊಳ್ಳಲು ಅಭಿಮಾನಿಗಳು ಮುಗಿಬಿದ್ದಿದ್ದಾರೆ. ಅಂದಹಾಗೆ, ಸೂರ್ಯ ನಟನೆಯ ‘ಕಂಗುವ’ ಸಿನಿಮಾ ನ.14ರಂದು ರಿಲೀಸ್ ಆಗಿತ್ತು.

Read More

ಬೆಂಗಳೂರು: ಚಲಿಸುತ್ತಿದ್ದ ಕಾರಿನ ಮೇಲೆ‌ ಮೆಟ್ರೋ ಬ್ರಿಡ್ಜ್ ನ ಸಿಮಂಟ್ ಬ್ರಿಕ್ಸ್ ಬಿದ್ದು ಕಾರ್ ನ ಗ್ಲಾಸ್ ಡ್ಯಾಮೇಜ್ ಆಗಿರುವ ಘಟನೆ ಮೈಸೂರು ರಸ್ತೆಯ ಪಿಲ್ಲರ್ ನಂಬರ್ ೩೯೩ ಬಳಿ ನಡೆದಿದೆ. ಮೈಸೂರು ರಸ್ತೆಯ ಬಳಿ ಮೆಟ್ರೋ ಬ್ರಿಡ್ಜ್‌ನಿಂದ ಸಿಮೆಂಟಿನ ಕಲ್ಲು ಕಳಚಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದಿದೆ. ಬಿದ್ದ ಪರಿಣಾಮ ಕಾರಿನ ಮಾಲೀಕ ನಮ್ಮ ಮೆಟ್ರೋ ಮೇಲೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಯಲಹಂಕದ ಬಾಗಲೂರಿನಿಂದ ಮೈಸೂರಿಗೆ ಕಾರ್ಯಕ್ರಮಕ್ಕೆ ನವೀನ್ ರಾಜ್ ಮತ್ತು ಕುಟುಂಬ ಹೋಗುತ್ತಿದ್ದಾಗ ಮೈಸೂರು ರಸ್ತೆಯ ಪಿಲ್ಲರ್ ನಂಬರ್ 393 ಬಳಿ ಈ ಘಟನೆ ನಡೆದಿದೆ. ಮೆಟ್ರೋ ರೈಲು ಹೋಗುತ್ತಿದ್ದಂತೆ ಅಲ್ಲಿನ ವೈಬ್ರೇಷನ್‌ಗೆ ಸಿಮೆಂಟ್ ಕಳಚಿ ಬಿದ್ದಿದೆ. ಖರೀದಿಸಿ ಒಂದು ತಿಂಗಳು ಕೂಡ ಆಗದ ಎಸ್‌ಯುವಿ 700 ಕಾರಿನ ಮುಂದಿನ ಗ್ಲಾಸ್ ಒಡೆದಿದ್ದು, https://ainlivenews.com/these-habits-of-women-are-the-reason-for-the-destruction-of-the-entire-family/ ಕಾರಿನ ಮೇಲ್ಭಾಗ ಹಾನಿಯಾಗಿದೆ. ಕಲ್ಲು ಬಿದ್ದ ರಭಸಕ್ಕೆ ಕಾರಿನಲ್ಲಿದ್ದವರು ಭಯಗೊಂಡಿದ್ದಾದರೂ ಪಾರಾಗಿದ್ದಾರೆ. ಪೊಲೀಸ್ ಠಾಣೆಗೆ ದೂರು ನೀಡುತ್ತಿದ್ದಂತೆ, ಮೆಟ್ರೋ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಘಟನೆ…

Read More

ಬೀದರ್: ಬೀದರ ಔರಾದ ರಾಷ್ಟ್ರೀಯ ಹೆದ್ದಾರಿ ‘161ಎ ‘ಯಲ್ಲಿ ರಸ್ತೆ ದಾಟುತ್ತಿದ್ದ ವೇಳೆ ವಿದ್ಯಾರ್ಥಿಗೆ ಕಾರು ಡಿಕ್ಕಿ ಹೊಡೆದಿದ್ದು, ವಿದ್ಯಾರ್ಥಿ ಗಂಭೀರ ಗಾಯಗೊಂಡ ಘಟನೆ ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಜೀರ್ಗಾ (ಬಿ) ಗ್ರಾಮದಲ್ಲಿ ನಡೆದಿದೆ.. ಘಟನೆಯಲ್ಲಿ ಜೀರ್ಗಾ(ಬಿ) ಗ್ರಾಮದ ವಿದ್ಯಾರ್ಥಿ ವಿಕಾಸ ಸೋಪಾನ (14) ಗಂಭೀರವಾಗಿ ಗಾಯಗೊಂಡ ವಿದ್ಯಾರ್ಥಿ  ಬೀದರ್‌ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. https://ainlivenews.com/these-habits-of-women-are-the-reason-for-the-destruction-of-the-entire-family/ ಔರಾದ ಕಡೆಯಿಂದ ವೇಗವಾಗಿ ಚಲಿಸುತ್ತಿದ್ದ ಕಾರು ರಸ್ತೆ ದಾಟುತ್ತಿದ್ದ ವಿದ್ಯಾರ್ಥಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ವಿದ್ಯಾರ್ಥಿ 10 ಅಡಿ ಹಾರಿ ಬಿದಿದ್ದಾರೆ. ಘಟನೆಯು ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ವಿಡಿಯೋ ವೈರಲ್ ಆಗಿದೆ.  

Read More

ಬೆಂಗಳೂರು ನ 26: ಕೆಪಿಸಿಸಿ ಕಚೇರಿಯಲ್ಲಿ ನಡೆದ ಸಂವಿಧಾನ ಜಾರಿಯ 75ನೇ ವರ್ಷಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು. RSS ನ ಒಬ್ಬರೂ ದೇಶಕ್ಕಾಗಿ ಹೋರಾಡಿಲ್ಲ, ಒಬ್ಬನೂ ದೇಶಕ್ಕಾಗಿ ಪ್ರಾಣಕೊಟ್ಟಿಲ್ಲ ಎಂದು ವ್ಯಂಗ್ಯವಾಡಿದರು.ಮನುಷ್ಯರನ್ನು ಜಾತಿ-ಧರ್ಮದ ಹೆಸರಲ್ಲಿ ವಿಂಗಡಿಸೋದು ದೇವರ ಕೆಲಸ ಅಲ್ಲ: ಎಲ್ಲ ಮಾಡಿದ್ದು ಮನುಸ್ಮೃತಿ ಎಂದು ಸಿಎಂ ತಿಳಿಸಿದರು. RSS ನವರು ಮನುಸ್ಮೃತಿ ಪರವಾಗಿರುವುದರಿಂದಲೇ ನಮ್ಮ ಸಂವಿಧಾನ ವಿರೋಧಿಸುತ್ತಾರೆ. ಪೇಜಾವರ ಶ್ರೀಗಳು ಸಂವಿಧಾನ ಬಗ್ಗೆ ಆಡಿದ ಮಾತನ್ನು ಪ್ರಸ್ತಾಪಿಸಿದ ಸಿಎಂ, ಆ ರೀತಿ ಹೇಳುವ ಅಗತ್ಯ ಏನಿತ್ತು ಎಂದು ಪ್ರಶ್ನಿಸಿದರು. https://ainlivenews.com/these-habits-of-women-are-the-reason-for-the-destruction-of-the-entire-family/ ಇಡೀ ದೇಶದ ಪಾಲಿಗೆ ಇಂದು ಸಂವಿಧಾನ ದಿನ ಬಸವಣ್ಣನವರು 850 ವರ್ಷಗಳ ಹಿಂದೆ ಜಾತಿ ವ್ಯವಸ್ಥೆಯನ್ನು, ಜಾತಿ ಅಸಮಾನತೆಯನ್ನು ವಿರೋಧಿಸಿದ್ದರು. ಆದರೆ ಇವತ್ತಿಗೂ ಜಾತಿ ವ್ಯವಸ್ಥೆ ಹೋಗಿಲ್ಲ, ಬಾಯಲ್ಲಿ ಬಸವಾದಿ ಶರಣರ ವಚನ ಹೇಳೋದು. ಆಮೇಲೆ, ನೀನು ಯಾವ ಜಾತಿ ಅಂತ ಕೇಳ್ತಾರೆ. ಈಗಲೂ ಇವನಾರವ, ಇವನಾರವ ಅಂತಲೇ ಕೇಳುತ್ತಿದ್ದಾರೆ ಹೊರತು, ಇವ ನಮ್ಮವ ಅಂತ ಹೇಳುತ್ತಲೇ ಇಲ್ಲ ಎಂದು…

Read More

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಗಾಂಜಾ ಮಾರುತ್ತಿದ್ದ ಆರೋಪಿಯನ್ನು ಬಂಧಿಸುವಲ್ಲಿ ಸಂಪಿಗೆಹಳ್ಳಿ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಪಶ್ಚಿಮ ಬಂಗಾಳದಿಂದ ಕಡಿಮೆ ಬೆಲೆಗೆ ಗಾಂಜಾ ಖರೀದಿಸಿ ತಂದಿದ್ದ ಆರೋಪಿ‌ ಸಂಪಿಗೆಹಳ್ಳಿ ಮುಖ್ಯರಸ್ತೆಯ ನೀಲಗಿರಿ ತೋಪಿನ ಮುಂಭಾಗದ ರಸ್ತೆಯಲ್ಲಿ ಮಾರಾಟ ಮಾಡುತ್ತಿದ್ದ. https://ainlivenews.com/these-habits-of-women-are-the-reason-for-the-destruction-of-the-entire-family/ ಖಚಿತ ಮಾಹಿತಿ ಆಧರಿಸಿ ದಾಳಿ ನಡೆಸಿದ್ದ ಸಂಪಿಗೆಹಳ್ಳಿ ಠಾಣೆ ಪೊಲೀಸರು, ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿತನಿಂದ ಒಟ್ಟು 2 ಲಕ್ಷ ಮೌಲ್ಯದ 4 ಕೆ.ಜಿ. ಗಾಂಜಾ ವಶಕ್ಕೆ ಪಡೆದಿದ್ದು, ಆರೋಪಿ ವಿರುದ್ಧ ಪ್ರಕರಣ ದಾಖಲು ಮಾಡಿ ತನಿಖೆ ಮುಂದುವರೆಸಿದ್ದಾರೆ.

Read More