Author: AIN Admin

2025ನೇ ಸಾಲಿನ ಐಪಿಎಲ್ ಮೆಗಾ ಹರಾಜಿನ ಮೊದಲ ದಿನವೇ ಭರ್ಜರಿಯಾಗಿ ಸಾಗಿದೆ. ಎಲ್ಲಾ ಫ್ರಾಂಚೈಸಿಗಳು ಸಾಕಷ್ಟು ಅಳೆದುತೂಗಿ ತಮಗೆ ಬೇಕಾದ ಆಟಗಾರರನ್ನು ಖರೀದಿಸುವಲ್ಲಿ ಯಶಸ್ವಿಯಾಗಿವೆ. ಇನ್ನೂ ಎರಡನೇ ದಿನದ ಹರಾಜು ಪ್ರಕ್ರಿಯೆಯಲ್ಲಿ RCB ವೇಗಿ ಭುವನೇಶ್ವರ್ ಕುಮಾರ್ ಗೆ 10.75 ಕೋಟಿ ರೂ. ನೀಡಿ ಖರೀದಿಸಿತು. ಐಪಿಎಲ್‌ನ ಅತ್ಯಂತ ಯಶಸ್ವಿ ಬೌಲರ್‌ಗಳಲ್ಲಿ ಒಬ್ಬರಾದ ಭುವನೇಶ್ವರ್ 2011 ರಿಂದ ಲೀಗ್‌ನಲ್ಲಿ ಆಡುತ್ತಿದ್ದಾರೆ. ಅವರು 2011 ರಲ್ಲಿ ಪುಣೆ ವಾರಿಯರ್ಸ್‌ನೊಂದಿಗೆ ಪಾದಾರ್ಪಣೆ ಮಾಡಿದರು. 2013ರಲ್ಲಿ ಭುವನೇಶ್ವರ್ ಪ್ರಭಾವಿಯಾಗಿ ಆಟವಾಡಿದ್ದರು.. 7ಕ್ಕಿಂತ ಕಡಿಮೆ ಎಕಾನಮಿ ದರವನ್ನು ಕಾಯ್ದುಕೊಂಡು 13 ವಿಕೆಟ್ ಪಡೆದರು. 2014 ರ ಋತುವಿಗೆ ಮುಂಚಿತವಾಗಿ, ಭುವನೇಶ್ವರ್ ಅವರು ಸನ್ ರೈಸರ್ಸ್ ಹೈದರಾಬಾದ್ ತಂಡಕ್ಕೆ ಸಹಿ ಹಾಕಿದರು.. ಅಂದಿನಿಂದ ಅವರು SRH ಗಾಗಿ ಆಡುತ್ತಿದ್ದಾರೆ. https://ainlivenews.com/dont-make-these-mistakes-even-if-its-monday-doing-so-will-cause-trouble/ ಇದೀಗ ಪವರ್‌ಪ್ಲೇಯಲ್ಲಿ ಉತ್ತಮ ಪ್ರದರ್ಶನ ನೀಡುವ ಕೆಲವೇ ಕೆಲವು ಭಾರತೀಯ ಸೀಮ್ ಮತ್ತು ಸ್ವಿಂಗ್ ಬೌಲರ್‌ಗಳಲ್ಲಿ ಭುವನೇಶ್ವರ್ ಕುಮಾರ್ ಒಬ್ಬರು. 10 ಕೋಟಿಗಿಂತ ಕಡಿಮೆ ಬೆಲೆಗೆ ಅವರನ್ನು ಖರೀದಿ…

Read More

ವಂದನ್ ಎಂ ನಿರ್ಮಾಣದ, ಮಯೂರ್ ಪಟೇಲ್ ಚೊಚ್ಚಲ ನಿರ್ದೇಶನದ ಹಾಗೂ ಮದನ್ ಪಟೇಲ್ ಅವರು ಮುಖ್ಯ ಭೂಮಿಕೆಯಲ್ಲಿ ನಟಿಸಿರುವ “ತಮಟೆ” ಚಿತ್ರದ ಟೀಸರ್ ಹಾಗೂ ಹಾಡನ್ನು ಕರ್ನಾಟಕ ಸಂಸ್ಕೃತ ವಿಶ್ವ ವಿದ್ಯಾಲಯದ ಮೊದಲ ಕುಲಪತಿಗಳಾದ ಮಲ್ಲೇಪುರಂ ಜಿ ವೆಂಕಟೇಶ್ ಬಿಡುಗಡೆ ಮಾಡಿದರು. ದಿನಕರ್ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ನಂತರ ಗಣ್ಯರು ಹಾಗೂ ಚಿತ್ರತಂಡದ ಸದಸ್ಯರು ಮಾತನಾಡಿದರು. ಮದನ್ ಪಟೇಲ್ ಅವರು ನನ್ನ ಬಹುಕಾಲದ ಗೆಳೆಯರು. ಅವರು ಬರೆದಿರುವ “ತಮಟೆ” ಕಾದಂಬರಿ ಇಂದು ಸಿನಿಮಾ ರೂಪ ಪಡೆದುಕೊಂಡಿದೆ. ಮಯೂರ್ ಪಟೇಲ್ ಅವರು ನಿರ್ದೇಶಿಸಿರುವ ಈ ಚಿತ್ರದ ಮುಖ್ಯಪಾತ್ರದಲ್ಲಿ ಮದನ್ ಪಟೇಲ್ ಅವರೆ ಅಭಿನಯಿಸಿದ್ದಾರೆ. ಇಂದು ಬಿಡುಗಡೆಯಾಗಿರುವ ಹಾಡು ಹಾಗೂ ಟೀಸರ್ ತುಂಬಾ ಚೆನ್ನಾಗಿದೆ. ಸಮಾಜಕ್ಕೆ ಉತ್ತಮ ಸಂದೇಶ ಸಾರುವ ಈ ಚಿತ್ರ ನವೆಂಬರ್ 29 ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಎಲ್ಲರೂ ನೋಡಿ ಹಾರೈಸಿ ಎಂದರು ಮಲ್ಲೇಪುರಂ ಜಿ ವೆಂಕಟೇಶ್. https://ainlivenews.com/dont-make-these-mistakes-even-if-its-monday-doing-so-will-cause-trouble/ “ತಮಟೆ” ವಾದ್ಯಗಾರನೊಬ್ಬನ ಜೀವನಾಧಾರಿತ ಈ ಸಿನಿಮಾದಲ್ಲಿ ನಾನೇ ಮುಖ್ಯ ಪಾತ್ರದಲ್ಲಿ…

Read More

2025ರ 18ನೇ ಆವೃತ್ತಿಯ ಐಪಿಎಲ್​ಗೆ ಆಟಗಾರರ ಹರಾಜು ಪ್ರಕ್ರಿಯೆ ನಿನ್ನೆಯಿಂದ ಆರಂಭವಾಗಿದ್ದು, ಫ್ರಾಂಚೈಸಿಗಳು ಅಳೆದು ತೂಗಿ ಕೋಟಿ ಕೋಟಿ ರೂ. ಬೆಲೆಗೆ ಆಟಗಾರರನ್ನು ಖರೀದಿಸುತ್ತಿವೆ. ಹರಾಜು ಪ್ರಕ್ರಿಯೆಯ ಎರಡನೇ ದಿನವಾಗಿರುವ ಇಂದು ಕೂಡ ಹರಾಜು ಪ್ರಕ್ರಿಯೆಯು ನಡೆಯುತ್ತಿದ್ದು, 5.75 ಕೋಟಿ ರೂ.ಗೆ ಆರ್‌ಸಿಬಿ ತಂಡ ಕೃನಾಲ್ ಪಾಂಡ್ಯರನ್ನು ಖರೀದಿಸಿದೆ. ಪಂಜಾಬ್ ತಂಡ 7 ಕೋಟಿ ರೂ.ಗೆ ಮಾರ್ಕೊ ಜಾನ್ಸೆನ್​ ಖರೀದಿಸಿದೆ. https://ainlivenews.com/dont-make-these-mistakes-even-if-its-monday-doing-so-will-cause-trouble/ ಕೃನಾಲ್​ ಪಾಂಡ್ಯ ಅವರನ್ನು ಆರ್​​ಸಿಬಿ ತಂಡ 2 ಕೋಟಿ ಮೂಲ ಬೆಲೆಗೆ ಬಿಡ್​ ಮಾಡಿತು. ಬಳಿಕ ಕಣಕ್ಕಿಳಿದ ರಾಜಸ್ಥಾನ್​ ರಾಯಲ್ಸ್​ ತಂಡ ಸುಮಾರು 5.50 ಕೋಟಿವರೆಗೂ ಹರಾಜು ಹಾಕಿತು. ಕೊನೆಗೂ ಕೃನಾಲ್​ ಪಾಂಡ್ಯ ಆರ್​​ಸಿಬಿ ತಂಡ ಸೇರಿದ್ರು. ಟೀಮ್​ ಇಂಡಿಯಾದ ಸ್ಟಾರ್​ ಆಲ್​ರೌಂಡರ್​​ ಹಾರ್ದಿಕ್​ ಪಾಂಡ್ಯ ಸಹೋದರ ಕೃನಾಲ್​ ಪಾಂಡ್ಯ. ಕಳೆದ ಸೀಸನ್​​ನಲ್ಲಿ ಲಕ್ನೋ ಸೂಪರ್​ ಜೈಂಟ್ಸ್​ ತಂಡದ ಪರ ಕೃನಾಲ್​ ಪಾಂಡ್ಯ ಆಡಿದ್ದಿರು.

Read More

ವಿಜಯಪುರ ಜಿಲ್ಲೆಯ ಕೆ.ಪಿ.ಆರ್ ಸಕ್ಕರೆ ಕಾರ್ಖಾನೆಯನ್ನು‌ ಆರಂಭಿಸುವಂತೆ ಒತ್ತಾಯಿಸಿ ಆಲಮೇಲ ತಾಲೂಕಿನ ವಿವಿಧ ಗ್ರಾಮಗಳ ರೈತರು ಪ್ರತಿಭಟನೆ ನಡೆಸಿ ಡಿಸಿ ಅವರಿಗೆ ಮನವಿ ಸಲ್ಲಿಸಿದರು. ಕೆಪಿಆರ್ ಸಕ್ಕರೆ ಕಾರ್ಖಾನೆಯಿಂದ ವ್ಯವಸಾಯಕ್ಕಾಗಿ ಗುತ್ತಿಗೆ ಪಡೆದ ಜಮೀನುಗಳಲ್ಲಿ‌ ಅಂದಾಜು 23 ಸಾವಿರ ಎಕರೆ ಪ್ರದೇಶದಲ್ಲಿ ಅಂದಾಜು 6 ಲಕ್ಷ ಮೆಟ್ರೀಕ್ ಟನ್ ಕಬ್ಬಿನ ಬೆಳೆಯನ್ನು ಬೆಳೆದಿದ್ದು, ಅದರ ಅವಧಿಯು ಮುಗಿದಿದೆ. ಪ್ರತಿ ವರ್ಷದಂತೆ ಕೆ.ಪಿ.ಆರ್ ಸಕ್ಕರೆ ಕಾರ್ಖಾನೆಯು ಅಕ್ಟೋಬರ್ ಕೊನೆಯ ವಾರ ಅಥವಾ ನವೆಂಬರ್ ಮೊದಲ ವಾರದಲ್ಲಿ ಸಕ್ಕರೆ ಕಾರ್ಖಾನೆ ಪ್ರಾರಂಭವಾಗುವುದು ಎಂಬ ನಂಬಿಕೆಯ ಮೇಲೆ ನಾವು ನಮ್ಮ ಜಮೀನಿನಲ್ಲಿ ಬೆಳೆದಿರುವ‌ ಅವಧಿ ಮುಗಿದಿರುವ ಕಬ್ಬನ್ನು ಕಾರ್ಖಾನೆಗೆ ಕಳುಹಿಸುವ ಸಲುವಾಗಿ ಅಂದಾಜು ಒಂದು ತಿಂಗಳಿಗಿಂತ ಹೆಚ್ಚು ದಿನಗಳಿಂದ ಕಬ್ಬಿಗೆ ನೀರು ಬಿಡುವುದನ್ನು ನಿಲ್ಲಿಸಿದ್ದೇವೆ. https://ainlivenews.com/nia-invites-applications-for-the-posts-of-inspector-head-constable-salary-of-rs-81700-per-month-apply-today/ ಆದರೇ ನವೆಂಬರ್ ತಿಂಗಳು ಮುಗಿಯುತ್ತಾ ಬಂದರೂ ಕೂಡಾ ಕಾರ್ಖಾನೆಯವರು ಕಬ್ಬು ನುರಿಸುವಿಕೆಯನ್ನು ಪ್ರಾರಂಭಿಸುತ್ತಿಲ್ಲ, ಕೇಳಿದಾಗ ಸರಿಯಾದ ಕಾರಣ ಹೇಳದೆ ದಿನಗಳನ್ನು ಮುಂದೂಡುತ್ತಿದ್ದಾರೆ ಹಾಗೂ ಕಾರ್ಖಾನೆ ಪ್ರಾರಂಭದ ಬಗ್ಗೆ ಸುಳಿವೂ…

Read More

ಬೆಂಗಳೂರು: ‘ಶಕ್ತಿ ಪೀಠ’ ಎಂದೇ ಪ್ರಸಿದ್ಧಿ ಪಡೆದಿರುವ ಮೈಸೂರಿನ ಚಾಮುಂಡಿ ಸನ್ನಿಧಿ ಭಕ್ತರ ಮನಸ್ಸಿನಲ್ಲಿ ಪವಿತ್ರ ಸ್ಥಾನವನ್ನು ಪಡೆದುಕೊಂಡಿದೆ. ಆದ್ದರಿಂದಲೇ ಮುಖ್ಯಮಂತ್ರಿಗಳು ಮೈಸೂರಿನ ನಾಡದೇವಿ ಚಾಮುಂಡೇಶ್ವರಿಗೆ ಚಿನ್ನದ ರಥ ನಿರ್ಮಿಸಲು ಆದೇಶಿಸಿದ್ದಾರೆ. ಹೌದು ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ಮನವಿ ಹಿನ್ನೆಲೆ ನಾಡದೇವಿ ಮೈಸೂರಿನ ಚಾಮುಂಡೇಶ್ವರಿಗೆ ಚಿನ್ನದ ರಥ ನಿರ್ಮಿಸುವ ಸಂಬಂಧ ಪರಿಶೀಲಿಸಿ, ಕೂಡಲೇ ಪ್ರಸ್ತಾವನೆ ಸಲ್ಲಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಂದಾಯ ಇಲಾಖೆ ಧಾರ್ಮಿಕ ದತ್ತಿ ವಿಭಾಗದ ಪ್ರಧಾನ ಕಾರ್ಯದರ್ಶಿ ಅವರಿಗೆ ಆದೇಶಿಸಿದ್ದಾರೆ. https://ainlivenews.com/nia-invites-applications-for-the-posts-of-inspector-head-constable-salary-of-rs-81700-per-month-apply-today/ ಸಿಎಂ ಈ ಆದೇಶ ಮಾಡಿದ್ದಾರೆ. ನಾಡದೇವಿಗೆ ಚಿನ್ನದ ರಥ ನಿರ್ಮಿಸಬೇಕು ಎಂಬ ಭಕ್ತರ, ಬೇಡಿಕೆಯನ್ನು ಅರಿತು, ಸಂಕಲ್ಪ ಮಾಡಿಕೊಂಡು ಪ್ರಯತ್ನಿಸಲಾಗಿತ್ತು. ಸಿಎಂ ಆದೇಶದಿಂದ ಈಗ ಆ ಪ್ರಯತ್ನದಲ್ಲಿ ಮೊದಲ ಹೆಜ್ಜೆಯನ್ನು ಇಟ್ಟಂತಾಗಿದೆ. ಚಾಮುಂಡೇಶ್ವರಿ ದೇವಿ ಕನ್ನಡ ನಾಡಿನ ಅಸ್ಮಿತೆಯಾಗಿದ್ದಾಳೆ. ಕನ್ನಡಿಗರ ಧಾರ್ಮಿಕ ಪ್ರತಿನಿಧಿಯಾಗಿದ್ದಾಳೆ, ಮೈಸೂರಿನ ಚಾಮುಂಡಿ ಬೆಟ್ಟಕ್ಕೆ, ದೇವಸ್ಥಾನಕ್ಕೆ, ದೇವಿಗೆ ಪೌರಾಣಿಕ, ಐತಿಹಾಸಿಕ ಹಿನ್ನೆಲೆ ಇದೆ. ಅದಕ್ಕಾಗಿಯೇ ಮೈಸೂರಿನಲ್ಲಿ ನಡೆಯುವ ದಸರಾವನ್ನು ನಾಡ ಹಬ್ಬ…

Read More

ಬೆಂಗಳೂರು: ಮದ್ಯವ್ಯಸನಿಗಳು ಭಾರತದಲ್ಲಿ ಏನು ಕಮ್ಮಿ ಇಲ್ಲ. ಇನ್ನೂ ಕರ್ನಾಟಕದಲ್ಲಿ ಕೂಡ ಜನರು ಊಟದ ರೀತಿಯಲ್ಲೇ ಮದ್ಯಪಾನ ಕೂಡ ಮಾಡುತ್ತಾರೆ. ಇನ್ನೂ ಈ ಮದ್ಯಪಾನದಿಂದ ಹಲವು ಸಮಸ್ಯೆಗಳು ಉಂಟಾಗುತ್ತವೆ ಎಂಬುದು ತಿಳಿದಿದ್ದರೂ ಕೂಡ ಮದ್ಯಪ್ರಿಯರು ಇದರ ಬಗ್ಗೆ ತಲೆಕೆಡಿಸಿಕೊಳ್ಳುವುದಿಲ್ಲ. ಆದ್ದರಿಂದಲೇ ಮದ್ಯಪಾನ ಪ್ರಿಯರಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದೆ. ಸಾಮಾನ್ಯವಾಗಿ ಬೇಸಿಗೆ ಸಂದರ್ಭದಲ್ಲಿ ಭಾರೀ ಪ್ರಮಾಣದಲ್ಲಿ ಬಿಯರ್ ಮಾರಾಟ ಹೆಚ್ಚಾಗುತ್ತದೆ. ಅದೇ ರೀತಿ ಚಳಿಗಾಲ ಆರಂಭವಾಗುತ್ತಿದ್ದರಂತೆ ಪ್ರತಿ ವರ್ಷ ಬಿಯರ್ ಮಾರಾಟ ಕುಸಿತವಾಗುತ್ತದೆ. ಹೀಗಾಗಿ ಚಳಿಗಾಲ ಶುರುವಾಗುತ್ತಿದ್ದಂತೆ ಬಿಯರ್ ಬಗ್ಗೆ ಅಬಕಾರಿ ಇಲಾಖೆಗೆ ಟೆನ್ಷನ್ ಶುರುವಾಗಿದೆ. ಯಾಕೆಂದರೆ ಚಳಿಗಾಲದಲ್ಲಿ ಮದ್ಯಪ್ರಿಯರು ಹೆಚ್ಚಾಗಿ ಬಿಯರ್ ಕುಡಿಯಲ್ಲ. ಇದರಿಂದ ಬಿಯರ್ ಮಾರಾಟ ಕುಸಿತವಾಗುವ ಆತಂಕ ಎದುರಾಗಿದೆ. ಶೇಕಡಾ 10 ರಿಂದ 20 ರಷ್ಟು ಬಿಯರ್ ಮಾರಾಟದಲ್ಲಿ ಕುಸಿತ ಸಾಧ್ಯತೆ ಇದೆ. https://ainlivenews.com/new-rules-in-pm-kisan-scheme-if-you-dont-do-this-you-wont-get-the-19th-installment/ ಅಬಕಾರಿ ಇಲಾಖೆಗೆ ಸರ್ಕಾರ 36 ಸಾವಿರ ಕೋಟಿ ಟಾರ್ಗೆಟ್ ನೀಡಿದೆ. ಇದೇ ಕಾರಣಕ್ಕೆ ಬಿಯರ್ ದರ ಹೆಚ್ಚಳ ಮಾಡಲು ಅಬಕಾರಿ…

Read More

ಬೆಂಗಳೂರು: ಸರ್ಕಾರಿ ದಾಖಲೆ ಹೇಗೆ ತೆಗೆದುಕೊಂಡು ಹೋಗಲು ಸಾಧ್ಯ?. ಲೋಕಾಯುಕ್ತ ವರದಿ ಬಗ್ಗೆ ನನಗೆ ಮಾಹಿತಿ ಇಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಮುಡಾ ವಿಚಾರದಲ್ಲಿ ಐಎಎಸ್ ಅಧಿಕಾರಿಯೊಬ್ಬರು 144 ಫೈಲ್ ತಗೆದುಕೊಂಡು ಹೋಗಿದಾರೆ ಎಂಬ ವಿಚಾರವಾಗಿ, ಮಾತನಾಡಿದ ಅವರು, ಅದು ನನ್ನ ಗಮನಕ್ಕೆ ಬಂದಿಲ್ಲ. ಅದು ಹೇಗೆ ತಗೆದುಕೊಂಡು ಹೋಗ್ತಾರೆ? ಸರ್ಕಾರಿ ದಾಖಲೆ ಅದು, ಅದೆಲ್ಲಾ ಹೇಗೆ ತಗೆದುಕೊಂಡು ಹೋಗೋಕೆ ಸಾಧ್ಯ? ಲೋಕಾಯುಕ್ತ ವರದಿ ಬಗ್ಗೆ ನನಗೆ ಗೊತ್ತಿಲ್ಲ ಎಂದಿದ್ದಾರೆ. https://ainlivenews.com/new-rules-in-pm-kisan-scheme-if-you-dont-do-this-you-wont-get-the-19th-installment/ ಮುಸ್ಲಿಂ ಮತಗಳು ಕೈ ಕೊಟ್ಟ ಕಾರಣ ಚನ್ನಪಟ್ಟಣದಲ್ಲಿ ಸೋಲು ಎಂಬ ನಿಖಿಲ್ ಹೇಳಿಕೆ ವಿಚಾರವಾಗಿ, ಕುಮಾರಸ್ವಾಮಿಗೆ ಪಾಪ ಆ ಜನ ಮತ ಹಾಕಿದ್ದರು. ಇವಾಗ ಬಿಜೆಪಿ ಜೊತೆಗೆ ಹೋಗಿರುವಾಗ ಯಾಕೆ ಮತ ಹಾಕ್ತಾರೆ? ಅವರು ಮುಸ್ಲಿಮರನ್ನು ನಂಬಿಲ್ಲ. ಅವರಿಗೆ ಸೀಟ್ ಕೊಟ್ರಾ? ಮಂತ್ರಿ ಮಾಡಿದ್ರಾ? 4% ಮೀಸಲಾತಿ ಕಿತ್ತು ಹಾಕಿದ್ದಾರೆ. ಅವರ ಬಳಿ ಮತ ಕೇಳುವ ಹಕ್ಕು ಅವರಿಗೆ ಇಲ್ಲ. ಈ ಬಗ್ಗೆ ನಿಖಿಲ್ ಅಲ್ಲ, ಇದರ ಬಗ್ಗೆ…

Read More

ಹಾಸನ: ನಿಮ್ಮನ್ನೆಲ್ಲಾ ನೋಡಿದ ಮೇಲೆ ಹೊಳೆನರಸೀಪುರಕ್ಕೆ ಸ್ವಾತಂತ್ರ್ಯ ಸಿಕ್ಕಿದೆ ಅನ್ನಿಸಿತು ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಂಗೌಡ ಹೇಳಿದ್ದಾರೆ. ಹೊಳೆನರಸೀಪುರದಲ್ಲಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, 2024ರ ನಂತರ ವಾಸ್ತು, ದಿಕ್ಕು, ದಿಸೆ ಎಲ್ಲಾ ಬದಲಾಗಿದೆ. ಅದರ ಶ್ರೇಯಸ್ಸು ಹಾಸನ ಸಂಸದ ಶ್ರೇಯಸ್​ ಪಟೇಲ್​ಗೆ ಸಲ್ಲುತ್ತದೆ. ಶ್ರೇಯಸ್ ಅವರೊಂದಿಗೆ ಹೊಳೆನರಸೀಪುರದ ಶ್ರೇಯಸ್ಸು ಕೂಡ ಅಡಗಿದೆ. ನಿಮ್ಮನ್ನೆಲ್ಲಾ ನೋಡಿದ ಮೇಲೆ ಹೊಳೆನರಸೀಪುರಕ್ಕೆ ಸ್ವಾತಂತ್ರ್ಯ ಸಿಕ್ಕಿದೆ ಅನ್ನಿಸಿತು ಎಂದು ರೇವಣ್ಣ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. https://ainlivenews.com/new-rules-in-pm-kisan-scheme-if-you-dont-do-this-you-wont-get-the-19th-installment/ ಇಷ್ಟುದಿನ ಈ ಭಾಗದಲ್ಲಿ ಯಾವುದೇ ಕಾರ್ಯಕ್ರಮಕ್ಕೆ ನಡೆಯುತ್ತದೆ ಎಂದರೆ, ಯಾವುದೋ ಒಂದು ಮನೆಗೆ, ಒಂದು ತೋಟದಲ್ಲಿ ಲೈಟ್ ಇರುತ್ತಿತ್ತು. ಇಡೀ ಹೊಳೆನರಸೀಪುರದಲ್ಲಿ ಲೈಟ್ ಇರುವುದನ್ನು ನಾನು ನೋಡಿರಲಿಲ್ಲ. ಈಗ ಹೊಳೆನರಸೀಪುರ ಪಟೇಲ್​ರ ತಾತನ ಕಾಲಕ್ಕೆ ಕೊಂಡೊಯ್ದಿದೆ. ಈ ಸಂದರ್ಭದಲ್ಲಿ ಪುಟ್ಟಸ್ವಾಮಿ ಗೌಡರನ್ನು ಸ್ಮರಿಸುತ್ತೇನೆ ಎಂದು ಪ್ರೀತಂ ಗೌಡ ಹೇಳಿದರು.

Read More

ಕೊಲ್ಕತ್ತಾ ಇಂಟರ್ನ್ಯಾಷನಲ್ ಫಿಲಂ ಫೆಸ್ಟಿವಲ್ ಗೆ ಅಧಿಕೃತವಾಗಿ ತುಳು ಸಿನಿಮಾ ಪಿದಾಯಿ ಆಯ್ಕೆಯಾಗಿದೆ. ನಮ್ಮ ಕನಸು ಬ್ಯಾನರಿನ ಕೆ. ಸುರೇಶ್ ನಿರ್ಮಾಣದಲ್ಲಿ ರಮೇಶ್ ಶೆಟ್ಟಿಗಾರ್ ಬರೆದು ರಾಷ್ಟ್ರಪ್ರಶಸ್ತಿ ವಿಜೇತ ನಿರ್ದೇಶಕರಾದ ಸಂತೋಷ್ ಮಾಡ ನಿರ್ದೇಶನದಲ್ಲಿ ಮೂಡಿ ಬಂದಿರುವ ಈ ಸಿನಿಮಾ  ಡಿಸೆಂಬರ್‌ 8 & 9ರಂದು ಕೊಲ್ಕತ್ತಾ ಚಿತ್ರೋತ್ಸವದಲ್ಲಿ ಪ್ರದರ್ಶನಗೊಳ್ಳುತ್ತಿರುವುದು ವಿಶೇಷವಾಗಿದೆ. ಮಹಾಮಾಯಿ ಪಾತ್ರಿಯಾಗಿ ಖ್ಯಾತ ಕನ್ನಡ ನಟರಾದ ಶರತ್ ಲೋಹಿತಾಶ್ವ ರವರು ಅಭಿನಯಿಸಿದ್ದು, ಇವರ ಜೊತೆಗೆ ರೂಪ ವರ್ಕಾಡಿ, ಇಳ ವಿಟ್ಲ, ದೇವಿ ನಾಯರ್,  ದೀಪಕ್ ರೈ ಪಾಣಾಜೆ, ಪುಷ್ಪರಾಜ್ ಬೋಳಾರ್, ಪ್ರೀತೇಶ್, ಅನಿಲ್ ರಾಜ್ ಉಪ್ಪಳ, ರವಿ ವರ್ಕಾಡಿ, ಹಾಗೂ ಬಾಲ ಪ್ರತಿಭೆಗಳಾದ ಮೋನಿಶ್, ತ್ರಿಷ, ದ್ರುವ, ನಿಹಾ, ಖುಷಿ ಡಿಬಿಸಿ ಶೇಖರ್, ಅನಿತಾ ಚಂದ್ರಶೇಖರ್  ಮುಂತಾದವರು ಅಭಿನಯಿಸಿದ್ದಾರೆ. ಈ ಸಿನಿಮಾದ ಛಾಯಾಗ್ರಾಹಣವನ್ನು ಉಣ್ಣಿ ಮಾಡವೂರ್‌ರವರು ನಿಭಾಯಿಸಿದ್ದಾರೆ. ಸಂಭಾಷಣೆಯನ್ನು ರಮೇಶ್‌ ಶೆಟ್ಟಿಗಾರ್‌ ಹಾಗೂ ಡಿ.ಬಿ.ಸಿ ಶೇಖರ್‌ ಬರೆದಿದ್ದಾರೆ.  ಚಿತ್ರವನ್ನು ದ.ಕ ಜಿಲ್ಲೆಯ ಮುಡಿಪು ಹಾಗೂ ಮಂಜೇಶ್ವರದ ಗಡಿಪ್ರದೇಶಗಳಲ್ಲಿ ಚಿತ್ರೀಕರಣ…

Read More

ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯಲ್ಲಿ ಟೀಂ ಇಂಡಿಯಾ ಭರ್ಜರಿ ಗೆಲುವು ಸಾಧಿಸಿದೆ. ಹೌದು ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಬಾರ್ಡರ್‌ ಗವಾಸ್ಕರ್‌ ಟ್ರೋಫಿ ಟೆಸ್ಟ್‌ ಸರಣಿಯ ಮೊದಲ ಪಂದ್ಯದಲ್ಲೇ ಭಾರತ, ಆಸ್ಟ್ರೇಲಿಯಾ ವಿರುದ್ಧ 295 ರನ್‌ಗಳ ಭರ್ಜರಿ ಗೆಲುವು ಕಂಡಿದೆ. ಇದರೊಂದಿಗೆ ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ ಅಂಕಪಟ್ಟಿಯಲ್ಲಿ ಮತ್ತೆ ಮೊದಲ ಸ್ಥಾನಕ್ಕೆ ಜಿಗಿದಿದೆ. ಇದೀಗ ಬರೋಬ್ಬರಿ 47 ವರ್ಷಗಳ ಬಳಿಕ ಹೊಸ ಇತಿಹಾಸ ರಚಿಸುವಲ್ಲಿ ಟೀಮ್ ಇಂಡಿಯಾ ಯಶಸ್ವಿಯಾಗಿದೆ. ಜಸ್ಪ್ರೀತ್‌ ಬುಮ್ರಾ, ಸಿರಾಜ್‌, ಹರ್ಷಿತ್‌ ರಾಣಾ ಅವರ ಉರಿ ಚೆಂಡಿನ ವೇಗ ಒಂದುಕಡೆಯಾದ್ರೆ ಯಶಸ್ವಿ ಜೈಸ್ವಾಲ್‌, ಕಿಂಗ್‌ ಕೊಹ್ಲಿ, ಕೆ.ಎಲ್‌ ರಾಹುಲ್‌ ಅವರ ಬ್ಯಾಟಿಂಗ್‌ ದರ್ಬಾರ್‌ನಿಂದ ಭಾರತ, ಆಸೀಸ್‌ಗೆ ಪವರ್‌ ಪಂಚ್‌ ಕೊಟ್ಟಿದೆ. ಈ ಮೂಲಕ 5 ಪಂದ್ಯಗಳ ಟೆಸ್ಟ್‌ ಸರಣಿಯಲ್ಲಿ ಮೊದಲ ಗೆಲುವು ಸಾಧಿಸಿ 1-0 ಮುನ್ನಡೆ ಕಾಯ್ದುಕೊಂಡಿದೆ. https://ainlivenews.com/new-rules-in-pm-kisan-scheme-if-you-dont-do-this-you-wont-get-the-19th-installment/ ಮುಂಬರುವ ಐಸಿಸಿ ಟೆಸ್ಟ್‌ ಚಾಂಪಿಯನ್‌ ಶಿಪ್‌ನಲ್ಲಿ ಫೈನಲ್‌ ಪ್ರವೇಶಿಸಬೇಕಾದರೆ ಸರಣಿಯಲ್ಲಿ 4-0 ಅಂತರದಲ್ಲಿ ಗೆಲ್ಲಲೇಬೇಕಾದ ಅನಿವಾರ್ಯತೆಯನ್ನು ಎದುರಿಸುತ್ತಿರುವ ಟೀಮ್‌ ಇಂಡಿಯಾ, ಮೊದಲ…

Read More