ಅಯೋಧ್ಯೆ:- ರಾಮಲಲ್ಲಾ ಮೂರ್ತಿಯು ರಾಮಮಂದಿರವನ್ನು ಪ್ರವೇಶಿಸಿದೆ. ಜನವರಿ 22 ರಂದು ರಾಮಮಂದಿರದಲ್ಲಿ ನಡೆಯುವ ಬಾಲರಾಮನ ಪ್ರಾಣ ಪ್ರತಿಷ್ಠೆಗೆ ಸಕಲ ಸಿದ್ಧತೆಗಳು ನಡೆಯುತ್ತಿದ್ದು, ಇದೀಗ ರಾಮಲಲ್ಲಾ ಮೂರ್ತಿಯು ರಾಮಮಂದಿರವನ್ನು ಪ್ರವೇಶಿಸಿದೆ.
#WATCH | Uttar Pradesh | The truck, carrying Lord Ram's idol, being brought to Ayodhya Ram Temple premises amid chants of 'Jai Sri Ram'.
The pranpratishtha ceremony will take place on January 22. pic.twitter.com/Qv623BWEKb
— ANI (@ANI) January 17, 2024
ಇಂದು ಸಂಜೆ ಭಗವಾನ್ ರಾಮನ ವಿಗ್ರಹವನ್ನು ಹೊತ್ತ ಟ್ರಕ್ ಅನ್ನು ‘ಜೈ ಶ್ರೀ ರಾಮ್’ ಘೋಷಣೆಗಳೊಂದಿಗೆ ರಾಮ ಮಂದಿರದ ಆವರಣಕ್ಕೆ ತರಲಾಯಿತು. ಈ ಮೂರ್ತಿಯನ್ನು ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್ ಕೆತ್ತಿದ್ದಾರೆ
ಭವ್ಯ ರಾಮಮಂದಿರದ ಸಂಕೀರ್ಣಕ್ಕೆ ವಿಗ್ರಹವನ್ನು ಕೊಂಡೊಯ್ಯಲು ಮಂಗಳವಾರ ರಾತ್ರಿಯಿಂದಲೇ ಸಿದ್ಧತೆ ನಡೆದಿತ್ತು. 150-200 ಕೆಜಿ ತೂಕದ ವಿಗ್ರಹವನ್ನು ಕ್ರೇನ್ ಸಹಾಯದಿಂದ ಮೆರವಣಿಗೆಗಾಗಿ ತಡರಾತ್ರಿ ಹೂವಿನಿಂದ ಅಲಂಕರಿಸಿದ ಟ್ರಕ್ ಮೇಲೆ ಇರಿಸಲಾಯಿತು. ಇಂದು ಈ ಟ್ರಕ್ ರಾಮಮಂದಿರದ ಆವರಣವನ್ನು ಪ್ರವೇಶಿಸಿದೆ.
51 ಇಂಚು ಎತ್ತರದ ರಾಮನ ಮೂರ್ತಿಯನ್ನು ಅಯೋಧ್ಯೆ ರಾಮಮಂದಿರದಲ್ಲಿ ಸೋಮವಾರ ಪ್ರತಿಷ್ಠಾಪಿಸಲಾಗುತ್ತದೆ. ನಾಳೆ ರಾಮನ ಮೂರ್ತಿ ಗರ್ಭಗುಡಿ ಪ್ರವೇಶಿಸಲಿದೆ.