Author: AIN Admin

ನರ್ಸ್ ಗಳ ಸೋಗಿನಲ್ಲಿ ಬಂದು ಪೋಷಕರನ್ನ ಪುಸಲಾಯಿಸಿ ಮಗು ಕಳವು ಮಾಡಿದ ಘಟನೆ ಕಲಬುರಗಿ ಜಿಲ್ಲಾಸ್ಪತ್ರೆಯಲ್ಲಿ ನಡೆದಿದೆ..ಸೈಯದ್ ಚಿಂಚೋಳಿ ಗ್ರಾಮದಿಂದ ಬಂದಿದ್ದ ಕಸ್ತೂರಿ ತನ್ನ ಗಂಡುಮಖುವನ್ನ ಚಿಕ್ಕಮ್ಮಳಿಗೆ ನೀಡಿ ರಕ್ತಪರೀಕ್ಷೆಗೆ ಕರೆದುಕೊಂಡು ಹೋಗಲು ತಿಳಿಸಿದ್ದಾಳೆ. ಇದೇವೇಳೆ ಲ್ಯಾಬ್ ಬಳಿ ಎಂಟ್ರಿ ಕೊಟ್ಟ ನಕಲಿ ನರ್ಸ್ ಮಗುವಿನ ರಿಪೋರ್ಡ್ ತರಲು ಹೇಳಿ ಮಗುವನ್ನ ಪಡೆದಿದ್ದಾಳೆ. https://ainlivenews.com/why-is-november-26-celebrated-as-constitution-day-its-history-here-is-the-information/ ಚಿಕ್ಕಮ್ಮ ಚಂದ್ರಕಲಾ ಮರಳಿ ಬರುವಷ್ಟರಲ್ಲಿ ಕೈಯಲ್ಲಿ ಅಪ್ರಾನ್ ಹಿಡಿದು ಬುರ್ಕಾ ಧರಿಸಿದ್ದ ನಕಲಿ ನರ್ಸ್ ಎಸ್ಕೇಪ್ ಆಗಿದ್ದಾಳೆ..ಈ ಎಲ್ಲ ಕೃತ್ಯ ಸಿಸಿಟಿವಿಯಲ್ಲಿ ರೆಕಾರ್ಡ್ ಆಗಿದ್ದು ಈ ಕುರಿತು ಬ್ರಹ್ಮಪುರ ಠಾಣೆಯಲ್ಲಿ ಕೇಸ್ ದಾಖಲಾಗಿದೆ.. ಇದೇವೇಳೆ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿದ ಸಚಿವ ಶರಣಪ್ರಕಾಶ ಪಾಟೀಲ್ ಪೋಷಕರ ಜೊತೆ ಮಾತಾಡಿ ಮಗು ಪತ್ತೆ ಹಚ್ಚುವುದಾಗಿ ಭರವಸೆ ಮೂಡಿಸಿದ್ದಾರೆ..

Read More

2025ರ 18ನೇ ಆವೃತ್ತಿಯ ಐಪಿಎಲ್​ಗೆ ಆಟಗಾರರ ಮೆಗಾ ಹರಾಜು ಪ್ರಕ್ರಿಯೆ ಸೌದಿ ಅರೇಬಿಯಾದ ಜೆದ್ದಾ ನಗರದಲ್ಲಿ ನಡೆದಿದೆ. ಮೊದಲ ದಿನದ ಬಿಡ್ಡಿಂಗ್​ನಲ್ಲಿ ಒಟ್ಟು 72 ಆಟಗಾರರು ಹರಾಜಾಗಿದ್ದಾರೆ. ರಿಷಭ್ ಪಂತ್​ ಐಪಿಎಲ್ ಇತಿಹಾಸದಲ್ಲೇ ಅತಿ ಹೆಚ್ಚು ಬೆಲೆಗೆ ಬಿಕರಿಯಾಗಿದ್ದಾರೆ. ಹರಾಜಿನ ಎರಡನೇ ದಿನದಲ್ಲಿ 13 ವರ್ಷದ ವೈಭವ್ ಸೂರ್ಯವಂಶಿ1.10 ಕೋಟಿ ರೂ.ಗೆ ಮಾರಾಟವಾಗುವ ಮೂಲಕ ಐಪಿಎಲ್‌ನಲ್ಲಿ ಮಾರಾಟವಾದ ಅತಿ ಕಿರಿಯ ಆಟಗಾರ ಎಂಬ ದಾಖಲೆ ಬರೆದಿದ್ದಾರೆ. https://ainlivenews.com/do-you-know-what-are-the-health-benefits-of-drinking-basil-tea/ ರಾಜಸ್ಥಾನ ರಾಯಲ್ಸ್‌ ಬಿಹಾರದ ಕಿರಿಯ ಆಟಗಾರ ಸೂರ್ಯವಂಶಿಯನ್ನು 1.10 ಕೋಟಿ ರೂ. ನೀಡಿ ಖರೀದಿಸಿತು. 30 ಲಕ್ಷ ರೂ. ಮೂಲ ಬೆಲೆಯನ್ನು ಹೊಂದಿದ್ದ ಆಟಗಾರನನ್ನು ಖರೀದಿಸಲು ದೆಹಲಿ ಕ್ಯಾಪಿಟಲ್ಸ್‌ ಪ್ರಯತ್ನಿಸಿತ್ತು. 5ನೇ ವಯಸ್ಸಿನಲ್ಲೇ ಕ್ರಿಕೆಟ್ ಅಭ್ಯಾಸ ಶುರು ಮಾಡಿದ್ದ ವೈಭವ್, 12ನೇ ವಯಸ್ಸಿಗೆ ಪ್ರಥಮ ದರ್ಜೆ ಪಂದ್ಯವಾಡಿದ್ದರು. ಈಗಾಗಲೇ ರಣಜಿ ಟ್ರೋಫಿ, ಹೇಮಂತ್ ಟ್ರೋಫಿ, ಕೂಚ್ ಬಿಹಾರ್ ಟ್ರೋಫಿ ಮತ್ತು ವಿನೂ ಮಂಕಡ್ ಟೂರ್ನಿಗಳಲ್ಲಿ ಆಡಿದ್ದಾರೆ. 13ನೇ ವಯಸ್ಸಿನೊಳಗೆ ಭಾರತ ಅಂಡರ್-19 ತಂಡದಲ್ಲೂ…

Read More

ಬೆಂಗಳೂರು: ಮುಡಾ ಪ್ರಕರಣದಲ್ಲಿ ಸಿ ಎಂ ಸಿದ್ದರಾಮಯ್ಯಗೆ ಟೆನ್ಷನ್ ಮಾತ್ರ ಕಡಿಮೆ ಆಗ್ತಿಲ್ಲ. ಪ್ರಕರಣದ ತನಿಖೆಯನ್ನು ಲೋಕಾಯುಕ್ತರು ಒಂದು ಕಡೆ ಮಾಡ್ತಿದ್ರೆ, ಇನ್ನೊಂದು ಕಡೆ ಇಡಿ ಅಧಿಕಾರಿಗಳು ಮುಡಾ ಬೆನ್ನು ಬಿದ್ದಿದ್ದಾರೆ. ಇದು ಸಾಲದು ಅಂತ ಮುಡಾ ಕೇಸ್  ಸಿಬಿಐಗೆ ವಹಿಸಬೇಕು ಅಂತ ದೂರುದಾರ ಸ್ನೇಹಮಯಿ ಕೃಷ್ಣ  ಹೈಕೋರ್ಟ್ ಮೆಟ್ಟಿಲೇರಿದ್ರು. ಇಂದು ಲೋಕಾ ಅಧಿಕಾರಿಗಳು ಪ್ರಕರಣದ ತನಿಖಾ ವರದಿಯನ್ನು  ಕೋರ್ಟ್ ಗೆ ಸಲ್ಲಿಸುತ್ತಿದ್ದು ಕುತೂಹಲ ಮೂಡಿಸಿದೆ. ಕಾಂಗ್ರೆಸ್ ಪಕ್ಷ ಉಪಚುನಾವಣೆಯಲ್ಲಿ ಮೂರಕ್ಕೆ ಮೂರೋ ಕ್ಷೇತ್ರಗಳನ್ನು ಗೆದ್ದಿರುವುದು ಸಿಎಂಗೆ ಖುಷಿಯಾಗಿದ್ರು ಮುಡಾ ಟೆನ್ಷನ್ ಮಾತ್ರ ಕಡಿಮೆ ಆಗ್ತಿಲ್ಲ. ಯಾಕಂದ್ರೆ ಮುಡಾಕೇಸ್ ಅನ್ನು  ಸಿಬಿಐ ವಹಿಸಬೇಕು ಅಂತ ಹೈಕೋರ್ಟ್ ಗೆ ಹೋಗಿರುವ ಸ್ನೇಹಮಯಿಕೃಷ್ಣರ ಅರ್ಜಿ ಇಂದು ಮತ್ತೆ ವಿಚಾರಣೆಗೆ ಬರಲಿದೆ.. ಇದೇ ತಿಂಗಳು 5 ರಂದು  ಹೈಕೋರ್ಟ್ ನ ಏಕ ಸದಸ್ಯ ಪೀಠದ ಮುಂದೆ ಬಂದಿದ್ದ  ಅರ್ಜಿ ವಿಚಾರಣೆ ಮಾಡಿದ್ದ ನ್ಯಾಯಾಧೀಶರು ಸಿ ಎಂ ಸೇರಿದಂತೆ ಎಲ್ಲರಿಗೂ ನೋಟೀಸ್ ನೀಡುವಂತೆ ಆದೇಶ ಮಾಡಿ ಆಕ್ಷೇಪಣೆ…

Read More

ಬೆಂಗಳೂರು: ಇಂದು ಭಾರತದ ಸಂವಿಧಾನ ದಿನ. ಪ್ರತಿ ವರ್ಷ ನವೆಂಬರ್ 26 ರಂದು ಭಾರತದ ಸಂವಿಧಾನ ದಿನವನ್ನಾಗಿ ಆಚರಣೆ ಮಾಡಲಾಗುತ್ತದೆ. ಸರ್ಕಾರಿ ಕಚೇರಿಗಳಲ್ಲಿ, ಶಾಲಾ ಕಾಲೇಜುಗಳಲ್ಲಿ ಈ ದಿನವನ್ನು ಆಚರಣೆ ಮಾಡಲಾಗುತ್ತದೆ. ಅದರಲ್ಲು ಶಾಲಾ, ಕಾಲೇಜುಗಳಲ್ಲಿ ಈ ದಿನವನ್ನು ವಿಶೇಷವಾಗಿ ಆಚರಣೆ ಮಾಡುವುದರ ಮೂಲಕ ಈ ದಿನದ ಪ್ರಾಮುಖ್ಯತೆಯನ್ನು ವಿದ್ಯಾರ್ಥಿಗಳಿಗೆ ತಿಳಿಸಿಕೊಡಲಾಗುತ್ತದೆ. ನವೆಂಬರ್ 26, 1949 ರಂದು ಭಾರತದ ಸಂವಿಧಾನ ಸಭೆಯು ಔಪಚಾರಿಕವಾಗಿ ಅತ್ಯುನ್ನತ ಕಾನೂನು ದಾಖಲೆಯಾದ ಸಂವಿಧಾನವನ್ನು ಅಂಗೀಕರಿಸಿತು. ಆದ್ದರಿಂದಲೇ ಪ್ರತಿ ವರ್ಷ ನವೆಂಬರ್ 26 ರಂದು ಸಂವಿಧಾನದ ದಿನವನ್ನು ಆಚರಿಸಲಾಗುತ್ತದೆ. ಸಂವಿಧಾನವು ಅಧಿಕೃತವಾಗಿ ಜಾರಿಗೆ ಬಂದಿದ್ದು, ಜನವರಿ 26, 1950 ರಂದು. ಆ ದಿನವನ್ನು ಗಣರಾಜ್ಯೋತ್ಸವವಾಗಿ ಆಚರಿಸಲಾಗುತ್ತದೆ. ಭಾರತದ ಸಂವಿಧಾನದ ಇತಿಹಾಸ 1946 ರಲ್ಲಿ ಕ್ಯಾಬಿನೆಟ್‌ ಮಿಷನ್‌ ಭಾರತಕ್ಕೆ ಬಂದಾಗ ಸಂವಿಧಾನ ಸಭೆಯನ್ನು ರಚಿಸಲು ಒಪ್ಪಿಗೆ ದೊರೆಯಿತು. ಅದರಂತೆ ಪ್ರಾದೇಶಿಕ ವಿಧಾನಸಭೆಗಳಿಗೆ ಚುನಾವಣೆ ನಡೆದು 389 ಸದಸ್ಯರು ಚುನಾಯಿತರಾದರು. ಇದರಲ್ಲಿ ರಾಜ-ಮಹಾರಾಜರ ಆಳ್ವಿಕೆಯ 93 ಸದಸ್ಯರೂ ಸೇರಿದ್ದರು. ಇದರ…

Read More

ಕುರಿಸಾಕಾಣಿಕೆ ಇತ್ತೀಚೆಗೆ ಎಲ್ಲೆಡೆ ನಿಧಾನವಾಗಿ ಪ್ರಗತಿ ಕಾಣುತ್ತಿರುವ ಕಸುಬಾಗಿದೆ. ಹಸುವಿನ ರೀತಿಯೆ ಕುರಿಯ ಹಲವು ಉತ್ಪನ್ನಗಳು ಮಾನವನಿಗೆ ಬಹಳ ಉಪಯೋಗವಾಗುತ್ತಿದೆ. ಕುರಿಯನ್ನು ಬಡವರ ಸಣ್ಣ ಮತ್ತು ಅತಿ ಸಣ್ಣ ರೈತರ ‘ಕಿರುಕಾಮಧೇನು’ ಎಂದು ಕರೆಯಬಹುದು. ಕುರಿಯ ಉಣ್ಣೆ, ಮಾಂಸ, ಚರ್ಮ, ಗೊಬ್ಬರ ಇತ್ಯಾದಿ ಉಪಯುಕ್ತ ವಸ್ತುಗಳಿಂದ ದೇಶದ ಆರ್ಥಿಕ ಸುಧಾರಣೆಯಲ್ಲಿ ಪ್ರಮುಖ ಪಾತ್ರ ವಹಿಸಿದೆ. ಕುರಿ ಸಾಕಣೆ ಮಾಡುವುದು ಹೇಗೆ? : ದನಗಳಿಗೆ ಬೇಕಾಗಿರುವಂತೆ ಕುರಿಗಳನ್ನು ಸಾಕಲು ಹೆಚ್ಚಿನ ಸ್ಥಳಾವಕಾಶದ ಅಗತ್ಯವೂ ಇರುವುದಿಲ್ಲ ಹಾಗೂ ದನಕರುಗಳನ್ನು ಬೆಳೆಸುವಾಗ ತಗಲುವ ವೆಚ್ಚಕ್ಕಿಂತಲೂ ಕಡಿಮೆ ವೆಚ್ಚದಲ್ಲಿ ಕುರಿ ಸಾಕಣೆ ಮಾಡಬಹುದಾಗಿದೆ. ರಾಜ್ಯದಲ್ಲಿ ಕುರಿಗಳನ್ನು ಅವುಗಳ ಮಾಂಸ, ಹಾಲು ಹಾಗೂ ತುಪ್ಪಳಕ್ಕಾಗಿ ಸಾಕಣೆ ಮಾಡಲಾಗುತ್ತದೆ. ಪ್ರದೇಶದಲ್ಲಿ ಕುರಿ ಮಾಂಸ ಅಥವಾ ಮಟನ್ ಜನಪ್ರಿಯ ಮಾಂಸ ಭಕ್ಷ್ಯವಾಗಿದ್ದು, ಸಾಕಷ್ಟು ಆರೋಗ್ಯಕರ ಪೋಷಕಾಂಶಗಳನ್ನೂ ಸಹ ಹೊಂದಿರುತ್ತದೆ. ಅಲ್ಲದೇ ಕುರಿ ಹಾಲಿನ ಉದ್ಯಮವು ಸಾಕಷ್ಟು ಪ್ರಸಿದ್ಧಿಯನ್ನು ಪಡೆದಿದ್ದು, ಅದರಿಂದ ಹಲವಾರು ವೈವಿಧ್ಯಮಯ ಡೈರಿ ಉತ್ಪನ್ನಗಳನ್ನು ಸಹ ಉತ್ಪಾದಿಸಲಾಗುತ್ತದೆ. ಹಾಗಾಗಿ ಕುರಿಗಳಿಗೆ ಸ್ಥಳೀಯವಾಗಿ…

Read More

ಆಚಾರ್ಯ ಚಾಣಕ್ಯರನ್ನು ವಿದ್ವಾಂಸರು ಮತ್ತು ಶ್ರೇಷ್ಠ ಶಿಕ್ಷಕರಲ್ಲಿ ಪ್ರಮುಖರೆಂದು ಪರಿಗಣಿಸಲಾಗಿದೆ. ವ್ಯಾಪಾರ, ವೈವಾಹಿಕ ಜೀವನ, ಸಮಾಜ, ಜೀವನ, ಹಣ, ಆರೋಗ್ಯಕ್ಕೆ ಸಂಬಂಧಿಸಿದ ಅನೇಕ ಪ್ರೇರೇಪಿಸುವ ವಿಷಯಗಳನ್ನು ಚಾಣಕ್ಯ ನೀತಿಯಲ್ಲಿ ಉಲ್ಲೇಖಿಸಲಾಗಿದೆ. ಆಚಾರ್ಯ ಚಾಣಕ್ಯರು ತಮ್ಮ ಚಾಣಕ್ಯ ನೀತಿಯಲ್ಲಿ ಈ ಎಲ್ಲಾ ವಿಷಯಗಳ ಬಗ್ಗೆ ತಮ್ಮ ಅಭಿಪ್ರಾಯವನ್ನು ನೀಡಿದ್ದಾರೆ. ಚಾಣಕ್ಯ ನೀತಿಯಲ್ಲಿ, ಅವರು ಜೀವನಕ್ಕೆ ಸಂಬಂಧಿಸಿದ ವಿಷಯಗಳನ್ನು ಹೇಳಿದ್ದಾರೆ. ಅದೇ ರೀತಿ ದಾಂಪತ್ಯ ಜೀವನಕ್ಕೆ ಸಂಬಂಧಿಸಿದ ಅನೇಕ ವಿಷಯಗಳನ್ನು ಚಾಣಕ್ಯ ತನ್ನ ಪುಸ್ತಕದಲ್ಲಿ ಉಲ್ಲೇಖಿಸಿದ್ದಾನೆ. ಮಹಿಳೆಯರ ಕೆಲವು ಅಭ್ಯಾಸಗಳು ತಮ್ಮ ಗಂಡನ ಜೀವನವನ್ನು ತೊಂದರೆಗೆ ಸಿಲುಕಿಸುತ್ತವೆ. ಕಷ್ಟಗಳು/ ಪ್ರತಿಕೂಲ ಪರಿಸ್ಥಿತಿಗಳು ಎಂಬುದು ಜೀವನದ ಒಂದು ಭಾಗವಾಗಿದೆ. ಇದು ಪುರುಷರು ಮತ್ತು ಮಹಿಳೆಯರಿಬ್ಬರಿಗೂ ಅನ್ವಯಿಸುತ್ತದೆ. ಕೆಲವು ಅಭ್ಯಾಸಗಳು ಯಾರನ್ನಾದರೂ ಸರುಯೇ ಕಾಡುತ್ತವೆ. ನಕಾರಾತ್ಮಕ ಪರಿಣಾಮಗಳು ಉಂಟಾಗುತ್ತವೆ. ಇದು ದಂಪತಿ ನಡುವಿನ ಸಂಬಂಧದಲ್ಲಿ ಉದ್ವಿಗ್ನತೆ/ ಪ್ರತಿಕೂಲ ಪರಿಸ್ಥಿತಿಯನ್ನು ಉಂಟುಮಾಡಬಹುದು. ಮಹಿಳೆಯರು ತಮ್ಮ ದುಃಖದಲ್ಲಿರುವ ಗಂಡನನ್ನು ಬೆಂಬಲಿಸದಿದ್ದರೆ.. ದಂಪತಿಯ ಜೀವನವು ಕಷ್ಟಗಳಿಂದ ಸುತ್ತುವರೆದಿರುತ್ತದೆ. ರೋಗಗಳನ್ನು ನಿರ್ಲಕ್ಷಿಸುವುದು: ಆಚಾರ್ಯ ಚಾಣಕ್ಯನ ಪ್ರಕಾರ,…

Read More

ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಆಯುಷ್ಮಾನ್‌ ಭಾರತ್ ಆರೋಗ್ಯ ವಿಮಾ ಯೋಜನೆಯಡಿ 16ರಿಂದ 59 ವರ್ಷದೊಳಗಿನವರು ಆಯುಷ್ಮಾನ್‌ ಭಾರತ ಯೋಜನೆಯಡಿ ವಾರ್ಷಿಕ 5 ಲಕ್ಷ ರೂ. ಆರೋಗ್ಯ ವಿಮೆಗೆ (ಪ್ರತಿ ಕುಟುಂಬಕ್ಕೆ) ಅರ್ಹರಾಗಿದ್ದಾರೆ. 2018ರಲ್ಲಿ ಈ ದರವನ್ನು ನಿಗದಿ ಮಾಡಲಾಗಿದೆ. ಹೆಚ್ಚಿದ ಹಣದುಬ್ಬರ ಹಾಗೂ ಕಸಿ, ಕ್ಯಾನ್ಸರ್‌ನಂತಹ ದುಬಾರಿ ಚಿಕಿತ್ಸೆಗಳಿಗೂ ಅನುಕೂಲವಾಗಲಿ ಎಂದು ಇದೀಗ ವಿಮೆ ದರ ಹೆಚ್ಚಳ ಮಾಡುವ ಚಿಂತನೆ ಇದೆ. ಜೊತೆಗೆ ಇದೀಗ ಸರ್ಕಾರ 70 ವರ್ಷ ಮೇಲ್ಪಟ್ಟವರನ್ನೂ ವಿಮಾ ಸೌಲಭ್ಯದ ವ್ಯಾಪ್ತಿಗೆ ತರಲು ಉದ್ದೇಶಿಸಿದೆ. ಆಯುಷ್ಮಾನ್ ಕಾರ್ಡ್ ಯೋಜನೆಯು ಆರ್ಥಿಕವಾಗಿ ದುರ್ಬಲ ವರ್ಗದ ಜನರಿಗೆ ವೈದ್ಯಕೀಯ ವಿಮೆಯನ್ನು ಒದಗಿಸುವ ಯೋಜನೆಯಾಗಿದೆ. ವಾಸ್ತವವಾಗಿ, ಈ ಯೋಜನೆಯ ಮೂಲಕ ನೀವು ಯಾವುದೇ ಸರ್ಕಾರಿ ಅಥವಾ ಖಾಸಗಿ ಆಸ್ಪತ್ರೆಯಲ್ಲಿ ಅನೇಕ ರೋಗಗಳಿಗೆ ಚಿಕಿತ್ಸೆ ಪಡೆಯಬಹುದು. ನೀವು ಆಯುಷ್ಮಾನ್ ಕಾರ್ಡ್ ಹೊಂದಿದ್ದರೆ, 5 ಲಕ್ಷದವರೆಗಿನ ಚಿಕಿತ್ಸೆಯನ್ನು ನಿಮಗೆ ಸಂಪೂರ್ಣವಾಗಿ ಉಚಿತವಾಗಿ ನೀಡಲಾಗುತ್ತದೆ. ಆಯುಷ್ಮಾನ್ ಕಾರ್ಡ್‌ನ ಕೆಲವು ಪ್ರಯೋಜನಗಳು • ಯೋಜನೆಯಡಿಯಲ್ಲಿ, ದೇಶದ ಹಲವು ಆಸ್ಪತ್ರೆಗಳಲ್ಲಿ…

Read More

ಉತ್ಪತ್ತಿ ಏಕಾದಶಿ ಸೂರ್ಯೋದಯ: 06:31, ಸೂರ್ಯಾಸ್ತ : 05:35 ಶಾಲಿವಾಹನ ಶಕೆ -1946 ಸಂವತ್-2080 ಕ್ರೋಧಿನಾಮ ಸಂವತ್ಸರ, ದಕ್ಷಿಣ ಅಯಣ, ಶುಕ್ಲ ಪಕ್ಷ, ಶರದ ಋತು, ಕಾರ್ತಿಕ್ ಮಾಸ, ತಿಥಿ: ಏಕಾದಶಿ, ನಕ್ಷತ್ರ: ಹಸ್ತಾ, ರಾಹು ಕಾಲ: 03:00 ನಿಂದ 04:30 ತನಕ ಯಮಗಂಡ: 09:00 ನಿಂದ 10:30 ತನಕ ಗುಳಿಕ ಕಾಲ: 12:00 ನಿಂದ 01:30 ತನಕ ಅಮೃತಕಾಲ: ರಾ .9:47 ನಿಂದ ರಾ .11:35 ತನಕ ಅಭಿಜಿತ್ ಮುಹುರ್ತ: ಬೆ.11:41 ನಿಂದ ಮ.12:25 ತನಕ ಮೇಷ ರಾಶಿ ಅಧಿಕಾರಿಗಳ ಜೊತೆ ಸ್ನೇಹದಿಂದ ವರ್ತಿಸಿ,ಉದ್ಯೋಗದಲ್ಲಿ ವರ್ಗಾವಣೆಯಿಂದ ಸಂತಸ, ವಕೀಲರಿಗೆ ಉತ್ತಮ ಆದಾಯ ಹಾಗೂ ಅವಕಾಶಗಳು ಲಭ್ಯ, ಕ್ರೀಡಾಕೂಟದ ಪಟುಗಳಿಗೆ ಸಿಹಿಸುದ್ದಿ, ಮ್ಯಾರೇಜ್ ಬ್ಯುರೋ ಸಂಘಟಕರಿಗೆ ಉತ್ತಮ ಆದಾಯ, ನೀನು ತುಂಬಾ ಪ್ರಯತ್ನಿಸುತ್ತಿದ್ದೀರಿ ಆದರೆ ಅದೃಷ್ಟ ಕೈಕೊಡುತ್ತಿದೆ, ಹೈನುಗಾರಿಕೆ ವ್ಯಾಪಾರ ಲಾಭದಾಯಕ,ಉದ್ಯೋಗ ಸಂದರ್ಶನ, ಹಣಕಾಸಿನ ವ್ಯವಹಾರ ಬೇಡ,ಸರಕಾರಿ ಉದ್ಯೋಗ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ತುಂಬಾ ಹತ್ತಿರಕ್ಕೆ ಬಂದು ನಿರಾಶೆ ಮೂಡಲಿದೆ,ನಿಮಗೆ ವಿದೇಶದಲ್ಲಿ ಉದ್ಯೋಗ…

Read More

ಬಳ್ಳಾರಿ: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಬಳ್ಳಾರಿ ಜಿಲ್ಲಾ ವಿಶೇಷ ಚೇತನರ ಸಂಘದಿಂದ ನಗರದ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ನಡೆಸಲಾಯಿತು. ವಿಶೇಷಚೇತನರಿಗೆ ರಾಜ್ಯಾದ್ಯಂತ ಬಸ್‌ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ನೀಡಬೇಕು. ವಿಆರ್‌ಡಬ್ಲ್ಯೂಗಳಿಗೆ ಖಾಯಮಾತಿ ಹಾಗೂ ಸೇವಾ ಭದ್ರತೆ ಒದಗಿಸಬೇಕು. ಐದಾರು ತಿಂಗಳಿಗೊಮ್ಮೆ ಗೌರವಧನ ಸಿಗುತ್ತಿದ್ದು, https://ainlivenews.com/dont-make-these-mistakes-even-if-its-monday-doing-so-will-cause-trouble/ ಸಮಯಕ್ಕೆ ಸರಿಯಾಗಿ ನೀಡಬೇಕು. ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆ ಮತ್ತು ಔಷಧಿ ದೊರೆಯುವಂತೆ ಮಾಡಬೇಕು. ೫ ಸಾವಿರ ಮಾಸಿಕ ಭತ್ಯೆ, ವಸತಿ ವ್ಯವಸ್ಥೆ, ವಿಶೇಷ ಚೇತನರಿಗೆ ಪ್ರತ್ಯೇಕ ಬಿಪಿಲ್ ಕಾರ್ಡ್ ನೀಡಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸಿದರು. ನಂತರ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿ ಒತ್ತಾಯಿಸಿದರು.

Read More

ಯೋಗರಾಜ್ ಸಿನಿಮಾಸ್ ಅರ್ಪಿಸುವ, ಪರ್ಲ್ ಸಿನಿ ಕ್ರಿಯೇಷನ್ಸ್ ಲಾಂಛನದಲ್ಲಿ ಸಂತೋಷ್ ಕುಮಾರ್ ಎ. ಕೆ ಮತ್ತು ವಿದ್ಯಾ ಅವರು ನಿರ್ಮಿಸುತ್ತಿರುವ, ಕೆ.ರಾಮನಾರಾಯಣ್ ನಿರ್ದೇಶನದಲ್ಲಿ “ಕಾಮಿಡಿ ಕಿಲಾಡಿಗಳು” ಖ್ಯಾತಿಯ ಮಡೆನೂರ್ ಮನು ನಾಯಕನಾಗಿ ನಟಿಸುತ್ತಿರುವ “ಕುಲದಲ್ಲಿ ಕೀಳ್ಯಾವುದೋ” ಚಿತ್ರದ ಕ್ಲೈಮ್ಯಾಕ್ಸ್ ಭಾಗದ ಸಾಹಸ ಸನ್ನಿವೇಶದ ಚಿತ್ರೀಕರಣ ರಾಮನಗರದ ಸಮೀಪ ಅದ್ದೂರಿಯಾಗಿ ನೆರವೇರಿತು. ವಿನೋದ್ ಮಾಸ್ಟರ್ ಸಾಹಸ ನಿರ್ದೇಶನದಲ್ಲಿ ನಾಯಕ ಮಡೆನೂರ್ ಮನು, ನಾಯಕಿ ಮೌನ‌ ಗುಡ್ಡಮನೆ, ಶರತ್ ಲೋಹಿತಾಶ್ವ, ಕರಿ ಸುಬ್ಬು, ಡ್ರ್ಯಾಗನ್ ಮಂಜು, ಸೀನ ಮುಂತಾದವರು ಸಾಹಸ ಸನ್ನಿವೇಶದ ಚಿತ್ರೀಕರಣದಲ್ಲಿ ಭಾಗಿಯಾಗಿದ್ದರು. ಬಿಡುವಿನ ವೇಳೆ ಚಿತ್ರತಂಡದ ಸದಸ್ಯರು ಸಿನಿಮಾ ಕುರಿತು ಮಾಹಿತಿ ನೀಡಿದರು. ಹೆಸರೆ ಹೇಳುವಂತೆ ‘ಕುಲದಲ್ಲಿ ಕೀಳ್ಯಾವುದೊ’ ವಿಭಿನ್ನ ಕಥಾಹಂದರ ಹೊಂದಿರುವ ಚಿತ್ರ ಎಂದು ಮಾತಾನಾಡಿದ ನಿರ್ದೇಶಕ ರಾಮನಾರಾಯಣ್, ಹಿರಿಯ ನಿರ್ದೇಶಕ ಯೋಗರಾಜ್ ಭಟ್ ಅವರ ಮಾರ್ಗದರ್ಶನದಲ್ಲಿ ಸಂತೋಷ್ ಅವರು ನಿರ್ಮಾಣ ಮಾಡುತ್ತಿರುವ ಈ ಚಿತ್ರದ ಸಾಹಸ ಸನ್ನಿವೇಶದ ಚಿತ್ರೀಕರಣ ವಿನೋದ್ ಮಾಸ್ಟರ್ ಅವರ ಸಾಹಸ ನಿರ್ದೇಶನದಲ್ಲಿ ಅದ್ದೂರಿಯಾಗಿ ನಡೆಯುತ್ತಿದೆ.…

Read More